ದೇಶ
ವಂದೇ ಭಾರತ್ ಸ್ಪೀಪರ್ ರೈಲಿನ 8 ಕುತೂಹಲಕಾರಿ ಸಂಗಿತಿಗಳನ್ನು ತಿಳಿಯಿರಿ

- /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 27
https://hosasuddi.in/wp-content/uploads/2023/11/ವಂದೇ-ಭಾರತ್-ಸ್ಪೀಪರ್-ರೈಲಿನ-8-ಕುತೂಹಲಕಾರಿ-ಸಂಗಿತಿಗಳನ್ನು-ತಿಳಿಯಿರಿ.jpg&description=ವಂದೇ ಭಾರತ್ ಸ್ಪೀಪರ್ ರೈಲಿನ 8 ಕುತೂಹಲಕಾರಿ ಸಂಗಿತಿಗಳನ್ನು ತಿಳಿಯಿರಿ', 'pinterestShare', 'width=750,height=350'); return false;" title="Pin This Post">
- Share
- Tweet /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 72
https://hosasuddi.in/wp-content/uploads/2023/11/ವಂದೇ-ಭಾರತ್-ಸ್ಪೀಪರ್-ರೈಲಿನ-8-ಕುತೂಹಲಕಾರಿ-ಸಂಗಿತಿಗಳನ್ನು-ತಿಳಿಯಿರಿ.jpg&description=ವಂದೇ ಭಾರತ್ ಸ್ಪೀಪರ್ ರೈಲಿನ 8 ಕುತೂಹಲಕಾರಿ ಸಂಗಿತಿಗಳನ್ನು ತಿಳಿಯಿರಿ', 'pinterestShare', 'width=750,height=350'); return false;" title="Pin This Post">
ವಂದೇ ಭಾರತ್ ಸ್ಲೀಪರ್ ರೈಲು ಭಾರತದ ಪ್ರಮುಖ ರೈಲು ಪ್ರಯಾಣ ವ್ಯವಸ್ಥೆಯಲ್ಲಿ ಒಂದಾಗಿದೆ. ಇದರಿಂದಾಗಿ ದೀರ್ಘಾವಧಿಯ ರಾತ್ರಿಯ ರೈಲು ಪ್ರಯಾಣ ಸುಗಮವಾಗಿದೆ. ಈಗ ಭಾರತೀಯ ರೈಲ್ವೇಯು ಈ ಸ್ಲೀಪರ್ ರೈಲನ್ನು ಸಂಪೂರ್ಣವಾಗಿ ಹೊಸ ವಿನ್ಯಾಸದೊಂದಿಗೆ ಪರಿಚಯಿಸಲು ಸಿದ್ಧವಾಗಿದೆ. ಇದು ಫೆಬ್ರವರಿ 2024 ರ ವೇಳೆಗೆ ಪ್ರಾರಂಭವಾಗುವ ನಿರೀಕ್ಷೆಯಿದ,
ವಂದೇ ಭಾರತ್ ಸ್ಲೀಪರ್ ರೈಲು “ವಿಶ್ವ ದರ್ಜೆಯ”, ರೈಲು ಎಂದು ಭಾರತೀಯ ರೈಲ್ವೆ ಹೇಳಿದೆ. ಈ ರೈಲಿನಲ್ಲಿ ಉತ್ತಮ ಸೇವೆ ಇರಲಿದ್ದು, ಅಂತಿಮವಾಗಿ ರಾಜಧಾನಿ ಎಕ್ಸ್ಪ್ರೆಸ್ ರೈಲುಗಳನ್ನು ಬದಲಿಸಲು ನಿರ್ಧರಿಸಲಾಗಿದೆ. ಜನರಿಗೆ ಪ್ರಯಾಣದ ಅನುಭವವನ್ನೇ ಬದಲಾವಣೆ ಮಾಡುವ ನಿಟ್ಟಿನಲ್ಲಿ ಈ ರೈಲುಗಳನ್ನು ಆರಂಭಿಸಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲು ಯೋಜನೆಯ ಕುರಿತು ಕೆಲವು ಪ್ರಮುಖ, ಕುತೂಹಲಕಾರಿ ಸಂಗತಿಗಳು ಇಲ್ಲಿವೆ, ಮುಂದೆ ಓದಿ..
ವಂದೇ ಭಾರತ್ ಸ್ಲೀಪರ್ ರೈಲು ಉತ್ಪಾದನೆ ಈ ಪ್ರೀಮಿಯಂ ರೈಲಿನ ಉತ್ಪಾದನೆಯು ಅಕ್ಟೋಬರ್ನಲ್ಲಿ ಬಿಇಎಂಎಲ್ ಲಿಮಿಟೆಡ್ನ ಬೆಂಗಳೂರು ಸಂಕೀರ್ಣದಲ್ಲಿ ಈಗಾಗಲೇ ಪ್ರಾರಂಭವಾಗಿದೆ. ಭಾರತೀಯ ರೈಲ್ವೆಯ ಕೋಚ್ ಫ್ಯಾಕ್ಟರಿ ಐಸಿಎಫ್ ಸಹಯೋಗದೊಂದಿಗೆ ಬಿಇಎಂಎಲ್ ಈ ರೈಲನ್ನು ತಯಾರಿಸುತ್ತಿದೆ. ವಂದೇ ಭಾರತ್ ಸ್ಲೀಪರ್ ರೈಲು ಕಾಂಪೋಸಿಷನ್ ಶೀಘ್ರವೇ ಆರಂಭವಾಗಲಿರುವ ವಂದೇ ಭಾರತ್ ಸ್ಲೀಪರ್ ರೈಲು ಒಟ್ಟು 16 ಕೋಚ್ಗಳನ್ನು ಹೊಂದಿರಲಿದೆ. 11 ಎಸಿ 3-ಟೈರ್ ಕೋಚ್ಗಳು, 4 ಎಸಿ 2-ಟೈರ್ ಕೋಚ್ಗಳು ಮತ್ತು 1 ಎಸಿ 1 ನೇ ಕೋಚ್ ಇರಲಿದೆ. ಹೆಚ್ಚುವರಿಯಾಗಿ, ರೈಲು 823 ಬರ್ತ್ಗಳನ್ನು ಹೊಂದಿರುತ್ತದೆ.
ವಂದೇ ಭಾರತ್ ಸ್ಲೀಪರ್ ರೈಲಿನ ವೇಗ ವಂದೇ ಭಾರತ್ ಸ್ಲೀಪರ್ ರೈಲು ಕೂಡ ಎಸಿ ಚೇರ್ ಕಾರ್ ವರ್ಜನ್ನಂತೆಯೇ 160 ಕಿಮೀ ವೇಗದಲ್ಲಿ ಓಡುವ ಸಾಮರ್ಥ್ಯವನ್ನು ಹೊಂದಿದೆ. ಇದು ಸೆಮಿ- ಹೈ ಸ್ಪೀಡ್ ರೈಲು ಸೆಟ್ ಆಗಿದೆ. ಈ ರೈಲು ವೇಗವಾಗಿರುವ ಕಾರಣದಿಂದಾಗಿ ಪ್ರಯಾಣದ ಸಮಯವು ಗಮನಾರ್ಹವಾಗಿ ಕಡಿಮೆಯಾಗುತ್ತದೆ. ವಂದೇ ಭಾರತ್ ಸ್ಲೀಪರ್ ರೈಲಿನ ಹೊರಭಾಗ ಸ್ಲೀಪರ್ ರೈಲಿನ ಹೊರಭಾಗವು ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಹೋಲುತ್ತದೆ. ಇದು ಏರೋಡೈನಾಮಿಕ್ ಆಗಿರುತ್ತದೆ. ನೋಡುವಾಗ ಕೊಂಚ ಬುಲೆಟ್ ಟ್ರೈನ್ಗಳಂತೆಯೇ ಕಾಣುತ್ತದೆ. ಹಾಗೆಯೇ ಪ್ರತಿ ಕೊನೆಯಲ್ಲಿ ಡ್ರೈವಿಂಗ್ ಕ್ಯಾಬಿನ್ ಅನ್ನು ಹೊಂದಿರುತ್ತದೆ.
ವಂದೇ ಭಾರತ್ ಸ್ಲೀಪರ್ ರೈಲು ಒಳಾಂಗಣ ರೈಲಿನ ಒಳಭಾಗವನ್ನು ನೀವು ನೋಡಿದರೆ ವಾವ್ ಎಂದು ಹೇಳುವುದು ಖಂಡಿತವಾಗಿದೆ. ಬಿಇಎಂಎಲ್ ಪ್ರಕಾರ, ಹೊಸ ರೈಲು “ಅತ್ಯುತ್ತಮ ದರ್ಜೆಯ ಒಳಾಂಗಣಗಳನ್ನು” ಹೊಂದಿರುತ್ತದೆ. ವಿದೇಶಗಳಲ್ಲಿ ಓಡುವ ಸೂಪರ್ ರೈಲುಗಳಿಂದ ಸ್ಫೂರ್ತಿ ಪಡೆದ ರೈಲು ಇದಾಗಿರುವ ಕಾರಣ, ಹಿಂದೆಂದೂ ನೋಡಿರದ ಒಳಾಂಗಣವನ್ನು ನಿರೀಕ್ಷಿಸಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲು ಸೌಕರ್ಯಗಳು ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ಉತ್ತಮ ಪ್ರಯಾಣಿಕರ ಸೌಲಭ್ಯಗಳು, ಮಾಡ್ಯುಲರ್ ಪ್ಯಾಂಟ್ರಿ, ಉತ್ತಮವಾಗಿ ವಿನ್ಯಾಸಗೊಳಿಸಲಾದ ವಾಸನೆ-ಮುಕ್ತ ಶೌಚಾಲಯ ಸೌಲಭ್ಯಗಳು, ಸೆನ್ಸರ್ ಇರುವ ಇಂಟರ್ ಕಮ್ಯುನಿಕೇಶನ್ ಡೋರ್ಗಳು, ಸ್ವಯಂಚಾಲಿತವಾಗಿ ತೆರೆಯುವ ಪ್ರಯಾಣಿಕರ ಬಾಗಿಲುಗಳು, 1 ನೇ ಎಸಿ ಕ್ಯಾರೇಜ್ನಲ್ಲಿ ಬಿಸಿನೀರಿನ ಶವರ್ಗಳು, ಶಾಂತ ಆಂತರಿಕ ವಾತಾವರಣಕ್ಕಾಗಿ ಶಬ್ದ ನಿರೋಧನವನ್ನು ಅಳವಡಿಸಲಾಗಿದೆ.
ಅಧಿಕಾರಿಗಳ ಪ್ರಕಾರ, ವಂದೇ ಭಾರತ್ ಸ್ಲೀಪರ್ ರೈಲುಗಳು ಸುಗಮ ಮತ್ತು ಅಡೆತಡೆಯಿಲ್ಲದ ಪ್ರಯಾಣವನ್ನು ಒದಗಿಸುವ ನಿರೀಕ್ಷೆಯಿದೆ. ಹೆಚ್ಚುವರಿಯಾಗಿ, ರೈಲಿನ ಸುಧಾರಿತ ಬೋಗಿ ವಿನ್ಯಾಸವು ಒಟ್ಟಾರೆಯಾಗಿ ಪ್ರಯಾಣ ಸೌಕರ್ಯವನ್ನು ಅಧಿಕ ಮಾಡುತ್ತದೆ. ಯಾವುದೇ ಅಪಘಾತವನ್ನು ತಡೆಯಲು ಸುರಕ್ಷಿತ ಫೀಚರ್ಗಳನ್ನು ಕೂಡಾ ಅಳವಡಿಸಲಾಗಿದೆ.
ವಂದೇ ಭಾರತ್ ಸ್ಲೀಪರ್ ರೈಲು ಸುರಕ್ಷತೆ ವಂದೇ ಭಾರತ್ ಸ್ಲೀಪರ್ ರೈಲು ದೇಶೀಯವಾಗಿ ರಚಿಸಲಾದ ಕವಚ್ ವ್ಯವಸ್ಥೆಯನ್ನು ಹೊಂದಿದೆ. ಇದು ರೈಲನ್ನು ಅಪಘಾತದಿಂದ ತಡೆಯುವ ವ್ಯವಸ್ಥೆಯಾಗಿದೆ. ಆರಂಭದಲ್ಲಿ, ಬಿಇಎಂಎಲ್ ಭಾರತೀಯ ರೈಲ್ವೆಗಾಗಿ 10 ವಂದೇ ಭಾರತ್ ಸ್ಲೀಪರ್ ರೈಲುಗಳನ್ನು ಉತ್ಪಾದಿಸುತ್ತದೆ. ರೈಲಿನ ನಿರ್ಮಾಣದ ಜವಾಬ್ದಾರಿಯನ್ನು ಬಿಇಎಂಎಲ್ ಹೊಂದಿದ್ದರೂ, ಐಸಿಎಫ್ ಪ್ರೊಪಲ್ಷನ್ ಸಿಸ್ಟಮ್ಗಳನ್ನು ಒದಗಿಸುತ್ತಿದೆ.
ದೇಶ
ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.
ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.
ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.
ದೇಶ
ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.
ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.
ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.
ದೇಶ
ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,
“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.
ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.
ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,
“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ