Connect with us

ದೇಶ

‘ಪ್ರಾರ್ಥನೆ ವಿಫಲ ಆಗುವುದಿಲ್ಲ’ ಹೇಳಿಕೆಯ ನಿಜ ಅರ್ಥ ಹೇಳಿದ DCM ಡಿಕೆಶಿ

ಮೇಕೆದಾಟು ಯೋಜನೆಯ (Mekedatu Project) ತಾಂತ್ರಿಕ ಅಂಶವನ್ನು ಕೇಂದ್ರ ಜಲ ಆಯೋಗವೇ (Central Water Commission) ತೀರ್ಮಾನಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾವು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (X) ಪೋಸ್ಟ್ ಮಾಡಿದ್ದೇನೆ. ಅದನ್ನು ಬೇರೆ ರೀತಿಯಲ್ಲಿ ವ್ಯಾಖ್ಯಾನ ಮಾಡುವುದಕ್ಕೆ ಅರ್ಥವಿಲ್ಲ ಎಂದು ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, “ಕರ್ನಾಟಕ ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ನಾನು ಪೋಸ್ಟ್ ಮಾಡಿದ್ದೇನೆ. ಇದನ್ನು ಕೆಲ ಮಾಧ್ಯಮಗಳು ತಪ್ಪಾಗಿ ಅರ್ಥೈಸುತ್ತಿವೆ” ಎಂದು ಸ್ಪಷ್ಟನೆ ನೀಡಿದರು.

ಮೇಕೆದಾಟು ಯೋಜನೆ ಕುರಿತು ಮಾತನಾಡಿದ ಅವರು, “ಕಾವೇರಿ ಆರತಿಯ ಪ್ರಾರ್ಥನೆಗೆ ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದಿದೆ. ಮೇಕೆದಾಟು ಯೋಜನೆಯ ತಾಂತ್ರಿಕ ಅಂಶವನ್ನು ಕೇಂದ್ರ ಜಲ ಆಯೋಗವೇ ತೀರ್ಮಾನಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ನಾನು ಈ ಮಾತುಗಳನ್ನು ಹೇಳುತ್ತಾ ಬಂದಿದ್ದೇನೆ” ಎಂದು ಹೇಳಿದರು. ಜೊತೆಗೆ, “ರೈತರ ಬದುಕು ಯಾವಾಗಲೂ ಸುಖವಾಗಿರಲಿ ಎಂದು ಪಕ್ಷ ಹಾಗೂ ಸರ್ಕಾರದ ಪರವಾಗಿ ಶುಭ ಹಾರೈಸುತ್ತೇನೆ” ಎಂದರು.

ಖರ್ಗೆ–ರಾಹುಲ್ ಭೇಟಿ ವಿಚಾರ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಅವರು ಬಂದಾಗಲೆಲ್ಲ ಅವರನ್ನು ಭೇಟಿ ಮಾಡುವುದು ನನ್ನ ಕರ್ತವ್ಯ. ಸ್ವಾಗತಿಸುವುದು ನನ್ನ ಡ್ಯೂಟಿ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ” ಎಂದರು.

ಇನ್ನು ರಾಹುಲ್ ಗಾಂಧಿ ಅವರೊಂದಿಗೆ ನಡೆದ ಪ್ರತ್ಯೇಕ ಚರ್ಚೆ ಬಗ್ಗೆ ಮಾತನಾಡಿದ ಡಿಸಿಎಂ, “ಆ ವಿಚಾರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಮಾತನಾಡಿಲ್ಲ ಎಂದು ಹೇಳುವುದಿಲ್ಲ. ಅದು ನನ್ನ ಮತ್ತು ಅವರ ನಡುವಿನ ವಿಷಯ” ಎಂದು ಹೇಳಿದರು. ದೆಹಲಿಗೆ ತೆರಳಿದಾಗ ಮತ್ತೆ ಭೇಟಿಯಾಗುತ್ತೇನೆ ಎಂದೂ ತಿಳಿಸಿದರು.

ಇತ್ತೀಚೆಗೆ ಮೈಸೂರು ವಿಮಾನ ನಿಲ್ದಾಣದ ರನ್‌ವೇ ಬಳಿ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಮಾತುಕತೆ ರಾಜಕೀಯ ವಲಯದಲ್ಲಿ ಹಲವು ಉಹಾಪೋಹಗಳಿಗೆ ಕಾರಣವಾಗಿತ್ತು.

Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 WORLD CUP : ಡಬಲ್ ಸೂಪರ್ ಓವರ್‌ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು

ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ ಕ್ರಿಕೆಟ್ ಅಭಿಮಾನಿಗಳಿಗೆ ನಿಜವಾದ ಥ್ರಿಲ್ಲರ್ ಅನುಭವ ನೀಡಿತು. ಕೊನೆಯ ಕ್ಷಣದವರೆಗೂ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ‘ಡಬಲ್ ಸೂಪರ್ ಓವರ್’ನಲ್ಲಿ 4 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 187 ರನ್ ಗಳಿಸಿತು. 188 ರನ್‌ಗಳ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ 19.4 ಓವರ್‌ಗಳಲ್ಲಿ 187 ರನ್‌ಗಳಿಗೆ ಆಲೌಟ್ ಆಗಿ ಪಂದ್ಯ ಟೈ ಮಾಡಿತು.

ಮೊದಲ ಸೂಪರ್ ಓವರ್‌ನಲ್ಲಿ ಅಜ್ಮತ್ತುಲ್ಲ ಒಮರ್ಜಾಯಿ ಸ್ಫೋಟಕ ಬ್ಯಾಟಿಂಗ್ ಮೂಲಕ 17 ರನ್ ಗಳಿಸಿದರು. 18 ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾಗೆ ಕೊನೆಯ ಎಸೆತದಲ್ಲಿ 7 ರನ್ ಬೇಕಾಗಿದ್ದಾಗ ಟ್ರಿಸ್ಟನ್ ಸ್ಟಬ್ಸ್ ಫಜಲ್ಹಕ್ ಫಾರೂಕಿ ಎಸೆತವನ್ನು ಸಿಕ್ಸರ್‌ಗೆ ಬಾರಿಸಿ ಪಂದ್ಯವನ್ನು ಮತ್ತೆ ಟೈ ಮಾಡಿದರು.

ಎರಡನೇ ಸೂಪರ್ ಓವರ್‌ನಲ್ಲಿ ಡೇವಿಡ್ ಮಿಲ್ಲರ್ ಕೇವಲ 4 ಎಸೆತಗಳಲ್ಲಿ 16 ರನ್ ಸಿಡಿಸಿ ತಂಡವನ್ನು 23 ರನ್‌ಗಳಿಗೆ ಕೊಂಡೊಯ್ದರು. 24 ರನ್ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ಪರ ರಹಮಾನುಲ್ಲಾ ಗುರ್ಬಾಜ್ ಸತತ ಮೂರು ಸಿಕ್ಸರ್‌ಗಳನ್ನು ಬಾರಿಸಿ ಪಂದ್ಯವನ್ನು ತೀವ್ರ ರೋಚಕಗೊಳಿಸಿದರು. ಆದರೆ ಕೊನೆಯ ಎಸೆತದಲ್ಲಿ ಬೌಂಡರಿ ಯತ್ನದಲ್ಲಿ ಕ್ಯಾಚ್ ನೀಡಿ ಔಟಾದರು. ಹೀಗಾಗಿ ದಕ್ಷಿಣ ಆಫ್ರಿಕಾ ರೋಚಕ 4 ರನ್ ಜಯ ಸಾಧಿಸಿತು.

Continue Reading

ದೇಶ

POK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!

ವಾಷಿಂಗ್ಟನ್: ಪಿಒಕೆ (POK) ಹಾಗೂ ಅಕ್ಸಾಯ್ ಚಿನ್ ಕುರಿತು ದೀರ್ಘಕಾಲದಿಂದ ದ್ವಂದ್ವ ನಿಲುವು ಹೊಂದಿದ್ದ ಅಮೆರಿಕಾ ಇದೀಗ ಮತ್ತೆ ಯು-ಟರ್ನ್ ಹೊಡೆದಂತೆ ಕಾಣುತ್ತಿದೆ. ಇತ್ತೀಚೆಗೆ ಭಾರತ ಮೇಲಿನ ಸುಂಕವನ್ನು ಶೇ.18ಕ್ಕೆ ಇಳಿಕೆ ಮಾಡಿದ ಬೆನ್ನಲ್ಲೇ, ಯುಎಸ್ ಟ್ರೇಡ್ ರೆಪ್ರೆಸೆಂಟೇಟಿವ್ (USTR) ಕಚೇರಿ ತನ್ನ ಅಧಿಕೃತ X ಖಾತೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನ ಸಂಪೂರ್ಣ ಪ್ರದೇಶವನ್ನು ಭಾರತದ ಭೂಭಾಗವೆಂದು ತೋರಿಸುವ ನಕ್ಷೆಯನ್ನು ಪೋಸ್ಟ್ ಮಾಡಿತ್ತು.

ಫೆಬ್ರವರಿ 7ರಂದು ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದದ ಘೋಷಣೆಯ ನಂತರ ಈ ನಕ್ಷೆ ಪ್ರಕಟವಾಗಿದ್ದು, ಜಾಗತಿಕ ಗಮನ ಸೆಳೆದಿತ್ತು. ವಿಶೇಷವಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (POK) ಮತ್ತು ಚೀನಾ ಆಕ್ರಮಿತ ಅಕ್ಸಾಯ್ ಚಿನ್ ಪ್ರದೇಶಗಳನ್ನು ಸಹ ಭಾರತದ ಭಾಗವಾಗಿ ಗುರುತಿಸಿರುವುದು ಅಮೆರಿಕದ ಹಳೆಯ ನೀತಿಗೆ ವಿರುದ್ಧವಾಗಿತ್ತು. ಇದರಿಂದ ಇಂಡೋ-ಪೆಸಿಫಿಕ್ ರಾಜಕೀಯ ಸಮೀಕರಣದಲ್ಲಿ ಭಾರತಕ್ಕೆ ಅಮೆರಿಕಾ ಸ್ಪಷ್ಟ ಬೆಂಬಲ ನೀಡಿದೆಯೇ ಎಂಬ ಚರ್ಚೆ ಜೋರಾಗಿತ್ತು.

ಆದರೆ, ಕೆಲವೇ ದಿನಗಳಲ್ಲಿ USTR ತನ್ನ ಅಧಿಕೃತ ಖಾತೆಯಿಂದ ಈ ನಕ್ಷೆ ಪೋಸ್ಟ್ ಅನ್ನು ಡಿಲೀಟ್ ಮಾಡಿದೆ. ಇದರಿಂದ ಅಮೆರಿಕಾ ತನ್ನ ನಿಲುವಿನಲ್ಲಿ ಸ್ಪಷ್ಟತೆ ಕಳೆದುಕೊಂಡಿತೇ ಎಂಬ ಪ್ರಶ್ನೆ ಮೂಡಿದೆ.

ಇದಕ್ಕೆ ಸಂಬಂಧಿಸಿದಂತೆ ಭಾರತ ತನ್ನ ನಿಲುವು ಸ್ಪಷ್ಟಪಡಿಸಿದ್ದು, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನ ಸಂಪೂರ್ಣ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿದ್ದು, ಅಕ್ಸಾಯ್ ಚಿನ್ ಕೂಡ ಭಾರತದ ಭಾಗವೇ ಎಂದು ಪುನರುಚ್ಚರಿಸಿದೆ.

ಈ ಬೆಳವಣಿಗೆ ಭಾರತ-ಅಮೆರಿಕಾ-ಚೀನಾ-ಪಾಕಿಸ್ತಾನ ನಡುವಿನ ಭೌಗೋಳಿಕ ರಾಜಕೀಯ ಚರ್ಚೆಗೆ ಹೊಸ ತಿರುವು ನೀಡಿದೆ.

Continue Reading

ದೇಶ

ಅಮೆರಿಕ ವಿರುದ್ಧ ಪಾಕ್‌ ರಕ್ಷಣಾ ಸಚಿವ ಖವಾಜಾ ಆಸಿಫ್‌ ಆಕ್ರೋಶ: “ಟಾಯ್ಲೆಟ್‌ ಪೇಪರ್‌ಗಿಂತ ಕೆಟ್ಟದಾಗಿ ಬಳಸಿಕೊಂಡರು”

ಇಸ್ಲಾಮಾಬಾದ್: ಪಾಕಿಸ್ತಾನವನ್ನು ಅಮೆರಿಕ “ಟಾಯ್ಲೆಟ್‌ ಪೇಪರ್‌ಗಿಂತ ಕೆಟ್ಟದಾಗಿ ಬಳಸಿಕೊಂಡಿದೆ” ಎಂದು ಪಾಕ್‌ ರಕ್ಷಣಾ ಸಚಿವ ಖವಾಜಾ ಆಸಿಫ್‌ (Khawaja Asif) ಸಂಸತ್ತಿನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಬೆಂಬಲವನ್ನು ಅಂಧವಾಗಿ ಅನುಸರಿಸುವುದು ಪಾಕಿಸ್ತಾನ ಮಾಡಿದ ದೊಡ್ಡ ತಪ್ಪು ಎಂದು ಅವರು ಹೇಳಿದ್ದಾರೆ.

ಸಂಸತ್ತಿನಲ್ಲಿ ಮಾತನಾಡಿದ ಆಸಿಫ್‌, 2001ರ ಬಳಿಕ ಅಮೆರಿಕ ನೇತೃತ್ವದಲ್ಲಿ ನಡೆದ ಭಯೋತ್ಪಾದನೆ ವಿರುದ್ಧದ ಯುದ್ಧದಲ್ಲಿ ಪಾಕಿಸ್ತಾನ ಪ್ರಮುಖ ಪಾತ್ರವಹಿಸಿತು. ತಾಲಿಬಾನ್ ವಿರುದ್ಧ ಕಾರ್ಯಾಚರಣೆ ನಡೆಸಿದ ಪರಿಣಾಮ ದೇಶದ ಒಳಗಿನ ಭದ್ರತಾ ಪರಿಸ್ಥಿತಿ ಹದಗೆಟ್ಟಿತು. ಹಿಂಸಾಚಾರ, ಅತಿರೇಕವಾದ ಮತ್ತು ಆರ್ಥಿಕ ಒತ್ತಡದ ಸಂಕಷ್ಟವನ್ನು ಪಾಕಿಸ್ತಾನ ದಶಕಗಳ ಕಾಲ ಅನುಭವಿಸಬೇಕಾಯಿತು ಎಂದು ಹೇಳಿದರು.

“ಅಮೆರಿಕ ತನ್ನ ಉದ್ದೇಶ ಸಾಧಿಸಿದ ಬಳಿಕ ಹಿಂದೆ ಸರಿಯಿತು. ಆದರೆ ಅದರ ಪರಿಣಾಮಗಳನ್ನು ಪಾಕಿಸ್ತಾನ ಇನ್ನೂ ಭರಿಸುತ್ತಿದೆ. ನಾವು ಅನುಭವಿಸಿದ ನಷ್ಟಗಳನ್ನು ಎಂದಿಗೂ ಸರಿದೂಗಿಸಲು ಸಾಧ್ಯವಿಲ್ಲ,” ಎಂದು ಆಸಿಫ್‌ ಬೇಸರ ವ್ಯಕ್ತಪಡಿಸಿದರು.

ಇತರ ರಾಷ್ಟ್ರಗಳ ಸಂಘರ್ಷಗಳಲ್ಲಿ ತೊಡಗಿಸಿಕೊಂಡ ಪರಿಣಾಮ ಪಾಕಿಸ್ತಾನ ಒಂದು ಕೈಗೊಂಬೆಯಂತಾಗಿದೆ. ಆ ಕಾಲದ ನಿರ್ಧಾರಗಳು ಬದಲಾಯಿಸಲಾಗದ ತಪ್ಪುಗಳಾಗಿದ್ದು, ಈಗ ದೇಶದ ಆರ್ಥಿಕ ಮತ್ತು ಭದ್ರತಾ ಪರಿಸ್ಥಿತಿಗೆ ಹೊರೆ ಆಗಿವೆ ಎಂದು ಹೇಳಿದ್ದಾರೆ.

ಈ ಹೇಳಿಕೆ ಪಾಕಿಸ್ತಾನ-ಅಮೆರಿಕ ಸಂಬಂಧಗಳಲ್ಲಿ ಮತ್ತೆ ಚರ್ಚೆ ಹುಟ್ಟುಹಾಕಿದೆ. ಭವಿಷ್ಯದಲ್ಲಿ ವಿದೇಶಾಂಗ ನೀತಿಯಲ್ಲಿ ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂಬ ಅಗತ್ಯವನ್ನೂ ಅವರು ಒತ್ತಿಹೇಳಿದ್ದಾರೆ.

Continue Reading

Trending