ರಾಜಕೀಯ
ಬಿಟ್ರೆ ವೀರಪ್ಪನ್ನನ್ನೂ ದೇವರು ಮಾಡಿ ಮಲೈ ಮಹದೇಶ್ವರನನ್ನು ದೆವ್ವ ಮಾಡುತ್ತಾರೆ
ಮೈಸೂರು: ಮಹಿಷ ದಸರಾ ಮಾಡಲು ಬಿಟ್ರೆ ವೀರಪ್ಪನ್ನನ್ನೂ ದೇವರು ಮಾಡ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ಹರಿಹಾಯ್ದಿದ್ದಾರೆ, ಮೈಸೂರಿನಲ್ಲಿ ಮಾಧ್ಯಮ ಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಹಿಷಾ ದಸರಾಂದAತ ವಿಕೃತಿಗಳನ್ನು ಈಗಲೇ ಸದೆ ಬಡಿಯಬೇಕು, ಈಗಲೇ ಇವರನ್ನು ಕಂಟ್ರೋಲ್ ಮಾಡಬೇಕು ಇಲ್ಲದೆ ಇದ್ದರೆ ಮಲೈಮಹದೇಶ್ವರ್ ಬೆಟ್ಟಕ್ಕೆ ಹೋಗಿ ನರಹಂತಕ ವೀರಪ್ಪನ್ ನಮ್ಮ ದೇವರು, ನಮ್ಮ ಮೂಲ ಪುರುಷ ಅಂತ ಹೇಳಿ ಮಲೈ ಮಹದೇಶ್ವರನನ್ನು ದೆವ್ವ ಮಾಡುತ್ತಾರೆ ಎಂದು ಕಿಡಿ ಕಾರಿದ್ದಾರೆ,
ಆಕ್ಟೋಬರ್ ೧೩ರಂದು ನಡೆಯಲಿರುವ ಚಾಮುಂಡಿ ಬೆಟ್ಟ ಚಲೋದ ಮಾಹಿತಿ ನೀಡಿದ ಅವರು ಅ ೧೩ರಂದು ಬೆಳೆಗ್ಗೆ ೮ ಗಂಟಗೆ ಚಲೋ ಚಾಮುಂಡಿ ಬಟ್ಟ ಜಾಥಾ ನಡೆಸಲಿದೆ, ಐದು ಸಾವಿರಕ್ಕೂ ಹೆಚ್ಚು ಜನ ಜಾಥಾದಲ್ಲಿ ಭಾಗಿಯಾಗಲಿದ್ದಾರೆ, ಚಾಮುಂಡಿ ದೇವಿಗೆ ಪೂಜೆ ಮಾಡಿ ಮಾಹಿಷಾಸುರನ ಮುಂದೆ ಕುಳಿತು ಕೊಳ್ಳುತ್ತೇವೆ ಎಂದು ಹೇಳಿದರು, ಲಲಿತಾ ನಾಯಕ್ ಸಚಿವೆ ಆಗಿದ್ದಾಗ ಅವರ ಮಗ ಅಂಬೇಡ್ಕರ್ ಪ್ರತಿಮೆಗೆ ಮದ್ಯ ಕುಡಿಸಲು ಹೋಗಿದ್ದ ಈ ರೀತಿ ಅಂಬೇಡ್ಕರ್ಗೆ ಅಪಮಾನ ಮಾಡಿದ ವ್ಯಕ್ತಿಯ ತಾಯಿಯನ್ನು ಮಹಿಷಾ ದಸರಾ ಉದ್ಘಾಟನೆಗೆ ಕೆಲವು ದಲಿತರು ಕರೆದು ಕೊಂಡು ಬರುತ್ತಿರುವುದು ಸರಿನಾ, ಎಂದು ಅವರು ಪ್ರಶ್ನ ಮಾಡಿದರು,
೫೦ ವರ್ಷದಿಂದ ಯಾವತ್ತಾದರೂ ಮಹಿಷಾ ದಸರಾ ಎಲ್ಲಿ ಮಾಡಿದ್ದಾರೆ, ಯಾರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ ? ಮಹಿಷಾ ದಸರಾದಂಥ ವಿಕೃತಿಗಳನ್ನು ಈಗಲೇ ಸದೆ ಬಡಿಯಬೇಕು, ಇಲ್ಲದೆ ಇದ್ದರೆ ವೀರಪ್ಪನ್ ನಮ್ಮ ಮೂಲ ನಿವಾಸಿ ಅವನು ಪ್ರಕೃತಿ ರಕ್ಷಕ ಅಂತಾ ಕಥೆ ಕಟ್ಟಿ ದೇವರು ಮಾಡಿಬಿಡುತ್ತಾರೆ, ಮಲೈ ಮಹದೇಶ್ವರನನ್ನು ದೆವ್ವ ಮಾಡಿ ಬಿಡುತ್ತಾರೆ ಎಂದು ಹೇಳಿದರು,
ದೇಶ
ಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರ ವಿದೇಶ ಪ್ರವಾಸ? ವಿಜಯೇಂದ್ರ ಗಂಭೀರ ಆರೋಪ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರ ಬಂದ ಬಳಿಕ ಅನುದಾನ ಬೇಡಿಕೆ ಇಟ್ಟಿದ್ದರೂ ಗಂಗಕಲ್ಯಾಣ ಯೋಜನೆ, ಮನೆ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳು ನಡೆಯದೆ ಜನರಲ್ಲಿ ಅಸಮಾಧಾನ ಮೂಡಿದೆ ಎಂದು ಆರೋಪಿಸಿದರು. ಶಾಸಕರು ತಮ್ಮ ಖರ್ಚಿನಲ್ಲಿ ವಿದೇಶಕ್ಕೆ ಹೋಗುತ್ತಿದ್ದಾರೆ ಎಂಬ ಸಿಎಂ ಹೇಳಿಕೆಯನ್ನು ಪ್ರಶ್ನಿಸಿ, “ತಮ್ಮ ಕುರ್ಚಿ ಉಳಿಸಿಕೊಳ್ಳಲು ತಾವೇ ಅವರನ್ನು ಕಳಿಸುತ್ತಿದ್ದಾರೆ” ಎಂದು ಟೀಕಿಸಿದರು.
ರೆಸಾರ್ಟ್ ರಾಜಕೀಯದ ಮೇಲೆ ಲೇವಡಿ
ಕಾಂಗ್ರೆಸ್ ಶಾಸಕರು ರೆಸಾರ್ಟ್ ಬುಕ್ ಮಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, “ಅವರಿಗೆ ಅನುಕೂಲವಾಗಲಿ ಎಂದು ಬಿಜೆಪಿಯಿಂದ ಬಡಿಗೆ ರೆಡಿ ಮಾಡಿಸಿದ್ದೇವೆ” ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಅಂತರದ ರಾಜಕೀಯ ನಡೆಯುತ್ತಿದೆ ಎಂದು ಹೇಳಿದರು.
₹5,000 ಕೋಟಿ ಎಲ್ಲಿಗೆ ಹೋಯ್ತು?
ಗೃಹ ಲಕ್ಷ್ಮೀ ಯೋಜನೆಯ ₹5,000 ಕೋಟಿ ಹಣದ ಬಗ್ಗೆ ಸ್ಪಷ್ಟ ಉತ್ತರ ಸಿಗಲಿಲ್ಲ ಎಂದು ಆರೋಪಿಸಿದ ಅವರು, “ಹಣ ಉಪಯೋಗ ಆಯ್ತಾ? ದುರಪಯೋಗ ಆಯ್ತಾ? ಸಿಎಂ ಉತ್ತರ ಕೊಡಬೇಕು” ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರಕ್ಕೆ ನಕಲಿ ದಾಖಲೆ ನೀಡಿರುವ ವಿಚಾರದಲ್ಲೂ ಮುಂದಿನ ದಿನಗಳಲ್ಲಿ ವಿವರವಾದ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದರು.
ಪ್ರಾದೇಶಿಕ ಅಸಮಾನತೆ ಹೆಚ್ಚಳ
ಪ್ರಾದೇಶಿಕ ಅಸಮಾನತೆ ನಿವಾರಣೆ ಸಮಿತಿ ವರದಿ ಉಲ್ಲೇಖಿಸಿ, ರಾಜ್ಯದಲ್ಲಿ ಅಸಮಾನತೆ ಶೇಕಡಾ 60ರಿಂದ 72.08ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಹಿಂದುಳಿದಿದೆ ಎಂದು ಆರೋಪಿಸಿದರು.
ಕುರಿಗಾರರಿಗೆ ಪರಿಹಾರ ಬಾಕಿ
ಅನುಗ್ರಹ ಯೋಜನೆಯಡಿ 45 ಕೋಟಿ ರೂ. ಬಾಕಿ ಇಟ್ಟಿದ್ದು, 90 ಸಾವಿರ ಸಾವಿನ ಪೈಕಿ ಕೇವಲ 30 ಸಾವಿರ ಕುರಿಮರಿಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂದು ಆರೋಪಿಸಿದರು.
ಬಿಜೆಪಿ ಕಾರ್ಯಕಾರಿಣಿ ಸಭೆ
ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸರ್ಕಾರದ ವೈಫಲ್ಯಗಳು ಮತ್ತು ಮುಂದಿನ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.
ದೇಶ
LATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿರುವ ನಡುವೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ, ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ತಿಳಿಸಿದ್ದರೂ, ಅವರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿವೆ.
“ನಾನು ದೆಹಲಿಗೆ ಬಂದಿರೋದೇ ರಾಜಕಾರಣ ಮಾಡಲು. ಏನೂ ಮಾತನಾಡದೆ ಸುಮ್ಮನೆ ಹೋಗಲು ಸಾಧ್ಯವೇ?” ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರೂಪೇಶ್ ಬಘೇಲ್ ಜೊತೆಗೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿದ ಅವರು, ಅಸ್ಸಾಂ ಸೇರಿದಂತೆ ಇತರೆ ರಾಜ್ಯಗಳ ಚುನಾವಣಾ ಸ್ಥಿತಿಗತಿಗಳ ಕುರಿತು ಚರ್ಚೆ ನಡೆದಿದೆ ಎಂದರು. “ಎಲ್ಲಾ ವಿಚಾರಗಳನ್ನು ಮಾತನಾಡಲೇಬೇಕು. ಕಾಲವೇ ಎಲ್ಲಕ್ಕೂ ಉತ್ತರ ಕೊಡಲಿದೆ” ಎಂಬ ಅವರ ಮಾತುಗಳಿಗೆ ಹಲವು ಅರ್ಥಗಳು ನೀಡಲಾಗುತ್ತಿದೆ.
ಇದೇ ವೇಳೆ ಬಜೆಟ್ ಪೂರ್ವಸಿದ್ಧತಾ ಸಭೆಗೆ ಗೈರಾಗಿದ್ದ ಡಿಕೆಶಿ ದೆಹಲಿಗೆ ತೆರಳಿರುವುದು ಗಮನಾರ್ಹ. ಸಿಎಂ ಸಿದ್ದರಾಮಯ್ಯ ಅವರ ಅನುಮತಿ ಪಡೆದುಕೊಂಡೇ ಅವರು ತೆರಳಿದ್ದಾರೆ ಎನ್ನಲಾಗಿದ್ದರೂ, ದೆಹಲಿಯ ರಾಜಕೀಯ ಚಟುವಟಿಕೆಗಳು ಕುತೂಹಲ ಹುಟ್ಟಿಸಿವೆ. ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರಾ? ಎಂಬ ಪ್ರಶ್ನೆಗೆ ಅವರು ಸ್ಪಷ್ಟ ಉತ್ತರ ನೀಡಿಲ್ಲ.
ರಾಜ್ಯ ನಾಯಕತ್ವ ವಿಚಾರದಲ್ಲಿ ರಾಹುಲ್ ಗಾಂಧಿಯ ನಿರ್ಧಾರವೇ ಅಂತಿಮ ಎಂಬುದು ಕಾಂಗ್ರೆಸ್ ವಲಯದ ನಿಲುವು. ಇದೀಗ ಡಿಕೆಶಿ ರಾಹುಲ್ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆಗಳೂ ಚರ್ಚೆಯಾಗುತ್ತಿವೆ. ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಹೊಸ ತಿರುವು ಪಡೆಯುವ ಸೂಚನೆ ನೀಡಿದೆ.
ಅಪರಾಧ
BAIRATHI BASAVARJU BREAKING NEWS : ಸಿಐಡಿ ಲುಕ್ಔಟ್ ನೋಟಿಸ್ ಜಾರಿ, ತನಿಖೆ ತೀವ್ರ
ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.
ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.
ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.
-
ಬೆಂಗಳೂರು21 hours agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ20 hours agoGBA ELECTION : 5 ಪಾಲಿಕೆಗಳಿಗೆ ವಾರ್ಡ್ ಗಡಿ ಪಾಲನೆ ಕಡ್ಡಾಯ – ಮುಖ್ಯ ಆಯುಕ್ತ ಸೂಚನೆ
-
ದೇಶ18 hours ago2026 ಪ್ರೇಮಿಗಳ ದಿನ ಶನಿವಾರ: ರೋಮ್ಯಾಂಟಿಕ್ ವಾರಾಂತ್ಯಕ್ಕೆ ಟಾಪ್ 5 ಪ್ರವಾಸ ತಾಣಗಳು
-
ಕ್ರೀಡೆ15 hours agoIND vs PAK ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಉಸ್ಮಾನ್ ತಾರಿಕ್ ಎಚ್ಚರಿಕೆ: “ಭಾರತೀಯರು ನನ್ನ ಬೌಲಿಂಗ್ಗೆ ಹೆದರುತ್ತಿದ್ದಾರೆ!”
-
ದೇಶ18 hours agoLATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ
-
ಅಪರಾಧ20 hours agoCRIME : ಬೆಂಗಳೂರಿನಲ್ಲಿ ಮತ್ತೆ ರೋಡ್ ರೇಜ್: ಬಾನೆಟ್ ಮೇಲೆ ವ್ಯಕ್ತಿ ಇದ್ದರೂ 1 ಕಿ.ಮೀ ಕಾರು ಚಲಾಯಿಸಿದ ಚಾಲಕ
-
ದೇಶ15 hours agoHAL ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಗಂಭೀರ ಆರೋಪ: ಅರವಿಂದ್ ರೆಡ್ಡಿ ಕಾಲಿಗೆ ಬೀಳಲು ಬೆದರಿಕೆ?
-
ದೇಶ19 hours agoBHARATH BANDH : ದೇಶವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರ ಹೋರಾಟ, ಹಲವು ರಾಜ್ಯಗಳಲ್ಲಿ ಬಂದ್ ಪರಿಣಾಮ
