ಬೆಂಗಳೂರು
Karnataka Assembly ಅಬಕಾರಿ ಇಲಾಖೆಯಲ್ಲಿ ₹252 ಕೋಟಿ ಭ್ರಷ್ಟಾಚಾರ ಆರೋಪ: ಪೆನ್ಡ್ರೈವ್ ಪ್ರದರ್ಶಿಸಿದ ಆರ್ ಅಶೋಕ್, ವಿಧಾನಸಭೆಯಲ್ಲಿ ಭಾರೀ ಗದ್ದಲ
ಬೆಂಗಳೂರು, ಫೆಬ್ರವರಿ 3: ರಾಜ್ಯದ ಅಬಕಾರಿ ಇಲಾಖೆಯಲ್ಲಿ ಭಾರೀ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ (R Ashoka) ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ತಮ್ಮ ಬಳಿ ಆಡಿಯೋ ಸಾಕ್ಷ್ಯವಿದ್ದು, ಅದನ್ನು ಪೆನ್ಡ್ರೈವ್ ಮೂಲಕ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಪ್ರದರ್ಶಿಸಿದ್ದಾರೆ.
ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು “ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ನಡೆದಿದೆ” ಎಂದು ಹೇಳಿರುವುದೇ ಅಬಕಾರಿ ಇಲಾಖೆಯ ಅಕ್ರಮಗಳಿಗೆ ಸಾಕ್ಷಿಯಾಗಿದೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು. ತಿಮ್ಮಾಪುರ ಅವರಿಗೆ ಪಾಲು ಕೊಡಬೇಕೆಂಬ ಆಡಿಯೋ ವೈರಲ್ ಆಗಿದ್ದು, ಅದೇ ಪೆನ್ಡ್ರೈವ್ನಲ್ಲಿ ಇದೆ ಎಂದು ಅವರು ಸದನಕ್ಕೆ ತಿಳಿಸಿದರು.
ಅಶೋಕ್ ಆರೋಪದಂತೆ, ಅಬಕಾರಿ ಇಲಾಖೆ ಜಂಟಿ ಆಯುಕ್ತ ನಾಗರಾಜಪ್ಪ ಮತ್ತು ವಕೀಲ ರಮೇಶ್ ನಡುವಿನ ಸಂಭಾಷಣೆ ಆಡಿಯೋ ರೂಪದಲ್ಲಿ ಲಭ್ಯವಿದೆ. ಆಡಿಯೋದಲ್ಲಿ 18 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು. ಸಚಿವರು ಅಥವಾ ಅವರ ಮಗನ ಕಡೆಯಿಂದ ಸಂದೇಶ ಬಂದ ನಂತರವೇ ಕೆಲಸ ಆಗುತ್ತದೆ ಎಂದು ನಾಗರಾಜಪ್ಪ ಹೇಳಿರುವುದೂ ಆಡಿಯೋದಲ್ಲಿ ಇದೆ ಎಂದು ವಿವರಿಸಿದರು.
ಇನ್ನೂ, ಅಬಕಾರಿ ಅಂಗಡಿಗಳಿಂದ ಪ್ರತೀ ತಿಂಗಳು ಕಮಿಷನ್ ವಸೂಲಿ ನಡೆಯುತ್ತಿದೆ ಎಂದು ಆರೋಪಿಸಿದ ಅಶೋಕ್, ಪ್ರತಿ ಅಂಗಡಿಯಿಂದ ₹10,000 ರಿಂದ ₹15,000 ವರೆಗೆ ಹಣ ಸಂಗ್ರಹಿಸಲಾಗುತ್ತಿದೆ ಎಂದರು. ಇದರ ಮೂಲಕ ತಿಂಗಳಿಗೆ ಸುಮಾರು ₹21 ಕೋಟಿ, ವರ್ಷಕ್ಕೆ ₹252 ಕೋಟಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಅಂಕಿಅಂಶಗಳೊಂದಿಗೆ ಹೇಳಿದರು.
ಈ ಗಂಭೀರ ಆರೋಪಗಳಿಂದಾಗಿ ವಿಧಾನಸಭೆಯಲ್ಲಿ ಕೆಲಕಾಲ ತೀವ್ರ ಗದ್ದಲ ಉಂಟಾಯಿತು.
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಅಶೋಕ್
ಈ ವೇಳೆ ಸದನಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ ಅಶೋಕ್ ವ್ಯಂಗ್ಯವಾಡಿದರು.
“ಸಿನಿಮಾದ ಕೊನೆಯಲ್ಲಿ ಪೊಲೀಸರು ಅರೆಸ್ಟ್ ಮಾಡಲು ಬರುವಂತೆ ಸಿಎಂ ಈಗ ಬಂದಿದ್ದಾರೆ. ಇವರು ಅರೆಸ್ಟ್ ಮಾಡ್ತಾರೋ ಇಲ್ಲವೋ ನೋಡಬೇಕು” ಎಂದು ಕಾಲೆಳೆದರು.
ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ ಅವರು, ತನಿಖೆ ಪೂರ್ಣಗೊಳ್ಳುವವರೆಗೂ ಅಬಕಾರಿ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಅಪರಾಧ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡ್ರೋನ್ ಹಾರಿಸಿದ ಯೂಟ್ಯೂಬರ್ ವಿರುದ್ಧ FIR
ಚಿಕ್ಕಬಳ್ಳಾಪುರ:
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ನಿಯಮಬಾಹಿರವಾಗಿ ಡ್ರೋನ್ ಹಾರಿಸಿದ ಆರೋಪದಡಿ ನಗರದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲಾಗಿದೆ.
‘ಬೆಂಗಳೂರು ವಾಂಡರ್ಲಸ್ಟ್’ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಯೂಟ್ಯೂಬರ್, ವಿಮಾನ ನಿಲ್ದಾಣದ ಟರ್ಮಿನಲ್–1 ಮುಂಭಾಗದಿಂದ ಯಲಹಂಕ ಮಾರ್ಗವಾಗಿ ಏರ್ಫೋರ್ಸ್ ಪ್ರದೇಶದವರೆಗೆ ಡ್ರೋನ್ ಹಾರಿಸಿದ್ದಾನೆ. ಸುಮಾರು 7–8 ನಿಮಿಷಗಳ ಕಾಲ ಡ್ರೋನ್ ಮೂಲಕ ವಿಡಿಯೋ ರೆಕಾರ್ಡ್ ಮಾಡಿ ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದಾನೆ ಎನ್ನಲಾಗಿದೆ.
ಮೆಟ್ರೋ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳ ಮೇಲೆಯೂ ಡ್ರೋನ್ ಹಾರಿಸಿ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಈ ಪ್ರದೇಶವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರೆಡ್ ಝೋನ್ ವ್ಯಾಪ್ತಿಗೆ ಒಳಪಡುವುದರಿಂದ, ಇಲ್ಲಿ ಯಾವುದೇ ರೀತಿಯ ಡ್ರೋನ್ ಹಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನೋ–ಫ್ಲೈಯಿಂಗ್ ಝೋನ್ನಲ್ಲಿ ನಿಯಮ ಉಲ್ಲಂಘನೆ ಮಾಡಿರುವುದರಿಂದ, ಸಿಐಎಸ್ಎಫ್ ಭದ್ರತಾ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಯೂಟ್ಯೂಬರ್ ವಿರುದ್ಧ ಎಯರ್ಕ್ರಾಫ್ಟ್ ಆಕ್ಟ್ 1943 (ಸೆಕ್ಷನ್ 10(1ಎ)) ಹಾಗೂ ಬಿಎನ್ಎಸ್ ಸೆಕ್ಷನ್ 125 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಸ್ತುತ ಆರೋಪಿಯ ಪತ್ತೆಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ದೇಶ
BENGALURU : BCCI Centre of Excellence ಬೆಂಗಳೂರಿನಲ್ಲಿ 10 ಹುದ್ದೆಗಳ ನೇಮಕಾತಿ
ಬೆಂಗಳೂರು: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ತನ್ನ Centre of Excellence (CoE), ಬೆಂಗಳೂರು ಕೇಂದ್ರದಲ್ಲಿ ಬಹು ಕೋಚಿಂಗ್ ಹಾಗೂ ಕ್ರಿಕೆಟ್ ಕಾರ್ಯಕ್ಷಮತೆ ಸಂಬಂಧಿತ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಕ್ರಿಕೆಟ್ ಕೋಚಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಇದು ಅಪರೂಪದ ಅವಕಾಶವಾಗಿದೆ.
ಈ ನೇಮಕಾತಿ ಪ್ರಕ್ರಿಯೆಯಲ್ಲಿ ವಿವಿಧ ವಿಭಾಗಗಳಲ್ಲಿ ಒಟ್ಟು 10 ಹುದ್ದೆಗಳು ಲಭ್ಯವಿವೆ. ಆಯ್ಕೆಯಾದ ಅಭ್ಯರ್ಥಿಗಳು ಹಿರಿಯ ರಾಷ್ಟ್ರ ತಂಡ, ಭಾರತ A, ವಯೋಮಾನದ ತಂಡಗಳು ಹಾಗೂ ರಾಜ್ಯ ಮಟ್ಟದ ಆಟಗಾರರೊಂದಿಗೆ ನೇರವಾಗಿ ಕೆಲಸ ಮಾಡುವ ಅವಕಾಶ ಪಡೆಯಲಿದ್ದಾರೆ.
ಲಭ್ಯವಿರುವ ಹುದ್ದೆಗಳ ವಿವರ
- ಬ್ಯಾಟಿಂಗ್ ಕೋಚ್ (2 ಹುದ್ದೆಗಳು): ಆಟಗಾರರ ಬ್ಯಾಟಿಂಗ್ ಕೌಶಲ್ಯ ವೃದ್ಧಿ, ತರಬೇತಿ ಯೋಜನೆ ರೂಪಣೆ ಹಾಗೂ ಕಾರ್ಯಕ್ಷಮತೆ ಮೇಲ್ವಿಚಾರಣೆ.
- ವೇಗದ ಬೌಲಿಂಗ್ ಕೋಚ್ (3 ಹುದ್ದೆಗಳು): ವೇಗದ ಬೌಲರ್ಗಳ ತಾಂತ್ರಿಕ, ತಂತ್ರಜ್ಞಾನ ಮತ್ತು ದೈಹಿಕ ಅಭಿವೃದ್ಧಿಗೆ ಹೊಣೆ.
- ಫೀಲ್ಡಿಂಗ್ ಕೋಚ್ (4 ಹುದ್ದೆಗಳು): 3 ಪುರುಷ ಮತ್ತು 1 ಮಹಿಳಾ ಹುದ್ದೆ. ಆಟಗಾರರ ಚುರುಕುತನ, ಕ್ಯಾಚಿಂಗ್ ಮತ್ತು ಒಟ್ಟಾರೆ ಫೀಲ್ಡಿಂಗ್ ಮಟ್ಟ ಸುಧಾರಣೆ.
- ಕಾರ್ಯಕ್ಷಮತೆ ವಿಶ್ಲೇಷಕ (1 ಹುದ್ದೆ): ಪಂದ್ಯ ಮತ್ತು ತರಬೇತಿ ದತ್ತಾಂಶ ವಿಶ್ಲೇಷಣೆ ಮೂಲಕ ಕೋಚ್ಗಳಿಗೆ ತಂತ್ರಜ್ಞಾನ ಆಧಾರಿತ ಸಲಹೆ.
ಅರ್ಜಿ ಸಲ್ಲಿಕೆ ವಿವರ
- ಕೊನೆಯ ದಿನಾಂಕ: ಫೆಬ್ರವರಿ 27, 2026 ಸಂಜೆ 5 ಗಂಟೆ
- ಸ್ಥಳ: BCCI Centre of Excellence, ಬೆಂಗಳೂರು
BCCI ಮಾಹಿತಿ ಪ್ರಕಾರ, ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನ ಅಥವಾ ಹೆಚ್ಚಿನ ಮೌಲ್ಯಮಾಪನಕ್ಕೆ ಕರೆಯಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಿದ್ಧರಾಗಿರಬೇಕು.
ಈ ನೇಮಕಾತಿ ಕ್ರಿಕೆಟ್ ವೃತ್ತಿಜೀವನ ಕಟ್ಟಿಕೊಳ್ಳಲು ಬಯಸುವವರಿಗೆ ದೊಡ್ಡ ಅವಕಾಶವಾಗಿದೆ.
ದೇಶ
DCM D K SHIVKUMAR ಖರ್ಗೆ ಸೂಚನೆ ಪಾಲಿಸಬೇಕು: ಡಿಕೆ ಶಿವಕುಮಾರ್
ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆದ ಮಾತುಕತೆ ಬಗ್ಗೆ ಸ್ಪಷ್ಟನೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar), “ನಾನು ಸಿದ್ದರಾಮಯ್ಯ ಅವರೊಂದಿಗೆ ಏನು ಮಾತನಾಡಿದ್ದೇವೆ ಎನ್ನುವುದು ನನಗೆ ಚೆನ್ನಾಗಿ ಗೊತ್ತಿದೆ. ನಾವು ಯಾವತ್ತೂ ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ” ಎಂದು ಹೇಳಿದರು.
ದೆಹಲಿಗೆ ತೆರಳುವ ಮುನ್ನ ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೊಂದಲ ಬೇರೆಯವರಿಗೆ ಇರಬಹುದು, ಆದರೆ ನನಗೆ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು. “ನಾವು ನಮ್ಮ ವರಿಷ್ಠ ನಾಯಕರೊಂದಿಗೆ ಚರ್ಚೆ ಮಾಡಿಕೊಂಡಿದ್ದೇವೆ. ಇತರರು ಟೆನ್ಶನ್ ತೆಗೆದುಕೊಳ್ಳುವುದರಿಂದಲೋ ಅಥವಾ ಹೇಳಿಕೆ ನೀಡುವುದರಿಂದಲೋ ಯಾರಿಗೂ ಪ್ರಯೋಜನವಿಲ್ಲ” ಎಂದು ಹೇಳಿದರು.
ಶಾಸಕರು ಹಾಗೂ ಸಚಿವರು ಪರ–ವಿರುದ್ಧ ಹೇಳಿಕೆ ನೀಡುವುದರಿಂದ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆ ನೀಡಿದ್ದಾರೆ. ಆ ಸೂಚನೆಯನ್ನು ಎಲ್ಲರೂ ಪಾಲಿಸಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಇಂದು ಸಂಜೆ ಎಐಸಿಸಿಯವರು ಚರ್ಚೆಗೆ ಕರೆದಿದ್ದಾರೆ. ಕೇರಳ ಪ್ರವಾಸ ಮುಗಿಸಿಕೊಂಡು ಅಸ್ಸಾಂಗೆ ತೆರಳಬೇಕಿದೆ ಎಂದರು. ಬಜೆಟ್ ಸಭೆಗೆ ಗೈರಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಮುಖ್ಯಮಂತ್ರಿಯವರೊಂದಿಗೆ ಮಾತನಾಡಿದ್ದೇನೆ. ದೆಹಲಿಯಿಂದ ವಾಪಸ್ಸಾದ ನಂತರ ಮತ್ತಷ್ಟು ಚರ್ಚೆ ಮಾಡುತ್ತೇನೆ ಎಂದು ಹೇಳಿದರು.
ದೆಹಲಿಯಿಂದ ‘ಗುಡ್ ನ್ಯೂಸ್’ ತರುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, “ಪ್ರತಿ ದಿನವೂ ಜೀವನದಲ್ಲಿ ಸಂತೋಷವೂ ಇದೆ, ಕಷ್ಟವೂ ಇದೆ. ಜನರ ಸಮಸ್ಯೆ ಬಗೆಹರಿಸಲು ಅನೇಕ ತೊಡಕುಗಳು ಬರುತ್ತವೆ. ಟೀಕೆಗಳನ್ನು ಎದುರಿಸುತ್ತಾ ನಮ್ಮ ಕೆಲಸ ಮಾಡಿಕೊಂಡು ಹೋಗಬೇಕು” ಎಂದು ಮಾರ್ಮಿಕವಾಗಿ ಹೇಳಿದರು.
ಯತೀಂದ್ರಗೆ ನೋಟಿಸ್ ನೀಡದ ಕುರಿತು ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆಯ ಪ್ರಶ್ನೆಗೆ, “ಅದನ್ನು ಹೈಕಮಾಂಡ್ ಬಳಿ ಕೇಳೋಣ” ಎಂದು ಹೇಳಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದರು.
-
Blog18 hours agoS T SOMASHEKHAR : ಜಿಬಿಎ ಚುನಾವಣೆಗೆ ಸ್ಪಷ್ಟ ನಿಯಮ: ಸ್ಥಳೀಯರಿಗೆ ಮಾತ್ರ ಟಿಕೆಟ್
-
ಕ್ರೀಡೆ16 hours agoT20 WORLD CUP : ಪಾಕ್ಗೆ ಯುಎಸ್ಎ ಆಟಗಾರನ ಖಡಕ್ ಎಚ್ಚರಿಕೆ
-
ಅಪರಾಧ14 hours agoVIRAL NEWS : ಹಾಸಿಗೆಯಲ್ಲಿ ಹಾವಿನ ಪೊರೆ: ಗ್ರಾಮವೇ ಬೆಚ್ಚಿಬಿತ್ತು
-
ದೇಶ17 hours agoಮಂಡ್ಯದಲ್ಲಿ ಎಆರ್ಎಐ ಸ್ಥಾವರ ಸ್ಥಾಪನೆಗೆ 105 ಎಕರೆ ಸರ್ಕಾರಿ ಭೂಮಿ ಸಿದ್ಧ
-
ದೇಶ14 hours agoBENGALURU : BCCI Centre of Excellence ಬೆಂಗಳೂರಿನಲ್ಲಿ 10 ಹುದ್ದೆಗಳ ನೇಮಕಾತಿ
-
ಕ್ರೀಡೆ16 hours agoCRICKET : ಪಿಸಿಬಿಯ ಮೂರು ಬೇಡಿಕೆಗಳಿಗೆ ಐಸಿಸಿ ಶಾಕ್
-
ಅಪರಾಧ12 hours agoಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿಗೆ ನ್ಯಾಯಾಲಯ ನೋಟಿಸ್
-
ದೇಶ18 hours agoMAITHILLI TAKUR : ತಮ್ಮದೇ ಸರ್ಕಾರದ ಸಚಿವರನ್ನು ಪ್ರಶ್ನಿಸಲು ಹಿಂಜರಿಯದ ಯುವ ಶಾಸಕಿ
