Connect with us

ಸುತ್ತ ಮುತ್ತ

ಹುಲಿ ಉಗುರು ತಂದ ಅಪತ್ತು! ಹುಲಿ ಉಗುರು ಲಾಕೆಟ್‌ಗಳ ಮೇಲೆ ಯಾಕಿಷ್ಟು ಒಲವು!

Published

on

ಹುಲಿ ಉಗುರು ಲಾಕೆಟ್‌ಗಳ ಮೇಲೆ ಯಾಕಿಷ್ಟು ಒಲವು!

ಹುಲಿ ಉಗುರುಗಳ ಆಭರಣ ಸದ್ಯ ಹಾಟ್ ಟಾಪಿಕ್. ಎಲ್ಲೇ ಹೋದರೂ ಇದರದ್ದೇ ಚರ್ಚೆ.ಸಾಮಾನ್ಯವಾಗಿ ಜುವೆಲ್ಲರಿ ಶಾಪ್‌ಗಳಲ್ಲಿ ಅಸಲಿ ಹುಲಿ ಉಗುರುಗಳ ಚಿನ್ನಾಭರಣ ಮಾಡುವುದಿಲ್ಲ,ನಕಲಿ ಹುಲಿ ಉಗುರಾದ ಫೌಕ್ಸ್‌ ಟೈಗರ್ ನೇಲ್‌ ಮಾಡುತ್ತಾರೆ. ಹುಲಿ ಉಗುರುಗಳ ಆಭರಣ ಧರಿಸಿ ಫೋಟೋ ತೆಗೆಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಶೇರ್‌ ಮಾಡಿದ್ದವರೆಲ್ಲ ಆ ಫೋಟೋಗಳನ್ನು ಡಿಲೀಟ್ ಮಾಡಲಾರಂಭಿಸಿದ್ದಾರೆ. ಅನೇಕರು ಆಭರಣ ತೆಗೆದು ಅಡಗಿಸಿಟ್ಟುಕೊಂಡಿದ್ದಾರೆ. ಬಿಗ್ ಬಾಸ್ 10 ಸ್ಪರ್ಧಿ ಸಂತೋಷ್ ಹುಲಿ ಉಗುರುಗಳ ಪೆಂಡೆಂಟ್ ಧರಿಸಿದ್ದಕ್ಕೆ ಜೈಲು ಸೇರಿರುವುದು ಮತ್ತು ಇದರ ಬೆನ್ನಿಗೆ ಈ ರೀತಿ ಹುಲಿ ಉಗುರುಗಳ ಆಭರಣ ಧರಿಸಿದವರ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿರುವುದು ಇದಕ್ಕೆ ಕಾರಣ.ಅಷ್ಟೇ ಅಲ್ಲ, ಮಂಗಳವಾರ (ಅ.24) ಹುಲಿ ಉಗುರುಗಳ ಆಭರಣ ಧರಿಸಿದವರನ್ನು ಹುಡುಕಿ ಅವರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸುವ ಕೆಲಸ ಶುರುಮಾಡಿದೆ. ಈ ನಡುವೆ, ಹುಲಿ ಉಗುರುಗಳ ಆಭರಣದ ಧರಿಸಿದ್ದಾಗಿ ದೂರು ಬಂದರೆ ಕ್ರಮ ಜರುಗಿಸುವುದಾಗಿ ಕರ್ನಾಟಕದ ಅರಣ್ಯ ಸಚಿವ ಈಶ್ವರ ಖಂಡ್ರೆ ಬುಧವಾರ ಎಚ್ಚರಿಸಿದ್ದಾರೆ.ಜನರಿಗೆ ಹುಲಿ ಉಗುರು ಆಭರಣಗಳ ಮೇಲೆ ಯಾಕಿಷ್ಟು ಒಲವು ಎಂಬ ಕುತೂಹಲ ಸಹಜ.

⦁ ಹುಲಿಯನ್ನು ಪೌರುಷ ಸಂಕೇತವಾಗಿ ಜನ ಕಾಣುತ್ತಾರೆ.
⦁ ಭಾರತದ ಅನೇಕ ಭಾಗಗಳಲ್ಲಿ, ಹುಲಿ ಉಗುರುಗಳನ್ನು ದುಷ್ಟ ಶಕ್ತಿಗಳ ಹೊಡೆದೋಡಿಸುವ ಮಾಂತ್ರಿಕ ಶಕ್ತಿಯುಳ್ಳವು.
⦁ ಅದೃಷ್ಟದಾಯಿ ಎಂದು ನಂಬಲಾಗಿದೆ.
⦁ ಹುಲಿ ಉಗುರುಗಳನ್ನು ಧರಿಸಿದವರಲ್ಲಿ ಧೈರ್ಯ ಹೆಚ್ಚು ಎಂಬ ನಂಬಿಕೆಯೂ ಇದೆ.
⦁ ಹುಲಿ ಉಗುರುಗಳ ಆಭರಣ ಅಥವಾ ಹುಲಿ ಉಗುರು ಲಾಕೆಟ್‌ಗಳನ್ನು ಹೆಚ್ಚಾಗಿ ಪುರುಷರು ಧರಿಸುತ್ತಾರೆ.

ಭಾರತದಲ್ಲಿ ವನ್ಯಜೀವಿ ಸಂರಕ್ಷಣಾ ಕಾಯಿದೆ ಪ್ರಕಾರ ಅಸಲಿ ಹುಲಿ ಉಗುರುಗಳ ಆಭರಣ ಮಾಡುವುದು, ಮಾರಾಟ ಮಾಡುವುದು, ಧರಿಸುವುದು ಎಲ್ಲವೂ ಅಪರಾಧ. ಹೀಗಾಗಿಯೇ ಅಸಲಿ ಹುಲಿ ಉಗುರುಗಳ ಆಭರಣ ಧರಿಸಿದವರ ವಿರುದ್ಧ ಪ್ರಕರಣ ದಾಖಲಾಗುತ್ತಿರುವುದು ಮತ್ತು ಅವರನ್ನು ಬಂಧಿಸುತ್ತಿರುವುದು.
ಭಾರತದ ವನ್ಯಜೀವಿ ಸಂರಕ್ಷಣಾ ಕಾಯಿದೆ 1972ರ ಪ್ರಕಾರ, ಹುಲಿ ಉಗುರುಗಳ ಮಾರಾಟ, ಖರೀದಿ ಮತ್ತು ಅಕ್ರಮ ಬಳಕೆ ಅಪರಾಧ. ಇಂತಹ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧದ ಆರೋಪ ಸಾಬೀತಾದರೆ ದಂಡ ಮತ್ತು ಸಜೆ ಎರಡೂ ಸಿಗಬಹುದು. ಜೈಲು ಶಿಕ್ಷೆ ಕನಿಷ್ಠ 3 ವರ್ಷದಿಂದ 7 ವರ್ಷ ತನಕ ಸಿಗಬಹುದು.

Continue Reading

ದೇಶ

ಮಳೆ ಆರ್ಭಟಕ್ಕೆ ಶಿರಾಡಿ ಘಾಟ್ ಅಲರ್ಟ್: ಮತ್ತಷ್ಟು ಭೂಕುಸಿತ ಭೀತಿ, ವಾಹನ ಸವಾರರಿಗೆ ಎಚ್ಚರಿಕೆ

Published

on

ಹಾಸನ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಶಿರಾಡಿ ಘಾಟ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-75 (ಬೆಂಗಳೂರು–ಮಂಗಳೂರು ರಸ್ತೆ)ಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಕಪ್ಪಳ್ಳಿ ಸಮೀಪ ಮಣ್ಣು ಹಾಗೂ ಗಿಡಗಳು ರಸ್ತೆಯತ್ತ ಜಾರಿದ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಗುಡ್ಡದ ಮಣ್ಣು ಸಡಿಲಗೊಂಡು ರಸ್ತೆಯತ್ತ ಜಾರಿದೆ. ಘಟನೆ ಸಂಭವಿಸಿದ ತಕ್ಷಣವೇ ರಾಷ್ಟ್ರೀಯ ಹೆದ್ದಾರಿ ಸಿಬ್ಬಂದಿ ಜೆಸಿಬಿ ಯಂತ್ರಗಳ ಸಹಾಯದಿಂದ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಯಾವುದೇ ಅಡಚಣೆ ಆಗದಂತೆ ಕ್ರಮ ಕೈಗೊಂಡಿದ್ದಾರೆ. ಸದ್ಯ ವಾಹನ ಸಂಚಾರ ಎಂದಿನಂತೆ ಮುಂದುವರಿದಿದ್ದು, ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ.

ಚತುಷ್ಪಥ ರಸ್ತೆ ನಿರ್ಮಾಣದ ವೇಳೆ ರಸ್ತೆಯ ಎರಡೂ ಬದಿಗಳಲ್ಲಿ ಗುಡ್ಡಗಳನ್ನು ಆಳವಾಗಿ ಕತ್ತರಿಸಿರುವುದರಿಂದ ಮಳೆಗಾಲದಲ್ಲಿ ಭೂಕುಸಿತದ ಅಪಾಯ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಿರಂತರ ಮಳೆಯಿಂದ ಮಣ್ಣು ಸಡಿಲಗೊಳ್ಳುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ಮತ್ತಷ್ಟು ದೊಡ್ಡ ಪ್ರಮಾಣದ ಗುಡ್ಡ ಕುಸಿತ ಸಂಭವಿಸುವ ಸಾಧ್ಯತೆಯಿದೆ ಎಂಬ ಆತಂಕ ವ್ಯಕ್ತವಾಗಿದೆ.

ಜಿಲ್ಲಾಡಳಿತ ಈಗಾಗಲೇ ಶಿರಾಡಿ ಘಾಟ್‌ನಲ್ಲಿ ಭೂಕುಸಿತ ಸಂಭವಿಸಬಹುದಾದ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿದ್ದು, ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ಪ್ರಯಾಣಿಸುವಂತೆ ಸೂಚಿಸಿದೆ. ವಿಶೇಷವಾಗಿ ರಾತ್ರಿ ವೇಳೆಯಲ್ಲಿ ಹಾಗೂ ಭಾರೀ ಮಳೆಯ ಸಂದರ್ಭಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.

ಇದೇ ವೇಳೆ ರಸ್ತೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ವಿರುದ್ಧ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿರುವುದು ಹಾಗೂ ಕಳಪೆ ಕಾಮಗಾರಿ ಕಾರಣದಿಂದ ಕಳೆದ ಹಲವು ವರ್ಷಗಳಿಂದ ಮಳೆಗಾಲ ಬಂದಾಗಲೆಲ್ಲಾ ಇದೇ ರೀತಿಯ ಭೂಕುಸಿತ ಮರುಕಳಿಸುತ್ತಿದೆ ಎಂದು ಆರೋಪಿಸಿ, ಶಾಶ್ವತ ಪರಿಹಾರ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Continue Reading

ದೇಶ

ರಸ್ತೆ ಮಧ್ಯೆ ಹೆಡೆ ಎತ್ತಿ ನಿಂತ ನಾಗರಹಾವು: ಪ್ಯಾಲೇಸ್ ರಸ್ತೆಯಲ್ಲಿ ಅರ್ಧ ಗಂಟೆ ಸಂಚಾರ ಅಸ್ತವ್ಯಸ್ತ

Published

on

ಬೆಂಗಳೂರು: ನಗರದ ಪ್ಯಾಲೇಸ್ ರಸ್ತೆಯಲ್ಲಿ ನಾಗರಹಾವು ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಮಂಗಳವಾರ ಸಂಜೆ ನಡೆದಿದೆ. ರಸ್ತೆಯ ಮಧ್ಯಭಾಗಕ್ಕೆ ಬಂದ ನಾಗರಹಾವು ಇದ್ದಕ್ಕಿದ್ದಂತೆ ಹೆಡೆ ಬಿಚ್ಚಿ ನಿಂತಿದ್ದು, ಇದನ್ನು ಕಂಡ ವಾಹನ ಸವಾರರು ಹಾಗೂ ಸ್ಥಳೀಯರು ಬೆಚ್ಚಿಬಿದ್ದರು.

ರಸ್ತೆಯ ನಡುಭಾಗದಲ್ಲೇ ಹಾವು ಕೆಲಕಾಲ ನಿಂತಿದ್ದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಕಾರು, ಬೈಕ್ ಹಾಗೂ ಇತರೆ ವಾಹನಗಳು ಮುಂದೆ ಸಾಗಲು ಸಾಧ್ಯವಾಗದೆ, ಪ್ಯಾಲೇಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಹಾವು ಅಲ್ಲೇ ಇದ್ದ ಕಾರಣ ಸ್ಥಳದಲ್ಲಿ ಜನರು ಜಮಾಯಿಸಿ ಕುತೂಹಲದಿಂದ ವೀಕ್ಷಿಸಿದರು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಬಳಿಕ ಹಾವು ರಕ್ಷಣೆಯಲ್ಲಿ ಪರಿಣತಿ ಹೊಂದಿದ ಸಿಬ್ಬಂದಿಯ ಸಹಾಯದಿಂದ ನಾಗರಹಾವನ್ನು ಯಾವುದೇ ಹಾನಿಯಾಗದಂತೆ ಸುರಕ್ಷಿತವಾಗಿ ಹಿಡಿದು ಸ್ಥಳಾಂತರಿಸಲಾಯಿತು. ಈ ವೇಳೆ ಸಾರ್ವಜನಿಕರು ಹಾವಿನ ಸಮೀಪ ಹೋಗದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದರು.

ಹಾವು ರಕ್ಷಣೆಯಾದ ನಂತರ ಪ್ಯಾಲೇಸ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಪುನಃ ಆರಂಭಿಸಲಾಯಿತು. ಕೆಲಕಾಲ ಉಂಟಾಗಿದ್ದ ಟ್ರಾಫಿಕ್ ಜಾಮ್ ನಿವಾರಣೆಯಾಗಿದ್ದು, ಸಂಚಾರ ಎಂದಿನಂತೆ ಸುಗಮವಾಯಿತು.

ಮಳೆಗಾಲದ ಸಮಯದಲ್ಲಿ ಹಾವುಗಳು ತಮ್ಮ ವಾಸಸ್ಥಳಗಳಿಂದ ಹೊರಬಂದು ನಗರ ಪ್ರದೇಶಗಳಿಗೆ ಪ್ರವೇಶಿಸುವ ಘಟನೆಗಳು ಹೆಚ್ಚಾಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಹಾವು ಕಂಡುಬಂದರೆ ಅದನ್ನು ಹಿಡಿಯಲು ಅಥವಾ ಹತ್ತಿರ ಹೋಗಲು ಪ್ರಯತ್ನಿಸದೆ ತಕ್ಷಣ ಅರಣ್ಯ ಇಲಾಖೆ, ಹಾವು ರಕ್ಷಣಾ ಸಿಬ್ಬಂದಿ ಅಥವಾ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

Continue Reading

ದೇಶ

ತುಂಗಾ ಜಲಾಶಯ ಭರ್ತಿ: ಉಕ್ಕಡಗಾತ್ರಿ ಸ್ನಾನಘಟ್ಟ ಜಲಾವೃತ, ಭಕ್ತರಿಗೆ ಎಚ್ಚರಿಕೆ

Published

on

ಮಲೇಬೆನ್ನೂರು: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಸುರಕ್ಷತಾ ಕ್ರಮವಾಗಿ 30 ಸಾವಿರ ಕ್ಯೂಸೆಕ್ ನೀರನ್ನು ತುಂಗಭದ್ರಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದರ ಪರಿಣಾಮ ದಾವಣಗೆರೆ ಜಿಲ್ಲೆಯ ಸಮೀಪದ ಉಕ್ಕಡಗಾತ್ರಿ ಸ್ನಾನಘಟ್ಟ ಜಲಾವೃತಗೊಂಡಿದ್ದು, ನದಿ ತಟದ ಹಲವೆಡೆ ಪ್ರವಾಹದ ವಾತಾವರಣ ನಿರ್ಮಾಣವಾಗಿದೆ.

ಜಲಾಶಯಕ್ಕೆ ಪ್ರಸ್ತುತ ಸುಮಾರು 32 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ದಾಖಲಾಗಿದ್ದು, ಹೊರಹರಿವಿನ ಪ್ರಮಾಣವೂ ಹೆಚ್ಚಿಸಲಾಗಿದೆ. ಪರಿಣಾಮವಾಗಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ನದಿ ತಟದಲ್ಲಿರುವ ಹಲವು ಅಂಗಡಿ-ಮುಂಗಟ್ಟುಗಳು ಹಾಗೂ ತಗ್ಗು ಪ್ರದೇಶಗಳು ನೀರಿನಿಂದ ಆವೃತಗೊಂಡಿವೆ.

ಉಕ್ಕಡಗಾತ್ರಿಯ ಶ್ರೀ ಕರಿಬಸವೇಶ್ವರ ಅಜ್ಜಯ್ಯನ ಗದ್ದಿಗೆಗೆ ಆಗಮಿಸುವ ಭಕ್ತರು ಸಂಪ್ರದಾಯದಂತೆ ಸ್ನಾನಘಟ್ಟದಲ್ಲಿ ಪುಣ್ಯಸ್ನಾನ ಮಾಡಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಆದರೆ ಸ್ನಾನಘಟ್ಟ ಸಂಪೂರ್ಣ ಜಲಾವೃತಗೊಂಡಿರುವುದರಿಂದ ಈ ಧಾರ್ಮಿಕ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಭಕ್ತರು ಹಾಗೂ ಸಾರ್ವಜನಿಕರು ನದಿಗೆ ಇಳಿಯದಂತೆ ಗ್ರಾಮಾಡಳಿತ ಮತ್ತು ಶ್ರೀ ಕರಿಬಸವೇಶ್ವರ ಅಜ್ಜಯ್ಯನ ಗದ್ದಿಗೆ ಟ್ರಸ್ಟ್ ಜಂಟಿಯಾಗಿ ಎಚ್ಚರಿಕೆ ನೀಡಿವೆ. ಜನರು ಹಾಗೂ ಜಾನುವಾರುಗಳು ನದಿ ತೀರಕ್ಕೆ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಪ್ರವಾಹದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಹವಾಮಾನ ಇಲಾಖೆ ಇನ್ನೂ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆ, ತುಂಗಾ ಜಲಾಶಯದಿಂದ ಮತ್ತಷ್ಟು ನೀರು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಹೀಗಾದರೆ ತುಂಗಭದ್ರಾ ನದಿ ತಟದ ಗ್ರಾಮಗಳು, ಕೃಷಿ ಜಮೀನುಗಳು, ತೋಟಗಳು ಹಾಗೂ ಬೆಳೆಗಳಿಗೆ ಹಾನಿಯಾಗುವ ಆತಂಕ ರೈತರಲ್ಲಿ ಹೆಚ್ಚಾಗಿದೆ. ಜಿಲ್ಲಾಡಳಿತ ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದು, ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಮಾಹಿತಿಯನ್ನು ಮಾತ್ರ ಪಾಲಿಸುವಂತೆ ಮನವಿ ಮಾಡಿದೆ.

Continue Reading

Trending