Connect with us

ಬೆಂಗಳೂರು

ಯಶವಂತಪುರ ಬಿಜೆಪಿ: ನಾಯಕತ್ವ ಶೂನ್ಯ, ಕಾರ್ಯಕರ್ತರ ಅಸಮಾಧಾನ ಪೂರ್ಣ

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನೂತನ ಕ್ಷೇತ್ರಾಧ್ಯಕ್ಷರ ಆಯ್ಕೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಗೊಂದಲ ಮತ್ತು ಅಸಮಾಧಾನ ತೀವ್ರಗೊಳ್ಳುತ್ತಿದೆ. ಅಧ್ಯಕ್ಷರ ಆಯ್ಕೆ ಶೀಘ್ರವಾಗುತ್ತದೆ ಎಂಬ ಭರವಸೆಯ ನಡುವೆಯೂ, ಅಧಿಕೃತ ಘೋಷಣೆ ಇಲ್ಲದಿರುವುದು ಪಕ್ಷದೊಳಗೆ ಅನುಮಾನಗಳನ್ನು ಹುಟ್ಟಿಸಿದೆ.

ಇಂದು ಯಶವಂತಪುರ ಕ್ಷೇತ್ರದ ಪ್ರಮುಖ ಬಿಜೆಪಿ ನಾಯಕರು ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಹರೀಶ್ ಅವರನ್ನು ಭೇಟಿಯಾಗಿ ಕ್ಷೇತ್ರದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು ನೂತನ ಅಧ್ಯಕ್ಷರ ಆಯ್ಕೆ ಕುರಿತು ವಿಸ್ತಾರವಾದ ಚರ್ಚೆ ನಡೆಸಿದರು. ಕ್ಷೇತ್ರದಲ್ಲಿನ ಸಾಂಘಟನಿಕ ಅಡೆತಡೆಗಳು ಮತ್ತು ಅಧ್ಯಕ್ಷರ ಆಯ್ಕೆ ವಿಳಂಬದಿಂದ ಉದ್ಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಖಂಡರು ಜಿಲ್ಲಾಧ್ಯಕ್ಷರಿಗೆ ವಿವರವಾದ ಮಾಹಿತಿ ನೀಡಿದರು.

ಸಭೆಯ ವೇಳೆ, “ಯಶವಂತಪುರ ಕ್ಷೇತ್ರಕ್ಕೆ ತ್ವರಿತವಾಗಿ ನೂತನ ಅಧ್ಯಕ್ಷರನ್ನು ನೇಮಿಸಬೇಕು” ಎಂದು ನಾಯಕರು ಒತ್ತಾಯಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಜಿಲ್ಲಾಧ್ಯಕ್ಷ ಹರೀಶ್ ಅವರು ಮುಂದಿನ 10 ದಿನಗಳೊಳಗೆ ಕ್ಷೇತ್ರಾಧ್ಯಕ್ಷರ ಆಯ್ಕೆಯನ್ನು ಖಚಿತಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಆದರೆ, ಈ ಭರವಸೆಯ ಹೊರತಾಗಿಯೂ ಕ್ಷೇತ್ರದ ಅನೇಕ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರಲ್ಲಿ ಅನುಮಾನ ಮುಂದುವರಿದಿದೆ. ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳು, ನಾಯಕತ್ವದ ಸಂಘರ್ಷಗಳು ಮತ್ತು ಸಾಂಘಟನಿಕ ಅಸಮತೋಲನಗಳೇ ಅಧ್ಯಕ್ಷರ ಆಯ್ಕೆ ವಿಳಂಬಕ್ಕೆ ಕಾರಣ ಎಂದು ಮೂಲಗಳು ಸೂಚಿಸುತ್ತಿವೆ. ಕೆಲವು ನಾಯಕರು “ಆಂತರಿಕ ಸಮಸ್ಯೆಗಳಿಗೆ ಪರಿಹಾರ ಕಾಣದಿದ್ದರೆ ಅಧ್ಯಕ್ಷರ ಘೋಷಣೆ ಮತ್ತೆ ಮುಂದೂಡಲ್ಪಡುವ ಸಾಧ್ಯತೆಯಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಯಶವಂತಪುರ ಕ್ಷೇತ್ರದಲ್ಲಿ ದೃಢವಾದ ಸಂಘಟನೆ ನಿರ್ಮಿಸುವ ದೃಷ್ಟಿಯಿಂದ ನೂತನ ಅಧ್ಯಕ್ಷರ ಆಯ್ಕೆ ಅತ್ಯಂತ ನಿರ್ಣಾಯಕವಾಗಿದೆ. ರಾಜಕೀಯ ವಿಶ್ಲೇಷಕರು ಈ ವಿಳಂಬವು ನಗರ ಕ್ಷೇತ್ರಗಳಲ್ಲಿ ಪಕ್ಷದ ಸಾಂಘಟನಿಕ ರಚನೆಯ ವಿಶಾಲ ಸವಾಲುಗಳನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳುತ್ತಾರೆ.

ಕಾರ್ಯತಂತ್ರದ ದೃಷ್ಟಿಯಿಂದ ಮಹತ್ವದ ಯಶವಂತಪುರ ಕ್ಷೇತ್ರಕ್ಕೆ ಬಲಿಷ್ಠ ಸ್ಥಳೀಯ ನಾಯಕತ್ವದ ಅವಶ್ಯಕತೆಯಿದೆ. ಗಡುವು ಸಮೀಪಿಸುತ್ತಿದ್ದಂತೆ, ಜಿಲ್ಲಾ ನಾಯಕತ್ವವು ತಮ್ಮ ಬದ್ಧತೆಯನ್ನು ಈಡೇರಿಸುತ್ತದೆಯೇ ಎಂಬುದು ಎಲ್ಲರ ಕಣ್ಣು. ಕಾರ್ಯಕರ್ತರಲ್ಲಿ ವಿಶ್ವಾಸ ಮರುಸ್ಥಾಪನೆಗೆ ಈ ನಿರ್ಧಾರ ನಿರ್ಣಾಯಕವಾಗಲಿದೆ.

ಅಪರಾಧ

BENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ (Bengaluru Accident) ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ.

ಮೃತರನ್ನು ನಗರದ ಸಿಎಆರ್ ವಿಭಾಗದ ಕಾನ್ಸ್‌ಟೇಬಲ್ ನಾಗನಗೌಡ ಅವರ ಮಕ್ಕಳಾದ ವರ್ಷ (2) ಮತ್ತು ಭಾನು (4) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ನಾಗನಗೌಡ ಅವರು ಸ್ಕೂಟರ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ತೆರಳಿದ್ದರು. ಥಣಿಸಂದ್ರ ಮುಖ್ಯರಸ್ತೆಯ ಬಳಿ ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಯ ಬಸ್ ಏಕಾಏಕಿ ತಿರುವು ಪಡೆದುಕೊಂಡಿದೆ. ಈ ವೇಳೆ ಸ್ಕೂಟರ್ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಂತರ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರು ಸಂಚಾರ ಪೊಲೀಸರು ಮಹಜರು ನಡೆಸಿ, ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿಯ ಅವಶ್ಯಕತೆ ಮತ್ತೆ ಒತ್ತಿ ಹೇಳಲಾಗಿದೆ.

Continue Reading

ದೇಶ

638 ಕನ್ನಡ ಶಾಲೆ ಮುಚ್ಚಿದ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ

ನವದೆಹಲಿ: ರಾಜ್ಯದಾದ್ಯಂತ 638 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿರುವುದು ಕನ್ನಡ ಮತ್ತು ಕನ್ನಡ ಶಿಕ್ಷಣದ ವಿರುದ್ಧದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಗಂಭೀರವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು. “ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ” ಎಂದು ಹೇಳಿದರು. ಈ ನಿರ್ಧಾರದಿಂದ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸರ್ಕಾರ ಬದ್ಧವಾಗಿರಬೇಕು. ಆದರೆ ಪ್ರಸ್ತುತ ಸರ್ಕಾರದ ನಡೆ ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದ ಬೊಮ್ಮಾಯಿ, ಕೂಡಲೇ ಮುಚ್ಚಿರುವ ಎಲ್ಲಾ ಕನ್ನಡ ಶಾಲೆಗಳನ್ನು ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಜೊತೆಗೆ, ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ನಿರಂತರ ಚುನಾವಣಾ ಸೋಲುಗಳಿಂದ ಕಾಂಗ್ರೆಸ್ ಹತಾಶಗೊಂಡಿದೆ” ಎಂದು ಹೇಳಿದರು. ಸಂಸತ್ತಿನಲ್ಲಿ ಬೆಂಚ್‌ಗಳ ಮೇಲೆ ನಿಂತು ಗದ್ದಲ ಮಾಡುವುದು, ಸ್ಪೀಕರ್ ವಿರುದ್ಧ ದಾಳಿ ನಡೆಸುವುದು ಹಾಗೂ ಪ್ರಧಾನಮಂತ್ರಿಯ ಆಸನದವರೆಗೆ ತೆರಳಿ ತಡೆ ಮಾಡುವ ಪ್ರಯತ್ನ ಮಿತಿಮೀರಿದ ವರ್ತನೆ ಎಂದು ಅವರು ಆರೋಪಿಸಿದರು.

ರಾಜಕೀಯದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕು. ಗದ್ದಲ ಹಾಗೂ ಅಶಾಂತಿಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಸಿದರು.

Continue Reading

ದೇಶ

ಅಧಿಕಾರ ಹಂಚಿಕೆ ವಿವಾದ: “ಹೈಕಮಾಂಡ್ ತೀರ್ಮಾನವೇ ಅಂತಿಮ” – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ರಾಜಕೀಯ ಚರ್ಚೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಅದಕ್ಕೆ ಅನುಗುಣವಾಗಿ ತಾವು ಹಾಗೂ ಡಿಕೆ ಶಿವಕುಮಾರ್ ನಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಡಿಕೆ ಸುರೇಶ್ ಅವರು “ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡ್ತಾರೆ ಎಂಬ ವಿಶ್ವಾಸ ಇದೆ” ಎಂದು ಹೇಳಿದ ಹಿನ್ನೆಲೆಯಲ್ಲಿ ಮಾಧ್ಯಮಗಳು ಪ್ರಶ್ನೆ ಕೇಳಿದಾಗ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು. “ಇನ್ನೇನು ಕೇಳೋದೇ ಇಲ್ಲವಾ ನಿಮಗೆ? ಮೂರು ತಿಂಗಳುಗಳಿಂದ ಇದೇ ವಿಚಾರ ಕೇಳ್ತಿದ್ದೀರಿ. ದಯವಿಟ್ಟು ಇನ್ನು ಮುಂದೆ ಈ ಪ್ರಶ್ನೆ ಕೇಳಬೇಡಿ” ಎಂದು ಅವರು ತಿರುಗೇಟು ನೀಡಿದರು.

ಹೈಕಮಾಂಡ್‌ಗೆ ಎಲ್ಲವೂ ತಿಳಿದಿದ್ದು, ಅಂತಿಮ ತೀರ್ಮಾನವನ್ನು ಅವರು ತೆಗೆದುಕೊಳ್ಳುತ್ತಾರೆ. “ಹೈಕಮಾಂಡ್ ಹೇಳಿದಂತೆ ನಾನು ನಡೆದುಕೊಳ್ಳಬೇಕು, ಡಿಕೆ ಶಿವಕುಮಾರ್ ಕೂಡ ನಡೆದುಕೊಳ್ಳಬೇಕು” ಎಂದು ಸಿಎಂ ಹೇಳಿದರು.

ಡಿಕೆ ಸುರೇಶ್ ಅವರ ಹೇಳಿಕೆ ಕುರಿತು ಪ್ರಶ್ನೆ ಕೇಳಿದಾಗ, “ಅವರು ಏನು ಹೇಳಿದ್ರು ಅಂದ್ರೆ ಅವರನ್ನೇ ಕೇಳಿ. ನನಗೆ ಯಾಕೆ ಕೇಳ್ತೀರಾ?” ಎಂದು ಅಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆಗಳು ಜೋರಾಗಿರುವ ನಡುವೆಯೇ ಸಿಎಂ ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

Trending