Connect with us

ರಾಜಕೀಯ

‘ಕೈ’ ಕೊಟ್ಟು ‘ಕಮಲ’ ಹಿಡಿದ ಜಗದೀಶ್ ಶೆಟ್ಟರ್: ಸಿಎಂ, ಡಿಸಿಎಂ ಪ್ರತಿಕ್ರಿಯೆ ಹೀಗಿದೆ

Published

on

'ಕೈ' ಕೊಟ್ಟು 'ಕಮಲ' ಹಿಡಿದ ಜಗದೀಶ್ ಶೆಟ್ಟರ್: ಸಿಎಂ, ಡಿಸಿಎಂ ಪ್ರತಿಕ್ರಿಯೆ ಹೀಗಿದೆ
'ಕೈ' ಕೊಟ್ಟು 'ಕಮಲ' ಹಿಡಿದ ಜಗದೀಶ್ ಶೆಟ್ಟರ್: ಸಿಎಂ, ಡಿಸಿಎಂ ಪ್ರತಿಕ್ರಿಯೆ ಹೀಗಿದೆ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಗೆ ಹೋಗಿ ಈಗ ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅಂದರೆ ಮತ್ತೆ ತಮ್ಮ ಮಾತೃ ಪಕ್ಷಕ್ಕೆ ವಾಪಸ್ಸಾಗಿದ್ದಾರೆ.

ದಿಢೀರ್ ಬೆಳವಣಿಗೆಯಲ್ಲಿ ಅವರು ಮಾಜಿ ಸಿಎಂ ಯಡಿಯೂರಪ್ಪ, ಬಿ ವೈ ವಿಜಯೇಂದ್ರ ಅವರ ಜೊತೆಗೆ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಅವರ ಸೇರ್ಪಡೆಗೆ ಅಮಿತ್ ಶಾ ಅವರಿಂದ ಸಂಪೂರ್ಣ ಒಪ್ಪಿಗೆ ಸಿಕ್ಕಿದೆ. 

ಈ ಬಗ್ಗೆ ಮಡಿಕೇರಿ ಪ್ರಸಾದಲ್ಲಿರುವ ಸಿಎಂ ಸಿದ್ದರಾಮಯ್ಯ, ವಿರಾಜಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿ, ಶೆಟ್ಟರ್ ಅವರಿಗೆ ಕಾಂಗ್ರೆಸ್‌ನಿಂದ ಯಾವುದೇ ಅನ್ಯಾಯ ಆಗಿಲ್ಲ. ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ ವಿಚಾರವೂ ಗೊತ್ತಿಲ್ಲ, ನನಗೆ ಈ ಬೆಳವಣಿಗೆ ಬಗ್ಗೆ ಮಾಹಿತಿ ಇಲ್ಲ ಎಂದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡದೆ ಬಿಜೆಪಿ ವಂಚಿಸಿದೆ ಎಂದು ಹೇಳಿ ಅವರು ಕಾಂಗ್ರೆಸ್ ಗೆ ಬಂದರು. ಪಕ್ಷವು ಅವರಿಗೆ ಟಿಕೆಟ್ ನೀಡಿತು. ಸ್ವಕ್ಷೇತ್ರದಲ್ಲಿಯೇ ಸೋತರು. ಆದರೂ ಅವರಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ನೀಡಲಾಯಿತು. 

ಇತ್ತೀಚೆಗೆ ನಾನು ಅವರನ್ನು ಭೇಟಿ ಮಾಡಿದ್ದ ವೇಳೆ ಶೆಟ್ಟರ್, ಬಿಜೆಪಿ ನನಗೆ ಅನ್ಯಾಯ ಮಾಡಿದೆ. ವಾಪಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದಿದ್ದರು ಎಂದು ಸಿದ್ದರಾಮಯ್ಯ ಹೇಳಿದರು

ನಿಗಮ‌ ಮಂಡಳಿ‌ ನೇಮಕ ವಿಚಾರ ಸಂಬಂಧ ಮಾತನಾಡಿದ ಸಿಎಂ, ನಾವೇನು ಗುಲಾಮರಾ ಎಂಬ ಸಚಿವ ಕೆ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಒಬ್ಬೊಬ್ಬರು ಒಂದೊಂದು ಹೆಸರನ್ನ ಸಜೆಸ್ಟ್ ಮಾಡ್ತಾರೆ. ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ ಎಂದರು.

ಇನ್ನು ಈ ಬೆಳವಣಿಗೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ತೀಕ್ಷ್ಣವಾಗಿ ಶೆಟ್ಟರ್ ಅವರಿಗೆ ತಿರುಗೇಟು ನೀಡುವ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.ನಿನ್ನೆ ನಾನು ಕರೆ ಮಾತಾಡಿದಾಗ ನಾನು ಬಿಜೆಪಿಗೆ ಹೋಗಲ್ಲ ಎಂದಿದ್ದರು. ನಾವು ಸೀನಿಯರ್​ ಲೀಡರ್​ ಎಂದು ಸ್ಥಾನಮಾನ ಕೊಟ್ಟಿದ್ವಿ. ಈಗ ನಾನು ಫ್ಯಾಕ್ಸ್​​ನಲ್ಲಿ ರಾಜೀನಾಮೆ ಕೊಟ್ತೇನೆ ಅಂದಿದ್ದಾರೆ. ಒತ್ತಡದಲ್ಲಿ ಕರೆದುಕೊಂಡು ಹೋಗಿದ್ದಾರೋ, ಅವರಾಗಿಯೇ ಹೋಗಿದ್ದಾರೋ ಏನೋ ಗೊತ್ತಿಲ್ಲ. ಟಿಕೆಟ್​ ತಪ್ಪಿಸಿದಾಗ ಶೆಟ್ಟರ್​ಗೆ ದೇಶದ ಹಿತ ಗೊತ್ತಿರಲಿಲ್ವಾ? ನಾವು ಅವರನ್ನು ಬಹಳ ಗೌರವದಿಂದ ನಡೆಸಿಕೊಂಡಿದ್ದೇವೆ. ನನಗೆ ಈವರೆಗೂ ರಾಜೀನಾಮೆ ಪತ್ರ ತಲುಪಿಲ್ಲ. ಶೆಟ್ಟರ್ ಅವರು ಮಾತಾಡಲಿ, ಈಗ ನಾನು ಏನೂ ಹೇಳಲ್ಲ, ಮುಂದಿನ ದಿನಗಳಲ್ಲಿ ನಾನು ಮಾತಾಡ್ತೇನೆ ಎಂದರು.

 ತುಮಕೂರಿನಲ್ಲಿ ಸಹಕಾರ ಸಚಿವ ಕೆ.ಎನ್​.ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ.  ಜಗದೀಶ್ ಶೆಟ್ಟರ್ ಬಿಜೆಪಿ ಸೇರಿದ ವಿಚಾರ ಈಗ ತಿಳಿಯಿತು. ನನಗೆ ನ್ಯೂಟನ್​ ನೆನಪಾದ. ಅವರನ್ನು ಅವಮಾನ ಮಾಡಿ ಹೊರಹಾಕಿದ್ದರು. ಈಗ ಮತ್ತೆ ಅವರೇ ಸೇರ್ಪಡೆ ಮಾಡಿಕೊಂಡಿದ್ದಾರೆ. ಅಲ್ಲಿ ಇರುತ್ತಾರೆ ಅನ್ನೋದು ಯಾವ ಗ್ಯಾರಂಟಿ. ಯಾವುದೇ ತತ್ವ ಸಿದ್ದಾಂತ ಪಾಲನೆ ಮಾಡದೇ ಸ್ವಾರ್ಥಕ್ಕೋಸ್ಕರ ಪಕ್ಷ ಬದಲಾವಣೆ ಮಾಡಿದ್ದಾರೆ. ಯಾವುದೇ ತತ್ವ ಸಿದ್ದಾಂತದ ಗೋಜಿಗೆ ಹೋಗದೇ ವೈಯಕ್ತಿಕಗಾಗಿ ಪಕ್ಷಾಂತರ ಮಾಡುವುದು ಒಪ್ಪುವ ಕ್ರಮವಲ್ಲ. ಕಾಂಗ್ರೆಸ್ ನಿಂದ ಅವರಿಗೆ ಗೌರವ ಸಿಕ್ಕಿತ್ತು.

ಯಾವುದೋ ಒತ್ತಡದಿಂದ ಹೀಗೆ ಆಗಿರಬಹುದೆನೋ ಗೊತ್ತಿಲ್ಲ. ಅವರು ಬಿಜೆಪಿ ಸೇರ್ಪಡೆಯಿಂದ ಅವರ ಗೌರವ ಕಡಿಮೆ ಆಗಿದೆ ಎನ್ನೋದು ನನ್ನ ಅಭಿಪ್ರಾಯ. ಹೀಗೆ ಯಾರೇ ಮಾಡಿದ್ರೂ ಜನರು ಒಪ್ಪುವುದಿಲ್ಲ. ಲೋಕಸಭಾ ಚುನಾವಣೆ ಸಮೀಪ ಇರುವ ಕಾರಣ ಹೋಗೊದು ಬರೋದು ಇದ್ದೆ ಇರುತ್ತದೆ. ಇವರು ಹೋದರೆ ಬೇರೆಯವರು ಬರುತ್ತಾರೆ ಎಂದರು.

ದೇಶ

ಜಮೀರ್ ಅಹ್ಮದ್‌ಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ!

Published

on

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನಪ್ರಿಯ ನಾಯಕನಾಗಿ ಹೊರಹೊಮ್ಮುತ್ತಿರುವ ವಸತಿ ಸಚಿವ Zameer Ahmed Khan ಅವರಿಗೆ ಎಐಸಿಸಿಯಲ್ಲಿ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಅವರ ಪ್ರಭಾವವನ್ನು ಗಮನಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ K. C. Venugopal ಈ ನಿರ್ಧಾರ ಕೈಗೊಂಡಿದ್ದಾರೆ.

ಪ್ರಸ್ತುತ ಕೇರಳ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಜಮೀರ್ ಅಹ್ಮದ್, ರಾಜ್ಯದ ಉಪಚುನಾವಣೆಗಳ ಪ್ರಚಾರಕ್ಕೆ ಬರಲು ಸಾಧ್ಯವಾಗದೇ ಬ್ಯುಸಿಯಾಗಿದ್ದಾರೆ. ಕೇರಳದ ಹಲವು ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳು ನಿರ್ಣಾಯಕವಾಗಿರುವ ಹಿನ್ನೆಲೆಯಲ್ಲಿ, ಅವರನ್ನು ಅಲ್ಲಿಯೇ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಭಾಗವಹಿಸಲು ಜಮೀರ್ ಅವರಿಗೆ ಆಹ್ವಾನ ನೀಡಲಾಗಿದ್ದರೂ, ಕೇರಳದ ಪ್ರಚಾರ ಕಾರ್ಯದಿಂದ ಬಿಡುವಿಲ್ಲ ಎಂಬುದಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ Siddaramaiah ಸೂಚನೆ ಇದ್ದರೂ, ಎಐಸಿಸಿ ನಾಯಕತ್ವದಿಂದಲೇ ತಡೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದಕ್ಕೂ ನಡುವೆ, ಎಐಸಿಸಿ ಅಲ್ಪಸಂಖ್ಯಾತ ಘಟಕದ ಸಲಹಾ ಪರಿಷತ್ತಿನ ಸದಸ್ಯರಾಗಿ ಜಮೀರ್ ಅಹ್ಮದ್ ಅವರನ್ನು ನೇಮಿಸಲಾಗಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆಲುವಿಗೆ ಕೇರಳದಲ್ಲಿ ಹೆಚ್ಚಿನ ಮಹತ್ವ ನೀಡಲಾಗುತ್ತಿದ್ದು, ಭವಿಷ್ಯದಲ್ಲಿ ನಾಯಕತ್ವದ ಮಟ್ಟದಲ್ಲೂ ಬದಲಾವಣೆ ಸಾಧ್ಯತೆಗಳಿವೆ ಎಂಬ ಚರ್ಚೆ ನಡೆಯುತ್ತಿದೆ.

ಅಲ್ಪಸಂಖ್ಯಾತ ಸಮುದಾಯದ ನಾಯಕರನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವ ಉದ್ದೇಶದಿಂದ ಈ ನೇಮಕಾತಿ ನಡೆದಿದ್ದು, ಜಮೀರ್ ಅವರ ಜನಪ್ರಿಯತೆ ದಿನೇದಿನೇ ಏರುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ. ರಾಜ್ಯದಲ್ಲೂ ಉಪಚುನಾವಣೆಗಳ ನಡುವೆ ಅವರ ಗೈರುಹಾಜರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.

Continue Reading

ದೇಶ

ಸೋಮಣ್ಣ ವಿರುದ್ಧ ಸಿಎಂ ಸಿಡಿತ: “ಕೆಲಸವಿಲ್ಲದ ಮಂತ್ರಿ!”

Published

on

By

ಬಾಗಲಕೋಟೆ: ಬಿಜೆಪಿ ನಾಯಕ V. Somanna ವಿರುದ್ಧ ಮುಖ್ಯಮಂತ್ರಿ Siddaramaiah ತೀವ್ರ ವಾಗ್ದಾಳಿ ನಡೆಸಿದ್ದು, “ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದ ಮಂತ್ರಿ, ಅವರಿಗೆ ಯಾವುದೇ ಕಡತ ಹೋಗುವುದಿಲ್ಲ” ಎಂದು ಟೀಕಿಸಿದರು.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಸಿಎಂ, “ನಾವು ಸೋಲುತ್ತೇವೆ ಎಂಬ ಭಯದಿಂದ ಬಿಜೆಪಿ ನಾಯಕರು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸೋಮಣ್ಣ ಅವರಿಗೆ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಸಮಯವಿಲ್ಲ” ಎಂದು ಕಿಡಿಕಾರಿದರು. ಮುಖ್ಯಮಂತ್ರಿಗಳ ಸ್ಥಾನ ಕುರಿತು ಬಿಜೆಪಿ ನಾಯಕರು ಮಾತನಾಡುವುದಕ್ಕೆ ಯಾವುದೇ ಅರ್ಥವಿಲ್ಲ, ಅವರು ಕಾಂಗ್ರೆಸ್ ಹೈಕಮಾಂಡ್ ಅಲ್ಲ ಎಂದರು.

ಬಿಜೆಪಿಯ ಮೇಲೆ ವಾಗ್ದಾಳಿ ಮುಂದುವರೆಸಿದ ಸಿದ್ದರಾಮಯ್ಯ, “ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಮಾತಿನಲ್ಲಿ ಸತ್ಯವಿಲ್ಲ, ನಡೆದಲ್ಲಿ ನಂಬಿಕೆ ಇಲ್ಲ” ಎಂದು ಟೀಕಿಸಿದರು. ಜೊತೆಗೆ, ಪಕ್ಷದಿಂದ ಉಚ್ಛಾಟನೆಯಾದ Basanagouda Patil Yatnal ಅವರನ್ನು ಮತ್ತೆ ಪ್ರಚಾರಕ್ಕೆ ಕರೆತಂದು ಬಳಸಿಕೊಳ್ಳುತ್ತಿರುವುದು ಬಿಜೆಪಿ ದ್ವಂದ್ವ ನೀತಿಗೆ ಉದಾಹರಣೆ ಎಂದು ಹೇಳಿದರು.

ಇಂಧನ ಹಾಗೂ ಗ್ಯಾಸ್ ಸಿಲಿಂಡರ್ ಸಮಸ್ಯೆ ಕುರಿತು ಮಾತನಾಡಿದ ಅವರು, “ಇದು ಕೇಂದ್ರ ಸರ್ಕಾರದ ಜವಾಬ್ದಾರಿ. ರಾಜ್ಯ ಸರ್ಕಾರ ಕೇವಲ ವಿತರಣೆಯನ್ನು ಮಾಡುತ್ತದೆ” ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ Narendra Modi ಅವರ ಮನೆಗೆ ಮುತ್ತಿಗೆ ಹಾಕಬೇಕು ಎಂಬ ಹೇಳಿಕೆಯನ್ನೂ ನೀಡಿದರು.

ಇನ್ನೂ, ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ, Rahul Gandhi, Sonia Gandhi, Mallikarjun Kharge ಮತ್ತು Priyanka Gandhi ಅವರೇ ಪಕ್ಷದ ಹೈಕಮಾಂಡ್ ಎಂದು ಹೇಳಿದರು.

ಒಟ್ಟಿನಲ್ಲಿ, ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದೆ.

Continue Reading

ದೇಶ

ಟೂಲ್‌ಕಿಟ್ ದಾಳಿ ಆರೋಪ: ಖರ್ಗೆ ಎಕ್ಸ್ ವಿರುದ್ಧ ಗಂಭೀರ ಪ್ರಶ್ನೆ

Published

on

By

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ಪಕ್ಷದ ನಾಯಕರ ಖಾತೆಗಳ ವಿರುದ್ಧ ಟೂಲ್‌ಕಿಟ್ ಮೂಲಕ ಸಂಘಟಿತವಾಗಿ ರಿಪೋರ್ಟ್ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಸಚಿವ Priyank Kharge ಮಾಡಿದ್ದಾರೆ. ಈ ಕುರಿತು ಅವರು X (ಹಳೆಯ ಟ್ವಿಟ್ಟರ್) ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

“ನನ್ನನ್ನೂ ಒಳಗೊಂಡಂತೆ ಅನೇಕ ವಿರೋಧ ಪಕ್ಷದ ನಾಯಕರ ಖಾತೆಗಳು ಈ ಸಮಸ್ಯೆಯನ್ನು ಎದುರಿಸುತ್ತಿವೆ. ಟೂಲ್‌ಕಿಟ್ ಮೂಲಕ ಪೋಸ್ಟ್‌ಗಳ ಮೇಲೆ ಸಾಮೂಹಿಕವಾಗಿ ರಿಪೋರ್ಟ್ ಮಾಡುವುದರಿಂದ ಅವುಗಳ ರೀಚ್ ಕಡಿಮೆಯಾಗುತ್ತಿದೆ. ಫೀಡ್‌ಗಳಲ್ಲಿ ಗೋಚರತೆ ಕುಸಿಯುತ್ತಿದೆ” ಎಂದು ಖರ್ಗೆ ಆರೋಪಿಸಿದ್ದಾರೆ. ಜೊತೆಗೆ, ಎಕ್ಸ್ ಪ್ಲಾಟ್‌ಫಾರ್ಮ್ ಸ್ವಯಂ ಅಥವಾ ಹೊರಗಿನ ಒತ್ತಡದಿಂದ ಈ ರೀತಿಯ ನಿರ್ಬಂಧಗಳನ್ನು ಹೇರಲಾಗುತ್ತಿದೆ ಎಂಬ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ.

ಈ ಆರೋಪಕ್ಕೆ ಪೂರಕವಾಗಿ ಕಾಂಗ್ರೆಸ್ ನಾಯಕ Shashi Tharoor ಕೂಡ ತಮ್ಮ ಅನುಭವ ಹಂಚಿಕೊಂಡಿದ್ದಾರೆ. “ಸುಮಾರು ಆರು ವರ್ಷಗಳ ಹಿಂದೆ ನನ್ನ ಫಾಲೋವರ್ಸ್ ಸಂಖ್ಯೆ 8.4 ಮಿಲಿಯನ್ ತಲುಪಿತ್ತು. ಪ್ರತಿದಿನ ಸಾವಿರಕ್ಕೂ ಹೆಚ್ಚು ಹೊಸ ಫಾಲೋವರ್ಸ್ ಸೇರುತ್ತಿದ್ದರೂ, ಒಟ್ಟು ಸಂಖ್ಯೆ ಕುಸಿಯುತ್ತಿತ್ತು” ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ, ಟ್ವೀಟ್‌ಗಳು ತಮ್ಮ ಫಾಲೋವರ್ಸ್‌ಗಳಿಗೆ ತಲುಪುತ್ತಿಲ್ಲ, ಹೊಸ ಖಾತೆ ತೆರೆದರೂ ರಿಕಮೆಂಡ್ ಆಗುವುದಿಲ್ಲ ಎಂಬ ಗಂಭೀರ ತಾಂತ್ರಿಕ ಸಮಸ್ಯೆಗಳನ್ನೂ ತರೂರ್ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಕಂಪನಿಗೆ ಮಾಹಿತಿ ನೀಡಿದರೂ ಸಮರ್ಪಕ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಆರೋಪಗಳು ಸಾಮಾಜಿಕ ಜಾಲತಾಣಗಳ ನಿಷ್ಪಕ್ಷಪಾತತೆ ಕುರಿತು ದೊಡ್ಡ ಪ್ರಶ್ನೆಗಳನ್ನು ಎಬ್ಬಿಸಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ. ನೆಟ್ಟಿಗರೂ ಈ ವಿಷಯದ ಕುರಿತು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದು, ವಿಪಕ್ಷಗಳು ತಕ್ಕ ಪ್ರತಿಕ್ರಿಯೆ ನೀಡಬೇಕೆಂದು ಆಗ್ರಹಿಸಿದ್ದಾರೆ.

Continue Reading

Trending