Dasara
ಇಂದು ನವರಾತ್ರಿ ಮೊದಲ ದಿನ ಶ್ವೇತ ವಸ್ತ್ರಧಾರಿಯಾದ ಶೈಲಪುತ್ರಿಯ ಆರಾದನೆ
ನವರಾತ್ರಿ ವೇಳೆ ದುರ್ಗೆಯ ಒಂಬತ್ತು ಅವತಾರಗಳನ್ನು ಪೂಜಿಸಲಾಗುವುದು ಎಂದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರ. ಒಂಭತ್ತು ದಿನದಲ್ಲಿ ದುರ್ಗೆಯ ವಿವಿಧ ರೂಪಗಳಲ್ಲಿ ಬಂದು ರಾಕ್ಷಸರ ಸಂಹಾರ ಮಾಡಿದ್ದಾಳೆ ಎಂದು ಪುರಾಣಗಳು ಹೇಳುತ್ತವೆ. ನವರಾತ್ರಿ ಹಬ್ಬದ ಮೊದಲನೇ ದಿನ ತಾಯಿ ಶೈಲಪುತ್ರಿಯನ್ನು ಪೂಜಿಸಲಾಗುತ್ತದೆ. ಈಕೆ ಸೌಮ್ಯ ಸ್ವಭಾವದವಳಾದ್ದರಿಂದ ಇಂದು ನಾವು ಬಿಳಿ ಬಣ್ಣದ ಬಟ್ಟೆಯನ್ನು ಧರಿಸಬೇಕು. ಈ ದಿನ ಈಕೆಗೆ ನಾವು ಬಿಳಿ ಬಣ್ಣದ ವಸ್ತ್ರವನ್ನು ಅರ್ಪಿಸಬೇಕು. ಹಾಗೂ ನೈವೇದ್ಯವಾಗಿ ಹಾಲು, ತುಪ್ಪ, ಸಕ್ಕರೆ ಮತ್ತು ಅಕ್ಕಿಯಿಂದ ತಯಾರಿಸಿದ ಪಾಯಸವನ್ನು ಅರ್ಪಿಸಬೇಕು.
ನವರಾತ್ರಿಯ ಮೊದಲ ದಿನ ಶೈಲಪುತ್ರಿಯನ್ನು ಪೂಜಿಸಲಾಗುತ್ತದೆ. ಶ್ವೇತ ವಸ್ತ್ರಧಾರಿಯಾಗಿರುವ ಶೈಲಪುತ್ರಿಯು ಮಲ್ಲಿಗೆ ಪ್ರಿಯಳು. ಪರ್ವತ ರಾಜ ಹಿಮವಂತನ ಮಗಳಾದ ಪಾರ್ವತಿ ದೇವಿ ಅಥವಾ ಆದಿಶಕ್ತಿಯನ್ನು ಸಂಪ್ರದಾಯ ಬದ್ದವಾಗಿ ಈ ದಿನ ಪೂಜಿಸಲಾಗುತ್ತದೆ. ಕೆಲವೆಡೆಗಳಲ್ಲಿ ದೇವಿಯ ಮಣ್ಣಿನ ಮೂರ್ತಿ ಮಾಡಿ, ಪೂಜೆ ಮಾಡುವ ಸಂಪ್ರದಾಯವಿದೆ.ಆಶ್ವಿಜ ಅಥವಾ ಆಶ್ವಯುಜ ಮಾಸದ ಶುಕ್ಲ ಪಾಡ್ಯದಿಂದ ದಶಮಿಯವರೆಗೂ ಒಂಭತ್ತು ದಿನಗಳ ಕಾಲ ಆಚರಿಸುವ ಹಬ್ಬವೇ ನವರಾತ್ರಿ. ಆ ದಿನಗಳಲ್ಲಿ ದೇವಿಯನ್ನು ಬೇರೆ ಬೇರೆ ರೂಪ, ನಾಮಗಳಲ್ಲಿ ಆರಾಧಿಸಲಾಗುತ್ತದೆ. ನವರಾತ್ರಿಯ ಮೊದಲ ದಿನ ಶೈಲಪುತ್ರಿಯನ್ನು ಪೂಜಿಸಲಾಗುತ್ತದೆ. ಶ್ವೇತ ವಸ್ತ್ರಧಾರಿಯಾಗಿರುವ ಶೈಲಪುತ್ರಿಯು ಮಲ್ಲಿಗೆ ಪ್ರಿಯಳು. ಪರ್ವತ ರಾಜ ಹಿಮವಂತನ ಮಗಳಾದ ಪಾರ್ವತಿ ದೇವಿ ಅಥವಾ ಆದಿಶಕ್ತಿಯನ್ನು ಸಂಪ್ರದಾಯ ಬದ್ದವಾಗಿ ಪೂಜಿಸಲಾಗುತ್ತದೆ. ಕೆಲವೆಡೆಗಳಲ್ಲಿ ದೇವಿಯ ಮಣ್ಣಿನ ಮೂರ್ತಿ ಮಾಡಿ, ಪೂಜೆ ಮಾಡುವ ಸಂಪ್ರದಾಯವಿದೆ. ಶೈಲಪುತ್ರಿಯು ಶಾಂತ ಸ್ವಭಾವದಳಾಗಿದ್ದಾಳೆ. ಶೈಲ ಎಂದರೆ ಬೆಟ್ಟ. ಒಂದು ಕೈಯಲ್ಲಿ ಕಮಲ, ಮತ್ತೊಂದು ಕೈಯಲ್ಲಿ ತ್ರಿಶೂಲ ಹಿಡಿದು ನಿಂತಿರುವಂತೆ ಈ ದೇವತೆಯನ್ನು ಚಿತ್ರಿಸಲಾಗಿದೆ. ಹಾಗಾಗಿ ದೇಹ ಮನಸ್ಸು ಮಲಿನವಾಗದಂತೆ, ಪಾರದರ್ಶಕವಾಗಿದ್ದಾಗ ಮಾತ್ರ ದೇವರನ್ನು ಒಲಿಸಿಕೊಳ್ಳಬಹುದು ಎನ್ನುವುದು ಇದು ತಿಳಿಸಿ ಕೊಡುತ್ತದೆ.
ಶೈಲ ಪುತ್ರಿ ಯಾರು?
ಪರ್ವತರಾಜ ಹಿಮವಂತನ ಪುತ್ರಿಯೇ ಶೈಲ ಪುತ್ರಿ. ಶೈಲಪುತ್ರಿಯನ್ನು ಸತಿ ದೇವಿಯ ಪುನರ್ಜನ್ಮವೆಂದು ಕರೆಯಲಾಗುತ್ತದೆ. ಸತಿ ದೇವಿಯು ತನ್ನ ತಂದೆ ಯಜ್ಞ ಮಾಡುತ್ತಿದ್ದ ವೇಳೆ ಅಗ್ನಿಕುಂಡಕ್ಕೆ ಜಿಗಿದು ಪ್ರಾಣಾರ್ಪಣೆಗೈದಿದ್ದಳು. ತನ್ನ ಪತಿ ಶಿವನನ್ನು ತಂದೆ ಅವಮಾನಿಸಿದ ಕಾರಣಕ್ಕಾಗಿ ಸತಿ ಹೀಗೆ ಮಾಡಿದಳು. ಶಿವನನ್ನು ಮರಳಿ ಪಡೆಯಲು ಅವಳು ಪುನರ್ಜನ್ಮ ಪಡೆದುಕೊಂಡಳು. ಆದರೆ ಸತಿ ಸಾವಿನ ಬಳಿಕ ಶಿವನು ದೀರ್ಘವಾದ ಧ್ಯಾನದಲ್ಲಿ ಮುಳುಗಿಹೋದ. ದೇವಿ ಶೈಲಪುತ್ರಿಯು ಕಾಡಿಗೆ ಹೋಗಿ ತುಂಬಾ ಕಠಿಣ ತಪಸ್ಸಿನಲ್ಲಿ 16 ವರ್ಷ ಕಳೆದಳು. ಇದರ ಬಳಿಕವಷ್ಟೇ ಆಕೆ ತನ್ನ ಪತಿ ಶಿವನನ್ನು ಮರಳಿ ಪಡೆದಳು.
ದೇವಿ ಶೈಲಪುತ್ರಿಯನ್ನು ಯಾವಾಗಲೂ ಆದಿಶಕ್ತಿಯೆಂದು ಗುರುತಿಸಲಾಗಿದೆ. ಆಕೆ ಗೂಳಿ ಮೇಲೆ ಸವಾರಿ ಮಾಡುತ್ತಿದ್ದ ಕಾರಣ ಆಕೆಯನ್ನು ವೃಷರುಧ ಎಂದು ಕರೆಯಲಾಗುತ್ತದೆ. ಆಕೆಗೆ ಎರಡು ಕೈಗಳಿದ್ದು, ಒಂದರಲ್ಲಿ ತ್ರಿಶೂಲ ಮತ್ತೊಂದರಲ್ಲಿ ಕಮಲದ ಹೂವಿದೆ. ಅರ್ಧಚಂದ್ರಾಕೃತಿಯು ಆಕೆಯ ಹಣೆಯಲ್ಲಿದೆ. ಆಕೆಯನ್ನು ಯಾವಾಗಲೂ ಬಿಳಿ ಬಟ್ಟೆಯಲ್ಲಿ ತೋರಿಸಲಾಗುತ್ತದೆ.
ಮೂಲಾಧಾರ ಚಕ್ರದ ದೇವತೆ
ಯೋಗದಲ್ಲಿ ಮೂಲಾಧಾರ ಚಕ್ರವು ಮೂಲವಾಗಿರುವುದು. ದೇವಿ ಶೈಲಪುತ್ರಿಯು ಈ ಚಕ್ರದ ದೇವತೆ. ಈ ಚಕ್ರವು ಸ್ಥಿರತೆ ಮತ್ತು ಶಕ್ತಿಯ ಪ್ರತೀಕವಾಗಿದೆ. ಈ ಚಕ್ರವು ಜಾಗೃತಗೊಂಡಾಗ ಆ ವ್ಯಕ್ತಿಯು ಆಧ್ಯಾತ್ಮಿಕ ಪ್ರಯಾಣಕ್ಕೆ ಹೋಗುವನು. ನಿಮಗೆ ಜೀವನದಲ್ಲಿ ಶಕ್ತಿ ಹಾಗೂ ಸ್ಥಿರತೆ ಬೇಕೆಂದರೆ ನವರಾತ್ರಿಯ ಮೊದಲ ದಿನ ಶೈಲಪುತ್ರಿ ದೇವಿಯ ಪೂಜಿಸಿ.ಎಲ್ಲಾ ದೇವದೇವತೆಗಳ ಅಹಂ ಹಾಗೂ ಪ್ರತಿಷ್ಠೆಯನ್ನು ಶೈಲಪುತ್ರಿ ದೇವಿಯು ಯಾವ ರೀತಿ ಧ್ವಂಸ ಮಾಡಿದಳು ಎನ್ನುವ ಬಗ್ಗೆ ಉಪನಿಷತ್ ನಲ್ಲಿ ಉಲ್ಲೇಖವಿದೆ. ಎಲ್ಲಾ ದೇವದೇವತೆಗಳು ವಿನಮ್ರ ಹೃದಯದಿಂದ ಆಕೆಯನ್ನು ನಮಿಸಿದರು ಎಂದು ಹೇಳಲಾಗುತ್ತದೆ. ದೇವಿ ಶೈಲಪುತ್ರಿಯು ಅಂತಿಮ ಶಕ್ತಿ ಮತ್ತು ಪ್ರತಿಯೊಂದರ ಹಿಂದೆಯೂ ಆಕೆ ಇದ್ದಾಳೆ ಎಂದು ಅವರೆಲ್ಲರೂ ಹೇಳಿದರು. ತ್ರಿಮೂತ್ರಿಗಳಾದ ಬ್ರಹ್ಮ ವಿಷ್ಣು ಮತ್ತು ಶಿವ ಕೂಡ ತಮ್ಮ ಶಕ್ತಿಗಾಗಿ ಶೈಲಪುತ್ರಿಯನ್ನು ಅವಲಂಬಿಸಿದ್ದಾರೆ.ಚಂದ್ರನು ಅದೃಷ್ಟ ತಂದುಕೊಡುತ್ತಾನೆ ಎಂದು ನಂಬಲಾಗಿದೆ. ನವರಾತ್ರಿಯ ಮೊದಲ ದಿನದ ಗ್ರಹವೇ ಚಂದ್ರ. ನಿಮ್ಮ ಅದೃಷ್ಟವು ಬದಲಾಗಬೇಕೆಂದಿದ್ದರೆ ನವರಾತ್ರಿಯ ಮೊದಲ ದಿನದಂದು ದೇವಿ ಶೈಲಪುತ್ರಿಯ ಪೂಜಿಸುವುದು ಅಗತ್ಯ.
ದೇವಿಯು ಮಲ್ಲಿಗೆ ಹೂವನ್ನು ತುಂಬಾ ಇಷ್ಟಪಡುತ್ತಾಳೆ. ಶೈಲಪುತ್ರಿಯ ಪೂಜಿಸುತ್ತಾ ಇದ್ದರೆ ನೀವು ಮೊದಲ ದಿನದಂದು ಮಲ್ಲಿಗೆ ಹೂ ಅರ್ಪಿಸಿ ನಿಮ್ಮ ಆಕಾಂಕ್ಷೆ ಈಡೇರಿಸಿಕೊಳ್ಳಿ. ನವರಾತ್ರಿಯ ಮೊದಲ ದಿನವು ಹಳದಿ ಬಣ್ಣಕ್ಕೆ ಸೀಮಿತವಾಗಿದೆ. ಈ ದಿನ ಸರಳವಾಗಿರುವ ಹಳದಿ ಬಣ್ಣದ ಬಟ್ಟೆ ಧರಿಸಬೇಕು.
ಓಂಕಾರಹಃ ಮೇ ಶಿರಾಹ್ ಪಟು ಮೂಲಾಧರ ನಿವಾಸಿನಿ |
ಹಿಮಾಕರಹಃ ಪಟು ಲಾಲೇಟ್ ಬಿಜರೂಪ ಮಹೇಶ್ವರಿ ||
ಶ್ರಿಂಕಾರ ಪಟು ವಾದನೇ ಲಾವಣ್ಯ ಮಹೇಶ್ವರಿ |
ಹಂಕಾರ ಪಟು ಹೃದಯಯಂ ತಾರಿಣಿ ಶಕ್ತಿ ಸ್ವಾಘ್ರಿತಾ ಫಟ್ಕರಾ ಪಟು ಸರ್ವಾಂಗೆ ಸರ್ವ ಸಿದ್ಧಿ ಫಲಾಪ್ರದಾ ||
ರಕ್ಷಣೆಗಾಗಿ ಮತ್ತು ಶೈಲಪುತ್ರಿ ದೇವಿಯ ಆಶೀರ್ವಾದಕ್ಕಾಗಿ ಮೇಲಿನ ಶ್ಲೋಕವನ್ನು ಪಠಿಸಿ.