Connect with us

ಬೆಂಗಳೂರು

ಬೆಂಗಳೂರಿನ ಟ್ರಾಫಿಕ್ ನಿರ್ವಹಣೆಗೆ ಜಪಾನ್ ಟೆಕ್ನಾಲಜಿ!​

ಬೆಂಗಳೂರಿನ ಟ್ರಾಫಿಕ್ ನಿರ್ವಹಣೆಗೆ ಜಪಾನ್ ಟೆಕ್ನಾಲಜಿ!​

ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆ ಅತಿ ದೊಡ್ಡ ಸವಾಲು. ಅದರಲ್ಲೂ ಪ್ರಮುಖ ವೃತ್ತಗಳಲ್ಲಿ ಸಿಗ್ನಲ್ ಬಿದ್ದರೆ ವಾಹನಗಳು ಮುಂದೆ ಸಾಗೋದಕ್ಕೇ ಸಾಕಷ್ಟು ಸಮಯ ಬೇಕಾಗುತ್ತೆ. ವಾಹನಗಳ ಪ್ರಮಾಣ ಕೂಡಾ ದಿನದಿಂದ ದಿನಕ್ಕೆ ಏರಿಕೆ ಆಗ್ತಿದೆ. ಹೀಗಾಗಿ ಬೆಂಗಳೂರು ನಗರ ಟ್ರಾಫಿಕ್ ಪೊಲೀಸರು ಅತ್ಯಾಧುನಿಕ ಟ್ರಾಫಿಕ್ ಮಾಹಿತಿ ಮತ್ತು ನಿರ್ವಹಣಾ ವ್ಯವಸ್ಥೆಯ ಮೊರೆ ಹೋಗಿದ್ದಾರೆ.ಬೆಂಗಳೂರು ನಗರದ ಹಲವೆಡೆ ಸುರಂಗ ರಸ್ತೆಗಳನ್ನ ನಿರ್ಮಾಣ ಮಾಡೋದಕ್ಕೆ ರಾಜ್ಯ ಸರ್ಕಾರ ಪ್ಲಾನ್ ಮಾಡ್ತಿದೆ. ಪಥದ ಟನಲ್ ರಸ್ತೆಗಳನ್ನ ನಿರ್ಮಿಸೋದಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಟೆಂಡರ್ ಕರೆಯೋಕೆ ನಿರ್ಧಾರ ಮಾಡಿದೆ. ಬೆಂಗಳೂರಿನ ಸಂಚಾರ ನಿರ್ವಹಣೆಗೆ ಪೊಲೀಸರು ಹಾಗೂ ಸರ್ಕಾರ ಕೆಲವು ಕ್ರಮಗಳನ್ನು ಕೈಗೊಂಡಿದೆ.28 ಸಿಗ್ನಲ್‌ಗಳನ್ನೂ ಗುರ್ತಿಸಲಾಗಿದ್ದು, ನಗರದ ಎಲ್ಲಾ ಪ್ರಮುಖ 28 ಟ್ರಾಫಿಕ್ ಸಿಗ್ನಲ್‌ಗಳಿಗೆ ಇಂಟರ್‌ನೆಟ್ ಸಂಪರ್ಕ ಹಾಗೂ ಜಿಪಿಎಸ್ ವ್ಯವಸ್ಥೆ ಅಳವಡಿಕೆ ಮಾಡಲಾಗುತ್ತೆ. ಇದರ ನೇರ ಸಂಪರ್ಕ ಬೆಂಗಳೂರಿನ ಸಂಚಾರ ಮಾಹಿತಿ ಕೇಂದ್ರಕ್ಕೆ ರವಾನೆ ಆಗುತ್ತೆ. ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಈ ಕೇಂದ್ರವನ್ನ ಸ್ಥಾಪನೆ ಮಾಡಲಾಗಿದೆ.ಈ ಕೇಂದ್ರವು ಸಿಗ್ನಲ್‌ಗಳ ಮೇಲೆ ನಿಗಾ ವಹಿಸುತ್ತದೆ. ಯಾವುದಾದ್ರೂ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾದ್ರೆ ಸಿಗ್ನಲ್ ಕೂಡಲೇ ಹಸಿರು ಬಣ್ಣಕ್ಕೆ ತಿರುಗುತ್ತೆ. ಈ ಮೂಲಕ ವಾಹನಗಳು ಗಂಟೆಗಟ್ಟಲೆ ಸಿಗ್ನಲ್‌ನಲ್ಲಿ ಕಾದು ನಿಲ್ಲೋದು ತಪ್ಪುತ್ತದೆ. ಇನ್ನು ಡಿಜಿಟಲ್ ಬೋರ್ಡ್‌ಗಳನ್ನ ಅಳವಡಿಕೆ ಮಾಡಿ ಸಂಚಾರ ದಟ್ಟಣೆ ಇರುವ ರಸ್ತೆಗಳ ಬಗ್ಗೆ ಮಾಹಿತಿ ನೀಡಲಾಗುತ್ತೆ. ಈ ಮಾಹಿತಿಯನ್ನ ನೋಡಿ ವಾಹನ ಸವಾರರು ತಮ್ಮ ಮಾರ್ಗ ಬದಲಾವಣೆ ಮಾಡಿಕೊಳ್ಳೋದಕ್ಕೂ ಅನುಕೂಲ ಆಗಲಿದೆ.ಸಂಪರ್ಕ ರಸ್ತೆಗಳ ಕೊರತೆ ಇರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸರ್ಕಾರ ಸುರಂಗ ರಸ್ತೆಗಳನ್ನ ನಿರ್ಮಾಣ ಮಾಡೋಕೆ ಮುಂದಾಗಿದೆ. ಬೆಂಗಳೂರಿನಲ್ಲಿ ಒಟ್ಟು 190 ಕಿ. ಮೀ. ಉದ್ದಕ್ಕೆ ಸುರಂಗ ರಸ್ತೆ ನಿರ್ಮಿಸುವ ಯೋಜನೆ ಇದೆ. ಈ ಯೋಜನೆಗೆ 8 ಕಂಪನಿಗಳ ಅರ್ಹತೆ ಪಡೆದುಕೊಂಡಿದ್ದು, ಮುಂದಿನ 45 ದಿನಗಳ ಒಳಗೆ ಟೆಂಡರ್ ಕರೆಯಲು ನಿರ್ಧಾರ ಮಾಡಲಾಗಿದೆ. ಟೆಂಡರ್ ಪಡೆದ ಕಂಪನಿ ಮೊದಲು ಬೆಂಗಳೂರು ನಗರದ ಟ್ರಾಫಿಕ್ ಪರಿಸ್ತಿತಿಯ ಅಧ್ಯಯನ ಮಾಡಲಿದೆ. ಈ ಮೂಲಕ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಲಿದೆ.ಹಾಗೆ ನೋಡಿದ್ರೆ ಬೆಂಗಳೂರಿನಲ್ಲಿ ಈಗಾಗಲೇ ಅಂಡರ್ ಪಾಸ್‌ಗಳಿವೆ, ಈ ಅಂಡರ್‌ ಪಾಸ್‌ಗಳು ನಿರ್ವಹಣೆ ಕೊರತೆ ಎದುರಿಸುತ್ತಿವೆ. ಅದರಲ್ಲೂ ಮಳೆಗಾಲ ಬಂದ್ರೆ ಸಾಕು ಅಂಡರ್ ಪಾಸ್‌ಗಳಲ್ಲಿ ನೀರು ನಿಲ್ಲುತ್ತಿವೆ. ಅಂಡರ್ ಪಾಸ್‌ಗಳ ಪರಿಸ್ಥಿತಿಯೇ ಹೀಗಿರುವಾಗ ಮುಂದಿನ ದಿನಗಳಲ್ಲಿ ಸುರಂಗ ರಸ್ತೆ ಕಥೆ ನಿರ್ವಹಣೆ ಕಥೆ ಹೇಗೆ ಎಂಬ ಪ್ರಶ್ನೆಯೂ ಸಹಜವಾಗೇ ಮೂಡುತ್ತೆ.

ಅಪರಾಧ

Breaking News ಚಾಲಕ ಆತ್ಮಹತ್ಯೆ – ಡೆತ್ ನೋಟ್‌ನಲ್ಲಿ ಸಂಸದ ಡಾ. ಸುಧಾಕರ್ ಹೆಸರು ಉಲ್ಲೇಖ!

ಚಿಕ್ಕಬಳ್ಳಾಪುರ, ಆಗಸ್ಟ್ 7 – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೈನಂದಿನ ಶಾಂತಿಯನ್ನು ಬೆಚ್ಚಿಬೀಳಿಸುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ 33 ವರ್ಷದ ಗುತ್ತಿಗೆ ಚಾಲಕ ಬಾಬು ಎಂ. ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೋಕಾಂತರವಾಗಿದೆ.

ಡೆತ್ ನೋಟ್‌ನಲ್ಲಿ ಸಂಸದ ಡಾ. ಕೆ. ಸುಧಾಕರ್ ಹೆಸರು:
8 ವರ್ಷಗಳಿಂದ ಲೆಕ್ಕಪರಿಶೋಧನೆ ವಿಭಾಗದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಾಬು, ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹಾಗೂ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ವಿರುದ್ಧ ಗಂಭೀರ ಆರೋಪಗಳನ್ನು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆತ್ಮಹತ್ಯೆಗೆ ಕಾರಣವೆನಿಸಿದ ಹಣಕಾಸು ವಂಚನೆ:
ಬಾಬು ಅವರು ಡೆತ್ ನೋಟ್‌ನಲ್ಲಿ, ಸರ್ಕಾರಿ ಕೆಲಸ ಕೊಡಿಸುತ್ತೇವೆಂದು ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಬಾಬು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು:
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ತಕ್ಷಣವೇ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ FIR ದಾಖಲಾತಿ ನಡೆಯುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.

Continue Reading

ಬೆಂಗಳೂರು

ಬೆಂಗಳೂರಿನಲ್ಲಿ ವಸತಿ ಯೋಜನೆಗಳ ಅವ್ಯವಸ್ಥೆ: ಹೊಸ ಯೋಜನೆಗಳ ಬಗ್ಗೆ ಶಾಸಕ ಎಸ್.ಟಿ. ಸೋಮಶೇಖರ್ ಅಸಮಾಧಾನ

ಬೆಂಗಳೂರು, ಆಗಸ್ಟ್ 7 – ನಗರದಲ್ಲಿ ಈಗಿನ ವಸತಿ ಯೋಜನೆಗಳು ಪೂರ್ಣವಾಗಿಲ್ಲದಿರುವಾಗ ಹೊಸ ಭೂಸ್ವಾಧೀನ ಅಧಿಸೂಚನೆಗಳನ್ನು ನೀಡುವುದು ಅರ್ಥವಿಲ್ಲ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಕಿಡಿಕಾರಿದರು.

ಯಶವಂತಪುರ ಕ್ಷೇತ್ರದ ಚುಂಚನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಬ್ಬರಾಯನಪಾಳ್ಯ ಎ ಹಾಗೂ ಬಿ ಗ್ರಾಮಗಳಲ್ಲಿ ಹೊಸ ಅಂಗನವಾಡಿ ಕಟ್ಟಡ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ವೇಳೆ ಅವರು ಮಾತನಾಡಿದರು.

ಅವರು ಅಭಿಪ್ರಾಯಪಟ್ಟ ಪ್ರಮುಖ ವಿಷಯಗಳು:

  • ಬೆಂಗಳೂರಿನ ಜನಸಂಖ್ಯೆ ಈಗಾಗಲೇ 1.5 ಕೋಟಿಗೂ ಮೀರುತ್ತಿದೆ.
  • ವಸತಿ ಸಮುಚ್ಛಯಗಳಲ್ಲಿ ಇನ್ನೂ ಅನೇಕ ಅಭಿವೃದ್ಧಿ ಕೆಲಸಗಳು ಬಾಕಿಯಿವೆ.
  • ಕುಡಿಯುವ ನೀರಿನ ಕೊರತೆ, ಒಳಚರಂಡಿ ಸಮಸ್ಯೆ, ರಾಜಕಾಲುವೆಗಳ ಉಕ್ಕಿಹರಿವು ನಗರದ ಮುಖ್ಯ ಸಮಸ್ಯೆಗಳಾಗಿವೆ.
  • ಕೆಲ ಕಟ್ಟಡಗಳು ಕಳಪೆ ಗುಣಮಟ್ಟದಿಂದ ನಿರ್ಮಾಣವಾಗಿದ್ದು, ಸೋರಿಕೆ ಸಮಸ್ಯೆ ಜನರನ್ನು ಕಾಡುತ್ತಿದೆ.
  • “ಕಟ್ಟಡ ಕುಸಿದು ಅನಾಹುತವಾದರೆ ಹೊಣೆ ಯಾರು?” ಎಂದು ಅವರು ಪ್ರಶ್ನಿಸಿದರು.

ಬೇರೆ ಪ್ರಮುಖ ಅಂಶಗಳು:
ನಗರದ ವಾಹನ ಸಂಚಾರ ದಟ್ಟಣೆ, ನಿಯಂತ್ರಣ ತಪ್ಪಿದ ನಗರ ವಿಸ್ತರಣೆ, ಮೂಲಸೌಕರ್ಯದ ಕೊರತೆ ಇವುಗಳಿಂದ ನಾಗರಿಕರು ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರಿನಿಂದ ಹೊರಗೆ ಹೊಸ ವಸತಿ ಯೋಜನೆಗಳನ್ನು ರೂಪಿಸಿ ಮೂಲಸೌಕರ್ಯ ಒದಗಿಸಿದರೆ ಜನಸಂದಣಿ ನಿಯಂತ್ರಣ ಸಾಧ್ಯವೆಂದು ಶಾಸಕ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಹಾಜರಿದ್ದವರು:
ಪಂಚಾಯತ್ ಅಧ್ಯಕ್ಷೆ ಹೇಮಾ ನಾರಾಯಣ್, ಸದಸ್ಯರು ಸದಾನಂದ.ಡಿ, ಎನ್.ಕುಮಾರ್, ರೇವಣಸಿದ್ದಯ್ಯ, ಅಶ್ವತ್, ವೆಂಕಟಾಚಲ, ಸುನಿಲ್, ಪುಟ್ಟಮಲ್ಲು, ತಾತಪ್ಪ, ಶಿವಣ್ಣ, ಹನುಮಂತ ಹಾಗೂ ಗ್ರಾಮಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

ಬಿಬಿಎಂಪಿ

ಜಿಬಿಎ ಚುನಾವಣೆ ಪೂರ್ವಸಿದ್ಧತೆ: ನವೆಂಬರ್ 1ರೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ – ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದ ಪೂರ್ವಸಿದ್ಧತೆಗಳನ್ನು ನವೆಂಬರ್ 1ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಚುನಾವಣೆಗಾಗಿ ಮತದಾರರ ನೋಂದಣಿ ನಿಯಮಗಳನ್ನು ಹೇಗೆ ರೂಪಿಸಬೇಕು ಎಂಬ ಕುರಿತು ಚುನಾವಣಾ ಆಯೋಗದ ಅಭಿಪ್ರಾಯವನ್ನು ಕೇಳಲಾಗುವುದು,” ಎಂದು ಸ್ಪಷ್ಟಪಡಿಸಿದರು.

ಚುನಾವಣೆ ಹಕ್ಕು ಕಾಪಾಡುವ ಕುರಿತು ಮಾರ್ಗದರ್ಶನ:
ಪಕ್ಷದ ಕಾರ್ಯಕರ್ತರು ಮತ್ತು ಬ್ಲಾಕ್ ಅಧ್ಯಕ್ಷರಿಗೆ, ತಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳುವ ಕುರಿತು ಮಾರ್ಗದರ್ಶನ ನೀಡಲಾಗಿದೆ. “ಶಾಸಕರನ್ನು ಹಾಗೂ ಬ್ಲಾಕ್ ಲೆವಲ್ ನಾಯಕರನ್ನು ಮತ್ತೊಮ್ಮೆ ಸಭೆಗೆ ಕರೆದು ಸಿದ್ಧತೆ ಕುರಿತ ಚರ್ಚೆ ನಡೆಯಲಿದೆ,” ಎಂದರು.

ಇಂಡಿಯಾ ಒಕ್ಕೂಟ ಮತ್ತು ಪ್ರತಿಭಟನೆ ಕುರಿತು ಸ್ಪಷ್ಟನೆ:
ಮುಖ್ಯಮಂತ್ರಿಗಳಿಗೆ ಇಂಡಿಯಾ ಒಕ್ಕೂಟದ ಸಭೆಗೆ ಆಹ್ವಾನ ಇದೆ. ನಾನು ಇಲ್ಲಿ ಪ್ರತಿಭಟನಾ ಸಭೆಗಾಗಿ ಸಿದ್ಧತೆಗಳನ್ನು ನೋಡಿಕೊಳ್ಳುತ್ತಿದ್ದೇನೆ,” ಎಂದು ಡಿಸಿಎಂ ಹೇಳಿದರು. “ಸ್ವಾತಂತ್ರ ಉದ್ಯಾನದಲ್ಲಿ ಮತಚೂರಿ ವಿರುದ್ಧsymbolic ಪ್ರತಿಭಟನೆ ನಡೆಯಲಿದ್ದು, ಇದು ನ್ಯಾಯಾಲಯದ ಆದೇಶದಂತೆ ಹಮ್ಮಿಕೊಳ್ಳಲಾಗಿದೆ,” ಎಂದು ಹೇಳಿದರು.

ರಾಜ್ಯಮಟ್ಟದ ಪ್ರತಿಭಟನೆ:
ಪ್ರತಿಯೊಬ್ಬ ಜಿಲ್ಲೆಯಿಂದ ಕನಿಷ್ಠ 50 ನಾಯಕರು, ಕಾರ್ಯಕರ್ತರು, ಪರಾಜಿತ ಅಭ್ಯರ್ಥಿಗಳು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಲಾಗಿದೆ. “ಬೆಂಗಳೂರು ಮಾತ್ರವಲ್ಲ, ಇಡೀ ಕರ್ನಾಟಕದಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ,” ಎಂದು ಅವರು ಹೇಳಿದ್ದಾರೆ.

Continue Reading

Trending