ಸಿನಿಮಾ
ಡಂಕಿ + ಶಾರುಖ್ ಖಾನ್ = ಜಂಗಿ ಕುಸ್ತಿ!
‘ಬಾಲಿವುಡ್ ಕಾ ಬಾದ್ ಶಾ’ ಶಾರುಖ್ ಖಾನ್ ಮತ್ತೊಮ್ಮೆ ಅಬ್ಬರಿಸಲು ಸಜ್ಜಾಗಿದ್ದಾರೆ. ‘ಡಂಕಿ’ ಮೂಲಕ ಗಲ್ಲಾಪೆಟ್ಟಿಗೆ ಧೂಳ್ ಧೂಳ್ ಮಾಡಲು ಸಿದ್ಧತೆ ನಡೆಸಿದ್ದಾರೆ. ಈ ಕಾರಣಕ್ಕೆ ಶಾರುಖ್ ಖಾನ್ ಸಿನಿಮಾಗೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಹೀಗಿದ್ದಾಗಲೇ ಶಾರುಖ್ ಖಾನ್ ಜಂಗಿ ಕುಸ್ತಿ ಅಖಾಡದಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.’ಡಂಕಿ’ ಬಹುನಿರೀಕ್ಷಿತ ಸಿನಿಮಾಗಳ ಪೈಕಿ ಒಂದಾಗಿದ್ದು, ಶಾರುಖ್ ಖಾನ್ & ರಾಜ್ ಕುಮಾರ್ ಹಿರಾನಿ ಜೋಡಿ ಇತ್ತೀಚೆಗಷ್ಟೇ ಚಿತ್ರದ ಟೀಸರ್ ರಿಲೀಸ್ ಮಾಡಿದ್ರು. ಇನ್ನು ಅಭಿಮಾನಿಗಳಿಂದ ಟೀಸರ್ಗೂ ಭರ್ಜರಿ ರಿಯಾಕ್ಷನ್ ಸಿಕ್ಕಿದೆ. ಇನ್ನೇನು ಡಂಕಿ ರಿಲೀಸ್ಗು ಕೌಂಟ್ಡೌನ್ ಶುರುವಾದ ಹಿನ್ನೆಲೆ ಚಿತ್ರ ತಂಡ ಪ್ರಮೋಷನ್ ಶುರು ಮಾಡಿದೆ. ಈ ವೇಳೆ ಶಾರುಖ್ ಖಾನ್ ಫೈಟ್ ಗಮನ ಸೆಳೆದಿದೆ. ಅರೆರೆ ಹಾಗಾದರೆ ಬಾಲಿವುಡ್ ಬಾದ್ ಶಾ ಶಾರುಖ್ ದಿಢೀರ್ ಕುಸ್ತಿ ಅಖಾಡದಲ್ಲಿ ಕಾಣಿಸಿಕೊಂಡಿದ್ದು ಏಕೆ?ಯೆಸ್ ಡಂಕಿ ಕ್ರೇಜ್ ಜೋರಾಗಿದೆ. ಟೀಸರ್ ಧೂಳೆಬ್ಬಿಸಿದ ನಂತರ ಲುಟ್ ಪುಟ್ ಗಯಾ ಎಂಬ ಮೆಲೋಡಿ ಹಾಡು ಎಲ್ಲರ ಗಮನ ಸೆಳೆದಿದೆ. ಶಾರುಖ್ ಖಾನ್ ಮತ್ತು ತಾಪ್ಸಿ ಪನ್ನು ನಡುವಿನ ಪ್ರೇಮ ಗೀತೆ ಹಿಟ್ ಲೀಸ್ಟ್ ಸೇರಿದೆ. ಈಗ ಈ ಹಾಡಿನ ಒಂದು ಸಿನ್ ಎಲ್ಲೆಡೆ ವೈರಲ್ ಆಗ್ತಾ ಇದೆ. ಶಾರುಖ್ ಫ್ಯಾನ್ಸ್ ಹುಬ್ಬೇರಿಸಿದ್ದಾರೆ. ಡಂಕಿಯ ಲುಟ್ ಪುಟ್ ಗಯಾನಲ್ಲಿ, ಕುಸ್ತಿ ಅಖಾಡದಲ್ಲಿ ತಾಪ್ಸಿ ಅವರು ಶಾರುಖ್ ಅವರಿಗೆ ಶಾಕ್ ಕೊಡ್ತಾರೆ. ಅದೆ ರೀತಿ ಜವಾನ್ ಸಿನಿಮಾ ಹಾಡಿನಲ್ಲಿ ದೀಪಿಕಾ ಕೂಡ ಶಾರುಖ್ ಅವರನ್ನು ಎತ್ತಿ ಕುಸ್ತಿ ಆಡಿ ಶಾಕ್ ಕೊಟ್ಟಿದ್ದರು. ಹೀಗೆ ಈ 2 ಸೀನ್ಸ್ ನೋಡಿದ ಫ್ಯಾನ್ಸ್ ಕಿಂಗ್ ಖಾನ್ ಕುಸ್ತಿ ವಿಚಾರದಲ್ಲಿ ಹಿಂದೆ ಬಿದ್ದಿದ್ಯಾಕೆ? ಅಂತಾ ಚರ್ಚೆ ಶುರು ಮಾಡಿದ್ದಾರಂತೆ.ಅಷ್ಟಕ್ಕೂ ‘ಡಂಕಿ’ ಸಿನಿಮಾಗೆ ಡಿಫರೆಂಟ್ ಆಗಿ ಕಥೆ ಹೆಣೆದಿದ್ದಾರೆ ರಾಜ್ಕುಮಾರ್ ಹಿರಾನಿ. ಭಾರತದ ಪಂಜಾಬ್ & ಸುತ್ತಮುತ್ತಲಿನ ಪ್ರದೇಶದಿಂದ ಕಾನೂನು ಬಾಹಿರವಾಗಿ ಕೆನಡಾ ಹಾಗೂ ಅಮೆರಿಕಗೆ ತೆರಳುವವರನ್ನ ಕೇಂದ್ರಿಕರಿಸಿ ಸಿನಿಮಾ ಮಾಡಲಾಗಿದೆ. ವಿದೇಶ, ಪ್ರೀತಿ, ಸ್ನೇಹ, ತಾಯ್ನಾಡು ಇಂತಹದ್ದೇ ಎಳೆ ಆಧರಿಸಿ ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ & ಕನಿಕಾ ಧಿಲ್ಲೋನ್ ‘ಡಂಕಿ’ಗೆ ಕಥೆ ಹೆಣೆದಿದ್ದಾರೆ. ಶಾರುಖ್ ಖಾನ್ ಜೊತೆಗೆ ಸ್ಟಾರ್ಸ್ ದಂಡೇ ಸಿನಿಮಾಗೆ ಸಾಥ್ ನೀಡಿದೆ.ಇನ್ನೇನು ‘ಡಂಕಿ’ ಸಿನಿಮಾ ತೆರೆಗೆ ಬರಲು ಅಂತಿಮ ಸಿದ್ಧತೆ ನಡೆಸಿದ್ದು, ಕಮಾಲ್ ಮಾಡೋಕೆ ಸಜ್ಜಾಗಿದೆ. ನಾಯಕನಾಗಿ ಶಾರುಖ್ ಖಾನ್ ನಟಿಸಿದ್ದರೆ, ತಾಪ್ಸಿ ಪನ್ನು, ಬೋಮನ್ ಇರಾನಿ, ವಿಕ್ಕಿ ಕೌಶಲ್, ಅನಿಲ್ ಗ್ರೋವರ್ & ವಿಕ್ರಮ್ ಕೊಚ್ಚರ್ ನಟಿಸಿದ್ದಾರೆ. ಸಿನಿಮಾ ಡಿಸೆಂಬರ್ 22 ಕ್ಕೆ ಜಗತ್ತಿನಾದ್ಯಂತ ಸಿನಿಮಾ ರಿಲೀಸ್ ಆಗಲಿದೆ. ಈ ಮೂಲಕ ಭಾರತೀಯ ಸಿನಿಮಾ ಅಖಾಡ ಮತ್ತೊಂದು ಇಂಡಸ್ಟ್ರಿ ಹಿಟ್ ಸಿನಿಮಾಗೆ ಸಿದ್ಧವಾಗಿದೆ ಅಂತಿದ್ದಾರೆ ಶಾರುಖ್ ಖಾನ್ ಅವರ ಅಭಿಮಾನಿಗಳು. ಹೀಗಾಗಿ ಡಿಸೆಂಬರ್ 22 ಕ್ಕೆ ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ. ಹಾಗೆ ಹೊಸ ವರ್ಷಕ್ಕೆ ಶಾರುಖ್ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ಕೂಡ ಸಿಗಲಿದೆ. ಚಿತ್ರ ತಂಡದ ಶ್ರಮ ಕೂಡ ಹೆಚ್ಚಾಗಿದ್ದು ‘ಡಂಕಿ’ ಸಿನಿಮಾ ತೆರೆಗೆ ತರಲು ಬೇಕಾದ ತಯಾರಿ ನಡೆಸಿದ್ದಾರೆ.ಶಾರುಖ್ ಖಾನ್ ಕಾನೂನು ಬಾಹಿರವಾಗಿ ಯಾವುದೇ ಗಡಿ ಪ್ರವೇಶ ಮಾಡುವುದಕ್ಕೆ ಡಂಕಿ ಎಂದು ಕರೆಯಲಾಗುತ್ತದೆ. ಅದನ್ನು ಡಂಕಿ ಎಂದೇ ಉಚ್ಛರಿಸಲಾಗುತ್ತದೆ. ಆದರೆ ಫಂಕಿ, ಹಂಕಿ, ಅಥವಾ ಮಂಕಿ ಎಂದು ಸಹ ಕೆಲವರು ಉಚ್ಚರಿಸುತ್ತಾರೆ ಎಂದು ತಮಾಷೆಯಾಗಿ ಉತ್ತರಿಸಿದ್ದಾರೆ. ‘ಡಂಕಿ’ ಸಿನಿಮಾ ಡಿಸೆಂಬರ್ 22ರಂದು ಬಿಡುಗಡೆ ಆಗಲಿದೆ
ದೇಶ
25 ವರ್ಷದ ಸ್ನೇಹಕ್ಕೆ ಮದುವೆಯ ಮುದ್ರೆ? ಗೌರಿ ಜೊತೆ ಅಮೀರ್ ಹೊಸ ಜೀವನ ಆರಂಭ!
ಮುಂಬೈ: ಬಾಲಿವುಡ್ನ ‘ಮಿಸ್ಟರ್ ಪರ್ಫೆಕ್ಷನಿಸ್ಟ್’ ಎಂದೇ ಖ್ಯಾತರಾಗಿರುವ Aamir Khan ಅವರ ವೈಯಕ್ತಿಕ ಜೀವನ ಮತ್ತೆ ಸುದ್ದಿಯಲ್ಲಿದೆ. ಹಲವು ಮಾಧ್ಯಮ ವರದಿಗಳ ಪ್ರಕಾರ, ಅಮೀರ್ ಖಾನ್ ತಮ್ಮ ಗೆಳತಿ Gauri Spratt ಅವರನ್ನು ಇದೇ ವರ್ಷದ ಜುಲೈನಲ್ಲಿ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ವರದಿಗಳು ನಿಜವಾದರೆ, ಇದು ಅಮೀರ್ ಖಾನ್ ಅವರ ಮೂರನೇ ವಿವಾಹವಾಗಲಿದೆ.
ವರದಿಗಳ ಪ್ರಕಾರ, ಜುಲೈ 5ರಂದು ಅಮೀರ್ ಮತ್ತು ಗೌರಿ ಆತ್ಮೀಯ ವಾತಾವರಣದಲ್ಲಿ ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ. ಅದ್ಧೂರಿ ಬಾಲಿವುಡ್ ಮದುವೆಯ ಬದಲು, ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಸರಳವಾಗಿ ರಿಜಿಸ್ಟರ್ ಮ್ಯಾರೇಜ್ ನಡೆಸಲು ಜೋಡಿ ನಿರ್ಧರಿಸಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ಅಮೀರ್ ಮತ್ತು ಗೌರಿ ಕಳೆದ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಕುಟುಂಬದಂತೆ ಒಟ್ಟಿಗೆ ಜೀವನ ನಡೆಸುತ್ತಿದ್ದು, ತಮ್ಮ ಸಂಬಂಧಕ್ಕೆ ಅಧಿಕೃತ ಮುದ್ರೆ ಒತ್ತಲು ಸಜ್ಜಾಗಿದ್ದಾರೆ. ಎರಡೂ ಕುಟುಂಬಗಳ ಆಶೀರ್ವಾದದೊಂದಿಗೆ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಗಮನಾರ್ಹವಾಗಿ, 2025ರಲ್ಲಿ ತಮ್ಮ 60ನೇ ಜನ್ಮದಿನದ ಸಂದರ್ಭದಲ್ಲಿ ಅಮೀರ್ ಖಾನ್ ಮೊದಲ ಬಾರಿಗೆ ಗೌರಿ ಸ್ಪ್ರಾಟ್ ಅವರನ್ನು ಸಾರ್ವಜನಿಕವಾಗಿ ಪರಿಚಯಿಸಿದ್ದರು. ಸುಮಾರು 25 ವರ್ಷಗಳಿಂದ ಪರಸ್ಪರ ಪರಿಚಯವಿದ್ದರೂ, ಪ್ರೇಮ ಸಂಬಂಧ ಇತ್ತೀಚೆಗೆ ಆರಂಭವಾಗಿದೆ ಎಂದು ಅವರು ತಿಳಿಸಿದ್ದರು. ನಂತರದ ಹಲವು ಸಂದರ್ಶನಗಳಲ್ಲಿ ಗೌರಿ ತಮ್ಮ ಜೀವನದಲ್ಲಿ ಸಂತೋಷ ಮತ್ತು ನೆಮ್ಮದಿ ತಂದ ವ್ಯಕ್ತಿ ಎಂದು ಅಮೀರ್ ಹೇಳಿಕೊಂಡಿದ್ದರು.
ಅಮೀರ್ ಖಾನ್ ಈ ಹಿಂದೆ Reena Dutta ಅವರನ್ನು ವಿವಾಹವಾಗಿದ್ದು, 2002ರಲ್ಲಿ ಇಬ್ಬರೂ ಬೇರ್ಪಟ್ಟಿದ್ದರು. ಬಳಿಕ 2005ರಲ್ಲಿ Kiran Rao ಅವರನ್ನು ವಿವಾಹವಾಗಿದ್ದು, 2021ರಲ್ಲಿ ವಿಚ್ಛೇದನ ಘೋಷಿಸಿದ್ದರು. ಆದರೂ ತಮ್ಮ ಮಾಜಿ ಪತ್ನಿಯರೊಂದಿಗೆ ಉತ್ತಮ ಬಾಂಧವ್ಯ ಉಳಿಸಿಕೊಂಡಿದ್ದಾರೆ.
ಆದರೆ, ಜುಲೈ 5ರ ವಿವಾಹದ ಕುರಿತು ಅಮೀರ್ ಖಾನ್ ಅಥವಾ ಗೌರಿ ಸ್ಪ್ರಾಟ್ ಇನ್ನೂ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ಅಭಿಮಾನಿಗಳು ಅಧಿಕೃತ ದೃಢೀಕರಣಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.
ದೇಶ
“ನೀವು ನಮ್ಮೆಲ್ಲರ ಸ್ಫೂರ್ತಿ”: ತಾತನ ಬಗ್ಗೆ ಜೂನಿಯರ್ ಎನ್ಟಿಆರ್ ಭಾವನಾತ್ಮಕ ಪೋಸ್ಟ್
ಆಂಧ್ರಪ್ರದೇಶ: ತೆಲುಗು ಸಿನಿಮಾರಂಗದ ಮೇರು ನಟ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ನಂದಮೂರಿ ತಾರಕ ರಾಮರಾವ್ (ಎನ್ಟಿಆರ್) ಅವರ 103ನೇ ಜಯಂತಿ ಅಂಗವಾಗಿ ಹೈದರಾಬಾದ್ನ ಎನ್ಟಿಆರ್ ಘಾಟ್ನಲ್ಲಿ ಭಾವುಕ ಕ್ಷಣಗಳು ಕಂಡುಬಂದವು. ಮೊಮ್ಮಗ ಹಾಗೂ ಖ್ಯಾತ ನಟ ಜೂನಿಯರ್ ಎನ್ಟಿಆರ್ ತಮ್ಮ ಅಜ್ಜನ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು.
ಭದ್ರತಾ ಸಿಬ್ಬಂದಿಯೊಂದಿಗೆ ಎನ್ಟಿಆರ್ ಘಾಟ್ಗೆ ಆಗಮಿಸಿದ ಜೂನಿಯರ್ ಎನ್ಟಿಆರ್, ಅಜ್ಜನ ಸಮಾಧಿ ಎದುರು ಕೆಲಕಾಲ ಮೌನವಾಗಿ ನಿಂತು ಭಾವುಕರಾದರು. ಬಳಿಕ ಹೂವಿನ ನಮನ ಸಲ್ಲಿಸಿ ಗೌರವ ವ್ಯಕ್ತಪಡಿಸಿದರು. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದೇ ವೇಳೆ ತಮ್ಮ ಎಕ್ಸ್ ಖಾತೆಯಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಜೂನಿಯರ್ ಎನ್ಟಿಆರ್, “ತೆಲುಗು ಚಿತ್ರರಂಗ ಮತ್ತು ಆಂಧ್ರಪ್ರದೇಶದ ಮೇಲೆ ಎನ್ಟಿಆರ್ ಅವರ ಪ್ರಭಾವ ಹಾಗೂ ಪ್ರೇರಣೆ ಅನನ್ಯವಾಗಿದೆ. ಚಿತ್ರರಂಗದಲ್ಲಿ ಅವರನ್ನು ದಂತಕಥೆಯಂತೆ ಕಾಣಲಾಗುತ್ತದೆ. ಇದಕ್ಕಾಗಿ ನಾನು ಸದಾ ಕೃತಜ್ಞ” ಎಂದು ಬರೆದುಕೊಂಡಿದ್ದಾರೆ.
ಸಿನಿಮಾ ಮಾತ್ರವಲ್ಲದೆ, ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಜನಪರ ಯೋಜನೆಗಳು ಹಾಗೂ ಬಡವರ ಕಲ್ಯಾಣಕ್ಕಾಗಿ ಮಾಡಿದ ಸೇವೆಗಳನ್ನು ಜನ ಇಂದಿಗೂ ನೆನಪಿಸಿಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿದ ಎನ್ಟಿಆರ್ ಆದರ್ಶಗಳು ಇಂದಿನ ಪೀಳಿಗೆಗೆ ಮಾದರಿಯಾಗಿದೆ ಎಂದು ಜೂನಿಯರ್ ಎನ್ಟಿಆರ್ ಅಭಿಪ್ರಾಯಪಟ್ಟಿದ್ದಾರೆ.
ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಕೂಡ ಎನ್ಟಿಆರ್ ಅವರನ್ನು ನೆನೆದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ. “ಸಿನಿಮಾ ಮತ್ತು ರಾಜಕೀಯದಲ್ಲಿ ಅಚ್ಚಳಿಯದ ಗುರುತು ಮೂಡಿಸಿದ ಎನ್ಟಿಆರ್ ಅವರ ಜೀವನ ಮತ್ತು ಆದರ್ಶಗಳು ಸ್ಫೂರ್ತಿಯ ಮೂಲ” ಎಂದು ಮೋದಿ ಬರೆದುಕೊಂಡಿದ್ದಾರೆ.
ಚಂದ್ರಬಾಬು ನಾಯ್ಡು ನೇತೃತ್ವದ ಎನ್ಡಿಎ ಸರ್ಕಾರ ಆಂಧ್ರಪ್ರದೇಶದ ಜನರ ಕನಸುಗಳನ್ನು ಸಾಕಾರಗೊಳಿಸಲು ಬದ್ಧವಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.
ದೇಶ
ತಮಿಳು ಚಿತ್ರರಂಗಕ್ಕೆ ಸಿಎಂ ವಿಜಯ್ ಬಂಪರ್ ಗಿಫ್ಟ್: ದಿನಕ್ಕೆ 5 ಶೋಗಳಿಗೆ ಗ್ರೀನ್ ಸಿಗ್ನಲ್!
ಚೆನ್ನೈ: Vijay ನೇತೃತ್ವದ ತಮಿಳುನಾಡು ಸರ್ಕಾರ ಚಿತ್ರೋದ್ಯಮಕ್ಕೆ ಮಹತ್ವದ ಸಿಹಿಸುದ್ದಿ ನೀಡಿದೆ. ಹೊಸ ಸಿನಿಮಾ ಬಿಡುಗಡೆಯಾದ ಮೊದಲ ಒಂದು ವಾರದವರೆಗೆ ದಿನಕ್ಕೆ 5 ಪ್ರದರ್ಶನಗಳನ್ನು ನಡೆಸಲು ಸರ್ಕಾರ ಅಧಿಕೃತ ಅನುಮತಿ ನೀಡಿದ್ದು, ನಿರ್ಮಾಪಕರು ಹಾಗೂ ಚಿತ್ರಮಂದಿರ ಮಾಲೀಕರಲ್ಲಿ ಸಂತಸ ಮೂಡಿಸಿದೆ.
ಚಿತ್ರರಂಗದ ಪ್ರತಿನಿಧಿಗಳು, ಚಲನಚಿತ್ರ ಮಂಡಳಿಯ ಪದಾಧಿಕಾರಿಗಳು ಹಾಗೂ ಚಿತ್ರೋದ್ಯಮದ ಪ್ರಮುಖರು ಮೇ 16ರಂದು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿ ಮಾಡಿ ಹಲವು ಬೇಡಿಕೆಗಳನ್ನೊಳಗೊಂಡ ಮನವಿ ಪತ್ರ ಸಲ್ಲಿಸಿದ್ದರು. ಚಿತ್ರಮಂದಿರಗಳ ಆರ್ಥಿಕ ಚೇತರಿಕೆ ಮತ್ತು ಪ್ರೇಕ್ಷಕರ ಅನುಕೂಲಕ್ಕಾಗಿ ದಿನಕ್ಕೆ ಐದು ಶೋಗಳಿಗೆ ಅವಕಾಶ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿತ್ತು.
ಈ ಮನವಿಯನ್ನು ಪರಿಗಣಿಸಿದ ಸರ್ಕಾರ, ಚಿತ್ರೋದ್ಯಮದ ಹಿತದೃಷ್ಟಿಯಿಂದ ಹೊಸ ಆದೇಶ ಹೊರಡಿಸಿದೆ. ಈ ಕುರಿತು Tamil Nadu Chief Minister’s Office ತನ್ನ ಅಧಿಕೃತ ‘ಎಕ್ಸ್’ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿದೆ.
ಈ ಮೊದಲು ಜಾರಿಯಲ್ಲಿದ್ದ ಚಿತ್ರಮಂದಿರಗಳ ನಿಯಮ 14-ಎ ಪ್ರಕಾರ, ತಮಿಳುನಾಡಿನಲ್ಲಿ ದಿನಕ್ಕೆ ಕೇವಲ ನಾಲ್ಕು ಪ್ರದರ್ಶನಗಳಿಗೆ ಮಾತ್ರ ಅವಕಾಶವಿತ್ತು. ಹಬ್ಬ-ಹರಿದಿನಗಳು ಅಥವಾ ಸಾರ್ವಜನಿಕ ರಜಾದಿನಗಳಲ್ಲಿ ಮಾತ್ರ ವಿಶೇಷ ಅನುಮತಿ ಪಡೆದು ಐದನೇ ಪ್ರದರ್ಶನ ನಡೆಸಲಾಗುತ್ತಿತ್ತು.
ಆದರೆ ಹೊಸ ನಿಯಮದಂತೆ, ಯಾವುದೇ ಹೊಸ ಸಿನಿಮಾ ಬಿಡುಗಡೆಯಾದ ಬಳಿಕ ಮೊದಲ ಏಳು ದಿನಗಳವರೆಗೆ ಪ್ರತಿದಿನ ಐದು ಪ್ರದರ್ಶನಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಕ್ರಮದಿಂದ ಹೊಸ ಸಿನಿಮಾಗಳಿಗೆ ಹೆಚ್ಚಿನ ಆದಾಯ ಸಾಧ್ಯವಾಗಲಿದ್ದು, ಚಿತ್ರಮಂದಿರಗಳ ವ್ಯವಹಾರಕ್ಕೂ ಉತ್ತೇಜನ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.
ತಮಿಳು ಚಿತ್ರರಂಗದ ನಿರ್ಮಾಪಕರು, ವಿತರಕರು ಮತ್ತು ಥಿಯೇಟರ್ ಮಾಲೀಕರು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದು, ಇದು ಚಿತ್ರೋದ್ಯಮಕ್ಕೆ “ಬೂಸ್ಟರ್ ಡೋಸ್” ಆಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
