ಸುತ್ತ ಮುತ್ತ
ಚಂದ್ರಗ್ರಹಣ ಹಿನ್ನೆಲೆ ಕುಕ್ಕೆ ದೇವರ ದರ್ಶನ ಸಮಯ ಬದಲಾವಣೆ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಸುಪ್ರಸಿದ್ಧ ದೇವಾಲಯ. ಇಲ್ಲಿ ಈಶ್ವರ ಪುತ್ರ ಷಣ್ಮುಖ ದೇವರನ್ನು ನಾಗ ರೂಪದಲ್ಲಿ ಸುಬ್ರಹ್ಮಣ್ಯ ಎಂಬ ಹೆಸರಿನಲ್ಲಿ ಆರಾಧಿಸಲಾಗುತ್ತದೆ.ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುವ ಭಕ್ತರಿಗೆ ಮಹತ್ವದ ಸುದ್ದಿಯೊಂದಿದೆ. ಮುಂದಿನ ಶನಿವಾರ (ಅ. 28) ರಂದು ದೇವರ ದರ್ಶನ ಸಮಯ ಬದಲಾವಣೆ ಮಾಡಲಾಗಿದೆ.ಚಂದ್ರಗ್ರಹಣ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅಕ್ಟೋಬರ್ 28ರ ಶನಿವಾರ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು ಸಂಜೆ 6.30ರ ಬಳಿಕ ದೇವರ ದರ್ಶನ ಬಂದ್ ಇರಲಿದೆ. ಸಂಜೆಯ ಆಶ್ಲೇಷಾ ಬಲಿ ಹಾಗೂ ರಾತ್ರಿಯ ಅನ್ನದಾನ ಸೇವೆಯೂ ಬಂದ್ ಎಂದು ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಶನಿವಾರ ರಾತ್ರಿ 01.04 ಗಂಟೆಗೆ ಗ್ರಹಣ ಸ್ಪರ್ಶವಾಗಿ ರಾತ್ರಿ 02.24 ಗಂಟೆಗೆ ಗ್ರಹಣ ಮೋಕ್ಷ ಪ್ರಾಪ್ತಿಯಾಗಲಿದೆ. ಭಾನುವಾರ ಎಂದಿನಂತೆ ಮಹಾಪೂಜೆ, ದೇವರ ದರ್ಶನ ನಡೆಯಲಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.