ದೇಶ
ವಂದೇ ಭಾರತ್ ಸ್ಪೀಪರ್ ರೈಲಿನ 8 ಕುತೂಹಲಕಾರಿ ಸಂಗಿತಿಗಳನ್ನು ತಿಳಿಯಿರಿ

ವಂದೇ ಭಾರತ್ ಸ್ಲೀಪರ್ ರೈಲು ಭಾರತದ ಪ್ರಮುಖ ರೈಲು ಪ್ರಯಾಣ ವ್ಯವಸ್ಥೆಯಲ್ಲಿ ಒಂದಾಗಿದೆ. ಇದರಿಂದಾಗಿ ದೀರ್ಘಾವಧಿಯ ರಾತ್ರಿಯ ರೈಲು ಪ್ರಯಾಣ ಸುಗಮವಾಗಿದೆ. ಈಗ ಭಾರತೀಯ ರೈಲ್ವೇಯು ಈ ಸ್ಲೀಪರ್ ರೈಲನ್ನು ಸಂಪೂರ್ಣವಾಗಿ ಹೊಸ ವಿನ್ಯಾಸದೊಂದಿಗೆ ಪರಿಚಯಿಸಲು ಸಿದ್ಧವಾಗಿದೆ. ಇದು ಫೆಬ್ರವರಿ 2024 ರ ವೇಳೆಗೆ ಪ್ರಾರಂಭವಾಗುವ ನಿರೀಕ್ಷೆಯಿದ,
ವಂದೇ ಭಾರತ್ ಸ್ಲೀಪರ್ ರೈಲು “ವಿಶ್ವ ದರ್ಜೆಯ”, ರೈಲು ಎಂದು ಭಾರತೀಯ ರೈಲ್ವೆ ಹೇಳಿದೆ. ಈ ರೈಲಿನಲ್ಲಿ ಉತ್ತಮ ಸೇವೆ ಇರಲಿದ್ದು, ಅಂತಿಮವಾಗಿ ರಾಜಧಾನಿ ಎಕ್ಸ್ಪ್ರೆಸ್ ರೈಲುಗಳನ್ನು ಬದಲಿಸಲು ನಿರ್ಧರಿಸಲಾಗಿದೆ. ಜನರಿಗೆ ಪ್ರಯಾಣದ ಅನುಭವವನ್ನೇ ಬದಲಾವಣೆ ಮಾಡುವ ನಿಟ್ಟಿನಲ್ಲಿ ಈ ರೈಲುಗಳನ್ನು ಆರಂಭಿಸಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲು ಯೋಜನೆಯ ಕುರಿತು ಕೆಲವು ಪ್ರಮುಖ, ಕುತೂಹಲಕಾರಿ ಸಂಗತಿಗಳು ಇಲ್ಲಿವೆ, ಮುಂದೆ ಓದಿ..
ವಂದೇ ಭಾರತ್ ಸ್ಲೀಪರ್ ರೈಲು ಉತ್ಪಾದನೆ ಈ ಪ್ರೀಮಿಯಂ ರೈಲಿನ ಉತ್ಪಾದನೆಯು ಅಕ್ಟೋಬರ್ನಲ್ಲಿ ಬಿಇಎಂಎಲ್ ಲಿಮಿಟೆಡ್ನ ಬೆಂಗಳೂರು ಸಂಕೀರ್ಣದಲ್ಲಿ ಈಗಾಗಲೇ ಪ್ರಾರಂಭವಾಗಿದೆ. ಭಾರತೀಯ ರೈಲ್ವೆಯ ಕೋಚ್ ಫ್ಯಾಕ್ಟರಿ ಐಸಿಎಫ್ ಸಹಯೋಗದೊಂದಿಗೆ ಬಿಇಎಂಎಲ್ ಈ ರೈಲನ್ನು ತಯಾರಿಸುತ್ತಿದೆ. ವಂದೇ ಭಾರತ್ ಸ್ಲೀಪರ್ ರೈಲು ಕಾಂಪೋಸಿಷನ್ ಶೀಘ್ರವೇ ಆರಂಭವಾಗಲಿರುವ ವಂದೇ ಭಾರತ್ ಸ್ಲೀಪರ್ ರೈಲು ಒಟ್ಟು 16 ಕೋಚ್ಗಳನ್ನು ಹೊಂದಿರಲಿದೆ. 11 ಎಸಿ 3-ಟೈರ್ ಕೋಚ್ಗಳು, 4 ಎಸಿ 2-ಟೈರ್ ಕೋಚ್ಗಳು ಮತ್ತು 1 ಎಸಿ 1 ನೇ ಕೋಚ್ ಇರಲಿದೆ. ಹೆಚ್ಚುವರಿಯಾಗಿ, ರೈಲು 823 ಬರ್ತ್ಗಳನ್ನು ಹೊಂದಿರುತ್ತದೆ.
ವಂದೇ ಭಾರತ್ ಸ್ಲೀಪರ್ ರೈಲಿನ ವೇಗ ವಂದೇ ಭಾರತ್ ಸ್ಲೀಪರ್ ರೈಲು ಕೂಡ ಎಸಿ ಚೇರ್ ಕಾರ್ ವರ್ಜನ್ನಂತೆಯೇ 160 ಕಿಮೀ ವೇಗದಲ್ಲಿ ಓಡುವ ಸಾಮರ್ಥ್ಯವನ್ನು ಹೊಂದಿದೆ. ಇದು ಸೆಮಿ- ಹೈ ಸ್ಪೀಡ್ ರೈಲು ಸೆಟ್ ಆಗಿದೆ. ಈ ರೈಲು ವೇಗವಾಗಿರುವ ಕಾರಣದಿಂದಾಗಿ ಪ್ರಯಾಣದ ಸಮಯವು ಗಮನಾರ್ಹವಾಗಿ ಕಡಿಮೆಯಾಗುತ್ತದೆ. ವಂದೇ ಭಾರತ್ ಸ್ಲೀಪರ್ ರೈಲಿನ ಹೊರಭಾಗ ಸ್ಲೀಪರ್ ರೈಲಿನ ಹೊರಭಾಗವು ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಹೋಲುತ್ತದೆ. ಇದು ಏರೋಡೈನಾಮಿಕ್ ಆಗಿರುತ್ತದೆ. ನೋಡುವಾಗ ಕೊಂಚ ಬುಲೆಟ್ ಟ್ರೈನ್ಗಳಂತೆಯೇ ಕಾಣುತ್ತದೆ. ಹಾಗೆಯೇ ಪ್ರತಿ ಕೊನೆಯಲ್ಲಿ ಡ್ರೈವಿಂಗ್ ಕ್ಯಾಬಿನ್ ಅನ್ನು ಹೊಂದಿರುತ್ತದೆ.
ವಂದೇ ಭಾರತ್ ಸ್ಲೀಪರ್ ರೈಲು ಒಳಾಂಗಣ ರೈಲಿನ ಒಳಭಾಗವನ್ನು ನೀವು ನೋಡಿದರೆ ವಾವ್ ಎಂದು ಹೇಳುವುದು ಖಂಡಿತವಾಗಿದೆ. ಬಿಇಎಂಎಲ್ ಪ್ರಕಾರ, ಹೊಸ ರೈಲು “ಅತ್ಯುತ್ತಮ ದರ್ಜೆಯ ಒಳಾಂಗಣಗಳನ್ನು” ಹೊಂದಿರುತ್ತದೆ. ವಿದೇಶಗಳಲ್ಲಿ ಓಡುವ ಸೂಪರ್ ರೈಲುಗಳಿಂದ ಸ್ಫೂರ್ತಿ ಪಡೆದ ರೈಲು ಇದಾಗಿರುವ ಕಾರಣ, ಹಿಂದೆಂದೂ ನೋಡಿರದ ಒಳಾಂಗಣವನ್ನು ನಿರೀಕ್ಷಿಸಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲು ಸೌಕರ್ಯಗಳು ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ಉತ್ತಮ ಪ್ರಯಾಣಿಕರ ಸೌಲಭ್ಯಗಳು, ಮಾಡ್ಯುಲರ್ ಪ್ಯಾಂಟ್ರಿ, ಉತ್ತಮವಾಗಿ ವಿನ್ಯಾಸಗೊಳಿಸಲಾದ ವಾಸನೆ-ಮುಕ್ತ ಶೌಚಾಲಯ ಸೌಲಭ್ಯಗಳು, ಸೆನ್ಸರ್ ಇರುವ ಇಂಟರ್ ಕಮ್ಯುನಿಕೇಶನ್ ಡೋರ್ಗಳು, ಸ್ವಯಂಚಾಲಿತವಾಗಿ ತೆರೆಯುವ ಪ್ರಯಾಣಿಕರ ಬಾಗಿಲುಗಳು, 1 ನೇ ಎಸಿ ಕ್ಯಾರೇಜ್ನಲ್ಲಿ ಬಿಸಿನೀರಿನ ಶವರ್ಗಳು, ಶಾಂತ ಆಂತರಿಕ ವಾತಾವರಣಕ್ಕಾಗಿ ಶಬ್ದ ನಿರೋಧನವನ್ನು ಅಳವಡಿಸಲಾಗಿದೆ.
ಅಧಿಕಾರಿಗಳ ಪ್ರಕಾರ, ವಂದೇ ಭಾರತ್ ಸ್ಲೀಪರ್ ರೈಲುಗಳು ಸುಗಮ ಮತ್ತು ಅಡೆತಡೆಯಿಲ್ಲದ ಪ್ರಯಾಣವನ್ನು ಒದಗಿಸುವ ನಿರೀಕ್ಷೆಯಿದೆ. ಹೆಚ್ಚುವರಿಯಾಗಿ, ರೈಲಿನ ಸುಧಾರಿತ ಬೋಗಿ ವಿನ್ಯಾಸವು ಒಟ್ಟಾರೆಯಾಗಿ ಪ್ರಯಾಣ ಸೌಕರ್ಯವನ್ನು ಅಧಿಕ ಮಾಡುತ್ತದೆ. ಯಾವುದೇ ಅಪಘಾತವನ್ನು ತಡೆಯಲು ಸುರಕ್ಷಿತ ಫೀಚರ್ಗಳನ್ನು ಕೂಡಾ ಅಳವಡಿಸಲಾಗಿದೆ.
ವಂದೇ ಭಾರತ್ ಸ್ಲೀಪರ್ ರೈಲು ಸುರಕ್ಷತೆ ವಂದೇ ಭಾರತ್ ಸ್ಲೀಪರ್ ರೈಲು ದೇಶೀಯವಾಗಿ ರಚಿಸಲಾದ ಕವಚ್ ವ್ಯವಸ್ಥೆಯನ್ನು ಹೊಂದಿದೆ. ಇದು ರೈಲನ್ನು ಅಪಘಾತದಿಂದ ತಡೆಯುವ ವ್ಯವಸ್ಥೆಯಾಗಿದೆ. ಆರಂಭದಲ್ಲಿ, ಬಿಇಎಂಎಲ್ ಭಾರತೀಯ ರೈಲ್ವೆಗಾಗಿ 10 ವಂದೇ ಭಾರತ್ ಸ್ಲೀಪರ್ ರೈಲುಗಳನ್ನು ಉತ್ಪಾದಿಸುತ್ತದೆ. ರೈಲಿನ ನಿರ್ಮಾಣದ ಜವಾಬ್ದಾರಿಯನ್ನು ಬಿಇಎಂಎಲ್ ಹೊಂದಿದ್ದರೂ, ಐಸಿಎಫ್ ಪ್ರೊಪಲ್ಷನ್ ಸಿಸ್ಟಮ್ಗಳನ್ನು ಒದಗಿಸುತ್ತಿದೆ.
ದೇಶ
ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ
ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.
ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.
🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್ಸ್ಟ್ರಿಪ್ಗಳು, ಹೆಲಿಪ್ಯಾಡ್ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:
- ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
- ಸಿಸಿಟಿವಿ ಕಣ್ಗಾವಲು ಬಿಗಿತ
- ಸರಕು, ಪಾರ್ಸೆಲ್ ಮತ್ತು ಮೇಲ್ಗಳ ತಪಾಸಣೆ
- ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ
🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:
ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.
ದೇಶ
ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ
ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.
ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್ ಮೌಲ್ಯದ ಪಲ್ಲಾಡಿಯಮ್ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.
ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್ಎನ್ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.
ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.
ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕ್ರೀಡೆ
ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!
ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.
ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.
ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.
ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ಕ್ರೀಡೆ2 months ago
ಇಂದು ಐಪಿಎಲ್ ಫೈನಲ್- ಆರ್ಸಿಬಿಗೆ ಶುಭಕೋರಿದ ಎಸ್ಟಿಎಸ್!