Connect with us

ಬಿಬಿಎಂಪಿ

ದೀಪಾವಳಿ :ಪರಿಸರಸ್ನೇಹಿ ದೀಪಾವಳಿ ಆಚರಣೆಗೆ ಬಿಬಿಎಂಪಿ ಮನವಿ

ದೀಪಾವಳಿ :ಶಬ್ದ ಮಾಲಿನ್ಯ, ವಾಯುಮಾಲಿನ್ಯ ಬೇಡ,ಪರಿಸ್ನೇಹಿ ದೀಪಾವಳಿ ಆಚರಿಸಿ ಎಂದು ಬಿಬಿಎಂಪಿ ಮನವಿ

ದೀಪಾವಳಿ ಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ, ಪರಿಸರಸ್ನೇಹಿ ಹಬ್ಬ ಆಚರಿಸುವಂತೆ ಬಿಬಿಎಂಪಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಬಿಎಂಪಿ, ಹಬ್ಬದ ನೆಪದಲ್ಲಿ ವಾಯುಮಾಲಿನ್ಯಕ್ಕೆ ಹಾಗೂ ಶಬ್ದಮಾಲಿನ್ಯಕ್ಕೆ ಅವಕಾಶ ನೀಡಬೇಡಿ ಎಂದು ಮನವಿ ಮಾಡಿದೆ.ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿಯನ್ನು ನಗರದಾದ್ಯಂತ ಸಡಗರದಿಂದ ಆಚರಿಸಲಾಗುತ್ತದೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳಿಂದ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟಾಗುತ್ತದೆ. ಇದರಿಂದ ಪರಿಸರಕ್ಕೂ ಹಾನಿ ಆಗುತ್ತದೆ. ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಪ್ರಾಣಿ-ಪಕ್ಷಿಗಳ ಕಲರವಕ್ಕೆ ತೊಂದರೆ ಉಂಟುಮಾಡುತ್ತಿದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಆಚರಿಸಿ ಎಂದು ಬಿಬಿಎಂಪಿ ಮನವಿ ಮಾಡಿದೆ. ಪ್ಲಾಸ್ಟಿಕ್ ಮುಕ್ತ ಹಾಗೂ ಮಾಲಿನ್ಯರಹಿತವಾಗಿ ದೀಪಾವಳಿಯನ್ನು ಆಚರಿಸಿ. ಘನ ಸರ್ವೋಚ್ಚ ನ್ಯಾಯಾಲಯದ ಆದೇಶ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನಿರ್ದೇಶನದಂತೆ, ದೀಪಾವಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಬೇಕು. ಪಟಾಕಿಗಳನ್ನು ಕೊಳ್ಳುವ ಸಮಯದಲ್ಲಿ ಪಟಾಕಿಗಳ ಪ್ಯಾಕೆಟ್‌ಗಳ ಮೇಲೆ ಹಸಿರು ಚಿಹ್ನೆಯನ್ನು ಖಚಿತಪಡಿಕೊಳ್ಳಿ. ಕ್ಯೂಆರ್ ಕೋಡ್ ಮೂಲಕ ಪಟಾಕಿಯ ಬಗ್ಗೆತಿಳಿದುಕೊಂಡು ಖರೀದಿಸಿ. ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರವೇ ಪಟಾಕಿಗಳನ್ನು ಸಿಡಿಸಲು ಅವಕಾಶವಿದೆ. ಪಟಾಕಿಯ ಬಳಕೆಯ ಸಮಯದಲ್ಲಿ ಪ್ರಾಣಿಗಳು, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಿ ಎಂದು ಬಿಬಿಎಂಪಿ ಸೂಚನೆ ನೀಡಿದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಹಸಿರು ಪಟಾಕಿಯನ್ನು ಮಾತ್ರ ಬಳಸಬೇಕು. ಈ ಮೂಲಕ ಪರಿಸರಸ್ನೇಹಿ ಹಬ್ಬವನ್ನು ಆಚರಿಸಬೇಕು ಎಂದು ಘನತ್ಯಾಜ್ಯ ವಿಭಾಗದಿಂದ ಆಟೋ ಟಿಪ್ಪರ್​​​ಗಳಲ್ಲಿ ಧ್ವನಿವರ್ಧಕಗಳ ಮೂಲಕ ನಾಗರಿಕರಿಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

ಬಿಬಿಎಂಪಿ

ಬಿಬಿಎಂಪಿ ಘನತ್ಯಾಜ್ಯ ಆಟೋ ಟಿಪ್ಪರ್‌ಗಳಿಗೆ ನೂತನ ಸಮಯ: ಈಗಿನಿಂದ ಬೆಳಿಗ್ಗೆ 5:30ಕ್ಕೆ ಸ್ಕ್ಯಾನಿಂಗ್ ಆರಂಭ

ಬೆಂಗಳೂರು: ನಗರದಲ್ಲಿ ಸ್ವಚ್ಛತಾ ಕಾರ್ಯಗಳ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಿರ್ಧಾರ ಕೈಗೊಂಡಿದೆ. ನಗರದ ವಿವಿಧ ವಾರ್ಡ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಘನತ್ಯಾಜ್ಯ ಸಂಗ್ರಹಣೆಯ ಆಟೋ ಟಿಪ್ಪರ್‌ ವಾಹನಗಳ ಮಸ್ಟರಿಂಗ್ (ಹಾಜರಾತಿ ಸ್ಕ್ಯಾನಿಂಗ್) ಸಮಯವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಈ ಹೊಸ ವೇಳಾಪಟ್ಟಿ ಜಾರಿಗೆ ಬಂದಿದೆ.

ಈ ಮೊದಲು ಬೆಳಿಗ್ಗೆ 6:00 ರಿಂದ 7:30 ರವರೆಗೆ ನಡೆಯುತ್ತಿದ್ದ ಮಸ್ಟರಿಂಗ್ ಸಮಯವನ್ನು ಈಗ ಬೆಳಿಗ್ಗೆ 5:30 ರಿಂದ 6:30 ರವರೆಗೆ ಮುಂಚಿತಗೊಳಿಸಲಾಗಿದೆ.


🧹 ಬದಲಾವಣೆ ಉದ್ದೇಶ ಏನು?

  • ನಿವಾಸಿಗಳು ತಮ್ಮ ತ್ಯಾಜ್ಯವನ್ನು ಕೆಲಸಕ್ಕೆ ಹೊರಡುವ ಮೊದಲು ನೀಡಲು ಅನುಕೂಲ.
  • ಜನರ ದೈನಂದಿನ ಕಾರ್ಯವೈಖರಿಯೊಂದಿಗೆ ತ್ಯಾಜ್ಯ ಸಂಗ್ರಹಣೆ ಜೋಡಣೆ.
  • ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದು ಕಪ್ಪು ಚುಕ್ಕಿ (Black Spot) ರೂಪುಗೊಳ್ಳುವಿಕೆ ತಡೆಯುವುದು.

🤝 ಸಾರ್ವಜನಿಕರ ಸಹಕಾರಕ್ಕೆ ಕರೆ:

ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೀಗೌಡ ಅವರು ಈ ಹೊಸ ಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ನಗರದ ನಾಗರಿಕರಿಂದ ಸಹಕಾರ ಕೋರಿದ್ದಾರೆ.

Continue Reading

ಬಿಬಿಎಂಪಿ

ಜಿಬಿಎ ಚುನಾವಣೆ ಪೂರ್ವಸಿದ್ಧತೆ: ನವೆಂಬರ್ 1ರೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ – ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದ ಪೂರ್ವಸಿದ್ಧತೆಗಳನ್ನು ನವೆಂಬರ್ 1ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಚುನಾವಣೆಗಾಗಿ ಮತದಾರರ ನೋಂದಣಿ ನಿಯಮಗಳನ್ನು ಹೇಗೆ ರೂಪಿಸಬೇಕು ಎಂಬ ಕುರಿತು ಚುನಾವಣಾ ಆಯೋಗದ ಅಭಿಪ್ರಾಯವನ್ನು ಕೇಳಲಾಗುವುದು,” ಎಂದು ಸ್ಪಷ್ಟಪಡಿಸಿದರು.

ಚುನಾವಣೆ ಹಕ್ಕು ಕಾಪಾಡುವ ಕುರಿತು ಮಾರ್ಗದರ್ಶನ:
ಪಕ್ಷದ ಕಾರ್ಯಕರ್ತರು ಮತ್ತು ಬ್ಲಾಕ್ ಅಧ್ಯಕ್ಷರಿಗೆ, ತಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳುವ ಕುರಿತು ಮಾರ್ಗದರ್ಶನ ನೀಡಲಾಗಿದೆ. “ಶಾಸಕರನ್ನು ಹಾಗೂ ಬ್ಲಾಕ್ ಲೆವಲ್ ನಾಯಕರನ್ನು ಮತ್ತೊಮ್ಮೆ ಸಭೆಗೆ ಕರೆದು ಸಿದ್ಧತೆ ಕುರಿತ ಚರ್ಚೆ ನಡೆಯಲಿದೆ,” ಎಂದರು.

ಇಂಡಿಯಾ ಒಕ್ಕೂಟ ಮತ್ತು ಪ್ರತಿಭಟನೆ ಕುರಿತು ಸ್ಪಷ್ಟನೆ:
ಮುಖ್ಯಮಂತ್ರಿಗಳಿಗೆ ಇಂಡಿಯಾ ಒಕ್ಕೂಟದ ಸಭೆಗೆ ಆಹ್ವಾನ ಇದೆ. ನಾನು ಇಲ್ಲಿ ಪ್ರತಿಭಟನಾ ಸಭೆಗಾಗಿ ಸಿದ್ಧತೆಗಳನ್ನು ನೋಡಿಕೊಳ್ಳುತ್ತಿದ್ದೇನೆ,” ಎಂದು ಡಿಸಿಎಂ ಹೇಳಿದರು. “ಸ್ವಾತಂತ್ರ ಉದ್ಯಾನದಲ್ಲಿ ಮತಚೂರಿ ವಿರುದ್ಧsymbolic ಪ್ರತಿಭಟನೆ ನಡೆಯಲಿದ್ದು, ಇದು ನ್ಯಾಯಾಲಯದ ಆದೇಶದಂತೆ ಹಮ್ಮಿಕೊಳ್ಳಲಾಗಿದೆ,” ಎಂದು ಹೇಳಿದರು.

ರಾಜ್ಯಮಟ್ಟದ ಪ್ರತಿಭಟನೆ:
ಪ್ರತಿಯೊಬ್ಬ ಜಿಲ್ಲೆಯಿಂದ ಕನಿಷ್ಠ 50 ನಾಯಕರು, ಕಾರ್ಯಕರ್ತರು, ಪರಾಜಿತ ಅಭ್ಯರ್ಥಿಗಳು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಲಾಗಿದೆ. “ಬೆಂಗಳೂರು ಮಾತ್ರವಲ್ಲ, ಇಡೀ ಕರ್ನಾಟಕದಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ,” ಎಂದು ಅವರು ಹೇಳಿದ್ದಾರೆ.

Continue Reading

ಬಿಬಿಎಂಪಿ

2025ರ ಅಂತ್ಯಕ್ಕೆ ಬಿಬಿಎಂಪಿ ಚುನಾವಣೆ ಸಾಧ್ಯತೆ: ಆರು ವರ್ಷದ ನಿರೀಕ್ಷೆಗೆ ತೆರೆ ಹಾಕಲು ಕಾಂಗ್ರೆಸ್ ಸಿದ್ಧತೆ

ಬೆಂಗಳೂರು, ಜುಲೈ 27 – ಬೆಂಗಳೂರಿನ ಬೃಹತ್ ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಕಳೆದ ಆರು ವರ್ಷಗಳಿಂದ ಚುನಾವಣೆ ನಡೆಯದೇ ಇರುವ ಸ್ಥಿತಿಗೆ ಕೊನೆಗೂ ತೆರೆ ಬೀಳುವ ಸೂಚನೆ ನೀಡಲಾಗಿದೆ. ಈ ವರ್ಷದ ಅಂತ್ಯದಲ್ಲಿ ಬಿಬಿಎಂಪಿ ಹಾಗೂ ಹೊಸದಾಗಿ ರಚಿಸಲಾಗಿರುವ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಸರ್ಕಾರ ಸ್ಪಷ್ಟಪಡಿಸಿದೆ.

ಸರ್ಕಾರದ ಶ್ರದ್ಧೆ ಹಾಗೂ ಕೋರ್ಟ್‌ನಲ್ಲಿ ಮುಂದುವರಿದಿರುವ ವಿಚಾರಣೆ:

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಈ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದು, ಅವರ ಪರವಾಗಿ ವಕೀಲ ಡಿ.ಎಲ್. ಚಿದಾನಂದ ಪ್ರತಿನಿಧಿಸಿದ್ದಾರೆ. ಈ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳು ಸೂರ್ಯಕಾಂತ್ ಮತ್ತು ಜೋಯ್ ಮಾಲ್ಯ ಬಾಗ್ಚಿ ಅವರ ಪೀಠ ಸೋಮವಾರ ನಡೆಸಲಿದೆ.

ಚುನಾವಣೆಯ ಹಿನ್ನಲೆ – ಏಳು ವರ್ಷದ ವಿಳಂಬ:

  • ಬಿಬಿಎಂಪಿ ಸದಸ್ಯರ ಅವಧಿ 2019ರಲ್ಲೇ ಕೊನೆಗೊಂಡಿತ್ತು.
  • ಹೈಕೋರ್ಟ್ 6 ವಾರಗಳಲ್ಲಿ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಿದರೂ, ಸುಪ್ರೀಂ ಕೋರ್ಟ್ ಆ ಆದೇಶವನ್ನು ಅಮಾನತುಗೊಳಿಸಿತು.
  • 2023 ರಲ್ಲಿ ವಾರ್ಡ್ ಮರುರಚನೆ ನಡೆಸಿ ವಾರ್ಡ್‌ಗಳ ಸಂಖ್ಯೆ 198 ರಿಂದ 225 ಕ್ಕೆ ಹೆಚ್ಚಿಸಲಾಯಿತು.
  • ಈ ಮರುರಚನೆಯ ವಿರುದ್ಧ ಸಾರ್ವಜನಿಕ ಹಾಗೂ ಪ್ರತಿಪಕ್ಷಗಳಿಂದ ಗಂಭೀರ ವಿರೋಧ ವ್ಯಕ್ತವಾಯಿತು.
  • ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆ ಮತ್ತು ಮುಂದಿನ ಆಯೋಜನೆ:
  • 2025 ರಲ್ಲಿ ಕಾಂಗ್ರೆಸ್ ಸರ್ಕಾರ ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆ ಮಂಡಿಸಿದ್ದು, ಬೆಂಗಳೂರನ್ನು ಐದು ಹೊಸ ನಗರ ಪಾಲಿಕೆಗಳಾಗಿ ವಿಭಜಿಸಿ “ಗ್ರೇಟರ್ ಬೆಂಗಳೂರು” ಎಂದು ಹೆಸರಿಸಲಾಗಿದೆ. ಈ ಹೊಸ ಪಾಲಿಕೆಗಳಿಗೆ ಸಂಬಂಧಿಸಿದ ವಾರ್ಡ್‌ಗಳ ಗಡಿ ಹಾಗೂ ರೂಪರೇಖೆಯ ಕರಡು ಅಧಿಸೂಚನೆ ಹೊರಬಿದ್ದಿದ್ದು, ನವೆಂಬರ್ 2024 ವೇಳೆಗೆ ಅಂತಿಮ ಅಧಿಸೂಚನೆ ಹೊರಬರುವ ಸಾಧ್ಯತೆ ಇದೆ.
  • ರಾಜಕೀಯ ಬಿಕ್ಕಟ್ಟು ಮತ್ತು ಸಾರ್ವಜನಿಕ ಒತ್ತಡ:
  • ಬಿಬಿಎಂಪಿ ಚುನಾವಣೆ ಮುಂದೂಡುತ್ತಿರುವ ಬಗ್ಗೆ ಕೆಲವು ಶಾಸಕರ ನಿರಾಸಕ್ತಿ ಹಾಗೂ ಅಧಿಕಾರದಲ್ಲಿ ಮುಂದುವರಿಯುವ ಔತ್ಸುಕರತೆ ಕಾರಣಗಳಾಗಿದ್ದವು. ಹಲವಾರು ಪ್ರಭಾವಿ ಮುಖಂಡರು ಈ ಹಿನ್ನೆಲೆಯಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.
Continue Reading

Trending