ಬೆಂಗಳೂರು

ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್‌

ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್‌

ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಇರುವ ಆತಂಕ, ಒತ್ತಡಗಳನ್ನು ದೂರ ಸರಿಸಬೇಕು. ಆತ್ಮಸ್ಥೈರ್ಯವು ಪರೀಕ್ಷೆಯ‌ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಕೆ.ಕೆ. ಸಮೂಹ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಡಾ. ರೋಹಿತ್‌ ಕೆ.ಸಿ ಹೇಳಿದರು. ಶನಿವಾರ ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವ್ಯಾಸಂಗದೊಡನೆ ನಿಯಮಿತ ವಿಶ್ರಾಂತಿ, ಶಿಸ್ತುಬದ್ದ ದಿನಚರಿ ಹೆಚ್ಚು ಅಂಕಗಳನ್ನು ಗಳಿಸಲು ನೆರವಾಗುತ್ತದೆ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳು ಆತಂಕ್ಕೆ ಒಳಗಾಗಬಾರದು. ಒತ್ತಡವು ವಿದ್ಯಾರ್ಥಿಗಳ ನೆನಪಿನ ಶಕ್ತಿಯ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಎಚ್ಚರಿಕೆ ನೀಡಿದ ಅವರು, ಪಿಯುಸಿ ಪರೀಕ್ಷೆಯ ಜೊತೆಗೆ ಜೀವನದ ಪರೀಕ್ಷೆಯ ಬಗ್ಗೆಯೂ ಮಕ್ಕಳು ಹೆಚ್ಚಿನ ಗಮನ ವಹಿಸಬೇಕು. ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಶಿಕ್ಷಕರು ಮತ್ತು ಪೋಷಕರು ಹೆಚ್ಚಿನ ಗಮನವಹಿಸಬೇಕೆಂದು ಮನವಿ ಮಾಡಿಕೊಂಡರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳೂ ಕೂಡ ಈ ವೇಳೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗ ಳು ಶಿಕ್ಷಕರೊಂದಿಗೆ ತಾವು ಹೊಂದಿದ್ದ ಭಾವನಾತ್ಮಕ ಸಂಬಂಧದ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಸಂಸ್ಥೆಯ ಅಧ್ಯಕ್ಷ ಕೆ. ಕುಂಬಣ್ಣ, ಕಾರ್ಯದರ್ಶಿ ಕೆ. ಸುಮಲತಾ, ಜಂಟಿ ಕಾರ್ಯದರ್ಶಿ ಕೆ. ಹೇಮಲತಾ, ಶಾಲಾ ಪ್ರಾಂಶುಪಾಲೆ ಹಾಸೀನಾ ಸೇರಿದಂತೆ ಹಲವು ಗಣ್ಯರು, ವಿದ್ಯಾರ್ಥಿಗಳ ಪೋಷಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Trending

Exit mobile version