Connect with us

ಚುನಾವಣೆ

ಮೋದಿ ಸರ್ಕಾರದಿಂದ CAA ಜಾರಿ; ಏನಿದು ಪೌರತ್ವ ತಿದ್ದುಪಡಿ ಕಾಯ್ದೆ?, ಯಾರಿಗೆ ಅನ್ವಯ? ಮುಸ್ಲಿಮರ ವಿರೋಧ ಏಕೆ?

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪೌರತ್ವ ತಿದ್ದುಪಡಿ ಕಾಯ್ದೆ (CAA) ಸೋಮವಾರದಿಂದ ಜಾರಿಗೆ ಬಂದಿದ್ದು, ಗೃಹ ಸಚಿವಾಲಯವು ಸಿಎಎ ನಿಯಮಗಳ ಕುರಿತು ಅಧಿಸೂಚನೆ ಹೊರಡಿಸಿದೆ. ಈ ಮಸೂದೆಯನ್ನು 2019ರ ಡಿಸೆಂಬರ್ 11ರಂದು ಸಂಸತ್ತಿನಲ್ಲಿ ಮಂಡಿಸಿದಾಗ ಸಾಕಷ್ಟು ವಿರೋಧ ವ್ಯಕ್ತವಾಗಿದ್ದವು. ಆದರೆ ಇದೀಗ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲಿ ಮೋದಿ ಸರ್ಕಾರ ಇದನ್ನು ಜಾರಿಗೆ ತಂದಿದೆ.

ಇಷ್ಟಕ್ಕೂ ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?

ದೌರ್ಜನ್ಯಕ್ಕೊಳಗಾಗಿ ಭಾರತಕ್ಕೆ ವಲಸೆ ಬಂದಿರುವ ವಿದೇಶಿ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಯೋಜನೆಯೇ ಪೌರತ್ವ ತಿದ್ದುಪಡಿ ಕಾಯ್ದೆ (CAA). ಇದರಲ್ಲಿ 1955ರ ಪೌರತ್ವ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, 2014ರ ಡಿಸೆಂಬರ್‌ಗಿಂತ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೆ ಬೇಸತ್ತು ಭಾರತಕ್ಕೆ ಆಗಮಿಸಿದ ಅಲ್ಪಸಂಖ್ಯಾತ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡಲಾಗುತ್ತದೆ. 2016 ರಲ್ಲಿ ಲೋಕಸಭೆಯಲ್ಲಿ ಮೊದಲ ಬಾರಿಗೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಮಂಡಿಸಿತ್ತು. ಆದರೆ ರಾಜ್ಯಸಭೆಯಲ್ಲಿ ಬಹುಮತದ ಕೊರತೆಯಿಂದ ಅತಂತ್ರ ಸ್ಥಿತಿಯಲ್ಲಿ ತಲುಪಿತ್ತು. ಬಳಿಕ ಅದನ್ನು ಸಂಸದೀಯ ಸಮಿತಿಗೆ (Cabinet Committee) ಕಳುಹಿಸಲಾಯಿತು. ಬಳಿಕ ಮತ್ತೆ ಡಿಸೆಂಬರ್ 2019 ರಲ್ಲಿ ಲೋಕಸಭೆಯಲ್ಲಿ ಮಂಡಿಸಲಾಯಿತು. ಅಲ್ಲಿಂದ ಅಂಗೀಕಾರವಾದ ಬಳಿಕ ರಾಜ್ಯಸಭೆಯಲ್ಲೂ ಅದನ್ನು ಅಂಗೀಕರಿಸಲಾಯಿತು. ಜನವರಿ 10, 2020 ರಂದು ರಾಷ್ಟ್ರಪತಿಗಳ ಆಂಕಿತ ಕೂಡ ಅದಕ್ಕೆ ಲಭಿಸಿತು.

6 ವರ್ಷಗಳಲ್ಲಿ ಭಾರತೀಯ ಪೌರತ್ವ

ಈ ಕಾಯ್ದೆಯ ಅನ್ವಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನ ದೇಶಗಳಿಂದ ಭಾರತಕ್ಕ ಆಗಮಿಸಿದ ಈ ನಿರಾಶ್ರಿತರಿಗೆ 6 ವರ್ಷಗಳೊಳಗೆ ಭಾರತೀಯ ಪೌರತ್ವ ನೀಡಲಾಗುವುದು. ತಿದ್ದುಪಡಿಯ ಮೂಲಕ, ಈ ನಿರಾಶ್ರಿತರ ಸ್ವಾಭಾವಿಕತೆಯ ನಿವಾಸದ ಅಗತ್ಯವನ್ನು 11 ವರ್ಷಗಳಿಂದ ಐದು ವರ್ಷಗಳಿಗೆ ಕಡಿಮೆ ಮಾಡಲಾಗಿದೆ. ಮಹತ್ವದ ವಿಷಯ ಎಂದರೆ ಸಿಎಎ ಯಾರ ಪೌರತ್ವವನ್ನು ಕಸಿದುಕೊಳ್ಳುವ ಕಾನೂನಲ್ಲ… ಬದಲಿಗೆ ಅದು ಪೌರತ್ವವನ್ನು ನೀಡುವ ಕಾನೂನು ಆಗಿದೆ.

ದೇಶದ ಮುಸ್ಲಿಮರ ವಿರೋಧವೇಕೆ?

ಈ ಕಾಯ್ದೆಯಲ್ಲಿ ಅಥವಾ ಈ ಕಾನೂನಿನಲ್ಲಿ ಮುಸ್ಲಿಮರನ್ನು ಸೇರಿಸಲಾಗಿಲ್ಲ ಅಲ್ಲದೆ ದೇಶದ ಮುಸ್ಲಿಮರ ಪೌರತ್ವವನ್ನು ಕಸಿದುಕೊಳ್ಳಲಾಗುತ್ತದೆ ಎಂಬ ವಾದ ಕೂಡ ಈ ಕಾಯ್ದೆಗೆ ಮುಸ್ಲಿಮರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ. ಈ ಕಾಯಿದೆಯ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಲಾಗುತ್ತದೆ ಮತ್ತು ಇದು ಸಂವಿಧಾನದ 14 ನೇ ವಿಧಿ ಮತ್ತು ಸಮಾನತೆಯ ಹಕ್ಕಿನ

ಉಲ್ಲಂಘನೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ. ಮೂರು ದೇಶಗಳ ಮುಸ್ಲಿಮರಿಗೆ ಪೌರತ್ವ ನೀಡಬೇಕು ಎಂಬ ಬೇಡಿಕೆಯೂ ಇದೆ.

ಭಾರತೀಯ ಮುಸ್ಲಿಮರಿಗೆ ಬೇಕಿಲ್ಲ ಆತಂಕ

ಇನ್ನು ಮೋದಿ ಸರ್ಕಾರ ಹೇಳಿರುವಂತೆ ಈ ಕಾಯ್ದೆಯಿಂದ ಭಾರತೀಯ ಮುಸ್ಲಿಮರಿಗೆ ಯಾವುದೇ ಆತಂಕವಿಲ್ಲ. ಭಾರತೀಯ ಮುಸ್ಲಿಮರ ಪೌರತ್ವವನ್ನು ಈ ಕಾಯ್ದೆ ಕಸಿಯುವುದಿಲ್ಲ. ಆದರೆ ಭಾರತೀಯರಲ್ಲದ ಮುಸ್ಲಿಮರಿಗೆ ಪೌರತ್ವ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಇದುವರೆಗೆ ಅವರಿಗೆ ಪೌರತ್ವ ಹೇಗೆ ಸಿಗುತ್ತಿತ್ತು?

ಯಾರಾದರೂ ಭಾರತದ ಪೌರತ್ವವನ್ನು ಬಯಸಿದರೆ, ಅವರು ಕನಿಷ್ಠ 11 ವರ್ಷಗಳ ಕಾಲ ಭಾರತದಲ್ಲಿ ವಾಸಿಸಬೇಕು ಎಂದು ಕಾನೂನು ಹೇಳುತ್ತದೆ. ಆದರೆ ಹೊಸ ಕಾನೂನಿನ ಪ್ರಕಾರ, ಮೂರು ದೇಶಗಳಿಂದ ಬರುವ ಮುಸ್ಲಿಮೇತರರಿಗೆ 11 ವರ್ಷಗಳ ಬದಲಿಗೆ 6 ವರ್ಷಗಳ ಒಳಗೆ ಪೌರತ್ವ ನೀಡಲಾಗುವುದು ಎನ್ನಲಾಗಿದೆ. ಆದರೆ ಈ ದೇಶಗಳನ್ನು ಹೊರತುಪಡಿಸಿ ಬೇರೆ ದೇಶಗಳಿಂದ ಬರುವ ಜನರು ಯಾವುದೇ ಧರ್ಮ ಅಥವಾ ಸಮುದಾಯಕ್ಕೆ ಸೇರಿದವರಾಗಿದ್ದರೂ ಭಾರತದಲ್ಲಿ 11 ವರ್ಷಗಳ ಕಾಲಾವಧಿ ಪೂರ್ಣಗೊಳಿಸಬೇಕು.

ಸಿಎಎ ಜಾರಿ ಅನುಕೂಲಗಳೇನು?

ಮೋದಿ ಸರ್ಕಾರ ಹೇಳಿದಂತೆ ದಶಕಗಳಿಂದ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಧಾರ್ಮಿಕ ಕಿರುಕುಳ ಎದುರಿಸುತ್ತಿರುವ ಮುಸ್ಲಿಮೇತರರಿಗೆ ಗೌರವಯುತ ಜೀವನವನ್ನು ಒದಗಿಸುವುದು ಇದರ ಮತ್ತೊಂದು ಉದ್ದೇಶವಾಗಿದೆ. ಪೌರತ್ವ ಹಕ್ಕುಗಳು ಅವರ ಭಾಷೆ, ಸಾಂಸ್ಕೃತಿಕ ಮ

ಕ್ರೀಡೆ

ಐಪಿಎಲ್ 2025 ರದ್ದು: ದೇಶದ ಭದ್ರತೆಗೆ ಬಿಸಿಸಿಐ ಆದ್ಯತೆ, ಆರ್‌ಸಿಬಿ ಕನಸು ಭಗ್ನ!

ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತು ಭದ್ರತಾ ಆತಂಕಗಳಿಂದಾಗಿ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಐಪಿಎಲ್ 2025ರ 18ನೇ ಆವೃತ್ತಿಯನ್ನು ಅರ್ಧದಲ್ಲೇ ರದ್ದುಗೊಳಿಸಲಾಗಿದೆ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ಬಿಸಿಸಿಐ ಘೋಷಿಸಿದೆ. ಈ ನಿರ್ಧಾರವು ಕ್ರಿಕೆಟ್ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರ್‌ಸಿಬಿ ಸೇರಿದಂತೆ ಹಲವು ತಂಡಗಳ ಕಪ್ ಗೆಲ್ಲುವ ಕನಸು ಭಗ್ನವಾಗಿದೆ.

ಮೇ 8, 2025 ರಂದು ಪಂಜಾಬ್‌ನ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಐಪಿಎಲ್ 2025ರ 58ನೇ ಪಂದ್ಯದ ವೇಳೆ, 10.1 ಓವರ್‌ಗಳಲ್ಲಿ ಫ್ಲಡ್‌ಲೈಟ್ ವೈಫಲ್ಯದಿಂದಾಗಿ ಆಟ ತಾತ್ಕಾಲಿಕವಾಗಿ ಸ್ಥಗಿತಗೊಂಡಿತು. ಆದರೆ, ಇದಕ್ಕೆ ಕಾರಣ ಪಾಕಿಸ್ತಾನದಿಂದ ನಡೆದ ಡ್ರೋನ್ ದಾಳಿಯಿಂದ ಉಂಟಾದ ವಿದ್ಯುತ್ ಕಡಿತವಾಗಿತ್ತು ಎಂದು ವರದಿಯಾಗಿದೆ. ಭದ್ರತಾ ಕಾರಣಗಳಿಂದ ಆ ಪಂದ್ಯವನ್ನು ರದ್ದುಗೊಳಿಸಲಾಯಿತು, ಮತ್ತು ಕ್ರೀಡಾಂಗಣದಲ್ಲಿದ್ದ ಎಲ್ಲರನ್ನೂ ತಕ್ಷಣವೇ ಸ್ಥಳಾಂತರಿಸಲಾಯಿತು. ಈ ಘಟನೆಯು ಐಪಿಎಲ್‌ನ ಉಳಿದ ಪಂದ್ಯಗಳ ಮೇಲೆ ಗಂಭೀರ ಪರಿಣಾಮ ಬೀರಿತು.

ವಿದೇಶಿ ಆಟಗಾರರ ಭದ್ರತೆ:

ಐಪಿಎಲ್‌ನಲ್ಲಿ ಭಾಗವಹಿಸುವ ವಿದೇಶಿ ಆಟಗಾರರ ಭದ್ರತೆಯು ಬಿಸಿಸಿಐಗೆ ಪ್ರಮುಖ ಆದ್ಯತೆಯಾಗಿದೆ. ಪಾಕಿಸ್ತಾನದಿಂದ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳ ಭೀತಿಯಿಂದಾಗಿ, ದೇಶದ ಭದ್ರತಾ ವ್ಯವಸ್ಥೆಯನ್ನು ತೀವ್ರಗೊಳಿಸಲಾಗಿದೆ. ಈ ಸಂದರ್ಭದಲ್ಲಿ, ವಿದೇಶಿ ಆಟಗಾರರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಸಾಧ್ಯವಾಗದ ಕಾರಣ, ಬಿಸಿಸಿಐ ಐಪಿಎಲ್ 2025ರ ಉಳಿದ 14 ಪಂದ್ಯಗಳನ್ನು ಮತ್ತು ಫೈನಲ್ ಪಂದ್ಯವನ್ನು ರದ್ದುಗೊಳಿಸುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ. ಮೇ 9, 2025 ರಂದು ನಡೆದ ತುರ್ತು ಸಭೆಯಲ್ಲಿ ಈ ತೀರ್ಮಾನವನ್ನು ಘೋಷಿಸಲಾಗಿದೆ ಎಂದು ವರದಿಯಾಗಿದೆ.

ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ

ಐಪಿಎಲ್ 2025ರ ರದ್ದತಿಯ ಸುದ್ದಿಯು ಕ್ರಿಕೆಟ್ ಪ್ರಿಯರಿಗೆ ಭಾರೀ ನಿರಾಸೆಯನ್ನುಂಟು ಮಾಡಿದೆ. ಈಗಾಗಲೇ 57 ಪಂದ್ಯಗಳು ಮುಗಿದಿದ್ದು, ಲೀಗ್ ತನ್ನ ಅಂತಿಮ ಹಂತದಲ್ಲಿತ್ತು. ಆದರೆ, ದೇಶದ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರ್‌ಸಿಬಿ ತಂಡದ ಅಭಿಮಾನಿಗಳಿಗೆ ಈ ವರ್ಷವೂ ಕಪ್ ಗೆಲ್ಲುವ ಕನಸು ಭಗ್ನವಾಗಿದೆ, ಇದು ಅವರಿಗೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳು ತಮ್ಮ ನಿರಾಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ, ಆದರೆ ದೇಶದ ಭದ್ರತೆಗಿಂತ ಕ್ರಿಕೆಟ್ ದೊಡ್ಡದಲ್ಲ ಎಂಬ ಅಭಿಪ್ರಾಯವೂ ಜನಪ್ರಿಯವಾಗಿದೆ.

ಬಿಸಿಸಿಐನ ಸಂದೇಶ

ಬಿಸಿಸಿಐ ಅಧ್ಯಕ್ಷ ಅರುಣ್ ಧುಮಾಲ್ ಈ ಬಗ್ಗೆ ಪ್ರತಿಕ್ರಿಯಿಸಿ, “ದೇಶದ ಭದ್ರತೆಯೇ ನಮಗೆ ಮೊದಲ ಆದ್ಯತೆ. ಆಟಗಾರರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಸಾಧ್ಯವಾಗದ ಸಂದರ್ಭದಲ್ಲಿ, ಐಪಿಎಲ್ 2025ರ ರದ್ದತಿಯ ನಿರ್ಧಾರವು ಅನಿವಾರ್ಯವಾಗಿತ್ತು. ಕ್ರಿಕೆಟ್ ಅಭಿಮಾನಿಗಳಿಗೆ ಈ ನಿರ್ಧಾರ ಕಷ್ಟಕರವಾಗಿದ್ದರೂ, ದೇಶದ ಸುರಕ್ಷತೆಗೆ ಯಾವುದೇ ರಾಜಿಯಿಲ್ಲ,” ಎಂದು ತಿಳಿಸಿದ್ದಾರೆ. ಶೀಘ್ರದಲ್ಲೇ ಈ ರದ್ದತಿಯ ಬಗ್ಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ.

Continue Reading

ಚುನಾವಣೆ

ಮತಗಟ್ಟೆಯಲ್ಲಿ ಸರ್ಕಾರಿ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಅಭ್ಯರ್ಥಿ

ರಾಜಸ್ಥಾನ: ಇಲ್ಲಿನ ಮತಗಟ್ಟೆಯೊಂದರಲ್ಲಿ ಅಘಾತಕಾರಿ ಘಟನೆ ನಡೆದಿದೆ. ಸರ್ಕಾರಿ ಅಧಿಕಾರಿಗೆ ಡಿಯೋಲಿ-ಉನಿಯಾರಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ.

ಡಿಯೋಲಿ-ಉನಿಯಾರಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ನರೇಶ್ ಮೀನಾ ಅವರು, ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಗೆ ಕಪಾಳಮೋಕ್ಷ ಮಾಡುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.

ಸಂರವತ ಮತಗಟ್ಟೆಯಲ್ಲಿ ಈ ಘಟನೆ ನಡೆದಿದೆ. ಮತಗಟ್ಟೆಗೆ ತೆರಳಿದ್ದ ಮೀನಾ ಅವರು, ಚುನಾವಣಾ ಪ್ರೋಟೋಕಾಲ್ ಅನ್ನು ಮೇಲ್ವಿಚಾರಣೆ ಮಾಡಲು ಕರ್ತವ್ಯದಲ್ಲಿದ್ದ ಎಸ್‌ಡಿಎಂ ಅಮಿತ್ ಚೌಧರಿ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ಮಾಡದಂತೆ ತಡೆದಿದ್ದಾರೆ.

2018 ಮತ್ತು 2023 ರಲ್ಲಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಕಾಂಗ್ರೆಸ್ ನಾಯಕ ಹರೀಶ್ ಚಂದ್ರ ಮೀನಾ ಅವರು ಸಾರ್ವತ್ರಿಕ ಚುನಾವಣೆಯ ನಂತರ ಲೋಕಸಭೆಗೆ ಪ್ರವೇಶಿಸಿದ್ದಾರೆ. ತೆರವಾಗಿದ್ದ ಅವರ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ.

1,914 ಮತಗಟ್ಟೆಗಳಲ್ಲಿ 9,000 ಸಿಬ್ಬಂದಿ ನಿಯೋಜಿಸಲಾಗಿದ್ದು, ಡಿಯೋಲಿ-ಉನಿಯಾರಾ ಸೇರಿದಂತೆ ರಾಜಸ್ಥಾನದಾದ್ಯಂತ ಏಳು ವಿಧಾನಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ.

Continue Reading

ಚುನಾವಣೆ

FACT CHECK ಟ್ರಂಪ್ ಭಾಷಣದ ವೇಳೆ ಜನ ಮೋದಿ ಮೋದಿ ಎಂದು ಕೂಗಿದ್ರಾ? ಇಲ್ಲಿದೆ ಅಸಲಿಯತ್ತು

ವಾಷಿಂಗ್ಟನ್: ಟ್ರಂಟ್ ಅವರ ವಿಜಯೋತ್ಸವ ಭಾಷಣದಲ್ಲಿ ಮೋದಿ, ಮೋದಿ ಎಂದು ಕೂಗಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಅದರೆ ಇದೀಗ ಆ ವಿಡಿಯೋ ಎಡಿಟ್ ಮಾಡಿರುವುದು ಎನ್ನಲಾಗಿದೆ,
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರು ಗೆಲುವಿನ ನಂತರ ವಿಜಯದ ಭಾಷಣ ಮಾಡಿದ್ದರು, ಈ ವೇಳೆ ಜನರು ಪ್ರಧಾನಿ ನರೇಂದ್ರ ಮೋದಿ ಹೆಸರನ್ನು ಜಪಿಸುತ್ತಿರುವ ವಿಡಿಯೋ ವೈರೆಲ್ ಆಗಿದೆ,
ಅಮೆರಿಕವನ್ನು ಮತ್ತೆ ಆರೋಗ್ಯವಂತರನ್ನಾಗಿ ಮಾಡಿ ಎಂದು ಟ್ರಂಪ್ ಹೇಳುವುದರೊಂದಿಗೆ ವಿಡಿಯೋ ಪ್ರಾರಂಭವಾಗುತ್ತದೆ, ಅದರ ನಂತರ ಜನರು ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾರೆ, ಇದಕ್ಕೆ ಪ್ರತಿಕ್ರಿಯಿಸಿದ ಟ್ರಂಪ್ ಅವರೊಬ್ಬ ಮಹಾನ್ ವ್ಯಕ್ತಿ ಎಂದು ನನಗೆ ತಿಳಿದಿದೆ ಎಂದು ಹೇಳುತ್ತಾರೆ,
ಅದರೆ ಈ ವಿಡಿಯೋದ ಅಸಲಿಯತ್ತು ಇದೀಗ ಬಯಲಾಗಿದೆ, ಟ್ರಂಪ್ ಅವರ ಸಂಪೂರ್ಣ ಭಾಷಣವಿರುವ ವಿಡಿಯೋದಲ್ಲಿ ಯೂಟ್ಯೂಬ್ ವಿಡಿಯೋದಲ್ಲಿ 19 ನಿಮಿಷ 37 ಸೆಕೆಂಡ್‍ನಲ್ಲಿ ಈ ವಿಡಿಯೋವನ್ನು ಗಮನಿಸಬಹುದಾಗಿದೆ, ಅದರಲ್ಲಿ ಮೋದಿ ಘೋಷಣೆಯಿಲ್ಲ, ಬದಲಿಗೆ ಟ್ರಂಪರ ಮಿತ್ರ ರಾಬರ್ಟ್ ಎಫ್ ಕೆನಡಿ ಜೂನಿಯರ್ ಗಾಗಿ ಜನರು ಘೋಷಣೆ ಕೂಗಿದ್ದಾರೆ, ಈ ವೇಳೆ ಜನರು ಮೋದಿ ಬದಲಿಗೆ ಬಾಬಿ ಎಂಬ ಅಡ್ಡಹೆಸರನ್ನು ಕೂಗಿದ್ದಾರೆ.
ಭಾಷಣದ ವೇಳೆ ಒಮ್ಮೆಯೂ ಜನ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಜಪಿಸಲಿಲ್ಲ, ಟ್ರಂಪ್ ಕೂಡ ಮೋದಿಯನ್ನು ಪ್ರಸ್ತಾಪಿಸಲಿಲ್ಲ ಎನ್ನಲಾಗಿದೆ,

Continue Reading

Trending