Connect with us

ರಾಜಕೀಯ

ವಿಜಯೇಂದ್ರಗೆ ಮೋದಿ, ಅಮಿತ್‌ ಶಾ ಮಹತ್ವದ ಹೊಣೆ ನೀಡಿದ್ದಾರೆ: ಎಸ್.ಎಂ ಕೃಷ್ಣ ಶ್ಲಾಘನೆ

Published

on

ವಿಜಯೇಂದ್ರಗೆ ಮೋದಿ, ಅಮಿತ್ ಶಾ ಮಹತ್ವದ ಹೊಣೆ ನೀಡಿದ್ದಾರೆ: ಎಸ್.ಎಂ ಕೃಷ್ಣ ಶ್ಲಾಘನೆ
ವಿಜಯೇಂದ್ರಗೆ ಮೋದಿ, ಅಮಿತ್ ಶಾ ಮಹತ್ವದ ಹೊಣೆ ನೀಡಿದ್ದಾರೆ: ಎಸ್.ಎಂ ಕೃಷ್ಣ ಶ್ಲಾಘನೆ

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ  ಅವರಿಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು.

ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಎಸ್.ಎಂ ಕೃಷ್ಣ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರರನ್ನ ಹಾರ್ದಿಕವಾಗಿ ಅಭಿನಂದಿಸುತ್ತೇನೆ. ಹತ್ತಾರು ವರ್ಷಗಳಿಂದ ಬಿಜೆಪಿಯನ್ನು ಕರ್ನಾಟಕದಲ್ಲಿ ಭದ್ರವಾದ ಬುನಾದಿಯ ಮೇಲೆ ಕಟ್ಟಲು ಯಡಿಯೂರಪ್ಪನವರು  ಶ್ರಮಿಸಿದ್ದರು ಎಂದು ತಿಳಿಸಿದರು.

ಯಡಿಯೂರಪ್ಪ ಅವರು ಕಟ್ಟಿದ ಅಸ್ಥಿಭಾರದ ಮೇಲೆ ವಿಜಯೇಂದ್ರ ಅವರು ಬೃಹತ್ತಾಗಿ ಪಕ್ಷವನ್ನು ಕಟ್ಟುವ ಹಾಗೂ ಮುಂದಿನ ಲೋಕಸಭಾ ಚುನಾವಣೆ, ನಂತರ ಬರುವ ಸ್ಥಳೀಯ ಚುನಾವಣೆಗಳಲ್ಲಿ ತಮ್ಮ ಛಾಪನ್ನು ಒತ್ತಿ ತೋರಿಸುವ ದೊಡ್ಡ ಜವಾಬ್ದಾರಿ ಹೊರಲಿದ್ದಾರೆ. ಈ ಯುವ ಹೆಗಲಿನ ಮೇಲೆ ಅಂತಹ ಹೊಣೆ ನೀಡಲಾಗಿದೆ. ಈ ಪ್ರತಿಭೆಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿಯವರು , ಗೃಹ ಸಚಿವ ಅಮಿತ್ ಶಾ  ಮತ್ತು ಜೆ.ಪಿ ನಡ್ಡಾರವರು  ಮಹತ್ವದ ಹೊಣೆ ನೀಡಿದ್ದಾರೆ. ವಿಜಯೇಂದ್ರರಿಗೆ ಎಲ್ಲ ರೀತಿಯಿಂದಲೂ ಯಶಸ್ಸು ಸಿಗಲೆಂದು ಹಾರೈಸುವುದಾಗಿ ತಿಳಿಸಿದರು.

ಯುವಕರಿಗೆ ಅಧ್ಯಕ್ಷ ಸ್ಥಾನ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಇಂದಲ್ಲ ನಾಳೆ ಯುವ ಪ್ರತಿಭೆಗಳು ಹೊರಹೊಮ್ಮಬೇಕು. ಅವರ ಜೊತೆ ಹಿರಿಯರು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಅದಕ್ಕೆ ನಾವು ಅನುವು ಮಾಡಿಕೊಟ್ಟು ಅವರ ಕೈಗಳನ್ನು ಬಲಪಡಿಸಬೇಕು. ಅವರಿಗೆ ಮಾರ್ಗದರ್ಶನ ನೀಡಬೇಕು ಎಂದು ಕಿವಿಮಾತು ಹೇಳಿದರು.

ದೇಶ

ರೈತರು ಸಂಕಷ್ಟದಲ್ಲಿ, ಮಕ್ಕಳು ಇನ್ಸುಲಿನ್‌ಗಾಗಿ ಕಾಯುತ್ತಿದ್ದಾರೆ; ಸರ್ಕಾರದ ವಿರುದ್ಧ ಆರ್. ಅಶೋಕ್ ಟೀಕೆ

Published

on

ಬೆಂಗಳೂರು, ಜು.10: ರಾಜ್ಯದಲ್ಲಿ ಕೃಷಿ ಬಿಕ್ಕಟ್ಟು, ಸಚಿವ ಸಂಪುಟ ವಿಸ್ತರಣೆ ವಿಳಂಬ ಹಾಗೂ ಉಚಿತ ಇನ್ಸುಲಿನ್ ಯೋಜನೆ ಜಾರಿಯಾಗದಿರುವ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ನಾಯಕ ಆರ್. ಅಶೋಕ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಈರುಳ್ಳಿ ಬೆಳೆ ನಾಶವಾಗುತ್ತಿದೆ. ಟೊಮೇಟೊ ಬೆಲೆ ಕುಸಿತ ಹಾಗೂ ಮಧ್ಯವರ್ತಿಗಳ ಸಮಸ್ಯೆಯಿಂದ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ ಎಂದು ಅಶೋಕ್ ಆರೋಪಿಸಿದ್ದಾರೆ. ಚಿತ್ರದುರ್ಗ, ವಿಜಯಪುರ, ಗದಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರ ಸಮಸ್ಯೆಗಳನ್ನು ಸರ್ಕಾರ ನಿರ್ಲಕ್ಷಿಸಿದೆ ಎಂದು ಅವರು ಟೀಕಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ವಿಚಾರದಲ್ಲಿಯೂ ಸರ್ಕಾರವನ್ನು ಟಾರ್ಗೆಟ್ ಮಾಡಿದ ಅಶೋಕ್, ಮುಖ್ಯಮಂತ್ರಿ ಅಧಿಕಾರ ವಹಿಸಿಕೊಂಡು ತಿಂಗಳುಗಳಾದರೂ ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಕೃಷಿ ಸೇರಿದಂತೆ ಖಾಲಿ ಇರುವ ಪ್ರಮುಖ ಇಲಾಖೆಗೆ ಶೀಘ್ರ ಪೂರ್ಣಾವಧಿ ಸಚಿವರನ್ನು ನೇಮಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ, ಟೈಪ್-1 ಮಧುಮೇಹದಿಂದ ಬಳಲುತ್ತಿರುವ ಮಕ್ಕಳಿಗಾಗಿ ಘೋಷಿಸಲಾಗಿದ್ದ ಉಚಿತ ಇನ್ಸುಲಿನ್ ಯೋಜನೆ ಇನ್ನೂ ಸಮರ್ಪಕವಾಗಿ ಜಾರಿಯಾಗಿಲ್ಲ ಎಂದು ಅಶೋಕ್ ಆರೋಪಿಸಿದರು. ಟೆಂಡರ್ ಪ್ರಕ್ರಿಯೆ ವಿಳಂಬದಿಂದ ಸಾವಿರಾರು ಮಕ್ಕಳಿಗೆ ಅಗತ್ಯ ಇನ್ಸುಲಿನ್ ಪೂರೈಕೆಯಲ್ಲಿ ತೊಂದರೆ ಉಂಟಾಗಿದೆ ಎಂದು ಅವರು ಹೇಳಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಸುಲಿನ್ ಕೊರತೆಯಿಂದ ಕೆಲವೆಡೆ ಸ್ವಯಂಸೇವಾ ಸಂಸ್ಥೆಗಳ ನೆರವು ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ದೂರಿದರು.

ಉಚಿತ ಇನ್ಸುಲಿನ್ ವಿತರಣೆಯನ್ನು ತಕ್ಷಣ ಆರಂಭಿಸಬೇಕು ಹಾಗೂ ರೈತರ ಸಮಸ್ಯೆಗಳಿಗೆ ಆದ್ಯತೆ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ಸರ್ಕಾರವನ್ನು ಆಗ್ರಹಿಸಿದರು.

Continue Reading

ದೇಶ

Karnataka SIR : ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸುಳ್ಳು ಮಾಹಿತಿ? ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು ಸಲ್ಲಿಕೆ

Published

on

ಬೆಂಗಳೂರು, ಜು.8: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಸುಳ್ಳು ಹಾಗೂ ದಾರಿ ತಪ್ಪಿಸುವ ಮಾಹಿತಿಯನ್ನು ಹರಡುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ಬಿಜೆಪಿ, ಈ ಸಂಬಂಧ ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರಿಗೆ ಅಧಿಕೃತ ದೂರು ಸಲ್ಲಿಸಿದೆ.

ಬಿಜೆಪಿ ನೀಡಿರುವ ದೂರಿನಲ್ಲಿ, ಭಾರತೀಯ ಚುನಾವಣಾ ಆಯೋಗವು ಸಂವಿಧಾನದ ವಿಧಿ 324ರ ಅಡಿಯಲ್ಲಿ ಸ್ಥಾಪಿತವಾದ ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಮತದಾರರ ಪಟ್ಟಿಯ ಸಿದ್ಧತೆ ಮತ್ತು ಪರಿಷ್ಕರಣೆ ಅದರ ಕಾನೂನುಬದ್ಧ ಕರ್ತವ್ಯವಾಗಿದೆ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ, ಜನತಾ ಪ್ರಾತಿನಿಧ್ಯ ಕಾಯ್ದೆ, 1950ರ ಸೆಕ್ಷನ್ 15ರ ಅನ್ವಯ ಪ್ರತಿಯೊಂದು ಚುನಾವಣಾ ಕ್ಷೇತ್ರಕ್ಕೂ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಅಧಿಕಾರ ಆಯೋಗಕ್ಕಿದೆ ಎಂದು ತಿಳಿಸಲಾಗಿದೆ.

ಬಿಜೆಪಿ ಪ್ರಕಾರ, ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಉದ್ದೇಶ ಮತದಾರರ ಪಟ್ಟಿಯನ್ನು ನಿಖರವಾಗಿಡುವುದು, ಒಂದಕ್ಕಿಂತ ಹೆಚ್ಚು ಕಡೆ ನೋಂದಣಿಯನ್ನು ತಡೆಯುವುದು, ಮೃತಪಟ್ಟವರ ಹೆಸರನ್ನು ತೆಗೆದುಹಾಕುವುದು ಹಾಗೂ ಅನರ್ಹ ವ್ಯಕ್ತಿಗಳ ಹೆಸರು ಸೇರ್ಪಡೆಯಾಗದಂತೆ ನೋಡಿಕೊಳ್ಳುವುದಾಗಿದೆ.

ಆದರೆ ಕಾಂಗ್ರೆಸ್, ಬಿಜೆಪಿ ಪ್ರೇರಣೆಯಿಂದಲೇ SIR ಪ್ರಕ್ರಿಯೆ ನಡೆಯುತ್ತಿದೆ ಎಂದು ಕರಪತ್ರಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಆರೋಪ ಮಾಡುತ್ತಿದೆ ಎಂದು ಬಿಜೆಪಿ ದೂರಿನಲ್ಲಿ ಹೇಳಿದೆ. ಚುನಾವಣಾ ಆಯೋಗವು ಬಿಜೆಪಿ ಜೊತೆಗೂಡಿ ಮತದಾರರ ಹೆಸರುಗಳನ್ನು ತೆಗೆದುಹಾಕುತ್ತಿದೆ ಎಂಬ ಆರೋಪವು ಆಯೋಗದ ವಿಶ್ವಾಸಾರ್ಹತೆಗೆ ಧಕ್ಕೆ ತರುವ ಪ್ರಯತ್ನವಾಗಿದೆ ಎಂದು ಬಿಜೆಪಿ ವಾದಿಸಿದೆ.

ಇಂತಹ ಸುಳ್ಳು ಮಾಹಿತಿಯಿಂದ ಸಾರ್ವಜನಿಕರಲ್ಲಿ ಆತಂಕ ಉಂಟಾಗುವ ಸಾಧ್ಯತೆ ಇದ್ದು, ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಚುನಾವಣಾ ಸಿಬ್ಬಂದಿಯ ಸುರಕ್ಷತೆಗೂ ಅಪಾಯ ಎದುರಾಗಬಹುದು ಎಂದು ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ಹೀಗಾಗಿ ಕಾಂಗ್ರೆಸ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, SIR ಪ್ರಕ್ರಿಯೆಗೆ ಅಡ್ಡಿಪಡಿಸದಂತೆ ಚುನಾವಣಾ ಆಯೋಗ ಕ್ರಮ ವಹಿಸಬೇಕೆಂದು ಬಿಜೆಪಿ ತನ್ನ ದೂರಿನಲ್ಲಿ ಆಗ್ರಹಿಸಿದೆ.

ಸೂಚನೆ: ಈ ಆರೋಪಗಳು ಬಿಜೆಪಿಯ ದೂರಿನಲ್ಲಿರುವ ಅಂಶಗಳಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಈ ಕುರಿತು ಅಧಿಕೃತ ಪ್ರತಿಕ್ರಿಯೆ ಇನ್ನೂ ಪ್ರಕಟವಾಗಿಲ್ಲ.

Continue Reading

ದೇಶ

‘ಮೋದಿ ಒಂದೂವರೆ ಗಂಟೆ ನನಗೆ ಬುದ್ಧಿ ಹೇಳಿದರು’ : ಎಚ್.ಡಿ.ಕುಮಾರಸ್ವಾಮಿ

Published

on

ಬೆಂಗಳೂರು: ಕೇಂದ್ರ ಸಚಿವರಾಗಿದ್ದರೂ ರಾಜ್ಯ ರಾಜಕೀಯದಲ್ಲಿ ಮತ್ತೆ ಸಕ್ರಿಯರಾಗಿರುವ ಎಚ್.ಡಿ. ಕುಮಾರಸ್ವಾಮಿ ಅವರ ಇತ್ತೀಚಿನ ಹೇಳಿಕೆ ಕರ್ನಾಟಕ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಹಾಗೂ ಮುಂಬರುವ ವಿಧಾನಸಭೆ ಚುನಾವಣೆ ಸಿದ್ಧತೆಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ತಮ್ಮ ಬಗ್ಗೆ ಹೇಳಿದ್ದ ಮಾತನ್ನು ಕುಮಾರಸ್ವಾಮಿ ಮತ್ತೊಮ್ಮೆ ಸಾರ್ವಜನಿಕವಾಗಿ ಪ್ರಸ್ತಾಪಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಟೀಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ಸಮ್ಮಿಶ್ರ ಸರ್ಕಾರದ ಅವಧಿಯನ್ನು ನೆನಪಿಸಿಕೊಂಡರು. “ಪ್ರಧಾನಿ ಮೋದಿ ಅವರು ಒಂದೂವರೆ ಗಂಟೆ ನನ್ನನ್ನು ಪಕ್ಕದಲ್ಲಿ ಕೂರಿಸಿಕೊಂಡು ಮಾತನಾಡಿದ್ದರು. ಕರ್ನಾಟಕಕ್ಕೆ ನಿಮ್ಮಲ್ಲಿ ಉತ್ತಮ ಆಡಳಿತದ ದೃಷ್ಟಿ ಇದೆ. ರಾಜೀನಾಮೆ ನೀಡಿ, ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಎಂದು ಸಲಹೆ ನೀಡಿದ್ದರು. ಆದರೆ ನಾನು ಆ ಸಲಹೆಯನ್ನು ಒಪ್ಪಲಿಲ್ಲ” ಎಂದು ಅವರು ಹೇಳಿದರು.

ರಾಜ್ಯ ರಾಜಕೀಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮತ್ತಷ್ಟು ಬಲಪಡಿಸುವ ಪ್ರಯತ್ನಗಳು ನಡೆಯುತ್ತಿರುವ ಹೊತ್ತಿನಲ್ಲಿ ಕುಮಾರಸ್ವಾಮಿ ನೀಡಿರುವ ಈ ಹೇಳಿಕೆಗೆ ವಿಶೇಷ ರಾಜಕೀಯ ಮಹತ್ವ ಸಿಕ್ಕಿದೆ. ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಉತ್ತಮ ಸಂಬಂಧ ಹೊಂದಿರುವುದನ್ನು ಅವರು ಪುನರುಚ್ಚರಿಸಿರುವುದು ರಾಜ್ಯ ಬಿಜೆಪಿ ವಲಯದಲ್ಲಿಯೂ ಚರ್ಚೆಗೆ ಕಾರಣವಾಗಿದೆ.

ಇದೇ ವೇಳೆ ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ವಿಚಾರ, ಒಳಜಗಳ ಹಾಗೂ ಸಂಘಟನಾ ಭಿನ್ನಾಭಿಪ್ರಾಯಗಳು ಮುಂದುವರಿಯುತ್ತಿರುವ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರದ್ದು ಎನ್ನಲಾದ ಆಡಿಯೋ ಕೂಡ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಬೆಳವಣಿಗೆಗಳು ಬಿಜೆಪಿ ಒಳಗಿನ ಚರ್ಚೆಯನ್ನು ಮತ್ತಷ್ಟು ತೀವ್ರಗೊಳಿಸಿವೆ.

ರಾಜಕೀಯ ವಿಶ್ಲೇಷಕರ ಪ್ರಕಾರ, ಬಿಜೆಪಿ-ಜೆಡಿಎಸ್ ಮೈತ್ರಿಯ ಭವಿಷ್ಯ, ನಾಯಕತ್ವ ಹಾಗೂ ಚುನಾವಣಾ ತಂತ್ರಗಳ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ನೀಡಿರುವ ಹೇಳಿಕೆಗಳು ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದ ಪ್ರಮುಖ ಚರ್ಚೆಯಾಗಿ ಪರಿಣಮಿಸುವ ಸಾಧ್ಯತೆ ಇದೆ. ಅವರ ಹೇಳಿಕೆಗಳು ಕಾಂಗ್ರೆಸ್ ವಿರುದ್ಧದ ರಾಜಕೀಯ ವಾಗ್ದಾಳಿಗಿಂತಲೂ ಮೈತ್ರಿ ರಾಜಕಾರಣದ ಸಂದೇಶವನ್ನೇ ಹೆಚ್ಚು ಪ್ರತಿಬಿಂಬಿಸುತ್ತಿವೆ ಎನ್ನುವ ಅಭಿಪ್ರಾಯಗಳು ಕೇಳಿಬರುತ್ತಿವೆ.

Continue Reading

Trending