Connect with us

ರಾಜಕೀಯ

ಫೇಸ್ಬುಕ್ ನಲ್ಲಿ ಕವನ ಬರೆದೋನು ಮುಸ್ಲಿಂ, ದೂರು ಕೊಟ್ಟವನೂ ಮುಸ್ಲಿಂ, ಶಾಸಕನೂ ಮುಸ್ಲಿಂ’: ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಯಾವನೋ ಒಬ್ಬ ಮತಾಂಧ ಐಎಎಸ್ ಅಧಿಕಾರಿ, ತಾನು ಹೇಳಿದ್ದು ಸರಿ ಅಂತಾನೆ. ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದ ನಂತರ ಎಂಟು ತಿಂಗಳಲ್ಲಿ ದುಡ್ಡು ವಸೂಲಿಗೆ ಇಳಿದುಬಿಟ್ಟಿದ್ದಾರೆ. ಮುಖ್ಯಮಂತ್ರಿ, ಹಾಗೂ ಡಿಸಿಎಂ ಮಧ್ಯ ಜಗಳ ಇದೆ. ಅದಕ್ಕೇ ಇಂಥಾ ಪರಿಸ್ಥಿತಿ ಇದೆ. ಅಪರಾಧಿಗಳ ಮೇಲೆ ಏನೂ ಕ್ರಮ ಕೈಗೊಳ್ತಿಲ್ಲಎಂದು ಮಾಜಿ ಸಿಎಂ ಎಚ್.ಡಿಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ವಕೀಲರ ವಿರುದ್ಧ ದೂರು ದಾಖಲು ವಿಚಾರಕ್ಕೆ ಸಂಬಂಧಿಸಿದಂತೆ ಪಿಎಸ್​ಐ ತನ್ವೀರ್ ಅಮಾನತಿಗೆ ಆಗ್ರಹಿಸಿ ರಾಮನಗರದ ಐಜೂರು ಸರ್ಕಲ್ ಬಳಿ ವಕೀಲರು ಸೋಮವಾರ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಲ್ಲಿನ ಪೊಲೀಸರು ಅಪರಾಧಿಗೆ ಸಾಥ್ ನೀಡುವ ಕೆಲಸ ಮಾಡಿದ್ದಾರೆ. ಅದೇನೋ ಏನೋ ಈ ಕಾಂಗ್ರೆಸ್ ಬಂದಾಗಿನಿಂದ ಹಿಂಗೆ ಆಗುತ್ತಿದೆ. ಯಾವನೋ ಒಬ್ಬ ಮತಾಂಧ ಐಎಎಸ್ ಅಧಿಕಾರಿ… ತಾನು ಹೇಳಿದ್ದು ಸರಿ ಅಂತಾನೆ. ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದ ನಂತರ ಎಂಟು ತಿಂಗಳಲ್ಲಿ ದುಡ್ಡು ವಸೂಲಿಗೆ ಇಳಿದುಬಿಟ್ಟಿದ್ದಾರೆ. ಮುಖ್ಯಮಂತ್ರಿ ಹಾಗೂ ಡಿಸಿಎಂ ಮಧ್ಯ ಜಗಳ ಇದೆ. ಅದಕ್ಕೇ ಇಂಥಾ ಪರಿಸ್ಥಿತಿ ಇದೆ. ಅಪರಾಧಿಗಳ ಮೇಲೆ ಏನೂ ಕ್ರಮ ಕೈಗೊಳ್ತಿಲ್ಲ ಎಂದು ಹೇಳಿದ್ದಾರೆ. ಆಡಳಿತ ನೀವು ನಡೆಸ್ತಿದ್ದೀರೋ ಅಥವಾ ಯಾರು ನಡೆಸುತ್ತಿದ್ದಾರೆ? ಯಾವನೋ ಶಾಸಕ ಅಥವಾ ಜಿಲ್ಲಾ‌ ಮಂತ್ರಿ‌ ನಡೆಸ್ತಿದ್ದಾನಾ? ನೀವು ಅವರ ಕೈಕೆಳಗೆ ಕೆಲಸ ಮಾಡ್ತೀರೋ ಅಥವಾ ಜನರ‌ನ್ನ ರಕ್ಷಿಸ್ತೀರೋ? ಇಂಥ ಕಟ್ಟಡ ಕಟ್ಟಿಸಿದ್ದು ರೌಡಿಗಳ ಜತೆ ಕೆಲಸ ಮಾಡೋಕಲ್ಲ ಎಂದರು.

ಇಂತಹ ಕೆಲಸ ಮಾಡೋಕೆ ನಾನು ಜಿಲ್ಲಾ ಕೇಂದ್ರ ಮಾಡಿದ್ನಾ? ಜಿಲ್ಲಾ ಕೇಂದ್ರ ಬೆಂಗಳೂರಿಗೆ ತಗೊಂಡ್ ಹೋಗಿಬಿಡ್ತಾನಂತೆ. ಅದೇನೋ ಬ್ರ್ಯಾಂಡ್ ಬೆಂಗಳೂರು ಮಾಡ್ತಾನಂತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಉಲ್ಲೇಖಿಸದೆ ಲೇವಡಿ ಮಾಡಿದರು. ಮೊದಲು ಹಿರಿಯ ವಕೀಲರ ಬಳಿ ಘಟನೆಯ ಮಾಹಿತಿ ಪಡೆದ ಹೆಚ್​ಡಿಕೆ, ಪ್ರಕರಣದ ಒಟ್ಟು ಸಾರಾಂಶ ಏನು? ಯಾಕೆ‌ ವಿಚಾರ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಿತು ಎಂದು ತಿಳಿದುಕೊಂಡರು. ಬಳಿಕ ಮಾತನಾಡಿ, ರಾಮನಗರದಲ್ಲಿ ನಡೆದಿರುವ ಘಟನೆ ಚಿಕ್ಕದು. ಆದರೆ, ವಕೀಲರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು ಬಹಳ ಗಂಭೀರವಾದ ವಿಚಾರ. ಇದನ್ನು ಸಣ್ಣ ಮಟ್ಟದಲ್ಲೇ ಚಿವುಟಿ ಹಾಕಬಹುದಿತ್ತು. ರಾಜ್ಯದಲ್ಲಿ ಯಾವ ರೀತಿ ಆಡಳಿತ‌ ಇದೆ? ನಾನು ಪಕ್ಷದ ಬಗ್ಗೆ ಹೇಳಲ್ಲ, ಜನರಿಗೆ ರಕ್ಷಣೆ ಕೊಡುವಂತಹದ್ದು ಆಡಳಿತಾಧಿಕಾರಿಗಳ ಕರ್ತವ್ಯ. ಮಾಧ್ಯಮಗಳಲ್ಲಿ ನೋಡಿ ನಾನು ಅಧಿಕಾರಿಗಳಿಗೆ ಕೇಳಿದೆ. ಅದೇನಿಲ್ಲ, ಅಂಥಾ ಪ್ರಕರಣ‌ ಏನಿಲ್ಲ ಅದನ್ನು ಸರಿ ಪಡಸ್ತೀವಿ ಅಂದಿದ್ರು. ಎಸ್​ಪಿಗೂ ಈ ಬಗ್ಗೆ ಗಮನಕ್ಕೆ ತರಲಾಗಿತ್ತು. ಈ ವಿಚಾರ ಅಧಿವೇಶನದಲ್ಲಿ ಮಾತಾಡ್ತಾರೆ. ಇಂಥಾ ವಿಚಾರಗಳನ್ನು ನನ್ನ ಸ್ವಂತಕ್ಕೆ ಬಳಸಿಕೊಂಡಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. ರೈತರ ಮೇಲೆ ಗೋಲಿಬಾರ್ ಆದ ಮೇಲೆ ದೇವೇಗೌಡರು ಪಾದಯಾತ್ರೆ ಮಾಡಿದ ಇತಿಹಾಸ ಇದೆ. ಮಂಡ್ಯದಲ್ಲೂ ಒಂದು ಘಟನೆ ನಡೆದಿತ್ತು. ಅವತ್ತೂ ಜಿಲ್ಲಾಧಿಕಾರಿಗಳಿಗೆ ಹೇಳಿದ್ದೆ, ಯಾಕಿಷ್ಟು ಪೊಲೀಸರನ್ನು ಕರೆಸಿದ್ದರು ಎಂಬುದಾಗಿ. ಪಾಪ ಆ ಕಾನಸ್ಟೇಬಲ್​​ಗಳಿಗೆ ಊಟ ಇರಲ್ಲ, ಮತ್ತೊಂದಿಲ್ಲ. ಅವರ ಕಷ್ಟನೂ ಇವರಿಗೆ ಗೊತ್ತಾಗಲ್ಲ. ಇಷ್ಟು ಜನ ಪೊಲೀಸರನ್ನು ನೋಡಿ ಆಶ್ಚರ್ಯ ಆಯ್ತು. ನಾನು ರಾಮನಗರಲ್ಲಿದ್ದಾಗ ಇಂಥಾ ಪರಿಸ್ಥಿತಿ ಇರಲಿಲ್ಲ. ಅವನ್ಯಾರೋ ರಫಿಕ್ ಅನ್ನೋನು ದೂರು ಕೊಟ್ಟಿದ್ದಾನೆ. ದೂರು ದಾಖಲಾಗಿದೆ, ಯಾರೋ ರಾಮನಗರ ಉಳಿಸೋಕೆ ಪ್ರಗತಿಪರರು ಪ್ರತಿಭಟನೆ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು, ಅವನ್ಯಾರೋ ರಫಿಕ್ ಅನ್ನೋನು ದೂರು ಕೊಟ್ಟಿದ್ದಾನೆ. ಫೇಸ್ಬುಕ್ ನಲ್ಲಿ ಕವನ ಬರೆದೋನು ಮುಸ್ಲಿಂ, ದೂರು ಕೊಟ್ಟವನೂ ಮುಸ್ಲಿಂ, ಶಾಸಕನೂ ಮುಸ್ಲಿಂ ಆಗಿದ್ದಾನೆ’’ ಎಂದ ಕುಮಾರಸ್ವಾಮಿ, ರಾಮನಗರದಲ್ಲಿ ಸದ್ಯಕ್ಕೆ ನಡೆದಿರುವ ಘಟನೆ ಚಿಕ್ಕದ್ದು. ಸಣ್ಣ ಮಟ್ಟ ದಲ್ಲೇ ಚಿವುಟಿ ಹಾಕಬಹದಿತ್ತು. ಆದರೆ ವಕೀಲರೊಬ್ಬರು ಸಾಮಾಜಿಕ ಜಾಲಾತಾಣದಲ್ಲಿ ಹಾಕಿದ್ದು ಬಹಳ ಗಂಭೀರವಾದದ್ದು. ರಾಜ್ಯದಲ್ಲಿ ಯಾವ ರೀತಿ ಆಡಳಿತ‌ ಇದೆ. ನಾನು ಪಕ್ಷದ ಬಗ್ಗೆ ಹೇಳಲ್ಲ, ಜನರಿಗೆ ರಕ್ಷಣೆ ಕೊಡುವಂತಹದ್ದು ಆಡಳಿತಾಧಿಕಾರಿಗಳ ಕರ್ತವ್ಯ ಎಂದು ಹೇಳಿದರು.

ದೇಶ

ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ ಕಾಂಗ್ರೆಸ್ ಶಾಸಕ ವಿನಯ್!

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿದೆ, ಅದ್ದರಿಂದ ಕೋರ್ಟ್ ಆದೇಶದಂತೆ ಇಂದು ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೋಟ್ ವಿಚಾರಣೆ ಮುಗಿದ ಬಳಿಕ ಶಾಸಕ ವಿನಯ್ ಕುಲಕರ್ಣಿಯವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು, ಇತ್ತೀಚಿಗೆ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಯ ಜಾಮೀನನ್ನು ರದ್ದುಪಡಿಸಿತು, ಒಂದು ವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು,
ಇವರ ಬೆಂಬಲಿಗರು ಸಿಟಿ ಸಿವಿಲ್ ಕೋರ್ಟ್ ಮುಂಭಾಗ ಜಮಾಯಿಸಿದ್ರು, ಪರಪ್ಪನ ಅಗ್ರಹಾರ ಜೈಲಿಗೆ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಕರೆದೊಯ್ದಿದ್ದಾರೆ, ಈ ವೇಳೆ ತಮ್ಮ ನಾಯಕ ಜೈಲು ಸೇರುತ್ತಿರೋದನ್ನು ಕಂಡು ಕೋರ್ಟ್ ಮುಂಭಾಗ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ,

ಏನಿದು ಪ್ರಕರಣ?
9 ವರ್ಷಗಳ ಹಿಂದೆ ಅಂದರೆ 2016 ರ ಜೂನ್ 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್ ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು, ಇದರಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಕೈವಾಡ ಇದೆ ಎಂಬ ಆರೋಪವಿದೆ, ಪ್ರಕರಣಕ್ಕೆ ಸಂಬಂಧಿಸಿದಂತೆ 2020 ನವೆಂಬರ್ 5 ರಂದು ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು, ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು,

Continue Reading

ರಾಜಕೀಯ

ನಾಯಕತ್ವದಿಂದ ಸಿದ್ದರಾಮಯ್ಯ ಕಲಿಯಬೇಕು: ಕೇಂದ್ರ ಸಚಿವ ವಿ.ಸೋಮಣ್ಣ

ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಬದಲು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 8 ದಿನಗಳ ಕಾಲ ನವದೆಹಲಿಗೆ ಭೇಟಿ ನೀಡಿ ಪ್ರಧಾನಿಮಂತ್ರಿಗಳ ಆಡಳಿತ ಶೈಲಿಯನ್ನು ವೀಕ್ಷಿಸಿ, ಕರ್ನಾಟಕದಲ್ಲಿ “ಜನಪರ ವಿಧಾನ” ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ 11 ವರ್ಷಗಳ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತಕ್ಕೆ ಸಿದ್ದರಾಮಯ್ಯ ಶೂನ್ಯ ಅಂಕ ನೀಡಿದ್ದರ ಕುರಿತು ತಿರುಗೇಟು ನೀಡಿದರು.

ಸಿದ್ದರಾಮಯ್ಯ ಅವರ ಹೇಳಿಕೆಗಳು ಅಪ್ರಬುದ್ಧವಾಗಿವೆ. ರಾಜ್ಯದ ಜನರು ಸಿಎಂ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಸಿದ್ದರಾಮಯ್ಯ ಅಂತಹ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿ ಪ್ರಧಾನಿ ಮೋದಿ ಅವರ ನಾಯಕತ್ವ ನೋಡಿ ಕಲಿಯಬೇಕಿದೆ ಎಂದು ಹೇಳಿದರು.

ನಾನು ಕೂಡ ಮೊದಲು ಕಾಂಗ್ರೆಸ್ ಜೊತೆಗಿದ್ದೆ. ಅಂದಿನ ಸಿದ್ದರಾಮಯ್ಯ ಮತ್ತು ಇಂದಿನ ಸಿದ್ದರಾಮಯ್ಯ ನಡುವೆ ಅಗಾಧ ವ್ಯತ್ಯಾಸವಿದೆ. ಕಾಂಗ್ರೆಸ್ ನಾಯಕರಿಗೆ ನೈತಿಕ ಸಮಗ್ರತೆಯ ಕೊರತೆಯಿದೆ. ಮೋದಿಯವರ ಜನಪರ ಆಡಳಿತವನ್ನು ನೋಡಿ, ಅವರು ತಮ್ಮದೇ ಆದ ನ್ಯೂನತೆಗಳ ಬಗ್ಗೆ ಅರಿತುಕೊಳ್ಳುತ್ತಿದ್ದಾರೆ.

ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರುನಾಮಕರಣ ಮಾಡುವ ಬಗ್ಗೆ ನಡೆಯುತ್ತಿರುವ ಚರ್ಚೆ ಕುರಿತು ಮಾತನಾಡಿ, ಇದು ನರಿ ಮತ್ತು ಕುರಿಮರಿಯ ಕಥೆಯಂತೆ ಎಂದು ವ್ಯಂಗ್ಯವಾಡಿದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ ಈ ವಿಷಯದಲ್ಲಿ ಆತುರದಿಂದ ವರ್ತಿಸುವುದಿಲ್ಲ ಎಂದು ನಾನು ನಂಬುತ್ತೇನೆ. ನಾನು ಇನ್ನೂ ಯಾವುದೇ ನಿಲುವನ್ನು ತೆಗೆದುಕೊಂಡಿಲ್ಲ. ಅದು ಪ್ರಯೋಜನಕಾರಿ ಎಂದು ತೋರಿದರೆ, ನಾನು ಅದನ್ನು ಬೆಂಬಲಿಸುತ್ತೇನೆ

Continue Reading

ರಾಜಕೀಯ

ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ದೂರು ದಾಖಲು!

ಬೆಳಗಾವಿ: ಕಳೆದ ಏಪ್ರಿಲ್ 28 ರಂದು ಕಾಂಗ್ರೆಸ್ ಸಮಾವೇಶದ ವೇಳೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಅಧಿಕಾರದ ದರ್ಪ ಹಾಗೂ ವೇದಿಕೆಯಲ್ಲೇ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ,
ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಅವರನ್ನು ಹೊಡೆಯಲೆಂದು ಕೈ ಎತ್ತಿದ್ದರು, ಈ ಘಟನೆ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು ಇದೀಗ ಈ ಘಟನೆಗೆ ಸಂಬಂಧಪಟ್ಟಂತೆ ಆರ್ ಟಿ ಐ ಕಾರ್ಯಕರ್ತ ಭೀಮಪ್ಪ ಗಡಾ ಅವರು ದೂರ ದಾಖಲಿಸಿದ್ದಾರೆ,
ಸಿಎಂ ಸಿದ್ದರಾಮಯ್ಯ ಅವರು ನಾರಾಯಣ ಭರಮನಿ ಅವರ ಮೇಲೆ ದರ್ಪ ತೋರುವ ಮೂಲಕ ಕರ್ತವ್ಯನಿರತ ಅಧಿಕಾರಿಗೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿ ಭೀಮಪ್ಪ ಗಡಾ ಅವರು ಬೆಳಗಾವಿ ನಗರದ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ,
ಕಾನೂನು ಸಚಿವೆ ಹಾಗೂ ಇನ್ನಿತರ ಸಚಿವರ ಎದುರೇ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗೆ ಕೀಳು ಪದ ಬಳಸಿ ಹೊಡೆಯಲೆಂದು ಕೈ ಎತ್ತಿದ್ದು ಸದ್ಯ ಸಿಎಂ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023-132 ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ,
ಭಾರತೀಯ ನ್ಯಾಯ ಸಂಹಿತೆ 2023-132 ರ ಕರ್ತವ್ಯದಲ್ಲಿ ನಿರತರಾಗಿದ್ದ ಯಾವುದೇ ಅಧಿಕಾರಿಯ ಮೇಲೆ ಹಲ್ಲೆ ಅಥವಾ ಬಲ ಪ್ರಯೋಗ ಮಾಡುವ ಯಾವುದೇ ವ್ಯಕ್ತಿಗೆ ಎರಡು ವರ್ಷದ ವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನು ವಿಧಿಸಬಹುದಾಗಿದೆ,

Continue Reading

Trending