Connect with us

ಕ್ರೀಡೆ

ಪಾಕಿಸ್ತಾನದ ಬುರುಡೆ ಮೇಲೆ ಗೆಲುವಿನ ಆಮ್ಲೇಟ್ ಬೇಯಿಸಿದ ಆಫ್ಘನ್!

Published

on

ಪಾಕಿಸ್ತಾನದ ಬುರುಡೆ ಮೇಲೆ ಗೆಲುವಿನ ಆಮ್ಲೇಟ್ ಬೇಯಿಸಿದ ಆಫ್ಘನ್!
ಪಾಕಿಸ್ತಾನದ ಬುರುಡೆ ಮೇಲೆ ಗೆಲುವಿನ ಆಮ್ಲೇಟ್ ಬೇಯಿಸಿದ ಆಫ್ಘನ್!

ಚೆನ್ನೈ: ನಾವೇ ನಂಬರ್ ಒನ್, ಕಪ್ ಗೆಲ್ಲುವುದು ನಾವೇ ಎಂದುಕೊಂಡು ಭಾರತಕ್ಕೆ ವಿಶ್ವ ಕಪ್ ಆಡಲು ಬಂದಿದ್ದ ಪಾಕಿಸ್ತಾನ ತಂಡ ದುರ್ಬಲ ಅಫಘಾನಿಸ್ತಾನ ತಂಡದ ವಿರುದ್ಧವೇ ಸೋತು ಅವಮಾನಕ್ಕೆ ಈಡಾಗಿದೆ. ಇದು ಬಾಬರ್ ಅಜಮ್ ನೇತೃತ್ವದ ಪಾಕ್ ಬಳಗಕ್ಕೆ ಹಾಲಿ ವಿಶ್ವ ಕಪ್ನಲ್ಲಿ ಸತತ ಮೂರನೇ ಸೋಲು. ಭಾರತ ವಿರುದ್ಧ ಮೋದಿ ಸ್ಟೇಡಿಯಮ್ನಲ್ಲಿ ನಡೆದಿದ್ದ ಪಂದ್ಯದಲ್ಲಿ ಮೊದಲ ಸೋಲು ಕಂಡಿದ್ದ ಪಾಕಿಸ್ತಾನ, ನಂತರ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿತ್ತು. ಇದೀಗ ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ಅಫಘಾನಿಸ್ತಾನ ತಂಡದ ವಿರುದ್ಧ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಸುಲಿನ ಸುಳಿಯಲ್ಲಿ ಸಿಲುಕಿದ್ದ ಪಾಕ್ ತಂಡದ ಬುರುಡೆ ಮೇಲೆ ಅಫಘಾನಿಸ್ತಾನದ ಆಟಗಾರರು ಆಮ್ಲೇಟ್ ಬೇಯಿಸಿದಂತಾಗಿದೆ.
ಚೆನ್ನೈನ ಚೆಪಾಕ್ ಸ್ಟೇಡಿಯಮ್ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡ ಮೊದಲು ಬ್ಯಾಟ್ ಮಾಡಲು ಮುಂದಾಯಿತು. ಅಂತೆಯೇ ಆಫ್ಘನ್ ಬೌಲರ್ಗಳೆದುರು ವೈಫಲ್ಯ ಕಂಡು ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ಗೆ 282 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಅಪಘಾನಿಸ್ತಾನ ತಂಡ ಇನ್ನೂ ಆರು ಎಸೆತಗಳು ಬಾಕಿ ಇರುವಂತೆಯೇ 2 ವಿಕೆಟ್ ನಷ್ಟಕ್ಕೆ 286 ರನ್ ಬಾರಿಸಿ ಎಂಟು ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿತು. ಇದು ಏಕ ದಿನ ಕ್ರಿಕೆಟ್ ಮಾದರಿಯಲ್ಲಿ ಪಾಕ್ ವಿರುದ್ಧ ಅಫಘಾನಿಸ್ತಾನ ತಂಡ ದಾಖಲಿಸಿದ ಮೊದಲ ವಿಜಯವಾಗಿದೆ. ಜತೆಗೆ ಏಕ ದಿನ ಮಾದರಿಯಲ್ಲಿನ ಅತಿ ದೊಡ್ಡ ಚೇಸಿಂಗ್ ಜಯ.
ಅಫಘಾನಿಸ್ತಾನ ತಂಡ ಈ ಹಿಂದೆ ಎರಡು ಆವೃತ್ತಿಯ ವಿಶ್ವ ಕಪ್ನಲ್ಲಿ ಆಡಿತ್ತು. ಎರಡರಲ್ಲೂ ತಲಾ ಒಂದು ವಿಜಯ ಕಂಡಿತ್ತು. ಈ ಬಾರಿ ಎರಡನೇ ಗೆಲುವು ಕಂಡಿದೆ ಎಂಬುದೂ ವಿಶೇಷವೇ ಸರಿ. ಡೆಲ್ಲಿಯಲ್ಲಿ ನಡೆದ ಪಂದ್ಯದಲ್ಲಿ 2019ರ ಆವೃತ್ತಿಯ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಸೋಲಿಸಿದ್ದ ಅಪಘಾನಿಸ್ತಾನ ತಂಡ ಇದೀಗ ಐಸಿಸಿ ಏಕ ದಿನ ರ್ಯಾಂಕ್ ಪಟ್ಟಿಯ ಮೂರನೇ ತಂಡವಾಗಿರುವ ಪಾಕಿಸ್ತಾನವನ್ನು ಮಣಿಸಿದೆ. ಹೀಗಾಗಿ ಅಫಘಾನಿಸ್ತಾನ ತಂಡಕ್ಕಿದು ಅದ್ಭುತ ಆವೃತ್ತಿ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ.
ಸೋಲಿನ ಹೊರತಾಗಿಯೂ ಅಂಕಪಟ್ಟಿಯಲ್ಲಿ ಪಾಕಿಸ್ತಾನ ತಂಡದ ಸ್ಥಾನವೇನೂ ಪಲ್ಲಟವಾಗಿಲ್ಲ. ಅದಿನ್ನೂ ಐದನೇ ಸ್ಥಾನಲ್ಲಿಯೇ ಉಳಿದುಕೊಂಡಿದೆ. ಅದೇ ರೀತಿ ಅಪಘಾನಿಸ್ತಾನ ತಂಡದ ಸ್ಥಾನವೂ ಅಷ್ಟರಲ್ಲೇ ಇದೆ. ನೆಟ್ರೇಟ್ ಪ್ರಕಾರ ಅಫಘಾನಿಸ್ತಾನಕ್ಕಿಂತ ಕೊಂಚ ಮುಂದಿರುವ ಪಾಕಿಸ್ತಾನ ಐದನೇ ಸ್ಥಾನದಲ್ಲಿ ಉಳಿದುಕೊಂಡಿದೆ.
ಸ್ಪರ್ಧಾತ್ಮಕ ಗುರಿಯನ್ನು ಪಡೆದಿದ್ದ ಅಫಘಾನಿಸ್ತಾನ ತಂಡದ ಬ್ಯಾಟರ್ಗಳು ತಮ್ಮ ಅದ್ಭುತ ಬ್ಯಾಟಿಂಗ್ ಕೌಶಲವನ್ನು ಪ್ರದರ್ಶಿಸಿದರು. ಉತೃಷ್ಟ ತಂಡಗಳು ನೀಡುವ ಪ್ರದರ್ಶನದಂತಿತ್ತು ಆಫ್ಘನ್ ಆಟಗಾರರ ಆಟ. ಆರಂಭಿಕ ಜೋಡಿಯಾಗಿರುವ ರಹ್ಮನುಲ್ಲಾ ಗುರ್ಬಜ್ (65) ಹಾಗೂ ಇಬ್ರಾಹಿಂ ಜದ್ರಾನ್ (87) ಮೊದಲ ವಿಕೆಟ್ಗೆ 130 ರನ್ ಬಾರಿಸಿ ಮಿಂಚಿದರು. ನಂತರದ ವಿಕೆಟ್ಗೆ ಇನ್ನೂ 60 ರನ್ ಸೇರ್ಪಡೆಗೊಂಡಿತು. ಮೂರನೇ ವಿಕೆಟ್ಗೆ 96 ರನ್ಗಳು ಸೇರ್ಪಡೆಗೊಂಡವು. ಮೂರನೇ ಕ್ರಮಾಂಕದಲ್ಲಿ ಆಡಿದ ರಹ್ಮತ್ ಶಾ (77) ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರೆ, ನಾಯಕ ಹಶ್ಮತುಲ್ಲಾ ಶಾಹಿದಿ 48 ರನ್ ಬಾರಿಸಿದರು. ಅಂದಹಾಗೆ ಮೊದಲ ಮೂವರು ಬ್ಯಾಟರ್ಗಳು ಅರ್ಧ ಶತಕ ಬಾರಿಸಿ ಮಿಂಚಿದರೆ, ಹಶ್ಮತುಲ್ಲಾ 2 ರನ್ಗಳ ಕೊರತೆಯಿಂದ ಅರ್ಧ ಶತಕದ ಅವಕಾಶ ತಪ್ಪಿಸಿಕೊಂಡರು. ಇದು ಏಕ ದಿನ ಮಾದರಿಯಲ್ಲಿ ಅಫಘಾನಿಸ್ತಾನ ತಂಡದ ಅಮೋಘ ಪ್ರದರ್ಶನ ಎನಿಸಿಕೊಳ್ಳಲಿದೆ.
ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಸಾಧಾರಣ ಬ್ಯಾಟಿಂಗ್ ಪ್ರದರ್ಶನ ನೀಡಿತು. ಆರಂಭಿಕ ಆಟಗಾರ ಅಬ್ದುಲ್ಲಾ ಶಫಿಕ್ (58) ಹಾಗೂ ನಾಯಕ ಬಾಬರ್ ಅಜಮ್ (74) ಅರ್ಧ ಶತಕ ಬಾರಿಸಿದರೂ ಅವರ ಈ ಆಟದಲ್ಲಿ ಯಾವುದೇ ಕಿಮ್ಮತ್ತು ಇರಲಿಲ್ಲ. ತಂಡದ ಪಾಲಿಗೆ ದೊಡ್ಡ ಮೊತ್ತ ಪೇರಿಸುವ ಗುರಿಯೂ ಇಲಿಲ್ಲ. ಅಂತಿಮವಾಗಿ ಶದಾಬ್ ಖಾನ್ ಹಾಗೂ ಇಫ್ತಿಕಾರ್ ಅಹಮದ್ ಕಡಿಮೆ ಎಸೆತಗಳಲ್ಲಿ ತಲಾ 40 ರನ್ ಬಾರಿಸಿದರೂ ಅದರಿಂದ ತಂಡಕ್ಕೆ ಪ್ರಯೋಜನ ಆಗಿಲ್ಲ ಎಂಬುದು ಫಲಿತಾಂಶದ ಬಳಿಕ ಗೊತ್ತಾಯಿತು. ಚೇಸ್ ಮಾಡಿ ಗೆಲ್ಲಬಹುದಾದ ಚೆನ್ನೈ ಪಿಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ ಅದಕ್ಕೆ ಬೆಲೆ ತೆತ್ತಿತು.

ಕ್ರೀಡೆ

IPL 2026ಕ್ಕೆ BCCI ಹೊಸ ನಿಯಮ: ಬೌಂಡರಿ ಬಳಿ ‘ಎಕ್ಸ್ಟ್ರಾ’ ಆಟಗಾರರಿಗೆ ಎಂಟ್ರಿ ಬ್ಯಾನ್!

Published

on

By

ಮುಂಬೈ: Indian Premier League (IPL 2026) ಮುನ್ನ ಪಂದ್ಯಗಳ ಶಿಸ್ತು ಕಾಪಾಡಲು Board of Control for Cricket in India ಮಹತ್ವದ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಮೈದಾನದಲ್ಲಿ ಕಂಡುಬರುವ ಗೊಂದಲ ಮತ್ತು ಅನಗತ್ಯ ಆಟಗಾರರ ಓಡಾಟವನ್ನು ನಿಯಂತ್ರಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ.

ಹೊಸ ನಿಯಮದ ಪ್ರಕಾರ, ಪಂದ್ಯಕ್ಕೆ ಮುನ್ನ ತಂಡದ ಪಟ್ಟಿಯಲ್ಲಿ ಹೆಸರು ಪಡೆದಿರುವ 16 ಆಟಗಾರರು (ಪ್ಲೇಯಿಂಗ್ 11 + 5 ಬದಲಿ) ಮಾತ್ರ ಮೈದಾನಕ್ಕೆ ಪ್ರವೇಶಿಸಬಹುದು. ಡ್ರಿಂಕ್ಸ್ ತರುವುದು, ಬ್ಯಾಟ್ ನೀಡುವುದು ಅಥವಾ ಸಂದೇಶ ಸಾಗಿಸುವುದು ಈ ಆಟಗಾರರ ಜವಾಬ್ದಾರಿ ಆಗಿರುತ್ತದೆ.

ಇದಕ್ಕೂ ಮೊದಲು ಎಕ್ಸ್ಟ್ರಾ ಸ್ಕ್ವಾಡ್ ಸದಸ್ಯರು ಸಹ ಮೈದಾನಕ್ಕೆ ಬಂದು ಸಹಾಯ ಮಾಡುತ್ತಿದ್ದರು. ಆದರೆ ಇನ್ನುಮುಂದೆ ಅವರಿಗೆ ಮೈದಾನ ಪ್ರವೇಶ ಸಂಪೂರ್ಣ ನಿಷೇಧಿಸಲಾಗಿದೆ. ಅವರು ಕಡ್ಡಾಯವಾಗಿ ಡಗೌಟ್‌ನಲ್ಲಿಯೇ ಇರಬೇಕು.

ಇದಲ್ಲದೆ, ಬೌಂಡರಿ ಲೈನ್ ಬಳಿ ಇರುವ ಆಟಗಾರರ ಸಂಖ್ಯೆಯನ್ನೂ ನಿಯಂತ್ರಿಸಲಾಗಿದೆ. ಯಾವುದೇ ಸಮಯದಲ್ಲಿ ಕೇವಲ 5 ಆಟಗಾರರಿಗೆ ಮಾತ್ರ ಬೌಂಡರಿ ಬಳಿ ಇರಲು ಅವಕಾಶವಿದೆ. ಅವರು ‘ಬಿಬ್ಸ್’ ಧರಿಸಿಕೊಂಡು ಚೆಂಡು ಸಂಗ್ರಹಿಸುವುದು ಅಥವಾ ಸಹಾಯ ಮಾಡುವ ಕಾರ್ಯದಲ್ಲಿ ತೊಡಗಿರಬೇಕು.

ಈ ನಿಯಮಗಳ ಮುಖ್ಯ ಉದ್ದೇಶ ಮೈದಾನದಲ್ಲಿ ಶಿಸ್ತು ಕಾಪಾಡುವುದು, ಅನಗತ್ಯ ಸಮಯ ವ್ಯಯ ತಡೆಯುವುದು ಹಾಗೂ ಟಿವಿ ಪ್ರಸಾರದ ಗುಣಮಟ್ಟವನ್ನು ಉತ್ತಮಗೊಳಿಸುವುದಾಗಿದೆ.

ಒಟ್ಟಿನಲ್ಲಿ, IPL 2026ನಲ್ಲಿ ಈ ಹೊಸ ನಿಯಮಗಳು ಪಂದ್ಯಗಳ ರೂಪವನ್ನು ಬದಲಾಯಿಸುವ ಸಾಧ್ಯತೆ ಇದ್ದು, ತಂಡಗಳು ತಮ್ಮ ತಂತ್ರವನ್ನು ಬದಲಾಯಿಸಬೇಕಾಗಬಹುದು.

Continue Reading

ಕ್ರೀಡೆ

ಕೊಹ್ಲಿ ಹೋಲಿಕೆಗೆ ಬಾಬರ್ ಅಜಮ್ ಕಿಡಿ: ಪತ್ರಿಕಾಗೋಷ್ಠಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ

Published

on

By

ಕರಾಚಿ: ಪಾಕಿಸ್ತಾನದ ಸ್ಟಾರ್ ಬ್ಯಾಟ್ಸ್‌ಮನ್ Babar Azam ಮತ್ತೆ ಸುದ್ದಿಯಲ್ಲಿದ್ದಾರೆ. Pakistan Super League (PSL 2026) ವೇಳೆ ಪತ್ರಿಕಾಗೋಷ್ಠಿಯಲ್ಲಿ ಕೇಳಲಾದ ಪ್ರಶ್ನೆಗೆ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿರುವುದು ವೈರಲ್ ಆಗಿದೆ.

ಪೇಶಾವರ್ ಝಲ್ಮಿ ತಂಡದ ನಾಯಕನಾಗಿರುವ ಬಾಬರ್, ಹೈದರಾಬಾದ್ ಕಿಂಗ್ಸ್‌ಮೆನ್ ವಿರುದ್ಧದ ಪಂದ್ಯದಲ್ಲಿ 43 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಆದರೆ ಪಂದ್ಯವನ್ನು ಕೊನೆಗೊಳಿಸದೆ ಔಟ್ ಆದ ಬಗ್ಗೆ ಪ್ರಶ್ನೆ ಕೇಳಲಾಯಿತು. ವಿಶೇಷವಾಗಿ, ಅವರನ್ನು Virat Kohli ಜತೆ ಹೋಲಿಸಿ ಪ್ರಶ್ನೆ ಕೇಳಿದಾಗ ಬಾಬರ್ ಅಸಮಾಧಾನ ವ್ಯಕ್ತಪಡಿಸಿದರು.

“ಈ ಹೋಲಿಕೆಗಳನ್ನು ಇಲ್ಲಿ ಮುಗಿಸಿಬಿಡಿ. ನಿಮ್ಮಲ್ಲೇ ಇಟ್ಟುಕೊಳ್ಳಿ. ಪಂದ್ಯವನ್ನು ಫಿನಿಶ್ ಮಾಡಿಲ್ಲ ಎಂಬುದು ತಪ್ಪು ಕಲ್ಪನೆ” ಎಂದು ಅವರು ಸ್ಪಷ್ಟವಾಗಿ ಹೇಳಿದರು. ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ವಿಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಬಾಬರ್ ಅಜಮ್ ಅವರನ್ನು ಪಾಕಿಸ್ತಾನದ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆಂದು ಪರಿಗಣಿಸಲಾದರೂ, ಟಿ20 ಕ್ರಿಕೆಟ್‌ನಲ್ಲಿ ಅವರ ಸ್ಟ್ರೈಕ್ ರೇಟ್ ಬಗ್ಗೆ ಟೀಕೆಗಳು ಕೇಳಿಬರುತ್ತಿವೆ. ಈ PSL ಸೀಸನ್‌ನಲ್ಲಿ ಅವರು ಎರಡು ಪಂದ್ಯಗಳಲ್ಲಿ 82 ರನ್ ಗಳಿಸಿದ್ದರೂ, ಸ್ಟ್ರೈಕ್ ರೇಟ್ ಮತ್ತು ಬೌಂಡರಿಗಳ ಕೊರತೆ ಚರ್ಚೆಗೆ ಕಾರಣವಾಗಿದೆ.

ಒಟ್ಟಿನಲ್ಲಿ, ಕೊಹ್ಲಿ ಹೋಲಿಕೆ ಪ್ರಶ್ನೆ ಮತ್ತೆ ಬಾಬರ್ ಮೇಲೆ ಒತ್ತಡ ಹೆಚ್ಚಿಸಿದ್ದು, ಮುಂದಿನ ಪಂದ್ಯಗಳಲ್ಲಿ ಅವರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ಕ್ರೀಡೆ

ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!

Published

on

By

ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.

ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.

ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.

ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.

ಆರ್ಸಿಬಿ ಬ್ಯಾಟಿಂಗ್ ವಿವರ:

  • ವಿರಾಟ್ ಕೊಹ್ಲಿ – 28 (18)
  • ಫಿಲ್ ಸಾಲ್ಟ್ – 46 (30)
  • ದೇವದತ್ತ ಪಡಿಕಲ್ – 50 (29)
  • ರಜತ್ ಪಾಟೀದಾರ್ – 48* (19)
  • ಟಿಮ್ ಡೇವಿಡ್ – 70* (25)
Continue Reading

Trending