Connect with us

ಸುತ್ತ ಮುತ್ತ

ಮೈಸೂರಿಗೂ ಮೆಟ್ರೋ ರೈಲು ಸೇವೆ ಒದಗಿಸುವ ಬಗ್ಗೆ ಸುಳಿವು ನೀಡಿದ,ಪ್ರಧಾನಿ ಮೋದಿ

Published

on

ಮೈಸೂರಿಗೂ ಮೆಟ್ರೋ ರೈಲು ಸೇವೆ ಒದಗಿಸುವ ಬಗ್ಗೆ ಸುಳಿವು ನೀಡಿದ,ಪ್ರಧಾನಿ ಮೋದಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸೇವೆಯ ವಿಸ್ತರಣಾ ಕಾರ್ಯ ಭರದಿಂದೆ ಸಾಗುತ್ತಿದೆ. ಕೆ.ಆರ್.ಪುರ-ಬೈಯ್ಯಪ್ಪನಹಳ್ಳಿ, ಕೆಂಗೇರಿ-ಚಲ್ಲಘಟ್ಟ ಮೆಟ್ರೋ ವಿಸ್ತರಿತ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಶುಕ್ರವಾರ ಉದ್ಘಾಟನೆ ಮಾಡಿದ್ದಾರೆ. ಮೋದಿ ಅವರು ವಿಡಿಯೋ ಕಾನ್ಫರೆನ್ಸ್​​​ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಮೈಸೂರಿಗೂ ಮೆಟ್ರೋ ರೈಲು ಸೇವೆ ಒದಗಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಇದೇ ವೇಳೆ, ಕೆ.ಆರ್.ಪುರ-ಬೈಯ್ಯಪ್ಪನಹಳ್ಳಿ, ಕೆಂಗೇರಿ-ಚಲ್ಲಘಟ್ಟ ವಿಸ್ತರಿತ ಮಾರ್ಗ ಉದ್ಘಾಟನೆ ಮಾಡಿದ ಪ್ರಧಾನಿಯವರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಸಮರ್ಪಿಸಿದ್ದಾರೆ.ನಮ್ಮ ಮೆಟ್ರೋ ವಿಸ್ತರಿತ ಮಾರ್ಗ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿ ಪ್ರಧಾನಿ ಮೋದಿ, ನವದೆಹಲಿ, ಉತ್ತರ ಪ್ರದೇಶದ ನೋಯ್ಡಾ, ಗಾಜಿಯಾಬಾದ್, ಆಗ್ರಾ, ಕಾನ್ಪುರ, ಲಕ್ನೋ ಸೇರಿದಂತೆ ದೇಶದ ಅನೇಕ ಕಡೆಗಳಲ್ಲಿ ಈಗ ಮೆಟ್ರೋ ರೈಲುಗಳು ಸಂಚರಿಸುತ್ತಿವೆ. ಇನ್ನು ಅನೇಕ ಕಡೆಗಳಲ್ಲಿ ಮೆಟ್ರೋ ಸೇವೆಗೆ ಸಿದ್ಧತೆ ನಡೆಯುತ್ತಿದೆ. ಅದೇ ರೀತಿ ಕರ್ನಾಟಕದ ಬೆಂಗಳೂರಿನಲ್ಲಿಯೂ ಮೆಟ್ರೋ ರೈಲು ಸೇವೆ ಇದೆ. ಬೆಂಗಳೂರಿನ ಮೆಟ್ರೋ ರೈಲು ಸೇವೆ ವಿಸ್ತರಣೆಯಾಗುತ್ತಿದೆ. ಮೈಸೂರಿನಲ್ಲಿಯೂ ಮೆಟ್ರೋ ರೈಲು ಸಂಚರಿಸಲಿದೆ ಎಂದು ಹೇಳಿದ್ದಾರೆ.ಮೈಸೂರಿಗೆ ಮೆಟ್ರೋ ರೈಲು ಸೇವೆ ನೀಡುವ ವಿಚಾರವಾಗಿ ಪ್ರಧಾನಿ ಮೋದಿ ಭಾಷಣದಲ್ಲಿ ಪ್ರಸ್ತಾಪಿಸಿರುವ ಬಗ್ಗೆ ಮೈಸೂರು ಸಂಸದ ಪ್ರತಾಪ್​ ಸಿಂಹ ಕೂಡ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಮಾಹಿತಿ ನೀಡಿದ್ದಾರೆ. ಕಳೆದ 3 ವರ್ಷಗಳಿಂದ ಬೃಹತ್ ಮೈಸೂರು ನಿರ್ಮಾಣಕ್ಕೆ ನಾನು ಹೋರಾಟ ಮಾಡುತ್ತಿರುವ ಹಿಂದಿರುವ ಮುಖ್ಯ ಉದ್ದೇಶವೇ ಪ್ರಧಾನಿ ಮೋದಿಜೀ ಅವರ ಕನಸಿನ ಮೆಟ್ರೋ ಟ್ರೈನ್ ಯೋಜನೆಯನ್ನು ತರುವುದಾಗಿದೆ ಎಂದು ಪ್ರತಾಪ್ ಸಿಂಹ ಎಕ್ಸ್​ ಪೋಸ್ಟ್​ನಲ್ಲಿ ಉಲ್ಲೇಖಿಸಿದ್ದಾರೆ.

ದೇಶ

ಭಾರತೀಯ ಇನ್‌ಫ್ಲುಯೆನ್ಸರ್‌ಗಳಿಗೆ ನೇಪಾಳ ರಾಯಭಾರ ಕಚೇರಿಯಿಂದ ವಿಶೇಷ ಅವಕಾಶ

Published

on

ನವದೆಹಲಿ: Embassy of Nepal in India ಭಾರತೀಯ ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳು, ವ್ಲಾಗರ್‌ಗಳು ಹಾಗೂ ಪಾಡ್‌ಕಾಸ್ಟರ್‌ಗಳಿಗೆ ವಿಶೇಷ ಅವಕಾಶ ಘೋಷಿಸಿದೆ.

ಡಿಜಿಟಲ್ ಮಾಧ್ಯಮಗಳ ಮೂಲಕ Nepalದ ಪ್ರವಾಸೋದ್ಯಮ, ಸಂಸ್ಕೃತಿ ಹಾಗೂ ಜೀವನಶೈಲಿಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಉದ್ದೇಶದಿಂದ ಐದು ಭಾರತೀಯ ಕಂಟೆಂಟ್ ಕ್ರಿಯೇಟರ್‌ಗಳನ್ನು ಆಯ್ಕೆ ಮಾಡಿ ವಿಶೇಷ “ಫ್ಯಾಮಿಲಿಯರೈಸೇಶನ್ ಟ್ರಿಪ್” ಆಯೋಜಿಸಲಾಗುತ್ತಿದೆ.

ಐದು ಕ್ರಿಯೇಟರ್‌ಗಳಿಗೆ ವಿಶೇಷ ಪ್ರವಾಸ

ಈ ಕುರಿತು ನೇಪಾಳ ರಾಯಭಾರ ಕಚೇರಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಆಸಕ್ತ ಭಾರತೀಯ ಕಂಟೆಂಟ್ ಕ್ರಿಯೇಟರ್‌ಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಆಯ್ಕೆಯಾದ ಐದು ಮಂದಿಗೆ ನೇಪಾಳದ ಪ್ರಮುಖ ಪ್ರವಾಸಿ ತಾಣಗಳು, ಸಾಂಸ್ಕೃತಿಕ ಕೇಂದ್ರಗಳು ಹಾಗೂ ನೈಸರ್ಗಿಕ ಸೌಂದರ್ಯ ಪ್ರದೇಶಗಳನ್ನು ವೀಕ್ಷಿಸುವ ಅವಕಾಶ ದೊರೆಯಲಿದೆ.

ನೇಪಾಳದ ಸಂಸ್ಕೃತಿ ಅನುಭವಿಸುವ ಅವಕಾಶ

ಪ್ರವಾಸದ ವೇಳೆ ಸ್ಥಳೀಯ ಜೀವನಶೈಲಿ, ಆಹಾರ ಸಂಸ್ಕೃತಿ, ಪರಂಪರೆ ಹಾಗೂ ಪ್ರವಾಸೋದ್ಯಮ ವೈಶಿಷ್ಟ್ಯಗಳನ್ನು ನೇರವಾಗಿ ಅನುಭವಿಸುವ ವ್ಯವಸ್ಥೆಯೂ ಇರಲಿದೆ.

ವಿಶೇಷವಾಗಿ ಯೂಟ್ಯೂಬ್, ಇನ್‌ಸ್ಟಾಗ್ರಾಂ, ಟ್ರಾವೆಲ್ ವ್ಲಾಗಿಂಗ್ ಹಾಗೂ ಪಾಡ್‌ಕಾಸ್ಟ್ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಭಾರತೀಯ ಯುವ ಕ್ರಿಯೇಟರ್‌ಗಳನ್ನು ಗುರಿಯಾಗಿಸಿಕೊಂಡು ಈ ಯೋಜನೆ ರೂಪಿಸಲಾಗಿದೆ.

ಡಿಜಿಟಲ್ ಪ್ರಚಾರಕ್ಕೆ ಹೊಸ ಹೆಜ್ಜೆ

ಪ್ರವಾಸೋದ್ಯಮ ಪ್ರಚಾರದಲ್ಲಿ ಡಿಜಿಟಲ್ ಕಂಟೆಂಟ್ ಕ್ರಿಯೇಟರ್‌ಗಳ ಪ್ರಭಾವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಯುವಜನತೆಗೆ ತಲುಪುವ ಹೊಸ ಮಾರ್ಗವಾಗಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ತಿಳಿಸಲಾಗಿದೆ.

ಆಯ್ಕೆಯಾದ ಕ್ರಿಯೇಟರ್‌ಗಳು ತಮ್ಮ ಪ್ರವಾಸ ಅನುಭವಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಿದ್ದು, ಅದರ ಮೂಲಕ ನೇಪಾಳದ ಪ್ರವಾಸೋದ್ಯಮವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡುವ ಉದ್ದೇಶ ಹೊಂದಲಾಗಿದೆ.

ಭಾರತ-ನೇಪಾಳ ಬಾಂಧವ್ಯಕ್ಕೆ ಉತ್ತೇಜನ

ಭಾರತ ಮತ್ತು ನೇಪಾಳದ ನಡುವೆ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಬಾಂಧವ್ಯಗಳಿದ್ದು, ಇಂತಹ ಕಾರ್ಯಕ್ರಮಗಳು ಜನರಿಂದ ಜನರಿಗೆ ಇರುವ ಸಂಪರ್ಕವನ್ನು ಇನ್ನಷ್ಟು ಬಲಪಡಿಸುವ ನಿರೀಕ್ಷೆಯಿದೆ.

ಅರ್ಜಿ ಹೇಗೆ ಸಲ್ಲಿಸಬೇಕು?

ಅರ್ಜಿ ಪ್ರಕ್ರಿಯೆ ಹಾಗೂ ಹೆಚ್ಚಿನ ಮಾಹಿತಿಗಾಗಿ Embassy of Nepal in India Official Website ಅಥವಾ ರಾಯಭಾರ ಕಚೇರಿಯ ಅಧಿಕೃತ ಸಾಮಾಜಿಕ ಜಾಲತಾಣ ಪೋಸ್ಟ್ ಪರಿಶೀಲಿಸಬಹುದು.

Continue Reading

ದೇಶ

ಬಾವಿ ನೀರಿಗೆ ಡೀಸೆಲ್ ವಾಸನೆ: ಲ್ಯಾಬ್ ವರದಿ ನೋಡಿ ಬೆಚ್ಚಿಬಿದ್ದ ಸ್ಥಳೀಯರು

Published

on

ಮಂಗಳೂರು: Mangalore ನಗರದ ಕಾವೂರು ಭಾಗದಲ್ಲಿ ನಿವಾಸಿಗಳನ್ನು ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಹಲವಾರು ಮನೆಗಳ ಕುಡಿಯುವ ನೀರಿನ ಬಾವಿಗಳಲ್ಲಿ ದಿಢೀರನೆ ಡೀಸೆಲ್ ಮಿಶ್ರಿತ ನೀರು ಉಕ್ಕಿ ಬರುತ್ತಿದ್ದು, ಸ್ಥಳೀಯರು ಭಾರೀ ಆತಂಕಕ್ಕೆ ಒಳಗಾಗಿದ್ದಾರೆ. ಬಾವಿ ನೀರಿನಿಂದ ತೀವ್ರ ಇಂಧನದ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀರನ್ನು ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಿದ್ದರು.

ಪರೀಕ್ಷಾ ವರದಿಯಲ್ಲಿ ನೀರಿನಲ್ಲಿ ಬರೋಬ್ಬರಿ ಶೇ.28 ರಷ್ಟು ಇಂಧನ ಅಂಶ ಪತ್ತೆಯಾಗಿರುವುದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಈ ಬೆಳವಣಿಗೆಯಿಂದ ಬಾವಿ ನೀರು ಸಂಪೂರ್ಣ ಕಲುಷಿತಗೊಂಡಿದ್ದು, ಕುಡಿಯಲು ಹಾಗೂ ದೈನಂದಿನ ಬಳಕೆಗೆ ಯೋಗ್ಯವಿಲ್ಲದಂತಾಗಿದೆ. ಹೀಗಾಗಿ ಸ್ಥಳೀಯರು ಹನಿ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸುತ್ತಮುತ್ತಲಿನ ಪೆಟ್ರೋಲ್ ಬಂಕ್‌ಗಳ ಭೂಗತ ಟ್ಯಾಂಕ್‌ಗಳಿಂದ ಇಂಧನ ಸೋರಿಕೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸೋರಿಕೆಯಾದ ಡೀಸೆಲ್ ಅಂತರ್ಜಲದ ಮೂಲಕ ಬಾವಿಗಳಿಗೆ ಸೇರಿರುವ ಸಾಧ್ಯತೆ ಇದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಈ ಘಟನೆ ಪರಿಸರ ಮಾಲಿನ್ಯದ ಜೊತೆಗೆ ದೊಡ್ಡ ಮಟ್ಟದ ಸುರಕ್ಷತಾ ಆತಂಕವನ್ನೂ ಹುಟ್ಟುಹಾಕಿದೆ.

ಬಾವಿಗಳಲ್ಲಿ ಇಂಧನ ಮಿಶ್ರಿತ ನೀರು ಇರುವುದರಿಂದ ಬೆಂಕಿ ಅವಘಡ ಸಂಭವಿಸುವ ಭೀತಿಯೂ ಎದುರಾಗಿದೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸೋರಿಕೆಯ ಮೂಲ ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾವೂರು ನಿವಾಸಿಗಳು ಒತ್ತಾಯಿಸಿದ್ದಾರೆ.

ಸ್ಥಳೀಯರು ಕುಡಿಯುವ ನೀರಿನ ಸಮಸ್ಯೆಯಿಂದ ಸಂಕಷ್ಟ ಅನುಭವಿಸುತ್ತಿದ್ದು, ಶೀಘ್ರ ಪರಿಹಾರ ಒದಗಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಸದ್ಯ ಈ ಘಟನೆ ಮಂಗಳೂರಿನಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಹೆಚ್ಚಿನ ಸುದ್ದಿಗಳಿಗಾಗಿ Hosa Suddi ಓದಿ.

Continue Reading

ದೇಶ

ದುಬಾರೆ ಆನೆ ಶಿಬಿರದಲ್ಲಿ ದುರಂತ: ಆನೆಗಳ ಕಾದಾಟದಲ್ಲಿ ಸಿಲುಕಿ ಪ್ರವಾಸಿ ಮಹಿಳೆ ಸಾವು

Published

on

By

ಕೊಡಗು: Dubare Elephant Camp ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ಎರಡು ಸಾಕಾನೆಗಳ ಕಾದಾಟದ ವೇಳೆ ಆಯತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ತಮಿಳುನಾಡಿನ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಸೋಮವಾರಪೇಟೆ ತಾಲೂಕಿನ ದುಬಾರೆ ಆನೆ ಶಿಬಿರದಲ್ಲಿ ಸೋಮವಾರ ಈ ದುರ್ಘಟನೆ ಸಂಭವಿಸಿದೆ.

33 ವರ್ಷದ ಜಾನ್ನಿಸಿ ಮೃತಪಟ್ಟ ಮಹಿಳೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ Eshwar B. Khandre ಮಾಹಿತಿ ನೀಡಿದ್ದಾರೆ. ಮಹಿಳೆ ತಮ್ಮ ಪತಿ ಮತ್ತು ಮಗಳೊಂದಿಗೆ ಎರಡು ದಿನಗಳ ಕೊಡಗು ಪ್ರವಾಸಕ್ಕೆ ಬಂದಿದ್ದರು. ಘಟನೆಯಲ್ಲಿ ಪತಿ ಮತ್ತು ಮಗು ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ದುಬಾರೆ ಶಿಬಿರದಲ್ಲಿ ಎಂದಿನಂತೆ ಸಾಕಾನೆಗಳಿಗೆ ಸ್ನಾನ ಮಾಡಿಸಲಾಗುತ್ತಿತ್ತು. ಈ ವೇಳೆ ‘ಕಂಚನ್’ ಮತ್ತು ‘ಮಾರ್ಥಾಂಡ’ ಎಂಬ ಆನೆಗಳು ಏಕಾಏಕಿ ಪರಸ್ಪರ ಕಾದಾಟ ಆರಂಭಿಸಿವೆ. ಮಾವುತರು ನಿಯಂತ್ರಿಸಲು ಪ್ರಯತ್ನಿಸಿದರೂ ಕಂಚನ್ ಆನೆ ಮಾರ್ತಾಂಡನಿಗೆ ಗುದ್ದಿದ ಪರಿಣಾಮ ಮಾರ್ತಾಂಡ ಆಯತಪ್ಪಿ ಕೆಳಗೆ ಬಿದ್ದಿದೆ. ಇದೇ ವೇಳೆ ನದಿಯ ಬಳಿ ನಿಂತಿದ್ದ ಮಹಿಳೆ ಆನೆಯ ಕೆಳಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಹಿಳೆಯನ್ನು ರಕ್ಷಿಸಲು ಪತಿ ಯತ್ನಿಸುತ್ತಿರುವ ದೃಶ್ಯಗಳು ಮನಕಲಕುವಂತಿವೆ.

ಈ ಘಟನೆ ಕುರಿತು ಸಮಗ್ರ ತನಿಖೆಗೆ ಸೂಚನೆ ನೀಡಿರುವ ಸಚಿವ ಈಶ್ವರ್ ಖಂಡ್ರೆ, “ಇಂತಹ ಅಚಾತುರ್ಯಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ. ಅಲ್ಲದೆ, ಪ್ರವಾಸಿಗರು ಆನೆಗಳ ಬಳಿ ಹೋಗುವುದು, ಫೋಟೋ ತೆಗೆಸಿಕೊಳ್ಳುವುದು, ಆಹಾರ ನೀಡುವುದು ಮತ್ತು ಆನೆಗಳಿಗೆ ಸ್ನಾನ ಮಾಡಿಸುವ ಚಟುವಟಿಕೆಗಳನ್ನು ನಿಯಂತ್ರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, Siddapura ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚಿನ ಸುದ್ದಿಗಳಿಗಾಗಿ Hosa Suddi Kannada News Portal ಓದಿ.

Continue Reading

Trending