Connect with us

ರಾಜಕೀಯ

40 ದಿನಕ್ಕೆ 31 ಹತ್ಯೆ, 300 ಜನರ ಮೇಲೆ ಹಲ್ಲೆ.. ಆಂಧ್ರದಲ್ಲಿ ಮತ್ತೆ ರಕ್ತ ರಾಜಕೀಯ? ಸ್ಫೋಟಕ ಮಾಹಿತಿ ಇಲ್ಲಿದೆ

Published

on

ಹೈದರಾಬಾದ್​: ಒಂದೊಂದು ರಾಜ್ಯಗಳು ಒಂದೊಂದು ರಾಜಕೀಯ ಇತಿಹಾಸವನ್ನು ಹೊಂದಿವೆ. ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ರಾಜಕೀಯ ಇತಿಹಾಸಗಳು ಒಂದೊಂದು ರಾಜ್ಯದಲ್ಲಿಯೂ ವಿಭಿನ್ನ ಹಾಗೂ ಅಧ್ಯಯನಕಾರಕ ಅಂಶಗಳನ್ನೇ ಹೊಂದಿವೆ. ಕರ್ನಾಟಕದ್ದು ಒಂದು ಚರಿತ್ರೆಯಾದ್ರೆ, ನೆರೆ ರಾಜ್ಯಗಳಾದ ಕೇರಳ ಹಾಗೂ ತಮಿಳುನಾಡಿನಲ್ಲಿ ಇನ್ನೊಂದು ಚರಿತ್ರೆಯಿದೆ. ಆದ್ರೆ ಈ ಆಂಧ್ರಪ್ರದೇಶ ರಾಜಕೀಯ ಚರಿತ್ರೆಯೇ ವಿಭಿನ್ನ. ಇಲ್ಲಿ ವಾಗ್ಯುದ್ಧಗಳಿಗಿಂತ, ಟೀಕೆ ಟಿಪ್ಪಣಿಗಳಿಗಿಂತ ಜಾಸ್ತಿ ಚಾಲ್ತಿಯಲ್ಲಿದ್ದಿದ್ದು ಈಗ ಇರೋದು ಕೂಡ ರಕ್ತ ಚರಿತ್ರೆಯೇ. ಇಲ್ಲಿ ಸಣ್ಣ, ಸಣ್ಣ ವಿಷಯಗಳಿಗೆ ಕತ್ತಿ ಝಳಪಿಸುತ್ತೆ. ಕಲ್ಲು ತೂರಿ ಬರುತ್ವೆ, ಇನ್ಯಾರೋ ಇನ್ಯಾರನ್ನೋ ನೇಣಿಗೆ ಬಿಗಿದು ಉಸಿರು ನಿಲ್ಲಿಸುತ್ತಾರೆ. ಈ ಚರಿತ್ರೆ ಈಗ 21ನೇ ಶತಮಾನದಲ್ಲಿಯೂ ಮುಂದುವರಿದಿದೆ. ಈ ರಾಜಕೀಯ ರಕ್ತ ಚರಿತ್ರೆಯ ಕುರಿತು ಅನೇಕ ಸಿನಿಮಾಗಳು ಬಂದಿವೆ. ಕಥೆ ಕಾದಂಬರಿಗಳನ್ನು ಬರೆಯಲಾಗಿದೆ. ಆದರೂ ಕೂಡ ಇಲ್ಲಿನ ರಕ್ತಚರಿತ್ರೆಯ ರಾಜಕೀಯ ಮಾತ್ರ ಬದಲಾಗಿಲ್ಲ. 12ನೇ ಶತಮಾನದಿಂದ ಆರಂಭವಾದ ಈ ರಕ್ತ ರಾಜಕೀಯ ಈಗಲೂ ಕೂಡ ತನ್ನ ಕರಾಳ ಯುದ್ಧವೊಂದನ್ನು ಜಾರಿಯಲ್ಲಿಯೇ ಇಟ್ಟಿದೆ.

2024ರಲ್ಲಿ ಲೋಕಸಭಾ ಚುನಾವಣೆ ಜೊತೆ ಜೊತೆಗೆ ವಿಧಾನಸಭಾ ಚುನಾವಣೆಯನ್ನೂ ಕೂಡ ಎದುರಿಸಿತ್ತು ಆಂಧ್ರಪ್ರದೇಶ. ಐದು ವರ್ಷದ ಜಗನ್ ಸರ್ಕಾರವನ್ನು ತಿರಸ್ಕರಿಸಿದ ಜನರು ಚಂದ್ರಬಾಬು ನಾಯ್ಡು ಹಾಗೂ ಪವನ್ ಕಲ್ಯಾಣ ಜನಸೇನಾ ಪಕ್ಷದ ಮೈತ್ರಿ ಸರ್ಕಾರಕ್ಕೆ ಬಹುಮತ ನೀಡಿದರು. ಅಂದಿನಿಂದ ಇಂದಿನವರೆಗೂ ಆಂಧ್ರಪ್ರದೇಶದ ದಿನಪತ್ರಿಕೆಗಳಲ್ಲಿ ಹರಿದಾಡಿದ್ದು ಕೇವಲ ರಕ್ತ ರಾಜಕೀಯದ ಸುದ್ದಿ. ಚುನಾವಣಾ ಫಲಿತಾಂಶ ಬಂದ ಕೆಲವೇ ಗಂಟೆಗಳಲ್ಲಿ ಗುಂಟೂರಿನಲ್ಲಿರುವ ವೈಎಸ್​ಆರ್​ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ದಾಳಿ ನಡೆಯಿತು, ಕಲ್ಲು ತೂರಾಟಗಳು ನಡೆದವು. ಎರಡು ಪಕ್ಷಗಳ ನಡುವಿನ ವೈರತ್ವ ಬೇರೆಯದ್ದೇ ಸೀಮೆ ತಲುಪಿತು ಕೊನೆಗೆ ಟಿಡಿಪಿಯ ನಾಯಕನೊಬ್ಬ ವೈಎಸ್​ಆರ್ ಕಾಂಗ್ರೆಸ್​ ಮುಖಂಡನ ಹತ್ಯೆ ಮಾಡಿದ ಮೇಲೆ ಆಂಧ್ರಪ್ರದೇಶ ಮತ್ತೊಂದು ಬಾರಿ ರಕ್ತ ರಾಜಕೀಯಕ್ಕೆ ಸಾಕ್ಷಿಯಾಯ್ತು.

ಪಲ್ನಾಡು ಜಿಲ್ಲೆಯಲ್ಲಿ ಜುಲೈ 17ನೇ ತಾರೀಖಿನ ರಾತ್ರಿ ಸುಮಾರು 8.30ಕ್ಕೆ ಬರ್ಬರ ಹತ್ಯೆಯೊಂದು ಈಗ ಆಂಧ್ರಪ್ರದೇಶದ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಎಸ್​.ಕೆ ಜೈಲಾನಿ ಅನ್ನೋ ವ್ಯಕ್ತಿ ರಶೀದ್​ ಎಂಬು 25 ವರ್ಷದ ಯುವಕನನ್ನು ನಟ್ಟನಡು ರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ. ಹತ್ಯೆಯಾದ ಯುವಕ ರಶೀದ್​ನನ್ನು ವೈಎಸ್​ಆರ್​ಪಿ ಕಾಂಗ್ರೆಸ್​ನ ಯುವ ಘಟಕದ ಸದಸ್ಯ ಎಂದು ಗುರುತಿಸಲಾಗಿದೆ. ಚಾಕುವಿನಿಂದ ಇರಿದು ಕೊಂದಿದ್ದಲ್ಲದೇ ಆತನ ಕೈಗಳನ್ನು ಕತ್ತರಿಸಿ ಹಾಕಲಾಗಿತ್ತು. ಜನನಿಬೀಡ ಪ್ರದೇಶದಲ್ಲಿಯೇ, ನಟ್ಟ ನಡು ರಸ್ತೆಯಲ್ಲಿಯೇ ನಡೆದು ಹೋದ ಈ ಭೀಕರ ಹತ್ಯೆ ಕಂಡ ಜನರು ಬೆಚ್ಚಿ ಬಿದ್ದು ಹೋಗಿದ್ದರು. ಈ ಒಂದು ಕೊಲೆ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಟಿಡಿಪಿ ಮತ್ತು ವೈಎಸ್​ಆರ್​ ಕಾಂಗ್ರೆಸ್ ನಾಯಕರ ನಡುವೆ ಜೋರಾದ ವಾಗ್ಯುದ್ಧಗಳಿಗೆ ಸಾಕ್ಷಿಯಾಗಿದೆ.

ಎಕ್ಸ್ ಖಾತೆಯಲ್ಲಿ ಉಭಯ ಪಾರ್ಟಿಗಳ ನಾಯಕರು ಒಬ್ಬರ ಮೇಲೋಬ್ಬರು ಮುಗಿಬೀಳುತ್ತಿದ್ದಾರೆ. ಟಿಡಿಪಿ ಸರ್ಕಾರ ರಚನೆಯಾಗಿ ಕೇವಲ ಒಂದೇ ಒಂದು ತಿಂಗಳಲ್ಲಿ ಒಟ್ಟು 31 ಜನರ ಹತ್ಯೆಯಾಗಿದೆ. 300 ಜನರ ಮೇಲೆ ಮಾರಣಾಂತಿಕ ಹಲ್ಲೆಗಳಾಗಿವೆ. 35 ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ ಇವೆಲ್ಲವೂ ಕೂಡ ಟಿಡಿಪಿ ಪಕ್ಷದ ನಾಯಕರ ಶೋಷಣೆಯಿಂದಲೇ ನಡೆದಿವೆ. ಇಷ್ಟು ಮಾತ್ರವಲ್ಲ 560 ಖಾಸಗಿಯವರ ಆಸ್ತಿಗಳನ್ನು ಧ್ವಂಸಗೊಳಿಸಲಾಗಿದೆ. 490 ಸರ್ಕಾರಿ ಆಸ್ತಿಗಳ ಮೇಲೆ ದಾಳಿ ನಡೆದಿದೆ. 2700 ಜನರು ತಮ್ಮ ಹಳ್ಳಿಗಳನ್ನು ತೊರೆದು ಬೇರೆಡೆಗೆ ಹೋಗಿದ್ದಾರೆ. ಇವೆಲ್ಲವೂ ಟಿಡಿಪಿ ಪಕ್ಷದ ಶೋಷಣೆ, ದುರ್ವತನೆಯಿಂದಲೇ ನಡೆಯುತ್ತಿವೆ ಎಂದು ವೈಎಸ್​ಆರ್​ ಕಾಂಗ್ರೆಸ್ ನಾಯಕರು ನಾಯ್ಡು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯ

Cabinet Expansion: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಾಯಕರ ಪೈಪೋಟಿ; ಹೈಕಮಾಂಡ್ ಅಂತಿಮ ತೀರ್ಮಾನ ಯಾವಾಗ?

Published

on

ಬೆಂಗಳೂರು: Cabinet Expansion ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತ ಚಟುವಟಿಕೆಗಳು ಮತ್ತೆ ವೇಗ ಪಡೆದಿದ್ದು, ಶೀಘ್ರದಲ್ಲೇ ರಾಜ್ಯದ ಪ್ರಮುಖ ನಾಯಕರಿಗೆ ದೆಹಲಿ ಬುಲಾವ್ ಬರಬಹುದಾದ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಹೈಕಮಾಂಡ್ ನಾಯಕರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ 20 ಸಚಿವ ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ರಾಜ್ಯ ನಾಯಕರು ತಮ್ಮ ಬೆಂಬಲಿಗ ಶಾಸಕರ ಪಟ್ಟಿಯೊಂದಿಗೆ ದೆಹಲಿಗೆ ತೆರಳಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಾದೇಶಿಕ, ಜಾತಿ ಹಾಗೂ ರಾಜಕೀಯ ಸಮೀಕರಣಗಳ ಆಧಾರದ ಮೇಲೆ ಸಚಿವರ ಆಯ್ಕೆ ನಡೆಯುವ ಸಾಧ್ಯತೆ ಇದೆ.

ಜುಲೈ 14ರಿಂದ ಆಷಾಢ ಮಾಸ ಆರಂಭವಾಗಲಿರುವ ಹಿನ್ನೆಲೆ, ಅದರ ಮೊದಲು ಸಂಪುಟ ವಿಸ್ತರಣೆ ನಡೆಯಬಹುದೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿಲ್ಲ.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದೆ ಎಂದು ಹೇಳಿದ್ದು, ಬರ ಹಾಗೂ ಪ್ರವಾಹದಂತಹ ಸನ್ನಿವೇಶಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಪೂರ್ಣ ಪ್ರಮಾಣದ ಸಚಿವ ಸಂಪುಟ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇತ್ತ ಹಲವು ಕಾಂಗ್ರೆಸ್ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮುಂದುವರಿಸಿದ್ದಾರೆ. ಅಜಯ್ ಸಿಂಗ್, ಸಿ. ಪುಟ್ಟರಂಗಶೆಟ್ಟಿ, ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ ಹಲವು ನಾಯಕರು ತಮ್ಮ ಹಕ್ಕು ಮಂಡಿಸುತ್ತಿದ್ದಾರೆ. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳುವ ನಿರ್ಧಾರದತ್ತ ರಾಜ್ಯ ರಾಜಕೀಯದ ಗಮನ ನೆಟ್ಟಿದೆ.

Continue Reading

ರಾಜ್ಯ

Mysore ನಲ್ಲಿ ಬಿ.ವೈ. ವಿಜಯೇಂದ್ರ ಹೇಳಿದ್ದೇನು? ಕಾಂಗ್ರೆಸ್, ಮೋದಿ ಹಾಗೂ ದಸರಾ ಕುರಿತು ತೀಕ್ಷ್ಣ ಮಾತು

Published

on

ಮೈಸೂರು: Mysore ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಸರ್ಕಾರದ ಹಲವು ನೀತಿಗಳ ಕುರಿತು ಟೀಕಿಸಿದ್ದಾರೆ. ಮೈಸೂರಿನಲ್ಲಿ ನಡೆದ ಕಾಯಕ ಸಮಾಜಗಳ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಕೇವಲ ಜಾತಿಯ ಕಾರಣದಿಂದಲೇ ಪ್ರಧಾನಿಯವರನ್ನು ಗುರಿಯಾಗಿಸಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

“ಅತ್ಯಂತ ಹಿಂದುಳಿದ ವರ್ಗದಿಂದ ಬಂದಿರುವ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿರುವುದನ್ನು ಕಾಂಗ್ರೆಸ್ ನಾಯಕರು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ವಿಜಯೇಂದ್ರ ಹೇಳಿದರು. ಅಲ್ಲದೆ, ಅಲ್ಪಸಂಖ್ಯಾತರ ಓಲೈಕೆಗಾಗಿ ರಾಜ್ಯ ಸರ್ಕಾರ ಬಹುಸಂಖ್ಯಾತರ ಹಿತಾಸಕ್ತಿಯನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶ ಮೂಲದ ವಲಸಿಗರಿಗೆ ವಾಸದ ದೃಢೀಕರಣ ಪತ್ರಗಳನ್ನು ನೀಡಲಾಗುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದ್ದು, ಈ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ತಕ್ಷಣದ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಇದೇ ವೇಳೆ, ಮೈಸೂರಿನ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂದರ್ಭದಲ್ಲಿ ಕಂಬಳ ಆಯೋಜಿಸುವ ಸರ್ಕಾರದ ಪ್ರಸ್ತಾವಕ್ಕೂ ಅವರು ವಿರೋಧ ವ್ಯಕ್ತಪಡಿಸಿದರು. ಕಂಬಳ ಕರಾವಳಿ ಭಾಗದ ಸಾಂಪ್ರದಾಯಿಕ ಕ್ರೀಡೆಯಾಗಿದ್ದು, ಅದನ್ನು ಅಲ್ಲಿಯೇ ಇನ್ನಷ್ಟು ಅದ್ದೂರಿಯಾಗಿ ನಡೆಸಬೇಕು. ಮೈಸೂರಿನ ಐತಿಹಾಸಿಕ ದಸರಾ ಸಂಪ್ರದಾಯದೊಂದಿಗೆ ಕಂಬಳವನ್ನು ಸೇರಿಸುವುದು ಸೂಕ್ತವಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಸಮಾವೇಶದಲ್ಲಿ ಮಾತನಾಡಿದ ವಿಜಯೇಂದ್ರ, ಸರ್ಕಾರ ಜನರ ಭಾವನೆಗಳಿಗೆ ಗೌರವ ನೀಡಿ ರಾಜ್ಯದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Continue Reading

ರಾಜ್ಯ

Bengaluru 2nd Airport: ದಕ್ಷಿಣ ಬೆಂಗಳೂರಿನ ಜನರಿಗೆ ಗುಡ್ ನ್ಯೂಸ್! ಡಿಕೆ ಶಿವಕುಮಾರ್ ಹೇಳಿದ್ದೇನು?

Published

on

ಬೆಂಗಳೂರು: Bengaluru 2nd Airport ನಗರದ ಬಹುಕಾಲದ ನಿರೀಕ್ಷೆಯಾಗಿರುವ ಎರಡನೇ ವಿಮಾನ ನಿಲ್ದಾಣ (Bengaluru Second Airport) ನಿರ್ಮಾಣ ಯೋಜನೆಗೆ ಮಹತ್ವದ ಬೆಳವಣಿಗೆ ಸಿಕ್ಕಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಹೊಸ ವಿಮಾನ ನಿಲ್ದಾಣವು ಬೆಂಗಳೂರು ದಕ್ಷಿಣ ಭಾಗದಲ್ಲೇ ನಿರ್ಮಾಣವಾಗುವ ಸಾಧ್ಯತೆ ಹೆಚ್ಚಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಮಾತನಾಡಿದ ಅವರು, ಈಗಾಗಲೇ ಬಂದಿರುವ ಪ್ರಸ್ತಾವನೆಗಳಲ್ಲಿ ಹೆಚ್ಚಿನವು ದಕ್ಷಿಣ ಬೆಂಗಳೂರಿಗೆ ಸಂಬಂಧಿಸಿದ್ದು, ಸರ್ಕಾರ ಕೆಲವು ಪ್ರಮುಖ ಷರತ್ತುಗಳನ್ನು ಮುಂದಿಟ್ಟಿದೆ ಎಂದರು.

ಹೊಸ ವಿಮಾನ ನಿಲ್ದಾಣಕ್ಕಾಗಿ ಯಾವುದೇ ಗ್ರಾಮವನ್ನು ಸ್ಥಳಾಂತರಿಸಬಾರದು. ಭೂಸ್ವಾಧೀನಕ್ಕೆ ಕಡಿಮೆ ವೆಚ್ಚವಾಗಬೇಕು. ಕಡಿಮೆ ಜಾಗದಲ್ಲಿಯೇ ತಾಂತ್ರಿಕವಾಗಿ ಕಾರ್ಯಸಾಧುವಾಗುವ ಪ್ರದೇಶವನ್ನು ಆಯ್ಕೆ ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಪ್ರಸ್ತುತ ಚೂಡಹಳ್ಳಿ (ಕನಕಪುರ ರಸ್ತೆ-ಮೈಸೂರು ರಸ್ತೆ ನಡುವೆ) ಹಾಗೂ ಸೋಮನಹಳ್ಳಿ (ಕನಕಪುರ ರಸ್ತೆ-ಬನ್ನೇರುಘಟ್ಟ ರಸ್ತೆ ನಡುವೆ) ಪ್ರಮುಖ ಆಯ್ಕೆಗಳಾಗಿ ಪರಿಗಣನೆಯಲ್ಲಿವೆ. ಈ ಪ್ರದೇಶಗಳಲ್ಲಿ ಸಾವಿರಾರು ಎಕರೆ ಭೂಮಿ ಲಭ್ಯವಿರುವುದರಿಂದ ಅಧಿಕಾರಿಗಳು ತಾಂತ್ರಿಕ ಹಾಗೂ ಭೂಸ್ವಾಧೀನದ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದಾರೆ.

ಪ್ರಸ್ತುತ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ದಕ್ಷಿಣ ಬೆಂಗಳೂರಿನ ಜನರು ವಿಮಾನ ನಿಲ್ದಾಣ ತಲುಪಲು ಹಲವು ಗಂಟೆಗಳ ಕಾಲ ಪ್ರಯಾಣಿಸಬೇಕಾಗುತ್ತಿರುವುದರಿಂದ, ಹೊಸ ವಿಮಾನ ನಿಲ್ದಾಣ ನಿರ್ಮಾಣವು ಸಂಚಾರ ದಟ್ಟಣೆ ಕಡಿಮೆ ಮಾಡುವುದರ ಜೊತೆಗೆ ಪ್ರಯಾಣದ ಸಮಯವನ್ನು ಉಳಿಸುವ ನಿರೀಕ್ಷೆಯಿದೆ.

ರಾಜ್ಯ ಸರ್ಕಾರ ಅಂತಿಮವಾಗಿ ಸೂಕ್ತ ಸ್ಥಳವನ್ನು ಗುರುತಿಸಿದ ಬಳಿಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದ್ದು, ಅನುಮೋದನೆ ದೊರೆತ ನಂತರ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ.

Continue Reading

Trending