ಕ್ರೀಡೆ
ಪಾಕಿಸ್ತಾನದ ಬುರುಡೆ ಮೇಲೆ ಗೆಲುವಿನ ಆಮ್ಲೇಟ್ ಬೇಯಿಸಿದ ಆಫ್ಘನ್!

ಚೆನ್ನೈ: ನಾವೇ ನಂಬರ್ ಒನ್, ಕಪ್ ಗೆಲ್ಲುವುದು ನಾವೇ ಎಂದುಕೊಂಡು ಭಾರತಕ್ಕೆ ವಿಶ್ವ ಕಪ್ ಆಡಲು ಬಂದಿದ್ದ ಪಾಕಿಸ್ತಾನ ತಂಡ ದುರ್ಬಲ ಅಫಘಾನಿಸ್ತಾನ ತಂಡದ ವಿರುದ್ಧವೇ ಸೋತು ಅವಮಾನಕ್ಕೆ ಈಡಾಗಿದೆ. ಇದು ಬಾಬರ್ ಅಜಮ್ ನೇತೃತ್ವದ ಪಾಕ್ ಬಳಗಕ್ಕೆ ಹಾಲಿ ವಿಶ್ವ ಕಪ್ನಲ್ಲಿ ಸತತ ಮೂರನೇ ಸೋಲು. ಭಾರತ ವಿರುದ್ಧ ಮೋದಿ ಸ್ಟೇಡಿಯಮ್ನಲ್ಲಿ ನಡೆದಿದ್ದ ಪಂದ್ಯದಲ್ಲಿ ಮೊದಲ ಸೋಲು ಕಂಡಿದ್ದ ಪಾಕಿಸ್ತಾನ, ನಂತರ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿತ್ತು. ಇದೀಗ ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ಅಫಘಾನಿಸ್ತಾನ ತಂಡದ ವಿರುದ್ಧ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಸುಲಿನ ಸುಳಿಯಲ್ಲಿ ಸಿಲುಕಿದ್ದ ಪಾಕ್ ತಂಡದ ಬುರುಡೆ ಮೇಲೆ ಅಫಘಾನಿಸ್ತಾನದ ಆಟಗಾರರು ಆಮ್ಲೇಟ್ ಬೇಯಿಸಿದಂತಾಗಿದೆ.
ಚೆನ್ನೈನ ಚೆಪಾಕ್ ಸ್ಟೇಡಿಯಮ್ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡ ಮೊದಲು ಬ್ಯಾಟ್ ಮಾಡಲು ಮುಂದಾಯಿತು. ಅಂತೆಯೇ ಆಫ್ಘನ್ ಬೌಲರ್ಗಳೆದುರು ವೈಫಲ್ಯ ಕಂಡು ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ಗೆ 282 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಅಪಘಾನಿಸ್ತಾನ ತಂಡ ಇನ್ನೂ ಆರು ಎಸೆತಗಳು ಬಾಕಿ ಇರುವಂತೆಯೇ 2 ವಿಕೆಟ್ ನಷ್ಟಕ್ಕೆ 286 ರನ್ ಬಾರಿಸಿ ಎಂಟು ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿತು. ಇದು ಏಕ ದಿನ ಕ್ರಿಕೆಟ್ ಮಾದರಿಯಲ್ಲಿ ಪಾಕ್ ವಿರುದ್ಧ ಅಫಘಾನಿಸ್ತಾನ ತಂಡ ದಾಖಲಿಸಿದ ಮೊದಲ ವಿಜಯವಾಗಿದೆ. ಜತೆಗೆ ಏಕ ದಿನ ಮಾದರಿಯಲ್ಲಿನ ಅತಿ ದೊಡ್ಡ ಚೇಸಿಂಗ್ ಜಯ.
ಅಫಘಾನಿಸ್ತಾನ ತಂಡ ಈ ಹಿಂದೆ ಎರಡು ಆವೃತ್ತಿಯ ವಿಶ್ವ ಕಪ್ನಲ್ಲಿ ಆಡಿತ್ತು. ಎರಡರಲ್ಲೂ ತಲಾ ಒಂದು ವಿಜಯ ಕಂಡಿತ್ತು. ಈ ಬಾರಿ ಎರಡನೇ ಗೆಲುವು ಕಂಡಿದೆ ಎಂಬುದೂ ವಿಶೇಷವೇ ಸರಿ. ಡೆಲ್ಲಿಯಲ್ಲಿ ನಡೆದ ಪಂದ್ಯದಲ್ಲಿ 2019ರ ಆವೃತ್ತಿಯ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಸೋಲಿಸಿದ್ದ ಅಪಘಾನಿಸ್ತಾನ ತಂಡ ಇದೀಗ ಐಸಿಸಿ ಏಕ ದಿನ ರ್ಯಾಂಕ್ ಪಟ್ಟಿಯ ಮೂರನೇ ತಂಡವಾಗಿರುವ ಪಾಕಿಸ್ತಾನವನ್ನು ಮಣಿಸಿದೆ. ಹೀಗಾಗಿ ಅಫಘಾನಿಸ್ತಾನ ತಂಡಕ್ಕಿದು ಅದ್ಭುತ ಆವೃತ್ತಿ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ.
ಸೋಲಿನ ಹೊರತಾಗಿಯೂ ಅಂಕಪಟ್ಟಿಯಲ್ಲಿ ಪಾಕಿಸ್ತಾನ ತಂಡದ ಸ್ಥಾನವೇನೂ ಪಲ್ಲಟವಾಗಿಲ್ಲ. ಅದಿನ್ನೂ ಐದನೇ ಸ್ಥಾನಲ್ಲಿಯೇ ಉಳಿದುಕೊಂಡಿದೆ. ಅದೇ ರೀತಿ ಅಪಘಾನಿಸ್ತಾನ ತಂಡದ ಸ್ಥಾನವೂ ಅಷ್ಟರಲ್ಲೇ ಇದೆ. ನೆಟ್ರೇಟ್ ಪ್ರಕಾರ ಅಫಘಾನಿಸ್ತಾನಕ್ಕಿಂತ ಕೊಂಚ ಮುಂದಿರುವ ಪಾಕಿಸ್ತಾನ ಐದನೇ ಸ್ಥಾನದಲ್ಲಿ ಉಳಿದುಕೊಂಡಿದೆ.
ಸ್ಪರ್ಧಾತ್ಮಕ ಗುರಿಯನ್ನು ಪಡೆದಿದ್ದ ಅಫಘಾನಿಸ್ತಾನ ತಂಡದ ಬ್ಯಾಟರ್ಗಳು ತಮ್ಮ ಅದ್ಭುತ ಬ್ಯಾಟಿಂಗ್ ಕೌಶಲವನ್ನು ಪ್ರದರ್ಶಿಸಿದರು. ಉತೃಷ್ಟ ತಂಡಗಳು ನೀಡುವ ಪ್ರದರ್ಶನದಂತಿತ್ತು ಆಫ್ಘನ್ ಆಟಗಾರರ ಆಟ. ಆರಂಭಿಕ ಜೋಡಿಯಾಗಿರುವ ರಹ್ಮನುಲ್ಲಾ ಗುರ್ಬಜ್ (65) ಹಾಗೂ ಇಬ್ರಾಹಿಂ ಜದ್ರಾನ್ (87) ಮೊದಲ ವಿಕೆಟ್ಗೆ 130 ರನ್ ಬಾರಿಸಿ ಮಿಂಚಿದರು. ನಂತರದ ವಿಕೆಟ್ಗೆ ಇನ್ನೂ 60 ರನ್ ಸೇರ್ಪಡೆಗೊಂಡಿತು. ಮೂರನೇ ವಿಕೆಟ್ಗೆ 96 ರನ್ಗಳು ಸೇರ್ಪಡೆಗೊಂಡವು. ಮೂರನೇ ಕ್ರಮಾಂಕದಲ್ಲಿ ಆಡಿದ ರಹ್ಮತ್ ಶಾ (77) ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರೆ, ನಾಯಕ ಹಶ್ಮತುಲ್ಲಾ ಶಾಹಿದಿ 48 ರನ್ ಬಾರಿಸಿದರು. ಅಂದಹಾಗೆ ಮೊದಲ ಮೂವರು ಬ್ಯಾಟರ್ಗಳು ಅರ್ಧ ಶತಕ ಬಾರಿಸಿ ಮಿಂಚಿದರೆ, ಹಶ್ಮತುಲ್ಲಾ 2 ರನ್ಗಳ ಕೊರತೆಯಿಂದ ಅರ್ಧ ಶತಕದ ಅವಕಾಶ ತಪ್ಪಿಸಿಕೊಂಡರು. ಇದು ಏಕ ದಿನ ಮಾದರಿಯಲ್ಲಿ ಅಫಘಾನಿಸ್ತಾನ ತಂಡದ ಅಮೋಘ ಪ್ರದರ್ಶನ ಎನಿಸಿಕೊಳ್ಳಲಿದೆ.
ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಸಾಧಾರಣ ಬ್ಯಾಟಿಂಗ್ ಪ್ರದರ್ಶನ ನೀಡಿತು. ಆರಂಭಿಕ ಆಟಗಾರ ಅಬ್ದುಲ್ಲಾ ಶಫಿಕ್ (58) ಹಾಗೂ ನಾಯಕ ಬಾಬರ್ ಅಜಮ್ (74) ಅರ್ಧ ಶತಕ ಬಾರಿಸಿದರೂ ಅವರ ಈ ಆಟದಲ್ಲಿ ಯಾವುದೇ ಕಿಮ್ಮತ್ತು ಇರಲಿಲ್ಲ. ತಂಡದ ಪಾಲಿಗೆ ದೊಡ್ಡ ಮೊತ್ತ ಪೇರಿಸುವ ಗುರಿಯೂ ಇಲಿಲ್ಲ. ಅಂತಿಮವಾಗಿ ಶದಾಬ್ ಖಾನ್ ಹಾಗೂ ಇಫ್ತಿಕಾರ್ ಅಹಮದ್ ಕಡಿಮೆ ಎಸೆತಗಳಲ್ಲಿ ತಲಾ 40 ರನ್ ಬಾರಿಸಿದರೂ ಅದರಿಂದ ತಂಡಕ್ಕೆ ಪ್ರಯೋಜನ ಆಗಿಲ್ಲ ಎಂಬುದು ಫಲಿತಾಂಶದ ಬಳಿಕ ಗೊತ್ತಾಯಿತು. ಚೇಸ್ ಮಾಡಿ ಗೆಲ್ಲಬಹುದಾದ ಚೆನ್ನೈ ಪಿಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ ಅದಕ್ಕೆ ಬೆಲೆ ತೆತ್ತಿತು.
ಕ್ರೀಡೆ
ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!
ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.
ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.
ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.
ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.
ಕ್ರೀಡೆ
ಭಾರತೀಯ ತಂಡದ ಕೋಚ್ ಗೌತಮ್ ಗಂಭೀರ್ ವಿರುದ್ಧ ಟೀಕೆ, ಬಿಸಿಸಿಐ ಸಹಾಯಕ ಕೋಚ್ ಮಾರ್ನೆ ಮಾರ್ಕೆಲ್-ಟೆನ್ ಡೊಶ್ಕಾಟೆ ಬದಲಾವಣೆ ಸಾಧ್ಯತೆ
ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಅವರ ಕೋಚಿಂಗ್ ಶೈಲಿಯನ್ನು ಮಾಜಿ ಕ್ರಿಕೆಟಿಗರು ಸೇರಿದಂತೆ ಸುನಿಲ್ ಗವಾಸ್ಕರ್, ರಿಕಿ ಪಾಂಟಿಂಗ್ ಸೇರಿದಂತೆ ಹಲವು ಹಿರಿಯರು ಭಾರೀ ಟೀಕೆ ಮಾಡಿದ್ದಾರೆ. ಈ ಟೀಕೆಗಳಿಗೆ ಸಂಬಂಧಿಸಿ, ಗಂಭೀರ್ ಮನವಿ ಮಾಡಿಕೊಂಡ ಸಹಾಯಕ ಕೋಚ್ಗಳಾದ ಮಾರ್ನೆ ಮಾರ್ಕೆಲ್ (ಬೌಲಿಂಗ್ ಕೋಚ್) ಮತ್ತು ರ್ಯಾನ್ ಟೆನ್ ಡೊಶ್ಕಾಟೆ ಶೀಘ್ರದಲ್ಲೇ ತಮ್ಮ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ಸೂಚಿಸುತ್ತಿವೆ.
ಕಳೆದ ವರ್ಷ ಜುಲೈನಲ್ಲಿ ಗಂಭೀರ್ ಭಾರತದ ಕೋಚ್ ಆಗಿ ನೇಮಕಗೊಂಡಿದ್ದರು. ಅವರ ಮನವಿ ಮೇರೆಗೆ ಐಪಿಎಲ್ ತಂಡಗಳಲ್ಲಿ ಕಾರ್ಯನಿರ್ವಹಿಸಿದ್ದ ಅಭಿಷೇಕ್ ನಾಯರ್, ಮಾರ್ಕೆಲ್ ಮತ್ತು ಡೊಶ್ಕಾಟೆ ಸಹಾಯಕ ಕೋಚ್ ಆಗಿ ನೇಮಕಗೊಂಡಿದ್ದರು. ಆದರೆ, ನ್ಯೂಜಿಲೆಂಡ್ ವಿರುದ್ಧ ವೈಟ್ ವಾಷ್ ಹಾಗೂ ಆಸ್ಟ್ರೇಲಿಯಾ ತಂಡದ ಸೋಲುಗಳು ಬಿಸಿಸಿಐನಲ್ಲಿ ಅಸಮಾಧಾನ ಮೂಡಿಸಿದ ಕಾರಣ, ಮೊದಲನೆಯದಾಗಿ ಸಹಾಯಕ ಕೋಚ್ ಅಭಿಷೇಕ್ ನಾಯರ್ ಹುದ್ದೆಯಿಂದ ವಜಾಗೊಂಡಿದ್ದರು.
ಇದೇ ಹಿನ್ನೆಲೆಯಲ್ಲಿ, ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ಮತ್ತು ರ್ಯಾನ್ ಟೆನ್ ಡೊಶ್ಕಾಟೆ ಸಹ ಇನ್ನೂ ಸಹ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ತಂಡದ ಆಯ್ಕೆ ಪ್ರಕ್ರಿಯೆ, ಆಟಗಾರರ ಕಾರ್ಯದೊತ್ತಡ, ಪಿಚ್ ಅನ್ವಯ 11 ಆಟಗಾರರ ಆಯ್ಕೆ ಮತ್ತು ಸಮತೋಲನ ಕಾಯ್ದುಕೊಳ್ಳುವ ವಿಚಾರದಲ್ಲಿ ಕೋಚ್ಗಳ ಕಾರ್ಯವೈಖರಿಗೆ ಬಿಸಿಸಿಐ ಅತೃಪ್ತಿ ವ್ಯಕ್ತಪಡಿಸಿದೆ.
ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಥಾನಕ್ಕೂ ಸವಾಲು ಎದುರಾಗಿದೆ. 2023ರ ಜುಲೈನಲ್ಲಿ ನೇಮಕಗೊಂಡ ಈ ಸಮಿತಿ ಮುಖ್ಯಸ್ಥರ ನೇತೃತ್ವದಲ್ಲಿ ಭಾರತ ತಂಡದ ಪ್ರದರ್ಶನ ಕಳೆದ ಒಂದು ವರ್ಷದಿಂದ ತೀರಾ ಕಳಪೆಯಾಗಿದ್ದು, ಸಮರ್ಥ ಆಟಗಾರರ ಆಯ್ಕೆಯಲ್ಲಿ ನಿರಂತರ ಎಡವಾಟಗಳು ನಡೆದಿವೆ ಎಂದು ವಿಶ್ಲೇಷಣೆಗಳು ತಿಳಿಸುತ್ತಿವೆ.
ಕ್ರೀಡೆ
ಕನ್ನಡಿಗ ಕ್ರಿಕೆಟಿಗ ದೇವದತ್ ಪಡಿಕ್ಕಲ್ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟ
ಕರ್ನಾಟಕದ ಪ್ರತಿಭಾವಂತ ಕ್ರಿಕೆಟಿಗ ದೇವದತ್ ಪಡಿಕ್ಕಲ್ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಅವರು ‘ಹುಬ್ಬಳ್ಳಿ ಟೈಗರ್ಸ್’ ತಂಡಕ್ಕೆ 13.20 ಲಕ್ಷ ರೂಪಾಯಿಗೆ ಮಾರಾಟ ಆಗಿದ್ದು, ಈ ಮೊತ್ತವು ಮಹಾರಾಜ ಟ್ರೋಫಿಯ ಇತಿಹಾಸದಲ್ಲಿ ಅತಿ ಹೆಚ್ಚು ಬೆಲೆಯಾಗಿದೆ. ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಪರ ಉತ್ತಮ ಪ್ರದರ್ಶನ ನೀಡಿ, ಅವರು ಈ ಯಶಸ್ಸಿಗೆ ಪಾತ್ರರಾಗಿದ್ದಾರೆ.
ಕಳೆದ ಐಪಿಎಲ್ ಪಂದ್ಯಾವಳಿಯಲ್ಲಿ ಗಾಯದಿಂದ ಕೆಲವು ಪಂದ್ಯಗಳಿಂದ ದೂರ ಉಳಿದರೂ, ದೇವದತ್ ಪಡಿಕ್ಕಲ್ ಅವರ ಸಾಮರ್ಥ್ಯ ಎಲ್ಲರ ಮನಸ್ಸಿಗೆ ತಲುಪಿತ್ತು. 2024ರ ಐಪಿಎಲ್ನಲ್ಲಿ ರಾಜಸ್ಥಾನ ರಾಯಲ್ಸ್ನಿಂದ ಹೊರಬಂದ ಬಳಿಕ ಆರ್ಸಿಬಿ ತಂಡವು ಅವರನ್ನು 3.20 ಕೋಟಿ ರೂಪಾಯಿಗೆ ಖರೀದಿಸಿದೆ. ಇದೀಗ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವು 13.20 ಲಕ್ಷ ರೂಪಾಯಿಗೆ ದೇವದತ್ ಪಡಿಕ್ಕಲ್ ಅವರನ್ನು ಪಡೆದಿದ್ದು, ಇದು ಟೂರ್ನಿಯ ದಾಖಲೆಯ ಬೆಲೆಯಾಗಿದೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಜುಲೈ 15ರಂದು ಬೆಂಗಳೂರಿನಲ್ಲಿ ಆಯೋಜಿಸಿದ ಈ ಹರಾಜಿನಲ್ಲಿ ದೇವದತ್ ಪಡಿಕ್ಕಲ್ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಕನ್ನಡಿಗ ಕ್ರಿಕೆಟಿಗರಾಗಿದ್ದಾರೆ. ಮಹಾರಾಜ ಟ್ರೋಫಿಯಲ್ಲಿ ಪ್ರತಿ ಫ್ರಾಂಚೈಸಿಯು ಕನಿಷ್ಠ ಇಬ್ಬರು ಸ್ಥಳೀಯ ಆಟಗಾರರನ್ನು ತಂಡದಲ್ಲಿ ಇರಿಸಬೇಕು ಎಂಬ ನಿಯಮವಿದ್ದು, ಇದರಿಂದ ಸ್ಥಳೀಯ ಪ್ರತಿಭೆಗಳ ಪ್ರೋತ್ಸಾಹಕ್ಕೆ ದೊಡ್ಡ ಅವಕಾಶ ಸಿಗುತ್ತದೆ.
ಈ ವರ್ಷದ ಪಂದ್ಯಗಳು ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಭಿಮಾನಿಗಳಿಗೆ ಮೈದಾನದಲ್ಲಿ ವೀಕ್ಷಣೆಗೆ ಅವಕಾಶ ಇಲ್ಲ. ಆದರೂ ದೇವದತ್ ಪಡಿಕ್ಕಲ್ ಅವರ ಸಾಧನೆ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಯುವ ಕ್ರಿಕೆಟಿಗರಿಗೆ ಪ್ರೇರಣೆಯಾಗಿದೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ಕ್ರೀಡೆ2 months ago
ಇಂದು ಐಪಿಎಲ್ ಫೈನಲ್- ಆರ್ಸಿಬಿಗೆ ಶುಭಕೋರಿದ ಎಸ್ಟಿಎಸ್!