ದೇಶ

ಸಿದ್ದರಾಮಯ್ಯ: ಕೇಂದ್ರ ಸರ್ಕಾರದ್ದು ಚುನಾವಣೆ ಬಜೆಟ್‌,ನಮ್ಮ ಒಂದೂ ಬೇಡಿಕೆ ಈಡೇರಿಸಿಲ್ಲ

ಇದೊಂದು ಚುನಾವಣೆ ಬಜೆಟ್‌ ಬಿಟ್ಟರೆ ಬೇರೇನೂ ಇಲ್ಲ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು, ರಾಯಚೂರು ಜಿಲ್ಲೆಗೆ ಎಮ್ಸ್ ಸ್ಥಾಪನೆಗೆ ಒತ್ತಾಯಿಸಿದ್ದೆವು. ಅದೂ ಆಗಿಲ್ಲ.ದೇಶದ ಆರ್ಥಿಕ ಪರಿಸ್ಥಿತಿಯನ್ನು ಬಿಚ್ಚಿಟ್ಟಿಲ್ಲ. ನಿರುದ್ಯೋಗ, ಬೆಲೆಯೇರಿಕೆ, ಬರಗಾಲ , ರೈತರ ಸಮಸ್ಯೆಗಳ ಬಗ್ಗೆ ಪ್ರಸ್ತಾಪವೇ ಇಲ್ಲ. ವಿಕಸಿತ ಭಾರತ ಎಂದು ನರೇಂದ್ರಮೋದಿ ಪ್ರಚಾರದಲ್ಲಿ ಹೇಳುತ್ತಾರೆ. ಈ ಬಜೆಟ್ ವಿಕಸಿತ ಬಜೆಟ್ ಎನ್ನುತ್ತಾರೆ. ಇದು ನಿಜವಾದ ಅರ್ಥದಲ್ಲಿ ವಿನಾಶಕಾರಿ ಭಾರತ ಮಾಡುವ ಬಜೆಟ್ . ಬಡವರು, ಯುವಕರು, ರೈತರು, ಮಹಿಳೆಯರಿಗಾಗಿ ವಿಕಸಿತ ಭಾರತ ಎನ್ನುತ್ತಾರೆ. ಆದರೆ ಈ ಸಮುದಾಯಗಳ ಪ್ರಗತಿಗೆ ಕಾರ್ಯಕ್ರಮಗಳೇ ಇಲ್ಲ ಎಂದಿದ್ದಾರೆ.

Trending

Exit mobile version