Connect with us

ರಾಜಕೀಯ

ವಿಜಯೇಂದ್ರಗೆ ಸಾರಥ್ಯ: ಹಿಂದೂ ‘ಹುಲಿ’ಗೆ ದಕ್ಕದ ಹುದ್ದೆ, ಶೋಭಾ ಕೈ ತಪ್ಪಿದ ಸ್ಥಾನ; ಮಾಜಿ ಸಚಿವ ಸೋಮಣ್ಣ ನೀರವ ಮೌನ!

Published

on

ವಿಜಯೇಂದ್ರಗೆ ಸಾರಥ್ಯ: ಹಿಂದೂ 'ಹುಲಿ'ಗೆ ದಕ್ಕದ ಹುದ್ದೆ, ಶೋಭಾ ಕೈ ತಪ್ಪಿದ ಸ್ಥಾನ; ಮಾಜಿ ಸಚಿವ ಸೋಮಣ್ಣ ನೀರವ ಮೌನ!
ವಿಜಯೇಂದ್ರಗೆ ಸಾರಥ್ಯ: ಹಿಂದೂ 'ಹುಲಿ'ಗೆ ದಕ್ಕದ ಹುದ್ದೆ, ಶೋಭಾ ಕೈ ತಪ್ಪಿದ ಸ್ಥಾನ; ಮಾಜಿ ಸಚಿವ ಸೋಮಣ್ಣ ನೀರವ ಮೌನ!

ಬೆಂಗಳೂರು: ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿದ್ದು ಆಕಾಂಕ್ಷಿಗಳಲ್ಲಿ ಅಸಮಾಧಾನ ಕಟ್ಟೆ ಒಡೆಯುವಂತೆ ಮಾಡಿದೆ. ಪಕ್ಷದ ಹಿರಿಯರು, ಅನುಭವಿಗಳೂ ಆದ ನಮಗೇ ಪಕ್ಷದ ಸಾರಥ್ಯ ಸಿಗುತ್ತದೆ ಎಂದುಕೊಂಡಿದ್ದವರು ಈಗ ಬೇಸರಗೊಂಡಿದ್ದಾರೆ.

ವಿಜಯೇಂದ್ರಗೆ ಪಕ್ಷದ ಸಾರಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಲು ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಸೋಮಣ್ಣ ನಿರಾಕರಿಸಿದ್ದು, ಮೌನವಾಗಿದ್ದರು. ವಿಜಯೇಂದ್ರ ಅಧ್ಯಕ್ಷ ಪಟ್ಟ ವಿಚಾರವನ್ನು ಸೋಮಣ್ಣ ಒಪ್ಪಿಕೊಳ್ಳುತ್ತಾರಾ ಅಥವಾ ಇಲ್ಲವಾ ಎಂಬುದು ಪ್ರಶ್ನೆಯಾಗಿದ್ದು, ಅವರ ನಡೆ ಕುತೂಹಲ ಮೂಡಿಸಿದೆ. ಈ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡದೇ ಮೌನ ವಹಿಸಿದ್ದಾರೆ.

ವಿಜಯೇಂದ್ರ ನೇಮಕ ಕುರಿತು ಮಾಧ್ಯಮದವರು ಕೇಳಿದಾಗ ಸೋಮಣ್ಣ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ನಾನೇ ಸುದ್ದಿಗೋಷ್ಠಿ ಮಾಡುತ್ತೇನೆ ಎಂದಷ್ಟೇ ಹೇಳಿದವರು, ಮುಂದೆ ಒಂದು ಮಾತು ಕೂಡ ಆಡದೇ ಕಾರು ಹತ್ತಿ ಹೊರಟು ಹೋದರು.

ಈ ಹಿಂದೆಯೇ ಹೈಕಮಾಂಡ್ ಬಳಿ ಬಾಯಿ ಬಿಟ್ಟು ರಾಜ್ಯಾಧ್ಯಕ್ಷ ಸ್ಥಾನ ಕೊಡುವಂತೆ ಸೋಮಣ್ಣ ಕೇಳಿದ್ದರು. ತಮಗೆ ಸಾಮರ್ಥ್ಯ ಇದೆ. ನಿಮ್ಮ ಮಾತು ಕೇಳಿ ಎರಡು ಕಡೆ ಸ್ಪರ್ಧಿಸಿ ಸೋತೆ. ನಿಮ್ಮಿಂದಲೇ ನನ್ನ ರಾಜಕೀಯ ಬದುಕು ಅತಂತ್ರವಾಯ್ತು ಅಂತ ಸೂಕ್ಷ್ಮವಾಗಿ ವರಿಷ್ಠರಿಗೆ ತಿಳಿಸಿದ್ದರು. ಆದರೂ ಬಿಜೆಪಿ ವರಿಷ್ಠರೂ ಸೋಮಣ್ಣಗೆ ಮಣೆ ಹಾಕದಿರುವುದು ಸಹಜವಾಗಿಯೇ ಅಸಮಾಧಾನ ಮೂಡಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷರ ರೇಸ್‌ನಲ್ಲಿ ಪ್ರಮುಖವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿ.ಟಿ. ರವಿ, ಬಸನಗೌಡ ಪಾಟೀಲ್ ಯತ್ನಾಳ್ , ವಿ. ಸೋಮಣ್ಣ , ಆರ್. ಅಶೋಕ್ , ಅಶ್ವತ್ಥ್ ನಾರಾಯಣ್ ಸೇರಿದಂತೆ ಹಲವರ ಹೆಸರು ಕೇಳಿ ಬಂದಿತ್ತು. ಆದರೀಗ ಅವರನ್ನೆಲ್ಲ ಹಿಂದಿಕ್ಕಿ ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ ಗೆದ್ದಿದ್ದಾರೆ.

ಮಾಜಿ ಸಚಿವ ಸಿ ಟಿ ರವಿ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಹೈಕಮಾಂಡ್ ಜೊತೆ ಒಳ್ಳೆಯ ಸಂಪರ್ಕ ಇರುವ ಸಿಟಿ ರವಿ ಹಲವು ರಾಜ್ಯಗಳ ಚುನಾವಣೆಗಳಲ್ಲೂ ಸಕ್ರಿಯರಾಗಿ ಭಾಗಿಯಾಗಿದ್ದರು. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನ ಸಿಗಬಹುದು ಅಂತ ಲೆಕ್ಕಾಚಾರ ಹಾಕಿದ್ದರು. ಇದೀಗ ಅವರ ಲೆಕ್ಕಾಚಾರ ಉಲ್ಟಾ ಆಗಿದೆ.

ಇನ್ನೇನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಬಿಜೆಪಿ ರಾಜ್ಯಾಧ್ಯಕ್ಷೆ ಆಗೇ ಬಿಡ್ತಾರೆ ಎಂಬ ಸುದ್ದಿ ದಟ್ಟವಾಗಿಯೇ ಹರಿದಾಡುತ್ತಿತ್ತು. ಮೈಸೂರು ದಸರಾ ವೇಳೆಯಲ್ಲಂತೂ ಅಮಿತ್ ಶಾ ಕಾಲ್ ಮಾಡಿದ್ದು, ರಾಜ್ಯಾಧ್ಯಕ್ಷೆ ಆಗುತ್ತಾರೆ ಅಂತ ವಿಶ್ ಮಾಡಿದ್ದಾರೆ ಎಂಬ ಮಾತುಗಳೂ ಕೇಳಿ ಬಂದಿದ್ದವು. ಆದರೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ ಶೋಭಾ ಕರಂದ್ಲಾಜೆ ಕೈ ತಪ್ಪಿದೆ.

ದೇಶ

Students ಪರ ಧ್ವನಿ ಎತ್ತಲು ಬಿಡುತ್ತಿಲ್ಲ: ರಾಹುಲ್ ಗಾಂಧಿ ಆಕ್ರೋಶ

Published

on

ನವದೆಹಲಿ: Students ಪರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಲು ಆಡಳಿತ ಪಕ್ಷ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮದ ವಿಚಾರವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಲು ಯತ್ನಿಸಿದ ವೇಳೆ ಬಿಜೆಪಿ ಸದಸ್ಯರು ಅಡ್ಡಿಪಡಿಸಿದರು ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ವಿಷಯವನ್ನು ಪ್ರಸ್ತಾಪಿಸುವಾಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಸರನ್ನೂ ಉಲ್ಲೇಖಿಸಿದ್ದಾಗಿ ಹೇಳಿದ್ದಾರೆ. ಆದರೆ ಅದಾದ ತಕ್ಷಣ ಆಡಳಿತ ಪಕ್ಷದ ಸದಸ್ಯರು ಗದ್ದಲ ಸೃಷ್ಟಿಸಿ ತಮ್ಮ ಮಾತು ಪೂರ್ಣಗೊಳಿಸಲು ಅವಕಾಶ ನೀಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಸತ್ತಿನಲ್ಲಿ ತಮ್ಮ ಧ್ವನಿಯನ್ನು ಉದ್ದೇಶಪೂರ್ವಕವಾಗಿ ಅಡಗಿಸಲಾಗುತ್ತಿದೆ ಎಂದು ಆರೋಪಿಸಿರುವ ಅವರು, ಸದನದಲ್ಲಿ ಹೇಳಲು ಅವಕಾಶ ಸಿಗದ ಎಲ್ಲ ವಿಷಯಗಳನ್ನು ಇಂದು ಸಂಜೆ 6 ಗಂಟೆಗೆ ನಡೆಯುವ ತುರ್ತು ಪತ್ರಿಕಾಗೋಷ್ಠಿಯಲ್ಲಿ ದೇಶದ ಜನರ ಮುಂದೆ ಬಹಿರಂಗಪಡಿಸುವುದಾಗಿ ಘೋಷಿಸಿದ್ದಾರೆ.

“ಸಂಸತ್ತಿನಲ್ಲಿ ವಿರೋಧ ಪಕ್ಷದ ಮೈಕ್ರೋಫೋನ್ ಅನ್ನು ಆಫ್ ಮಾಡಬಹುದು. ಆದರೆ ದೇಶದ ವಿದ್ಯಾರ್ಥಿಗಳ ಧ್ವನಿಯನ್ನು ಮತ್ತು ಅವರ ಆಕ್ರೋಶವನ್ನು ಯಾರೂ ಮೌನಗೊಳಿಸಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಲೋಕಸಭೆಯಲ್ಲಿ ಮಾತನಾಡುವ ವೇಳೆ ರಾಹುಲ್ ಗಾಂಧಿ, “ದೇಶದಲ್ಲಿ ಮತ್ತೊಂದು ವರ್ಗದ ಜನರಿದ್ದಾರೆ. ಅವರು ವಿದ್ಯಾರ್ಥಿಗಳಲ್ಲ. ತಮಗೆ ಎಲ್ಲವೂ ಗೊತ್ತು ಎಂದು ಭಾವಿಸುತ್ತಾರೆ. ತಾವೇ ದೇವರು ಎಂಬ ಅಹಂಕಾರದಲ್ಲಿದ್ದಾರೆ. ಇತರರ ಮಾತನ್ನು ಕೇಳುವುದಿಲ್ಲ, ಸತ್ಯಕ್ಕೂ ಗೌರವ ನೀಡುವುದಿಲ್ಲ” ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರವನ್ನು ಟೀಕಿಸಿದರು.

ರಾಹುಲ್ ಗಾಂಧಿ ಅವರ ಈ ಹೇಳಿಕೆಗೆ ಆಡಳಿತ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಲೋಕಸಭೆಯಲ್ಲಿ ಕೆಲಕಾಲ ಗದ್ದಲ ಮತ್ತು ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಸಭಾಧ್ಯಕ್ಷರು ಪರಿಸ್ಥಿತಿ ನಿಯಂತ್ರಿಸಲು ಮಧ್ಯಪ್ರವೇಶಿಸಿದ ಬಳಿಕ ಕಲಾಪ ಮುಂದುವರಿಯಿತು.

ವಿದ್ಯಾರ್ಥಿಗಳ ಪ್ರತಿಭಟನೆ, ಪೊಲೀಸ್ ಕ್ರಮ ಹಾಗೂ ಸಂಸತ್ತಿನಲ್ಲಿ ವಿರೋಧ ಪಕ್ಷದ ಸದಸ್ಯರಿಗೆ ಮಾತನಾಡಲು ಅವಕಾಶ ನೀಡಲಾಗುತ್ತಿದೆಯೇ ಎಂಬ ವಿಚಾರ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ಬೆಳವಣಿಗೆಗಳ ನಡುವೆ ರಾಹುಲ್ ಗಾಂಧಿ ಘೋಷಿಸಿರುವ ಸಂಜೆ 6 ಗಂಟೆಯ ಪತ್ರಿಕಾಗೋಷ್ಠಿಯಲ್ಲಿ ಅವರು ಯಾವ ಹೊಸ ಮಾಹಿತಿಯನ್ನು ಬಹಿರಂಗಪಡಿಸುತ್ತಾರೆ ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿದೆ

Continue Reading

ದೇಶ

‘Prahlad Joshi ಶಿಕ್ಷಣ ಸಚಿವರಾದದ್ದು ಕನ್ನಡಿಗರಿಗೆ ತಲೆತಗ್ಗಿಸುವ ವಿಚಾರ’ : ಸಿದ್ದರಾಮಯ್ಯ

Published

on

ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ (Prahlad Joshi) ಅವರನ್ನು ನೇಮಕ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತೀವ್ರವಾಗಿ ಟೀಕಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಸರಣಿ ಪೋಸ್ಟ್‌ಗಳನ್ನು ಹಂಚಿಕೊಂಡಿರುವ ಅವರು, ಪ್ರಹ್ಲಾದ್ ಜೋಶಿ ನೇಮಕ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳು ಹಾಗೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ನಂತರ, ಅವರ ಸ್ಥಾನಕ್ಕೆ ಪ್ರಹ್ಲಾದ್ ಜೋಶಿ ಅವರನ್ನು ಕೇಂದ್ರ ಶಿಕ್ಷಣ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಸಿದ್ದರಾಮಯ್ಯ ತಮ್ಮ ಪೋಸ್ಟ್‌ನಲ್ಲಿ, “ಕರ್ನಾಟಕದ ಸಂಸದೊಬ್ಬರು ದೇಶದ ಶಿಕ್ಷಣ ಸಚಿವರಾಗಿರುವುದು ಹೆಮ್ಮೆಯ ವಿಷಯವಾಗಬೇಕಿತ್ತು. ಆದರೆ ಮಹಿಳೆಯರ ಮೇಲಿನ ಅಪರಾಧಿಗಳ ಬಗ್ಗೆ ಹಿಂದೆ ನೀಡಿದ್ದ ಹೇಳಿಕೆಗಳ ಹಿನ್ನೆಲೆಯಲ್ಲಿರುವ ಪ್ರಹ್ಲಾದ್ ಜೋಶಿ ಅವರನ್ನು ಶಿಕ್ಷಣ ಸಚಿವರನ್ನಾಗಿ ಮಾಡಿರುವುದರಿಂದ ಕನ್ನಡಿಗರು ತಲೆತಗ್ಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದ್ದಾರೆ.

ಇದೇ ವೇಳೆ, ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪ್ರಹ್ಲಾದ್ ಜೋಶಿ ಇಬ್ಬರೂ ಸೈದ್ಧಾಂತಿಕವಾಗಿ ಭಿನ್ನರಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇಬ್ಬರೂ ಸಂಘ ಪರಿವಾರದ ಹಿನ್ನೆಲೆಯಿಂದ ಬಂದವರಾಗಿದ್ದು, ಆರ್‌ಎಸ್‌ಎಸ್‌ನ ವಿಚಾರಧಾರೆಯನ್ನೇ ಅನುಸರಿಸುತ್ತಾರೆ ಎಂದು ಅವರು ಟೀಕಿಸಿದ್ದಾರೆ.

“ಧರ್ಮೇಂದ್ರ ಪ್ರಧಾನ್ ಅವರ ಬದಲಿಗೆ ಪ್ರಹ್ಲಾದ್ ಜೋಶಿ ಅವರನ್ನು ನೇಮಿಸಿರುವುದರಿಂದ ಯಾವುದೇ ಮೂಲಭೂತ ಬದಲಾವಣೆ ಆಗುವುದಿಲ್ಲ. ಬದಲಾಗಿರುವುದು ವ್ಯಕ್ತಿ ಮಾತ್ರ, ಆದರೆ ನೀತಿಗಳು ಮತ್ತು ನಿರ್ದೇಶನಗಳು ಅದೇ ಆಗಿರುತ್ತವೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

2022ರಲ್ಲಿ ಗುಜರಾತ್ ಸರ್ಕಾರ ಬಿಲ್ಕಿಸ್ ಬಾನು ಪ್ರಕರಣದ ಶಿಕ್ಷೆಗೊಳಗಾದ ಕೆಲವರ ಬಿಡುಗಡೆ ಕುರಿತು ತೆಗೆದುಕೊಂಡ ನಿರ್ಧಾರವನ್ನು ಪ್ರಹ್ಲಾದ್ ಜೋಶಿ ಸಮರ್ಥಿಸಿದ್ದರು ಎಂದು ಉಲ್ಲೇಖಿಸಿರುವ ಸಿದ್ದರಾಮಯ್ಯ, “ಅಂತಹ ವ್ಯಕ್ತಿಯ ಕೈಗೆ ದೇಶದ ಶಿಕ್ಷಣ ಇಲಾಖೆಯಂತಹ ಮಹತ್ವದ ಖಾತೆ ನೀಡಿರುವುದು ಆತಂಕದ ವಿಷಯ” ಎಂದು ಹೇಳಿದ್ದಾರೆ.

ಇದೇ ವೇಳೆ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಪ್ರಹ್ಲಾದ್ ಜೋಶಿ ವಿರುದ್ಧ ಪ್ರಶ್ನೆಗಳನ್ನು ಎತ್ತಿರುವುದನ್ನೂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ. “ಸಂಸತ್ತಿನಲ್ಲಿ ವಿರೋಧ ಪಕ್ಷದ ಧ್ವನಿಯನ್ನು ತಡೆಯಬಹುದು. ಆದರೆ ದೇಶದ ಜನರ ಪ್ರಶ್ನೆಗಳನ್ನು ಯಾರೂ ಮೌನಗೊಳಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಿಕ್ಷಣ ವ್ಯವಸ್ಥೆ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಹಿತದ ಬಗ್ಗೆ ಕಾಳಜಿ ಇದ್ದರೆ, ಶಿಕ್ಷಣ ಖಾತೆಯನ್ನು ಪ್ರಹ್ಲಾದ್ ಜೋಶಿ ಅವರಿಂದ ಹಿಂಪಡೆದು ಅರ್ಹ ವ್ಯಕ್ತಿಗೆ ವಹಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಪ್ರಹ್ಲಾದ್ ಜೋಶಿ ನೇಮಕದ ಕುರಿತು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ವಾಕ್ಸಮರ ಮುಂದುವರಿದಿದ್ದು, ಈ ವಿಚಾರ ಮುಂದಿನ ದಿನಗಳಲ್ಲಿ ಇನ್ನಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

Continue Reading

ರಾಜ್ಯ

Mandya ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಆಕ್ರೋಶ; ಜಿಲ್ಲಾಧ್ಯಕ್ಷರ ಬದಲಾವಣೆಗೆ ಒತ್ತಾಯ

Published

on

ಬೆಂಗಳೂರು: Mandya ಕಾಂಗ್ರೆಸ್‌ನಲ್ಲಿ ಸಂಘಟನಾ ಪುನರ್‌ರಚನೆ ಪ್ರಕ್ರಿಯೆ ನಡುವೆಯೇ ಮಂಡ್ಯ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ನಡೆದ ಪಕ್ಷದ ಸಭೆಗಳು ಭಾರಿ ಗದ್ದಲಕ್ಕೆ ಸಾಕ್ಷಿಯಾಗಿವೆ. ಕಾರ್ಯಕರ್ತರು ಮತ್ತು ಸ್ಥಳೀಯ ಮುಖಂಡರ ಅಸಮಾಧಾನ ಬಹಿರಂಗವಾಗಿದ್ದು, ಎಐಸಿಸಿ ವೀಕ್ಷಕರ ಎದುರಲ್ಲೇ ವಾಗ್ವಾದ, ಘೋಷಣೆಗಳು ಹಾಗೂ ಕೆಲವೆಡೆ ಕೈಕೈ ಮಿಲಾಯಿಸುವ ಘಟನೆಗಳು ನಡೆದಿವೆ.

ಮಂಡ್ಯದಲ್ಲಿ ಜಿಲ್ಲಾಧ್ಯಕ್ಷರ ವಿರುದ್ಧ ಕಾರ್ಯಕರ್ತರ ಆಕ್ರೋಶ

ಮಂಡ್ಯದ ಕೆ.ಆರ್.ಪೇಟೆಯಲ್ಲಿ ನಡೆದ ‘ಸಂಘಟನಾ ಸೃಜನ ಅಭಿಯಾನ’ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳೀಯ ಮಟ್ಟದಲ್ಲಿ ಪಕ್ಷದ ಪರ ಧ್ವನಿಯಾಗುವ ನಾಯಕತ್ವದ ಕೊರತೆ ಇದೆ ಎಂದು ಆರೋಪಿಸಿದ ಕಾರ್ಯಕರ್ತರು, ಜಿಲ್ಲಾಧ್ಯಕ್ಷರು ಜೆಡಿಎಸ್ ಮುಖಂಡರೊಂದಿಗೆ ಮೃದು ಧೋರಣೆ ಅನುಸರಿಸುತ್ತಿದ್ದಾರೆ ಎಂದು ಟೀಕಿಸಿದರು.

ಎಐಸಿಸಿ ವೀಕ್ಷಕ ಸೈಮನ್ ಅಲೆಕ್ಸ್ ಹಾಗೂ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರ ಸಮ್ಮುಖದಲ್ಲೇ ನಡೆದ ಸಭೆಯಲ್ಲಿ, ಹಾಲಿ ಜಿಲ್ಲಾಧ್ಯಕ್ಷರನ್ನು ತಕ್ಷಣ ಬದಲಾಯಿಸಬೇಕೆಂದು ಕಾರ್ಯಕರ್ತರು ಒತ್ತಾಯಿಸಿದರು. ನಾಯಕರು ಸಮಾಧಾನಪಡಿಸಲು ಪ್ರಯತ್ನಿಸಿದರೂ ಕಾರ್ಯಕರ್ತರು ಘೋಷಣೆಗಳನ್ನು ಮುಂದುವರಿಸಿದ್ದು, ಸಭೆ ಯಾವುದೇ ನಿರ್ಣಯವಿಲ್ಲದೆ ಅರ್ಧಕ್ಕೇ ಮೊಟಕುಗೊಂಡಿತು.

ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ

ಇದೇ ವೇಳೆ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ವೃತ್ತದ ಸಮೀಪದ ಕಾಂಗ್ರೆಸ್ ಕಚೇರಿಯಲ್ಲಿ ನಗರ ಘಟಕದ ಅಧ್ಯಕ್ಷರ ಆಯ್ಕೆ ಕುರಿತು ನಡೆದ ಸಭೆಯೂ ಗದ್ದಲಕ್ಕೆ ಕಾರಣವಾಯಿತು. ಎಐಸಿಸಿ ವೀಕ್ಷಕ ಮನೋಜ್ ಚವ್ಹಾಣ್ ಅವರ ಎದುರಲ್ಲೇ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆದು, ಪರಿಸ್ಥಿತಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು.

ಈ ವೇಳೆ ಮಾಜಿ ಶಾಸಕ ರಮೇಶ್ ಕುಡಚಿ ಅವರ ಆಪ್ತ ಹೇಮಂತ್ ಲಿಂಗಾಡೆ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಘಟನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮಾಹಿತಿ ಪಡೆದ ಮಾರ್ಕೆಟ್ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಮಂಡ್ಯ ಮತ್ತು ಬೆಳಗಾವಿಯಲ್ಲಿ ನಡೆದ ಈ ಬೆಳವಣಿಗೆಗಳು ಕಾಂಗ್ರೆಸ್ ಸಂಘಟನಾ ಪ್ರಕ್ರಿಯೆಯಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬಹಿರಂಗಪಡಿಸಿದ್ದು, ಪಕ್ಷದ ಜಿಲ್ಲಾ ಮಟ್ಟದ ನಾಯಕತ್ವದ ಕುರಿತು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿವೆ.

Continue Reading

Trending