Connect with us

ರಾಜಕೀಯ

ಫೇಸ್ಬುಕ್ ನಲ್ಲಿ ಕವನ ಬರೆದೋನು ಮುಸ್ಲಿಂ, ದೂರು ಕೊಟ್ಟವನೂ ಮುಸ್ಲಿಂ, ಶಾಸಕನೂ ಮುಸ್ಲಿಂ’: ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಯಾವನೋ ಒಬ್ಬ ಮತಾಂಧ ಐಎಎಸ್ ಅಧಿಕಾರಿ, ತಾನು ಹೇಳಿದ್ದು ಸರಿ ಅಂತಾನೆ. ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದ ನಂತರ ಎಂಟು ತಿಂಗಳಲ್ಲಿ ದುಡ್ಡು ವಸೂಲಿಗೆ ಇಳಿದುಬಿಟ್ಟಿದ್ದಾರೆ. ಮುಖ್ಯಮಂತ್ರಿ, ಹಾಗೂ ಡಿಸಿಎಂ ಮಧ್ಯ ಜಗಳ ಇದೆ. ಅದಕ್ಕೇ ಇಂಥಾ ಪರಿಸ್ಥಿತಿ ಇದೆ. ಅಪರಾಧಿಗಳ ಮೇಲೆ ಏನೂ ಕ್ರಮ ಕೈಗೊಳ್ತಿಲ್ಲಎಂದು ಮಾಜಿ ಸಿಎಂ ಎಚ್.ಡಿಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ವಕೀಲರ ವಿರುದ್ಧ ದೂರು ದಾಖಲು ವಿಚಾರಕ್ಕೆ ಸಂಬಂಧಿಸಿದಂತೆ ಪಿಎಸ್​ಐ ತನ್ವೀರ್ ಅಮಾನತಿಗೆ ಆಗ್ರಹಿಸಿ ರಾಮನಗರದ ಐಜೂರು ಸರ್ಕಲ್ ಬಳಿ ವಕೀಲರು ಸೋಮವಾರ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಲ್ಲಿನ ಪೊಲೀಸರು ಅಪರಾಧಿಗೆ ಸಾಥ್ ನೀಡುವ ಕೆಲಸ ಮಾಡಿದ್ದಾರೆ. ಅದೇನೋ ಏನೋ ಈ ಕಾಂಗ್ರೆಸ್ ಬಂದಾಗಿನಿಂದ ಹಿಂಗೆ ಆಗುತ್ತಿದೆ. ಯಾವನೋ ಒಬ್ಬ ಮತಾಂಧ ಐಎಎಸ್ ಅಧಿಕಾರಿ… ತಾನು ಹೇಳಿದ್ದು ಸರಿ ಅಂತಾನೆ. ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದ ನಂತರ ಎಂಟು ತಿಂಗಳಲ್ಲಿ ದುಡ್ಡು ವಸೂಲಿಗೆ ಇಳಿದುಬಿಟ್ಟಿದ್ದಾರೆ. ಮುಖ್ಯಮಂತ್ರಿ ಹಾಗೂ ಡಿಸಿಎಂ ಮಧ್ಯ ಜಗಳ ಇದೆ. ಅದಕ್ಕೇ ಇಂಥಾ ಪರಿಸ್ಥಿತಿ ಇದೆ. ಅಪರಾಧಿಗಳ ಮೇಲೆ ಏನೂ ಕ್ರಮ ಕೈಗೊಳ್ತಿಲ್ಲ ಎಂದು ಹೇಳಿದ್ದಾರೆ. ಆಡಳಿತ ನೀವು ನಡೆಸ್ತಿದ್ದೀರೋ ಅಥವಾ ಯಾರು ನಡೆಸುತ್ತಿದ್ದಾರೆ? ಯಾವನೋ ಶಾಸಕ ಅಥವಾ ಜಿಲ್ಲಾ‌ ಮಂತ್ರಿ‌ ನಡೆಸ್ತಿದ್ದಾನಾ? ನೀವು ಅವರ ಕೈಕೆಳಗೆ ಕೆಲಸ ಮಾಡ್ತೀರೋ ಅಥವಾ ಜನರ‌ನ್ನ ರಕ್ಷಿಸ್ತೀರೋ? ಇಂಥ ಕಟ್ಟಡ ಕಟ್ಟಿಸಿದ್ದು ರೌಡಿಗಳ ಜತೆ ಕೆಲಸ ಮಾಡೋಕಲ್ಲ ಎಂದರು.

ಇಂತಹ ಕೆಲಸ ಮಾಡೋಕೆ ನಾನು ಜಿಲ್ಲಾ ಕೇಂದ್ರ ಮಾಡಿದ್ನಾ? ಜಿಲ್ಲಾ ಕೇಂದ್ರ ಬೆಂಗಳೂರಿಗೆ ತಗೊಂಡ್ ಹೋಗಿಬಿಡ್ತಾನಂತೆ. ಅದೇನೋ ಬ್ರ್ಯಾಂಡ್ ಬೆಂಗಳೂರು ಮಾಡ್ತಾನಂತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಉಲ್ಲೇಖಿಸದೆ ಲೇವಡಿ ಮಾಡಿದರು. ಮೊದಲು ಹಿರಿಯ ವಕೀಲರ ಬಳಿ ಘಟನೆಯ ಮಾಹಿತಿ ಪಡೆದ ಹೆಚ್​ಡಿಕೆ, ಪ್ರಕರಣದ ಒಟ್ಟು ಸಾರಾಂಶ ಏನು? ಯಾಕೆ‌ ವಿಚಾರ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಿತು ಎಂದು ತಿಳಿದುಕೊಂಡರು. ಬಳಿಕ ಮಾತನಾಡಿ, ರಾಮನಗರದಲ್ಲಿ ನಡೆದಿರುವ ಘಟನೆ ಚಿಕ್ಕದು. ಆದರೆ, ವಕೀಲರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು ಬಹಳ ಗಂಭೀರವಾದ ವಿಚಾರ. ಇದನ್ನು ಸಣ್ಣ ಮಟ್ಟದಲ್ಲೇ ಚಿವುಟಿ ಹಾಕಬಹುದಿತ್ತು. ರಾಜ್ಯದಲ್ಲಿ ಯಾವ ರೀತಿ ಆಡಳಿತ‌ ಇದೆ? ನಾನು ಪಕ್ಷದ ಬಗ್ಗೆ ಹೇಳಲ್ಲ, ಜನರಿಗೆ ರಕ್ಷಣೆ ಕೊಡುವಂತಹದ್ದು ಆಡಳಿತಾಧಿಕಾರಿಗಳ ಕರ್ತವ್ಯ. ಮಾಧ್ಯಮಗಳಲ್ಲಿ ನೋಡಿ ನಾನು ಅಧಿಕಾರಿಗಳಿಗೆ ಕೇಳಿದೆ. ಅದೇನಿಲ್ಲ, ಅಂಥಾ ಪ್ರಕರಣ‌ ಏನಿಲ್ಲ ಅದನ್ನು ಸರಿ ಪಡಸ್ತೀವಿ ಅಂದಿದ್ರು. ಎಸ್​ಪಿಗೂ ಈ ಬಗ್ಗೆ ಗಮನಕ್ಕೆ ತರಲಾಗಿತ್ತು. ಈ ವಿಚಾರ ಅಧಿವೇಶನದಲ್ಲಿ ಮಾತಾಡ್ತಾರೆ. ಇಂಥಾ ವಿಚಾರಗಳನ್ನು ನನ್ನ ಸ್ವಂತಕ್ಕೆ ಬಳಸಿಕೊಂಡಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. ರೈತರ ಮೇಲೆ ಗೋಲಿಬಾರ್ ಆದ ಮೇಲೆ ದೇವೇಗೌಡರು ಪಾದಯಾತ್ರೆ ಮಾಡಿದ ಇತಿಹಾಸ ಇದೆ. ಮಂಡ್ಯದಲ್ಲೂ ಒಂದು ಘಟನೆ ನಡೆದಿತ್ತು. ಅವತ್ತೂ ಜಿಲ್ಲಾಧಿಕಾರಿಗಳಿಗೆ ಹೇಳಿದ್ದೆ, ಯಾಕಿಷ್ಟು ಪೊಲೀಸರನ್ನು ಕರೆಸಿದ್ದರು ಎಂಬುದಾಗಿ. ಪಾಪ ಆ ಕಾನಸ್ಟೇಬಲ್​​ಗಳಿಗೆ ಊಟ ಇರಲ್ಲ, ಮತ್ತೊಂದಿಲ್ಲ. ಅವರ ಕಷ್ಟನೂ ಇವರಿಗೆ ಗೊತ್ತಾಗಲ್ಲ. ಇಷ್ಟು ಜನ ಪೊಲೀಸರನ್ನು ನೋಡಿ ಆಶ್ಚರ್ಯ ಆಯ್ತು. ನಾನು ರಾಮನಗರಲ್ಲಿದ್ದಾಗ ಇಂಥಾ ಪರಿಸ್ಥಿತಿ ಇರಲಿಲ್ಲ. ಅವನ್ಯಾರೋ ರಫಿಕ್ ಅನ್ನೋನು ದೂರು ಕೊಟ್ಟಿದ್ದಾನೆ. ದೂರು ದಾಖಲಾಗಿದೆ, ಯಾರೋ ರಾಮನಗರ ಉಳಿಸೋಕೆ ಪ್ರಗತಿಪರರು ಪ್ರತಿಭಟನೆ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು, ಅವನ್ಯಾರೋ ರಫಿಕ್ ಅನ್ನೋನು ದೂರು ಕೊಟ್ಟಿದ್ದಾನೆ. ಫೇಸ್ಬುಕ್ ನಲ್ಲಿ ಕವನ ಬರೆದೋನು ಮುಸ್ಲಿಂ, ದೂರು ಕೊಟ್ಟವನೂ ಮುಸ್ಲಿಂ, ಶಾಸಕನೂ ಮುಸ್ಲಿಂ ಆಗಿದ್ದಾನೆ’’ ಎಂದ ಕುಮಾರಸ್ವಾಮಿ, ರಾಮನಗರದಲ್ಲಿ ಸದ್ಯಕ್ಕೆ ನಡೆದಿರುವ ಘಟನೆ ಚಿಕ್ಕದ್ದು. ಸಣ್ಣ ಮಟ್ಟ ದಲ್ಲೇ ಚಿವುಟಿ ಹಾಕಬಹದಿತ್ತು. ಆದರೆ ವಕೀಲರೊಬ್ಬರು ಸಾಮಾಜಿಕ ಜಾಲಾತಾಣದಲ್ಲಿ ಹಾಕಿದ್ದು ಬಹಳ ಗಂಭೀರವಾದದ್ದು. ರಾಜ್ಯದಲ್ಲಿ ಯಾವ ರೀತಿ ಆಡಳಿತ‌ ಇದೆ. ನಾನು ಪಕ್ಷದ ಬಗ್ಗೆ ಹೇಳಲ್ಲ, ಜನರಿಗೆ ರಕ್ಷಣೆ ಕೊಡುವಂತಹದ್ದು ಆಡಳಿತಾಧಿಕಾರಿಗಳ ಕರ್ತವ್ಯ ಎಂದು ಹೇಳಿದರು.

ರಾಜಕೀಯ

DK Shivakumar ಸಿಎಂ ಆಗಬೇಕು: ರಾಮನಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಪರೋಕ್ಷ ಆಗ್ರಹ

ರಾಮನಗರ:
ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಸಿಎಂ ಸ್ಥಾನ ಸಿಗಬೇಕು ಎಂಬ ಆಗ್ರಹವನ್ನು ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “DK Shivakumar ನಮ್ಮ ನಾಯಕರು. ಅವರ ಶ್ರಮ ಹಾಗೂ ಹೋರಾಟಕ್ಕೆ ಪ್ರತಿಫಲ ಸಿಗಬೇಕು. ನಾನು ಈ ಜಿಲ್ಲೆಯಲ್ಲಿ ಹುಟ್ಟಿದ್ದು, ಅವರು ಕೂಡ ನಮ್ಮ ಜನರು. ಅವರಿಗೆ ಗೌರವ ಸಿಗಬೇಕು ಎಂದು ಹೇಳುವುದು ನನ್ನ ಹಕ್ಕು,” ಎಂದು ಸ್ಪಷ್ಟಪಡಿಸಿದರು.

“ನಾನು ಈಗಲೂ ನನ್ನ ಹಿಂದಿನ ಹೇಳಿಕೆಗೆ ಬದ್ಧನಾಗಿದ್ದೇನೆ. DK Shivakumar ಸಿಎಂ ಆಗಬೇಕು ಎಂಬ ಮಾತು ಹಿಂದೆ ಹೇಳಿದ್ದೆ, ಈಗಲೂ ನಿಂತಿದ್ದೇನೆ,” ಎಂದರು.

ಆ.8ರಂದು ಕಾಂಗ್ರೆಸ್ ಹೋರಾಟ:
ಆಗಸ್ಟ್ 8ರಂದು ನಡೆಯಲಿರುವ ಚುನಾವಣಾ ಅಕ್ರಮದ ವಿರುದ್ಧದ ಕಾಂಗ್ರೆಸ್ ಹೋರಾಟ ಕುರಿತು ಮಾತನಾಡಿದ ಅವರು, “ಈ ಹೋರಾಟಕ್ಕೆ ಹೈಕಮಾಂಡ್ ರೂಪುರೇಷೆ ನೀಡಿದೆ. ರಾಷ್ಟ್ರೀಯ ನಾಯಕರು ನೇತೃತ್ವ ವಹಿಸುತ್ತಿದ್ದಾರೆ. ನಮ್ಮ ಜಿಲ್ಲೆಯಿಂದ 20,000 ಮಂದಿ ಪಾಲ್ಗೊಳ್ಳುತ್ತಾರೆ,” ಎಂದು ಹೇಳಿದರು.

ಇವಿಎಂ ಅಕ್ರಮ ಕುರಿತು ಮಾಹಿತಿ ಇನ್ನೂ ಸ್ಪಷ್ಟವಾಗಿಲ್ಲವಾದರೂ, “ನಮ್ಮ ರಾಷ್ಟ್ರ ನಾಯಕರು ಎಲ್ಲಾ ವಿವರಗಳನ್ನು ಬಹಿರಂಗಪಡಿಸುತ್ತಾರೆ,” ಎಂದು ತಿಳಿಸಿದರು.

Continue Reading

ಬೆಂಗಳೂರು

ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ

ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್‌ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್‌ಟಾಪ್ ವಿತರಣೆ ನಡೆಸಲಾಗಿದೆ.

ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.

2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.

Continue Reading

ಬೆಂಗಳೂರು

ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.

2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.

ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್‌ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

Continue Reading

Trending