Connect with us

ದೇಶ

ರಾಜ್ಯದಲ್ಲಿ 1000 ಕೋಟಿ ರೂ. ಲಂಚ ಸಂಗ್ರಹ; ಬಿಜೆಪಿ ಗಂಭೀರ ಆರೋಪ

Published

on

ರಾಜ್ಯದಲ್ಲಿ 1000 ಕೋಟಿ ರೂ ಲಂಚ ಸಂಗ್ರಹ ಬಿಜೆಪಿ ಗಂಭೀರ ಆರೋಪ
ರಾಜ್ಯದಲ್ಲಿ 1000 ಕೋಟಿ ರೂ ಲಂಚ ಸಂಗ್ರಹ ಬಿಜೆಪಿ ಗಂಭೀರ ಆರೋಪ

ಬೆಂಗಳೂರು: ರಾಜ್ಯ ಸರ್ಕಾರ ಇದುವರೆಗೆ ಒಂದು ಸಾವಿರ ಕೋಟಿ ರೂ. ಲಂಚ ಸಂಗ್ರಹ ಮಾಡಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ರಾಜ್ಯದಲ್ಲಿ ಶಿವಾನಂದ ಪಾಟೀಲ್, ಡಿ.ಕೆ. ಶಿವಕುಮಾರ್ , ಬೈರತಿ ಸುರೇಶ್, ಯತೀಂದ್ರ ಸಿದ್ದರಾಮಯ್ಯ, ಇತರ ಸಚಿವರು ಹಣ ಸಂಗ್ರಹಿಸಿದ್ದಾರೆ. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹಣದ ವಹಿವಾಟು ನಡೆಯುತ್ತಿದೆ. ಇದೆಲ್ಲದರ ಕುರಿತು ಸಿಬಿಐ- ಇಡಿ ತನಿಖೆ ಮಾಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆಗ್ರಹಿಸಿದರು.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ʻಜಗನ್ನಾಥ ಭವನʼದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಕರ್ನಾಟಕದಲ್ಲಿ ನಡೆದ ಐಟಿ ದಾಳಿ ಸಂದರ್ಭದಲ್ಲಿ ಸಿಕ್ಕಿದ 94 ಕೋಟಿ ನಗದು ಮತ್ತು 8 ಕೋಟಿ ಮೌಲ್ಯದ ಚಿನ್ನ ಸಿಕ್ಕಿದ್ದು, ಒಟ್ಟಾರೆಯಾಗಿ 102 ಕೋಟಿ ರೂ. ಸ್ವತ್ತನ್ನು ವಶ ಪಡಿಸಿಕೊಂಡಿದ್ದಾರೆ. 1 ಸಾವಿರ ಕೋಟಿ ರೂ. ಸಂಗ್ರಹಿಸಿದ ಮಾಹಿತಿ ಇದೆ ಎಂದು ತಿಳಿಸಿದರು.
ರಾಜ್ಯದಲ್ಲಿ 251ಕ್ಕಿಂತ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಕುರಿತು ಒಂದು ಪೈಸೆ ಪರಿಹಾರ ನೀಡಿಲ್ಲ. ಬರ, ಬಿಸಿಲಿನಿಂದ ರಾಜ್ಯದ ಸಂಪೂರ್ಣ ಬೆಳೆ ನಾಶವಾಗಿದೆ; ಕರೆಂಟಿಲ್ಲದೆ ನೀರಾವರಿ ಬೆಳೆಯೂ ನಾಶವಾಗಿದೆ. ಇದರ ಬಗ್ಗೆಯೂ ಪರಿಹಾರ ಕೊಡುತ್ತಿಲ್ಲ. ಪ್ರತಿದಿನ ಕಾವೇರಿ ನೀರನ್ನು ಹರಿಸುತ್ತಿದ್ದಾರೆ. ಅದನ್ನು ನಿಲ್ಲಿಸಿಲ್ಲ; ಕರ್ನಾಟಕವು ಪೂರ್ತಿ ಎಟಿಎಂ ಆಗಿದೆʼʼ ಎಂದು ರವಿಕುಮಾರ್ ಅವರು ದೂರಿದರು. ತಮಿಳುನಾಡಿಗೆ ಕಾವೇರಿ ನೀರು ಮತ್ತು ಪಂಚರಾಜ್ಯಗಳಿಗೆ ಹಣದ ಹರಿವು ನಿರಂತರವಾಗಿ ಸಾಗಿದೆ ಎಂದು ಅವರು ಆಕ್ಷೇಪಿಸಿದರು.
ಅಬಕಾರಿ, ಕೈಗಾರಿಕಾ ವಲಯ, ಎಲ್ಲ ಪೊಲೀಸ್ ಠಾಣೆಗಳಿಗೆ ಕಲೆಕ್ಷನ್ ಗುರಿ ಕೊಟ್ಟಿದ್ದಾರೆ. ಐಎಎಸ್, ಐಪಿಎಸ್, ಐಎಫ್ಎಸ್, ಕೆಎಎಸ್ ಸೇರಿ ಅಧಿಕಾರಿಗಳ ವರ್ಗಾವಣೆ ವೇಳೆ ಹಣ ಪಡೆದಿದ್ದಾರೆ. ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿ ವರ್ಗಾವಣೆಗೆ ಕನಿಷ್ಠ 1ರಿಂದ 3 ಕೋಟಿ ಲಂಚ ಪಡೆದಿದ್ದಾರೆʼʼ ಎಂದು ರವಿ ಕುಮಾರ್ ಆರೋಪಿಸಿದರು.
ʻʻನೀರಾವರಿ, ಲೋಕೋಪಯೋಗಿ ಇಲಾಖೆ ಸೇರಿ ಬೆಂಗಳೂರಿನಲ್ಲಿ ವಿಪರೀತ ಹಣ ಸಂಗ್ರಹಿಸಿದ್ದಾರೆ. ಅಂಥ ಸಾವಿರಾರು ಕೋಟಿ ಹಣವನ್ನು ಚುನಾವಣೆ ನಡೆಯುವ ಪಂಚ ರಾಜ್ಯಗಳಿಗೆ ಕಳುಹಿಸಿ ಕೊಡುತ್ತಿದ್ದಾರೆ. ಅದರಲ್ಲಿ ಎಷ್ಟು ಕಳುಹಿಸುತ್ತಾರೆ; ಎಷ್ಟು ಜೇಬಿಗೆ ಇಳಿಸುತ್ತಾರೆ ಎಂಬುದರ ತನಿಖೆಯೂ ಆಗಬೇಕಿದೆʼʼ ಎಂದು ಬಿಜೆಪಿ ನಾಯಕರು ಒತ್ತಾಯಿಸಿದರು.
ʻʻನಿನ್ನೆ ಮತ್ತು ಮೊನ್ನೆ ಎಲ್ಲ ಜಿಲ್ಲಾ ಕೇಂದ್ರಗಳು, ತಾಲ್ಲೂಕು ಕೇಂದ್ರಗಳಲ್ಲಿ ಸೇರಿ 117ಕ್ಕೂ ಹೆಚ್ಚು ಕಡೆ ಬಿಜೆಪಿ ಹೋರಾಟ ಮಾಡಿದೆ. ನಮ್ಮ ಹೋರಾಟ ಮುಂದುವರೆಯಲಿದೆ. ತನಿಖೆಗೆ ಕೊಡುವವರೆಗೆ ಹೋರಾಟ ಮುಂದುವರೆಯುತ್ತದೆʼʼ ಎಂದು ರವಿಕುಮಾರ್ ಪ್ರಕಟಿಸಿದರು.

ದೇಶ

“ಹಿಂದಿನದ್ದು ಮರೆತು ಭವಿಷ್ಯ ನೋಡಿ”: ಸಚಿವರಿಗೆ ಮೋದಿ ಖಡಕ್ ಸಂದೇಶ

Published

on

ನವದೆಹಲಿ: ಐದು ರಾಷ್ಟ್ರಗಳ ವಿದೇಶಿ ಪ್ರವಾಸ ಮುಗಿಸಿ ವಾಪಸ್ಸಾದ ಪ್ರಧಾನಿ Narendra Modi ಗುರುವಾರ ನಾಲ್ಕೂವರೆ ಗಂಟೆಗಳ ಕಾಲ ಮಹತ್ವದ ಸಚಿವ ಸಂಪುಟ ಸಭೆ ನಡೆಸಿದ್ದು, “ಹಿಂದಿನದ್ದನ್ನು ಮರೆತು ಭವಿಷ್ಯದತ್ತ ಗಮನಹರಿಸಿ” ಎಂದು ಸಚಿವರಿಗೆ ಬಲವಾದ ಸಂದೇಶ ನೀಡಿದ್ದಾರೆ ಎಂದು ವರದಿಯಾಗಿದೆ.

ಜೂನ್ 9ರಂದು ಕೇಂದ್ರ ಸರ್ಕಾರ ತನ್ನ ಮೂರನೇ ಅವಧಿಯ ಎರಡು ವರ್ಷಗಳು ಹಾಗೂ ಒಟ್ಟು 12 ವರ್ಷಗಳನ್ನು ಪೂರ್ಣಗೊಳಿಸಲಿರುವ ಹಿನ್ನೆಲೆ, ಸಚಿವ ಸಂಪುಟ ಪುನರ್ರಚನೆ ಸಾಧ್ಯತೆಗಳ ನಡುವೆ ಈ ಸಭೆ ಮಹತ್ವ ಪಡೆದುಕೊಂಡಿದೆ.

ಮೂಲಗಳ ಪ್ರಕಾರ, ಕ್ಲೋಸ್ ಡೋರ್ ಸಭೆಯಲ್ಲಿ ಪ್ರಧಾನಿ ಮೋದಿ ‘ವಿಕ್ಸಿತ್ ಭಾರತ್ 2047’ ಗುರಿಯನ್ನು ಮುಂದಿಟ್ಟುಕೊಂಡು ಎಲ್ಲಾ ಸಚಿವಾಲಯಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ. “ಸುಧಾರಣೆಗಳು ಕಡತಗಳಿಗೆ ಮಾತ್ರ ಸೀಮಿತವಾಗಬಾರದು. ಜನರಿಗೆ ವೇಗವಾದ ಹಾಗೂ ಸರಳ ಆಡಳಿತ ದೊರಕಬೇಕು” ಎಂದು ಅವರು ಒತ್ತಿ ಹೇಳಿದ್ದಾರೆ ಎನ್ನಲಾಗಿದೆ.

ಅನಗತ್ಯ ಅಧಿಕಾರಶಾಹಿ ವಿಳಂಬಗಳನ್ನು ತಪ್ಪಿಸಿ ಕಡತಗಳ ತ್ವರಿತ ವಿಲೇವಾರಿ ಮಾಡಲು ಸಚಿವರಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಸಾರ್ವಜನಿಕ ಹಿತಾಸಕ್ತಿ ಸರ್ಕಾರದ ಪ್ರಮುಖ ಆದ್ಯತೆಯಾಗಿರಬೇಕು ಎಂದು ಪ್ರಧಾನಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಸರ್ಕಾರದ 12 ವರ್ಷಗಳ ಸಾಧನೆ, ಕಲ್ಯಾಣ ಯೋಜನೆಗಳು ಮತ್ತು ಸುಧಾರಣಾ ಕಾರ್ಯಕ್ರಮಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವಂತೆ ಕೂಡ ಸಚಿವರಿಗೆ ಸೂಚಿಸಲಾಗಿದೆ.

ಈ ವೇಳೆ S. Jaishankar ಸರ್ಕಾರದ ಇತ್ತೀಚಿನ ಐದು ರಾಷ್ಟ್ರಗಳ ರಾಜತಾಂತ್ರಿಕ ಪ್ರವಾಸ ಹಾಗೂ ಅದರ ಯಶಸ್ಸಿನ ಕುರಿತು ಸಚಿವ ಸಂಪುಟಕ್ಕೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಅವರ ಈ ಸಭೆ, ಮುಂಬರುವ ದಿನಗಳಲ್ಲಿ ಕೇಂದ್ರ ಸಚಿವ ಸಂಪುಟದಲ್ಲಿ ಬದಲಾವಣೆಗಳ ಸುಳಿವು ನೀಡಿದೆಯೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ.

Continue Reading

ಅಪರಾಧ

“ಜನಸೇವೆಗೆ ನೇಮಕ, ಭ್ರಷ್ಟಾಚಾರಕ್ಕೆ ಅಲ್ಲ”: ಅಧಿಕಾರಿಗಳಿಗೆ ಉಪಲೋಕಾಯುಕ್ತ ಖಡಕ್ ಸಂದೇಶ

Published

on

ಮಂಡ್ಯ: ರಾಜ್ಯದ ಬಹುತೇಕ ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ಮಿತಿಮೀರಿದ್ದು, ಕರ್ನಾಟಕ ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಐದನೇ ಸ್ಥಾನದಲ್ಲಿದೆ ಎಂದು ಉಪಲೋಕಾಯುಕ್ತ Justice B. Veerappa ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಮಂಡ್ಯ ಹಾಗೂ ಮಳವಳ್ಳಿ ತಾಲೂಕುಗಳಲ್ಲಿ ಬಾಕಿ ಉಳಿದಿದ್ದ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಭ್ರಷ್ಟಾಚಾರ ನಿಯಂತ್ರಣಕ್ಕೆ ಬರದಿದ್ದರೆ ಭವಿಷ್ಯದಲ್ಲಿ ರಾಜ್ಯಕ್ಕೆ ದೊಡ್ಡ ಅಪಾಯ ಎದುರಾಗಲಿದೆ” ಎಂದು ಹೇಳಿದ್ದಾರೆ.

ಡಾ. B. R. Ambedkar ರಚಿಸಿದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ ಕಲ್ಪಿಸುವ ಉದ್ದೇಶ ಹೊಂದಿದೆ. ಆದರೆ ಭ್ರಷ್ಟಾಚಾರ ಸಂವಿಧಾನದ ಮೂಲ ಉದ್ದೇಶವನ್ನೇ ಹಾಳು ಮಾಡುತ್ತಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ರಾಜ್ಯದ 16 ಜಿಲ್ಲೆಗಳಲ್ಲಿ ಒಟ್ಟು 1,281 ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದ ನ್ಯಾ. ವೀರಪ್ಪ, Transparency International ಬಿಡುಗಡೆ ಮಾಡಿರುವ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕವನ್ನು ಉಲ್ಲೇಖಿಸಿದರು. “180 ರಾಷ್ಟ್ರಗಳ ಪೈಕಿ ಭಾರತ 91ನೇ ಸ್ಥಾನದಲ್ಲಿದ್ದು, 100ರಲ್ಲಿ ಕೇವಲ 39 ಅಂಕಗಳನ್ನು ಪಡೆದಿದೆ” ಎಂದು ಹೇಳಿದರು.

“ಅಧಿಕಾರಿಗಳನ್ನು ಜನಸೇವೆಗೆ ನೇಮಿಸಲಾಗಿದೆ. ಅವರು ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಕೆಲಸ ಮಾಡಬೇಕು. ಇಲ್ಲವಾದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ” ಎಂದು ಭ್ರಷ್ಟ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

2024ರಲ್ಲಿ ಕಾಂಗ್ರೆಸ್ ಸರ್ಕಾರದಿಂದ ಉಪಲೋಕಾಯುಕ್ತರಾಗಿ ನೇಮಕಗೊಂಡಿದ್ದ ನ್ಯಾಯಮೂರ್ತಿ ಬಿ. ವೀರಪ್ಪ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯಸ್ಥರಾಗಿದ್ದ ವೇಳೆ ಲೋಕ ಅದಾಲತ್‌ಗಳ ಮೂಲಕ ಒಂದು ಕೋಟಿಗೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ರಾಷ್ಟ್ರೀಯ ಮಟ್ಟದಲ್ಲಿ ದಾಖಲೆ ನಿರ್ಮಿಸಿದ್ದರು.

ಭ್ರಷ್ಟಾಚಾರ ನಿರ್ಮೂಲನೆಗೆ ಪ್ರತಿಯೊಬ್ಬ ನಾಗರಿಕರೂ ಜಾಗೃತರಾಗಬೇಕು ಎಂದು ಮನವಿ ಮಾಡಿದ ಅವರು, “ಬದಲಾವಣೆ ಅಧಿಕಾರಿಗಳಿಂದ ಮಾತ್ರವಲ್ಲ, ನಾಗರಿಕರಿಂದಲೂ ಆಗಬೇಕು” ಎಂದು ಹೇಳಿದರು.

Continue Reading

ಅಪರಾಧ

ಪಾಕಿಸ್ತಾನಕ್ಕೆ ಸೇನಾ ಮಾಹಿತಿ ರವಾನೆ ಆರೋಪ: ಪಂಜಾಬ್‌ನಲ್ಲಿ ಶಂಕಿತ ಬೇಹುಗಾರ ಬಂಧನ

Published

on

ಚಂಡೀಗಢ: Punjab ರಾಜ್ಯದ Pathankot ನಲ್ಲಿ ಶಂಕಿತ ಬೇಹುಗಾರಿಕೆ ಜಾಲವನ್ನು ಪೊಲೀಸರು ಭೇದಿಸಿದ್ದು, ಭಾರತೀಯ ಸೇನೆ ಹಾಗೂ ಅರೆಸೈನಿಕ ಪಡೆಗಳ ಚಲನವಲನಗಳ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

ಚಕ್ ಧಾರಿವಾಲ್ ಗ್ರಾಮದ ನಿವಾಸಿ ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಬಂಧಿತ ಆರೋಪಿ. ರಾಷ್ಟ್ರೀಯ ಹೆದ್ದಾರಿ-44ರ ಪಠಾಣ್‌ಕೋಟ್-ಜಮ್ಮು ಮಾರ್ಗದ ಸೇತುವೆ ಸಮೀಪದ ಅಂಗಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿ Daljinder Singh Dhillon ಮಾಹಿತಿ ನೀಡಿದ್ದು, ಆರೋಪಿ ಸಂಗ್ರಹಿಸಿದ್ದ ದೃಶ್ಯಗಳು ಮತ್ತು ಮಾಹಿತಿಯನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ಪಾಕಿಸ್ತಾನ ಮತ್ತು ವಿದೇಶದಲ್ಲಿದ್ದ ಹ್ಯಾಂಡ್ಲರ್‌ಗಳಿಗೆ ರವಾನಿಸಲಾಗುತ್ತಿತ್ತು ಎಂದು ಹೇಳಿದ್ದಾರೆ.

ವಿಚಾರಣೆ ವೇಳೆ, ಜನವರಿಯಲ್ಲಿ ಸುಜನ್‌ಪುರ ಸಮೀಪದ ಹೆದ್ದಾರಿ ಪ್ರದೇಶದಲ್ಲಿರುವ ಅಂಗಡಿಯಲ್ಲಿ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದಾಗಿ ಬಲ್ಜಿತ್ ಸಿಂಗ್ ಒಪ್ಪಿಕೊಂಡಿದ್ದಾನೆ. ದುಬೈನಲ್ಲಿದ್ದ ಅಪರಿಚಿತ ವ್ಯಕ್ತಿಯಿಂದ ಸೂಚನೆಗಳು ಬರುತ್ತಿದ್ದವು ಮತ್ತು ಈ ಕಾರ್ಯಕ್ಕಾಗಿ ಅವನಿಗೆ ₹40 ಸಾವಿರ ಹಣ ನೀಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯಿಂದ ಸಿಸಿಟಿವಿ ಕ್ಯಾಮೆರಾ, ವೈಫೈ ರೌಟರ್ ಸೇರಿದಂತೆ ಹಲವು ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಠಾಣ್‌ಕೋಟ್-ಜಮ್ಮು ಹೆದ್ದಾರಿಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ದೊರೆತ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಈ ಪ್ರಕರಣದಲ್ಲಿ ವಿಕ್ರಮ್‌ಜಿತ್ ಸಿಂಗ್ ಅಲಿಯಾಸ್ ವಿಕ್ಕಾ, ಬಲ್ವಿಂದರ್ ಸಿಂಗ್ ಅಲಿಯಾಸ್ ವಿಕ್ಕಿ ಹಾಗೂ ತರಣ್‌ಪ್ರೀತ್ ಸಿಂಗ್ ಅಲಿಯಾಸ್ ತನ್ನು ವಿರುದ್ಧವೂ ಪ್ರಕರಣ ದಾಖಲಾಗಿದೆ. ಉಳಿದ ಆರೋಪಿಗಳನ್ನು ಬಂಧಿಸಲು ವಿಶೇಷ ಕಾರ್ಯಾಚರಣೆ ಮುಂದುವರಿದಿದೆ.

ಪೊಲೀಸರು ಜಾಲದ ಗಡಿಯಾಚೆಗಿನ ಸಂಪರ್ಕಗಳು ಹಾಗೂ ಹಣಕಾಸಿನ ಮೂಲಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

Continue Reading

Trending