ರಾಜಕೀಯ
ದಸರಾ ಆಸುಪಾಸಿನಲ್ಲಿ ಬಿಜೆಪಿಗೆ ನೂತನ ಸಾರಥಿ: ಮುಂಚೂಣಿಯಲ್ಲಿ ಶೋಭಾ-ವಿಜಯೇಂದ್ರ

ಬೆಂಗಳೂರು: ದಸರಾ ಆಸುಪಾಸಿನಲ್ಲಿ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರ ನೇಮಕವಾಗುವ ನಿರೀಕ್ಷೆಯಿದ್ದು, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೂಡ ದೃಢಪಡಿಸಿದ್ದಾರೆ, ಹೀಗಾಗಿ ರಾಜ್ಯ ಘಟಕದಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸಿ,ಟಿ ರವಿ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರ ಹೆಸರು ಕೇಳಿ ಬರುತ್ತಿದೆ. ಲೋಕಸಭೆ ಚುನಾವಣೆಗೆ ಕೇವಲ ಆರು ತಿಂಗಳು ಮಾತ್ರ ಬಾಕಿ ಇದೆ, 14 ತಿಂಗಳ ಹಿಂದೆಯೇ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಅವಧಿ ಮುಗಿದಿದ್ದರೂ ಸ್ಥಾನಗಳ ಪರಿಷ್ಕರಣೆಯಾಗಿಲ್ಲ ಎಂದು ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಂದಿನ ತಿಂಗಳು ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಇರುವುದರಿಂದ ಕರ್ನಾಟಕ ವಿಷಯ ಚರ್ಚಿಸಲು ಬಿಜೆಪಿ ಹೈಕಮಾಂಡ್ ಗೆ ಸಮಯಾವಕಾಶವಿಲ್ಲ ಎಂದು ಹೇಳುತ್ತಿದ್ದಾರೆ ಎಂಬುದಾಗಿ ಅನೇಕ ಬಿಜೆಪಿ ನಾಯಕರು ದೂರಿದ್ದಾರೆ.
ಲೋಕಸಭೆ ಚುನಾವಣೆಗೂ ಮುನ್ನ ಹೊಸ ಪದಾದಿಕಾರಿಗಳನ್ನು ಆಯ್ಕೆ ಮಾಡಲು ಹೈಕಮಾಂಡ್ ಮನಸು ಮಾಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಪ್ರತಿ ಜಿಲ್ಲೆಗೂ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಖಜಾಂಚಿಗಳು ಹಾಗೂ ಜಿಲ್ಲಾ ಕಾರ್ಯಕಾರಿ ಸದಸ್ಯರು ಮತ್ತು ಮೋರ್ಚಾಗಳ ಪದಾದಿಕಾರಿಗಳ ತಂಡಗಳಿವೆ, 2024ರ ಲೋಕಸಭೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಬರಬೇಕು ಎಂದು ಬಿಜೆಪಿ ಬಯಸಿದರೇ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಮೂಲಗಳು ತಿಳಿಸಿವೆ.
ಹೀಗಾಗಿ ರವಿ ಅವರ ವಿರೋಧಿ ಗುಂಪು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಥವಾ ಬಿ ವೈ ವಿಜಯೇಂದ್ರ ಅವರನ್ನು ನೇಮಿಸುವಂತೆ ಒತ್ತಡ ಹೇರುತ್ತಿವೆ. ಈ ಸಂಬಂಧ ಕೇಂದ್ರ ನಾಯಕರು ಅಂತಿಮ ನಿರ್ಧಾರ ಕೈಗಳ್ಳಲಿದ್ದಾರೆ, ನಾವು ಶೀಘ್ರದಲ್ಲೇ ಹೊಸ ಪದಾಧಿಕಾರಿಗಳ ತಂಡವನ್ನು ರಚಿಸುತ್ತೇವೆ” ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
ದೇಶ
ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ ಕಾಂಗ್ರೆಸ್ ಶಾಸಕ ವಿನಯ್!

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿದೆ, ಅದ್ದರಿಂದ ಕೋರ್ಟ್ ಆದೇಶದಂತೆ ಇಂದು ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೋಟ್ ವಿಚಾರಣೆ ಮುಗಿದ ಬಳಿಕ ಶಾಸಕ ವಿನಯ್ ಕುಲಕರ್ಣಿಯವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು, ಇತ್ತೀಚಿಗೆ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಯ ಜಾಮೀನನ್ನು ರದ್ದುಪಡಿಸಿತು, ಒಂದು ವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು,
ಇವರ ಬೆಂಬಲಿಗರು ಸಿಟಿ ಸಿವಿಲ್ ಕೋರ್ಟ್ ಮುಂಭಾಗ ಜಮಾಯಿಸಿದ್ರು, ಪರಪ್ಪನ ಅಗ್ರಹಾರ ಜೈಲಿಗೆ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಕರೆದೊಯ್ದಿದ್ದಾರೆ, ಈ ವೇಳೆ ತಮ್ಮ ನಾಯಕ ಜೈಲು ಸೇರುತ್ತಿರೋದನ್ನು ಕಂಡು ಕೋರ್ಟ್ ಮುಂಭಾಗ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ,
ಏನಿದು ಪ್ರಕರಣ?
9 ವರ್ಷಗಳ ಹಿಂದೆ ಅಂದರೆ 2016 ರ ಜೂನ್ 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್ ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು, ಇದರಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಕೈವಾಡ ಇದೆ ಎಂಬ ಆರೋಪವಿದೆ, ಪ್ರಕರಣಕ್ಕೆ ಸಂಬಂಧಿಸಿದಂತೆ 2020 ನವೆಂಬರ್ 5 ರಂದು ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು, ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು,
ರಾಜಕೀಯ
ನಾಯಕತ್ವದಿಂದ ಸಿದ್ದರಾಮಯ್ಯ ಕಲಿಯಬೇಕು: ಕೇಂದ್ರ ಸಚಿವ ವಿ.ಸೋಮಣ್ಣ

ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಬದಲು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 8 ದಿನಗಳ ಕಾಲ ನವದೆಹಲಿಗೆ ಭೇಟಿ ನೀಡಿ ಪ್ರಧಾನಿಮಂತ್ರಿಗಳ ಆಡಳಿತ ಶೈಲಿಯನ್ನು ವೀಕ್ಷಿಸಿ, ಕರ್ನಾಟಕದಲ್ಲಿ “ಜನಪರ ವಿಧಾನ” ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ 11 ವರ್ಷಗಳ ಬಿಜೆಪಿ ನೇತೃತ್ವದ ಎನ್ಡಿಎ ಆಡಳಿತಕ್ಕೆ ಸಿದ್ದರಾಮಯ್ಯ ಶೂನ್ಯ ಅಂಕ ನೀಡಿದ್ದರ ಕುರಿತು ತಿರುಗೇಟು ನೀಡಿದರು.
ಸಿದ್ದರಾಮಯ್ಯ ಅವರ ಹೇಳಿಕೆಗಳು ಅಪ್ರಬುದ್ಧವಾಗಿವೆ. ರಾಜ್ಯದ ಜನರು ಸಿಎಂ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಸಿದ್ದರಾಮಯ್ಯ ಅಂತಹ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿ ಪ್ರಧಾನಿ ಮೋದಿ ಅವರ ನಾಯಕತ್ವ ನೋಡಿ ಕಲಿಯಬೇಕಿದೆ ಎಂದು ಹೇಳಿದರು.
ನಾನು ಕೂಡ ಮೊದಲು ಕಾಂಗ್ರೆಸ್ ಜೊತೆಗಿದ್ದೆ. ಅಂದಿನ ಸಿದ್ದರಾಮಯ್ಯ ಮತ್ತು ಇಂದಿನ ಸಿದ್ದರಾಮಯ್ಯ ನಡುವೆ ಅಗಾಧ ವ್ಯತ್ಯಾಸವಿದೆ. ಕಾಂಗ್ರೆಸ್ ನಾಯಕರಿಗೆ ನೈತಿಕ ಸಮಗ್ರತೆಯ ಕೊರತೆಯಿದೆ. ಮೋದಿಯವರ ಜನಪರ ಆಡಳಿತವನ್ನು ನೋಡಿ, ಅವರು ತಮ್ಮದೇ ಆದ ನ್ಯೂನತೆಗಳ ಬಗ್ಗೆ ಅರಿತುಕೊಳ್ಳುತ್ತಿದ್ದಾರೆ.
ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರುನಾಮಕರಣ ಮಾಡುವ ಬಗ್ಗೆ ನಡೆಯುತ್ತಿರುವ ಚರ್ಚೆ ಕುರಿತು ಮಾತನಾಡಿ, ಇದು ನರಿ ಮತ್ತು ಕುರಿಮರಿಯ ಕಥೆಯಂತೆ ಎಂದು ವ್ಯಂಗ್ಯವಾಡಿದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ ಈ ವಿಷಯದಲ್ಲಿ ಆತುರದಿಂದ ವರ್ತಿಸುವುದಿಲ್ಲ ಎಂದು ನಾನು ನಂಬುತ್ತೇನೆ. ನಾನು ಇನ್ನೂ ಯಾವುದೇ ನಿಲುವನ್ನು ತೆಗೆದುಕೊಂಡಿಲ್ಲ. ಅದು ಪ್ರಯೋಜನಕಾರಿ ಎಂದು ತೋರಿದರೆ, ನಾನು ಅದನ್ನು ಬೆಂಬಲಿಸುತ್ತೇನೆ
ರಾಜಕೀಯ
ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ದೂರು ದಾಖಲು!

ಬೆಳಗಾವಿ: ಕಳೆದ ಏಪ್ರಿಲ್ 28 ರಂದು ಕಾಂಗ್ರೆಸ್ ಸಮಾವೇಶದ ವೇಳೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಅಧಿಕಾರದ ದರ್ಪ ಹಾಗೂ ವೇದಿಕೆಯಲ್ಲೇ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ,
ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಅವರನ್ನು ಹೊಡೆಯಲೆಂದು ಕೈ ಎತ್ತಿದ್ದರು, ಈ ಘಟನೆ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು ಇದೀಗ ಈ ಘಟನೆಗೆ ಸಂಬಂಧಪಟ್ಟಂತೆ ಆರ್ ಟಿ ಐ ಕಾರ್ಯಕರ್ತ ಭೀಮಪ್ಪ ಗಡಾ ಅವರು ದೂರ ದಾಖಲಿಸಿದ್ದಾರೆ,
ಸಿಎಂ ಸಿದ್ದರಾಮಯ್ಯ ಅವರು ನಾರಾಯಣ ಭರಮನಿ ಅವರ ಮೇಲೆ ದರ್ಪ ತೋರುವ ಮೂಲಕ ಕರ್ತವ್ಯನಿರತ ಅಧಿಕಾರಿಗೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿ ಭೀಮಪ್ಪ ಗಡಾ ಅವರು ಬೆಳಗಾವಿ ನಗರದ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ,
ಕಾನೂನು ಸಚಿವೆ ಹಾಗೂ ಇನ್ನಿತರ ಸಚಿವರ ಎದುರೇ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗೆ ಕೀಳು ಪದ ಬಳಸಿ ಹೊಡೆಯಲೆಂದು ಕೈ ಎತ್ತಿದ್ದು ಸದ್ಯ ಸಿಎಂ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023-132 ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ,
ಭಾರತೀಯ ನ್ಯಾಯ ಸಂಹಿತೆ 2023-132 ರ ಕರ್ತವ್ಯದಲ್ಲಿ ನಿರತರಾಗಿದ್ದ ಯಾವುದೇ ಅಧಿಕಾರಿಯ ಮೇಲೆ ಹಲ್ಲೆ ಅಥವಾ ಬಲ ಪ್ರಯೋಗ ಮಾಡುವ ಯಾವುದೇ ವ್ಯಕ್ತಿಗೆ ಎರಡು ವರ್ಷದ ವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನು ವಿಧಿಸಬಹುದಾಗಿದೆ,
-
ಬಿಬಿಎಂಪಿ1 month ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ