Connect with us

Blog

ಮನಸ್ಸಿನಲಿ ಬಹಳ ನೋವಿದೆ ರಾಷ್ಟ್ರದ ಹಿತಕ್ಕಾಗಿ ಎಲ್ಲವನ್ನು ಸಹಿಸಿಕೊಂಡಿದ್ದೇನೆ: ಚುನಾವಣೆ ನಂತರ ಹೇಳುತ್ತೇನೆ; ಸಿ.ಟಿ ರವಿ

Published

on

ಮನಸ್ಸಿನಲಿ ಬಹಳ ನೋವಿದೆ ರಾಷ್ಟ್ರದ ಹಿತಕ್ಕಾಗಿ ಎಲ್ಲವನ್ನು ಸಹಿಸಿಕೊಂಡಿದ್ದೇನೆ: ಚುನಾವಣೆ ನಂತರ ಹೇಳುತ್ತೇನೆ; ಸಿ.ಟಿ ರವಿ
ಮನಸ್ಸಿನಲಿ ಬಹಳ ನೋವಿದೆ ರಾಷ್ಟ್ರದ ಹಿತಕ್ಕಾಗಿ ಎಲ್ಲವನ್ನು ಸಹಿಸಿಕೊಂಡಿದ್ದೇನೆ: ಚುನಾವಣೆ ನಂತರ ಹೇಳುತ್ತೇನೆ; ಸಿ.ಟಿ ರವಿ

ಚಿಕ್ಕಮಗಳೂರು: ಮನಸ್ಸಿನಲ್ಲಿ ಬಹಳ ನೋವುಗಳಿವೆ. ರಾಷ್ಟ್ರದ ಹಿತಕ್ಕಾಗಿ ಎಲ್ಲವನ್ನು ನುಂಗಿಕೊಂಡಿದ್ದೇನೆ. ಲೋಕಸಭೆ ಚುನಾವಣೆ ಬಳಿಕ ಎಲ್ಲವನ್ನೂ ಜನರ ಮುಂದಿಡುತ್ತೇನೆ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿದರು. ವಿಧಾನಸಭೆ ಚುನಾವಣೆಯಲ್ಲಿ ಯಾರು ಹೇಗೆ ನಡೆದುಕೊಂಡರು ಎಂದು ಗೊತ್ತಿದೆ. ಹೆಚ್ಚು ದಿನ ಮನಸ್ಸಿನಲ್ಲೇ ಇಟ್ಟು ಕೊಳ್ಳಲಾಗದು ಅವುಗಳನ್ನು ಹೇಳಲೇಬೇಕು. ವೈಯಕ್ತಿಕ ನೆಲೆಯಲ್ಲಿ ಲೋಕಸಭೆ ಚುನಾವಣೆ ನಂತರ ಮಾಡುತ್ತೇನೆ ಎಂದು ಯಾರ ಹೆಸರನ್ನೂ ಹೇಳದೆ ಸ್ವಪಕ್ಷದವರ ವಿರುದ್ಧ ಸುದ್ದಿಗಾರರ ಬಳಿ ಅಸಮಾಧಾನ ವ್ಯಕ್ತಪಡಿಸಿದರು. ಸದ್ಯಕ್ಕೆ ರಾಷ್ಟ್ರದ ಹಿತ ಮುಖ್ಯ, ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿ ಆಗಬೇಕು. ಅದಷ್ಟೇ ನಮ್ಮ ಮುಂದಿನ ಗುರಿ. ಸಮಯ ಬಂದಾಗ ಬೇರೆ ವಿಷಯಗಳನ್ನು ಹೇಳುತ್ತೇನೆ ಎಂದರು. ವೈಯಕ್ತಿಕ ನೆಲೆಯಲ್ಲಿ ರಾಜಕಾರಣ ಮಾಡೋದಾದ್ರೂ ಕೇವಲ ಲೋಕಸಭಾ ಚುನಾವಣೆ ನಂತರ. ಈಗೇನಿದ್ರೂ ಪಕ್ಷ ಹಿತ ಮತ್ತು ರಾಷ್ಟ್ರ ಹಿತಕ್ಕಾಗಿ ಬಹಳ ಸಂಗತಿಗಳನ್ನ ನುಂಗಿಕೊಳ್ಳಬೇಕಾಗುತ್ತದೆ. ಈ ವಿಷಯಗಳನ್ನು ಬಹಳ ದಿನ ಹೊಟ್ಟೆಯೊಳಗೆ ಇಟ್ಕೊಳ್ಳೋಕೆ ಆಗಲ್ಲ. ಸಮಯ, ಸಂದರ್ಭ ಬಂದಾಗ ಹೇಳಬೇಕಾಗುತ್ತೆ, ಆಗ ಜನರ ಮುಂದೆ ಹೇಳುವೆ ಎಂದರು.

Blog

ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ: ಸತ್ಯ ಹೊರಬರಲಿದೆ, ನಾನು ತಪ್ಪು ಮಾಡಿಲ್ಲ

Published

on

ಬೆಳ್ತಂಗಡಿ, ದಕ್ಷಿಣ ಕನ್ನಡ: ರಾಜ್ಯಸಭೆ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡ್ಡಮತದಾನದ ಹಿಂದೆ ತಾವಿಲ್ಲ ಎಂದು ಪುನರುಚ್ಚರಿಸಿದಷ್ಟೇ ಅಲ್ಲದೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಯಾವುದೇ ವ್ಯವಹಾರಿಕ ಅಥವಾ ಆತ್ಮೀಯ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ಅಲ್ಲಿಂದ ಮಂಗಳೂರಿಗೆ ಬಂದು ಧರ್ಮಸ್ಥಳದಲ್ಲಿ ದೇವರ ದರ್ಶನ ಪಡೆದಿದ್ದೇನೆ ಎಂದು ತಿಳಿಸಿದ ವಿಜಯೇಂದ್ರ, ರಾಜ್ಯಸಭೆ ಚುನಾವಣೆಯಲ್ಲಿ ನಡೆದ ಅಡ್ಡಮತದಾನದಿಂದ ಲಕ್ಷಾಂತರ ಬಿಜೆಪಿ ಕಾರ್ಯಕರ್ತರಿಗೆ ನೋವಾಗಿದೆ. ಈ ಬೆಳವಣಿಗೆಯಿಂದ ತಮಗೂ ಮಾನಸಿಕವಾಗಿ ಬೇಸರವಾಗಿದೆ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ಸತ್ಯಾಸತ್ಯತೆ ಬಹಿರಂಗಪಡಿಸುವ ಉದ್ದೇಶದಿಂದ ಶಾಸಕರಿಂದ ಆಣೆ-ಪ್ರಮಾಣ ಮಾಡಿಸಬೇಕೆಂದು ಭಾವನಾತ್ಮಕವಾಗಿ ಹೇಳಿದ್ದೆ. ಆದರೆ ಪಕ್ಷದ ಹಿರಿಯ ನಾಯಕರು ಆ ಹಂತಕ್ಕೆ ಹೋಗುವುದು ಬೇಡ ಎಂದು ಸಲಹೆ ನೀಡಿದ ಹಿನ್ನೆಲೆಯಲ್ಲಿ ಆ ನಿರ್ಧಾರವನ್ನು ಕೈಬಿಟ್ಟಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಶೀರ್ವಾದದಿಂದ ಪಕ್ಷದ ರಾಜ್ಯಾಧ್ಯಕ್ಷನ ಜವಾಬ್ದಾರಿ ಸಿಕ್ಕಿದೆ. ಅಂತಹ ಸಂದರ್ಭದಲ್ಲಿ ಪಕ್ಷಕ್ಕೆ ದ್ರೋಹ ಮಾಡುವ ಅಥವಾ ಕೀಳುಮಟ್ಟದ ರಾಜಕೀಯ ಮಾಡುವ ಪ್ರಶ್ನೆಯೇ ಇಲ್ಲ ಎಂದು ವಿಜಯೇಂದ್ರ ಹೇಳಿದರು.

ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ವಿವಿಧ ಹೆಸರುಗಳನ್ನು ತೇಲಿಬಿಟ್ಟು ಬಿಜೆಪಿ ಶಾಸಕರ ಬಗ್ಗೆ ಅನುಮಾನ ಮೂಡಿಸುವ ಪ್ರಯತ್ನ ಮಾಡುತ್ತಿದೆ. ನಮ್ಮೊಳಗೂ ಅನುಮಾನದ ವಾತಾವರಣ ನಿರ್ಮಾಣವಾಗಿರುವುದು ನಿಜ. ಆದರೆ ಸತ್ಯ ಇಂದು ಅಲ್ಲದಿದ್ದರೂ ನಾಳೆ ಹೊರಬರುತ್ತದೆ. ಕೇಂದ್ರ ನಾಯಕತ್ವಕ್ಕೂ ಎಲ್ಲ ಮಾಹಿತಿಯಿದ್ದು, ನನಗೆ ಯಾವುದೇ ತನಿಖಾ ವರದಿ ಬಂದಿಲ್ಲ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಚುನಾವಣೆಗೆ ಮೊದಲೇ ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದರು. ಅವರ ಅಭಿಪ್ರಾಯವನ್ನು ಉತ್ತಮ ಉದ್ದೇಶದಿಂದ ನೀಡಲಾಗಿದೆ ಎಂದು ಸ್ವಾಗತಿಸುತ್ತೇನೆ ಎಂದ ವಿಜಯೇಂದ್ರ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಆರೋಪಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡುವುದಾಗಿ ಹೇಳಿದರು.

ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಗೆ ಮತ್ತಷ್ಟು ಬಲ ತುಂಬಲಾಗುವುದು. ಬಿಡದಿ ಭೂಸ್ವಾಧೀನ ಪ್ರಕರಣದಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದೆ ಹಾಗೂ ಮತದಾರರ ಪಟ್ಟಿಯಲ್ಲಿ ಅಕ್ರಮ ಹೆಸರು ಸೇರ್ಪಡೆ ವಿಚಾರದಲ್ಲಿ ಕಾಂಗ್ರೆಸ್ ಅಪಪ್ರಚಾರ ನಡೆಸುತ್ತಿದೆ ಎಂದು ಅವರು ಆರೋಪಿಸಿದರು.

“ನಾನು ಯಾವುದೇ ತಪ್ಪು ಮಾಡಿಲ್ಲ. ಒಬ್ಬ ಭಕ್ತನಾಗಿ ಧರ್ಮಸ್ಥಳಕ್ಕೆ ಬಂದಿದ್ದೇನೆ. ಸಮಯ ಬಂದಾಗ ಎಲ್ಲ ಸತ್ಯವೂ ಹೊರಬರುತ್ತದೆ. ಎಲ್ಲವನ್ನೂ ಕಾಲವೇ ನಿರ್ಧರಿಸುತ್ತದೆ” ಎಂದು ವಿಜಯೇಂದ್ರ ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ಯಶಪಾಲ್ ಸುವರ್ಣ, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ ಸೇರಿದಂತೆ ಕರಾವಳಿ ಭಾಗದ ಹಲವು ಬಿಜೆಪಿ ಶಾಸಕರು ಹಾಗೂ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

Continue Reading

Blog

ಕಡಿಮೆ ಕ್ಯಾಲೋರಿ, ಹೆಚ್ಚು ಪೋಷಕಾಂಶ: ರಂಬುಟಾನ್ ಹಣ್ಣಿನತ್ತ ಜನರ ಒಲವು

Published

on

By

ರಂಬುಟಾನ್ ಹಣ್ಣಿನತ್ತ ಜನರ ಒಲವು

ಆರೋಗ್ಯಕರ ಆಹಾರಗಳತ್ತ ಜನರ ಆಸಕ್ತಿ ಹೆಚ್ಚುತ್ತಿರುವ ಹಿನ್ನೆಲೆ, ಉಷ್ಣವಲಯದ ಹಣ್ಣಾದ ರಂಬುಟಾನ್ ತನ್ನ ಪೌಷ್ಟಿಕಾಂಶದ ಗುಣಗಳಿಂದ ಗಮನ ಸೆಳೆಯುತ್ತಿದೆ. ಕಡಿಮೆ ಕ್ಯಾಲೋರಿ, ಹೆಚ್ಚಿನ ನೀರಿನ ಅಂಶ ಮತ್ತು ಸಮೃದ್ಧ ಪೋಷಕಾಂಶಗಳನ್ನು ಹೊಂದಿರುವ ಈ ಹಣ್ಣು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವವರಿಗೆ ಉತ್ತಮ ಆಯ್ಕೆಯಾಗಿ ಪರಿಗಣಿಸಲಾಗುತ್ತಿದೆ.
ತಜ್ಞರ ಪ್ರಕಾರ, ರಂಬುಟಾನ್‌ನಲ್ಲಿ ಸಮೃದ್ಧವಾಗಿರುವ ವಿಟಮಿನ್ ಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದರ ಜೊತೆಗೆ ಶಕ್ತಿಶಾಲಿ ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಇದು ಜೀವಕೋಶಗಳನ್ನು ಹಾನಿಯಿಂದ ರಕ್ಷಿಸಿ, ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ರಂಬುಟಾನ್ ಹಣ್ಣಿನ ಆರೋಗ್ಯ ಪ್ರಯೋಜನಗಳು – ಮುಖ್ಯಾಂಶಗಳುಆರೋಗ್ಯಕರ ಆಹಾರ ಪದ್ಧತಿಯಲ್ಲಿ ರಂಬುಟಾನ್ ಸೇರಿಸಿಕೊಳ್ಳುವುದರಿಂದ ಹಲವು ಪೌಷ್ಟಿಕ ಲಾಭಗಳನ್ನು ಪಡೆಯಬಹುದು.ರಂಬುಟಾನ್ ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ನೀರಿನ ಅಂಶ ಹೊಂದಿರುವ ಪೌಷ್ಟಿಕ ಹಣ್ಣು.ವಿಟಮಿನ್ ಸಿ ಸಮೃದ್ಧವಾಗಿದ್ದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸಿ ಜೀವಕೋಶಗಳನ್ನು ರಕ್ಷಿಸುತ್ತದೆ.ಫೈಬರ್‌ ಅಂಶ ಜೀರ್ಣಕ್ರಿಯೆ ಸುಧಾರಿಸಿ ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.ಆರೋಗ್ಯಕರ ಕರುಳಿನ ಸೂಕ್ಷ್ಮಜೀವಿಗಳ ಬೆಳವಣಿಗೆಗೆ ನೆರವಾಗುತ್ತದೆ.ಹೊಟ್ಟೆ ತುಂಬಿದ ಅನುಭವ ನೀಡುವ ಮೂಲಕ ತೂಕ ನಿಯಂತ್ರಣಕ್ಕೆ ಸಹಕಾರಿ.ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸಿ ಚರ್ಮದ ಆರೋಗ್ಯ ಕಾಪಾಡಲು ಸಹಾಯ ಮಾಡುತ್ತದೆ.ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್, ತಾಮ್ರ ಮತ್ತು ಪೊಟ್ಯಾಸಿಯಮ್ ಖನಿಜಗಳು ಮೂಳೆ, ಸ್ನಾಯು ಮತ್ತು ಹೃದಯದ ಆರೋಗ್ಯಕ್ಕೆ ನೆರವಾಗುತ್ತವೆ.ಹಣ್ಣಿನ ಬಿಳಿ ತಿರುಳು ಮಾತ್ರ ಸೇವನೆಗೆ ಯೋಗ್ಯ.ಸಿಪ್ಪೆ ಮತ್ತು ಬೀಜಗಳನ್ನು ಹಸಿಯಾಗಿ ತಿನ್ನಬಾರದು; ಅವು ವಿಷಕಾರಿ ಪರಿಣಾಮ ಉಂಟುಮಾಡುವ ಸಾಧ್ಯತೆ ಇದೆ.

Continue Reading

Blog

‘ಲಂಚ ಕೇಳಿದರೆ ತಕ್ಷಣ ದೂರು ನೀಡಿ’: ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

Published

on

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಹಾಗೂ ಪಾರದರ್ಶಕ ಆಡಳಿತ ನೀಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಉಪಮುಖ್ಯಮಂತ್ರಿ D. K. Shivakumar ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಹಲವು ಮಹತ್ವದ ಸೂಚನೆಗಳನ್ನು ನೀಡಿದರು.

ಸಾರ್ವಜನಿಕರ ಕೆಲಸಗಳಿಗೆ ಯಾರಾದರೂ ಲಂಚ ಕೇಳಿದರೆ ತಕ್ಷಣ ದೂರು ಸಲ್ಲಿಸಲು ಅನುಕೂಲವಾಗುವಂತೆ ಪ್ರತಿ ಸರ್ಕಾರಿ ಕಚೇರಿಯಲ್ಲೂ ದೂರು ಸ್ವೀಕಾರದ ದೂರವಾಣಿ ಸಂಖ್ಯೆಯನ್ನು ಪ್ರಮುಖವಾಗಿ ಪ್ರದರ್ಶಿಸಬೇಕು ಎಂದು ಅವರು ನಿರ್ದೇಶಿಸಿದರು. “ನಾವು ಎಲ್ಲರೂ ‘ಟೀಮ್ ಕರ್ನಾಟಕ’ ಆಗಿ ಕಾರ್ಯನಿರ್ವಹಿಸಿ ಜನರಿಗೆ ಸ್ವಚ್ಛ ಮತ್ತು ಪರಿಣಾಮಕಾರಿ ಆಡಳಿತ ನೀಡಬೇಕು” ಎಂದು ಹೇಳಿದರು.

ರಾಜ್ಯದಲ್ಲಿ ಮುಂದುವರಿದಿರುವ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಯಾವುದೇ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು ಹಾಗೂ ಮೊದಲ ಮತ್ತು ಎರಡನೇ ಬೆಳೆಗೆ ನೀರಿನ ಕೊರತೆ ಆಗದಂತೆ ನಿಗಾ ವಹಿಸಬೇಕು ಎಂದು ಆದೇಶಿಸಿದರು. ಜಿಲ್ಲೆಗಳ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲು ಶೀಘ್ರದಲ್ಲೇ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದರು.

ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆಯ ಪ್ರಗತಿಯನ್ನೂ ಪರಿಶೀಲಿಸಲಾಯಿತು. ಕೆಎಸ್‌ಆರ್‌ಟಿಸಿಯ ನಾಲ್ಕು ವಿಭಾಗಗಳ ಮೂಲಕ ಕೇವಲ ಎರಡು ದಿನಗಳಲ್ಲಿ 2,764 ಉಚಿತ ಬಸ್ ಪಾಸ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇದೇ ವೇಳೆ ಸರ್ಕಾರದ ‘100 ದಿನಗಳ ಅಭಿಯಾನ’ ಕುರಿತು ಜಿಲ್ಲಾವಾರು ಪರಿಶೀಲನೆ ನಡೆಸಲಾಯಿತು. ಬಿ-ಖಾತೆಯಿಂದ ಎ-ಖಾತೆಗೆ ಇ-ಖಾತಾ ವರ್ಗಾವಣೆ, ವಸತಿ ರಹಿತರಿಗೆ ಮನೆ ಮತ್ತು ವಿದ್ಯುತ್ ಸಂಪರ್ಕ, ಉದ್ಯೋಗ ವಿನಿಮಯ ಕೇಂದ್ರಗಳ ಆರಂಭ ಸೇರಿದಂತೆ ಹಲವು ಪ್ರಮುಖ ಯೋಜನೆಗಳ ಅನುಷ್ಠಾನ ವೇಗಗೊಳಿಸಲು ಸೂಚನೆ ನೀಡಲಾಯಿತು.

Continue Reading

Trending