Connect with us

ಸಿನಿಮಾ

ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮನ್ಸೂರ್ ಅಲಿ ಖಾನ್ ರನ್ನು ಬಂಧಿಸುವಂತೆ ತಮಿಳುನಾಡು ಪೊಲೀಸರಿಗೆ NCW ನಿರ್ದೇಶನ

Published

on

ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮನ್ಸೂರ್ ಅಲಿ ಖಾನ್ ರನ್ನು ಬಂಧಿಸುವಂತೆ ತಮಿಳುನಾಡು ಪೊಲೀಸರಿಗೆ NCW ನಿರ್ದೇಶನ
ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮನ್ಸೂರ್ ಅಲಿ ಖಾನ್ ರನ್ನು ಬಂಧಿಸುವಂತೆ ತಮಿಳುನಾಡು ಪೊಲೀಸರಿಗೆ NCW ನಿರ್ದೇಶನ

ನವದೆಹಲಿ: ನಟಿ ತ್ರಿಶಾ ಕೃಷ್ಣನ್ ಬಗ್ಗೆ ಕೀಳು ಮಟ್ಟದ ಹೇಳಿಕೆ ಕೊಟ್ಟಿರುವ ನಟ ಮನ್ಸೂರ್ ಅಲಿ ಖಾನ್ ವಿರುದ್ಧ ಪ್ರಕರಣ ದಾಖಲಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ (NCW) ತಮಿಳುನಾಡು ಪೊಲೀಸರಿಗೆ ನಿರ್ದೇಶನ ನೀಡಿದೆ.

NCW ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ನಟ ಮನ್ಸೂರ್ ಅಲಿ ಖಾನ್ ನಟಿ ತ್ರಿಷಾ ಕೃಷ್ಣ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ವಿಷಯದಲ್ಲಿ ನಾವು ಸ್ವಯಂ ಪ್ರೇರಿತರಾಗಿ IPC ಸೆಕ್ಷನ್ 509 B ಮತ್ತು ಇತರ ಸೆಕ್ಷನ್ ಗಳನ್ನು ಜಾರಿಗೊಳಿಸುವಂತೆ DGPಗೆ ನಿರ್ದೇಶಿಸುತ್ತೇವೆ ಎಂದು ಬರೆದುಕೊಂಡಿದೆ.

ಈ ಹೇಳಿಕೆ ಬಗ್ಗೆ ಲಿಯೋ ನಿರ್ದೇಶಕ ಲೋಕೇಶ್ ಕನಕರಾಜ್ ಮಾತನಾಡಿ, ತಾವೆಲ್ಲರೂ ಒಂದೇ ತಂಡದಲ್ಲಿ ಕೆಲಸ ಮಾಡಿದ್ದೇವೆ. ಮನ್ಸೂರ್ ಅಲಿ ಖಾನ್ ಕೊಟ್ಟಿರುವ ಸ್ತ್ರೀದ್ವೇಷದ ಕಾಮೆಂಟ್‌ಗಳನ್ನು ಕೇಳಿ ನಾನು ಅಸಮಾಧಾನಗೊಂಡಿದ್ದು ಕೋಪಗೊಂಡಿದ್ದೇನೆ ಎಂದಿದ್ದರು.

ದಕ್ಷಿಣ ಭಾರತದ ನಟ ಮನ್ಸೂರ್ ಅಲಿ ಖಾನ್ ಇತ್ತೀಚೆಗೆ ನಟಿ ತ್ರಿಶಾ ಕೃಷ್ಣನ್ ಅವರ ಬಗ್ಗೆ ಹೇಳಿಕೆ ನೀಡಿದ್ದು, ಅದರ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಇಂತಹ ಪರಿಸ್ಥಿತಿಯಲ್ಲಿ ಈಗ ತ್ರಿಶಾ ಕೃಷ್ಣನ್ ‘ಲಿಯೋ’ ಸ್ಟಾರ್ ಮನ್ಸೂರ್ ಅಲಿ ಖಾನ್ ಹೇಳಿಕೆಗೆ ಪ್ರತಿಕ್ರಿಯಿಸಿದ್ದರು.

ಷಾ ಅವರು, ಮನ್ಸೂರ್ ಅಲಿ ಖಾನ್ ನನ್ನ ಬಗ್ಗೆ ಅಸಹ್ಯವಾಗಿ ಮಾತನಾಡಿರುವ ವೀಡಿಯೊ ಇತ್ತೀಚೆಗೆ ನನ್ನ ಗಮನಕ್ಕೆ ಬಂದಿದೆ. ಆ ನಟನ ಮಾತುಗಳನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅಗೌರವ, ಸ್ತ್ರೀದ್ವೇಷ, ಕೆಟ್ಟ ಅಭಿರುಚಿ ಹಾಗೂ ಲೈಂಗಿಕ ಲೋಭವನ್ನು ಹೊಂದಿದೆ. ನನ್ನೊಂದಿಗೆ ನಟಿಸಲು ಅವರು ಬಯಸಬಹುದು ಆದರೆ ನಾನು ಅವರಂತಹ ಕೆಟ್ಟ ವ್ಯಕ್ತಿಯೊಂದಿಗೆ ಎಂದಿಗೂ ಪರದೆಯನ್ನು ಹಂಚಿಕೊಳ್ಳುವುದಿಲ್ಲ. ಈ ಹಿಂದೆ ಪರದೆ ಹಂಚಿಕೊಂಡಿದ್ದಕ್ಕೆ ನಾನು ಕೃತಜ್ಞಳಾಗಿದ್ದೇನೆ. ಮತ್ತು ನನ್ನ ಉಳಿದ ಚಲನಚಿತ್ರ ವೃತ್ತಿಜೀವನದಲ್ಲಿ ನಾನು ಅವರೊಟ್ಟಿಗೆ ಎಂದಿಗೂ ಪರದೆ ಹಂಚಿಕೊಳ್ಳದಂತೆ ಎಚ್ಚರವಹಿಸುತ್ತೇನೆ. ಅವರಂತಹವರು ಮನುಕುಲಕ್ಕೆ ಕೆಟ್ಟ ಹೆಸರು ತರುತ್ತಾರೆ ಎಂದು ಬರೆದುಕೊಂಡಿದ್ದಾರೆ.

ತ್ರಿಶಾಗೆ ಮನ್ಸೂರ್ ಅಲಿ ಖಾನ್ ಹೇಳಿದ್ದೇನು?
ಮನ್ಸೂರ್ ಅಲಿ ಖಾನ್ ಸಂದರ್ಶನವೊಂದರಲ್ಲಿ ಹೇಳಿದ್ದು, ‘ನಾನು ತ್ರಿಷಾ ಜೊತೆ ನಟಿಸುತ್ತಿದ್ದೇನೆ ಎಂದು ಕೇಳಿದಾಗ, ಚಿತ್ರದಲ್ಲಿ ರೇಪ್ ಸೀನ್ ಇರುತ್ತದೆ ಎಂದು ನಾನು ಭಾವಿಸಿದೆ. ನನ್ನ ಹಿಂದಿನ ಚಿತ್ರಗಳಲ್ಲಿ ಇತರ ನಟಿಯರೊಂದಿಗೆ ಮಾಡಿದಂತೆ ನಾನು ತ್ರಿಷಾಳನ್ನು ಬೆಡ್ ರೂಂಗೆ ಕರೆದುಕೊಂಡು ಹೋಗಿ ರೇಪ್ ಮಾಡುವ ಸೀನ್ ಇರುತ್ತದೆ ಎಂದು ನಾನು ಭಾವಿಸಿದೆ. ನಾನು ಅನೇಕ ಚಿತ್ರಗಳಲ್ಲಿ ಅತ್ಯಾಚಾರದ ದೃಶ್ಯಗಳನ್ನು ಮಾಡಿದ್ದೇನೆ. ಇದು ನನಗೆ ಹೊಸದಲ್ಲ. ಆದರೆ ಲಿಯೋ ಸಿನಿಮಾನವರು ತ್ರಿಷಾರ ಮುಖವನ್ನು ಸಹ ನನಗೆ ತೋರಿಸಲಿಲ್ಲ ಎಂದು ಹೇಳಿದ್ದಾರೆ.

600 ಕೋಟಿ ಕ್ಲಬ್‌ನಲ್ಲಿ ಲಿಯೋ
ಸಾಮಾಜಿಕ ಜಾಲತಾಣಗಳಲ್ಲಿ ತ್ರಿಷಾ ಪರವಾಗಿ ಹಲವು ಹ್ಯಾಶ್‌ಟ್ಯಾಗ್‌ಗಳು ಹರಿದಾಡುತ್ತಿದ್ದು, ಮನ್ಸೂರ್ ಅವರನ್ನು ಬಂಧಿಸಿ ಎಲ್ಲರ ಮುಂದೆ ಕ್ಷಮೆಯಾಚಿಸಬೇಕು ಎಂಬ ಬೇಡಿಕೆಗಳು ಕೇಳಿಬರುತ್ತಿವೆ. ಲಿಯೋವನ್ನು ಲೋಕೇಶ್ ಕನಕರಾಜ್ ನಿರ್ದೇಶಿಸಿದ್ದಾರೆ. ದಳಪತಿ ವಿಜಯ್, ತ್ರಿಶಾ, ಮನ್ಸೂರ್ ಅಲಿ ಖಾನ್, ಸಂಜಯ್ ದತ್ ಮತ್ತು ಅರ್ಜುನ್ ಸರ್ಜಾ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಕಲೆಕ್ಷನ್ ಬಗ್ಗೆ ಹೇಳುವುದಾದರೆ, ಚಿತ್ರವು ವಿಶ್ವಾದ್ಯಂತ 600 ಕೋಟಿ ರೂ.ಗೂ ಹೆಚ್ಚು ಗಳಿಸಿದೆ. ಸದ್ಯದಲ್ಲೇ ಚಿತ್ರ ಒಟಿಟಿಗೆ ಬರಲಿದೆ.

ದೇಶ

ಮೆಲೊಡಿ ಟ್ರೆಂಡ್‌ಗೆ ಎಂಟ್ರಿ ಕೊಟ್ಟ ಬಾಲಿವುಡ್ ಜೋಡಿ: ಸೋನಾಕ್ಷಿ ವಿಡಿಯೋ ಸದ್ದು

Published

on

ಬಾಲಿವುಡ್ ನಟಿ Sonakshi Sinha ಮತ್ತು ಅವರ ಪತಿ Zaheer Iqbal ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಮೋಜಿನ ಪೋಸ್ಟ್‌ಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಇಂಟರ್ನೆಟ್‌ನಲ್ಲಿ ಟ್ರೆಂಡಿಂಗ್ ಆಗಿರುವ ‘ಮೆಲೊಡಿ’ ಮೀಮ್‌ಗೆ ಈ ಜೋಡಿ ಹೊಸ ಟ್ವಿಸ್ಟ್ ನೀಡಿದ್ದು, ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಬುಧವಾರ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಈ ರೀಲ್ಸ್‌ನಲ್ಲಿ, ಸೋನಾಕ್ಷಿ ತಮ್ಮ ಪತಿ ಜಹೀರ್ ಅವರನ್ನು “ನೀನು ಏನು ಕೇಳಲು ಬಯಸುತ್ತೀಯ?” ಎಂದು ಪ್ರಶ್ನಿಸುತ್ತಾರೆ. ಅದಕ್ಕೆ ಜಹೀರ್, “ನಾನು ನಿನ್ನನ್ನು ಎಷ್ಟು ಪ್ರೀತಿಸುತ್ತೇನೆ ಅನ್ನೋದು ನಿನಗೆ ಗೊತ್ತಿದೆ” ಎಂದು ಉತ್ತರಿಸುತ್ತಾರೆ. ಆದರೆ ಸೋನಾಕ್ಷಿ ತಮಾಷೆಯಾಗಿ “ಇಲ್ಲ” ಎಂದು ಪ್ರತಿಕ್ರಿಯಿಸುತ್ತಾರೆ. ಕೆಲವೇ ಕ್ಷಣಗಳಲ್ಲಿ ಜಹೀರ್ ತಮ್ಮ ಜೇಬಿನಿಂದ ‘ಮೆಲೊಡಿ’ ಚಾಕೊಲೇಟ್ ತೆಗೆದು “ಮೆಲೊಡಿ ತಿನ್ನು, ನೀನೇ ತಿಳಿದುಕೋ” ಎಂದು ಹೇಳುವ ದೃಶ್ಯ ಅಭಿಮಾನಿಗಳನ್ನು ನಗಿಸುವಂತಾಗಿದೆ.

ಈ ವಿಡಿಯೋ ಬಿಡುಗಡೆಯಾದ ತಕ್ಷಣವೇ ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ. ಹಲವರು ಈ ಜೋಡಿಯ ಕೆಮಿಸ್ಟ್ರಿಯನ್ನು ಮೆಚ್ಚಿಕೊಂಡಿದ್ದು, ವೈರಲ್ ಟ್ರೆಂಡ್‌ಗೆ ತಮ್ಮದೇ ಶೈಲಿಯಲ್ಲಿ ಸ್ಪಂದಿಸಿರುವುದನ್ನು ಪ್ರಶಂಸಿಸಿದ್ದಾರೆ. ವಿಶೇಷವೆಂದರೆ, ಇವರ ಬಹುನಿರೀಕ್ಷಿತ ‘ಸಿಸ್ಟಮ್’ ಚಿತ್ರದ ಬಿಡುಗಡೆಗೂ ಮುನ್ನ ಈ ವಿಡಿಯೋ ಹೊರಬಂದಿರುವುದು ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

‘ಮೆಲೊಡಿ’ ಟ್ರೆಂಡ್ ಮೊದಲು ಪ್ರಧಾನಿ Narendra Modi ಮತ್ತು ಇಟಲಿ ಪ್ರಧಾನಿ Giorgia Meloni ಅವರ ವೈರಲ್ ಫೋಟೋಗಳಿಂದ ಹುಟ್ಟಿಕೊಂಡಿತ್ತು. ಬಳಿಕ #Melodi ಹ್ಯಾಶ್‌ಟ್ಯಾಗ್ ಜಾಗತಿಕ ಮಟ್ಟದಲ್ಲಿ ಟ್ರೆಂಡ್ ಆಗಿ, ಇದೀಗ ಸಿನಿಮಾ ಮತ್ತು ಮನರಂಜನಾ ವಲಯಕ್ಕೂ ವ್ಯಾಪಿಸಿದೆ.

Continue Reading

ದೇಶ

‘ಜೋರಾಗಿ ಸಾರಿ ಹೇಳಿ!’ ಪಾಪರಾಜಿಗಳನ್ನು ಕಿಚಾಯಿಸಿದ ಸಲ್ಮಾನ್

Published

on

ಮುಂಬೈ: ಬಾಲಿವುಡ್‌ನ ಜನಪ್ರಿಯ ನಟ Salman Khan ಮತ್ತು ಪಾಪರಾಜಿಗಳ ನಡುವಿನ ಸಂಬಂಧ ಮತ್ತೆ ಸುದ್ದಿಯಾಗಿದೆ. ಮುಂಬೈನ ಆಸ್ಪತ್ರೆಯೊಂದರ ಹೊರಗೆ ನಡೆದ ಘಟನೆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಹುಟ್ಟಿಕೊಂಡಿತ್ತು. ಆದರೆ, ಇದೀಗ ಅದೇ ವಿಚಾರ ಸ್ನೇಹಪೂರ್ಣ ತಿರುವು ಪಡೆದುಕೊಂಡಿದೆ.

ಮರಾಠಿ ಸಿನಿಮಾ Raja Shivaji ಯಶಸ್ಸಿನ ಸಮಾರಂಭದಲ್ಲಿ ಸಲ್ಮಾನ್ ಖಾನ್ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ ಅಲ್ಲಿದ್ದ ಫೋಟೋಗ್ರಾಫರ್‌ಗಳು ಒಂದೇ ಸ್ವರದಲ್ಲಿ “ಸಾರಿ ಸರ್” ಎಂದು ಕೂಗಿ ಕ್ಷಮೆಯಾಚಿಸಿದರು. ಇದನ್ನು ಕೇಳಿದ ಸಲ್ಮಾನ್ ಕೂಡ ಹಾಸ್ಯಮಯವಾಗಿ ಪ್ರತಿಕ್ರಿಯಿಸಿ, “ಜೋರಾಗಿ ಸಾರಿ ಹೇಳಿ” ಎಂದು ಕಿಚಾಯಿಸಿದರು. ನಟ Riteish Deshmukh ಕೂಡ ಈ ಕ್ಷಣವನ್ನು ನೋಡಿ ನಗುವುದರಲ್ಲಿ ತೊಡಗಿಕೊಂಡರು.

ಇದಕ್ಕೂ ಮುನ್ನ ಸಲ್ಮಾನ್ ಖಾನ್ ತಮ್ಮ ಆತ್ಮೀಯರನ್ನು ಭೇಟಿ ಮಾಡಲು ಮುಂಬೈನ ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಕೆಲ ಪಾಪರಾಜಿಗಳು ಅವರ ಹೆಸರನ್ನು ಕೂಗಿ ಪ್ರಶ್ನೆಗಳನ್ನು ಕೇಳಲು ಆರಂಭಿಸಿದ್ದರು. ಇದರಿಂದ ಅಸಮಾಧಾನಗೊಂಡ ನಟ, ಆಸ್ಪತ್ರೆಗಳಂತಹ ಖಾಸಗಿ ಸ್ಥಳಗಳಲ್ಲಿ ಗೌಪ್ಯತೆಯನ್ನು ಕಾಪಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದರು.

ಇದೇ ವೇಳೆ ಸಲ್ಮಾನ್ ಖಾನ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ “Alone” ಮತ್ತು “Lonely” ಕುರಿತ ಚಿಂತನಾತ್ಮಕ ಪೋಸ್ಟ್ ಹಂಚಿಕೊಂಡಿದ್ದು ಅಭಿಮಾನಿಗಳ ಗಮನ ಸೆಳೆದಿದೆ. “ಒಂಟಿತನ ನಮ್ಮ ಆಯ್ಕೆ ಆಗಿರಬಹುದು. ಆದರೆ ಯಾರೂ ನಮ್ಮ ಜೊತೆ ಇರಲು ಬಯಸದಾಗ ಅದು ನಿಜವಾದ ನೋವು” ಎಂದು ಅವರು ಬರೆದುಕೊಂಡಿದ್ದರು. ಈ ಪೋಸ್ಟ್‌ಗೆ ನಟಿ Sneha Ullal ಸಹ ಹಾಸ್ಯಮಯ ಕಾಮೆಂಟ್ ಮಾಡಿದ್ದು ವೈರಲ್ ಆಗಿದೆ.

ಸದ್ಯ ಸಲ್ಮಾನ್ ಖಾನ್ ಅವರ ಮುಂಬರುವ Kick 2, Tiger vs Pathaan ಹಾಗೂ Sikandar ಸಿನಿಮಾಗಳ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿದೆ.

Continue Reading

ದೇಶ

‘ಪೆದ್ದಿ’ ಟ್ರೇಲರ್‌ಗೆ ರಿಷಬ್ ಶೆಟ್ಟಿ ಫಿದಾ: “ರಾಮ್ ಚರಣ್ ಆ್ಯಬ್ಸಲ್ಯೂಟ್ ಫೈರ್”

Published

on

ಬೆಂಗಳೂರು: Rishab Shetty ಅಭಿನಯದ ‘ಕಾಂತಾರ’ ಬಳಿಕ ದೇಶವ್ಯಾಪಿ ಖ್ಯಾತಿ ಪಡೆದಿರುವ ರಿಷಬ್ ಶೆಟ್ಟಿ, ಇದೀಗ Peddi ಚಿತ್ರದ ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ram Charan ಹಾಗೂ Shiva Rajkumar ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಆ್ಯಕ್ಷನ್–ಸ್ಪೋರ್ಟ್ಸ್ ಡ್ರಾಮಾ ಜೂನ್ 4, 2026ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ಟ್ರೇಲರ್ ಮೇ 18ರಂದು ಸಂಜೆ ಮುಂಬೈನ Jio World Driveನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು.

“ಪ್ರತಿ ಫ್ರೇಮ್‌ನಲ್ಲೂ ರಾಮ್ ಚರಣ್ ಫೈರ್”

ಟ್ರೇಲರ್ ನೋಡಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ರಿಷಬ್ ಶೆಟ್ಟಿ, “ಪೆದ್ದಿ ಟ್ರೇಲರ್ ಅದ್ಭುತವಾಗಿದೆ. ರಾಮ್ ಚರಣ್ ಪ್ರತಿಯೊಂದು ಫ್ರೇಮ್‌ನಲ್ಲೂ ಸ್ಟನ್ನಿಂಗ್ ಆಗಿ ಕಾಣಿಸುತ್ತಿದ್ದಾರೆ. ಅವರು ಆ್ಯಬ್ಸಲ್ಯೂಟ್ ಫೈರ್” ಎಂದು ಬರೆದುಕೊಂಡಿದ್ದಾರೆ.

ಇದರ ಜೊತೆಗೆ ಶಿವರಾಜ್‌ಕುಮಾರ್ ಅವರ ಸ್ಕ್ರೀನ್ ಪ್ರೆಸೆನ್ಸ್ ಚಿತ್ರಕ್ಕೆ ಭವ್ಯತೆ ತಂದಿದೆ ಎಂದು ಶ್ಲಾಘಿಸಿದ ಅವರು, Janhvi Kapoor ಅಭಿನಯವನ್ನೂ ಮೆಚ್ಚಿಕೊಂಡಿದ್ದಾರೆ.

ಶಿವಣ್ಣ ಪಾತ್ರಕ್ಕೂ ಭಾರೀ ಮೆಚ್ಚುಗೆ

ಟ್ರೇಲರ್ ಬಿಡುಗಡೆಗೂ ಮುನ್ನ ಶಿವರಾಜ್‌ಕುಮಾರ್ ನಿರ್ವಹಿಸಿರುವ “ಗೌರ್ನಾಯ್ಡು” ಪಾತ್ರದ ಪರಿಚಯ ವಿಡಿಯೋ ಕೂಡ ಬಿಡುಗಡೆಯಾಗಿತ್ತು. ಟ್ರೇಲರ್‌ನಲ್ಲಿ ಶಿವಣ್ಣನ ಸ್ಟೈಲಿಶ್ ಲುಕ್ ಅಭಿಮಾನಿಗಳ ಗಮನ ಸೆಳೆದಿದೆ.

ಟ್ರೇಲರ್‌ನಲ್ಲಿ ಏನಿದೆ?

3 ನಿಮಿಷ 7 ಸೆಕೆಂಡ್ ಅವಧಿಯ ಟ್ರೇಲರ್‌ನಲ್ಲಿ ರಾಮ್ ಚರಣ್ ಹಲವು ಕ್ರೀಡಾಂಗಣಗಳಲ್ಲಿ ಮಿಂಚುತ್ತಿರುವ ದೃಶ್ಯಗಳಿವೆ. ಕುಸ್ತಿ, ಕ್ರಿಕೆಟ್ ಹಾಗೂ ಓಟ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಅವರ ಪಾತ್ರವನ್ನು ತೋರಿಸಲಾಗಿದೆ.

ಒಂದು ದೃಶ್ಯದಲ್ಲಿ Boman Irani, ರಾಮ್ ಚರಣ್ ಅವರನ್ನು “ಭಾರತದ ಕ್ರಾಸ್ ಅಥ್ಲೀಟ್” ಎಂದು ಹೊಗಳುತ್ತಾರೆ.

ಗ್ರಾಮೀಣ ಹಿನ್ನೆಲೆಯ ಕಥೆಯಲ್ಲಿ Divyendu Sharma ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಬುಚಿ ಬಾಬು ಸನಾ ನಿರ್ದೇಶನ

ಚಿತ್ರವನ್ನು Buchi Babu Sana ನಿರ್ದೇಶಿಸಿದ್ದು, A. R. Rahman ಸಂಗೀತ ಸಂಯೋಜನೆ ಮಾಡಿದ್ದಾರೆ.

ಈ ಚಿತ್ರವನ್ನು ವೆಂಕಟ್ ಸತೀಶ್ ಕಿಲಾರು ನಿರ್ಮಿಸಿದ್ದು, Mythri Movie Makers ಮತ್ತು Sukumar Writings ಪ್ರಸ್ತುತಪಡಿಸುತ್ತಿವೆ.

Continue Reading

Trending