ಬೆಂಗಳೂರು
ಸ್ವಂತ ಮನೆ ಕಟ್ಟೋರಿಗೆ ಆನ್ಲೈನ್ನಲ್ಲಿ ಅನುಮತಿ ಪಡೆಯಲು ನಂಬಿಕೆ ನಕ್ಷೆ ಯೋಜನೆ ಜಾರಿ: ಡಿಕೆಶಿ
ಬೆಂಗಳೂರು: ನಗರದಲ್ಲಿ 50 x 80 ಅಡಿ ವಿಸ್ತರ್ಣದವರೆಗಿನ ನಿವೇಶನಗಳಲ್ಲಿ 4 ಯುನಿಟ್ ಮನೆ ಕಟ್ಟಿಕೊಳ್ಳುವವರು ನೊಂದಾಯಿತ ವಾಸ್ತುಶಿಲ್ಪಿ (ರ್ಕಿಟೆಕ್ಟ್) ಅಥವಾ ಎಂಜಿನಿಯರ್ ಮೂಲಕ ತಮ್ಮ ಕಟ್ಟಡದ ನಕ್ಷೆಗಳಿಗೆ ಆನ್ಲೈನ್ ಮೂಲಕ ಸ್ವಯಂ ಅನುಮತಿ ಪಡೆಯುವ ʼನಂಬಿಕೆ ನಕ್ಷೆʼ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಂಬಿಕೆ ನಕ್ಷೆ ಜತೆಗೆ ಬೆಂಗಳೂರಿಗರ ಸಮಸ್ಯೆಗೆ ಪರಿಹಾರ ನೀಡಲು ಹೊಸ ಆಸ್ತಿ ತೆರಿಗೆ ಪದ್ಧತಿ ಹಾಗೂ ಖಾತಾ ವಿತರಣೆಯಂತಹ ಕ್ರಾಂತಿಕಾರಕ ಹೆಜ್ಜೆ ಇಡಲಾಗಿದೆ. ಬೆಂಗಳೂರಿನ ನಾಗರಿಕರಿಗೆ ಅನುಕೂಲ ಮಾಡಿಕೊಡಲು ರ್ಕಾರ ಈ ಪಾರರ್ಶಕ ಕರ್ಯಕ್ರಮಗಳನ್ನು ರೂಪಿಸಿದೆ ಎಂದು ಹೇಳಿದರು.
ನಂಬಿಕೆಯೊಂದಿಗೆ ಪರಿಶೀಲಿಸುವ ನಕ್ಷೆ ನಂಬಿಕೆ ನಕ್ಷೆ ಬ್ರ್ಯಾಂಡ್ ಬೆಂಗಳೂರಿನ ಪರಿಕಲ್ಪನೆಯಡಿ ಈ ಯೋಜನೆ ರೂಪಿಸಲಾಗಿದ್ದು, ಇನ್ನುಮುಂದೆ ಬೆಂಗಳೂರಿನಲ್ಲಿ ಮನೆ ಕಟ್ಟಲು ಮುಂದಾಗಿರುವವರು 50ಘಿ80 ವಿಸ್ತರ್ಣವರೆಗಿನ ನಿವೇಶನ ಹೊಂದಿರುವ, 4 ಯುನಿಟ್ ಮನೆ ಕಟ್ಟಿಕೊಳ್ಳುವವರಿಗೆ ಬಿಲ್ಡಿಂಗ್ ಪ್ಲಾನ್ ಅನ್ನು ನೋಂದಾಯಿತ ವಾಸ್ತುಶಿಲ್ಪಿ (ರ್ಕಿಟೆಕ್ಟ್) ಅಥವಾ ಎಂಜಿನಿಯರ್ ಮೂಲಕ ಆನ್ಲೈನ್ನಲ್ಲಿ ಕಟ್ಟಡದ ನಕ್ಷೆಗೆ ಸ್ವಯಂ ಅನುಮತಿ ಪಡೆಯಬಹುದು. ಈ ಯೋಜನೆಯಿಂದಾಗಿ ಸರ್ವಜನಿಕರು ತಮ್ಮ ಕಟ್ಟಡದ ನಕ್ಷೆಗೆ ಅನುಮತಿ ಪಡೆಯಲು ಪಾಲಿಕೆ ಕಚೇರಿಗಳನ್ನು ಅಲೆಯುವಂತಿಲ್ಲ. ಜತೆಗೆ ಅಧಿಕಾರಿಗಳಿಗೆ ಲಂಚ ನೀಡುವ ಪರಿಸ್ಥಿತಿಯೂ ನರ್ಮಾಣವಾಗುವುದಿಲ್ಲ ಎಂದು ತಿಳಿಸಿದರು.
ಅನುಮತಿ ನೀಡುವ ವಾಸ್ತುಶಿಲ್ಪಿಗಳು ಹಾಗೂ ಎಂಜಿನಿಯರ್ಗಳು ರ್ಕಾರದ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡಿರಬೇಕು. ಕಟ್ಟಡದ ನಕ್ಷೆ ನಿಯಮಾನುಸಾರವಾಗಿ ತನ್ನದೇ ಆದ ರೀತಿಯಲ್ಲಿ ತಂತ್ರಜ್ಞಾನದ ಮೂಲಕ ಪರಿಶೀಲನೆ ಮಾಡಲಾಗುವುದು. ಆನ್ಲೈನ್ನಲ್ಲೇ ಶುಲ್ಕ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕಳೆದ ರ್ಷ 9 ಸಾವಿರ ಕಟ್ಟಡ ನಕ್ಷೆ ಅನುಮತಿ ನೀಡಲಾಗಿದೆ. ಈ ಬಾರಿ 10 ಸಾವಿರ ನಕ್ಷೆ ಅನುಮತಿ ನೀಡಬಹುದು ಎಂದು ಅಂದಾಜು ಮಾಡಲಾಗಿದೆ ಎಂದು ಹೇಳಿದರು.
ನಾವು ನಾಗರಿಕರನ್ನು ನಂಬಬೇಕು. ಪ್ರಮಾಣಿಕೃತ ಎಂಜಿನಿಯರ್ ಹಾಗೂ ವಾಸ್ತುಶಿಲ್ಪಿ ಗಳನ್ನು ನಂಬಬೇಕು. ಬ್ರ್ಯಾಂಡ್ ಬೆಂಗಳೂರಿಗೆ ಸಂಬಂಧಿಸಿದಂತೆ ನಮಗೆ ಬಂದ 70 ಸಾವಿರಕ್ಕೂ ಹೆಚ್ಚು ಸಲಹೆ ಗಳಲ್ಲಿ ಜನರು ತಮಗಾಗುತ್ತಿರುವ ತೊಂದರೆ ಬಗ್ಗೆ ಮಾಹಿತಿ ನೀಡಿದ್ದರು. ನಾವು ಒಂದೊಂದಾಗಿ ಅವರ ಸಮಸ್ಯೆ ಬಗೆಹರಿಸಿ ಅವರ ಸಲಹೆಗಳನ್ನು ಜಾರಿಗೊಳಿಸುತ್ತಿದ್ದೇವೆ ಎಂದು ತಿಳಿಸಿದರು.
ಈ ಯೋಜನೆಯನ್ನು ಮೊದಲ ಹಂತದಲ್ಲಿ ರಾಜರಾಜೇಶ್ವರಿನಗರ ಹಾಗೂ ದಾಸರಹಳ್ಳಿ ವಲಯದ ಎಲ್ಲಾ ವರ್ಡ್ ಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡುತ್ತೇವೆ. ನಂತರ ಬೆಂಗಳೂರಿಗೆ ವಿಸ್ತರಿಸಲಾಗುವುದು ಎಂದು ಮಾಹಿತಿ ನೀಡಿದರು.
ಹೊಸ ತೆರಿಗೆ ಪದ್ಧತಿ
2020ರಲ್ಲಿ ಬಿಜೆಪಿ ರ್ಕಾರ ತೆರಿಗೆ ಕಾಯ್ದೆ ವಿಚಾರವಾಗಿ ತಿದ್ದುಪಡಿ ಮಾಡಿದರು. ಅದರಲ್ಲಿ ತೆರಿಗೆ ಪಾವತಿ ವಿಚಾರದಲ್ಲಿ ಅನೇಕ ಏರುಪೇರುಗಳಾದವು. ʼಬಾಗಿಲಿಗೆ ಬಂತು ರ್ಕಾರ-ಸೇವೆಗೆ ಇರಲಿ ಸಹಕಾರʼ ಕರ್ಯಕ್ರಮದಲ್ಲಿ ಈ ಬಗ್ಗೆ ಅನೇಕ ದೂರುಗಳು ವ್ಯಕ್ತವಾದವು. ಇದಕ್ಕೆ ಪರಿಹಾರ ನೀಡಲು ಬಜೆಟ್ ಅಧಿವೇಶನದಲ್ಲಿ ತಿದ್ದುಪಡಿ ತಂದು ಎಲ್ಲೆಲ್ಲಿ ದಂಡದ ಸಮಸ್ಯೆ ಇದೆ ಅಲ್ಲೆಲ್ಲಾ 2024ರ ಜುಲೈ 31ರವರೆಗೂ ತೆರಿಗೆ ಕಟ್ಟಿದವರಿಗೆ ದಂಡ ಹಾಗೂ ಬಡ್ಡಿ ಮನ್ನಾ ಮಾಡುವ ತರ್ಮಾನ ಮಾಡಿದ್ದೇವೆ. ಬೆಂಗಳೂರಿನ ನಾಗರಿಕರು ಇದರ ಉಪಯೋಗ ಪಡೆಯಬೇಕು. ದಂಡವನ್ನು ಶೇ.200 ರಿಂದ ಶೇ.100ಕ್ಕೆ ಇಳಿಸಿದ್ದೇವೆ. ಇನ್ನು ನಾವು 5 ರ್ಷದವರೆಗೂ ಲೆಕ್ಕಾಚಾರದಲ್ಲಿ ತೆರಿಗೆ ಬಾಕಿಯನ್ನು ವಸೂಲಿ ಮಾಡಲು ತರ್ಮಾನಿಸಿದ್ದೇವೆ ಎಂದು ಡಿಸಿಎಂ ಮಾಹಿತಿ ನೀಡಿದರು.
ಪ್ರಸ್ತುತ ಇದ್ದ ಯುನಿಟ್ ವಿಸ್ತರ್ಣ ಮೌಲ್ಯ ಆಸ್ತಿ ತೆರಿಗೆ ಪದ್ಧತಿಯನ್ನು 2008ರಲ್ಲಿ ಜಾರಿಗೊಳಿಸಲಾಗಿತ್ತು. ಆಗ ಆಸ್ತಿಗಳನ್ನು 18 ರ್ಗೀಕರಣ ಮಾಡಲಾಗಿತ್ತು. ಇದರಿಂದ ತೆರಿಗೆ ಪಾವತಿಯಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಮರ್ಗಸೂಚಿ ದರವನ್ನು ಬೆಂಗಳೂರಿನ ವ್ಯಾಪ್ತಿಯಲ್ಲಿ ಏಕರೂಪದ ಆಸ್ತಿ ತೆರಿಗೆ ನಿಗದಿ ಮಾಡಲಾಗಿದೆ. ಈ ವ್ಯವಸ್ಥೆಯಿಂದ ತೆರಿಗೆ ಪದ್ಧತಿಯನ್ನು ಸರಳೀಕರಣ ಮಾಡಲಾಗಿದೆ. ಈಗ ನಾವು 6 ರ್ಗೀಕರಣಗಳನ್ನು ಮಾಡಿದ್ದು, ವಸತಿ (ಸ್ವಂತ ಬಳಕೆ ಹಾಗೂ ಬಾಡಿಗೆದಾರರ ಬಳಕೆ), ವಾಣಿಜ್ಯ, ಕೈಗಾರಿಕಾ, ಸ್ಟಾರ್ ಹೊಟೇಲ್, ವಿನಾಯಿತಿ ನೀಡಲಾದ ಹಾಗೂ ಸಂಪರ್ಣ ಖಾಲಿ ಜಮೀನುಗಳು ಎಂಬ ರ್ಗೀಕರಣ ಮಾಡಲಾಗಿದೆ ಎಂದು ಹೇಳಿದರು.
ಕಳೆದ ಬಾರಿ ಆಸ್ತಿ ತೆರಿಗೆ ದರಗಳನ್ನು ಪರಿಷ್ಕರಣೆ ಮಾಡಿದ್ದು 2016ರಲ್ಲಿ. ಆಗ ವಸತಿ ಆಸ್ತಿಗಳಿಗೆ ಶೇ.20, ವಸತಿಯೇತರ ಉದ್ದೇಶದ ಆಸ್ತಿಗಳಿಗೆ ಶೇ.25 ಏರಿಕೆಯಾಗಿತ್ತು. ಕಳೆದ ಎಂಟು ರ್ಷಗಳಿಂದ ಆಸ್ತಿ ಮೌಲ್ಯ ಏರಿಕೆಯಾಗಿರಲಿಲ್ಲ. ಈಗ ನಾವು ಈ ಬಗ್ಗೆ ರ್ಚೆ ಮಾಡಿ ಇದನ್ನು ಕಡಿಮೆ ಮಾಡಲು, ಆಸ್ತಿ ತೆರಿಗೆ ಹೆಚ್ಚಳದ ಮಿತಿಯನ್ನು ಶೇ.10ಕ್ಕೆ ನಿಗದಿ ಪಡಿಸಲಾಗಿದೆ. ಬೆಂಗಳೂರಿನಲ್ಲಿ 18 ಲಕ್ಷ ಆಸ್ತಿ ಮಾಲೀಕರು ತೆರಿಗೆ ವ್ಯಾಪ್ತಿಯಲ್ಲಿ ಒಳಪಡುತ್ತಿಲ್ಲ. ಇವರೆಲ್ಲರೂ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆಯೊಳಗೆ ಬರಬೇಕು ಎಂದು ತಿಳಿಸಿದರು.
ಅಪರಾಧ
BAIRATHI BASAVARJU BREAKING NEWS : ಸಿಐಡಿ ಲುಕ್ಔಟ್ ನೋಟಿಸ್ ಜಾರಿ, ತನಿಖೆ ತೀವ್ರ
ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.
ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.
ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.
ಕ್ರೀಡೆ
ಕನ್ನಡದ ಹೆಮ್ಮೆ ಜಿಆರ್ ವಿಶ್ವನಾಥ್ಗೆ ಜನ್ಮದಿನ ಸಂಭ್ರಮ: ವಿಶಿಯ ಕಲಾತ್ಮಕ ಬ್ಯಾಟಿಂಗ್ಗೆ 77ನೇ ವಸಂತ
ಬೆಂಗಳೂರು: ಭಾರತೀಯ ಕ್ರಿಕೆಟ್ ಇತಿಹಾಸದ ಕಲಾತ್ಮಕ ಬ್ಯಾಟ್ಸ್ಮನ್ಗಳಲ್ಲಿ ಅಗ್ರಸ್ಥಾನ ಪಡೆದಿರುವ ಗುಂಡಪ್ಪ ರಂಗನಾಥ್ ವಿಶ್ವನಾಥ್ (GR Vishwanath) ಅವರಿಗೆ ಫೆಬ್ರವರಿ 12ರಂದು ಜನ್ಮದಿನ ಸಂಭ್ರಮ. ವಿಶಿ ಕ್ರೀಸಿಗೆ ಬಂದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಬ್ಬದ ವಾತಾವರಣವೇ ಸೃಷ್ಟಿಯಾಗುತ್ತಿತ್ತು. ಶತಕ ಸಿಡಿಸಿದ ಯಾವುದೇ ಪಂದ್ಯದಲ್ಲಿ ಭಾರತ ಸೋತ ಉದಾಹರಣೆ ಇಲ್ಲ — ಒಂದೋ ಗೆಲುವು, ಇಲ್ಲವೇ ಡ್ರಾ!
1969ರಲ್ಲಿ ಕಾನ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಾದಾರ್ಪಣೆ ಮಾಡಿದ ವಿಶಿ, ಮೊದಲ ಇನ್ನಿಂಗ್ಸ್ನಲ್ಲಿ ಶೂನ್ಯಕ್ಕೆ ಔಟ್ ಆದರೂ, ಎರಡನೇ ಇನ್ನಿಂಗ್ಸ್ನಲ್ಲಿ 25 ಬೌಂಡರಿಗಳೊಂದಿಗೆ 137 ರನ್ ಸಿಡಿಸಿ ಕ್ರಿಕೆಟ್ ಲೋಕದ ಗಮನ ಸೆಳೆದರು. ಅವರ ಸ್ಕ್ವೇರ್ ಕಟ್ ಶಾಟ್ ಕ್ರಿಕೆಟ್ ಅಭಿಮಾನಿಗಳ ಮನಸ್ಸು ಗೆದ್ದಿತ್ತು.
ಗವಾಸ್ಕರ್ ಪ್ರಶಂಸೆ, ಹೆಲ್ಮೆಟ್ ಇಲ್ಲದೆ ವೇಗದ ಬೌಲರ್ ಎದುರಿಸಿದ ಧೈರ್ಯ
“ನನ್ನಂತಹ ನೂರು ಗವಾಸ್ಕರ್ ಬರಬಹುದು, ಆದರೆ ವಿಶಿಯಂತವರು ಬರಲಾರರು” ಎಂಬ ಸುನಿಲ್ ಗವಾಸ್ಕರ್ ಮಾತುಗಳು ವಿಶಿಯ ಮಹತ್ವ ಸಾರುತ್ತವೆ. ಆಂಡಿ ರಾಬರ್ಟ್ಸ್, ಜೆಫ್ ಥಾಂಪ್ಸನ್ಂತಹ ವೇಗದ ಬೌಲರ್ಗಳನ್ನು ಹೆಲ್ಮೆಟ್ ಇಲ್ಲದೆ ಎದುರಿಸಿದ ಧೈರ್ಯವೂ ವಿಶಿಯ ವಿಶೇಷ.
ಕ್ರೀಡಾಸ್ಪೂರ್ತಿಗೆ ಮಾದರಿ
1980ರ ಸುವರ್ಣ ಮಹೋತ್ಸವ ಟೆಸ್ಟ್ನಲ್ಲಿ ಅಂಪೈರ್ ತಪ್ಪು ತೀರ್ಪು ನೀಡಿದಾಗ ಬಾಬ್ ಟೇಲರ್ ಅವರನ್ನು ಮರು ಕ್ರೀಸಿಗೆ ಕರೆಸಿದ ವಿಶಿಯ ಕ್ರೀಡಾಸ್ಫೂರ್ತಿ ಕ್ರಿಕೆಟ್ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದೆ.
ರಣಜಿ ಫೈನಲ್ಗೂ ಮದುವೆಯೂ ಒಂದೇ ಸಮಯ
1978ರಲ್ಲಿ ಗವಾಸ್ಕರ್ ಸಹೋದರಿ ಕವಿತಾ ಅವರನ್ನು ಮದುವೆಯಾದ ವಿಶಿ, ಮದುವೆಯ ಬಳಿಕ ನೇರವಾಗಿ ಮೈದಾನಕ್ಕಿಳಿದು ರಣಜಿ ಫೈನಲ್ನಲ್ಲಿ 247 ರನ್ ಸಿಡಿಸಿ ಕರ್ನಾಟಕಕ್ಕೆ ಕಿರೀಟ ತಂದುಕೊಟ್ಟರು.
ವಿಶಿಯ ಮೂರು ಸ್ಮರಣೀಯ ಇನ್ನಿಂಗ್ಸ್
- 1975, ಮದ್ರಾಸ್: ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 97 ರನ್
- 1969, ಕಾನ್ಪುರ: ಪಾದಾರ್ಪಣೆ ಪಂದ್ಯದಲ್ಲೇ 137 ರನ್
- 1981, ಎಂಸಿಜಿ: ಆಸ್ಟ್ರೇಲಿಯಾ ವಿರುದ್ಧ 114 ರನ್
77ನೇ ವಸಂತಕ್ಕೆ ಕಾಲಿಡುತ್ತಿರುವ ಕನ್ನಡದ ಹೆಮ್ಮೆ ಜಿಆರ್ ವಿಶ್ವನಾಥ್ ಅವರಿಗೆ ಹಾರ್ದಿಕ ಶುಭಾಶಯಗಳು.
ದೇಶ
ಹೊಸಕೋಟೆಗೆ ಬಜೆಟ್ ಬಲ ಸಿಗುತ್ತಾ? ಮೆಟ್ರೋ, ನೀರಾವರಿ, ಒಳಚರಂಡಿ ಯೋಜನೆಗಳ ನಿರೀಕ್ಷೆ
ಹೊಸಕೋಟೆ: ಬೆಂಗಳೂರು ನಗರಕ್ಕೆ ಹೊಂದಿಕೊಂಡು ವೇಗವಾಗಿ ವಿಸ್ತರಿಸುತ್ತಿರುವ ಹೊಸಕೋಟೆ ತಾಲೂಕು ಮುಂದಿನ ರಾಜ್ಯ ಬಜೆಟ್ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದೆ. ನೀರಾವರಿ, ಕೃಷಿ, ರಸ್ತೆ, ಮೆಟ್ರೋ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗಬೇಕು ಎಂದು ಜನತೆ ಆಗ್ರಹಿಸುತ್ತಿದ್ದಾರೆ.
2 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಹೊಸಕೋಟೆ, ವಾಣಿಜ್ಯ ಹಾಗೂ ವಸತಿ ವಿಸ್ತಾರದಲ್ಲಿ ಮಹತ್ವ ಪಡೆದುಕೊಂಡಿದೆ. ಶಾಸಕರು ಈಗಾಗಲೇ ಮೆಟ್ರೋ ವಿಸ್ತರಣೆಗೆ ಹೆಜ್ಜೆಯಿಟ್ಟಿದ್ದು, ಕೆ.ಆರ್.ಪುರಂ ಮೂಲಕ ಹೊಸಕೋಟೆಗೆ ಮೆಟ್ರೋ ಸಂಪರ್ಕ ನೀಡುವ ಬಗ್ಗೆ ಬಿಎಂಆರ್ಸಿಎಲ್ ಅಧ್ಯಯನ ಆರಂಭಿಸಿದೆ. ಬಜೆಟ್ನಲ್ಲಿ ಆರ್ಥಿಕ ಮಂಜೂರು ಸಿಗುತ್ತದೆಯೇ ಎಂಬುದು ಕುತೂಹಲ.
ಗ್ರಾಮಾಂತರ ಪೊಲೀಸ್ ಠಾಣೆ ಬೇಡಿಕೆ
ಪ್ರಸ್ತುತ ಹೊಸಕೋಟೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 31 ವಾರ್ಡ್ಗಳು ಹಾಗೂ 15 ಸಾವಿರಕ್ಕೂ ಹೆಚ್ಚು ಹಳ್ಳಿಗಳ ಜನಸಂಖ್ಯೆ ಒಳಗೊಂಡಿದೆ. ಪ್ರತ್ಯೇಕ ಗ್ರಾಮಾಂತರ ಪೊಲೀಸ್ ಠಾಣೆ ತೆರೆಯುವಂತೆ ಶಾಸಕರು ಸದನದಲ್ಲಿ ಮನವಿ ಮಾಡಿದ್ದು, ಗೃಹ ಸಚಿವರು ಬಜೆಟ್ನಲ್ಲಿ ಸ್ಪಂದನೆ ಸಿಗುವ ಭರವಸೆ ನೀಡಿದ್ದಾರೆ.
ನೀರಾವರಿ ಮತ್ತು ಒಳಚರಂಡಿಗೆ ಒತ್ತು
ವಂಗಯ್ಯನ ಕೆರೆ ಏತ ನೀರಾವರಿ ಯೋಜನೆ ಅನುಷ್ಠಾನಗೊಂಡಿದ್ದರೂ ಸೂಲಿಬೆಲೆ ಹಾಗೂ ನಂದಗುಡಿ ಹೋಬಳಿಗಳ ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ಹೆಚ್ಚಿನ ಅನುದಾನ ಅಗತ್ಯವಿದೆ. ಜೊತೆಗೆ ₹100 ಕೋಟಿ ವೆಚ್ಚದ ಶಾಶ್ವತ ಒಳಚರಂಡಿ ಕಾಮಗಾರಿ ಮಂಜೂರಾಗಬೇಕು ಎಂಬುದು ನಾಗರಿಕರ ಬೇಡಿಕೆ.
ದೊಡ್ಡ ಅಮಾನಿಕೆರೆ ಪ್ರವಾಸಿ ತಾಣವಾಗುತ್ತದೆಯೇ?
ನಗರದ ದೊಡ್ಡ ಹಾಗೂ ಚಿಕ್ಕ ಅಮಾನಿಕೆರೆಗಳಲ್ಲಿ 200ಕ್ಕೂ ಹೆಚ್ಚು ಜೀವ ವೈವಿಧ್ಯ ಪ್ರಭೇದಗಳಿವೆ. ಇದನ್ನು ಪ್ರವಾಸಿ ಹಾಗೂ ಜೀವ ವೈವಿಧ್ಯ ತಾಣವಾಗಿ ಅಭಿವೃದ್ಧಿಪಡಿಸಬೇಕು ಎಂಬ ಅಭಿಲಾಷೆ ವ್ಯಕ್ತವಾಗಿದೆ.
🔹 ಬಜೆಟ್ ನಿರೀಕ್ಷೆಯ ಪ್ರಮುಖ ಅಂಶಗಳು:
- ಚೆನ್ನ ಬೈರೇಗೌಡ ಕ್ರೀಡಾಂಗಣ ಮೆಲ್ದರ್ಜೆ
- ಶಾಶ್ವತ ಒಳಚರಂಡಿ ಕಾಮಗಾರಿ
- ನೂತನ ನ್ಯಾಯಾಲಯ ಸಂಕೀರ್ಣ
- ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಮತ್ತು ಡಿಪೊ
- ಸರ್ಕಾರಿ ಮಹಿಳಾ ಪದವಿ ಕಾಲೇಜು
-
ಬೆಂಗಳೂರು3 hours agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ21 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ20 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ21 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ19 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
-
ದೇಶ18 hours agoಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
-
ಅಪರಾಧ20 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
-
ದೇಶ21 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
