ಕ್ರೀಡೆ
ಆಸ್ಟ್ರೇಲಿಯಾ ಗೆಲುವಿನಿಂದ ಪಾಕ್ಗೆ ಒತ್ತಡ, ಎಲ್ಲಾ ತಂಡಗಳ ಸೆಮಿಫೈನಲ್ಸ್ಗೆ ಲೆಕ್ಕಾಚಾರ

ಹೊಸದಿಲ್ಲಿ: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಮೊದಲಾವಧಿ ಬಹುತೇಕ ಮುಗಿದಿದೆ. ಇದೀಗ ವಿಶ್ವಕಪ್ ಸೆಮಿಫೈನಲ್ಸ್ಗೆ ಅರ್ಹತೆ ಪಡೆಯುವ ಸಲುವಾಗಿ ಟೂರ್ನಿಯ ಎರಡನೇ ಅವಧಿಯ ಪಂದ್ಯಗಳು ಎಲ್ಲಾ ತಂಡಗಳಿಗೆ ನಿರ್ಣಯಕವಾಗಿವೆ. ಬುಧವಾರ ನೆದರ್ಲೆಂಡ್ಸ್ ವಿರುದ್ಧ ಆಸ್ಟ್ರೇಲಿಯಾ ತಂಡ 309 ರನ್ಗಳ ಭಾರಿ ಅಂತರದಲ್ಲಿ ಗೆಲುವು ಪಡೆದ ಬಳಿಕ ಕೆಲ ತಂಡಗಳ ಸೆಮಿಫೈನಲ್ಸ್ ಹಾದಿ ಅತ್ಯಂತ ಕಠಿಣವಾಗಿದೆ.
ಅದರಂತೆ ಹಲವು ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿದ್ದ ಪಾಕಿಸ್ತಾನ ತಂಡ ಆರಂಭಿಕ ಎರಡೂ ಪಂದ್ಯಗಳಲ್ಲಿ ಗೆಲುವು ಪಡೆದ ಬಳಿಕ ಹ್ಯಾಟ್ರಿಕ್ ಸೋಲು ಅನುಭವಿಸಿದೆ. ಭಾರತ, ಆಸ್ಟ್ರೇಲಿಯಾ ಹಾಗೂ ಅಫಘಾನಿಸ್ತಾನ ವಿರುದ್ಧದ ಪಂದ್ಯಗಳಲ್ಲಿ ಪಾಕ್ ಸೋಲು ಅನುಭವಿಸಿತ್ತು. ಆದರೂ ಇನ್ನುಳಿದ ಪಂದ್ಯಗಳನ್ನು ಗೆದ್ದು ಸೆಮಿಫೈನಲ್ಸ್ಗೆ ಅರ್ಹತೆ ಪಡೆಯಬೇಕೆಂದು ಪ್ಲಾನ್ ಮಾಡಿಕೊಂಡಿತ್ತು. ಆದರೆ, ಆಸ್ಟ್ರೇಲಿಯಾ ತಂಡ ದಾಖಲೆಯ ಜಯ ಪಡೆದು ಪಾಯಿಂಟ್ಸ್ ಟೇಬಲ್ನಲ್ಲಿ ನಾಲ್ಕನೇ ಸ್ಥಾನಕ್ಕೆ ಲಗ್ಗೆ ಇಟ್ಟಿರುವ ಕಾರಣ, ಪಾಕ್ಗೆ ಭಾರಿ ಹಿನ್ನಡೆಯಾಗಿದೆ.
ವಿಶ್ವಕಪ್ ಟೂರ್ನಿಯಲ್ಲಿ ಆರಂಭಿಕ ಎರಡೂ ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದ ಆಸ್ಟ್ರೇಲಿಯಾ ತಂಡ, ನಂತರ ಸತತ ಮೂರೂ ಪಂದ್ಯಗಳಲ್ಲಿ ಗೆಲುವು ಪಡೆಯುವ ಮೂಲಕ ಭರ್ಜರಿ ಕಮ್ಬ್ಯಾಕ್ ಮಾಡಿದೆ. ಅದರಲ್ಲೂ ಬುಧವಾರ ನೆದರ್ಲೆಂಡ್ಸ್ ವಿರುದ್ಧ 309 ರನ್ಗಳ ಭಾರಿ ಅಂತರದ ಜಯದಿಂದ ಆಸ್ಟ್ರೇಲಿಯಾ ತಂಡದ ರನ್ರೇಟ್ನಲ್ಲಿ ಏರಿಕೆಯಾಗಿದೆ. ಆ ಮೂಲಕ ಟೂರ್ನಿಯ ಪಾಯಿಂಟ್ಸ್ ಟೇಬಲ್ನಲ್ಲಿ ನಾಲ್ಕನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ದಿಲ್ಲಿಯ ಅರುಣ್ ಜೆಟ್ಲಿ ಸ್ಟೇಡಿಯಂನಲ್ಲಿ 40ನೇ ಓವರ್ನಲ್ಲಿ ಕ್ರೀಸ್ಗೆ ಬಂದ ಮ್ಯಾಕ್ಸ್ವೆಲ್ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ನೆದರ್ಲೆಂಡ್ಸ್ ಬೌಲರ್ಗಳಿಗೆ ಭಯ ಹುಟ್ಟಿಸಿದರು. ಮಕ್ಕಳ ಬೌಲಿಂಗ್ಗೆ ಆಡುವಂತೆ ಮ್ಯಾಕ್ಸ್ವೆಲ್ ಬ್ಯಾಟ್ ಬೀಸಿದರು. ಅವರು ಕೇವಲ 44 ಎಸೆತಗಳಲ್ಲಿ 9 ಬೌಂಡರಿ ಮತ್ತು 8 ಸಿಕ್ಸರ್ಗಳ ಮೂಲಕ 240.91 ಸ್ಟ್ರೈಕ್ ರೇಟ್ನಲ್ಲಿ 106 ರನ್ ಬಾರಿಸಿದರು. ಇದರ ಪರಿಣಾಮ ಹಲವು ತಂಡಗಳು ಸೆಮಿಫೈನಲ್ಸ್ ರೇಸ್ನಿಂದ ಬಹುತೇಕ ಹೊರಬಿದ್ದಿವೆ.
ವಿಶ್ವಕಪ್ ಸೆಮಿಫೈನಲ್ಸ್ಗೆ ಅರ್ಹತೆ ಪಡೆಯಲು ಒಂದು ತಂಡಕ್ಕೆ 7 ಗೆಲುವುಗಳು ಅಂದರೆ 14 ಅಂಕಗಳ ಅಗತ್ಯವಿದೆ. ಆದರೆ 12 ಅಂಕಗಳನ್ನು ಪಡೆದರೂ ಅಗ್ರ-4ಕ್ಕೆ ಪ್ರವೇಶ ಪಡೆಯಬಹುದು. ಟೂರ್ನಿಯ ಸೆಮಿಫೈನಲ್ಸ್ಗೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಮುಂದಿನ ಪಂದ್ಯಗಳು ಎಲ್ಲಾ ತಂಡಗಳಿಗೆ ನಿರ್ಣಾಯಕವಾಗಿವೆ. ಪ್ರಸ್ತುತ ಭಾರತ, ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳ ಸೆಮಿಫೈನಲ್ಸ್ ಹಾದಿ ಸುಲಭವಾಗಿದೆ. ಭಾರತ 5 ಗೆಲುವಿನ ನಂತರ 10 ಅಂಕಗಳನ್ನು ಹೊಂದಿದ್ದರೆ, ದಕ್ಷಿಣ ಆಫ್ರಿಕಾ 5 ರಲ್ಲಿ 4 ಗೆಲುವಿನ ನಂತರ 8 ಅಂಕಗಳನ್ನು ಪಡೆದುಕೊಂಡಿದೆ ಹಾಗೂ ನ್ಯೂಜಿಲೆಂಡ್ 5 ರಲ್ಲಿ 4 ಗೆಲುವಿನ ಬಳಿಕ 8 ಅಂಕಗಳನ್ನು ಹೊಂದಿದೆ. ಈ ಮೂರೂ ತಂಡಗಳ ನೆಟ್ ರನ್ರೇಟ್ ಪ್ಲಸ್ ಆಗಿದೆ.
ಆಸ್ಟ್ರೇಲಿಯಾ 6 ಅಂಕಗಳೊಂದಿಗೆ +1.142ರ ಅತ್ಯುತ್ತಮ ರನ್ರೇಟ್ ಹೊಂದಿದೆ. ಆ ಮೂಲಕ ನಾಲ್ಕನೇ ಸ್ಥಾನದಲ್ಲಿದೆ. ಪಾಕಿಸ್ತಾನ ತಂಡ 5ನೇ ಸ್ಥಾನದಲ್ಲಿದ್ದು, ಅಪಘಾನಿಸ್ತಾನ ಆರನೇ ಸ್ಥಾನದಲ್ಲಿದೆ. ಈ ಎರಡೂ ತಂಡಗಳು ತಲಾ 2 ಗೆಲುವಿನಿಂದ 4 ಅಂಕಗಳನ್ನು ಹೊಂದಿವೆ. ಈ ಎರಡೂ ತಂಡಗಳಿಗೆ ಇನ್ನೂ 4 ಪಂದ್ಯಗಳು ಬಾಕಿ ಇವೆ ಹಾಗೂ 12 ಅಂಕಗಳನ್ನು ಕಲೆ ಹಾಕಲು ಮಾತ್ರ ಅವಕಾಶವಿದೆ. ಆದರೆ, ಆಸ್ಟ್ರೇಲಿಯಾ ಇನ್ನುಳಿದ 4ರಲ್ಲಿಯೂ ಗೆದ್ದರೆ 14 ಅಂಕಗಳನ್ನು ದಾಖಲಿಸಲಿದೆ. ಇದು ಈ ಎರಡೂ ತಂಡಗಳಿಗೆ ಹಿನ್ನಡೆಯನ್ನು ತಂದೊಡ್ಡಬಹುದು. ಇನ್ನು ಹಾಲಿ ಚಾಂಪಿಯನ್ಸ್ ಇಂಗ್ಲೆಂಡ್ ಆಡಿರುವ 4 ಪಂದ್ಯಗಳಿಂದ ಮೂರರಲ್ಲಿ ಸೋತು, ಕೇವಲ ಒಂದರಲ್ಲಿ ಜಯಿಸಿದೆ. ಆದರೂ ಇನ್ನುಳಿದ 5 ಪಂದ್ಯಗಳಲ್ಲಿ ಗೆದ್ದು ಇಂಗ್ಲೆಂಡ್ ಕೂಡ 12 ಅಂಕಗಳನ್ನು ಕಲೆ ಹಾಕಲಿದೆ.
ಮತ್ತೊಂದೆಡೆ ಬಾಂಗ್ಲಾದೇಶ ಮತ್ತು ನೆದರ್ಲೆಂಡ್ಸ್ ತಂಡಗಳು ತಲಾ 5 ಪಂದ್ಯಗಳನ್ನು ಆಡಿದ್ದು, ಒಂದೊಂದು ಪಂದ್ಯದಲ್ಲಿ ಜಯಿಸಿವೆ. ಆ ಮೂಲಕ ಟೂರ್ನಿಯ ಸೆಮಿಫೈನಲ್ಸ್ ರೇಸ್ನಿಂದ ಬಹುತೇಕ ಹೊರಬಿದ್ದಿವೆ. ಆದರೆ, ಈ ತಂಡಗಳು ಇನ್ನುಳಿದ 4 ಪಂದ್ಯಗಳಲ್ಲಿ ಗೆದ್ದರೂ ಒಟ್ಟಾರೆ 9 ಅಂಕಗಳನ್ನು ಕಲೆ ಹಾಕಬಹುದಷ್ಟೆ. ಈ ಎರಡೂ ತಂಡಗಳು ಎದುರಾಳಿ ತಂಡಗಳನ್ನು ಸೋಲಿಸಿದರೆ, ಸೆಮಿಫೈನಲ್ಸ್ ಚಿತ್ರಣ ಸ್ವಲ್ಪ ಬದಲಾಗಬಹುದು. ಅಂದ ಹಾಗೆ ಇನ್ನುಳಿದ ಪಂದ್ಯಗಳನ್ನು ಗೆದ್ದು ಟೂರ್ನಿಯಿಂದ ಗೌರವಯುತವಾಗಿ ನಿರ್ಗಮಿಸಿಲು ಬಾಂಗ್ಲಾ, ನೆದರ್ಲೆಂಡ್ಸ್ ಎದುರು ನೋಡುತ್ತಿವೆ.
ಕ್ರೀಡೆ
ಕುಮಾರಸ್ವಾಮಿ ಸಿಡಿಸಿದ ಬಾಂಬ್ಗೆ ಗೋವಿಂದರಾಜ್ ತಲೆದಂಡ!

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಸಿಡಿಸಿದ ಬಾಂಬ್ಗೆ ಗೋವಿಂದರಾಜ್ (Govindraj) ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stadium Stampede Case) ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ ಮಾಡಲಾಗಿದೆ.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತಕ್ಷಣದಿಂದ ಬಿಡುಗಡೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದಾರೆ.
ಗೋವಿಂದರಾಜ್ ಅವರು ಜೂನ್ 1, 2023 ರಿಂದ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಆರ್ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸನ್ಮಾನ ಮಾಡುವಂತೆ ಸಿದ್ದರಾಮಯ್ಯನವರಿಗೆ ಒತ್ತಡ ಹೇರಿದ್ದೇ ಗೋವಿಂದರಾಜ್ ಎಂಬ ಆರೋಪ ಈಗ ಕೇಳಿ ಬಂದಿದೆ.
ಕುಮಾರಸ್ವಾಮಿ ಹೇಳಿದ್ದೇನು?
ಜೂನ್ 4ರ ಬೆಳಗ್ಗೆ ಸಿಎಂ (CM Siddaramaiah) ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಅವರು ಪೊಲೀಸ್ ಆಯುಕ್ತರಿಗೆ ಕರೆ ಮಾಡಿ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಬೇಕು ಎಂದು ಒತ್ತಡ ಹಾಕುತ್ತಾರೆ. ಇದಕ್ಕೆ ಆಯುಕ್ತರು, ಬೆಳಗ್ಗೆಯವರೆಗೆ ಪೊಲೀಸರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ. ಎರಡು ಮೂರು ಕಡೆ ಕಾರ್ಯಕ್ರಮ ಮಾಡಿದರೆ ಭದ್ರತೆ ನೀಡಲು ಕಷ್ಟವಾಗುತ್ತದೆ. ಒಂದು ಕಡೆ ಕಾರ್ಯಕ್ರಮ ಮಾಡಿದರೆ ಬಂದೋಬಸ್ತ್ ಕಲ್ಪಿಸಲು ಸಾಧ್ಯವಾಗುತ್ತದೆ. ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಾರೆ.
ಆಯುಕ್ತರ ಪ್ರತಿಕ್ರಿಯೆ ಬಳಿಕ ಗೋವಿಂದರಾಜ್ ಅವರು ಸಿಎಂ ಬಳಿಗೆ ಹೋಗುತ್ತಾರೆ. ಸಿಎಂ ಅವರು ಆಯುಕ್ತರನ್ನು ಕರೆಸಿ, ನಾನು ಈ ರಾಜ್ಯದ ಸಿಎಂ. ಆದೇಶ ಮಾಡುತ್ತಿದ್ದೇನೆ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ಕೊಡಿ ಎಂದು ಸೂಚಿಸುತ್ತಾರೆ. ಅನಿವಾರ್ಯವಾಗಿ ಪೊಲೀಸ್ ಕಮಿಷನರ್ ವಿಧಾನಸೌಧಕ್ಕೆ ಬಿಗಿ ಭದ್ರತೆ ಹಾಕುತ್ತಾರೆ. ಆದರೆ ಯಾರಿಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆ ಕೊಟ್ಟಿರುವುದಿಲ್ಲ. ಕಾಟಾಚಾರಕ್ಕೆ ಮೂರ್ನಾಲ್ಕು ತುಕಡಿ ಭದ್ರತೆ ಹಾಕಿರುತ್ತಾರೆ. ವಿಧಾನಸೌಧದಲ್ಲೇ ಕಾರ್ಯಕ್ರಮ ಮಾಡಬೇಕು, ನಾನು ಚಿನ್ನಸ್ವಾಮಿಗೆ ಹೋಗುವುದಿಲ್ಲ ಎಂದು ಸಿಎಂ ಹೇಳಿದ್ದರಿಂದ ಹೆಚ್ಚಿನ ಸಂಖ್ಯೆ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ಗಂಭೀರವಾದ ಆರೋಪ ಮಾಡಿದ್ದರು.
ಕ್ರೀಡೆ
2026 ರ ಫುಟ್ ಬಾಲ್ ವಿಶ್ವಕಪ್ ಗೆ ಅರ್ಹತೆ ಪಡೆದ 48 ತಂಡಗಳು, ಭಾರತದ ಕಥೆ ಏನು?

2026ರಲ್ಲಿ ನಡೆಯಲಿರುವ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಗೆ ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾ ಜಂಟಿಯಾಗಿ ಆತಿಥ್ಯವಹಿಸಲಿವೆ, ಈ ಬಾರಿಯ ವಿಶ್ವಕಪ್ ನಲ್ಲಿ ಬರೋಬ್ಬರಿ 48 ತಂಡಗಳು ಭಾಗವಹಿಸಲಿವೆ,
2026 ಫುಟ್ಬಾಲ್ ವಿಶ್ವಕಪ್ ಅರ್ಹತಾ ಪಂದ್ಯಗಳು ಮುಗಿದ್ದು, ಉಜ್ಬಿಕಿಸ್ತಾನ್, ಜೋರ್ಡಾನ್, ಮತ್ತು ದಕ್ಷಿಣ ಕೊರಿಯಾ ಅರ್ಹತೆ ಪಡೆದಿದೆ, ಭಾರತ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ,
43 ದೇಶದ ತಂಡಗಳು ಅರ್ಹತಾ ಪ್ರಕ್ರಿಯೆಯ ತಮ್ಮ ಸ್ಧಾನಗಳನ್ನು ಪಡೆಯುತ್ತವೆ, ಆರು ತಂಡಗಳನ್ನು ಅಂತಾರಾಷ್ಟ್ರೀಯ ಫ್ಲೇಆಫ್ ಗಳಲ್ಲಿ ಇನ್ನೆರಡು ತಮ್ಮ ಸ್ಧಾನವನ್ನು ಭದ್ರಪಡಿಸಿಕೊಳ್ಳುತ್ತವೆ, ಅಮೆರಿಕ, ಮೆಕ್ಸಿಕೋ, ಕೆನಡಾ ದೇಶಗಳು ಆತಿಥೇಯ ತಂಡವಾರುವುದರಿಂದ ನೇರವಾಗಿ ಅರ್ಹತೆ ಪಡೆದಿವೆ,
ಏಷ್ಯಾದ ಎಂಟು, ಆಫ್ರಿಕಾ ಖಂಡದಿಂದ ಒಂಬತ್ತು ತಂಡಗಳು ನೇರವಾಗಿ ಸ್ಧಾನ ಪಡೆದಿವೆ, ಉತ್ತರ ಮತ್ತು ಮಧ್ಯ ಅಮೆರಿಕ ಮತ್ತು ಕೆರಿಬಿಯನ್ ಮೂರು ದೇಶಗಳು ಸ್ಧಾನ ಪಡೆದಿವೆ,
ದಕ್ಷಿಣ ಅಮೆರಿಕಾ ಆರು ತಂಡಗಳು ನೇರವಾಗಿ ಆರ್ಹತೆ ಪಡೆದಿದ್ದರೆ, ಇನ್ನೊಂದು ತಂಡವನ್ನು ಇಂಟರ್ ಕಾಂಟಿನೆಂಟಲ್ ಫ್ಲೇಆಫ್ ಗೆ ಕಳುಹಿಸುತ್ತದೆ, ನ್ಯೂಜಿಲ್ಯಾಂಡ್ ಜೊತೆಗೆ ಯುರೋಪ್ ನ 16 ತಂಡಗಳು ವಿಶ್ವಕಪ್ ಆಡಲಿವೆ
ಕ್ರೀಡೆ
ಬೆಂಗಳೂರು ಕಾಲ್ತುಳಿತ ದುರಂತ; RCB ಮಾರ್ಕೆಟಿಂಗ್ ಹೆಡ್ ಸೇರಿ ನಾಲ್ವರ ಬಂಧನ

ಬೆಂಗಳೂರು: ಆರ್ಸಿಬಿ ಸಂಭ್ರಮಾಚರಣೆಯ (Bengaluru Stampede) ವೇಳೆ ಉಂಟಾದ ಕಾಲ್ತುಳಿದಲ್ಲಿ 11 ಜನರು ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದರು. ಸಿಎಂ ಆದೇಶದ ಬೆನ್ನಲ್ಲೇ ಇದೀಗ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ಇಬ್ಬರು ಆಯೋಜಕರನ್ನು ಬಂಧಿಸಿದ್ದಾರೆ.
ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಲಾಕ್ ಸೇರಿದಂತೆ ಇನ್ನಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ KSCA ಕಾಯರ್ದರ್ಶಿ, ಖಜಾಂಚಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ನಿನ್ನೆ ರಾತ್ರಿ KSCA ಕಾಯರ್ದರ್ಶಿ ಶಂಕರ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. KSCA ಖಜಾಂಚಿ ಜಯರಾಮ್ ಮನೆ ಮೇಲೂ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರೂ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
-
ಬಿಬಿಎಂಪಿ4 weeks ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ