ಬೆಂಗಳೂರು
ಸ್ವಂತ ಮನೆ ಕಟ್ಟೋರಿಗೆ ಆನ್ಲೈನ್ನಲ್ಲಿ ಅನುಮತಿ ಪಡೆಯಲು ನಂಬಿಕೆ ನಕ್ಷೆ ಯೋಜನೆ ಜಾರಿ: ಡಿಕೆಶಿ

ಬೆಂಗಳೂರು: ನಗರದಲ್ಲಿ 50 x 80 ಅಡಿ ವಿಸ್ತರ್ಣದವರೆಗಿನ ನಿವೇಶನಗಳಲ್ಲಿ 4 ಯುನಿಟ್ ಮನೆ ಕಟ್ಟಿಕೊಳ್ಳುವವರು ನೊಂದಾಯಿತ ವಾಸ್ತುಶಿಲ್ಪಿ (ರ್ಕಿಟೆಕ್ಟ್) ಅಥವಾ ಎಂಜಿನಿಯರ್ ಮೂಲಕ ತಮ್ಮ ಕಟ್ಟಡದ ನಕ್ಷೆಗಳಿಗೆ ಆನ್ಲೈನ್ ಮೂಲಕ ಸ್ವಯಂ ಅನುಮತಿ ಪಡೆಯುವ ʼನಂಬಿಕೆ ನಕ್ಷೆʼ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಂಬಿಕೆ ನಕ್ಷೆ ಜತೆಗೆ ಬೆಂಗಳೂರಿಗರ ಸಮಸ್ಯೆಗೆ ಪರಿಹಾರ ನೀಡಲು ಹೊಸ ಆಸ್ತಿ ತೆರಿಗೆ ಪದ್ಧತಿ ಹಾಗೂ ಖಾತಾ ವಿತರಣೆಯಂತಹ ಕ್ರಾಂತಿಕಾರಕ ಹೆಜ್ಜೆ ಇಡಲಾಗಿದೆ. ಬೆಂಗಳೂರಿನ ನಾಗರಿಕರಿಗೆ ಅನುಕೂಲ ಮಾಡಿಕೊಡಲು ರ್ಕಾರ ಈ ಪಾರರ್ಶಕ ಕರ್ಯಕ್ರಮಗಳನ್ನು ರೂಪಿಸಿದೆ ಎಂದು ಹೇಳಿದರು.
ನಂಬಿಕೆಯೊಂದಿಗೆ ಪರಿಶೀಲಿಸುವ ನಕ್ಷೆ ನಂಬಿಕೆ ನಕ್ಷೆ ಬ್ರ್ಯಾಂಡ್ ಬೆಂಗಳೂರಿನ ಪರಿಕಲ್ಪನೆಯಡಿ ಈ ಯೋಜನೆ ರೂಪಿಸಲಾಗಿದ್ದು, ಇನ್ನುಮುಂದೆ ಬೆಂಗಳೂರಿನಲ್ಲಿ ಮನೆ ಕಟ್ಟಲು ಮುಂದಾಗಿರುವವರು 50ಘಿ80 ವಿಸ್ತರ್ಣವರೆಗಿನ ನಿವೇಶನ ಹೊಂದಿರುವ, 4 ಯುನಿಟ್ ಮನೆ ಕಟ್ಟಿಕೊಳ್ಳುವವರಿಗೆ ಬಿಲ್ಡಿಂಗ್ ಪ್ಲಾನ್ ಅನ್ನು ನೋಂದಾಯಿತ ವಾಸ್ತುಶಿಲ್ಪಿ (ರ್ಕಿಟೆಕ್ಟ್) ಅಥವಾ ಎಂಜಿನಿಯರ್ ಮೂಲಕ ಆನ್ಲೈನ್ನಲ್ಲಿ ಕಟ್ಟಡದ ನಕ್ಷೆಗೆ ಸ್ವಯಂ ಅನುಮತಿ ಪಡೆಯಬಹುದು. ಈ ಯೋಜನೆಯಿಂದಾಗಿ ಸರ್ವಜನಿಕರು ತಮ್ಮ ಕಟ್ಟಡದ ನಕ್ಷೆಗೆ ಅನುಮತಿ ಪಡೆಯಲು ಪಾಲಿಕೆ ಕಚೇರಿಗಳನ್ನು ಅಲೆಯುವಂತಿಲ್ಲ. ಜತೆಗೆ ಅಧಿಕಾರಿಗಳಿಗೆ ಲಂಚ ನೀಡುವ ಪರಿಸ್ಥಿತಿಯೂ ನರ್ಮಾಣವಾಗುವುದಿಲ್ಲ ಎಂದು ತಿಳಿಸಿದರು.
ಅನುಮತಿ ನೀಡುವ ವಾಸ್ತುಶಿಲ್ಪಿಗಳು ಹಾಗೂ ಎಂಜಿನಿಯರ್ಗಳು ರ್ಕಾರದ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡಿರಬೇಕು. ಕಟ್ಟಡದ ನಕ್ಷೆ ನಿಯಮಾನುಸಾರವಾಗಿ ತನ್ನದೇ ಆದ ರೀತಿಯಲ್ಲಿ ತಂತ್ರಜ್ಞಾನದ ಮೂಲಕ ಪರಿಶೀಲನೆ ಮಾಡಲಾಗುವುದು. ಆನ್ಲೈನ್ನಲ್ಲೇ ಶುಲ್ಕ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕಳೆದ ರ್ಷ 9 ಸಾವಿರ ಕಟ್ಟಡ ನಕ್ಷೆ ಅನುಮತಿ ನೀಡಲಾಗಿದೆ. ಈ ಬಾರಿ 10 ಸಾವಿರ ನಕ್ಷೆ ಅನುಮತಿ ನೀಡಬಹುದು ಎಂದು ಅಂದಾಜು ಮಾಡಲಾಗಿದೆ ಎಂದು ಹೇಳಿದರು.
ನಾವು ನಾಗರಿಕರನ್ನು ನಂಬಬೇಕು. ಪ್ರಮಾಣಿಕೃತ ಎಂಜಿನಿಯರ್ ಹಾಗೂ ವಾಸ್ತುಶಿಲ್ಪಿ ಗಳನ್ನು ನಂಬಬೇಕು. ಬ್ರ್ಯಾಂಡ್ ಬೆಂಗಳೂರಿಗೆ ಸಂಬಂಧಿಸಿದಂತೆ ನಮಗೆ ಬಂದ 70 ಸಾವಿರಕ್ಕೂ ಹೆಚ್ಚು ಸಲಹೆ ಗಳಲ್ಲಿ ಜನರು ತಮಗಾಗುತ್ತಿರುವ ತೊಂದರೆ ಬಗ್ಗೆ ಮಾಹಿತಿ ನೀಡಿದ್ದರು. ನಾವು ಒಂದೊಂದಾಗಿ ಅವರ ಸಮಸ್ಯೆ ಬಗೆಹರಿಸಿ ಅವರ ಸಲಹೆಗಳನ್ನು ಜಾರಿಗೊಳಿಸುತ್ತಿದ್ದೇವೆ ಎಂದು ತಿಳಿಸಿದರು.
ಈ ಯೋಜನೆಯನ್ನು ಮೊದಲ ಹಂತದಲ್ಲಿ ರಾಜರಾಜೇಶ್ವರಿನಗರ ಹಾಗೂ ದಾಸರಹಳ್ಳಿ ವಲಯದ ಎಲ್ಲಾ ವರ್ಡ್ ಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡುತ್ತೇವೆ. ನಂತರ ಬೆಂಗಳೂರಿಗೆ ವಿಸ್ತರಿಸಲಾಗುವುದು ಎಂದು ಮಾಹಿತಿ ನೀಡಿದರು.
ಹೊಸ ತೆರಿಗೆ ಪದ್ಧತಿ
2020ರಲ್ಲಿ ಬಿಜೆಪಿ ರ್ಕಾರ ತೆರಿಗೆ ಕಾಯ್ದೆ ವಿಚಾರವಾಗಿ ತಿದ್ದುಪಡಿ ಮಾಡಿದರು. ಅದರಲ್ಲಿ ತೆರಿಗೆ ಪಾವತಿ ವಿಚಾರದಲ್ಲಿ ಅನೇಕ ಏರುಪೇರುಗಳಾದವು. ʼಬಾಗಿಲಿಗೆ ಬಂತು ರ್ಕಾರ-ಸೇವೆಗೆ ಇರಲಿ ಸಹಕಾರʼ ಕರ್ಯಕ್ರಮದಲ್ಲಿ ಈ ಬಗ್ಗೆ ಅನೇಕ ದೂರುಗಳು ವ್ಯಕ್ತವಾದವು. ಇದಕ್ಕೆ ಪರಿಹಾರ ನೀಡಲು ಬಜೆಟ್ ಅಧಿವೇಶನದಲ್ಲಿ ತಿದ್ದುಪಡಿ ತಂದು ಎಲ್ಲೆಲ್ಲಿ ದಂಡದ ಸಮಸ್ಯೆ ಇದೆ ಅಲ್ಲೆಲ್ಲಾ 2024ರ ಜುಲೈ 31ರವರೆಗೂ ತೆರಿಗೆ ಕಟ್ಟಿದವರಿಗೆ ದಂಡ ಹಾಗೂ ಬಡ್ಡಿ ಮನ್ನಾ ಮಾಡುವ ತರ್ಮಾನ ಮಾಡಿದ್ದೇವೆ. ಬೆಂಗಳೂರಿನ ನಾಗರಿಕರು ಇದರ ಉಪಯೋಗ ಪಡೆಯಬೇಕು. ದಂಡವನ್ನು ಶೇ.200 ರಿಂದ ಶೇ.100ಕ್ಕೆ ಇಳಿಸಿದ್ದೇವೆ. ಇನ್ನು ನಾವು 5 ರ್ಷದವರೆಗೂ ಲೆಕ್ಕಾಚಾರದಲ್ಲಿ ತೆರಿಗೆ ಬಾಕಿಯನ್ನು ವಸೂಲಿ ಮಾಡಲು ತರ್ಮಾನಿಸಿದ್ದೇವೆ ಎಂದು ಡಿಸಿಎಂ ಮಾಹಿತಿ ನೀಡಿದರು.
ಪ್ರಸ್ತುತ ಇದ್ದ ಯುನಿಟ್ ವಿಸ್ತರ್ಣ ಮೌಲ್ಯ ಆಸ್ತಿ ತೆರಿಗೆ ಪದ್ಧತಿಯನ್ನು 2008ರಲ್ಲಿ ಜಾರಿಗೊಳಿಸಲಾಗಿತ್ತು. ಆಗ ಆಸ್ತಿಗಳನ್ನು 18 ರ್ಗೀಕರಣ ಮಾಡಲಾಗಿತ್ತು. ಇದರಿಂದ ತೆರಿಗೆ ಪಾವತಿಯಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಮರ್ಗಸೂಚಿ ದರವನ್ನು ಬೆಂಗಳೂರಿನ ವ್ಯಾಪ್ತಿಯಲ್ಲಿ ಏಕರೂಪದ ಆಸ್ತಿ ತೆರಿಗೆ ನಿಗದಿ ಮಾಡಲಾಗಿದೆ. ಈ ವ್ಯವಸ್ಥೆಯಿಂದ ತೆರಿಗೆ ಪದ್ಧತಿಯನ್ನು ಸರಳೀಕರಣ ಮಾಡಲಾಗಿದೆ. ಈಗ ನಾವು 6 ರ್ಗೀಕರಣಗಳನ್ನು ಮಾಡಿದ್ದು, ವಸತಿ (ಸ್ವಂತ ಬಳಕೆ ಹಾಗೂ ಬಾಡಿಗೆದಾರರ ಬಳಕೆ), ವಾಣಿಜ್ಯ, ಕೈಗಾರಿಕಾ, ಸ್ಟಾರ್ ಹೊಟೇಲ್, ವಿನಾಯಿತಿ ನೀಡಲಾದ ಹಾಗೂ ಸಂಪರ್ಣ ಖಾಲಿ ಜಮೀನುಗಳು ಎಂಬ ರ್ಗೀಕರಣ ಮಾಡಲಾಗಿದೆ ಎಂದು ಹೇಳಿದರು.
ಕಳೆದ ಬಾರಿ ಆಸ್ತಿ ತೆರಿಗೆ ದರಗಳನ್ನು ಪರಿಷ್ಕರಣೆ ಮಾಡಿದ್ದು 2016ರಲ್ಲಿ. ಆಗ ವಸತಿ ಆಸ್ತಿಗಳಿಗೆ ಶೇ.20, ವಸತಿಯೇತರ ಉದ್ದೇಶದ ಆಸ್ತಿಗಳಿಗೆ ಶೇ.25 ಏರಿಕೆಯಾಗಿತ್ತು. ಕಳೆದ ಎಂಟು ರ್ಷಗಳಿಂದ ಆಸ್ತಿ ಮೌಲ್ಯ ಏರಿಕೆಯಾಗಿರಲಿಲ್ಲ. ಈಗ ನಾವು ಈ ಬಗ್ಗೆ ರ್ಚೆ ಮಾಡಿ ಇದನ್ನು ಕಡಿಮೆ ಮಾಡಲು, ಆಸ್ತಿ ತೆರಿಗೆ ಹೆಚ್ಚಳದ ಮಿತಿಯನ್ನು ಶೇ.10ಕ್ಕೆ ನಿಗದಿ ಪಡಿಸಲಾಗಿದೆ. ಬೆಂಗಳೂರಿನಲ್ಲಿ 18 ಲಕ್ಷ ಆಸ್ತಿ ಮಾಲೀಕರು ತೆರಿಗೆ ವ್ಯಾಪ್ತಿಯಲ್ಲಿ ಒಳಪಡುತ್ತಿಲ್ಲ. ಇವರೆಲ್ಲರೂ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆಯೊಳಗೆ ಬರಬೇಕು ಎಂದು ತಿಳಿಸಿದರು.
ಬೆಂಗಳೂರು
ಲಾಲ್ಬಾಗ್ ಫಲಪುಷ್ಪ ಪ್ರದರ್ಶನ: ಕಿತ್ತೂರು ಕೋಟೆ ಮತ್ತು ರಾಣಿ ಚೆನ್ನಮ್ಮನ ಆಕರ್ಷಕ ಪ್ರತಿಕೃತಿಗಳು

ಬೆಂಗಳೂರು: ಲಾಲ್ಬಾಗ್ ಉದ್ಯಾನದಲ್ಲಿ ನಾಳೆ ಆಗಸ್ಟ್ 7ರಿಂದ 18ರವರೆಗೆ ನಡೆಯಲಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಈ ವರ್ಷದ ಪ್ರಮುಖ ಆಕರ್ಷಣೆ ಎಂದರೆ ಗಾಜಿನ ಮನೆಯಲ್ಲಿ ಸ್ಥಾಪಿಸಿರುವ ಕಿತ್ತೂರು ಕೋಟೆ ಮತ್ತು ರಾಣಿ ಚೆನ್ನಮ್ಮನವರ ಐಕ್ಯ ಮಂಟಪದ ಪ್ರತಿಕೃತಿಗಳು.
ತೋಟಗಾರಿಕೆ ಇಲಾಖೆ ವಿವಿಧ ರೀತಿಯ ಆಕರ್ಷಕ ಹೂವುಗಳಿಂದ ಗಾಜಿನ ಮನೆಯನ್ನು ಅಲಂಕಾರಗೊಳಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳು ಬಣ್ಣ ಬಣ್ಣದ ಹೂಸಸಿಗಳೊಂದಿಗೆ ಶೃಂಗಾರಗೊಂಡಿವೆ. ಈ ಪ್ರದರ್ಶನದಲ್ಲಿ ಆಂಥೋರಿಯಂ, ಗುಲಾಬಿ, ಆರ್ಕಿಡ್, ಜರ್ಬೇರಾ ಮತ್ತು ಸುಗಂಧ ರಾಜ ಸೇರಿದಂತೆ ಹಲವಾರು ಶೀತ ವಲಯದ ಹೂಗಳು ನೋಡುಗರ ಕಣ್ಮನ ಸೆಳೆಯಲಿವೆ.
ಬೋನ್ಸಾಯ್ ವನವನ್ನು ನವೀಕರಿಸಿ ವಿಭಿನ್ನ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು, ವಿಶೇಷ ಬೋನ್ಸಾಯ್ ಸಸಿಗಳನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ. ಜೊತೆಗೆ ಇಕೆಬಾನಾ, ತರಕಾರಿ ಕೆತ್ತನೆ ಪ್ರದರ್ಶನ, ತೋಟಗಳ ಸ್ಪರ್ಧೆ ಮತ್ತು ನಾನಾ ಹೂವಿನ ಜೋಡಣೆ ಕಲೆಯ ಪ್ರದರ್ಶನವೂ ಈ ಶೋನಲ್ಲಿ ಒಳಗೊಂಡಿವೆ.
ಸುಮಾರು 2.5 ಲಕ್ಷದಿಂದ 3 ಲಕ್ಷ ಹೂವುಗಳಿಂದ ನಿರ್ಮಿತವಾಗಿರುವ ಗಾಜಿನ ಮನೆಯಲ್ಲಿ, 18 ಅಡಿ ಎತ್ತರ ಮತ್ತು 32 ಅಡಿ ಅಗಲದ ಕಿತ್ತೂರಿನ ಕೋಟೆ ಪ್ರತಿಕೃತಿ ಸ್ಥಾಪಿಸಲಾಗಿದೆ. ಇದರ ಮುಂಭಾಗದಲ್ಲಿ ಅಶ್ವಾರೂಢ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳು ಹಾಗೂ ಹಿಂಭಾಗದಲ್ಲಿ ಐಕ್ಯ ಮಂಟಪದ ಪ್ರತಿಕೃತಿ ಇದೆ.
ಪ್ರವೇಶ ಶುಲ್ಕ:
- ಸಾಮಾನ್ಯ ದಿನ: ₹80
- ರಜಾದಿನಗಳು ಮತ್ತು ವಾರಾಂತ್ಯ: ₹100
ಈ ಪ್ರದರ್ಶನವು ನೈಸರ್ಗಿಕ ಸೌಂದರ್ಯ ಹಾಗೂ ಐತಿಹಾಸಿಕ ಮಹತ್ವವನ್ನು ಒಗ್ಗೂಡಿಸುವ ಅತ್ಯುತ್ತಮ ವೇದಿಕೆಯಾಗಿದ್ದು, ಸಾರ್ವಜನಿಕರು ಹೆಚ್ಚಾಗಿ ಭಾಗವಹಿಸುವ ನಿರೀಕ್ಷೆಯಿದೆ.
ಬೆಂಗಳೂರು
ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ

ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್ಟಾಪ್ ವಿತರಣೆ ನಡೆಸಲಾಗಿದೆ.
ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.
2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.
ಬೆಂಗಳೂರು
ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್ನಲ್ಲಿ ಹವಾ ಸೃಷ್ಟಿಸಿದೆ.
ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.
ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.
ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ