ಚುನಾವಣೆ
ರಾಜ್ಯದಲ್ಲಿ ಬಿಜೆಪಿಯಿಂದ ಮೂರು ದಿನಗಳ ಗ್ರಾಮ ಚಲೋ ಅಭಿಯಾನ ವಿಜಯೇಂದ್ರ
ಬೆಂಗಳೂರು: ರಾಜ್ಯದಲ್ಲಿ ಇನ್ನು ಮೂರು ದಿನಗಳ ಕಾಲ ಬಿಜೆಪಿಯಿಂದ ಗ್ರಾಮ ಚಲೋ ಅಭಿಯಾನ ನಡೆಯಲಿದ್ದು 42 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ಹೇಳಿದರು, ಯಶವಂತಪುರ ವಿಧಾನಸಭಾ ಕ್ಷೇತ್ರದ ಬೂತ್ ನಂಬರ್ 455,454 ರಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿ ಹೆಚ್ಚ ಗೊಲ್ಲಹಳ್ಳಿಯಲ್ಲಿ ಅವರು ಮಾತನಾಡುತ್ತ ಫೆಬ್ರವರಿ 9,10,11 ರಂದು ರಾಜ್ಯಾದ್ಯಂತ ಗ್ರಾಮ ಚಲೋ ಅಭಿಯಾನ ನಡೆಯಲಿದೆ ಎಂದರು,
ರಾಷ್ಟಿçÃಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆಯಂತೆ ಗ್ರಾಮ ಚಲೋ ಅಭಿಯಾನಕ್ಕೆ ರಾಜ್ಯದಲ್ಲಿ ಚಾಲನೆ ನೀಡಿದ್ದೇವೆ ರಾಜ್ಯದ 28 ಸಾವಿರಕ್ಕೂ ಹೆಚ್ಚು ಹಳ್ಳಿಗಳಲ್ಲಿ 19 ಸಾವಿರ ನಗರ ಬೂತ್ಗಳಲ್ಲಿ ಮೂರು ದಿನ ನಿರಂತರ ಈ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು, 2047ಕ್ಕೆ ಭಾರತ ಸಂಪೂರ್ಣ ಅಭಿವೃದ್ಧಿಯಾಗಬೇಕಾದರೆ ಹಳ್ಳಿ ಹಳ್ಳಿಗೂ ಅಭಿವೃದ್ಧಿಯಾಗಬೇಕು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳು ದೊರೆಯಬೇಕು, ಈ ನಿಟ್ಟಿನಲ್ಲಿ ಗ್ರಾಮ ಚಲೋ ಅಭಿಯಾನ ನಡೆಸಲಾಗುತ್ತಿದೆ, ಪ್ರತಿಯೊಂದು ಮನೆ ಮನೆಗೂ ಬಿಜೆಪಿ ಕಾರ್ಯಕರ್ತರು ತಲುಪಿ ಕೇಂದ್ರದ ಯೋಜನೆಗಳನ್ನು ತಲುಪಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು, ದೇಶದ ಭವಿಷ್ಯವನ್ನು ರೂಪಿಸಲು ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು, ಆಗ ಮಾತ್ರ ದೇಶ ಸಂಪೂರ್ಣವಾಗಿ ಅಭಿವೃದ್ಧಿಯಾಗಲು ಸಾಧ್ಯ ಎಂದು ಅವರ ರಾಜ್ಯ ಭೇಟಿಗೆ ಬರುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆಯಾಗಿದೆ ಎಂದು ತಿಳಿಸಿದರು,
ರಾಜ್ಯದ ಮುಖ್ಯಮಂತ್ರಿ ಎಂಬುದು ಸಿದ್ದರಾಮಯ್ಯ ಅವರು ಮರೆಯುತ್ತಿದ್ದಾರೆ, ದೇವರ ಬಗ್ಗೆ ಅವರ ಭಕ್ತಿ ಭಾವನೆಯ ಬಗ್ಗೆ ಅವರೇ ಹೇಳಬೇಕು, ಮಾಂಸಾಹಾರ ಸೇವಿಸಿ ಸುತ್ತೂರು ಗುದ್ದುಗೆಗೆ ಭೇಟಿ ನೀಡಿರುವುದಕ್ಕೆ ಅವರೇ ಉತ್ತರ ಕೊಡಬೇಕು, ರಾಜ್ಯದ ಮುಖ್ಯಮಂತ್ರಿಯ ನಡವಳಿಕೆಯನ್ನು ಪ್ರಯಿಯೊಬ್ಬರು ಗಮನಿಸುತ್ತಿರುತ್ತಾರೆ, ಅವರ ಈ ನಡವಳಿಕೆ ಖಂಡನೀಯ ಅವರ ನಡೆ,ನುಡಿಗೆ ಅಜಗಜಾಂತರ ವ್ಯತ್ಯಾಸವಿದೆ ಅವರು ಭಕ್ತರ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಹೇಳಿದರು, ಲೋಕ ಸಭಾ ಚುನಾವಣೆ ಸರ್ವೇ ಕುರಿತು ಪ್ರತಿಕ್ರಿಯಿಸಿದ ಅವರು ದೇಶದಲ್ಲೇ ನರೇಂದ್ರ ಮೋದಿ ಪರವಾದ ಅಲೆ ಇದೆ, ದೇಶದ ಭವಿಷ್ಯದ ದೃಷ್ಟಿಯಿಂದ ಮೋದಿ ಮತ್ತೊಮ್ಮೆ ರಾಜ್ಯದಲ್ಲಿ ಒಂದೊಂದು ಸೀಟು ಗೆಲಲ್ಲು ಕಾಂಗ್ರೆಸ್ ಪರಿತಪಿಸುತ್ತಿದೆ, ಬಿಜೆಪಿ, ಜೆಡಿಎಸ್ ಜಂಟಿಯಾಗಿ ಗೆಲ್ಲುತ್ತೆ ಎನ್ನುವ ವಿಶ್ವಾಸ ಇದೆ ಎಂದರು, ಈ ಗ್ರಾಮ ಚಲೋ ಕಾರ್ಯಕ್ರಮದಲ್ಲಿ ಯಶವಂತಪರು ನಗರಮಂಡಲಾಧ್ಯಕ್ಷ ಅನಿಲ್ ಚಳಗೇರಿ, ಗ್ರಾಮಂತರ ಅಧ್ಯಕ್ಷ ರಂಗಣ್ಣ, ಕಾರ್ಯಕ್ರಮದಲ್ಲಿ ಯಶವಂತಪರು ನಗರಮಂಡಲಾಧ್ಯಕ್ಷ ಅನಿಲ್ ಚಳಗೇರಿ, ಗ್ರಾಮಂತರ ಅಧ್ಯಕ್ಷ ರಂಗಣ್ಣ, ಮಾಜಿ ಪಾಲಿಕೆ ಸದಸ್ಯ ರ.ಅಂಜನಪ್ಪ, ಕೆಂಗೇರಿ ವಾರ್ಡ್ ಅಧ್ಯಕ್ಷ ಸಂತೋಷ್ ಹಾಗೂ ಸ್ಧಳೀಯ ಬಿಜೆಪಿ ನಾಯಕರು ಉಪಸ್ಧಿತರಿದ್ದರು,
ಚುನಾವಣೆ
ಐದು ನಗರ ಪಾಲಿಕೆ ಚುನಾವಣೆ ಕಾವು: ಕಾಂಗ್ರೆಸ್ ಸೇರಿದಂತೆ ಪಕ್ಷಗಳಲ್ಲಿ ಚಟುವಟಿಕೆ ಜೋರು
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಆಗಸ್ಟ್ 31ರೊಳಗೆ ಕಡ್ಡಾಯವಾಗಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದ್ದು, ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಯುವ ನಿರೀಕ್ಷೆ ಮೂಡಿದೆ.
ಸುಪ್ರೀಂ ಕೋರ್ಟ್ ಮೊದಲು ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸೂಚಿಸಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ, ಸಿಬ್ಬಂದಿ ಕೊರತೆ ಹಾಗೂ ಆಡಳಿತಾತ್ಮಕ ಕಾರಣಗಳನ್ನು ಪರಿಗಣಿಸಿ ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿದೆ. ಆದರೆ ಇದೇ ಅಂತಿಮ ಅವಕಾಶವಾಗಿದ್ದು, ಮತ್ತೊಮ್ಮೆ ಯಾವುದೇ ಕಾರಣಕ್ಕೂ ಕಾಲಾವಕಾಶ ನೀಡುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟ ಎಚ್ಚರಿಕೆ ನೀಡಿದೆ.
ರಾಜ್ಯ ಸರ್ಕಾರವು ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ಕೋರಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಚುನಾವಣಾ ಪ್ರಕ್ರಿಯೆ ವೇಗ ಪಡೆಯಲು ಕಾರಣವಾಗಿದೆ. ಈ ಬೆಳವಣಿಗೆಯ ನಂತರ ರಾಜ್ಯ ಚುನಾವಣಾ ಆಯೋಗ ಸದ್ದಿಲ್ಲದೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.
ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಗುರುತಿಸುವಿಕೆ, ಚುನಾವಣಾ ಸಿಬ್ಬಂದಿ ನಿಯೋಜನೆ ಹಾಗೂ ಇತರೆ ಆಡಳಿತಾತ್ಮಕ ಕಾರ್ಯಗಳು ಈಗಾಗಲೇ ನಡೆಯುತ್ತಿವೆ. ಎಲ್ಲ ಸಿದ್ಧತೆಗಳು ಪೂರ್ಣಗೊಂಡ ಬಳಿಕ ಜುಲೈ 10ರೊಳಗೆ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ವೇಳಾಪಟ್ಟಿ ಘೋಷಣೆಯಾದ ತಕ್ಷಣ ಜಿಬಿಎ ವ್ಯಾಪ್ತಿಯಲ್ಲಿ ಮಾದರಿ ನೀತಿಸಂಹಿತೆ ಜಾರಿಗೆ ಬರಲಿದೆ.
ಇತ್ತ ರಾಜಕೀಯ ಪಕ್ಷಗಳೂ ಚುನಾವಣಾ ಕಣಕ್ಕೆ ಇಳಿಯಲು ಸಜ್ಜಾಗಿವೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಐದು ನಗರ ಪಾಲಿಕೆಗಳ ವ್ಯಾಪ್ತಿಯ ಮುಖಂಡರು ಮತ್ತು ಕಾರ್ಯಕರ್ತರಿಗೆ ಸಂಘಟನಾ ಚಟುವಟಿಕೆಗಳನ್ನು ತೀವ್ರಗೊಳಿಸುವಂತೆ ಸೂಚಿಸಿದೆ. ಮನೆಮನೆಗೆ ಭೇಟಿ, ಸರ್ಕಾರದ ಸಾಧನೆಗಳ ಪ್ರಚಾರ, ಗ್ಯಾರಂಟಿ ಯೋಜನೆಗಳ ಮಾಹಿತಿ ಹಾಗೂ ವಾರ್ಡ್ವಾರು ಮತದಾರರ ಸಂಪರ್ಕ ಅಭಿಯಾನಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಜಿಬಿಎ ಚುನಾವಣೆಗಳು ಬೆಂಗಳೂರು ನಗರ ಆಡಳಿತದ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಚುನಾವಣೆಗಳಾಗಿದ್ದು, ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ನಿರೀಕ್ಷಿಸಲಾಗಿದೆ.
ಚುನಾವಣೆ
GBA ELECTION : ಜುಲೈ ಮೊದಲ ವಾರದಲ್ಲೇ ವೇಳಾಪಟ್ಟಿ? ಬೆಂಗಳೂರು ರಾಜಕೀಯ ಕಣ ರಂಗೇರಲು ಸಜ್ಜು
ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆ ಆಗಸ್ಟ್ 31ರೊಳಗೆ ನಡೆಸುವುದು ಬಹುತೇಕ ಖಚಿತವಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗವು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.
ಮೂಲಗಳ ಪ್ರಕಾರ, ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಅಧಿಕೃತ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಜುಲೈ 10ರೊಳಗೆ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಲಾಗುತ್ತಿದ್ದು, ವೇಳಾಪಟ್ಟಿ ಪ್ರಕಟವಾದ ತಕ್ಷಣವೇ ಬೆಂಗಳೂರು ನಗರದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಸುವ ಬಗ್ಗೆ ಆಯೋಗ ಚಿಂತನೆ ನಡೆಸಿದೆ.
ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಾಗೂ ಸಿಬ್ಬಂದಿ ಕೊರತೆಯನ್ನು ಪರಿಗಣಿಸಿ ನ್ಯಾಯಾಲಯವು ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿತ್ತು. ಜೊತೆಗೆ, ಯಾವುದೇ ಕಾರಣಕ್ಕೂ ಮತ್ತೆ ಚುನಾವಣೆ ಮುಂದೂಡುವ ಪ್ರಸ್ತಾಪವನ್ನು ತನ್ನ ಮುಂದೆ ತರಬಾರದು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡುವಂತೆ ಸರ್ಕಾರ ಸಲ್ಲಿಸಿದ್ದ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.
ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಸಿದ್ಧತೆ ಹಾಗೂ ಸಿಬ್ಬಂದಿ ನಿಯೋಜನೆ ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದೆ. ರಾಜಕೀಯ ಪಕ್ಷಗಳೂ ಚುನಾವಣೆಗೆ ಸಜ್ಜಾಗಿವೆ. ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರಿಗೆ ಸೂಚನೆ ನೀಡಿದೆ. ಬಿಜೆಪಿ, ಕಳೆದ ಆರು ವರ್ಷಗಳಿಂದ ಚುನಾವಣೆ ನಡೆಯದ ಪರಿಣಾಮ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆರೋಪಿಸುತ್ತಿದೆ. ಇತ್ತ ಬಿಜೆಪಿ-ಜೆಡಿಎಸ್ ಮೈತ್ರಿಯೂ ಚುನಾವಣಾ ಅಖಾಡಕ್ಕೆ ಸಜ್ಜಾಗಿದ್ದು, ಪಂಚ ಪಾಲಿಕೆ ಚುನಾವಣೆ ಭಾರೀ ಪೈಪೋಟಿಗೆ ಸಾಕ್ಷಿಯಾಗುವ ನಿರೀಕ್ಷೆ ಮೂಡಿದೆ.
ಚುನಾವಣೆ
Bhabanipur Shock: 700 ಮತದಾರರ ಬೂತ್ನಲ್ಲಿ ಮಮತಾ ಬ್ಯಾನರ್ಜಿ ಪಡೆದದ್ದು ಕೇವಲ 28 ಮತ!
ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಮುಖ್ಯಮಂತ್ರಿ Mamata Banerjee ಅವರಿಗೆ ಭಾರೀ ಹಿನ್ನಡೆಯಾಗಿದೆ. ಟಿಎಂಸಿಯ ಭದ್ರಕೋಟೆ ಎಂದೇ ಗುರುತಿಸಿಕೊಂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿ ನಾಯಕ Suvendu Adhikari ಐತಿಹಾಸಿಕ ಜಯ ಸಾಧಿಸಿದ್ದು, ಮಮತಾ ಬ್ಯಾನರ್ಜಿ ಅವರ ಸ್ವಂತ ವಾರ್ಡ್ನಲ್ಲಿಯೇ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.
ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಬೂತ್ವಾರು ಅಂಕಿ-ಅಂಶಗಳ ಪ್ರಕಾರ, ಭವಾನಿಪುರ ಕ್ಷೇತ್ರದ 267 ಬೂತ್ಗಳ ಪೈಕಿ 207 ಬೂತ್ಗಳಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಪಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರ ಕಾಲಿಘಾಟ್ ನಿವಾಸವಿರುವ ವಾರ್ಡ್ ನಂಬರ್ 73ರಲ್ಲಿ ಸುವೇಂದು ಅಧಿಕಾರಿ 8,932 ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ ಕೇವಲ 4,284 ಮತಗಳಿಗೆ ಸೀಮಿತರಾಗಿದ್ದಾರೆ.
ಚುನಾವಣೆಗೆ ಮುನ್ನ Amit Shah ಬಿಜೆಪಿ ಕಾರ್ಯಕರ್ತರಿಗೆ “ಮಮತಾ ಬ್ಯಾನರ್ಜಿಯನ್ನು ಅವರದೇ ಕೋಟೆಯಲ್ಲಿ ಸೋಲಿಸಿ” ಎಂದು ಕರೆ ನೀಡಿದ್ದರು. ಇದೀಗ ಸುವೇಂದು ಅಧಿಕಾರಿ ಆ ಸವಾಲನ್ನು ಯಶಸ್ವಿಯಾಗಿ ಈಡೇರಿಸಿದ್ದಾರೆ ಎಂದು ಬಿಜೆಪಿ ಪಾಳಯದಲ್ಲಿ ಸಂಭ್ರಮ ವ್ಯಕ್ತವಾಗಿದೆ.
ಸುವೇಂದು ಅಧಿಕಾರಿಗೆ ದಕ್ಷಿಣ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಲ್ಲಿ ಮೊದಲಿನಿಂದ ರಾಜಕೀಯ ನೆಲೆ ಕಡಿಮೆ ಇತ್ತು. ಆದರೂ ಕ್ಷೇತ್ರದಲ್ಲಿ ಶೇಕಡಾ 63 ಮತಗಳನ್ನು ಪಡೆದು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಮತಾ ಬ್ಯಾನರ್ಜಿ ಕೇವಲ ಶೇಕಡಾ 30 ಮತಗಳನ್ನು ಪಡೆಯಲು ಮಾತ್ರ ಸಾಧ್ಯವಾಗಿದೆ.
ಇನ್ನು ಹಲವು ಬೂತ್ಗಳಲ್ಲಿ ಮಮತಾ ಬ್ಯಾನರ್ಜಿ 50 ಮತಗಳ ಗಡಿ ದಾಟಲೂ ವಿಫಲರಾಗಿರುವುದು ಟಿಎಂಸಿ ಪಾಳಯಕ್ಕೆ ದೊಡ್ಡ ಆಘಾತವಾಗಿದೆ. 2021ರ ಉಪಚುನಾವಣೆಯಲ್ಲಿ ಏಳು ವಾರ್ಡ್ಗಳಲ್ಲೂ ಗೆದ್ದಿದ್ದ ದೀದಿ, ಈ ಬಾರಿ ತಮ್ಮ ಹಿಡಿತವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಅಂತಿಮವಾಗಿ ಮಮತಾ ಬ್ಯಾನರ್ಜಿ 58,812 ಮತಗಳನ್ನು ಪಡೆದರೆ, ಸುವೇಂದು ಅಧಿಕಾರಿ 73,917 ಮತಗಳನ್ನು ಪಡೆದು ಟಿಎಂಸಿ ಕೋಟೆಯನ್ನು ಧೂಳೀಪಟ ಮಾಡಿದ್ದಾರೆ.
