ಬಿಬಿಎಂಪಿ
ಬೆಂಗಳೂರಿನಲ್ಲಿ ಫುಟ್ಪಾತ್ಗಳ ಒತ್ತುವರಿ ತೆರವು ವಿಚಾರ: ಕ್ರಮ ಕೈಗೊಳ್ಳದ ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ನಗರದಲ್ಲಿ ಫುಟ್ಪಾತ್ಗಳ ಒತ್ತುವರಿ ತೆರವು ವಿಚಾರವಾಗಿ ಕ್ರಮ ಕೈಗೊಳ್ಳದ ಬಿಬಿಎಂಪಿ ಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಬಿಬಿಎಂಪಿ ಜನಗಳಿಂದ ತೆರಿಗೆ ಸಂಗ್ರಹಿಸುತ್ತದೆ. ಸರಿಯಾದ ರಸ್ತೆ, ಫುಟ್ಪಾತ್ ನಿರ್ಮಿಸಲು ತೆರಿಗೆ ನೀಡುತ್ತೇವೆ. ಆದರೆ ರಸ್ತೆ, ಫುಟ್ಪಾತ್ ಸುಧಾರಿಸಲು ಬಿಬಿಎಂಪಿ ಮುಂದಾಗುತ್ತಿಲ್ಲ. ಒತ್ತುವರಿ ತೆರವಿಗೆ ಸ್ವಯಂಪ್ರೇರಿತ ಪಿಐಎಲ್ ದಾಖಲಿಸುತ್ತೇವೆ.
ಕೆಲವರು ಫುಟ್ಪಾತ್ಗಳನ್ನು ಕಾರು ಪಾರ್ಕಿಂಗ್ಗಾಗಿ ಬಳಸುತ್ತಿದ್ದಾರೆ. ಎಲ್ಲಾ ಫುಟ್ಪಾತ್ಗಳ ಒತ್ತುವರಿಗಳನ್ನು ತೆರವುಗೊಳಿಸಬೇಕು. ಹೈಕೋರ್ಟ್ನ ಹಂಗಾಮಿ ಸಿಜೆ ಪಿ.ಎಸ್.ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡರಿದ್ದ ಪೀಠದಿಂದ ಸೂಚನೆ ನೀಡಲಾಗಿದೆ. ಫೆ.1ರಂದು ಬಿಬಿಎಂಪಿ ಮುಖ್ಯ ಆಯುಕ್ತರ ಖುದ್ದು ಹಾಜರಿಗೆ ಆದೇಶ ನೀಡಲಾಗಿದೆ.
ಬಿಬಿಎಂಪಿ
ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ: ಜು.1ರಿಂದ ಹೊಸ ನಿಯಮ ಜಾರಿಗೆ..!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಸ್ವತ್ತುಗಳು ಇ-ಖಾತಾ ಪಡೆದಿರುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಆದೇಶಿಸಿದೆ.
ಈ ಸಂಬಂಧ ಸೋಮವಾರ ಆದೇಶ ಹೊರಡಿಸಿರುವ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು, ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ ಇ-ಖಾತಾ ನೀಡಲಾಗುತ್ತಿದೆ. ಆದುದರಿಂದ ಸ್ವತ್ತುಗಳ ದತ್ತಾಂಶವು ಇ-ಆಸ್ತಿ ತಂತ್ರಾಂಶದಲ್ಲಿ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮತ್ತು ವಿತರಣೆ ವ್ಯವಸ್ಥೆ ಮಾಡಲಾಗಿದೆ. ಅದರ ಜತೆಗೆ ಸ್ವತ್ತುಗಳಿಗೆಇ-ಖಾತಾವನ್ನು ಆನ್ಲೈನ್ಮೂಲಕ ನೀಡಲಾಗುತ್ತಿದೆ. ಇದೀಗ ಎರಡೂ ತಂತ್ರಾಂಶವನ್ನು ಏಕೀಕರಣಗೊಳಿಸಲಾಗುತ್ತಿದೆ. ಹೀಗಾಗಿ ಕಟ್ಟಡನಕ್ಷೆ ಮಂಜೂರಾತಿಗೆ ಅರ್ಜಿಸಲ್ಲಿ ಸುವವರು ಮೊದಲು ಇ- ಖಾತಾವನ್ನು ಪಡೆದಿರಬೇಕಿದೆ.
ಹೀಗಾಗಿ ಜು. 1ರಿಂದ ನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸುವವರುಇ-ಖಾತಾ ಅಥವಾ ಇಪಿಐಡಿ ಸಂಖ್ಯೆಯನ್ನು ತಂತ್ರಾಂಶದಲ್ಲಿ ನಮೂದಿಸುವುದು ಹಾಗೂ ಇ- ಖಾತಾ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇ-ಖಾತಾ ಸಲ್ಲಿಸದ ಅರ್ಜಿಗಳನ್ನು ಕಟ್ಟಡ ನಕ್ಷೆ ಮಂಜೂರಾತಿಗೆ ಪರಿಗಣಿಸದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನು, ನಂಬಿಕೆಯೊಂದಿಗೆ ಪರಿಶೀಲನೆ ವ್ಯವಸ್ಥೆ ಅಡಿಯಲ್ಲಿ ನಿಗದಿತ ಕಾಲಮಿತಿಯಲ್ಲಿ ತಾತ್ಕಾಲಿಕ ನಕ್ಷೆ ಮಂಜೂರಾತಿ ಹೊಣೆಯನ್ನು ಸಂಬಂಧಪಟ್ಟ ಸಹಾಯಕ ನಿರ್ದೇಶಕ (ನಗರ ಯೋಜನೆ) ಅವರಿಗೆ ನೀಡಲಾಗಿದೆ. ಒಂದು ವೇಳೆ ಸಹಾಯಕ ನಿರ್ದೇಶಕ (ನಗರ ಯೋಜನೆ) ನಿಗದಿತ ಕಾಲ ಮಿತಿಯಲ್ಲಿ ಅರ್ಜಿಗಳನ್ನು ಪರಿಶೀಲಿಸದಿದ್ದರೆ ತಂತ್ರಾಶದಲ್ಲಿ ಅರ್ಜಿಗಳಿಗೆ ಸ್ವಯಂಚಾಲಿತವಾಗಿ ಡೀಮ್ಡ್ ಅನುಮೋದನೆ ದೊರೆಯಲಿದೆ.
ಒಂದು ವೇಳೆ ನಕ್ಷೆ ಮಂಜೂರಾತಿ ಅರ್ಜಿಗಳು ಇ-ಖಾತಾ ಸೇರಿದಂತೆ ಇನ್ನಿತರ ದಾಖಲೆಗಳನ್ನು ಸಲ್ಲಿಸದೇ ಡೀಮ್ ಅನುಮೋದನೆ ದೊರೆತರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಿ ನಿಯಮದ ಪ್ರಕಾರ ಶಿಸ್ತು ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.
5 ಲಕ್ಷ ನಾಗರಿಕರಿಗೆ ಅಂತಿಮ ಇ-ಖಾತಾ ವಿತರಣೆ
ಬಿಬಿಎಂಪಿ ಪಾಲಿಕೆ ವ್ಯಾಪ್ತಿಯಲ್ಲಿ ಈವರೆಗೂ 5 ಲಕ್ಷ ನಾಗರಿಕರು ಅಂತಿಮ ಇ-ಖಾತಾ ಪಡೆದಿದ್ದಾರೆ ಎಂದು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ.
25 ಲಕ್ಷಕ್ಕಿಂತ ಹೆಚ್ಚು ಕರಡು ಇ-ಖಾತಾಗಳು ಆನ್ಲೈನ್ನಲ್ಲಿ ಲಭ್ಯವಿದೆ. ನಾಗರಿಕರು ತಮ್ಮ ಆಧಾರ್ ಸಂಖ್ಯೆ, ಮಾರಾಟ ದಸ್ತಾವೇಜಿನ ಸಂಖ್ಯೆ, ಆಸ್ತಿಯ ತೆರಿಗೆ ಐ.ಡಿ, ಬೆಸ್ಕಾಂ ಸಂಖ್ಯೆ (ಖಾಲಿ ಜಾಗಕ್ಕೆ ಐಚ್ಛಿಕ) ಮತ್ತು ಆಸ್ತಿಯ ಫೋಟೋ ಹಾಕಬೇಕು. ಈ ಮಾಹಿತಿಗಳನ್ನು ನೀಡಿದ ನಂತರ ನಾಗರಿಕರಿಗೆ ಅಂತಿಮ ಇ-ಖಾತಾ ಕನಿಷ್ಠ 1 ರಿಂದ 2 ದಿನಗಳಲ್ಲಿ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.
ಪ್ರತಿದಿನ ಸುಮಾರು 3,000 ಜನರು ಈ ಪ್ರಕ್ರಿಯೆ ನಡೆಸುತ್ತಿದ್ದಾರೆ. ಮತ್ತು ಇಷ್ಟೇ ಸಂಖ್ಯೆಯವರಿಗೆ ಇ-ಖಾತಾ ಅನುಮೋದನೆ ದೊರೆಯುತ್ತಿದೆ. ಈವರೆಗೆ ಸುಮಾರು 5 ಲಕ್ಷ ನಾಗರಿಕರು ತಮ್ಮ ಇ-ಖಾತಾ ಪಡೆದುಕೊಂಡಿದ್ದಾರೆ. ಅರ್ಜಿ ಸಲ್ಲಿಕೆಯಾದ 1 ರಿಂದ 2 ದಿನಗಳಲ್ಲಿ ಇ-ಖಾತಾ ಅನುಮೋದಿತವಾಗಲಿದೆ. ನಾಗಕರಿರು ಇ-ಖಾತಾವನ್ನು ಆನ್ಲೈನ್ BBMPeAasthi.karnataka.gov.in ಮೂಲಕ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ
ಬಿಬಿಎಂಪಿ
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಆಡಳಿತದ ಹೊಣೆ ಹೊತ್ತಿದ್ದ ʻಬಿಬಿಎಂಪಿʼ (BBMP) ಹೆಸರು ಇತಿಹಾಸ ಪುಟ ಸೇರಲಿದ್ದು, ನಾಳೆಯಿಂದ (ಮೇ 15) ಗ್ರೇಟರ್ ಬೆಂಗಳೂರು ಆಡಳಿತ ಜಾರಿಯಾಗಲಿದೆ. ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯು ʻಗ್ರೇಟರ್ ಬೆಂಗಳೂರು ಪ್ರಾಧಿಕಾರʼ (Greater Bengaluru Authority) ಆಗಿ ಬದಲಾಗಲಿದೆ. ಈ ಕುರಿತು ರಾಜ್ಯ ಸರ್ಕಾರ ಇಂದು ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಇದರೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಲ್ಲಿ (Bengaluru Administrative Act) ಸುಗಮ ಆಡಳಿತ ತರುವ ದೃಷ್ಟಿಯಿಂದ ಗರಿಷ್ಠ 7 ಪಾಲಿಕೆ ರಚನೆಗೆ ಪ್ರಸ್ತಾಪ ಮಾಡಲಾಗಿದೆ. ಈ ಕಾಯ್ದೆಗೆ ನಿಯಮಾವಳಿ ರೂಪಿಸಿದ ಬಳಿಕ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಜೊತೆಗೆ ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ಜಿಬಿಎ ಮುಖ್ಯ ಆಯುಕ್ತರು ಎಂದು ಹೆಸರು ಬದಲಾವಣೆ ಮಾಡಲಾಗಿದೆ. ಜೊತೆಗೆ ಹೊಸ ಆಡಳಿತಾಧಿಕಾರಿಯನ್ನೂ ನೇಮಕ ಮಾಡಲಾಗುತ್ತದೆ.
ಕಾಯ್ದೆ ಹಾದಿ ಹೇಗೆ?
ವಿಧಾನ ಮಂಡಲದಲ್ಲಿ ಮಾರ್ಚ್ 13ರಂದು ಅಂಗೀಕಾರವಾಗಿದ್ದ ʻಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2024ʼಯನ್ನು ರಾಜ್ಯಪಾಲರ ಅಂಕಿತಕ್ಕಾಗಿ 2025ರ ಮಾರ್ಚ್ 17ರಂದು ಕಳುಹಿಸಲಾಗಿತ್ತು. ಮಸೂದೆಯು ಸಂವಿಧಾನದ 74ನೇʼ ತಿದ್ದುಪಡಿಗೆ ವಿರುದ್ಧವಾಗಿದೆ ಮತ್ತು ದೆಹಲಿ ಮಹಾನಗರ ಪಾಲಿಕೆಯ ವಿಭಜನೆ ಸಂದರ್ಭದಲ್ಲಿ ಆದಂತೆ ಸಮಸ್ಯೆಗಳು ಸೃಷ್ಟಿಯಾಗುತ್ತವೆʼ ಎಂದು ಬೆಂಗಳೂರು ಟೌನ್ ಹಾಲ್ ಸಂಘಟನೆ ಹಾಗೂ ಬಿಜೆಪಿ ನಾಯಕರ ನಿಯೋಗಗಳು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದವು. ಮಸೂದೆಯನ್ನು ತಡೆ ಹಿಡಿಯುವಂತೆಯೂ ಒತ್ತಾಯಿಸಿದ್ದವು.
ಇದಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯಪಾಲರು ʻಎರಡೂ ಮನವಿಗಳನ್ನು ನಾನು ಪರಿಶೀಲಿಸಿದ್ದೇನೆ. ಈ ಮಸೂದೆಯು ಕಾನೂನಾತ್ಮಕ ಮತ್ತು ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಒಳಗೊಂಡಿದೆ. ಆದ್ದರಿಂದ ಎರಡೂ ಮನವಿ ಪತ್ರಗಳಲ್ಲಿ ಪ್ರಸ್ತಾಪಿಸಿರುವ ಪ್ರಮುಖ ವಿಷಯಗಳ ಕುರಿತು ಸ್ಪಷ್ಟನೆ ಅಗತ್ಯವಿದೆ’ ಎಂದು ಮಾರ್ಚ್ 25ರಂದು ಮಸೂದೆಯನ್ನು ಹಿಂದಿರುಗಿಸಿದ್ದರು. ಅದಕ್ಕೆ ಅಗತ್ಯ ಸ್ಪಷನೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಏಪ್ರಿಲ್ 24ರಂದು ಮಸೂದೆಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದರು. ಅಂದು ಸಂಜೆಯೇ ‘ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ- 2024’ ಅನ್ನು ಅಧಿಸೂಚಿಸಿ, ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿತ್ತು.
ಮೇ 15ರಿಂದ:
ಸದ್ಯ ಬಿಬಿಎಂಪಿಯ 225 ವಾರ್ಡ್ಗಳು ಜೆಬಿಎ ವ್ಯಾಪ್ತಿಯಲ್ಲಿರಲಿದೆ. ನಂತರ ಬಿಬಿಎಂಪಿ ವ್ಯಾಪ್ತಿ ಮಾತ್ರ ʻಗ್ರೇಟರ್ ಬೆಂಗಳೂರು ಪ್ರದೇಶʼ ಎಂದಾಗಲಿದ್ದರೂ ನಂತರದ ದಿನಗಳಲ್ಲಿ ವ್ಯಾಪ್ತಿ ಹಿಗ್ಗಲಿದೆ. ತಲಾ ಸುಮಾರು 125 ವಾರ್ಡ್ಗಳ ಮೂರು ನಗರ ಪಾಲಿಕೆಗಳನ್ನು ರಚಿಸುವ ಯೋಜನೆ ಇದ್ದು ಅದಕ್ಕೆ ತಕ್ಕಂತೆ ʻಗ್ರೇಟರ್ ಬೆಂಗಳೂರು ಪ್ರದೇಶʼದ ಗಡಿಯನ್ನು ಗುರುತಿಸಲಾಗುತ್ತದೆ. ನಗರದ ಸುತ್ತಲಿರುವ ಕೈಗಾರಿಕಾ ಪ್ರದೇಶಗಳನ್ನೂ ಒಳಗೊಂಡಂತೆ ಎಲೆಕ್ಟ್ರಾನಿಕ್ ಸಿಟಿ ಅತ್ತಿಬೆಲೆ ಜಿಗಣಿ ಕೈಗಾರಿಕೆ ಪ್ರದೇಶ ಬೊಮ್ಮಸಂದ್ರ, ಸರ್ಜಾಪುರ, ಬಾಗಲೂರು, ರಾಜಾನುಕುಂಟೆ, ಹೆಸರಘಟ್ಟ, ದಾಸನಪುರ, ಮಾಕಳಿ, ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ʻಗ್ರೇಟರ್ ಬೆಂಗಳೂರು ಪ್ರದೇಶʼಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ. ಕಾಯ್ದೆಯಲ್ಲೇ ಇರುವಂತೆ ಎಲ್ಲ ನಗರ ಪಾಲಿಕೆಗಳ ಹೆಸರು ʻಬೆಂಗಳೂರುʼ ಎಂದೇ ಆರಂಭವಾಗಬೇಕಿದೆ. ʻಬೆಂಗಳೂರು ಕೇಂದ್ರ ನಗರ ಪಾಲಿಕೆʼ ʻಬೆಂಗಳೂರು ಉತ್ತರ ನಗರ ಪಾಲಿಕೆʼ ʻಬೆಂಗಳೂರು ದಕ್ಷಿಣ ನಗರ ಪಾಲಿಕೆʼ… ಹೀಗೆ ಹೆಸರಿಸಲಾಗುತ್ತದೆ. ʻಗ್ರೇಟರ್ ಬೆಂಗಳೂರು ಪ್ರದೇಶʼ ವ್ಯಾಪ್ತಿಯನ್ನು ಹಿಗ್ಗಿಸಿದ ಮೇಲೆ ಅದರನ್ವಯ ಮೂರು ಅಥವಾ ಐದು ನಗರಪಾಲಿಕೆಗಳನ್ನು ರಚಿಸಲಾಗುತ್ತದೆ ಎಂದು ಸರ್ಕಾರಿ ಮೂಲಗಳು ಮಾಹಿತಿ ನೀಡಿವೆ.
ಬಿಬಿಎಂಪಿ
ಬೈಕ್..ಕಾರ್ ತೊಳೆಯಲು ಕುಡಿಯುವ ನೀರು ಬಳಕೆ: ಬೆಂಗಳೂರಲ್ಲಿ ಬಿತ್ತು ಲಕ್ಷ ಲಕ್ಷ ದಂಡ

ಬೆಂಗಳೂರು: ನಗರದಲ್ಲಿ ಬಿಸಿಲಿನ ಆರ್ಭಟ ಶುರುವಾಗಿದ್ದು, ಜನರ ಬಸವಳಿದಿದ್ದಾರೆ, ಈ ಸಮಯದಲ್ಲೇ ನೀರಿಗೂ ಹಾಹಾಕಾರ ಎದುರಾಗುವ ಚಿಂತೆ ಶುರುವಾಗಿದೆ, ಬೇಸಿಗೆಯ ಬಿಸಿ ಹೆಚ್ಚಾದಂತೆ ನೀರಿಗಾಗಿ ಹಾಹಾಕಾರ ಶುರುವಾಗುವ ಸಾಧ್ಯತೆ ಇದೆ, ಹೀಗಾಗಿ ನೀರು ಪೋಲು ಮಾಡುವುದನ್ನು ತಡೆಗಟ್ಟಲು ಈಗಾಗಲೇ ಜಲಮಂಡಲಿ ದಂಡಾಸ್ತ್ರ ಪ್ರಯೋಗ ಶುರು ಮಾಡಿದ.
ನೀರು ದುರ್ಬಳಕೆ ಮಾಡಿಕೊಳ್ಳುವವರ ವಿರುದ್ಧ ಬೆಂಗಳೂರು ಜಲ ಮಂಡಳಿ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಈವರೆಗೂ 5.60 ಲಕ್ಷ ರೂಪಾಯಿ ದಂಡ ವಿಧೀಸಿದೆ,
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕುಡಿಯುವ ನೀರನ್ನು ಅನ್ಯ ಉದ್ದೇಶಗಳಿಗೆ ಬಳಸದಂತೆ ನಿಷೇಧ ಹೇರಲಾಗಿದ್ದು, ಬೆಂಗಳೂರು ಜಲ ಮಂಡಳಿಯು ಆದೇಶ ಹೊರಡಿಸಿ, ಈಗಾಗಲೇ ಒಂದು ವಾರ ಕಳೆದಿದೆ, ಈ ಒಂದು ವಾರದಲ್ಲಿ ಸುಮಾರು 112 ಪ್ರಕರಣ ದಾಖಲಿಸಿರುವ ಅಧಿಕಾರಿಗಳು, ದಂಡ ಪ್ರಯೋಗ ಮಾಡಿದ್ದಾರೆ,
ಕಾರು,ಬೈಕು ತೊಳೆಯಲು ಮತ್ತು, ಅಂಗಳ ಸ್ವಚ್ಛತೆ,ಗಾರ್ಡನ್ ಗೆ ಕುಡಿಯುವ ನೀರು ಹಾಕಿದವರಿಗೆ ಒಟ್ಟಾರೆ 5.60 ಲಕ್ಷ ದಂಡ ವಿಧಿಸಲಾಗಿದೆ, ಈ ಮೂಲಕ ಬೇಸಿಗೆಯ ಆರಂಭಕ್ಕೂ ಮೊದಲೇ ನೀರು ಪೋಲು ಮಾಡದಿರುವಂತೆ ಸಾರ್ವಜನಕರಿಗೆ ಖಡಕ್ ಎಚ್ಚರಿಕೆ ಸಂದೇಶ ರವಾನೆಯಾಗಿದ್ದು, ಕುಡಿಯುವ ನೀರು ಉಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ,
-
ಬಿಬಿಎಂಪಿ4 weeks ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ