Connect with us

ರಾಜಕೀಯ

ಮಂತ್ರಿಗಳೇ ಸರ್ಕಾರದ ಮರ್ಯಾದೆ ತೆಗಿತಿದ್ದಾರೆ: ಯು ಟಿ ಖಾದರ್‌ ಹೀಗೆ ಹೇಳಿದ್ಯಾಕೆ?

Published

on

ಬೆಂಗಳೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರೇ ನಿಮ್ಮ ಆಡಳಿತದಲ್ಲಿ ಉತ್ತಮ ಆಡಳಿತ ನಡೆಯುತ್ತಿದೆ. ಕೆಲ ಮಂತ್ರಿಗಳಿಂದ ಸರ್ಕಾರದ ಮರ್ಯಾದೆ ತೆಗೆಯುತ್ತಿದ್ದಾರೆ ಎಂದು ಸದನದಲ್ಲಿ ಸಭಾಧ್ಯಕ್ಷರಾದ ಯು ಟಿ ಖಾದರ್‌ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರ ವಿಧಾನಸಭೆಯಲ್ಲಿ ಗಮನಸೆಳೆಯುವ ಸೂಚನೆ ವೇಳೆ ಸಚಿವರ ಗೈರು ಹಾಜರಿ ಕುರಿತು ಸ್ಪೀಕರ್‌ ಯು ಟಿ ಖಾದರ್‌ ಮಾತನಾಡಿ, ಗಮನ ಸೆಳೆಯುವ ಸೂಚನೆ ವೇಳೆ ಸಚಿವರು ಇಲ್ಲವೆಂದರೆ ಹೇಗೆ ? ಉತ್ತರ ನೀಡಲು ಸಚಿವರು ಇರಬೇಕಲ್ಲವಾ ?ಈ ವೇಳೆ ಸಾರಿಗೆ, ತೋಟಗಾರಿಕೆ, ಕಂದಾಯ, ಲೋಕೋಪಯೋಗಿ ಸಚಿವರ್ಯಾರೂ ಇಲ್ಲ. ಆಗ ಮಂತ್ರಿಗಳನ್ನ ಕರೆಸಿ, ಇಲ್ಲವೆಂದರೆ ಗಮನ ಸೆಳೆಯುವ ಸೂಚನೆ ಬೇಡ. ಶಾಸಕರ ಪ್ರಶ್ನೆಗೆ ಮಂತ್ರಿಗಳು ಉತ್ತರಿಸಬೇಕು. ಮಂತ್ರಿಗಳು ಉತ್ತರಿಸಿದಾಗ ಮಾತ್ರ ಸದನದಲ್ಲಿ ಶಾಸಕರು ಕೂರುತ್ತಾರೆ ಎಂದು ಅಸಮಾಧಾನವನ್ನ ವ್ಯಕ್ತಪಡಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಸಚೇತಕರಾದ ಎನ್. ರವಿಕುಮಾರ್ ಹಾಗೂ ಇತರ ಸದಸ್ಯರು ನಿಯಮ 72 ರಡಿ ನೀಡಿದ್ದ ಸೂಚನೆಗೆ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ , ರಾಜ್ಯದಲ್ಲಿ ಅಪರಾಧಗಳನ್ನು ತಡೆಗಟ್ಟಲು ಹಲವಾರು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ರಾತ್ರಿ ಗಸ್ತಿಗಾಗಿ ಇ- ಬೀಟ್, ಜೈಲಿನಿಂದ ಹೊರ ಬರುತ್ತಿರುವ ಆರೋಪಿಗಳ ಮೇಲೆ ನಿಗಾ, ನಿಯಮಿತವಾಗಿ ರೌಡಿ ಪೆರೇಡ್, ಮಟ್ಕಾ, ಜೂಜಾಟ, ಅಕ್ರಮ ಮದ್ಯ ಮಾರಾಟ ವಿರುದ್ಧ ನಿರಂತರ ದಾಳಿ ನಡೆಸುವಿಕೆ, ಘೋರ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ಸಿಗದಂತೆ ಮಾಡುವ ನಿಟ್ಟಿನಲ್ಲಿ ನ್ಯಾಯಾಲಯಕ್ಕೆ ಶೀಘ್ರವಾಗಿ ಅಂತಿಮ ವರದಿ ಸಲ್ಲಿಸುವುದು, ಸಿಸಿ ಟಿವಿ ಕ್ಯಾಮೆರಾಗಳ ಅಳವಡಿಕೆ, ಮಹಿಳಾ ಸುರಕ್ಷತೆಗೆ ರಾಣಿ ಚೆನ್ನಮ್ಮ ಪಡೆ ಸ್ಥಾಪನೆ, ಸುಳ್ಳು ಸುದ್ದಿ ದ್ವೇಷದ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಪ್ರಕರಣ ದಾಖಲು ಸೇರಿದಂತೆ ರಾಜ್ಯದಲ್ಲಿ ಸೈಬರ್, ಆರ್ಥಿಕ, ಮಾದಕ ದ್ರವ್ಯಗಳ ಅಪರಾಧವನ್ನು ತಡೆಗಟ್ಟಲು ರಾಜ್ಯಾದ್ಯಂತ 45 CEN ಪೊಲೀಸ್ ಠಾಣೆಗಳನ್ನು ಪ್ರಾರಂಭಿಸಲಾಗಿದೆ ಎಂದರು. ಬೆಂಗಳೂರು ನಗರದಲ್ಲಿ ಸೇಫ್ ಸಿಟಿ ಘಾರ್ ಸೇಫ್ಟಿ ಆಫ್ ವುಮೆನ್ ಯೋಜನೆಯಡಿ ಮಹಿಳೆಯರ ಸುರಕ್ಷತೆಗಾಗಿ ನಗರದ 1640 ಸ್ಥಳಗಳಲ್ಲಿ 4100 ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಹಾಗೂ 96 ವೀಕ್ಷಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸ್ಪಂದನ ಸಹಾವಾಣಿ ಜೊತೆಗೆ ಮಹಿಳಾ ಸಹಾಯವಾಣಿ- 1091 ಸಹ ಕಾರ್ಯನಿರ್ವಹಿಸುತ್ತಿದೆ. ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗಾಗಿ ಪಿಂಕ್‌ ಹೊಯ್ಸಳ ಮತ್ತು 112 ಗಸ್ತು ವಾಹನಗಳು ದಿನದ 24 ಗಂಟೆಗಳೂ ಕೆಲಸ ನಿರ್ವಹಿಸುತ್ತವೆ ಎಂದರು. ಸರ್ಕಾರದ ಪಂಚ ಗ್ಯಾರೆಂಟಿಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಯುವನಿಧಿ ಯೋಜನೆಗಳಿಂದ ರಾಜ್ಯದ ಸುಮಾರು ನಾಲ್ಕೂವರೆ ಕೋಟಿ ಜನ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ತಿಳಿಸಿದರು. ದಿನಬಳಕೆ ವಸ್ತು , ವಿದ್ಯುತ್ ದರ ಬೆಲೆ ಏರಿಕೆ, ನಿರುದ್ಯೋಗ, ಬಡತನ ನಿವಾರಣೆ, ಮಹಿಳಾ ಸಬಲೀಕರಣ ಮುಂತಾದವುಗಳನ್ನು ಗಮನದಲ್ಲಿಟ್ಟುಕೊಂಡು ಈ 5 ಗ್ಯಾರೆಂಟಿಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಯಾವುದೇ ಕಾರಣಕ್ಕೂ ನೀಡಿರುವ ಗ್ಯಾರೆಂಟಿಗಳನ್ನು ಹಿಂಪಡೆಯುವ ಪ್ರಶ್ನೆಯೇ ಸರ್ಕಾರಕ್ಕಿಲ್ಲ ಎಂದರು.

ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ವರೆಗೆ ಗರಿಷ್ಠ ಬಳಕೆ ಮಿತಿಗೆ ಒಳಪಟ್ಟು ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದರಿಂದ ರಾಜ್ಯದ 1.60 ಕೋಟಿ ಗ್ರಾಹಕರು ಪ್ರಯೋಜನ ಪಡೆದಿದ್ದಾರೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಅರ್ಹ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ ಗಳನ್ನು ನೀಡಲಾಗುತ್ತಿದೆ‌. ಈ ಯೋಜನೆಗೆ 17500 ಕೋಟಿ ರೂ ನಿಗದಿಪಡಿಸಲಾಗಿದ್ದು, ನೋಂದಾಯಿತ 1.17 ಕೋಟಿ ಮಹಿಳಾ ಫಲಾನುಭವಿಗಳಿಗೆ ಇದೇ ಜನವರಿ ವರೆಗೆ ಒಟ್ಟು 11037 ಕೋಟಿ ರೂಗಳನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೊಳಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ರಾಜ್ಯದ 3.5 ಕೋಟಿ ಮಹಿಳೆಯರು ಇದರ ಲಾಭ ಪಡೆದುಕೊಂಡಿದ್ದಾರೆ. ಧಾರ್ಮಿಕ ಕೇಂದ್ರಗಳಿಗೂ ಈ ಯೋಜನೆಗೆ ಯಿಂದ ಪುಷ್ಠಿ ದೊರೆತಂತಾಗಿದೆ. ಅಲ್ಲದೆ ಇದರಿಂದ ಉದ್ಯೋಗ ಸೃಷ್ಠಿಯಾಗಿದೆ ಎಂದರು. ಯುವನಿಧಿ ಯೋಜನೆಯಡಿ 2022-23 ನೇ ಸಾಲಿನಲ್ಲಿ ಉತ್ತೀರ್ಣರಾದ ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಕ್ರಮವಾಗಿ ಮಾಸಿಕ 3000ರೂ ಮತ್ತು 1,500 ರೂ ಗಳ ನಿರುದ್ಯೋಗ ಭತ್ಯೆಯನ್ನು ಎರಡು ವರ್ಷಗಳವರೆಗೆ ಅಥವಾ ಎರಡು ವರ್ಷದೊಳಗೆ ಉದ್ಯೋಗ ಪಡೆಯುವರೆಗೆ ಸರ್ಕಾರ ಪಾವತಿಸುತ್ತಿದೆ. ಒಟ್ಟಾರೆಯಾಗಿ ಈ ಯೋಜನೆಗಳು ರಾಜ್ಯದ 7 ಕೋಟಿ ಜನರ ಬದುಕಿನಲ್ಲಿ ಬದಲಾವಣೆ ತಂದಿದೆ ಎಂದು ಹೇಳಿದರು.

ದೇಶ

“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್‌ ಟಾಂಗ್‌, ದಾವಣಗೆರೆ ರಾಜಕೀಯ ಕುತೂಹಲ

Published

on

By

ದಾವಣಗೆರೆ ದಕ್ಷಿಣ ಉಪಚುನಾವಣೆ ರಾಜಕೀಯ ಕಣ ದಿನೇದಿನೇ ರಂಗೇರುತ್ತಿದ್ದು, ಸಚಿವ ಜಮೀರ್‌ ಅಹ್ಮದ್‌ ಖಾನ್ ಅವರ ಆಗಮನದಿಂದ ಹೊಸ ತಿರುವು ಪಡೆದುಕೊಂಡಿದೆ. ಹಲವು ದಿನಗಳಿಂದ ಮುಂದುವರಿದಿದ್ದ ಭಿನ್ನಾಭಿಪ್ರಾಯಗಳ ನಡುವೆಯೇ ಅವರು ಕೊನೆಗೂ ದಾವಣಗೆರೆಗೆ ಭೇಟಿ ನೀಡಿ ಪ್ರಚಾರ ಆರಂಭಿಸಿದ್ದಾರೆ.

ಟಿಕೆಟ್‌ ಹಂಚಿಕೆ ವೇಳೆ ಉಂಟಾದ ಗಲಾಟೆ ಸಂದರ್ಭದಲ್ಲಿ ಎಸ್‌ಎಸ್‌ ಮಲ್ಲಿಕಾರ್ಜುನ್ ಅವರು “ಯಾರ್ರಿ ಜಮೀರ್‌ ದಾವಣಗೆರೆ ಬಗ್ಗೆ ಮಾತನಾಡಲು” ಎಂದು ಹೇಳಿದ್ದರಿಂದ ವಿವಾದ ಸೃಷ್ಟಿಯಾಗಿತ್ತು. ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೂ ಜಮೀರ್‌ ಅಸಮಾಧಾನಗೊಂಡಿದ್ದರು.

ಆದರೆ ಇದೀಗ ರಾಜಕೀಯ ವಾತಾವರಣ ಬದಲಾಗಿದ್ದು, ಜಮೀರ್‌ ಅವರನ್ನು ಸ್ವತಃ ಮಲ್ಲಿಕಾರ್ಜುನ್‌ ಅವರು ಸ್ವಾಗತಿಸಿ ಪ್ರಚಾರಕ್ಕೆ ಕರೆಸಿಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್‌, “ನಾವಿಬ್ಬರೂ ಸ್ನೇಹಿತರು. ಯಾವುದೇ ಬೇಸರ ಇಲ್ಲ. ಸಿಟ್ಟಿನಲ್ಲಿ ಹೇಳಿದ ಮಾತು ಅಷ್ಟೇ,” ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಅವರು ಪರೋಕ್ಷವಾಗಿ ಟಾಂಗ್ ಕೊಡುತ್ತಾ, “ನನ್ನ ಕ್ಷೇತ್ರ ಚಾಮರಾಜಪೇಟೆಗೆ ಬಂದು ಯಾರಾದರೂ ಮಾತನಾಡಿದರೆ ನಾನು ಸುಮ್ಮನೆ ಇರ್ತಿನಾ?” ಎಂದು ಪ್ರತಿಕ್ರಿಯೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್‌, “ಈಗ ಎಲ್ಲವೂ ಬಗೆಹರಿದಿದೆ. ನಾವು ಬಹಳ ವರ್ಷಗಳಿಂದ ಸ್ನೇಹಿತರು,” ಎಂದು ಹೇಳಿದರು.

ಈ ಬೆಳವಣಿಗೆ ದಾವಣಗೆರೆ ರಾಜಕೀಯದಲ್ಲಿ ಹೊಸ ಚೈತನ್ಯ ಮೂಡಿಸಿದ್ದು, ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್‌ ಬಲ ಹೆಚ್ಚಿದಂತೆ ಕಾಣುತ್ತಿದೆ.

Continue Reading

ದೇಶ

ಜಮೀರ್ ಅಹ್ಮದ್‌ಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ!

Published

on

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನಪ್ರಿಯ ನಾಯಕನಾಗಿ ಹೊರಹೊಮ್ಮುತ್ತಿರುವ ವಸತಿ ಸಚಿವ Zameer Ahmed Khan ಅವರಿಗೆ ಎಐಸಿಸಿಯಲ್ಲಿ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಅವರ ಪ್ರಭಾವವನ್ನು ಗಮನಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ K. C. Venugopal ಈ ನಿರ್ಧಾರ ಕೈಗೊಂಡಿದ್ದಾರೆ.

ಪ್ರಸ್ತುತ ಕೇರಳ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಜಮೀರ್ ಅಹ್ಮದ್, ರಾಜ್ಯದ ಉಪಚುನಾವಣೆಗಳ ಪ್ರಚಾರಕ್ಕೆ ಬರಲು ಸಾಧ್ಯವಾಗದೇ ಬ್ಯುಸಿಯಾಗಿದ್ದಾರೆ. ಕೇರಳದ ಹಲವು ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳು ನಿರ್ಣಾಯಕವಾಗಿರುವ ಹಿನ್ನೆಲೆಯಲ್ಲಿ, ಅವರನ್ನು ಅಲ್ಲಿಯೇ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಭಾಗವಹಿಸಲು ಜಮೀರ್ ಅವರಿಗೆ ಆಹ್ವಾನ ನೀಡಲಾಗಿದ್ದರೂ, ಕೇರಳದ ಪ್ರಚಾರ ಕಾರ್ಯದಿಂದ ಬಿಡುವಿಲ್ಲ ಎಂಬುದಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ Siddaramaiah ಸೂಚನೆ ಇದ್ದರೂ, ಎಐಸಿಸಿ ನಾಯಕತ್ವದಿಂದಲೇ ತಡೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದಕ್ಕೂ ನಡುವೆ, ಎಐಸಿಸಿ ಅಲ್ಪಸಂಖ್ಯಾತ ಘಟಕದ ಸಲಹಾ ಪರಿಷತ್ತಿನ ಸದಸ್ಯರಾಗಿ ಜಮೀರ್ ಅಹ್ಮದ್ ಅವರನ್ನು ನೇಮಿಸಲಾಗಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆಲುವಿಗೆ ಕೇರಳದಲ್ಲಿ ಹೆಚ್ಚಿನ ಮಹತ್ವ ನೀಡಲಾಗುತ್ತಿದ್ದು, ಭವಿಷ್ಯದಲ್ಲಿ ನಾಯಕತ್ವದ ಮಟ್ಟದಲ್ಲೂ ಬದಲಾವಣೆ ಸಾಧ್ಯತೆಗಳಿವೆ ಎಂಬ ಚರ್ಚೆ ನಡೆಯುತ್ತಿದೆ.

ಅಲ್ಪಸಂಖ್ಯಾತ ಸಮುದಾಯದ ನಾಯಕರನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವ ಉದ್ದೇಶದಿಂದ ಈ ನೇಮಕಾತಿ ನಡೆದಿದ್ದು, ಜಮೀರ್ ಅವರ ಜನಪ್ರಿಯತೆ ದಿನೇದಿನೇ ಏರುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ. ರಾಜ್ಯದಲ್ಲೂ ಉಪಚುನಾವಣೆಗಳ ನಡುವೆ ಅವರ ಗೈರುಹಾಜರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.

Continue Reading

ದೇಶ

ಸೋಮಣ್ಣ ವಿರುದ್ಧ ಸಿಎಂ ಸಿಡಿತ: “ಕೆಲಸವಿಲ್ಲದ ಮಂತ್ರಿ!”

Published

on

By

ಬಾಗಲಕೋಟೆ: ಬಿಜೆಪಿ ನಾಯಕ V. Somanna ವಿರುದ್ಧ ಮುಖ್ಯಮಂತ್ರಿ Siddaramaiah ತೀವ್ರ ವಾಗ್ದಾಳಿ ನಡೆಸಿದ್ದು, “ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದ ಮಂತ್ರಿ, ಅವರಿಗೆ ಯಾವುದೇ ಕಡತ ಹೋಗುವುದಿಲ್ಲ” ಎಂದು ಟೀಕಿಸಿದರು.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಸಿಎಂ, “ನಾವು ಸೋಲುತ್ತೇವೆ ಎಂಬ ಭಯದಿಂದ ಬಿಜೆಪಿ ನಾಯಕರು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸೋಮಣ್ಣ ಅವರಿಗೆ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಸಮಯವಿಲ್ಲ” ಎಂದು ಕಿಡಿಕಾರಿದರು. ಮುಖ್ಯಮಂತ್ರಿಗಳ ಸ್ಥಾನ ಕುರಿತು ಬಿಜೆಪಿ ನಾಯಕರು ಮಾತನಾಡುವುದಕ್ಕೆ ಯಾವುದೇ ಅರ್ಥವಿಲ್ಲ, ಅವರು ಕಾಂಗ್ರೆಸ್ ಹೈಕಮಾಂಡ್ ಅಲ್ಲ ಎಂದರು.

ಬಿಜೆಪಿಯ ಮೇಲೆ ವಾಗ್ದಾಳಿ ಮುಂದುವರೆಸಿದ ಸಿದ್ದರಾಮಯ್ಯ, “ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಮಾತಿನಲ್ಲಿ ಸತ್ಯವಿಲ್ಲ, ನಡೆದಲ್ಲಿ ನಂಬಿಕೆ ಇಲ್ಲ” ಎಂದು ಟೀಕಿಸಿದರು. ಜೊತೆಗೆ, ಪಕ್ಷದಿಂದ ಉಚ್ಛಾಟನೆಯಾದ Basanagouda Patil Yatnal ಅವರನ್ನು ಮತ್ತೆ ಪ್ರಚಾರಕ್ಕೆ ಕರೆತಂದು ಬಳಸಿಕೊಳ್ಳುತ್ತಿರುವುದು ಬಿಜೆಪಿ ದ್ವಂದ್ವ ನೀತಿಗೆ ಉದಾಹರಣೆ ಎಂದು ಹೇಳಿದರು.

ಇಂಧನ ಹಾಗೂ ಗ್ಯಾಸ್ ಸಿಲಿಂಡರ್ ಸಮಸ್ಯೆ ಕುರಿತು ಮಾತನಾಡಿದ ಅವರು, “ಇದು ಕೇಂದ್ರ ಸರ್ಕಾರದ ಜವಾಬ್ದಾರಿ. ರಾಜ್ಯ ಸರ್ಕಾರ ಕೇವಲ ವಿತರಣೆಯನ್ನು ಮಾಡುತ್ತದೆ” ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ Narendra Modi ಅವರ ಮನೆಗೆ ಮುತ್ತಿಗೆ ಹಾಕಬೇಕು ಎಂಬ ಹೇಳಿಕೆಯನ್ನೂ ನೀಡಿದರು.

ಇನ್ನೂ, ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ, Rahul Gandhi, Sonia Gandhi, Mallikarjun Kharge ಮತ್ತು Priyanka Gandhi ಅವರೇ ಪಕ್ಷದ ಹೈಕಮಾಂಡ್ ಎಂದು ಹೇಳಿದರು.

ಒಟ್ಟಿನಲ್ಲಿ, ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದೆ.

Continue Reading

Trending