ರಾಜಕೀಯ

ದೀಪಾವಳಿಗೆ ಬಿಜೆಪಿ ಹೈಕಮಾಂಡ್ ನಿಂದ ಬಂಪರ್ ಗಿಫ್ಟ್:ರಾಜ್ಯ ಬಿಜೆಪಿಗೆ ಇನ್ನು ಬಿ ವೈ ವಿಜಯೇಂದ್ರ ಸಾರಥ್ಯ

ದೀಪಾವಳಿಗೆ ಬಿಜೆಪಿ ಹೈಕಮಾಂಡ್ ನಿಂದ ಬಂಪರ್ ಗಿಫ್ಟ್:ರಾಜ್ಯ ಬಿಜೆಪಿಗೆ ಇನ್ನು ಬಿ ವೈ ವಿಜಯೇಂದ್ರ ಸಾರಥ್ಯ

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರದ ಶಾಸಕ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ನೇಮಕ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ಈ ಮೂಲಕ, ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗಲಿದ್ದಾರೆ ಎಂಬ ಬಹುದಿನಗಳ ಪ್ರಶ್ನೆಗೆ ಈಗ ಉತ್ತರ ಕೊಟ್ಟಂತಾಗಿದೆ. ನಿಕಟಪೂರ್ವ ಅಧ್ಯಕ್ಷರಾಗಿದ್ದ ನಳೀನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಈ ಮೂಲಕ ಅಂತ್ಯಗೊಂಡಿದೆ. ಹಲವಾರು ತಿಂಗಳುಗಳಿಂದ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಾತಿ ಬಗ್ಗೆ ಹಲವರ ಹೆಸರು ಪ್ರಸ್ತಾಪವಾಗಿತ್ತಾದರೂ ಅಂತಿಮವಾಗಿ ವಿಜಯೇಂದ್ರ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.
ಒಂದೆಡೆ ಬಿಎಸ್ವೈ ಸಿಎಂ ಗಾದಿಯಿಂದ ಇಳಿದಿದ್ದರು, ಮತ್ತೊಂದೆಡೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದಿದ್ದರು. ಈ ಬಳಿಕ ಬಿಜೆಪಿ ಪಕ್ಷದಲ್ಲಿ ಲಿಂಗಾಯತರನ್ನು ಕಡೆಗಣಿಸುತ್ತಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ಈ ಆರೋಪದಿಂದ ಮುಕ್ತರಾಗುವುದು ಬಿಜೆಪಿಗೆ ಬೇಕಿತ್ತು. ಅದಕ್ಕಾಗಿಯೇ ಇದೀಗ ಲಿಂಗಾಯತ ಸಮುದಾಯದ ನಾಯಕ ಬಿವೈ ವಿಜಯೇಂದ್ರಗೆ ಮಣೆಹಾಕಿತಾ ಹೈಕಮಾಂಡ್ ಎಂಬ ಚರ್ಚೆ ಶುರುವಾಗಿದೆ.ವಿಧಾನಸಭಾ ಚುನಾವಣೆಯಲ್ಲಿ ಬಿಎಸ್​ ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿದೆ. ಲಿಂಗಾಯತ ಸಮುದಾಯದ ನಾಯಕರನ್ನು ಬಿಜೆಪಿಯಲ್ಲಿ ತುಳಿಯುತ್ತಿದ್ದಾರೆ ಎಂಬ ಆರೋಪಗಳನ್ನು ಬಿಜೆಪಿ ರಾಜ್ಯ ನಾಯಕರೇ ಮಾಡಿದ್ದರು. ಈ ಎಲ್ಲದಕ್ಕೂ ಚೆಕ್ ಇಟ್ಟಿರುವ ಬಿಜೆಪಿ ಹೈಕಮಾಂಡ್​, ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದೆ.

ವಿವೈ ವಿಜಯೇಂದ್ರ ಅವರು 2009ರಲ್ಲಿ ಯುವಮೋರ್ಚ ನಾಯಕರಾಗಿ, 2020ರಲ್ಲಿ ಬಿಜೆಪಿ ಉಪಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರು ಕಾರ್ಯನಿರ್ವಹಿಸಿದ್ದರು. 2018ರಲ್ಲಿ ಶಿರಾ ಉಪಚುನಾವಣೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಸದ್ಯ ನಳಿನ್ ಕುಮಾರ್ ಕಟೀಲ್ ಅವರ ಬಳಿಕ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಶಾಸಕ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದೆ. ಆ ಮೂಲಕ ಕರ್ನಾಟಕ ರಾಜ್ಯ ಬಿಜೆಪಿ ಕಾರ್ಯಕರ್ತರಿಗೆ ಹೈಕಮಾಂಡ್ ಮಹತ್ವದ ಸಂದೇಶವನ್ನು ನೀಡಿದೆ.

Trending

Exit mobile version