Connect with us

ಕ್ರೀಡೆ

ಹ್ಯಾಪಿ ಜರ್ನಿ ಎಂದು ಬಾಬರ್​ ಪಡೆಗೆ ಕುಟುಕಿದ ಸೆಹವಾಗ್

ಹ್ಯಾಪಿ ಜರ್ನಿ ಎಂದು ಬಾಬರ್ ಪಡೆಗೆ ಕುಟುಕಿದ ಸೆಹವಾಗ್
ಹ್ಯಾಪಿ ಜರ್ನಿ ಎಂದು ಬಾಬರ್ ಪಡೆಗೆ ಕುಟುಕಿದ ಸೆಹವಾಗ್

ನವದೆಹಲಿ: ನ್ಯೂಜಿಲ್ಯಾಂಡ್​ ತಂಡ ಶ್ರೀಲಂಕಾ ವಿರುದ್ಧ 5 ವಿಕೆಟ್​ಗಳ ಗೆಲುವು ಸಾಧಿಸಿದ ಪರಿಣಾಮ ಪಾಕಿಸ್ತಾನದ ಸೆಮಿಫೈನಲ್​ ಕನಸು ಬಹುತೇಕ ಭಗ್ನಗೊಂಡಿದೆ. ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್​ ವಿರುದ್ಧ ಪವಾಡ ರೀತಿಯಲ್ಲಿ ಗೆದ್ದರೆ ಮಾತ್ರ ಪಾಕ್​ ತಂಡಕ್ಕೆ ಅವಕಾಶ. ಆದರೆ ಇದು ಅಸಾಧ್ಯ. ಹೀಗಾಗಿ ಪಾಕ್​ ಟೂರ್ನಿಯಿಂದ ಹೊರಬೀಳುವುದು ಖಚಿತ. ಇದೇ ಖುಷಿಯಲ್ಲಿ ಟೀಮ್​ ಇಂಡಿಯಾದ ಮಾಜಿ ಡ್ಯಾಶಿಂಗ್​ ಓಪನರ್​ ವೀರೇಂದ್ರ ಸೆಹವಾಗ್

​ ಪೋಸ್ಟ್​ ಒಂದನ್ನು ಮಾಡಿದ್ದಾರೆ. ಈ ಪೋಸ್ಟ್​ ವೈರಲ್​ ಆಗಿದೆ.

ವಿರೇಂದ್ರ ಸೆಹವಾಗ್​ ಅವರು ತಮ್ಮ ಟ್ವಿಟರ್​ ಎಕ್ಸ್​ ಮತ್ತು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ‘ಬೈ ಬೈ ಪಾಕಿಸ್ತಾನ!’ ಎಂದು ಬರೆದಿರುವ ಫೋಟೊವನ್ನು ಹಾಕಿ ‘ಪಾಕಿಸ್ತಾನ್ ಜಿಂದಾಭಾಗ್! ಬಸ್ ಯಾಹಿಂ ತಕ್ ಥಾ ಜೋ ಥಾ(ನಿಮ್ಮ ಆಟ ಇಲ್ಲಿ ತನಕ ಮಾತ್ರ ಇತ್ತು). ನೀವು ಬಿರಿಯಾನಿ ಮತ್ತು ಆತಿಥ್ಯವನ್ನು ಆನಂದಿಸಿದ್ದೀರಿ ಎಂದು ಭಾವಿಸುತ್ತೇವೆ. ಸುರಕ್ಷಿತವಾಗಿ ಮನೆಗೆ ಹಿಂತಿರುಗಿ” ಎಂದು ಬರೆದು ಕಿಚಾಯಿಸಿದ್ದಾರೆ. ಪಾಕಿಸ್ತಾನ ತಂಡ ಶನಿವಾರ ನಡೆಯುವ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್(England vs Pakistan)​ ವಿರುದ್ಧ ಕಣಕ್ಕಿಳಿಯಲಿದೆ. ಸದ್ಯ ಪಾಕ್​ ತಂಡ ಆಡಿದ 8 ಪಂದ್ಯಗಳಲ್ಲಿ ತಲಾ 4 ಗೆಲುವು ಮತ್ತು ಸೋಲು ಕಾಣುವ ಮೂಲಕ 8 ಅಂಕ ಪಡೆದಿದೆ. +0.036 ರನ್‌ ರೇಟ್‌ ಹೊಂದಿದೆ. ಅಂಕಪಟ್ಟಿಯಲ್ಲಿ 5ನೇ ಸ್ಥಾನವನ್ನು ಅಲಂಕರಿಸಿದೆ. ಶ್ರೀಲಂಕಾ ವಿರುದ್ಧ ಗೆದ್ದ ನ್ಯೂಜಿಲ್ಯಾಂಡ್​ 10 ಅಂಕದೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ನ್ಯೂಜಿಲ್ಯಾಂಡ್​ ತಂಡ ಲಂಕಾ ವಿರುದ್ಧ ಸೋಲು ಕಾಣುತ್ತಿದ್ದರೆ, ಆಗ ಪಾಕಿಸ್ತಾನಕ್ಕೆ ಯಾವುದೇ ಚಿಂತೆ ಇರುತ್ತಿರಲಿಲ್ಲ. ಜಸ್ಟ್​ ಪಂದ್ಯ ಗೆದ್ದರೆ ಸಾಕಿತ್ತು. ಆದರೆ ಈಗ ಪವಾಡ ನಡೆದಂತೆ ಗೆಲ್ಲಬೇಕಾದ ಸ್ಥಿತಿ ಎದುರಾಗಿದೆ.

ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಬಾಬರ್​ ಅಜಂ ಪಡೆ ಮೊದಲು ಬ್ಯಾಟಿಂಗ್​ ನಡೆಸಿ ಮಾಡಿ 300 ರನ್‌ ಗಳಿಸಿದರೆ, ಇಂಗ್ಲೆಂಡ್‌ ತಂಡವನ್ನು ಕೇವಲ 13 ರನ್‌ಗಳಿಗೆ ಆಲ್​ಔಟ್​ ಮಾಡಬೇಕು. ಆ ಮೂಲಕ ಪಾಕಿಸ್ತಾನ 287 ರನ್‌ಗಳ ಭಾರಿ ಅಂತರದಲ್ಲಿ ಗೆಲುವು ಪಡೆಯಬೇಕು. ಆಗ ಮಾತ್ರ ಪಾಕಿಸ್ತಾನ ಉತ್ತಮ ರನ್​ ರೇಟ್​ ಸಾಧಿಸಿ ಕಿವೀಸ್‌ ತಂಡವನ್ನು ಹಿಂದಿಕ್ಕಿ ಸೆಮಿಫೈನಲ್‌ಗೆ ಅರ್ಹತೆ ಪಡೆಯಬಹುದು. ಒಂದೊಮ್ಮೆ ಪಾಕಿಸ್ತಾನ ಈ ಪಂದ್ಯದಲ್ಲಿ ಮೊದಲು ಬೌಲಿಂಗ್​ ನಡಸುವ ಸನ್ನಿವೇಶ ಎದುರಾದರೆ ಇಂಗ್ಲೆಂಡ್‌ ತಂಡವನ್ನು ಕೇವಲ 100 ರನ್‌ಗಳಿಗೆ ಆಲ್‌ಔಟ್‌ ಮಾಡಬೇಕು. ಬಳಿಕ ಪಾಕ್​ ಈ ಮೊತ್ತವನ್ನು ಕೇವಲ 2.5 ಓವರ್‌ಗಳಿಗೆ ಚೇಸ್‌ ಮಾಡಬೇಕು. ಆ ಮೂಲಕ 283 ಎಸೆತಗಳು ಬಾಕಿ ಇರುವಾಗಲೇ ಪಾಕ್‌ ಪಂದ್ಯವನ್ನು ಗೆಲ್ಲಬೇಕು. ಇದು ಸಾಧ್ಯವಾಗದೇ ಇದ್ದರೆ ಪಾಕ್ ವಿಶ್ವಕಪ್ ಅಭಿಯಾನ ಕೊನೆಗೊಳ್ಳುತ್ತದೆ. ಮತ್ತೊಂದೆಡೆ, -0.338 ರನ್‌ರೇಟ್ ಹೊಂದಿರುವ ಅಫ್ಘಾನಿಸ್ತಾನವು ಸೆಮಿಸ್‌ಗೆ ಅರ್ಹತೆ ಪಡೆಯಲು ಇಂದು ನಡೆಯುವ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯವನ್ನು ಕನಿಷ್ಠ 438 ರನ್‌ಗಳಿಂದ ಗೆಲ್ಲಬೇಕಾಗಿದೆ. ಇದಕ್ಕಿಂತ ಕಡಿಮೆ ರನ್​ನಿಂದ ಗೆದ್ದರೆ ಅಫಘಾನಿಸ್ತಾನವೂ ಟೂರ್ನಿಯಿಂದ ಹೊರಬೀಳಲಿದೆ.

ಕ್ರೀಡೆ

ಕನ್ನಡದ ಹೆಮ್ಮೆ ಜಿಆರ್ ವಿಶ್ವನಾಥ್‌ಗೆ ಜನ್ಮದಿನ ಸಂಭ್ರಮ: ವಿಶಿಯ ಕಲಾತ್ಮಕ ಬ್ಯಾಟಿಂಗ್‌ಗೆ 77ನೇ ವಸಂತ

ಬೆಂಗಳೂರು: ಭಾರತೀಯ ಕ್ರಿಕೆಟ್ ಇತಿಹಾಸದ ಕಲಾತ್ಮಕ ಬ್ಯಾಟ್ಸ್‌ಮನ್‌ಗಳಲ್ಲಿ ಅಗ್ರಸ್ಥಾನ ಪಡೆದಿರುವ ಗುಂಡಪ್ಪ ರಂಗನಾಥ್ ವಿಶ್ವನಾಥ್ (GR Vishwanath) ಅವರಿಗೆ ಫೆಬ್ರವರಿ 12ರಂದು ಜನ್ಮದಿನ ಸಂಭ್ರಮ. ವಿಶಿ ಕ್ರೀಸಿಗೆ ಬಂದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಬ್ಬದ ವಾತಾವರಣವೇ ಸೃಷ್ಟಿಯಾಗುತ್ತಿತ್ತು. ಶತಕ ಸಿಡಿಸಿದ ಯಾವುದೇ ಪಂದ್ಯದಲ್ಲಿ ಭಾರತ ಸೋತ ಉದಾಹರಣೆ ಇಲ್ಲ — ಒಂದೋ ಗೆಲುವು, ಇಲ್ಲವೇ ಡ್ರಾ!

1969ರಲ್ಲಿ ಕಾನ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಾದಾರ್ಪಣೆ ಮಾಡಿದ ವಿಶಿ, ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟ್ ಆದರೂ, ಎರಡನೇ ಇನ್ನಿಂಗ್ಸ್‌ನಲ್ಲಿ 25 ಬೌಂಡರಿಗಳೊಂದಿಗೆ 137 ರನ್ ಸಿಡಿಸಿ ಕ್ರಿಕೆಟ್ ಲೋಕದ ಗಮನ ಸೆಳೆದರು. ಅವರ ಸ್ಕ್ವೇರ್ ಕಟ್ ಶಾಟ್ ಕ್ರಿಕೆಟ್ ಅಭಿಮಾನಿಗಳ ಮನಸ್ಸು ಗೆದ್ದಿತ್ತು.

ಗವಾಸ್ಕರ್ ಪ್ರಶಂಸೆ, ಹೆಲ್ಮೆಟ್ ಇಲ್ಲದೆ ವೇಗದ ಬೌಲರ್ ಎದುರಿಸಿದ ಧೈರ್ಯ

“ನನ್ನಂತಹ ನೂರು ಗವಾಸ್ಕರ್ ಬರಬಹುದು, ಆದರೆ ವಿಶಿಯಂತವರು ಬರಲಾರರು” ಎಂಬ ಸುನಿಲ್ ಗವಾಸ್ಕರ್ ಮಾತುಗಳು ವಿಶಿಯ ಮಹತ್ವ ಸಾರುತ್ತವೆ. ಆಂಡಿ ರಾಬರ್ಟ್ಸ್, ಜೆಫ್ ಥಾಂಪ್ಸನ್‌ಂತಹ ವೇಗದ ಬೌಲರ್‌ಗಳನ್ನು ಹೆಲ್ಮೆಟ್ ಇಲ್ಲದೆ ಎದುರಿಸಿದ ಧೈರ್ಯವೂ ವಿಶಿಯ ವಿಶೇಷ.

ಕ್ರೀಡಾಸ್ಪೂರ್ತಿಗೆ ಮಾದರಿ

1980ರ ಸುವರ್ಣ ಮಹೋತ್ಸವ ಟೆಸ್ಟ್‌ನಲ್ಲಿ ಅಂಪೈರ್ ತಪ್ಪು ತೀರ್ಪು ನೀಡಿದಾಗ ಬಾಬ್ ಟೇಲರ್ ಅವರನ್ನು ಮರು ಕ್ರೀಸಿಗೆ ಕರೆಸಿದ ವಿಶಿಯ ಕ್ರೀಡಾಸ್ಫೂರ್ತಿ ಕ್ರಿಕೆಟ್ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದೆ.

ರಣಜಿ ಫೈನಲ್‌ಗೂ ಮದುವೆಯೂ ಒಂದೇ ಸಮಯ

1978ರಲ್ಲಿ ಗವಾಸ್ಕರ್ ಸಹೋದರಿ ಕವಿತಾ ಅವರನ್ನು ಮದುವೆಯಾದ ವಿಶಿ, ಮದುವೆಯ ಬಳಿಕ ನೇರವಾಗಿ ಮೈದಾನಕ್ಕಿಳಿದು ರಣಜಿ ಫೈನಲ್‌ನಲ್ಲಿ 247 ರನ್ ಸಿಡಿಸಿ ಕರ್ನಾಟಕಕ್ಕೆ ಕಿರೀಟ ತಂದುಕೊಟ್ಟರು.

ವಿಶಿಯ ಮೂರು ಸ್ಮರಣೀಯ ಇನ್ನಿಂಗ್ಸ್

  • 1975, ಮದ್ರಾಸ್: ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 97 ರನ್
  • 1969, ಕಾನ್ಪುರ: ಪಾದಾರ್ಪಣೆ ಪಂದ್ಯದಲ್ಲೇ 137 ರನ್
  • 1981, ಎಂಸಿಜಿ: ಆಸ್ಟ್ರೇಲಿಯಾ ವಿರುದ್ಧ 114 ರನ್

77ನೇ ವಸಂತಕ್ಕೆ ಕಾಲಿಡುತ್ತಿರುವ ಕನ್ನಡದ ಹೆಮ್ಮೆ ಜಿಆರ್ ವಿಶ್ವನಾಥ್ ಅವರಿಗೆ ಹಾರ್ದಿಕ ಶುಭಾಶಯಗಳು.

Continue Reading

ಕ್ರೀಡೆ

ಭಾರತ–ಪಾಕಿಸ್ತಾನ ಟಿ20 ವಿಶ್ವಕಪ್ ಮುಖಾಮುಖಿ: ‘ನಾವು ಸಿದ್ಧ’ ಎಂದ ತಿಲಕ್ ವರ್ಮಾ

ನವದೆಹಲಿ, ಫೆ.11: ಫೆಬ್ರವರಿ 15ರಂದು ಕೊಲಂಬೊದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ (T20 World Cup) ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ ಸಂಪೂರ್ಣ ಸಿದ್ಧವಾಗಿದೆ ಎಂದು ತಿಲಕ್ ವರ್ಮಾ (Tilak Varma) ತಿಳಿಸಿದ್ದಾರೆ.

ನಮೀಬಿಯಾ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ನಾವು ಈಗಾಗಲೇ ಸಿದ್ಧರಾಗಿದ್ದೇವೆ. ಆ ಪಂದ್ಯಕ್ಕಾಗಿ ತಂಡ ಉತ್ಸುಕವಾಗಿದೆ” ಎಂದು ಹೇಳಿದರು.

ಅನಿಶ್ಚಿತತೆಗೆ ತೆರೆ

ಸರ್ಕಾರದ ನಿರ್ದೇಶನಗಳ ಹಿನ್ನೆಲೆ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ಆರಂಭದಲ್ಲಿ ಪಂದ್ಯದಿಂದ ಹಿಂದೆ ಸರಿಯುವುದಾಗಿ ಸೂಚಿಸಿತ್ತು. ಆದರೆ ನಂತರ ಎಲ್ಲಾ ನಿಗದಿತ ಪಂದ್ಯಗಳಲ್ಲಿ ಭಾಗವಹಿಸುವುದಾಗಿ ಐಸಿಸಿಗೆ ತಿಳಿಸಿದ್ದರಿಂದ ಹೈ-ವೋಲ್ಟೇಜ್ ಪಂದ್ಯ ಸುತ್ತಲಿನ ಗೊಂದಲ ಅಂತ್ಯಗೊಂಡಿದೆ.

ಗಾಯದಿಂದ ಮರಳಿದ ತಿಲಕ್

ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದ ತಿಲಕ್ ವರ್ಮಾ ವಿಶ್ವಕಪ್ ತಂಡಕ್ಕೆ ಮರಳಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. “ವಿಶ್ವಕಪ್ ಗೆಲ್ಲುವುದೇ ನಮ್ಮ ಗುರಿ. ತಂಡಕ್ಕಾಗಿ ಯಾವಾಗಲೂ ಕೊಡುಗೆ ನೀಡಲು ಸಿದ್ಧನಿದ್ದೇನೆ” ಎಂದರು.

ಅಭ್ಯಾಸ ಪಂದ್ಯದಲ್ಲಿ ಭಾರತ ‘ಎ’ ತಂಡ ನಮೀಬಿಯಾವನ್ನು 100 ರನ್‌ಗಳೊಳಗೆ ಆಲೌಟ್ ಮಾಡಿರುವುದರಿಂದ ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡ ಫೇವರಿಟ್ ಎನ್ನಲಾಗುತ್ತಿದೆ.

ಅಭಿಷೇಕ್ ಶರ್ಮಾ ಸ್ಥಿತಿ

ಹೊಟ್ಟೆ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಅಭಿಷೇಕ್ ಶರ್ಮಾ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಆದರೆ ಮುಂದಿನ ಪಂದ್ಯದಲ್ಲಿ ಅವರು ಹಾಗೂ ಜಸ್ಪ್ರೀತ್ ಬುಮ್ರಾ ಆಡಲಿರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ತಿಲಕ್ ತಿಳಿಸಿದರು.

ಟಿ20 ಸ್ವರೂಪದಲ್ಲಿ ಯಾವುದೇ ತಂಡವನ್ನು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಸಿದರು.

Continue Reading

ಕ್ರೀಡೆ

JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ

ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.

ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.

ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.

ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.

ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.

ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.

ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.

ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.

ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Continue Reading

Trending