Dasara
ಇಂದು ನವರಾತ್ರಿ ಮೊದಲ ದಿನ ಶ್ವೇತ ವಸ್ತ್ರಧಾರಿಯಾದ ಶೈಲಪುತ್ರಿಯ ಆರಾದನೆ

ನವರಾತ್ರಿ ವೇಳೆ ದುರ್ಗೆಯ ಒಂಬತ್ತು ಅವತಾರಗಳನ್ನು ಪೂಜಿಸಲಾಗುವುದು ಎಂದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರ. ಒಂಭತ್ತು ದಿನದಲ್ಲಿ ದುರ್ಗೆಯ ವಿವಿಧ ರೂಪಗಳಲ್ಲಿ ಬಂದು ರಾಕ್ಷಸರ ಸಂಹಾರ ಮಾಡಿದ್ದಾಳೆ ಎಂದು ಪುರಾಣಗಳು ಹೇಳುತ್ತವೆ. ನವರಾತ್ರಿ ಹಬ್ಬದ ಮೊದಲನೇ ದಿನ ತಾಯಿ ಶೈಲಪುತ್ರಿಯನ್ನು ಪೂಜಿಸಲಾಗುತ್ತದೆ. ಈಕೆ ಸೌಮ್ಯ ಸ್ವಭಾವದವಳಾದ್ದರಿಂದ ಇಂದು ನಾವು ಬಿಳಿ ಬಣ್ಣದ ಬಟ್ಟೆಯನ್ನು ಧರಿಸಬೇಕು. ಈ ದಿನ ಈಕೆಗೆ ನಾವು ಬಿಳಿ ಬಣ್ಣದ ವಸ್ತ್ರವನ್ನು ಅರ್ಪಿಸಬೇಕು. ಹಾಗೂ ನೈವೇದ್ಯವಾಗಿ ಹಾಲು, ತುಪ್ಪ, ಸಕ್ಕರೆ ಮತ್ತು ಅಕ್ಕಿಯಿಂದ ತಯಾರಿಸಿದ ಪಾಯಸವನ್ನು ಅರ್ಪಿಸಬೇಕು.
ನವರಾತ್ರಿಯ ಮೊದಲ ದಿನ ಶೈಲಪುತ್ರಿಯನ್ನು ಪೂಜಿಸಲಾಗುತ್ತದೆ. ಶ್ವೇತ ವಸ್ತ್ರಧಾರಿಯಾಗಿರುವ ಶೈಲಪುತ್ರಿಯು ಮಲ್ಲಿಗೆ ಪ್ರಿಯಳು. ಪರ್ವತ ರಾಜ ಹಿಮವಂತನ ಮಗಳಾದ ಪಾರ್ವತಿ ದೇವಿ ಅಥವಾ ಆದಿಶಕ್ತಿಯನ್ನು ಸಂಪ್ರದಾಯ ಬದ್ದವಾಗಿ ಈ ದಿನ ಪೂಜಿಸಲಾಗುತ್ತದೆ. ಕೆಲವೆಡೆಗಳಲ್ಲಿ ದೇವಿಯ ಮಣ್ಣಿನ ಮೂರ್ತಿ ಮಾಡಿ, ಪೂಜೆ ಮಾಡುವ ಸಂಪ್ರದಾಯವಿದೆ.ಆಶ್ವಿಜ ಅಥವಾ ಆಶ್ವಯುಜ ಮಾಸದ ಶುಕ್ಲ ಪಾಡ್ಯದಿಂದ ದಶಮಿಯವರೆಗೂ ಒಂಭತ್ತು ದಿನಗಳ ಕಾಲ ಆಚರಿಸುವ ಹಬ್ಬವೇ ನವರಾತ್ರಿ. ಆ ದಿನಗಳಲ್ಲಿ ದೇವಿಯನ್ನು ಬೇರೆ ಬೇರೆ ರೂಪ, ನಾಮಗಳಲ್ಲಿ ಆರಾಧಿಸಲಾಗುತ್ತದೆ. ನವರಾತ್ರಿಯ ಮೊದಲ ದಿನ ಶೈಲಪುತ್ರಿಯನ್ನು ಪೂಜಿಸಲಾಗುತ್ತದೆ. ಶ್ವೇತ ವಸ್ತ್ರಧಾರಿಯಾಗಿರುವ ಶೈಲಪುತ್ರಿಯು ಮಲ್ಲಿಗೆ ಪ್ರಿಯಳು. ಪರ್ವತ ರಾಜ ಹಿಮವಂತನ ಮಗಳಾದ ಪಾರ್ವತಿ ದೇವಿ ಅಥವಾ ಆದಿಶಕ್ತಿಯನ್ನು ಸಂಪ್ರದಾಯ ಬದ್ದವಾಗಿ ಪೂಜಿಸಲಾಗುತ್ತದೆ. ಕೆಲವೆಡೆಗಳಲ್ಲಿ ದೇವಿಯ ಮಣ್ಣಿನ ಮೂರ್ತಿ ಮಾಡಿ, ಪೂಜೆ ಮಾಡುವ ಸಂಪ್ರದಾಯವಿದೆ. ಶೈಲಪುತ್ರಿಯು ಶಾಂತ ಸ್ವಭಾವದಳಾಗಿದ್ದಾಳೆ. ಶೈಲ ಎಂದರೆ ಬೆಟ್ಟ. ಒಂದು ಕೈಯಲ್ಲಿ ಕಮಲ, ಮತ್ತೊಂದು ಕೈಯಲ್ಲಿ ತ್ರಿಶೂಲ ಹಿಡಿದು ನಿಂತಿರುವಂತೆ ಈ ದೇವತೆಯನ್ನು ಚಿತ್ರಿಸಲಾಗಿದೆ. ಹಾಗಾಗಿ ದೇಹ ಮನಸ್ಸು ಮಲಿನವಾಗದಂತೆ, ಪಾರದರ್ಶಕವಾಗಿದ್ದಾಗ ಮಾತ್ರ ದೇವರನ್ನು ಒಲಿಸಿಕೊಳ್ಳಬಹುದು ಎನ್ನುವುದು ಇದು ತಿಳಿಸಿ ಕೊಡುತ್ತದೆ.
ಶೈಲ ಪುತ್ರಿ ಯಾರು?
ಪರ್ವತರಾಜ ಹಿಮವಂತನ ಪುತ್ರಿಯೇ ಶೈಲ ಪುತ್ರಿ. ಶೈಲಪುತ್ರಿಯನ್ನು ಸತಿ ದೇವಿಯ ಪುನರ್ಜನ್ಮವೆಂದು ಕರೆಯಲಾಗುತ್ತದೆ. ಸತಿ ದೇವಿಯು ತನ್ನ ತಂದೆ ಯಜ್ಞ ಮಾಡುತ್ತಿದ್ದ ವೇಳೆ ಅಗ್ನಿಕುಂಡಕ್ಕೆ ಜಿಗಿದು ಪ್ರಾಣಾರ್ಪಣೆಗೈದಿದ್ದಳು. ತನ್ನ ಪತಿ ಶಿವನನ್ನು ತಂದೆ ಅವಮಾನಿಸಿದ ಕಾರಣಕ್ಕಾಗಿ ಸತಿ ಹೀಗೆ ಮಾಡಿದಳು. ಶಿವನನ್ನು ಮರಳಿ ಪಡೆಯಲು ಅವಳು ಪುನರ್ಜನ್ಮ ಪಡೆದುಕೊಂಡಳು. ಆದರೆ ಸತಿ ಸಾವಿನ ಬಳಿಕ ಶಿವನು ದೀರ್ಘವಾದ ಧ್ಯಾನದಲ್ಲಿ ಮುಳುಗಿಹೋದ. ದೇವಿ ಶೈಲಪುತ್ರಿಯು ಕಾಡಿಗೆ ಹೋಗಿ ತುಂಬಾ ಕಠಿಣ ತಪಸ್ಸಿನಲ್ಲಿ 16 ವರ್ಷ ಕಳೆದಳು. ಇದರ ಬಳಿಕವಷ್ಟೇ ಆಕೆ ತನ್ನ ಪತಿ ಶಿವನನ್ನು ಮರಳಿ ಪಡೆದಳು.
ದೇವಿ ಶೈಲಪುತ್ರಿಯನ್ನು ಯಾವಾಗಲೂ ಆದಿಶಕ್ತಿಯೆಂದು ಗುರುತಿಸಲಾಗಿದೆ. ಆಕೆ ಗೂಳಿ ಮೇಲೆ ಸವಾರಿ ಮಾಡುತ್ತಿದ್ದ ಕಾರಣ ಆಕೆಯನ್ನು ವೃಷರುಧ ಎಂದು ಕರೆಯಲಾಗುತ್ತದೆ. ಆಕೆಗೆ ಎರಡು ಕೈಗಳಿದ್ದು, ಒಂದರಲ್ಲಿ ತ್ರಿಶೂಲ ಮತ್ತೊಂದರಲ್ಲಿ ಕಮಲದ ಹೂವಿದೆ. ಅರ್ಧಚಂದ್ರಾಕೃತಿಯು ಆಕೆಯ ಹಣೆಯಲ್ಲಿದೆ. ಆಕೆಯನ್ನು ಯಾವಾಗಲೂ ಬಿಳಿ ಬಟ್ಟೆಯಲ್ಲಿ ತೋರಿಸಲಾಗುತ್ತದೆ.
ಮೂಲಾಧಾರ ಚಕ್ರದ ದೇವತೆ
ಯೋಗದಲ್ಲಿ ಮೂಲಾಧಾರ ಚಕ್ರವು ಮೂಲವಾಗಿರುವುದು. ದೇವಿ ಶೈಲಪುತ್ರಿಯು ಈ ಚಕ್ರದ ದೇವತೆ. ಈ ಚಕ್ರವು ಸ್ಥಿರತೆ ಮತ್ತು ಶಕ್ತಿಯ ಪ್ರತೀಕವಾಗಿದೆ. ಈ ಚಕ್ರವು ಜಾಗೃತಗೊಂಡಾಗ ಆ ವ್ಯಕ್ತಿಯು ಆಧ್ಯಾತ್ಮಿಕ ಪ್ರಯಾಣಕ್ಕೆ ಹೋಗುವನು. ನಿಮಗೆ ಜೀವನದಲ್ಲಿ ಶಕ್ತಿ ಹಾಗೂ ಸ್ಥಿರತೆ ಬೇಕೆಂದರೆ ನವರಾತ್ರಿಯ ಮೊದಲ ದಿನ ಶೈಲಪುತ್ರಿ ದೇವಿಯ ಪೂಜಿಸಿ.ಎಲ್ಲಾ ದೇವದೇವತೆಗಳ ಅಹಂ ಹಾಗೂ ಪ್ರತಿಷ್ಠೆಯನ್ನು ಶೈಲಪುತ್ರಿ ದೇವಿಯು ಯಾವ ರೀತಿ ಧ್ವಂಸ ಮಾಡಿದಳು ಎನ್ನುವ ಬಗ್ಗೆ ಉಪನಿಷತ್ ನಲ್ಲಿ ಉಲ್ಲೇಖವಿದೆ. ಎಲ್ಲಾ ದೇವದೇವತೆಗಳು ವಿನಮ್ರ ಹೃದಯದಿಂದ ಆಕೆಯನ್ನು ನಮಿಸಿದರು ಎಂದು ಹೇಳಲಾಗುತ್ತದೆ. ದೇವಿ ಶೈಲಪುತ್ರಿಯು ಅಂತಿಮ ಶಕ್ತಿ ಮತ್ತು ಪ್ರತಿಯೊಂದರ ಹಿಂದೆಯೂ ಆಕೆ ಇದ್ದಾಳೆ ಎಂದು ಅವರೆಲ್ಲರೂ ಹೇಳಿದರು. ತ್ರಿಮೂತ್ರಿಗಳಾದ ಬ್ರಹ್ಮ ವಿಷ್ಣು ಮತ್ತು ಶಿವ ಕೂಡ ತಮ್ಮ ಶಕ್ತಿಗಾಗಿ ಶೈಲಪುತ್ರಿಯನ್ನು ಅವಲಂಬಿಸಿದ್ದಾರೆ.ಚಂದ್ರನು ಅದೃಷ್ಟ ತಂದುಕೊಡುತ್ತಾನೆ ಎಂದು ನಂಬಲಾಗಿದೆ. ನವರಾತ್ರಿಯ ಮೊದಲ ದಿನದ ಗ್ರಹವೇ ಚಂದ್ರ. ನಿಮ್ಮ ಅದೃಷ್ಟವು ಬದಲಾಗಬೇಕೆಂದಿದ್ದರೆ ನವರಾತ್ರಿಯ ಮೊದಲ ದಿನದಂದು ದೇವಿ ಶೈಲಪುತ್ರಿಯ ಪೂಜಿಸುವುದು ಅಗತ್ಯ.
ದೇವಿಯು ಮಲ್ಲಿಗೆ ಹೂವನ್ನು ತುಂಬಾ ಇಷ್ಟಪಡುತ್ತಾಳೆ. ಶೈಲಪುತ್ರಿಯ ಪೂಜಿಸುತ್ತಾ ಇದ್ದರೆ ನೀವು ಮೊದಲ ದಿನದಂದು ಮಲ್ಲಿಗೆ ಹೂ ಅರ್ಪಿಸಿ ನಿಮ್ಮ ಆಕಾಂಕ್ಷೆ ಈಡೇರಿಸಿಕೊಳ್ಳಿ. ನವರಾತ್ರಿಯ ಮೊದಲ ದಿನವು ಹಳದಿ ಬಣ್ಣಕ್ಕೆ ಸೀಮಿತವಾಗಿದೆ. ಈ ದಿನ ಸರಳವಾಗಿರುವ ಹಳದಿ ಬಣ್ಣದ ಬಟ್ಟೆ ಧರಿಸಬೇಕು.
ಓಂಕಾರಹಃ ಮೇ ಶಿರಾಹ್ ಪಟು ಮೂಲಾಧರ ನಿವಾಸಿನಿ |
ಹಿಮಾಕರಹಃ ಪಟು ಲಾಲೇಟ್ ಬಿಜರೂಪ ಮಹೇಶ್ವರಿ ||
ಶ್ರಿಂಕಾರ ಪಟು ವಾದನೇ ಲಾವಣ್ಯ ಮಹೇಶ್ವರಿ |
ಹಂಕಾರ ಪಟು ಹೃದಯಯಂ ತಾರಿಣಿ ಶಕ್ತಿ ಸ್ವಾಘ್ರಿತಾ ಫಟ್ಕರಾ ಪಟು ಸರ್ವಾಂಗೆ ಸರ್ವ ಸಿದ್ಧಿ ಫಲಾಪ್ರದಾ ||
ರಕ್ಷಣೆಗಾಗಿ ಮತ್ತು ಶೈಲಪುತ್ರಿ ದೇವಿಯ ಆಶೀರ್ವಾದಕ್ಕಾಗಿ ಮೇಲಿನ ಶ್ಲೋಕವನ್ನು ಪಠಿಸಿ.
Blog
ಆಯುಧ ಪೂಜೆ ಮಹತ್ವ

ಆಯುಧ ಪೂಜೆಯ ಕಥೆ:
ರಾಕ್ಷಸ ಮಹಿಷಾಸುರನನ್ನು ಸಂಹಾರ ಮಾಡಲು ಎಲ್ಲಾ ದೇವತೆಗಳು ತಮ್ಮಲ್ಲಿದ್ದ ಆಯುಧಗಳನ್ನು ದುರ್ಗಾ ದೇವಿಗೆ ನೀಡುತ್ತಾರೆ. ದೇವರುಗಳು ತಮ್ಮಲ್ಲಿದ್ದ ಆಯುಧಗಳನ್ನು ಮಾತ್ರವಲ್ಲ. ತಮ್ಮ ಎಲ್ಲಾ ಶಕ್ತಿಗಳನ್ನು ಕೂಡ ಒಟ್ಟುಗೂಡಿಸಿದಾಗ ದುರ್ಗಾ ದೇವಿಯು 10 ಕೈಗಳಿಂದ ಪ್ರಕಟಗೊಂಡಳು. ಅವಳು ತನ್ನ ಪ್ರತಿಯೊಂದು ಕೈಗಳಲ್ಲಿಯೂ ಆಯುಧವನ್ನು ಹಿಡಿದುಕೊಂಡಿದ್ದಳು. ಮಹಿಷಾಸುರನ ಸಂಹಾರಕ್ಕಾಗಿ ದುರ್ಗಾ ದೇವಿ ಮತ್ತು ಮಹಿಷಾಸುರನ ನಡುವೆ 9 ದಿನಗಳ ಸುದೀರ್ಘ ಯುದ್ಧ ನಡೆಯಿತು. ನಂತರ 10ನೇ ದಿನದಂದು ದುರ್ಗಾ ದೇವಿಯು ಮಹಿಷಾಸುರನನ್ನು ಸಂಹಾರ ಮಾಡುತ್ತಾಳೆ. ಯುದ್ಧ ಮುಗಿದ ನಂತರ ತಾಯಿಯ ಬಳಿಯಿದ್ದ ಎಲ್ಲಾ ಆಯುಧಗಳನ್ನು ಆಯಾ ದೇವರಿಗೆ ಒಪ್ಪಿಸಬೇಕಾಗಿತ್ತು. ಇದಕ್ಕೂ ಮುನ್ನ ಆ ಎಲ್ಲಾ ಆಯುಧಗಳನ್ನು ಶುದ್ಧಗೊಳಿಸುವುದು ತುಂಬಾನೇ ಅವಶ್ಯಕವಾಗಿತ್ತು. ಈ ಕಾರಣಕ್ಕಾಗಿ ದುರ್ಗಾ ದೇವಿಯು ಬಳಸಿದ್ದ ಎಲ್ಲಾ ಆಯುಧಗಳನ್ನು ಸ್ವಚ್ಛಗೊಳಿಸಿ ನಂತರ ಅವುಗಳನ್ನು ಪೂಜಿಸಿ ಆಯುಧಗಳನ್ನು ಹಿಂಪಡೆದುಕೊಂಡರು. ಇದರ ನೆನಪಿಗಾಗಿ ಆಯುಧ ಪೂಜೆಯನ್ನು ಮಾಡಲಾಗುತ್ತದೆ.
ಆಯುಧ ಪೂಜೆಯು ದುರ್ಗಾ ದೇವಿಗೆ ಸಂಬಂಧಿಸಿದ ಪೂಜೆಯಾಗಿದೆ. ಇದನ್ನು ನವರಾತ್ರಿಯಲ್ಲಿ ಆಚರಿಸಲಾಗುತ್ತದೆ. ದಸರಾದ ಮೊದಲು ಆಯುಧ ಪೂಜೆಯಲ್ಲಿ ಆಯುಧಗಳು, ವಾದ್ಯಗಳು ಮತ್ತು ಉಪಕರಣಗಳನ್ನು ಪೂಜಿಸುವುದರಿಂದ ಪ್ರತಿ ಕೆಲಸದಲ್ಲೂ ಯಶಸ್ಸು ಸಿಗುತ್ತದೆ ಎನ್ನುವ ನಂಬಿಕೆಯಿದೆ. ಪ್ರಾಚೀನ ಕಾಲದಲ್ಲಿ, ಕ್ಷತ್ರಿಯರು ಯುದ್ಧಕ್ಕೆ ಹೋಗಲು ದಸರಾ ದಿನವನ್ನು ಆರಿಸಿಕೊಳ್ಳುತ್ತಿದ್ದರು, ಇದರಿಂದ ಅವರು ವಿಜಯದ ವರವನ್ನು ಪಡೆಯಬಹುದು ಎನ್ನುವ ನಂಬಿಕೆಯಿತ್ತು. ಇದಲ್ಲದೆ, ಪ್ರಾಚೀನ ಕಾಲದಲ್ಲಿ, ಬ್ರಾಹ್ಮಣರು ಸಹ ದಸರಾ ದಿನದಂದು ಜ್ಞಾನವನ್ನು ಪಡೆಯಲು ತಮ್ಮ ಮನೆಯಿಂದ ಹೊರಗೆ ಬರುತ್ತಿದ್ದರು ಮತ್ತು ವ್ಯಾಪಾರ ವರ್ಗದವರು ಸಹ ದಸರಾ ದಿನದಂದು ತಮ್ಮ ವ್ಯವಹಾರವನ್ನು ಪ್ರಾರಂಭಿಸುವುದು ಒಳ್ಳೆಯದು ಎಂದು ಪರಿಗಣಿಸಿದ್ದರು. ಇದೇ ಕಾರಣಕ್ಕೆ ದಸರಾಕ್ಕೂ ಮುನ್ನ ಆಯುಧ ಪೂಜೆಯನ್ನು ಮಾಡುವ ಸಂಪ್ರದಾಯ ಬೆಳೆದುಕೊಂಡು ಬಂದಿದೆ.
ಈ ದಿನ ನಾವು ಬಳಸುವ ಪ್ರತಿಯೊಂದು ಆಯುಧಗಳನ್ನು ಅಥವಾ ಕೆಲಸಕ್ಕೆ ಸಂಬಂಧಿಸಿದ ವಸ್ತುಗಳನ್ನು ಶುದ್ಧಗೊಳಿಸಿ ಪೂಜಿಸಲಾಗುತ್ತದೆ. ಕೆಲವು ಭಕ್ತರು ದೇವಿಯ ಆಶೀರ್ವಾದ ಪಡೆಯಲು ತಮ್ಮ ವಿಜಯದ ಸಾಧನೆಗಳನ್ನು ಅಂದರೆ ತಮ್ಮ ಸಾಧನಗಳನ್ನು ದೇವಿಯ ಮುಂದೆ ಇಡುತ್ತಾರೆ. ಶಾಸ್ತ್ರಪೂಜೆಯ ದಿನದಂದು ಪುಸ್ತಕಗಳನ್ನು, ಪೆನ್ನುಗಳು, ಚಾಕುಗಳು, ಕತ್ತರಿಗಳು, ಸಂಗೀತ ಉಪಕರಣಗಳು, ಕರಕುಶಲ ವಸ್ತುಗಳು ಮುಂತಾದ ಚಿಕ್ಕ ವಸ್ತುಗಳಿಂದ ಹಿಡಿದು ದೊಡ್ಡ ಯಂತ್ರಗಳು, ವಾಹನಗಳು, ಬಸ್ಸುಗಳು ಇತ್ಯಾದಿಗಳನ್ನು ಪೂಜಿಸುತ್ತಾರೆ. ಕೆಲವರು ಬ್ರಾಹ್ಮಾಣರ ಸಹಾಯದಿಂದ ಪೂಜೆಯನ್ನು ಮಾಡಿದರೆ, ಇನ್ನು ಕೆಲವರು ತಾವೇ ಸ್ವತಃ ಪೂಜೆಯನ್ನು ಮಾಡುತ್ತಾರೆ.
Dasara
ನವರಾತ್ರಿ 3ನೇ ದಿನ ಚಂದ್ರಘಂಟಾ ದೇವಿಯ ಆರಾಧನೆ

ಹಿಂದೂ ಧರ್ಮದಲ್ಲಿ, ಚಂದ್ರಘಂಟಾ ಮಹಾದೇವಿಯ ಮೂರನೇ ನವದುರ್ಗೆಯ ಅಂಶವಾಗಿದೆ. ಅವಳ ಹೆಸರು ಚಂದ್ರ – ಘಂಟಾ, ಅಂದರೆ “ಗಂಟೆಯ ಆಕಾರದ ಅರ್ಧ ಚಂದ್ರನನ್ನು ಹೊಂದಿರುವವಳು.” ಅವಳ ಮೂರನೇ ಕಣ್ಣು ಯಾವಾಗಲೂ ತೆರೆದಿರುತ್ತದೆ ಮತ್ತು ಅವಳು ಯಾವಾಗಲೂ ರಾಕ್ಷಸರ ವಿರುದ್ಧ ಯುದ್ಧಕ್ಕೆ ಸಿದ್ಧಳಾಗಿರುತ್ತಾಳೆ. ಆಕೆಯನ್ನು ಚಂದ್ರಖಂಡ, ಚಂಡಿಕಾ ಅಥವಾ ರಣಚಂಡಿ ಎಂದೂ ಕರೆಯುತ್ತಾರೆ.
ತಾಯಿ ಪಾರ್ವತಿಯ ಚಂದ್ರಘಂಟಾ ರೂಪಕ್ಕೆ ಕಾರಣ:ಹೊಸದಾಗಿ ವಿವಾಹವಾದ ಸ್ವರೂಪವನ್ನು ದುರ್ಗಾಮಾತೆಯು ಚಂದ್ರಘಂಟಾ ರೂಪದಲ್ಲಿ ನೋಡಬಹುದು. ಪಾರ್ವತಿ ದೇವಿಯು ಕಠಿಣವಾದ ತಪಸ್ಸನ್ನು ಮಾಡಿ, ಶಿವನನ್ನು ಮದುವೆಯಾಗುವಲ್ಲಿ ಸಫಲಳಾಗುತ್ತಾಳೆ. ವಿವಾಹ ಸಂದರ್ಭದಲ್ಲಿ ಕೈಲಾಸದ ಗಣಗಳೊಂದಿಗೆ ಶಿವನು ಪಾರ್ವತಿಯ ಅರಮನೆಯನ್ನು ಪ್ರವೇಶಿಸುತ್ತಾನೆ. ಅತಿ ಭಯಂಕರನಾಗಿ ಕಾಣುತ್ತಿದ್ದ ಶಿವನನ್ನು ನೋಡಿ ಪಾರ್ವತಿ ದೇವಿಯ ತಾಯಿ ಮೂರ್ಛೆಹೋಗುತ್ತಾಳೆ. ಆಗ ಪಾರ್ವತಿಯು ಚಂದ್ರಘಂಟಾ ರೂಪದಲ್ಲಿ ಶಿವನ ಮುಂದೆ ಪ್ರತ್ಯಕ್ಷಳಾಗಿ ಶಿವನು ರಾಜಕುಮಾರನ ರೂಪವನ್ನು ತಾಳಬೇಕಾಗಿ ವಿನಂತಿಸಿಕೊಳ್ಳುತ್ತಾಳೆ. ಹೀಗೆ ಶಿವನು ಸುಂದರ ವರನ ರೂಪವನ್ನು ತಾಳಿದ ನಂತರ ಶಿವ ಪಾರ್ವತಿಯ ಮದುವೆ ನೆರವೇರುತ್ತದೆ.
ಚಂದ್ರಘಂಟಾ ತಾಯಿಗೆ ಮಂತ್ರ
ಓಂ ದೇವೀ ಚಂದ್ರಘಂಟಾಯೈ ನಮಃ ಪಿಂದಾಜ ಪ್ರವರಾರುಧ ಚಂದಕೋಪಸ್ತ್ರಕೈರ್ಯುತ
ಪ್ರಸಾದಂ ತನುತೇ ಮಧ್ಯಮ ಚಂದ್ರಘಂಟತಿ ವಿಶ್ರುತಾ
ನವದುರ್ಗೆಯಲ್ಲಿ ರೌದ್ರಸ್ವರೂಪದವಳಾಗಿ ರಾಕ್ಷಸವಧೆ ಮಾಡಿ, ಮಾತೃಹೃದಯದವಳಾಗಿ ನಮ್ಮನ್ನು ರಕ್ಷಿಸುವವಳು ಚಂದ್ರಘಂಟಾ ದೇವಿ. ಈಕೆಯ ಆರಾಧನೆಯಿಂದ ದುಷ್ಟಶಕ್ತಿಗಳು ದೂರವಾಗುತ್ತವೆ.ಇವಳ ಮಸ್ತಕದಲ್ಲಿ ಗಂಟೆಯ ಆಕಾರದ ಅರ್ಧಚಂದ್ರನಿದ್ದಾನೆ. ನವದುರ್ಗೆಯಲ್ಲಿ ರೌದ್ರಸ್ವರೂಪದವಳಾಗಿ ರಾಕ್ಷಸವಧೆ ಮಾಡಿ, ಮಾತೃಹೃದಯದವಳಾಗಿ ನಮ್ಮನ್ನು ರಕ್ಷಿಸುವವಳು ಚಂದ್ರಘಂಟಾ ದೇವಿ. ಈಕೆಯ ಆರಾಧನೆಯಿಂದ ದುಷ್ಟಶಕ್ತಿಗಳು ದೂರವಾಗುತ್ತವೆ.ಇವಳ ಈ ಸ್ವರೂಪವು ಪರಮ ಶಾಂತಿದಾಯಕ ಮತ್ತು ಶ್ರೇಯಸ್ಕರವಾಗಿದೆ. ಇವಳ ಮಸ್ತಕದಲ್ಲಿ ಗಂಟೆಯ ಆಕಾರದ ಅರ್ಧಚಂದ್ರನಿದ್ದಾನೆ. ಇದರಿಂದಲೇ ಇವಳನ್ನ ಚಂದ್ರಘಂಟಾದೇವಿ ಎಂದು ಕರೆಯಲಾಗುತ್ತದೆ.ನವರಾತ್ರಿಯ ಮೂರನೇ ದಿನ ಚಂದ್ರಘಂಟಾ ದೇವಿಯನ್ನು ಆರಾಧಿಸಲಾಗುತ್ತದೆ. ಈಕೆ ಪಾರ್ವತಿ , ಶಿವನ ಪತ್ನಿ, ದುರ್ಗೆಯ ಹಲವು ಸ್ವರೂಪಗಳಲ್ಲಿ ಒಬ್ಬಳು ಹಾಗೂ ದುರ್ಗಾಮಾತೆಯ ವೈವಾಹಿಕ ಅವತಾರ. ದುರ್ಗಾ ಮಾತೆಯ ರೌದ್ರಸ್ವರೂಪಳಾಗಿರುವವಳು ಈಕೆ. ದುಷ್ಟಶಕ್ತಿಗಳಿಗೆ ಈಕೆ ಸಿಂಹಸ್ವಪ್ನ. ಆದರೆ ಭಕ್ತರನ್ನು ಪ್ರೀತಿಯಿಂದ ಸಲಹುವ ತಾಯಿ. ಚಂದ್ರಘಂಟಾ ಅಂದರೆ ಘಂಟೆಯಾಕಾರದ ಚಂದ್ರನನ್ನು ಮಸ್ತಕದಲ್ಲಿ ಧರಿಸಿದವಳು. ಚಂದ್ರಘಂಟೆಯ ಮೂರನೇ ಕಣ್ಣು ಸದಾ ತೆರೆದೇ ಇರುತ್ತದೆ. ಯಾವುದೇ ಸಮಯದಲ್ಲಿಯೂ ದುಷ್ಟ ಶಕ್ತಿಗಳ ನಿಗ್ರಹಕ್ಕೆ ಸಿದ್ಧಳಾಗಿರುವಂತೆ ಕಾಣುತ್ತಾಳೆ. ಚಂದ್ರಘಂಟೆಯನ್ನು ಚಂದ್ರಿಕಾ, ರಣಚಂಡಿ ಎಂದೂ ಕರೆಯುತ್ತಾರೆ. ಇವಳಿಗೆ ಹತ್ತು ಕೈಗಳಿದ್ದು, ಹತ್ತೂ ಕೈಗಳಲ್ಲಿ ಶಸ್ತ್ರಾಸ್ತ್ರವನ್ನು ಹಿಡಿದುಕೊಂಡು ಸಿಂಹವಾಹಿನಿಯಾಗಿ ರಾರಾಜಿಸುತ್ತಾಳೆ.ಚಂದ್ರಘಂಟೆಯು ಶುಕ್ರ ಗ್ರಹದ ಅಧಿದೇವತೆಯಾಗಿರುತ್ತಾಳೆ. ಚಂದ್ರಘಂಟೆಯು ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಸಂತೋಷವನ್ನು ನೀಡುವ ತಾಯಿ . ಇವಳ ಆರಾಧನೆಯಿಂದ ಸಂಪತ್ತು ಹಾಗೂ ಸಮೃದ್ಧಿಯನ್ನು ಪಡೆಯಬಹುದು. ಈಕೆಯ ಆಶೀರ್ವಾದದಿಂದ ನಿಮ್ಮ ಮನೆಯಲ್ಲಿ ಎಂದಿಗೂ ಆಹಾರದ ಕೊರತೆ ಕಂಡುಬರದು.
ಚಂದ್ರಘಂಟೆಗೆ ಮಲ್ಲಿಗೆ ಹೂವು ಅರ್ಪಿಸಿ ಪೂಜೆ ಮಾಡಿ ಹಾಗೂ ಭಕ್ತಿಯಿಂದ ಧ್ಯಾನವನ್ನು ಮಾಡಿ. ಹಾಗೂ 16 ವಿಧದ ಅರ್ಪಣೆಯನ್ನು ನೀಡಿ, ಆರತಿ ಮಾಡಿ. ಕೆಂಪು ಬಣ್ಣದ ಬಟ್ಟೆಯ ಅಲಂಕಾರ ಮಾಡಿ. ನಿಮ್ಮ ಕುಟುಂಬದ ಶ್ರೇಯಸ್ಸಿಗಾಗಿ ಚಂದ್ರಘಂಟೆಯನ್ನು ಪ್ರಾರ್ಥಿಸಿ.ಚಂದ್ರಘಂಟಾ ದೇವಿಯ ಪೂಜೆ ಮಾಡುವುದರಿಂದ ಮನಸ್ಸಿನಲ್ಲಿರುವ ಭಯವೆಲ್ಲಾ ನಿವಾರಣೆಯಾಗಿ ಜೀವನದಲ್ಲಿ ಯಶಸ್ಸನ್ನು ಸಾಧಿಸಬಲ್ಲೆ ಎಂಬ ವಿಶ್ವಾಸ ಬೆಳೆಯುವುದು. ದೇವಿಯ ಮಸ್ತಕದಲ್ಲಿರುವ ಚಂದ್ರಘಂಟೆಯ ನಾದವು ಋಣಾತ್ಮಕ ಶಕ್ತಿ, ದುಷ್ಟಶಕ್ತಿಗಳನ್ನೆಲ್ಲಾ ದೂರ ಮಾಡುವುದು ಹಾಗಾಗಿ ಚಂದ್ರಘಂಟೆಯ ಪೂಜೆಯನ್ನು ಮಾಡಿದರೆ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳೆಲ್ಲಾ ದೂರವಾಗಿ ಮನೆ ಶುದ್ಧಿಯಾಗುವುದು.
Dasara
ಅರಮನೆಯಲ್ಲಿ ಯದುವೀರ್ ಒಡೆಯರ್ ದರ್ಬಾರ್

ಅರಮನೆಯಲ್ಲಿ ಬೆಳಿಗ್ಗೆಯಿಂದಲೇ ಸಾಂಪ್ರದಾಯಿಕ ಶರನ್ನವರಾತ್ರಿಯ ಪೂಜೆಗಳು ಆರಂಭವಾದವು. 6ರಿಂದ 6.25ರ ಶುಭ ಮುಹೂರ್ತದಲ್ಲಿ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಲಾಯಿತು. ನಂತರ ಗಣಪತಿ ಹೋಮ ಸೇರಿದಂತೆ ಹಲವು ಹೋಮಗಳು ನೆರವೇರಿದವು.ಸಿಂಹಾಸನಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿದ ಯದುವೀರ್, ಪೂಜೆ ಸಲ್ಲಿಸಿ ಮಂಗಳಾರತಿ ಬೆಳಗಿದರು. ಸಿಂಹಾಸನದ ಪಕ್ಕದಲ್ಲೇ ಕುಳಿತು ನವಗ್ರಹ ಪೂಜೆ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿದರು. ಇದಾದ ನಂತರ ಸಿಂಹಾಸನಾರೂಢರಾದರು.ಬೆಳಗ್ಗೆ 7.05ರಿಂದ 07.45ರ ನಡುವೆ ಯದುವೀರ್ ಒಡೆಯರ್ ಹಾಗೂ ರಿಷಿಕಾ ಒಡೆಯರ್ ಅವರಿಗೆ ಕಂಕಣ ಧಾರಣೆಯಾಯಿತು. ಇದಕ್ಕೂ ಮೊದಲು ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಗೋವಿಗೆ ಆನೆ ಬಾಗಿಲಿನಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು. ನವರಾತ್ರಿಯ ಪೂಜೆಗಳು ರಾಜ ಪರಂಪರೆಯಂತೆ ನೆರವೇರಿದವು.
8ನೇ ಬಾರಿ ಯದುವೀರ್ ಒಡೆಯರ್ ಖಾಸಗಿ ದರ್ಬಾರ್ ನಡೆಸಿದರು. ರಾಜ ಪೋಷಾಕು ಧಿರಿಸಿನಲ್ಲಿ ಅವರು ದರ್ಬಾರ್ ಹಾಲ್ ಪ್ರವೇಶಿಸುತ್ತಿದ್ದಂತೆ ಬಹು ಪರಾಕ್ ಕೂಗಲಾಯಿತು.ಖಾಸಗಿ ದರ್ಬಾರ್ ನಲ್ಲಿ ಮಹಾರಾಜ, ಮಂತ್ರಿ, ಸೇನಾಧಿಪತಿ ಹಾಗೂ ವಾದ್ಯ ವೃಂದದವರು ಇರುತ್ತಾರೆ. ಪ್ರಜೆಗಳು ಈ ದರ್ಬಾರಿನಲ್ಲಿ ಭಾಗಿಯಾಗುತ್ತಾರೆ. ಹಿಂದೆ ರಾಜ ಮಹಾರಾಜರು ನಡೆಸುತ್ತಿದ್ದ ದರ್ಬಾರ್ ಮಾದರಿಯಲ್ಲೇ ಇಂದಿಗೂ ದಸರಾ ಸಂದರ್ಭದಲ್ಲಿ ಸಂಪ್ರದಾಯ ಬದ್ಧವಾಗಿ ಅರಮನೆಯಲ್ಲಿ ರಾಜವಂಶಸ್ಥರು ಖಾಸಗಿ ದರ್ಬಾರ್ ನಡೆಸಿಕೊಂಡು ಬರುತ್ತಿದ್ದಾರೆ.
-
ಬಿಬಿಎಂಪಿ1 month ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ