ರಾಜಕೀಯ

ಎಚ್ ಡಿ ಕೆ ಗೆ ಬಿಗ್ ರಿಲೀಫ್ ಜನಪ್ರಾತಿನಿಧ್ಯ ಕಾಯ್ದೆ ಉಲ್ಲಂಘನೆ ದೂರು ರದ್ದು

ಎಚ್ ಡಿ ಕೆ ಗೆ ಬಿಗ್ ರಿಲೀಫ್ ಜನಪ್ರಾತಿನಿಧ್ಯ ಕಾಯ್ದೆ ಉಲ್ಲಂಘನೆ ದೂರು ರದ್ದು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದಡಿ ದಾಖಲಾಗಿದ್ದ ಖಾಸಗಿ ದೂರನ್ನು ನ್ಯಾಯಾಲಯ ರದ್ದುಪಡಿಸಿದ್ದು ಆ ಮೂಲಕ ಬಿಗ್ ರಿಲೀಫ್ ಸಿಕ್ಕಿದೆ, ಕುಮಾರಸ್ವಾಮಿ ಅವರು ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದು ೨ನೇ ಪತ್ನಿ ಪುತ್ರಿಯ ಮಾಹಿತಿ ನೀಡಿಲ್ಲವೆಂದು ಎಸ್ ಆನಂದ ಎಂಬುವವರು ಆರೋಪ ಮಾಡಿದ್ದರು, ಈ ವಿಚಾರವಾಗಿ ಖಾಸಗಿಯಾಗಿ ದೂರು ಸಲ್ಲಿಸಿದ್ದರು,
ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ದೂರನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ, ಮೊದಲ ಪತ್ನಿ ಜೀವಂತ ಇರುವಾಗ ೨ನೇ ವಿವಾಹಕ್ಕೆ ಮಾನ್ಯತೆಯಿಲ್ಲ ಅಲ್ಲದೆ ಚುನಾವಣಾ ಪ್ರಮಾಣ ಪತ್ರದಲ್ಲಿ ಮಕ್ಕಳ ಬಗ್ಗೆ ಉಲ್ಲೇಖಿಸಬೇಕೆಂಬ ನಿಯಮವಿಲ್ಲ, ಹೀಗಾಗಿ ಈ ಪ್ರಕ ರಣದಲ್ಲಿ ಜನಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ ೧೨೫ಎ ಉಲ್ಲಂಘನೆಯಾಗಿಲ್ಲ ಎಂದು ನ್ಯಾ.ಜಿ.ಪ್ರೀತ್ ಆದೇಶದಲ್ಲಿ ತಿಳಿಸಿದ್ದಾರೆ,

Trending

Exit mobile version