ಕ್ರೀಡೆ
ಆಸ್ಟ್ರೇಲಿಯಾ ಗೆಲುವಿನಿಂದ ಪಾಕ್ಗೆ ಒತ್ತಡ, ಎಲ್ಲಾ ತಂಡಗಳ ಸೆಮಿಫೈನಲ್ಸ್ಗೆ ಲೆಕ್ಕಾಚಾರ
ಹೊಸದಿಲ್ಲಿ: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಮೊದಲಾವಧಿ ಬಹುತೇಕ ಮುಗಿದಿದೆ. ಇದೀಗ ವಿಶ್ವಕಪ್ ಸೆಮಿಫೈನಲ್ಸ್ಗೆ ಅರ್ಹತೆ ಪಡೆಯುವ ಸಲುವಾಗಿ ಟೂರ್ನಿಯ ಎರಡನೇ ಅವಧಿಯ ಪಂದ್ಯಗಳು ಎಲ್ಲಾ ತಂಡಗಳಿಗೆ ನಿರ್ಣಯಕವಾಗಿವೆ. ಬುಧವಾರ ನೆದರ್ಲೆಂಡ್ಸ್ ವಿರುದ್ಧ ಆಸ್ಟ್ರೇಲಿಯಾ ತಂಡ 309 ರನ್ಗಳ ಭಾರಿ ಅಂತರದಲ್ಲಿ ಗೆಲುವು ಪಡೆದ ಬಳಿಕ ಕೆಲ ತಂಡಗಳ ಸೆಮಿಫೈನಲ್ಸ್ ಹಾದಿ ಅತ್ಯಂತ ಕಠಿಣವಾಗಿದೆ.
ಅದರಂತೆ ಹಲವು ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿದ್ದ ಪಾಕಿಸ್ತಾನ ತಂಡ ಆರಂಭಿಕ ಎರಡೂ ಪಂದ್ಯಗಳಲ್ಲಿ ಗೆಲುವು ಪಡೆದ ಬಳಿಕ ಹ್ಯಾಟ್ರಿಕ್ ಸೋಲು ಅನುಭವಿಸಿದೆ. ಭಾರತ, ಆಸ್ಟ್ರೇಲಿಯಾ ಹಾಗೂ ಅಫಘಾನಿಸ್ತಾನ ವಿರುದ್ಧದ ಪಂದ್ಯಗಳಲ್ಲಿ ಪಾಕ್ ಸೋಲು ಅನುಭವಿಸಿತ್ತು. ಆದರೂ ಇನ್ನುಳಿದ ಪಂದ್ಯಗಳನ್ನು ಗೆದ್ದು ಸೆಮಿಫೈನಲ್ಸ್ಗೆ ಅರ್ಹತೆ ಪಡೆಯಬೇಕೆಂದು ಪ್ಲಾನ್ ಮಾಡಿಕೊಂಡಿತ್ತು. ಆದರೆ, ಆಸ್ಟ್ರೇಲಿಯಾ ತಂಡ ದಾಖಲೆಯ ಜಯ ಪಡೆದು ಪಾಯಿಂಟ್ಸ್ ಟೇಬಲ್ನಲ್ಲಿ ನಾಲ್ಕನೇ ಸ್ಥಾನಕ್ಕೆ ಲಗ್ಗೆ ಇಟ್ಟಿರುವ ಕಾರಣ, ಪಾಕ್ಗೆ ಭಾರಿ ಹಿನ್ನಡೆಯಾಗಿದೆ.
ವಿಶ್ವಕಪ್ ಟೂರ್ನಿಯಲ್ಲಿ ಆರಂಭಿಕ ಎರಡೂ ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದ ಆಸ್ಟ್ರೇಲಿಯಾ ತಂಡ, ನಂತರ ಸತತ ಮೂರೂ ಪಂದ್ಯಗಳಲ್ಲಿ ಗೆಲುವು ಪಡೆಯುವ ಮೂಲಕ ಭರ್ಜರಿ ಕಮ್ಬ್ಯಾಕ್ ಮಾಡಿದೆ. ಅದರಲ್ಲೂ ಬುಧವಾರ ನೆದರ್ಲೆಂಡ್ಸ್ ವಿರುದ್ಧ 309 ರನ್ಗಳ ಭಾರಿ ಅಂತರದ ಜಯದಿಂದ ಆಸ್ಟ್ರೇಲಿಯಾ ತಂಡದ ರನ್ರೇಟ್ನಲ್ಲಿ ಏರಿಕೆಯಾಗಿದೆ. ಆ ಮೂಲಕ ಟೂರ್ನಿಯ ಪಾಯಿಂಟ್ಸ್ ಟೇಬಲ್ನಲ್ಲಿ ನಾಲ್ಕನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ದಿಲ್ಲಿಯ ಅರುಣ್ ಜೆಟ್ಲಿ ಸ್ಟೇಡಿಯಂನಲ್ಲಿ 40ನೇ ಓವರ್ನಲ್ಲಿ ಕ್ರೀಸ್ಗೆ ಬಂದ ಮ್ಯಾಕ್ಸ್ವೆಲ್ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ನೆದರ್ಲೆಂಡ್ಸ್ ಬೌಲರ್ಗಳಿಗೆ ಭಯ ಹುಟ್ಟಿಸಿದರು. ಮಕ್ಕಳ ಬೌಲಿಂಗ್ಗೆ ಆಡುವಂತೆ ಮ್ಯಾಕ್ಸ್ವೆಲ್ ಬ್ಯಾಟ್ ಬೀಸಿದರು. ಅವರು ಕೇವಲ 44 ಎಸೆತಗಳಲ್ಲಿ 9 ಬೌಂಡರಿ ಮತ್ತು 8 ಸಿಕ್ಸರ್ಗಳ ಮೂಲಕ 240.91 ಸ್ಟ್ರೈಕ್ ರೇಟ್ನಲ್ಲಿ 106 ರನ್ ಬಾರಿಸಿದರು. ಇದರ ಪರಿಣಾಮ ಹಲವು ತಂಡಗಳು ಸೆಮಿಫೈನಲ್ಸ್ ರೇಸ್ನಿಂದ ಬಹುತೇಕ ಹೊರಬಿದ್ದಿವೆ.
ವಿಶ್ವಕಪ್ ಸೆಮಿಫೈನಲ್ಸ್ಗೆ ಅರ್ಹತೆ ಪಡೆಯಲು ಒಂದು ತಂಡಕ್ಕೆ 7 ಗೆಲುವುಗಳು ಅಂದರೆ 14 ಅಂಕಗಳ ಅಗತ್ಯವಿದೆ. ಆದರೆ 12 ಅಂಕಗಳನ್ನು ಪಡೆದರೂ ಅಗ್ರ-4ಕ್ಕೆ ಪ್ರವೇಶ ಪಡೆಯಬಹುದು. ಟೂರ್ನಿಯ ಸೆಮಿಫೈನಲ್ಸ್ಗೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಮುಂದಿನ ಪಂದ್ಯಗಳು ಎಲ್ಲಾ ತಂಡಗಳಿಗೆ ನಿರ್ಣಾಯಕವಾಗಿವೆ. ಪ್ರಸ್ತುತ ಭಾರತ, ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳ ಸೆಮಿಫೈನಲ್ಸ್ ಹಾದಿ ಸುಲಭವಾಗಿದೆ. ಭಾರತ 5 ಗೆಲುವಿನ ನಂತರ 10 ಅಂಕಗಳನ್ನು ಹೊಂದಿದ್ದರೆ, ದಕ್ಷಿಣ ಆಫ್ರಿಕಾ 5 ರಲ್ಲಿ 4 ಗೆಲುವಿನ ನಂತರ 8 ಅಂಕಗಳನ್ನು ಪಡೆದುಕೊಂಡಿದೆ ಹಾಗೂ ನ್ಯೂಜಿಲೆಂಡ್ 5 ರಲ್ಲಿ 4 ಗೆಲುವಿನ ಬಳಿಕ 8 ಅಂಕಗಳನ್ನು ಹೊಂದಿದೆ. ಈ ಮೂರೂ ತಂಡಗಳ ನೆಟ್ ರನ್ರೇಟ್ ಪ್ಲಸ್ ಆಗಿದೆ.
ಆಸ್ಟ್ರೇಲಿಯಾ 6 ಅಂಕಗಳೊಂದಿಗೆ +1.142ರ ಅತ್ಯುತ್ತಮ ರನ್ರೇಟ್ ಹೊಂದಿದೆ. ಆ ಮೂಲಕ ನಾಲ್ಕನೇ ಸ್ಥಾನದಲ್ಲಿದೆ. ಪಾಕಿಸ್ತಾನ ತಂಡ 5ನೇ ಸ್ಥಾನದಲ್ಲಿದ್ದು, ಅಪಘಾನಿಸ್ತಾನ ಆರನೇ ಸ್ಥಾನದಲ್ಲಿದೆ. ಈ ಎರಡೂ ತಂಡಗಳು ತಲಾ 2 ಗೆಲುವಿನಿಂದ 4 ಅಂಕಗಳನ್ನು ಹೊಂದಿವೆ. ಈ ಎರಡೂ ತಂಡಗಳಿಗೆ ಇನ್ನೂ 4 ಪಂದ್ಯಗಳು ಬಾಕಿ ಇವೆ ಹಾಗೂ 12 ಅಂಕಗಳನ್ನು ಕಲೆ ಹಾಕಲು ಮಾತ್ರ ಅವಕಾಶವಿದೆ. ಆದರೆ, ಆಸ್ಟ್ರೇಲಿಯಾ ಇನ್ನುಳಿದ 4ರಲ್ಲಿಯೂ ಗೆದ್ದರೆ 14 ಅಂಕಗಳನ್ನು ದಾಖಲಿಸಲಿದೆ. ಇದು ಈ ಎರಡೂ ತಂಡಗಳಿಗೆ ಹಿನ್ನಡೆಯನ್ನು ತಂದೊಡ್ಡಬಹುದು. ಇನ್ನು ಹಾಲಿ ಚಾಂಪಿಯನ್ಸ್ ಇಂಗ್ಲೆಂಡ್ ಆಡಿರುವ 4 ಪಂದ್ಯಗಳಿಂದ ಮೂರರಲ್ಲಿ ಸೋತು, ಕೇವಲ ಒಂದರಲ್ಲಿ ಜಯಿಸಿದೆ. ಆದರೂ ಇನ್ನುಳಿದ 5 ಪಂದ್ಯಗಳಲ್ಲಿ ಗೆದ್ದು ಇಂಗ್ಲೆಂಡ್ ಕೂಡ 12 ಅಂಕಗಳನ್ನು ಕಲೆ ಹಾಕಲಿದೆ.
ಮತ್ತೊಂದೆಡೆ ಬಾಂಗ್ಲಾದೇಶ ಮತ್ತು ನೆದರ್ಲೆಂಡ್ಸ್ ತಂಡಗಳು ತಲಾ 5 ಪಂದ್ಯಗಳನ್ನು ಆಡಿದ್ದು, ಒಂದೊಂದು ಪಂದ್ಯದಲ್ಲಿ ಜಯಿಸಿವೆ. ಆ ಮೂಲಕ ಟೂರ್ನಿಯ ಸೆಮಿಫೈನಲ್ಸ್ ರೇಸ್ನಿಂದ ಬಹುತೇಕ ಹೊರಬಿದ್ದಿವೆ. ಆದರೆ, ಈ ತಂಡಗಳು ಇನ್ನುಳಿದ 4 ಪಂದ್ಯಗಳಲ್ಲಿ ಗೆದ್ದರೂ ಒಟ್ಟಾರೆ 9 ಅಂಕಗಳನ್ನು ಕಲೆ ಹಾಕಬಹುದಷ್ಟೆ. ಈ ಎರಡೂ ತಂಡಗಳು ಎದುರಾಳಿ ತಂಡಗಳನ್ನು ಸೋಲಿಸಿದರೆ, ಸೆಮಿಫೈನಲ್ಸ್ ಚಿತ್ರಣ ಸ್ವಲ್ಪ ಬದಲಾಗಬಹುದು. ಅಂದ ಹಾಗೆ ಇನ್ನುಳಿದ ಪಂದ್ಯಗಳನ್ನು ಗೆದ್ದು ಟೂರ್ನಿಯಿಂದ ಗೌರವಯುತವಾಗಿ ನಿರ್ಗಮಿಸಿಲು ಬಾಂಗ್ಲಾ, ನೆದರ್ಲೆಂಡ್ಸ್ ಎದುರು ನೋಡುತ್ತಿವೆ.
ಕ್ರೀಡೆ
IND vs PAK ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಉಸ್ಮಾನ್ ತಾರಿಕ್ ಎಚ್ಚರಿಕೆ: “ಭಾರತೀಯರು ನನ್ನ ಬೌಲಿಂಗ್ಗೆ ಹೆದರುತ್ತಿದ್ದಾರೆ!”
ಟಿ20 ವಿಶ್ವಕಪ್ ಟೂರ್ನಿಯ ಬಹು ನಿರೀಕ್ಷಿತ ಭಾರತ–ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ಫೆಬ್ರವರಿ 15ರಂದು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿದೆ. ಶಿವರಾತ್ರಿ ಹಬ್ಬದಂದೇ ನಡೆಯಲಿರುವ ಈ ನಿರ್ಣಾಯಕ ಸಮರಕ್ಕಾಗಿ ಎರಡೂ ತಂಡಗಳು ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ.
ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ, ಫೆ.12ರಂದು ನಮೀಬಿಯಾ ವಿರುದ್ಧ ಕಣಕ್ಕಿಳಿದು ಗೆಲುವಿನ ಆತ್ಮವಿಶ್ವಾಸದೊಂದಿಗೆ ಪಾಕಿಸ್ತಾನ ಎದುರಿಸಲು ಸಜ್ಜಾಗಿದೆ.
ಈ ಮಧ್ಯೆ, ಪಾಕಿಸ್ತಾನದ ನಿಗೂಢ ಸ್ಪಿನ್ನರ್ ಉಸ್ಮಾನ್ ತಾರಿಕ್ ಭಾರತಕ್ಕೆ ಬಲವಾದ ಎಚ್ಚರಿಕೆ ನೀಡಿದ್ದಾರೆ. “ಭಾರತೀಯರು ನನ್ನ ಬೌಲಿಂಗ್ಗೆ ಹೆದರುತ್ತಿದ್ದಾರೆ. ಅದಕ್ಕಾಗಿ ನನ್ನ ಬೌಲಿಂಗ್ ಶೈಲಿಯ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಸಂಚಲನಕಾರಿ ಹೇಳಿಕೆ ನೀಡಿದ್ದಾರೆ.
ಮಾತಿನ ಸಮರ ಜೋರಾಗಿದೆ
ಟಿ20 ವಿಶ್ವಕಪ್ ಈಗ ರೋಚಕ ಹಂತ ತಲುಪಿದ್ದು, ಈಗಾಗಲೇ 15ಕ್ಕೂ ಹೆಚ್ಚು ಪಂದ್ಯಗಳು ಪೂರ್ಣಗೊಂಡಿವೆ. ಭಾರತ–ಪಾಕಿಸ್ತಾನ ಪಂದ್ಯ ನಡೆಯುತ್ತದೆಯೇ? ಎಂಬ ಅನುಮಾನಕ್ಕೆ ತೆರೆಬಿದ್ದಿದ್ದು, ಪಾಕಿಸ್ತಾನ ಪಂದ್ಯಕ್ಕೆ ಒಪ್ಪಿಗೆ ನೀಡಿದೆ.
ಪಂದ್ಯ ಖಚಿತವಾದ ಬೆನ್ನಲ್ಲೇ ಎರಡೂ ತಂಡಗಳ ನಡುವೆ ಮಾತಿನ ಸಮರ ಜೋರಾಗಿದೆ. ಪಾಕಿಸ್ತಾನಿ ಆಟಗಾರರು ಭಾರತವನ್ನು ಸೋಲಿಸುತ್ತೇವೆ ಎಂದು ಹೇಳುತ್ತಿದ್ದರೆ, ಭಾರತೀಯರು ಪಾಕಿಸ್ತಾನವನ್ನು ಮಣಿಸುತ್ತೇವೆ ಎಂದು ತಿರುಗೇಟು ನೀಡುತ್ತಿದ್ದಾರೆ.
ತಾರಿಕ್ ಸಮರ್ಥನೆ
ಭಾರತೀಯರು ನನ್ನ ಬೌಲಿಂಗ್ ಕುರಿತು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಐಸಿಸಿ ನಿಯಮಗಳ ಪ್ರಕಾರ ನನ್ನ ಬೌಲಿಂಗ್ ಶೈಲಿ ಮಾನ್ಯವಾಗಿದೆ ಎಂದು ಉಸ್ಮಾನ್ ತಾರಿಕ್ ಸಮರ್ಥಿಸಿಕೊಂಡಿದ್ದಾರೆ.
“ಭಾರತೀಯ ಆಟಗಾರರಿಗೆ ನನ್ನ ಬೌಲಿಂಗ್ನಿಂದ ಹೆಚ್ಚುವರಿ ಒತ್ತಡ ಇದೆ. ಅದಕ್ಕಾಗಿಯೇ ಆರೋಪ ಮಾಡುತ್ತಿದ್ದಾರೆ. ಫೆಬ್ರವರಿ 15ರಂದು ಭಾರತದ ಅಗ್ರ ಕ್ರಮಾಂಕವನ್ನು ಕೆಡವುತ್ತೇನೆ” ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ನನ್ನ ಬಗ್ಗೆ ಏನು ಚರ್ಚೆ ನಡೆಯುತ್ತಿದೆ ಎಂಬುದನ್ನು ನಾನು ಪರಿಗಣಿಸುವುದಿಲ್ಲ. ನನ್ನ ಗಮನ ಪಂದ್ಯದಲ್ಲೇ ಇದೆ” ಎಂದು ತಾರಿಕ್ ಹೇಳಿದ್ದಾರೆ.
ಕ್ರೀಡೆ
RCB ಮಾರಾಟ ಪ್ರಕ್ರಿಯೆ ಆರಂಭ: ಜೈಲಿನಿಂದಲೇ ಸುಕೇಶ್ ₹8,300 ಕೋಟಿ ಬಿಡ್?
ಬೆಂಗಳೂರು, ಫೆ.12: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾರಾಟ ಪ್ರಕ್ರಿಯೆಯ ಮೊದಲ ಹಂತ ಅಧಿಕೃತವಾಗಿ ಆರಂಭವಾಗಿದೆ. ಫ್ರಾಂಚೈಸಿಯ ಮಾಲೀಕತ್ವ ಹೊಂದಿರುವ ಡಿಯಾಜಿಯೋ (Diageo) ಕಂಪನಿಯು ಆಸಕ್ತ ಖರೀದಿದಾರರಿಗೆ ಮಾಹಿತಿ ಪತ್ರಗಳನ್ನು ವಿತರಿಸಿದೆ. ಈ ನಡುವೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ಅವರು RCB ಖರೀದಿಗೆ ಬಿಡ್ ಸಲ್ಲಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಕೇಂದ್ರ ಕಾನೂನು ಸಚಿವಾಲಯದ ಅಧಿಕಾರಿ ಎಂದು ಬಿಂಬಿಸಿಕೊಂಡು ವಂಚನೆ ಆರೋಪದಡಿ ಬಂಧನದಲ್ಲಿರುವ ಸುಕೇಶ್, ತಮ್ಮ ಎಲ್ಎಸ್ ಹೋಲ್ಡಿಂಗ್ಸ್ (LS Holdings) ಸಂಸ್ಥೆ ಮೂಲಕ ಡಿಯಾಜಿಯೋಗೆ ಪತ್ರ ಬರೆದು 1 ಬಿಲಿಯನ್ ಯುಎಸ್ ಡಾಲರ್ (ಸುಮಾರು ₹8,300 ಕೋಟಿ) ಮೊತ್ತದ ಸಂಪೂರ್ಣ ನಗದು ಬಿಡ್ ನೀಡಲು ಸಿದ್ಧ ಎಂದು ತಿಳಿಸಿದ್ದಾರೆ. 48 ಗಂಟೆಗಳೊಳಗೆ ಪಾವತಿ ಪೂರ್ಣಗೊಳಿಸಲು ಸಿದ್ಧತೆ ಇದೆ ಎಂದು ಕೂಡ ಹೇಳಿದ್ದಾರೆ.
ಸುಕೇಶ್, RCB ಅನ್ನು ತಮ್ಮ ತವರು ತಂಡ ಎಂದು ಬಣ್ಣಿಸಿ, ಫ್ರಾಂಚೈಸಿಯನ್ನು ಸ್ವಾಧೀನಪಡಿಸಿಕೊಂಡರೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ಗೆ ಉಡುಗೊರೆಯಾಗಿ ನೀಡುವುದಾಗಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಇದೇವರೆಗೆ 9 ಬಿಡ್ಗಳು ಸಲ್ಲಿಕೆಯಾಗಿವೆ ಎಂದು ವರದಿಗಳು ಸೂಚಿಸುತ್ತವೆ. ಸೀರಂ ಇನ್ಸ್ಟಿಟ್ಯೂಟ್ನ ಅದಾರ್ ಪೂನಾವಾಲಾ ಹಾಗೂ ಮ್ಯಾಂಚೆಸ್ಟರ್ ಯುನೈಟೆಡ್ ಸಹ ಮಾಲೀಕತ್ವ ಹೊಂದಿರುವ ಗ್ಲೇಝರ್ಸ್ ಕಂಪನಿಗಳು ಪೈಪೋಟಿಯಲ್ಲಿ ಇದ್ದಾರೆ. ಗ್ಲೇಝರ್ಸ್ ಸಂಸ್ಥೆ ಸುಮಾರು ₹16,300 ಕೋಟಿ ಮೊತ್ತದ ಬಿಡ್ ಸಲ್ಲಿಸಿದೆ ಎನ್ನಲಾಗಿದೆ.
RCB ಮಾರಾಟ ಪ್ರಕ್ರಿಯೆ ಈಗ ಕ್ರಿಕೆಟ್ ಮತ್ತು ಉದ್ಯಮ ವಲಯದಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ.
ಕ್ರೀಡೆ
ಕನ್ನಡದ ಹೆಮ್ಮೆ ಜಿಆರ್ ವಿಶ್ವನಾಥ್ಗೆ ಜನ್ಮದಿನ ಸಂಭ್ರಮ: ವಿಶಿಯ ಕಲಾತ್ಮಕ ಬ್ಯಾಟಿಂಗ್ಗೆ 77ನೇ ವಸಂತ
ಬೆಂಗಳೂರು: ಭಾರತೀಯ ಕ್ರಿಕೆಟ್ ಇತಿಹಾಸದ ಕಲಾತ್ಮಕ ಬ್ಯಾಟ್ಸ್ಮನ್ಗಳಲ್ಲಿ ಅಗ್ರಸ್ಥಾನ ಪಡೆದಿರುವ ಗುಂಡಪ್ಪ ರಂಗನಾಥ್ ವಿಶ್ವನಾಥ್ (GR Vishwanath) ಅವರಿಗೆ ಫೆಬ್ರವರಿ 12ರಂದು ಜನ್ಮದಿನ ಸಂಭ್ರಮ. ವಿಶಿ ಕ್ರೀಸಿಗೆ ಬಂದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಬ್ಬದ ವಾತಾವರಣವೇ ಸೃಷ್ಟಿಯಾಗುತ್ತಿತ್ತು. ಶತಕ ಸಿಡಿಸಿದ ಯಾವುದೇ ಪಂದ್ಯದಲ್ಲಿ ಭಾರತ ಸೋತ ಉದಾಹರಣೆ ಇಲ್ಲ — ಒಂದೋ ಗೆಲುವು, ಇಲ್ಲವೇ ಡ್ರಾ!
1969ರಲ್ಲಿ ಕಾನ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಾದಾರ್ಪಣೆ ಮಾಡಿದ ವಿಶಿ, ಮೊದಲ ಇನ್ನಿಂಗ್ಸ್ನಲ್ಲಿ ಶೂನ್ಯಕ್ಕೆ ಔಟ್ ಆದರೂ, ಎರಡನೇ ಇನ್ನಿಂಗ್ಸ್ನಲ್ಲಿ 25 ಬೌಂಡರಿಗಳೊಂದಿಗೆ 137 ರನ್ ಸಿಡಿಸಿ ಕ್ರಿಕೆಟ್ ಲೋಕದ ಗಮನ ಸೆಳೆದರು. ಅವರ ಸ್ಕ್ವೇರ್ ಕಟ್ ಶಾಟ್ ಕ್ರಿಕೆಟ್ ಅಭಿಮಾನಿಗಳ ಮನಸ್ಸು ಗೆದ್ದಿತ್ತು.
ಗವಾಸ್ಕರ್ ಪ್ರಶಂಸೆ, ಹೆಲ್ಮೆಟ್ ಇಲ್ಲದೆ ವೇಗದ ಬೌಲರ್ ಎದುರಿಸಿದ ಧೈರ್ಯ
“ನನ್ನಂತಹ ನೂರು ಗವಾಸ್ಕರ್ ಬರಬಹುದು, ಆದರೆ ವಿಶಿಯಂತವರು ಬರಲಾರರು” ಎಂಬ ಸುನಿಲ್ ಗವಾಸ್ಕರ್ ಮಾತುಗಳು ವಿಶಿಯ ಮಹತ್ವ ಸಾರುತ್ತವೆ. ಆಂಡಿ ರಾಬರ್ಟ್ಸ್, ಜೆಫ್ ಥಾಂಪ್ಸನ್ಂತಹ ವೇಗದ ಬೌಲರ್ಗಳನ್ನು ಹೆಲ್ಮೆಟ್ ಇಲ್ಲದೆ ಎದುರಿಸಿದ ಧೈರ್ಯವೂ ವಿಶಿಯ ವಿಶೇಷ.
ಕ್ರೀಡಾಸ್ಪೂರ್ತಿಗೆ ಮಾದರಿ
1980ರ ಸುವರ್ಣ ಮಹೋತ್ಸವ ಟೆಸ್ಟ್ನಲ್ಲಿ ಅಂಪೈರ್ ತಪ್ಪು ತೀರ್ಪು ನೀಡಿದಾಗ ಬಾಬ್ ಟೇಲರ್ ಅವರನ್ನು ಮರು ಕ್ರೀಸಿಗೆ ಕರೆಸಿದ ವಿಶಿಯ ಕ್ರೀಡಾಸ್ಫೂರ್ತಿ ಕ್ರಿಕೆಟ್ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದೆ.
ರಣಜಿ ಫೈನಲ್ಗೂ ಮದುವೆಯೂ ಒಂದೇ ಸಮಯ
1978ರಲ್ಲಿ ಗವಾಸ್ಕರ್ ಸಹೋದರಿ ಕವಿತಾ ಅವರನ್ನು ಮದುವೆಯಾದ ವಿಶಿ, ಮದುವೆಯ ಬಳಿಕ ನೇರವಾಗಿ ಮೈದಾನಕ್ಕಿಳಿದು ರಣಜಿ ಫೈನಲ್ನಲ್ಲಿ 247 ರನ್ ಸಿಡಿಸಿ ಕರ್ನಾಟಕಕ್ಕೆ ಕಿರೀಟ ತಂದುಕೊಟ್ಟರು.
ವಿಶಿಯ ಮೂರು ಸ್ಮರಣೀಯ ಇನ್ನಿಂಗ್ಸ್
- 1975, ಮದ್ರಾಸ್: ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 97 ರನ್
- 1969, ಕಾನ್ಪುರ: ಪಾದಾರ್ಪಣೆ ಪಂದ್ಯದಲ್ಲೇ 137 ರನ್
- 1981, ಎಂಸಿಜಿ: ಆಸ್ಟ್ರೇಲಿಯಾ ವಿರುದ್ಧ 114 ರನ್
77ನೇ ವಸಂತಕ್ಕೆ ಕಾಲಿಡುತ್ತಿರುವ ಕನ್ನಡದ ಹೆಮ್ಮೆ ಜಿಆರ್ ವಿಶ್ವನಾಥ್ ಅವರಿಗೆ ಹಾರ್ದಿಕ ಶುಭಾಶಯಗಳು.
-
ಬೆಂಗಳೂರು21 hours agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ20 hours agoGBA ELECTION : 5 ಪಾಲಿಕೆಗಳಿಗೆ ವಾರ್ಡ್ ಗಡಿ ಪಾಲನೆ ಕಡ್ಡಾಯ – ಮುಖ್ಯ ಆಯುಕ್ತ ಸೂಚನೆ
-
ದೇಶ18 hours ago2026 ಪ್ರೇಮಿಗಳ ದಿನ ಶನಿವಾರ: ರೋಮ್ಯಾಂಟಿಕ್ ವಾರಾಂತ್ಯಕ್ಕೆ ಟಾಪ್ 5 ಪ್ರವಾಸ ತಾಣಗಳು
-
ಕ್ರೀಡೆ15 hours agoIND vs PAK ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಉಸ್ಮಾನ್ ತಾರಿಕ್ ಎಚ್ಚರಿಕೆ: “ಭಾರತೀಯರು ನನ್ನ ಬೌಲಿಂಗ್ಗೆ ಹೆದರುತ್ತಿದ್ದಾರೆ!”
-
ದೇಶ18 hours agoLATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ
-
ಅಪರಾಧ20 hours agoCRIME : ಬೆಂಗಳೂರಿನಲ್ಲಿ ಮತ್ತೆ ರೋಡ್ ರೇಜ್: ಬಾನೆಟ್ ಮೇಲೆ ವ್ಯಕ್ತಿ ಇದ್ದರೂ 1 ಕಿ.ಮೀ ಕಾರು ಚಲಾಯಿಸಿದ ಚಾಲಕ
-
ದೇಶ16 hours agoHAL ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಗಂಭೀರ ಆರೋಪ: ಅರವಿಂದ್ ರೆಡ್ಡಿ ಕಾಲಿಗೆ ಬೀಳಲು ಬೆದರಿಕೆ?
-
ದೇಶ19 hours agoBHARATH BANDH : ದೇಶವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರ ಹೋರಾಟ, ಹಲವು ರಾಜ್ಯಗಳಲ್ಲಿ ಬಂದ್ ಪರಿಣಾಮ
