ರಾಜ್ಯ

ಕನ್ನಡ ನಾಡು ಪ್ರವಾಸಿಗರಿಗೆ ಸ್ವರ್ಗ. ಯಾರಾರಿಗೆ ಯಾವ್ಯಾವ ರೀತಿಯ ಆಸಕ್ತಿಯ ತಾಣಗಳು ಬೇಕೊ ಅಂಥವನ್ನು ಆಯ್ದುಕೊಂಡು ಅಡ್ಡಾಡುವಷ್ಟು ಸಮೃದ್ಧವಾಗಿ ಪ್ರವಾಸಿ ಗಮ್ಯಗಳು ಮತ್ತು ಪರಂಪರೆಯ ತಾಣಗಳು ಕರ್ನಾಟಕದಲ್ಲಿವೆ. ಸಮುದ್ರದಲ್ಲಿ ಆಡಿ, ಮರಳಲ್ಲಿ ಹೊರಳುವವರಿಗಾಗಿ ಉದ್ದಾನುದ್ದದ ತೀರ ಪ್ರದೇಶ, ಕಾನು ಸುತ್ತಿ ಚೈತನ್ಯ ತುಂಬಿಕೊಳ್ಳುವವರಿಗೆಂದು ಹಸಿರಾದ ಮಲೆನಾಡು, ಕಲೆಯ ಆಸಕ್ತರಿಗಾಗಿ ಅತಿಸುಂದರವಾದ ಶಿಲಾದೇಗುಲಗಳು, ಇತಿಹಾಸದ ಕುತೂಹಲಿಗಳಿಗಾಗಿ ರಾಜ-ನಿಜಾಮರುಗಳ ಸಂಸ್ಥಾನದ ಉಳಿಕೆಗಳು- ಯಾವುದಿಲ್ಲ ಹೇಳಿ! ವಿಶ್ವ ಪರಂಪರೆಯ ತಾಣಗಳೆಂದು ಯುನೆಸ್ಕೊ ಸಂಸ್ಥೆಯಿಂದ ಗುರುತಿಸಿಕೊಂಡಿದ್ದು ಆರೇ ಸ್ಥಳಗಳಾದರೂ, ಉಳಿದ ತಾಣಗಳು ಕಡಿಮೆಯೆಂದು ಎಣಿಸುವಂತಿಲ್ಲ. ಗಡಿಗೆಯಲ್ಲಿನ ಪಕ್ವಾನ್ನ ಹೇಗಿದೆ ಎನ್ನುವುದನ್ನು ಕೆಲವೇ ಅಗುಳುಗಳಿಂದ ಅಳೆದು ನೋಡುವಂತೆ, ಯುನೆಸ್ಕೊ ಮಾನ್ಯ ಮಾಡಿದ ಕೆಲವೇ ತಾಣಗಳು ಸಾಕು ಇಡೀ ರಾಜ್ಯದ ಹಿರಿಮೆಯನ್ನು ಎತ್ತಿ ಹಿಡಿಯುವುದಕ್ಕೆ. ವಿಶ್ವ ಮಾನ್ಯತೆ ಪಡೆದ ತಾಣಗಳ ಕಿರುಪರಿಚಯವಿದು.
ರಸ್ತೆ ಬದಿಯಲ್ಲಿ ಮುತ್ತು-ರತ್ನಗಳನ್ನು ಕೊಳಗದಲ್ಲಿ ಅಳೆದಳೆದು ಮಾರುತ್ತಿದ್ದ ಸಾಮ್ರಾಜ್ಯವೆಂಬ ಹೆಗ್ಗಳಿಕೆ ಹೊತ್ತ ವಿಜಯನಗರ ಸಾಮ್ರಾಜ್ಯದ ಹೆಗ್ಗುರುತಾಗಿ ನಿಂತಿರುವ ಹಂಪಿಯ ಸ್ಮಾರಕಗಳ ಗುಂಪು, ಕರ್ನಾಟಕದ ಮೇರು ಪ್ರವಾಸಿ ಆಕರ್ಷಣೆಗಳಲ್ಲೊಂದು. ವಿಜಯನಗರ ಸಾಮ್ರಾಜ್ಯದ ಅವಶೇಷಗಳು ದಕ್ಷಿಣ ಭಾರತದ ಹಲವೆಡೆಗಳಲ್ಲಿ ಹರಡಿದ್ದರೂ, ರಾಜಧಾನಿ ಎನಿಸಿದ್ದರಿಂದ ಹಂಪೆಯ ಕಂಪು ದೊಡ್ಡದು. ಸಾಮ್ರಾಜ್ಯದ ಸ್ವರ್ಣಯುಗವನ್ನು ಇವು ಇಂದಿಗೂ ಕಣ್ಮುಂದೆ ತೆರೆದಿಡುತ್ತವೆ. ಸುಮಾರು 4187 ಹೆಕ್ಟೇರ್ ಜಾಗಕ್ಕೆ ಹರಡಿರುವ ಈ ತಾಣ, 200 ವರ್ಷಗಳ ಕಥೆಯನ್ನಿಲ್ಲಿ ಹೇಳುತ್ತದೆ. 1,600ಕ್ಕೂ ಹೆಚ್ಚು ಸಣ್ಣ-ದೊಡ್ಡ ಸ್ಮಾರಕಗಳಿಲ್ಲಿ ನಿಂತಿದ್ದು, 1986ರಲ್ಲೇ ಇದು ವಿಶ್ವ ಪರಂಪರೆಯ ತಾಣಗಳ ಪಟ್ಟಿಯಲ್ಲಿ ಸೇರಿದೆ.
ಅತ್ಯಂತ ಸುಂದರ ಶಿಲಾ ದೇಗುಲಗಳು, ರಾಣಿ ಮಹಲುಗಳು, ಕೋಟೆಗಳು, ನಿರೀಕ್ಷಣಾ ಗೋಪುರಗಳು ಸೇರಿದಂತೆ ನೋಡುವುದಕ್ಕೆ ಬಹಳಷ್ಟನ್ನು ಹಂಪೆ ಪ್ರವಾಸಿಗರ ಮುಂದಿರಿಸುತ್ತದೆ. ಅತಿ ಮನೋಹರವಾದ ಕಲ್ಲಿನ ರಥ, ಉಗ್ರ ನರಸಿಂಹನ ಮೂರ್ತಿ, ವಿರೂಪಾಕ್ಷ ದೇವಾಲಯ, ವಿಠ್ಠಲ ದೇಗುಲ, ಹಜಾರ ರಾಮ ದೇವಾಲಯ, ಅಚ್ಚುತರಾಯ ದೇವಳ, ಹೇಮಕೂಟ ಬೆಟ್ಟದ ದೇಗುಲಗಳು, ರಾಣಿಯ ಸ್ನಾನಗೃಹ, ಆನೆಲಾಯ, ಕಮಲ ಮಹಲ್, ಹಂಪೆಯ ಬಜಾರು… ಹೀಗೆ ಬಹಳಷ್ಟನ್ನು ಇಲ್ಲಿ ನೋಡಬಹುದು. ಅಕ್ಟೋಬರ್ನಿಂದ ಮಾರ್ಚ್ವರೆಗಿನ ಸಮಯ ಇಲ್ಲಿನ ಭೇಟಿಗೆ ಪ್ರಶಸ್ತ. ವಾರದೆಲ್ಲಾ ದಿನಗಳು ಬೆಳಗ್ಗೆ 9ರಿಂದ ಸಂಜೆ 6ವರೆಗೆ ಭೇಟಿಗೆ ಲಭ್ಯವಿದ್ದು. 15 ವರ್ಷದ ಕೆಳಗಿನ ಮಕ್ಕಳಿಗೆ ಮುಕ್ತ ಅವಕಾಶವಿದೆ. ಉಳಿದವರಿಗೆ ಪ್ರವೇಶ ಶುಲ್ಕವಿದ್ದು, ಆಲ್ಲೈನ್ನಲ್ಲೂ ಟಿಕೆಟ್ ಖರೀದಿಸಬಹುದು. ಇಲ್ಲಿಂದ 13 ಕಿ.ಮೀ. ದೂರದ ಹೊಸಪೇಟೆಯಲ್ಲಿ ರೈಲು ನಿಲ್ದಾಣವಿದ್ದು, ಸುಮಾರು 35 ಕಿ.ಮೀ ದೂರದಲ್ಲಿ ವಿಜಯನಗರ ಜಿಲ್ಲೆಯ ವಿಮಾನನಿಲ್ದಾಣವಿದೆ.
ಸುಮಾರು 7 ಮತ್ತು 8ನೇ ಶತಮಾನಕ್ಕೆ ಸೇರಿದ ಹಿಂದೂ ಮತ್ತು ಜಿನ ಮಂದಿರಗಳ ಸುಂದರ ಸಮುಚ್ಚಯ ಈ ಪಟ್ಟದಕಲ್ಲು, ಬಾದಾಮಿ ಮತ್ತು ಐಹೊಳೆಯ ದೇಗುಲಗಳು. 1987ರಲ್ಲೇ ವಿಶ್ವ ಪರಂಪರೆಯ ತಾಣವೆಂದು ಗುರುತಿಸಲಾದ ಈ ತಾಣವು ಸುಮಾರು 5.5 ಹೆಕ್ಟೇರ್ ಜಾಗದಲ್ಲಿ ಹರಡಿಕೊಂಡಿದೆ. ಚಾಲುಕ್ಯರು ಮತ್ತು ರಾಷ್ಟ್ರಕೂಟರ ಶಿಲ್ಪಕಲೆಯ ವೈಭವವನ್ನು ಇಲ್ಲಿ ಕಾಣಬಹುದಾಗಿದ್ದು, ಪಟ್ಟದಕಲ್ಲಿನಲ್ಲಿ ಶಿವನಿಗೆಂದು ನಿರ್ಮಿಸಲಾದ 9 ದೇಗುಲಗಳ ಸರಣಿಯನ್ನು ಕಾಣಬಹುದು. ಆದರೆ ವೈಷ್ಣವ ಮತ್ತು ಶಾಕ್ತ ಪಂಥದ ಕುರುಹುಗಳನ್ನೂ ದೇವಾಲಯಗಳಲ್ಲಿ ಕಾಣಬಹುದು. ದ್ರಾವಿಡ ಮತ್ತು ಇಂಡೊ ಆರ್ಯನ್ ಶೈಲಿಯ ಮಿಶ್ರಣದಂಥ ವಿನ್ಯಾಸಗಳನ್ನು ಹೊಂದಿರುವ ಜೈನ ದೇವಾಲಯಗಳು ಇಲ್ಲಿವೆ. ವಿರೂಪಾಕ್ಷ ದೇವಳ (ಹಂಪೆಯದ್ದಲ್ಲ, ಇಲ್ಲೇ ಬೇರೆಯದು), ಗಳಗನಾಥ ದೇಗುಲ, ಜಂಬುಲಿಂಗೇಶ್ವರ ಮಂದಿರ, ಸಂಗಮೇಶ್ವರ, ಕಾಡಸಿದ್ದೇಶ್ವರ, ಚಂದ್ರಶೇಖರ, ಕಾಶಿ ವಿಶ್ವನಾಥ ಮತ್ತು ಜೈನ ನಾರಾಯಣ ದೇವಾಲಯಗಳು ಇಲ್ಲಿನ ಆಕರ್ಷಣೆ.
ಬಾಗಲಕೋಟೆ ಜಿಲ್ಲೆಯಲ್ಲಿರುವ ಈ ಸ್ಥಳಕ್ಕೆ ಸಮೀಪದ ವಿಮಾನ ನಿಲ್ದಾಣ 130 ಕಿ.ಮೀ. ದೂರದ ಹುಬ್ಬಳ್ಳಿಯದ್ದು. ಬೆಳಗಾವಿ ವಿಮಾನ ನಿಲ್ದಾಣ 150 ಕಿ.ಮೀ. ದೂರದಲ್ಲಿದೆ. 18 ಕಿ.ಮೀ. ದೂರದ ಬಾದಾಮಿಯಲ್ಲಿ ರೈಲು ನಿಲ್ದಾಣವಿದೆ. ಅಕ್ಟೋಬರ್ನಿಂದ ಮಾರ್ಚ್ವರೆಗಿನ ಸಮಯ ಇಲ್ಲಿನ ಭೇಟಿಗೆ ಪ್ರಶಸ್ತ. ವಾರದೆಲ್ಲಾ ದಿನಗಳು ಬೆಳಗ್ಗೆ 6ರಿಂದ ಸಂಜೆ 5.30ರವರೆಗೆ ಭೇಟಿಗೆ ಲಭ್ಯವಿದ್ದು. 15 ವರ್ಷದ ಕೆಳಗಿನ ಮಕ್ಕಳಿಗೆ ಮುಕ್ತ ಅವಕಾಶವಿದೆ. ಉಳಿದವರಿಗೆ ಪ್ರವೇಶ ಶುಲ್ಕವಿದ್ದು, ಆಲ್ಲೈನ್ನಲ್ಲೂ ಟಿಕೆಟ್ ಖರೀದಿಸಬಹುದು.
ವಿಶ್ವದ 39 ಮಹತ್ವದ ಜೀವವೈವಿಧ್ಯ ತಾಣಗಳಲ್ಲಿ ಪಶ್ಚಿಮ ಘಟ್ಟವೂ ಒಂದು. ಸಹ್ಯಾದ್ರಿ ಶ್ರೇಣಿಗಳು ಹಿಮಾಲಯಕ್ಕಿಂತ ಸಾಕಷ್ಟು ಹಳೆಯದಾಗಿದ್ದು, ಮುಂಗಾರು ಮಾರುತ ವ್ಯವಸ್ಥೆಗೆ ಇಡೀ ಭೂಮಿಯಲ್ಲೇ ಉತ್ತಮ ಉದಾಹರಣೆಯಿದು. 2012ರಲ್ಲಿ ವಿಶ್ವ ಪರಂಪೊರೆಯ ತಾಣವನ್ನು ಸೇರಿರುವ ಈ ಹಸಿರು ಪ್ರದೇಶ, 795.3 ಹೆಕ್ಟೇರ್ನ ಬೃಹತ್ ಪ್ರದೇಶವನ್ನು ಒಳಗೊಂಡಿದೆ. ವಿಶ್ವದಲ್ಲೇ ಅಳಿವಿನಂಚಿಗೆ ಬಂದಿರುವ ಸುಮಾರು 325 ಜಾತಿಯ ಅಮೂಲ್ಯ ಪ್ರಾಣಿ ಮತ್ತು ಪಕ್ಷಗಳ ಆಶ್ರಯ ತಾಣವಿದು ಎಂಬುದನ್ನು ಜಾಗತಿಕ ಜೀವ ವಿಜ್ಞಾನಿಗಳು ದೃಢಪಡಿಸಿದ್ದಾರೆ.
ಏನಿದೆ ವಿಶೇಷ?
ಪಶ್ಚಿಮ ಘಟ್ಟಗಳು ಕರ್ನಾಟಕದಲ್ಲಿ ಮಾತ್ರವೇ ಅಲ್ಲ, ಗುಜರಾತ್, ಮಹಾರಾಷ್ಟ್ರ, ಗೋವಾ, ಕೇರಳ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲೂ ವ್ಯಾಪಿಸಿದೆ. ಹಲವಾರು ರಾಷ್ಟ್ರೀಯ ಉದ್ಯಾನವನಗಳು ಮತ್ತು ಸಂರಕ್ಷಿತ ಪ್ರದೇಶಗಳನ್ನಿದು ಒಳಗೊಂಡಿದೆ. 7 ಸಾವಿರಕ್ಕೂ ಹೆಚ್ಚಿನ ಪ್ರಭೇದಗಳ ಹೂಬಿಡುವ ಸಸ್ಯಗಳು, 139 ಜಾತಿಯ ಸಸ್ತನಿಗಳು, 508 ಜಾತಿಯ ಹಕ್ಕಿಗಳು, 179 ಜಾತಿಯ ಉಭಯವಾಸಿಗಳು, 6 ಸಾವಿರ ಜಾತಿಯ ಕೀಟಗಳು, 300 ಜಾತಿಯ ಮೀನುಗಳಿಗೆ ಈ ಪ್ರದೇಶ ತವರೆನಿಸಿಕೊಂಡಿದೆ.
ಹೊಯ್ಸಳ ದೇವಾಲಯಗಳು
ತ್ರಿಕೂಟಾಚಲ ವಿನ್ಯಾಸದ, ಚೆನ್ನಕೇಶವ ಮತ್ತು ಹೊಯ್ಸಳೇಶ್ವರರನ್ನು ಆರಾಧಿಸುವ ಬೇಲೂರು ಹಾಗೂ ಹಳೇಬೀಡಿನ ಸರ್ವಾಂಗ ಸುಂದರ ದೇವಾಲಯಗಳು ಯುನೆಸ್ಕೊ ಪಟ್ಟಿ ಸೇರಿ, ವಿಶ್ವ ಮಾನ್ಯತೆ ಪಡೆದಿವೆ. ನಕ್ಷತ್ರಾಕಾರದ ವೇದಿಕೆಯ ಮೇಲೆ ಸ್ಥಿತವಾದ ಈ ಸಂಕೀರ್ಣ ಕೆತ್ತನೆಯ ದೇವಳಗಳು 2004ರಿಂದ ವಿಶ್ವ ಪರಂಪರೆಯ ತಾಣವೆನಿಸಿವೆ. 10ರಿಂದ 14ನೇ ಶತಮಾನದ ಅವಧಿಯಲ್ಲಿ ಆಗಿಹೋದ ಹೊಯ್ಸಳರ ಉತ್ತುಂಗದ ಕಥೆಯನ್ನು ಇಲ್ಲಿನ ಕಲ್ಲಿನಲ್ಲಿರುವ ಕಲೆಗಳು ಹೇಳುತ್ತವೆ.
ಇಲ್ಲಿಯ ವಿಶೇಷತೆ ಏನು?
ರಾಜ ವಿಷ್ಣುವರ್ಧನನ ಕಾಲದಲ್ಲಿ ಬೇಲೂರಿನ ಚೆನ್ನಕೇಶವ ದೇಗುಲ ನಿರ್ಮಿಸಲಾಗಿದ್ದು, ಮಂತ್ರಿ ಕೇತುಮಲ್ಲನ ಕಾಲದಲ್ಲಿ ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯ ನಿರ್ಮಾಣಗೊಂಡಿದೆ. ಆದರೆ ಹೊಯ್ಸಳರ ಆಡಳಿತವಿದ್ದು ಜಾಗಗಳಲ್ಲಿ ಇಂಥ ಹಲವು ಸಣ್ಣ ದೇವಾಲಯಗಳಿದ್ದು, ಎಲ್ಲವುಗಳಲ್ಲೂ ಇಂಥದ್ದೇ ಸೂಕ್ಷ್ಮ ಕುಸುರಿಯಂಥ ಕಲ್ಲಿನ ಕೆತ್ತನೆಗಳನ್ನು ಕಾಣಬಹುದು. ಲೋಹಕ್ಕೆ ಇರಬಹುದಾದಂಥ ಹೊಳಪು ಇಲ್ಲಿನ ಕಲ್ಲುಗಳಿಗಿದ್ದು, ನೋಡುಗರ ಹುಬ್ಬೇರಿಸುತ್ತವೆ.
ಹಾಸನ ಜಿಲ್ಲೆಯಲ್ಲಿರುವ ಇದನ್ನು ವರ್ಷದ ಯಾವುದೇ ಸಮಯದಲ್ಲಿ ಸಂದರ್ಶಿಸಬಹುದು. ವಾರದೆಲ್ಲಾ ದಿನಗಳು ಬೆಳಗ್ಗೆ 6ರಿಂದ ಸಂಜೆ 6ವರೆಗೆ ಹಳೇಬೀಡಿನ ದೇಗುಲ ಭೇಟಿಗೆ ಲಭ್ಯವಿದ್ದು, ಬೆಳಗ್ಗೆ 7.30ರಿಂದ ಸಂಜೆ 6.30ರವರೆಗೆ ಬೇಲೂರಿನ ದೇವಳ ತೆರೆದಿರುತ್ತದೆ. ಪ್ರವೇಶ ಶುಲ್ಕವಿಲ್ಲ.
ಶ್ರೀರಂಗಪಟ್ಟಣದ ಸ್ಮಾರಕಗಳು
ಸುತ್ತಲೂ ಹರಿಯುವ ಕಾವೇರಿ ನದಿಯಿಂದ ದ್ವೀಪದಂತೆ ಕಾಣುವ ಶ್ರೀರಂಗಪಟ್ಟಣ ಮೈಸೂರಿಗೆ ಸಮೀಪದಲ್ಲಿದೆ. ವಿಜಯನಗರ ಮತ್ತು ಹೊಯ್ಸಳ ಶೈಲಿಯ ವಾಸ್ತುಶಿಲ್ಪಗಳು ಇಲ್ಲಿನ ಸ್ಮಾರಕಗಳ ಹೆಗ್ಗಳಿಕೆ. ಊರಿಗೆ ತನ್ನ ಹೆಸರನ್ನು ನೀಡಿರುವ ಶ್ರೀರಂಗನಾಥ ಸ್ವಾಮಿಯ ದೇಗುಲ ಇಲ್ಲಿನ ಹೆಗ್ಗುರುತು. ಇದು ಕರ್ನಾಟಕದ ಭವ್ಯ ವೈಷ್ಣವ ಆರಾಧನಾ ತಾಣಗಳಲ್ಲಿ ಒಂದು.
ಏನು ನೋಡಬಹುದು?
ಹಿಂದೊಮ್ಮೆ ಮೈಸೂರು ಸಂಸ್ಥಾನದ ರಾಜಧಾನಿ ಎನಿಸಿಕೊಂಡಿದ್ದ ಇಲ್ಲಿ, ದರಿಯಾ ದೌಲತ್ ಬಾಗ್, ಶ್ರೀರಂಗಪಟ್ಟಣದ ಕೋಟೆ, ಟಿಪ್ಪು ಸುಲ್ತಾನನ ಗುಂಬಜ್, ಜಾಮಾ ಮಸೀದಿ, ರಂಗನತಿಟ್ಟು ಪಕ್ಷಿಧಾಮಗಳು ನೋಡಲೇಬೇಕಾದವು. ವಿಶ್ವ ಪರಂಪರೆಯ ತಾಣದ ತಾತ್ಕಾಲಿಕ ಪಟ್ಟಿಯಲ್ಲಿರುವ ಇದನ್ನು ವರ್ಷದ ಯಾವುದೇ ಸಮಯದಲ್ಲಿ ಸಂದರ್ಶಿಸಬಹುದು.
ಬೀದರ್, ವಿಜಯಪುರ ಮತ್ತು ಕಲಬುರ್ಗಿಯಲ್ಲಿ ಹರಡಿಕೊಂಡಿರುವ ಈ ಸ್ಮಾರಕಗಳು ಯುನೆಸ್ಕೊದ ತಾತ್ಕಲಿಕ ಪಟ್ಟಿಯಲ್ಲಿವೆ. ಪ್ರಧಾನವಾಗಿ ಇಸ್ಲಾಮಿಕ್ ಶೈಲಿಯ ವಾಸ್ತುಶಿಲ್ಪವೇ ಈ ಸ್ಮಾರಕಗಳಲ್ಲಿ ಸೊಗಸಾದ ಗುಮ್ಮಟಗಳು, ಕಮಾನುಗಳನ್ನು ನೋಡಬಹುದು. ಹೈದರಾಬಾದ್ನಲ್ಲೂ ಈ ಸುಲ್ತಾನರ ಸ್ಮಾರಕಗಳಿವೆ.
ಪ್ರಮುಖವಾದುದೇನು?
ಬಹಮನಿ ಸುಲ್ತಾನರ ಮೊದಲ ರಾಜಧಾನಿ ಕಲಬುರ್ಗಿಯಲ್ಲಿರುವ ಸ್ಮಾರಕಗಳ ಪೈಕಿ ಕಲಬುರ್ಗಿ ಕೋಟೆ, ದೊಡ್ಡ ಮಸೀದಿ, ಏಳು ಗೋರಿಗಳ ಸಂಕೀರ್ಣದ ಗುಂಬಜ್ ಪ್ರಮುಖವಾದವು. ಬೀದರ್ನ ಸ್ಮಾರಕಗಳ ಪೈಕಿ ಬೀದರ್ ಕೋಟೆ, ಅರಮನೆ, ಮದರಸ, ಬಹಮನಿ ಗೋರಿಗಳು ಇತ್ಯಾದಿಗಳನ್ನು ನೋಡಬಹುದು. ವಿಜಯಪುರದಲ್ಲಿ ಸುಮಾರು 80ಕ್ಕೂ ಹೆಚ್ಚಿನ ಸಣ್ಣ, ದೊಡ್ಡ ಸ್ಮಾರಕಗಳಿವೆ. ಇವುಗಳಲ್ಲಿ ಗೋಲ್ ಗುಂಬಜ್ ಜನಪ್ರಿಯವಾಗಿದ್ದು, ಪ್ರವಾಸಿಗರ ಮೆಚ್ಚಾಗಿದೆ. ಇದು ವಿಶ್ವದಲ್ಲಿ ಎರಡನೇ ಅತಿ ದೊಡ್ಡ ಗುಂಬಜ್ ಎಂದು ಖ್ಯಾತವಾಗಿದೆ.
ಅಕ್ಟೋಬರ್ನಿಂದ ಮಾರ್ಚ್ವರೆಗಿನ ಸಮಯ ಇಲ್ಲಿನ ಭೇಟಿಗೆ ಸೂಕ್ತ. ಕೆಲವು ಸ್ಮಾರಕಗಳಿಗೆ ಯಾವುದೇ ಪ್ರವೇಶ ಶುಲ್ಕವಿಲ್ಲ; ಆದಿಲ್ ಶಾಹಿ ಸ್ಮಾರಕಗಳಿಗೆ ಶುಲ್ಕ ನಿಗದಿ ಪಡಿಸಲಾಗಿದೆ.
ರಾಜಕೀಯ
DK Shivakumar ಸಿಎಂ ಆಗಬೇಕು: ರಾಮನಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಪರೋಕ್ಷ ಆಗ್ರಹ
ರಾಮನಗರ:
ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಸಿಎಂ ಸ್ಥಾನ ಸಿಗಬೇಕು ಎಂಬ ಆಗ್ರಹವನ್ನು ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “DK Shivakumar ನಮ್ಮ ನಾಯಕರು. ಅವರ ಶ್ರಮ ಹಾಗೂ ಹೋರಾಟಕ್ಕೆ ಪ್ರತಿಫಲ ಸಿಗಬೇಕು. ನಾನು ಈ ಜಿಲ್ಲೆಯಲ್ಲಿ ಹುಟ್ಟಿದ್ದು, ಅವರು ಕೂಡ ನಮ್ಮ ಜನರು. ಅವರಿಗೆ ಗೌರವ ಸಿಗಬೇಕು ಎಂದು ಹೇಳುವುದು ನನ್ನ ಹಕ್ಕು,” ಎಂದು ಸ್ಪಷ್ಟಪಡಿಸಿದರು.
“ನಾನು ಈಗಲೂ ನನ್ನ ಹಿಂದಿನ ಹೇಳಿಕೆಗೆ ಬದ್ಧನಾಗಿದ್ದೇನೆ. DK Shivakumar ಸಿಎಂ ಆಗಬೇಕು ಎಂಬ ಮಾತು ಹಿಂದೆ ಹೇಳಿದ್ದೆ, ಈಗಲೂ ನಿಂತಿದ್ದೇನೆ,” ಎಂದರು.
ಆ.8ರಂದು ಕಾಂಗ್ರೆಸ್ ಹೋರಾಟ:
ಆಗಸ್ಟ್ 8ರಂದು ನಡೆಯಲಿರುವ ಚುನಾವಣಾ ಅಕ್ರಮದ ವಿರುದ್ಧದ ಕಾಂಗ್ರೆಸ್ ಹೋರಾಟ ಕುರಿತು ಮಾತನಾಡಿದ ಅವರು, “ಈ ಹೋರಾಟಕ್ಕೆ ಹೈಕಮಾಂಡ್ ರೂಪುರೇಷೆ ನೀಡಿದೆ. ರಾಷ್ಟ್ರೀಯ ನಾಯಕರು ನೇತೃತ್ವ ವಹಿಸುತ್ತಿದ್ದಾರೆ. ನಮ್ಮ ಜಿಲ್ಲೆಯಿಂದ 20,000 ಮಂದಿ ಪಾಲ್ಗೊಳ್ಳುತ್ತಾರೆ,” ಎಂದು ಹೇಳಿದರು.
ಇವಿಎಂ ಅಕ್ರಮ ಕುರಿತು ಮಾಹಿತಿ ಇನ್ನೂ ಸ್ಪಷ್ಟವಾಗಿಲ್ಲವಾದರೂ, “ನಮ್ಮ ರಾಷ್ಟ್ರ ನಾಯಕರು ಎಲ್ಲಾ ವಿವರಗಳನ್ನು ಬಹಿರಂಗಪಡಿಸುತ್ತಾರೆ,” ಎಂದು ತಿಳಿಸಿದರು.
ಬೆಂಗಳೂರು
ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ
ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್ಟಾಪ್ ವಿತರಣೆ ನಡೆಸಲಾಗಿದೆ.
ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.
2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.
ಅಪರಾಧ
ಧರ್ಮಸ್ಥಳ ಶವ ಹೂತು ಪ್ರಕರಣ: ಮೂರು ಅಸ್ಥಿಪಂಜರ ಪತ್ತೆ, ಎಸ್ಐಟಿ ತನಿಖೆಗೆ ಹೊಸ ತಿರುವು!
ದಕ್ಷಿಣ ಕನ್ನಡ, ಆಗಸ್ಟ್ 5 – ಧರ್ಮಸ್ಥಳದ ಸುತ್ತಮುತ್ತಲ ಶವ ಹೂತು ಪ್ರಕರಣಕ್ಕೆ ದಿನೇ ದಿನೆ ನ್ಯೂ ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಮೂರು ಅಸ್ಥಿಪಂಜರಗಳು ಪತ್ತೆಯಾಗಿವೆ ಎಂಬ ಸುದ್ದಿ ಚಕ್ಕರಿಗೊಳ್ಳುತ್ತಿದೆ. ಈ ಕುರಿತು ದೂರುದಾರ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಎಸ್ಐಟಿ ತಂಡದ ಶೋಧ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿನ್ನೆ ನಡೆದ ಉತ್ಖನನದ ವೇಳೆ:
- ಸ್ಟಾಟ್ ನಂಬರ್ 12ರ ಬಳಿ ಕಾರ್ಮಿಕರಿಂದ ಅಗೆಸಿದಾಗ, ಮೂರು ಅಸ್ಥಿಪಂಜರಗಳು ಹಾಗೂ ಮಹಿಳೆಯ ಸೀರೆ ಪತ್ತೆಯಾಗಿವೆ.
- ಸುಮಾರು 140 ಮೂಳೆಗಳ ತುಂಡುಗಳು ಪತ್ತೆಯಾದ ಕುರಿತು ವರದಿ ಇದೆ.
- ಅಸ್ಥಿಪಂಜರಗಳನ್ನು ತಕ್ಷಣವೇ ಕೆಎಂಸಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.
ಇಂದಿನ ಉತ್ಖನನ:
- ನೇತ್ರಾವತಿ ನದಿಯ ದಡದ ಬಳಿ 11ನೇ ಪಾಯಿಂಟ್ನಲ್ಲಿ ಅಗೆತ ಕೆಲಸ ನಡೆಯುತ್ತಿದೆ.
- 6 ಅಡಿಯವರೆಗೆ ಶೋಧ ನಡೆದ ಬಳಿಕ ಸಾಕ್ಷ್ಯ ಸಿಕ್ಕದರೆ ಮುಂದಿನ ಪಾಯಿಂಟ್ಗೆ ಹೋಗುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಪೂರ್ವ ಘಟನೆ:
- ಜುಲೈ 31ರಂದು 6ನೇ ಗುರುತುಸ್ಥಳದಲ್ಲಿ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ, ಎಸ್ಐಟಿ ಅಧಿಕಾರಿಗಳಾದ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಆಧಾರದ ಮೇಲೆ UDR ಪ್ರಕರಣ ದಾಖಲಾಗಿದೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ಕ್ರೀಡೆ2 months ago
ಇಂದು ಐಪಿಎಲ್ ಫೈನಲ್- ಆರ್ಸಿಬಿಗೆ ಶುಭಕೋರಿದ ಎಸ್ಟಿಎಸ್!