Connect with us

ಸಿನಿಮಾ

ರಿಲೀಸ್​ಗೂ ಮೊದಲೇ ‘ಜವಾನ್’ ಸಿನಿಮಾ ದಾಖಲೆ ಮುರಿದ ‘ಅನಿಮಲ್’ ಸಿನಿಮಾ

Published

on

ರಿಲೀಸ್​ಗೂ ಮೊದಲೇ ‘ಜವಾನ್’ ಸಿನಿಮಾ ದಾಖಲೆ ಮುರಿದ ‘ಅನಿಮಲ್’ ಸಿನಿಮಾ

ಬಾಲಿವುಡ್​ಗೆ ಹಾರಿದ ನಟಿ ರಶ್ಮಿಕಾ ಮಂದಣ್ಣ, ರಣಬೀರ್ ಕಪೂರ್ ಜೊತೆ ಅನಿಮಲ್ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಇದೀಗ ಅನಿಮಲ್ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದ್ದು, ನಿರ್ದೇಶಕರೇ ಬಿಡುಗಡೆ ದಿನಾಂಕ ಘೋಷಿಸಿದ್ದಾರೆ.ಬಾಕ್ಸ್ ಆಫೀಸ್​ನಲ್ಲಿ ‘ಜವಾನ್’ ಹಾಗೂ ‘ಬ್ರಹ್ಮಾಸ್ತ್ರ’ ಸಿನಿಮಾ ಒಳ್ಳೆಯ ಗಳಿಕೆ ಮಾಡಿದ್ದವು. ಕೇವಲ ಭಾರತ ಮಾತ್ರವಲ್ಲದೆ ವಿದೇಶಿ ಮಾರುಕಟ್ಟೆಯಲ್ಲೂ ಚಿತ್ರಕ್ಕೆ ಒಳ್ಳೆಯ ಗಳಿಕೆ ಆಗಿತ್ತು. ಈಗ ‘ಅನಿಮಲ್’ ಚಿತ್ರಕ್ಕೆ ವಿದೇಶದಲ್ಲಿ ಹೆಚ್ಚು ಸ್ಕ್ರೀನ್ ಸಿಗುತ್ತಿರುವುದರಿಂದ ಸಹಜವಾಗಿಯೇ ಗಳಿಕೆ ಹೆಚ್ಚಲಿದೆ.ಡಿಸೆಂಬರ್ ತಿಂಗಳು ಬಂತೆಂದರೆ ಸಿನಿಪ್ರಿಯರಿಗೆ ಖುಷಿಯೋ ಖುಷಿ. ಕ್ರಿಸ್​ಮಸ್ ಸಮಯ ಎಂಬ ಕಾರಣಕ್ಕೆ ಸಾಕಷ್ಟು ಸಿನಿಮಾಗಳು ಈ ಸಂದರ್ಭದಲ್ಲಿ ರಿಲೀಸ್ ಆಗುತ್ತವೆ. ಬಿಗ್ ಬಜೆಟ್ ಚಿತ್ರಗಳು ಈ ಸಂದರ್ಭದಲ್ಲಿ ರಿಲೀಸ್ ಆಗಿ ಅಬ್ಬರಿಸುತ್ತವೆ. ಈ ವರ್ಷ ಡಿಸೆಂಬರ್​ನಲ್ಲೂ ಹಲವು ಚಿತ್ರಗಳು ಬಿಡುಗಡೆ ಆಗುತ್ತಿವೆ. ಆ ಪೈಕಿ ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ಅನಿಮಲ್’ ಚಿತ್ರ ಸಾಕಷ್ಟು ಕುತೂಹಲ ಮೂಡಿಸಿದೆ. ರಿಲೀಸ್​ಗೂ ಮೊದಲೇ ಈ ಚಿತ್ರ ‘ಜವಾನ್’ ಚಿತ್ರದ ದಾಖಲೆಯನ್ನು ಉಡೀಸ್ ಮಾಡಿದೆ.
ಈ ಚಿತ್ರದಲ್ಲಿ ರಣಬೀರ್ ಕಪೂರ್ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರು ರಣಬೀರ್ ಕಪೂರ್​ಗೆ ಜೊತೆಯಾಗಿದ್ದಾರೆ. ಈ ಚಿತ್ರದಲ್ಲಿ ರಣಬೀರ್ ಕಪೂರ್ ಅವರು ಎರಡು ಶೇಡ್​ನ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರ ಅಮೆರಿಕದಲ್ಲಿ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ.‘ಅನಿಮಲ್’ ಸಿನಿಮಾ ಉತ್ತರ ಅಮೆರಿಕದಲ್ಲಿ 888 ಪರದೆಗಳಲ್ಲಿ ರಿಲೀಸ್ ಆಗುತ್ತಿದೆ. ಈ ಮೊದಲು ರಿಲೀಸ್ ಆದ ‘ಜವಾನ್’ ಚಿತ್ರಕ್ಕೆ ಈ ಭಾಗದಲ್ಲಿ 850 ಪರದೆಗಳು ಸಿಕ್ಕಿದ್ದವು. ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ 810 ಪರದೆಗಳು ದೊರೆತಿದ್ದವು. ಈ ದಾಖಲೆಯನ್ನು ‘ಅನಿಮಲ್’ ಸಿನಿಮಾ ಮುರಿದು ಹಾಕಿದೆ. ಅಮೆರಿಕದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿರುವ ಮೊದಲ ಹಿಂದಿ ಸಿನಿಮಾ ಎನ್ನುವ ಜನಪ್ರಿಯತೆ ಈ ಚಿತ್ರಕ್ಕೆ ಸಿಕ್ಕಿದೆ.ಬಾಕ್ಸ್ ಆಫೀಸ್​ನಲ್ಲಿ ‘ಜವಾನ್’ ಹಾಗೂ ‘ಬ್ರಹ್ಮಾಸ್ತ್ರ’ ಸಿನಿಮಾ ಒಳ್ಳೆಯ ಗಳಿಕೆ ಮಾಡಿದ್ದವು. ಕೇವಲ ಭಾರತ ಮಾತ್ರವಲ್ಲದೆ ವಿದೇಶಿ ಮಾರುಕಟ್ಟೆಯಲ್ಲೂ ಚಿತ್ರಕ್ಕೆ ಒಳ್ಳೆಯ ಗಳಿಕೆ ಆಗಿತ್ತು. ಈಗ ‘ಅನಿಮಲ್’ ಚಿತ್ರಕ್ಕೆ ವಿದೇಶದಲ್ಲಿ ಹೆಚ್ಚು ಸ್ಕ್ರೀನ್ ಸಿಗುತ್ತಿರುವುದರಿಂದ ಸಹಜವಾಗಿಯೇ ಗಳಿಕೆ ಹೆಚ್ಚಲಿದೆ. ಇದರಿಂದ ನಿರ್ಮಾಪಕರ ಮೊಗದಲ್ಲಿ ನಗು ಮೂಡಿದೆ.

ಕಥಾ ನಾಯಕನಿಗೆ ಅಲ್ಲಿ ಎರಡು ಶೇಡ್ ಇತ್ತು. ‘ಅನಿಮಲ್’ ಚಿತ್ರಕ್ಕೂ ಇದೇ ಥೀಮ್ ಇದೆ. ಸಿನಿಮಾ ರಾ ಆಗಿದೆ ಹಾಗೂ ಕಥಾ ನಾಯಕನಿಗೆ ಎರಡು ಶೇಡ್ ಇದೆ ಅನ್ನೋದು ಟೀಸರ್ ಮೂಲಕ ಗೊತ್ತಾಗಿದೆ. ಈ ಕಾರಣದಿಂದಲೇ ‘ಅನಿಮಲ್’ ನೋಡಲು ಫ್ಯಾನ್ಸ್ ಕಾದಿದ್ದಾರೆ. ಟಿ-ಸೀರಿಸ್ ಮೂಲಕ ಭೂಷಣ್​ ಕುಮಾರ್, ಮೊದಲಾದವರು ಸಿನಿಮಾ ನಿರ್ಮಾಣ ಮಾಡಿದ್ದಾರೆ. ರಣಬೀರ್, ರಶ್ಮಿಕಾ ಜೊತೆ ಬಾಬಿ ಡಿಯೋಲ್, ಅನಿಲ್ ಕಪೂರ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಡಿಸೆಂಬರ್ 1ರಂದು ವಿಶ್ವಾದ್ಯಂತ ಚಿತ್ರ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಟ್ರೇಲರ್​ಗಾಗಿ ಫ್ಯಾನ್ಸ್ ಕಾದಿದ್ದಾರೆ.

ದೇಶ

ರಾಜಮೌಳಿ ಚಿತ್ರದಲ್ಲಿ ಜೂ. ಎನ್‌ಟಿಆರ್ ಪುತ್ರ ಎಂಟ್ರಿ? ‘ವಾರಣಾಸಿ’ ಬಗ್ಗೆ ಭಾರೀ ಚರ್ಚೆ

Published

on

ನವದೆಹಲಿ: ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ S. S. Rajamouli ಅವರ ಸಿನಿಮಾಗಳು ವಿಶ್ವದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿವೆ. ಅವರ ಹೊಸ ಸಿನಿಮಾ ‘ವಾರಣಾಸಿ’ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದ್ದು, ಇದಕ್ಕೆ ಸಂಬಂಧಿಸಿದ ಹೊಸ ಸುದ್ದಿಯೊಂದು ಸಿನಿ ವಲಯದಲ್ಲಿ ಸದ್ದು ಮಾಡುತ್ತಿದೆ.

ಸ್ಟಾರ್ ನಟ Jr. NTR ಅವರ ಪುತ್ರ ಭಾರ್ಗವ್ ರಾಮ್ ಈ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಚಿತ್ರದಲ್ಲಿ ನಟಿಸುತ್ತಿರುವ Mahesh Babu ಅವರ ಬಾಲ್ಯದ ಪಾತ್ರದಲ್ಲಿ ಭಾರ್ಗವ್ ರಾಮ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ರಾಜಮೌಳಿ ಅವರ ಸಿನಿಮಾಗಳಲ್ಲಿ ನಾಯಕನ ಬಾಲ್ಯದ ಕಥೆಗೆ ವಿಶೇಷ ಮಹತ್ವವಿರುತ್ತದೆ. ಇದೇ ಶೈಲಿಯನ್ನು ‘ವಾರಣಾಸಿ’ ಸಿನಿಮಾದಲ್ಲಿಯೂ ಮುಂದುವರಿಸಲಾಗುತ್ತಿದ್ದು, ಫ್ಲ್ಯಾಶ್‌ಬ್ಯಾಕ್ ಸನ್ನಿವೇಶದಲ್ಲಿ ಬಾಲ್ಯದ ಪಾತ್ರ ಪ್ರಮುಖ ಪಾತ್ರವಹಿಸಲಿದೆ ಎಂದು ತಿಳಿದುಬಂದಿದೆ.

ಹೆಚ್ಚಿನ ಆಸಕ್ತಿಯ ಸಂಗತಿ ಎಂದರೆ, Jr. NTR ಕೂಡ ಬಾಲನಟನಾಗಿಯೇ ತಮ್ಮ ಸಿನಿ ಜೀವನವನ್ನು ಆರಂಭಿಸಿದ್ದರು. ‘ರಾಮಾಯಣಂ’ ಚಿತ್ರದಲ್ಲಿ ಅಭಿನಯಿಸಿ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದರು. ಈಗ ಅವರ ಪುತ್ರವೂ ಅದೇ ಹಾದಿಯಲ್ಲಿ ಸಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಈ ಸಿನಿಮಾದಲ್ಲಿ ನಟಿಸಲು ಅನೇಕ ದೊಡ್ಡ ನಟರು ಆಸಕ್ತಿ ತೋರಿಸುತ್ತಿದ್ದು, ಸಂಭಾವನೆ ಇಲ್ಲದಿದ್ದರೂ ಪಾತ್ರಕ್ಕಾಗಿ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ. ರಾಜಮೌಳಿ ನಿರ್ದೇಶನ ಮತ್ತು ಮಹೇಶ್ ಬಾಬು ನಟನೆಯ ಸಂಯೋಜನೆಯಿಂದ ‘ವಾರಣಾಸಿ’ ಈಗಾಗಲೇ ಬಹು ನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.

ಒಟ್ಟಾರೆ, ಭಾರ್ಗವ್ ರಾಮ್ ಅವರ ಎಂಟ್ರಿ ಬಗ್ಗೆ ಅಧಿಕೃತ ಘೋಷಣೆ ಇನ್ನೂ ಬಾರದಿದ್ದರೂ, ಈ ಸುದ್ದಿ ಜೂ. ಎನ್‌ಟಿಆರ್ ಅಭಿಮಾನಿಗಳಿಗೆ ಸಂತಸದ ಅಲೆ ಮೂಡಿಸಿದೆ.

Continue Reading

ದೇಶ

‘ಬಡೇ ಸಾಬ್’ ಪಾತ್ರದ ಹಿಂದಿನ ಸತ್ಯ: ದಾವೂದ್ ಕುರಿತ ಚರ್ಚೆ

Published

on

ಬೆಂಗಳೂರು: ಭಾರತದ ಮೋಸ್ಟ್ ವಾಂಟೆಡ್ ಅಪರಾಧಿ Dawood Ibrahim ಮತ್ತೆ ಸುದ್ದಿಯಲ್ಲಿದ್ದಾರೆ. ಬಾಲಿವುಡ್‌ನಲ್ಲಿ ಬಿಡುಗಡೆಯಾದ Dhurandhar 2 ಚಿತ್ರದ ಭಾರೀ ಯಶಸ್ಸಿನ ಬೆನ್ನಲ್ಲೇ ದಾವೂದ್ ಇಬ್ರಾಹಿಂ ಕುರಿತ ಚರ್ಚೆ ಮತ್ತೆ ಜೋರಾಗಿದೆ.

1990ರ ದಶಕದ 1993 Bombay bombings ದಾಳಿಗಳ ಮಾಸ್ಟರ್ ಮೈಂಡ್ ಆಗಿದ್ದ ದಾವೂದ್, ನಂತರ ಪಾಕಿಸ್ತಾನಕ್ಕೆ ಪಲಾಯನ ಮಾಡಿದನು. ಅಂದಿನಿಂದಲೇ ತನ್ನ ‘ಡಿ-ಗ್ಯಾಂಗ್’ ಕಾರ್ಯಾಚರಣೆಗಳನ್ನು ಅಲ್ಲಿಂದಲೇ ನಿರ್ವಹಿಸುತ್ತಿದ್ದಾನೆ ಎಂಬ ಆರೋಪಗಳಿವೆ.

ಸದ್ಯದ ಮಾಹಿತಿಗಳ ಪ್ರಕಾರ, ದಾವೂದ್ ಪಾಕಿಸ್ತಾನದ Karachi ನಗರದಲ್ಲಿನ ಕ್ಲಿಫ್ಟನ್ ಪ್ರದೇಶದ 13ನೇ ರಸ್ತೆಯ ‘ವೈಟ್ ಹೌಸ್’ ಎಂಬ ಐಷಾರಾಮಿ ಮನೆಯಲ್ಲಿ ವಾಸಿಸುತ್ತಿದ್ದಾನೆ ಎನ್ನಲಾಗುತ್ತಿದೆ. ಈ ಪ್ರದೇಶವು ಪಾಕಿಸ್ತಾನದ ಅತ್ಯಂತ ಭದ್ರತಾ ವ್ಯವಸ್ಥೆ ಹೊಂದಿರುವ ಪ್ರದೇಶಗಳಲ್ಲಿ ಒಂದಾಗಿದೆ.

ಇನ್ನೂ ಕೆಲವು ವರದಿಗಳ ಪ್ರಕಾರ, ಕರಾಚಿಯ ಡಿಫೆನ್ಸ್ ಹೌಸಿಂಗ್ ಏರಿಯಾ (DHA) ಹಾಗೂ ಖಯ್ಯುಮಾಬಾದ್ ಪ್ರದೇಶದಲ್ಲಿಯೂ ದಾವೂದ್ ನಿವಾಸ ಹೊಂದಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ. ಭಾರತೀಯ ಗುಪ್ತಚರ ಸಂಸ್ಥೆಗಳಿಗೂ ಇದೇ ರೀತಿಯ ಮಾಹಿತಿ ಲಭ್ಯವಾಗಿದೆ ಎಂದು ಹೇಳಲಾಗುತ್ತಿದೆ.

‘ಧುರಂಧರ್ 2’ ಸಿನಿಮಾದಲ್ಲಿ ‘ಬಡೇ ಸಾಬ್’ ಎಂಬ ಪಾತ್ರದ ಮೂಲಕ ದಾವೂದ್ ಇಬ್ರಾಹಿಂನಂತೆ ಕಾಣುವ ಪಾತ್ರವನ್ನು ಚಿತ್ರಿಸಲಾಗಿದೆ. ನೈಜ ಘಟನೆಗಳನ್ನು ಆಧರಿಸಿದ ಕಥಾಹಂದರ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದು, ಈ ಪಾತ್ರ ಭಾರೀ ಚರ್ಚೆಗೆ ಕಾರಣವಾಗಿದೆ.

ಆದಾಗ್ಯೂ, ದಾವೂದ್ ಇಬ್ರಾಹಿಂ ನಿಖರವಾಗಿ ಎಲ್ಲಿದ್ದಾನೆ ಎಂಬುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ. ಆದರೆ ಸಿನಿಮಾ ಮತ್ತು ಗುಪ್ತಚರ ಮಾಹಿತಿಗಳ ಹಿನ್ನೆಲೆ, ದಾವೂದ್ ಕುರಿತ ಚರ್ಚೆ ಮತ್ತೆ ಜಾಗತಿಕ ಮಟ್ಟದಲ್ಲಿ ತೀವ್ರವಾಗಿದೆ

Continue Reading

ದೇಶ

ಲಾಸ್ ಏಂಜಲೀಸ್‌ನಲ್ಲಿ ‘ರಾಮಾಯಣ’ ಟೀಸರ್ ಸದ್ದು: ರಣಬೀರ್ ಲುಕ್‌ಗೆ ಭಾರೀ ಚಪ್ಪಾಳೆ

Published

on

Continue Reading

Trending