Connect with us

ಸಿನಿಮಾ

ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮನ್ಸೂರ್ ಅಲಿ ಖಾನ್ ರನ್ನು ಬಂಧಿಸುವಂತೆ ತಮಿಳುನಾಡು ಪೊಲೀಸರಿಗೆ NCW ನಿರ್ದೇಶನ

ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮನ್ಸೂರ್ ಅಲಿ ಖಾನ್ ರನ್ನು ಬಂಧಿಸುವಂತೆ ತಮಿಳುನಾಡು ಪೊಲೀಸರಿಗೆ NCW ನಿರ್ದೇಶನ
ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮನ್ಸೂರ್ ಅಲಿ ಖಾನ್ ರನ್ನು ಬಂಧಿಸುವಂತೆ ತಮಿಳುನಾಡು ಪೊಲೀಸರಿಗೆ NCW ನಿರ್ದೇಶನ

ನವದೆಹಲಿ: ನಟಿ ತ್ರಿಶಾ ಕೃಷ್ಣನ್ ಬಗ್ಗೆ ಕೀಳು ಮಟ್ಟದ ಹೇಳಿಕೆ ಕೊಟ್ಟಿರುವ ನಟ ಮನ್ಸೂರ್ ಅಲಿ ಖಾನ್ ವಿರುದ್ಧ ಪ್ರಕರಣ ದಾಖಲಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ (NCW) ತಮಿಳುನಾಡು ಪೊಲೀಸರಿಗೆ ನಿರ್ದೇಶನ ನೀಡಿದೆ.

NCW ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ನಟ ಮನ್ಸೂರ್ ಅಲಿ ಖಾನ್ ನಟಿ ತ್ರಿಷಾ ಕೃಷ್ಣ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ವಿಷಯದಲ್ಲಿ ನಾವು ಸ್ವಯಂ ಪ್ರೇರಿತರಾಗಿ IPC ಸೆಕ್ಷನ್ 509 B ಮತ್ತು ಇತರ ಸೆಕ್ಷನ್ ಗಳನ್ನು ಜಾರಿಗೊಳಿಸುವಂತೆ DGPಗೆ ನಿರ್ದೇಶಿಸುತ್ತೇವೆ ಎಂದು ಬರೆದುಕೊಂಡಿದೆ.

ಈ ಹೇಳಿಕೆ ಬಗ್ಗೆ ಲಿಯೋ ನಿರ್ದೇಶಕ ಲೋಕೇಶ್ ಕನಕರಾಜ್ ಮಾತನಾಡಿ, ತಾವೆಲ್ಲರೂ ಒಂದೇ ತಂಡದಲ್ಲಿ ಕೆಲಸ ಮಾಡಿದ್ದೇವೆ. ಮನ್ಸೂರ್ ಅಲಿ ಖಾನ್ ಕೊಟ್ಟಿರುವ ಸ್ತ್ರೀದ್ವೇಷದ ಕಾಮೆಂಟ್‌ಗಳನ್ನು ಕೇಳಿ ನಾನು ಅಸಮಾಧಾನಗೊಂಡಿದ್ದು ಕೋಪಗೊಂಡಿದ್ದೇನೆ ಎಂದಿದ್ದರು.

ದಕ್ಷಿಣ ಭಾರತದ ನಟ ಮನ್ಸೂರ್ ಅಲಿ ಖಾನ್ ಇತ್ತೀಚೆಗೆ ನಟಿ ತ್ರಿಶಾ ಕೃಷ್ಣನ್ ಅವರ ಬಗ್ಗೆ ಹೇಳಿಕೆ ನೀಡಿದ್ದು, ಅದರ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಇಂತಹ ಪರಿಸ್ಥಿತಿಯಲ್ಲಿ ಈಗ ತ್ರಿಶಾ ಕೃಷ್ಣನ್ ‘ಲಿಯೋ’ ಸ್ಟಾರ್ ಮನ್ಸೂರ್ ಅಲಿ ಖಾನ್ ಹೇಳಿಕೆಗೆ ಪ್ರತಿಕ್ರಿಯಿಸಿದ್ದರು.

ಷಾ ಅವರು, ಮನ್ಸೂರ್ ಅಲಿ ಖಾನ್ ನನ್ನ ಬಗ್ಗೆ ಅಸಹ್ಯವಾಗಿ ಮಾತನಾಡಿರುವ ವೀಡಿಯೊ ಇತ್ತೀಚೆಗೆ ನನ್ನ ಗಮನಕ್ಕೆ ಬಂದಿದೆ. ಆ ನಟನ ಮಾತುಗಳನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅಗೌರವ, ಸ್ತ್ರೀದ್ವೇಷ, ಕೆಟ್ಟ ಅಭಿರುಚಿ ಹಾಗೂ ಲೈಂಗಿಕ ಲೋಭವನ್ನು ಹೊಂದಿದೆ. ನನ್ನೊಂದಿಗೆ ನಟಿಸಲು ಅವರು ಬಯಸಬಹುದು ಆದರೆ ನಾನು ಅವರಂತಹ ಕೆಟ್ಟ ವ್ಯಕ್ತಿಯೊಂದಿಗೆ ಎಂದಿಗೂ ಪರದೆಯನ್ನು ಹಂಚಿಕೊಳ್ಳುವುದಿಲ್ಲ. ಈ ಹಿಂದೆ ಪರದೆ ಹಂಚಿಕೊಂಡಿದ್ದಕ್ಕೆ ನಾನು ಕೃತಜ್ಞಳಾಗಿದ್ದೇನೆ. ಮತ್ತು ನನ್ನ ಉಳಿದ ಚಲನಚಿತ್ರ ವೃತ್ತಿಜೀವನದಲ್ಲಿ ನಾನು ಅವರೊಟ್ಟಿಗೆ ಎಂದಿಗೂ ಪರದೆ ಹಂಚಿಕೊಳ್ಳದಂತೆ ಎಚ್ಚರವಹಿಸುತ್ತೇನೆ. ಅವರಂತಹವರು ಮನುಕುಲಕ್ಕೆ ಕೆಟ್ಟ ಹೆಸರು ತರುತ್ತಾರೆ ಎಂದು ಬರೆದುಕೊಂಡಿದ್ದಾರೆ.

ತ್ರಿಶಾಗೆ ಮನ್ಸೂರ್ ಅಲಿ ಖಾನ್ ಹೇಳಿದ್ದೇನು?
ಮನ್ಸೂರ್ ಅಲಿ ಖಾನ್ ಸಂದರ್ಶನವೊಂದರಲ್ಲಿ ಹೇಳಿದ್ದು, ‘ನಾನು ತ್ರಿಷಾ ಜೊತೆ ನಟಿಸುತ್ತಿದ್ದೇನೆ ಎಂದು ಕೇಳಿದಾಗ, ಚಿತ್ರದಲ್ಲಿ ರೇಪ್ ಸೀನ್ ಇರುತ್ತದೆ ಎಂದು ನಾನು ಭಾವಿಸಿದೆ. ನನ್ನ ಹಿಂದಿನ ಚಿತ್ರಗಳಲ್ಲಿ ಇತರ ನಟಿಯರೊಂದಿಗೆ ಮಾಡಿದಂತೆ ನಾನು ತ್ರಿಷಾಳನ್ನು ಬೆಡ್ ರೂಂಗೆ ಕರೆದುಕೊಂಡು ಹೋಗಿ ರೇಪ್ ಮಾಡುವ ಸೀನ್ ಇರುತ್ತದೆ ಎಂದು ನಾನು ಭಾವಿಸಿದೆ. ನಾನು ಅನೇಕ ಚಿತ್ರಗಳಲ್ಲಿ ಅತ್ಯಾಚಾರದ ದೃಶ್ಯಗಳನ್ನು ಮಾಡಿದ್ದೇನೆ. ಇದು ನನಗೆ ಹೊಸದಲ್ಲ. ಆದರೆ ಲಿಯೋ ಸಿನಿಮಾನವರು ತ್ರಿಷಾರ ಮುಖವನ್ನು ಸಹ ನನಗೆ ತೋರಿಸಲಿಲ್ಲ ಎಂದು ಹೇಳಿದ್ದಾರೆ.

600 ಕೋಟಿ ಕ್ಲಬ್‌ನಲ್ಲಿ ಲಿಯೋ
ಸಾಮಾಜಿಕ ಜಾಲತಾಣಗಳಲ್ಲಿ ತ್ರಿಷಾ ಪರವಾಗಿ ಹಲವು ಹ್ಯಾಶ್‌ಟ್ಯಾಗ್‌ಗಳು ಹರಿದಾಡುತ್ತಿದ್ದು, ಮನ್ಸೂರ್ ಅವರನ್ನು ಬಂಧಿಸಿ ಎಲ್ಲರ ಮುಂದೆ ಕ್ಷಮೆಯಾಚಿಸಬೇಕು ಎಂಬ ಬೇಡಿಕೆಗಳು ಕೇಳಿಬರುತ್ತಿವೆ. ಲಿಯೋವನ್ನು ಲೋಕೇಶ್ ಕನಕರಾಜ್ ನಿರ್ದೇಶಿಸಿದ್ದಾರೆ. ದಳಪತಿ ವಿಜಯ್, ತ್ರಿಶಾ, ಮನ್ಸೂರ್ ಅಲಿ ಖಾನ್, ಸಂಜಯ್ ದತ್ ಮತ್ತು ಅರ್ಜುನ್ ಸರ್ಜಾ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಕಲೆಕ್ಷನ್ ಬಗ್ಗೆ ಹೇಳುವುದಾದರೆ, ಚಿತ್ರವು ವಿಶ್ವಾದ್ಯಂತ 600 ಕೋಟಿ ರೂ.ಗೂ ಹೆಚ್ಚು ಗಳಿಸಿದೆ. ಸದ್ಯದಲ್ಲೇ ಚಿತ್ರ ಒಟಿಟಿಗೆ ಬರಲಿದೆ.

ರಾಜ್ಯ

ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ

ಬೆಂಗಳೂರು: ಭಾಷೆ ಹುಟ್ಟಿದರ ಬಗ್ಗೆ ಮಾತನಾಡುವುದಕ್ಕೆ ನೀವು ಭಾಷಾ ತಜ್ಞರೇ? ಇಲ್ಲ ಇತಿಹಾಸಕಾರರೇ ಎಂದು ಕರ್ನಾಟಕ ಹೈಕೋರ್ಟ್‌ (Karnataka High Court) ಕಮಲ್‌ ಹಾಸನ್‌ Kamal Hassan) ಅವರಿಗೆ ಖಾರವಾದ ಪ್ರಶ್ನೆ ಕೇಳಿದೆ.

ಥಗ್‌ ಲೈಫ್‌ (Thug Life) ಚಿತ್ರ ಬಿಡುಗಡೆಗೆ ಕರ್ನಾಟಕದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಕಮಲ್‌ ಹಾಸನ್‌ ಅವರು ಬಿಡುಗಡೆಗೆ ಅವಕಾಶ ನೀಡಬೇಕು ಮತ್ತು ಚಿತ್ರ ಮಂದಿರಕ್ಕೆ ಪೊಲೀಸ್‌ ಭದ್ರತೆ ಒದಗಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು.

ಇಂದು ಈ ಅರ್ಜಿಯ ವಿಚಾರಣೆ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠದಲ್ಲಿ ನಡೆಯಿತು. ಈ ವೇಳೆ ಕಮಲ್‌ ಹಾಸನ್‌ ಪರ ವಕೀಲ ಧ್ಯಾನ್ ಚಿನ್ನಪ್ಪ ವಾದ ಮಂಡನೆ ಮಾಡಿದರು. ಎರಡು ದಿನದಲ್ಲಿ ಚಲನಚಿತ್ರ ಬಿಡುಗಡೆ ಆಗಲಿದ್ದು, ಈ ಸಂದರ್ಭದಲ್ಲಿ ವಿವಾದ ಶುರುವಾಗಿದೆ. ಆಡಿಯೋ ಬಿಡುಗಡೆಯ ಸಂದರ್ಭದಲ್ಲಿ ವಿವಾದ ಆರಂಭವಾಗಿದೆ ಎಂದು ಕೋರ್ಟ್‌ ಗಮನಕ್ಕೆ ತಂದರು.

ಈ ವೇಳೆ ನ್ಯಾಯಮೂರ್ತಿಗಳು, ನೆಲ, ಭಾಷೆಯ ಜೊತೆ ಜನರ ಭಾವನೆ ಇರುತ್ತದೆ. ಜನರ ಭಾವನೆಗೆ ಯಾರೂ ಧಕ್ಕೆ ತರಬಾರದು. ಜನರು ಕ್ಷಮೆ ಕೇಳುವಂತೆ ಒತ್ತಾಯಿಸುತ್ತಿದ್ದಾರೆ. ಕಮಲ್‌ ಹಾಸನ್‌ ಕ್ಷಮೆ ಕೇಳಿದ್ದಾರಾ ಎಂದು ಪ್ರಶ್ನಿಸಿದರು.

ಭಾಷೆ ಹುಟ್ಟಿದರ ಬಗ್ಗೆ ನೀವು ಮಾತನಾಡುವುದಕ್ಕೆ ನೀವು ಭಾಷಾ ತಜ್ಞರೇ ಅಥವಾ ಇತಿಹಾಸಕಾರರೇ? ಒಂದೇ ಒಂದು ಕ್ಷಮೆ ಕೇಳೋದಕ್ಕೆ ಯಾಕೆ ಇಷ್ಟೊಂದು ಹಾವ ಭಾವ? ಈ ಹಿಂದೆ ರಾಜಗೋಪಾಲಾಚಾರಿ ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಕ್ಷಮೆಯಾಚನೆ ಮಾಡಿದ್ದು ನಿಮಗೆ ಗೊತ್ತಿಲ್ವೆ ಎಂದು ಕುಟುಕಿದರು.

350 ಕೋಟಿ ರೂ. ಸಿನಿಮಾಗೆ ಹಾಕಿದ್ದೀರಿ ಎನ್ನುತ್ತೀರಿ. ಭಾವನೆಗೆ ಧಕ್ಕೆ ಮಾಡಿ ಇಲ್ಲಿ ಸಂಪಾದನೆ ಮಾಡಬೇಕಾ? ಎಲ್ಲವೂ ಸರಾಗವಾಗಿ ಆಗಬೇಕು ಅಂದರೆ ಕ್ಷಮೆಯನ್ನು ಕೋರಿ. ಅಭಿವ್ಯಕ್ತಿ ಸ್ವಾತಂತ್ರ‍್ಯದಿಂದ ಭಾವನೆ ಧಕ್ಕೆ ಆಗಬಾರದು. ಕೋಟ್ಯಂತರ ರೂ. ಹಾಕಿದ್ದೀರಿ. ಕರ್ನಾಟಕದಲ್ಲಿ ಯಾಕೆ ಸಿನಿಮಾ ರಿಲೀಸ್‌ ಮಾಡುತ್ತೀರಿ? ಕರ್ನಾಟಕವನ್ನು ಬಿಟ್ಟು ಬಿಡಿ ಎಂದು ಖಾರವಾಗಿ ತಿಳಿಸಿದರು.

ಇದಕ್ಕೆ ನಾಲಿಗೆ ತಪ್ಪಾಗಿ ಹೇಳಿದರೆ ಇಷ್ಟು ಹೊತ್ತಿಗೆ ಕ್ಷಮೆ ಕೇಳಬಹುದಿತ್ತು. ಚಿತ್ರ ಮಂದಿರಕ್ಕೆ ಭದ್ರತೆ ಬೇಕಾ? ಬೇಡ್ವಾ ಎಂದು ಆದೇಶ ಮಾಡುವ ಮೊದಲು ಕ್ಷಮೆ ಕೇಳಲಿ. ಒಂದು ವೇಳೆ ಇತಿಹಾಸಕಾರ ದಾಖಲೆ ಸಮೇತ ಹೇಳಿದರೆ ಚರ್ಚೆ ವಿಷಯ ಆಗುತ್ತಿತ್ತು. ಕ್ಷಮೆ ಕೇಳದ ಹೊರತು ಹೇಳಿಕೆ ಹಿಂಪಡೆಯಲು ಸಾಧ್ಯವಿಲ್ಲ ಎಂದು ಜಡ್ಜ್‌ ಖಡಕ್‌ ಆಗಿ ಸೂಚಿಸಿದರು.

ಕಮಲ್‌ ಪರ ವಕೀಲರಿಗೆ ಕ್ಷಮೆ ಕೇಳಲು ಸೂಚಿಸಿದ ನ್ಯಾಯಾಧೀಶರು ಇಂದು ಮಧ್ಯಾಹ್ನ 2:30ಕ್ಕೆ ವಿಚಾರಣೆಯನ್ನು ಮುಂದೂಡಿದರು.

Continue Reading

ಬೆಂಗಳೂರು

300 ಕೋಟಿಯ ಥಗ್​ ಲೈಫ್ ಚಿತ್ರ ಕರ್ನಾಟಕದಲ್ಲಿ ಬ್ಯಾನ್‌; ಕೋರ್ಟ್‌ ಮೊರೆ ಹೋದ ಕಮಲ್‌ ಹಾಸನ್‌

ಚೆನ್ನೈ: ಕನ್ನಡ ತಮಿಳಿನಿಂದ ಹುಟ್ಟಿದೆ ಎಂದು ವಿವಾದದ ಕಿಚ್ಚು ಇನ್ನೂ ನಿಂತಿಲ್ಲ. ಕಮಲ್‌ ಹಾಸನ್‌ (Kamal Haasan) ಹೇಳಿಕೆಯನ್ನು ಖಂಡಿಸಿ ಕರ್ನಾಟಕದಲ್ಲಿ ಹಲವು ಪ್ರತಿಭಟನೆ ನಡೆಯುತ್ತಿವೆ. ತಮ್ಮ ಹೇಳಿಕೆಗೆ ಕ್ಷಮೆಯಾಚಿಸದಿದ್ದರೆ, ಅವರ ‘ಥಗ್ ಲೈಫ್’ ( Thug Life) ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗುವುದಿಲ್ಲ ಎಂದು ಚಲನಚಿತ್ರ ಮಂಡಳಿ ಎಚ್ಚರಿಸಿದ ನಂತರ, ನಟ ಇದೀಗ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಬರೋಬ್ಬರಿ 300 ಕೋಟಿ ಬಜೆಟ್​​ನಲ್ಲಿ ಸೆಟ್ಟೇರಿರುವ ಈ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅನುಮತಿ ಸಿಕ್ಕಿಲ್ಲ. ಇದೀಗ ನಟ ಕಾನೂನಿನ ಮೊರೆ ಹೋಗಿದ್ದಾರೆ.

ಕಮಲ್‌ ಹಾಸನ್‌ ಕನ್ನಡಿಗರ ಬಳಿ ಕ್ಷಮೆ ಕೇಳಲೇ ಬೇಕು. ಅವರು ಕ್ಷಮೆಯಾಚಿಸದಿದ್ದರೆ, ಥಗ್ ಲೈಫ್ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅನುಮತಿ ನೀಡುವುದಿಲ್ಲ ಎಂದು ಇದು ಖಚಿತ, ಇದು ಉದ್ಯಮದ ಬಗ್ಗೆ ಅಲ್ಲ, ಇದು ರಾಜ್ಯದ ಬಗ್ಗೆ. ರಾಜಕೀಯ ಪಕ್ಷಗಳು ಸಹ ವಿರೋಧಿಸುತ್ತಿವೆ. ಅವರ ಕ್ಷಮೆಯಾಚನೆಯಿಲ್ಲದೆ ಚಿತ್ರದ ಬಿಡುಗಡೆ ಕಷ್ಟ. ನಮ್ಮ ಪ್ರದರ್ಶಕರು ಅಥವಾ ವಿತರಕರು ಅದನ್ನು ಪ್ರದರ್ಶಿಸಲು ಸಿದ್ಧರಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎಂ. ನರಸಿಂಹಲು ಹೇಳಿದರು.

ಕರ್ನಾಟಕ ಬಿಜೆಪಿ ಮುಖ್ಯಸ್ಥ ಬಿ.ವೈ. ವಿಜಯೇಂದ್ರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. “ಒಬ್ಬರು ತಮ್ಮ ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ ಅದರ ಹೆಸರಿನಲ್ಲಿ ದುರಹಂಕಾರವನ್ನು ಪ್ರದರ್ಶಿಸುವುದು ಸಾಂಸ್ಕೃತಿಕ ದಿವಾಳಿತನದ ಸಂಕೇತವಾಗಿದೆ. ವಿಶೇಷವಾಗಿ ಕಲಾವಿದರು ಪ್ರತಿಯೊಂದು ಭಾಷೆಯನ್ನು ಗೌರವಿಸುವ ನೀತಿಯನ್ನು ಹೊಂದಿರುವುದು ಅತ್ಯಗತ್ಯ ಎಂದು ಹೇಳಿದ್ದಾರೆ. ಕನ್ನಡ ಭಾಷೆಗೆ ದೀರ್ಘ ಇತಿಹಾಸವಿದೆ ಅದು ಕಮಲ್‌ ಹಾಸನ್‌ಗೆ ತಿಳಿದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಥಗ್‌ ಲೈಫ್‌ ಸಿನಿಮಾದ ಕಾರ್ಯಕ್ರಮವೊಂದರಲ್ಲಿ ನಟ ಶಿವರಾಜ್‌ಕುಮಾರ್‌ ಎದುರೇ ಕನ್ನಡ ತಮಿಳಿನಿಂದ ಹುಟ್ಟಿದೆ. ಕನ್ನಡದ ಮೂಲ ತಮಿಳು ಎಂದು ಹೇಳಿದ್ದರು. ಇದು ಕನ್ನಡಿಗರನ್ನು ಕೆರಳಿಸಿತ್ತು. ತಮ್ಮ ಹೇಳಿಕೆಗೆ ಕ್ಷಮೆ ಕೇಳದೆ ನಟ ಮತ್ತೆ ಮೊಂಡು ಪ್ರದರ್ಶನ ಮಾಡಿದ್ದರು. ಮೆಯಾಚಿಸುವ ಯಾವುದೇ ಯೋಜನೆ ಇಲ್ಲ ಎಂದು ನಟ ಸ್ಪಷ್ಟಪಡಿಸಿದ್ದಾರೆ. “ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ಕಾರ್ಯಸೂಚಿ ಹೊಂದಿರುವವರನ್ನು ಹೊರತುಪಡಿಸಿ ಯಾರೂ ಇದನ್ನು ಅನುಮಾನಿಸುವುದಿಲ್ಲ. ನನಗೆ ಈ ಹಿಂದೆಯೂ ಬೆದರಿಕೆ ಹಾಕಲಾಗಿದೆ, ಮತ್ತು ನಾನು ತಪ್ಪಾಗಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ. ಆದರೆ ನಾನು ತಪ್ಪೇ ಮಾಡಿಲ್ಲ ಎಂದು ಹೇಳಿದ್ದರು

Continue Reading

ರಾಜ್ಯ

ಕುಲದಲ್ಲಿ ಕೀಳ್ಯಾವದೋ ಚಲನಚಿತ್ರರಂಗದಿಂದ ಮತ್ತೊಂದು ಎಡವಟ್ಟು

ಬೆಂಗಳೂರು: ಕುಲದಲ್ಲಿ ಕೀಳ್ಯಾವದೋ ಚಲನಚಿತ್ರರಂಗದ ನಟ, ನಟಿಯರು ಪತ್ರಿಕಾಗೋಷ್ಟಿಯಲ್ಲಿ ಭಾಗವಹಿಸಿದ್ದರು ಇದರಲ್ಲಿ ನಟ ಕರಿಸುಬ್ಬುರವರು ಮಡೆನೂರು ಮನು ಕುರಿತು ಮಾತನಾಡುವ ಸಂದರ್ಭದಲ್ಲಿ ಊರು ಎಂದರೆ ಹೊಲಗೇರಿ ಇರುತ್ತದೆ, ಹೊಲಗೇರಿ ಸೇರಿಕೊಂಡಿದೆ ಎಂಬ ಮಾತನ್ನಾಡುತ್ತಾರೆ ಇದರ ವಿವಾದತ್ಮಕ ಹೇಳಿಕೆ ಖಂಡಿಸಿ ಡಾ||ಬಿ.ಆರ್.ಅಂಬೇಡ್ಕರ್ ಮಾನವ ಹಕ್ಕುಗಳು ಕ್ರಾಂತಿ ಸೇನೆ ಸಂಘಟನೆ ರಾಜ್ಯಾಧ್ಯಕ್ಷರಾದ ಕ್ರಾಂತಿ ರಾಜುರವರು ಖಂಡನೆ ವ್ಯಕ್ತಪಡಿಸಿದ್ದರು.

ಇದೇ ಸಂದರ್ಭದಲ್ಲಿ ಕ್ರಾಂತಿ ರಾಜುರವರು ಮಾತನಾಡಿ ಹೊಲೆಯರು ಎಂದರೆ ಹೊಲದ ಒಡೆಯ ಎಂಬರ್ಥ ಇದೆ, ನಮ್ಮ ಸಮುದಾಯಕ್ಕೆ ತನ್ನದೇ ಆದ ಇತಿಹಾಸ ಹೊಂದಿದೆ.

2000 ಸಾವಿರ ವರ್ಷಗಳಿಂದ ನಮ್ಮ ಸಮುದಾಯಕ್ಕೆ ಶೋಷಣೆ ಮಾಡಿದರು, ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರು ನಮ್ಮ ಮೇಲೆ ಅಪಮಾನ ,ಶೋಷಣೆ ನಿಂತಿಲ್ಲ ಎಂಬುದು ವಿಷಾದಕರ ಸಂಗತಿ.

ನಟ ಕರಿಸುಬ್ಬು ರವರ ಅವಹೇಳನಕಾರಿ ಮಾತನಾಡುವಾಗ ನಟಿ ಮೌನ, ಹಿರಿಯ ನಟ ಉಮೇಶ್ ಮತ್ತು ಡ್ಯಾಗನ್ ಮಂಜುರವರು ಉಪಸ್ಥಿತರಿದ್ದರು ಅವರ ಸಹ ಮೌನವಹಿಸಿರುವುದು ಖಂಡನೀಯ.

ನಟ ಕರಿಸುಬ್ಬುರವರು ಕೊಡಲೆ ಕ್ಷಮಾಪಣೆ ಹೇಳಬೇಕು ಇಲ್ಲದೇ ಹೋದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Continue Reading

Trending