Connect with us

ರಾಜಕೀಯ

ಸುಮಲತಾ ಅಕ್ಕ ತಾಳ್ಮೆಯಿಂದರಬೇಕೆಂದ ಆಪ್ತ ಸಚ್ಚಿದಾನಂದ!

ಬೆಂಗಳೂರು: ಅಂಬರೀಶ್ ಅಣ್ಣ ಅವರ ಅಭಿಮಾನಿ ಆಗಿ ಹೇಳುತ್ತೇನೆ. ಸಂಸದೆ ಸುಮಲತಾ ಅಕ್ಕನಿಗೆ ಭವಿಷ್ಯ ಇದೆ. ಅವರು ತಾಳ್ಮೆಯಿಂದ ಇರಬೇಕು ಎಂದು ಆಪ್ತ, ಸುಮಲತಾ ಬೆಂಬಲಿಗ ಸಚ್ಚಿದಾನಂದ ಹೇಳಿದ್ದಾರೆ. ಆದರೆ, ಈ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರ ನರ‍್ಧಾರ ಮಾತ್ರ ಇನ್ನೂ ಕುತೂಹಲವಾಗಿದೆ.
ಮಾಧ್ಯಮದವರೊಂದಿಗೆ ಮಾತನಾಡಿದ ಸಚ್ಚಿದಾನಂದ, ಅಂಬರೀಶ್ ಅವರ ಕುಟುಂಬಕ್ಕೆ ಉತ್ತಮ ಹೆಸರಿದೆ. ನಮ್ಮ ರಾಷ್ಟ್ರೀಯ ನಾಯಕರು ಸುಮಲತಾ ಅವರ ಸಂರ‍್ಕದಲ್ಲಿದ್ದಾರೆ. ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಂಡ್ಯದಲ್ಲಿ ಸಭೆ ಕರೆದಿದ್ದಾರೆ. ಈ ಬಾರಿ ಮಂಡ್ಯದಲ್ಲಿ ಮೈತ್ರಿ ಅಭ್ರ‍್ಥಿ ಗೆಲ್ಲೋದು ಖಚಿತ. ಬಿಜೆಪಿ – ಜೆಡಿಎಸ್‌ ಒಟ್ಟಿಗೆ ಕೆಲಸ ಮಾಡಲಿದೆ ಎಂದು ಹೇಳಿದರು.
ಯಾರೇ ಅಭ್ರ‍್ಥಿಯಾದರೂ ಸುಮಲತಾ ಪ್ರಚಾರಕ್ಕೆ ಬರುತ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚ್ಚಿದಾನಂದ, ಸುಮಲತಾ ಅವರ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ. ನಮಗೆ ಸುಮಲತಾ ಅವರು ವಿಧಾನಸಭೆ ಚುನಾವಣೆ ಸಂರ‍್ಭದಲ್ಲಿ ಬಂದು ಆಶರ‍್ವಾದ ಮಾಡಿದ್ದರು. ನಾನೊಬ್ಬ ಶ್ರೀರಂಗಪಟ್ಟಣದಲ್ಲಿ ಪರಾಜಿತ ಅಭ್ರ‍್ಥಿಯಾಗಿದ್ದೇನೆ. ನೂರಕ್ಕೆ ನೂರು ಅವರು ನನಗೆ ಬಾಹ್ಯ ಬೆಂಬಲ ನೀಡಿದ್ದರು. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಸುಮಲತಾ ಜತೆ ಮಾತನಾಡಿದ್ದಾರೆ ಎಂದು ತಿಳಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರು ಮೇಲುಕೋಟೆಯನ್ನು ಹೊರತುಪಡಿಸಿ ಎಲ್ಲ ಅಭ್ರ‍್ಥಿಗಳ ಪರ ಎರಡು ದಿನ ಕ್ಯಾಂಪೇನ್ ಮಾಡಿದ್ದರು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರ ಪರ ಅವರು ವಿಶ್ವಾಸದ ಮಾತುಗಳನ್ನು ಹೇಳಿದ್ದಾರೆ. ನಾಳೆ ಮಂಡ್ಯದಲ್ಲಿ ವಿಜಯೇಂದ್ರ ಅವರು ಸಭೆ ಕರೆದಿದ್ದು, ಎಲ್ಲಾ ವಿಚಾರಗಳು ಅಲ್ಲಿ ರ‍್ಚೆಯಾಗಲಿದೆ ಎಂದು ಸಚ್ಚಿದಾನಂದ ಹೇಳಿದರು.

ಸುಮಲತಾಗೆ ಸುಲಭವಲ್ಲ

ತನಗೇ ಟಿಕೆಟ್ ಅಂತ ಕಾನ್ಫಿಡೆಂಟ್ ಆಗಿದ್ದ ಸುಮಲತಾ ಅವರು ಈ ಬಾರಿಯೂ ಹಳೇ ನರ‍್ಧಾರವನ್ನು ತೆಗೆದುಕೊಳ್ತಾರಾ? ಪಕ್ಷೇತರವಾಗಿ ನಿಲ್ಲುವ ಮೂಲಕ ಮೈತ್ರಿ ಅಭ್ರ‍್ಥಿಗೆ ಟಕ್ಕರ್‌ ಕೊಡ್ತಾರಾ? ಎಂಬುದು ಸದ್ಯದ ಪ್ರಶ್ನೆಯಾಗಿದೆ. ಆದರೆ, ಕಳೆದ ಬಾರಿ ಸುಮಲತಾ ಸ್ರ‍್ಧೆ ಮಾಡಿದ್ದರಿಂದ ಅವರಿಗೆ ಬೆಂಬಲ ನೀಡಿದ್ದ ಬಿಜೆಪಿ ತನ್ನ ಅಭ್ರ‍್ಥಿಯನ್ನು ಹಾಕಿರಲಿಲ್ಲ. ಅಲ್ಲದೆ, ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿಯಲ್ಲಿ ಬಿರುಕು ಮೂಡಿದ್ದು ಸಹ ಸುಮಲತಾ ಅವರಿಗೆ ಪ್ಲಸ್‌ ಆಗಿತ್ತು. ಈಗ ಹಾಗಾಗದು. ಜೆಡಿಎಸ್‌ ತನ್ನ ಅಭ್ರ‍್ಥಿಯನ್ನು ಕಣಕ್ಕೆ ಇಳಿಸಲಿದ್ದು, ಬಿಜೆಪಿ ಮೈತ್ರಿ ಅಭ್ರ‍್ಥಿಯ ಬೆಂಬಲಕ್ಕೆ ನಿಲ್ಲಲಿದೆ. ಕಾಂಗ್ರೆಸ್‌ ಸಹ ತನ್ನ ಅಭ್ರ‍್ಥಿಯನ್ನು ಹಾಕಿದ್ದರಿಂದ ಈ ಬಾರಿ ಸ್ರ‍್ಧೆ ಮಾಡಿದರೂ ಏಕಾಂಗಿಯಾಗಬೇಕಾಗುತ್ತದೆ. ಇದರಿಂದ ಸುಮಲತಾಗೆ ಸುಲಭವಲ್ಲ ಎಂಬ ಸತ್ಯ ಅವರಿಗೂ ಗೊತ್ತಿದೆ. ಜತೆಗೆ ಮಗನ ರಾಜಕೀಯ ಭವಿಷ್ಯವನ್ನೂ ನೋಡಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸುಮಲತಾ ಅಂಬರೀಶ್‌ ನರ‍್ಧಾರ ಈಗ ಮಹತ್ವ ಪಡೆದುಕೊಂಡಿದೆ.

ಬೆಂಗಳೂರು

ಅಗಸ್ಟ್ 10 ರಂದು ಬೆಂಗಳೂರು ಮೆಟ್ರೋ ಫೇಸ್-3 ಶಂಕುಸ್ಥಾಪನೆ: ಪ್ರಧಾನಿ ಮೋದಿ ಉದ್ಘಾಟನೆ ನೆರವೇರಿಸಲಿದ್ದಾರೆ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಮತ್ತೊಂದು ಸಿಹಿ ಸುದ್ದಿ. ಬೆಂಗಳೂರು ಮೆಟ್ರೋ ಫೇಸ್-3 ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಸ್ಟ್ 10ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಪ್ರಕಟಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಗಸ್ಟ್ 10ರಂದು ಪ್ರಧಾನಿ ಮೋದಿ ಮೆಟ್ರೋ ಯೆಲ್ಲೋ ಲೈನ್ ಅನ್ನು ಉದ್ಘಾಟಿಸುವುದರ ಜೊತೆಗೆ ಜೆಪಿ ನಗರ ವೆಗಾಸಿಟಿ ಮಾಲ್‌ನಿಂದ ಕಡಬಗೆರೆವರೆಗೆ ವಿಸ್ತರಿಸಲಾಗಿರುವ ಮೆಟ್ರೋ ಮಾರ್ಗದ ಶಂಕುಸ್ಥಾಪನೆ ಕಾರ್ಯವನ್ನು ಸಹ ನೆರವೇರಿಸಲಿದ್ದಾರೆ,” ಎಂದು ಹೇಳಿದರು.

ಈ ಯೋಜನೆಯು ಸುಮಾರು ₹17,000 ಕೋಟಿ ವೆಚ್ಚದ ಫೇಸ್-3 ಯೋಜನೆಯ ಭಾಗವಾಗಿದೆ. ಮೊದಲೇ ಯೆಲ್ಲೋ ಲೈನ್ ಶಂಕುಸ್ಥಾಪನೆಗೆ ಮೋದಿ ಅವರೇ ಆಗಿದ್ದರೆ, ಈಗ ಉದ್ಘಾಟನೆಯ ಗೌರವವೂ ಅವರಿಗೇ ಸಲ್ಲಲಿದೆ.

ಡಿಸಿಎಂ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ:
ಡಿಸಿಎಂ ಡಿ.ಕೆ. ಶಿವಕುಮಾರ್ ಮೆಟ್ರೋ ಯೋಜನೆಯಲ್ಲಿ ರಾಜ್ಯದ ಪಾತ್ರವಿದೆ ಎಂದು ಹೇಳಿರುವುದರ ಬಗ್ಗೆ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸುತ್ತಾ, “ಇದುವರೆಗೆ ಈ ಯೋಜನೆಯ ಬಗ್ಗೆ ಯಾವ ರಾಜ್ಯ ಸಚಿವರೂ ಚಿಂತೆ ಮಾಡಿಲ್ಲ. ಪ್ರಧಾನಿ ಬರುವ ಸುದ್ದಿ ತಿಳಿಯುತ್ತಿದ್ದಂತೆ ಕ್ರೆಡಿಟ್ ಕಳಿಸಲು ಮುಂದಾಗಿದ್ದಾರೆ,” ಎಂದು ಟೀಕಿಸಿದರು.

ಫ್ಲೈಓವರ್ ಪ್ರಗತಿಯ ಮೇಲೂ ಟೀಕೆ:
“ಈಜಿಪುರದ 2.5 ಕಿ.ಮೀ ಫ್ಲೈಓವರ್‌ನ್ನು ಎಂಟು ವರ್ಷಗಳಿಂದ ಪೂರ್ಣಗೊಳಿಸಲಾಗಿಲ್ಲ. ಅದರೆ ಇದೀಗ 100 ಕಿ.ಮೀ ರಸ್ತೆಗಳ ಯೋಜನೆ ಪ್ರಾರಂಭಿಸಿದ್ದಾರೆ,” ಎಂದು ಹೇಳಿದ್ದಾರೆ.

ಮೆಟ್ರೋ ಯೋಜನೆಗೆ ಹಿಂದೆ ಸರ್ಕಾರದ ಕೊಡುಗೆ:
ಕೊರೋನಾ ಸಮಯದಲ್ಲೂ ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರ್ಕಾರಗಳು ಅನುದಾನ ಒದಗಿಸಿ ಕೆಲಸ ಮುಂದುವರೆದಿದ್ದವು. ಆದರೆ ಇದೀಗ ಎಂಡಿ ನೇಮಕ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಳಂಬ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

Continue Reading

ರಾಜಕೀಯ

ಮಾಜಿ ಡಿಸಿಎಂ ಈಶ್ವರಪ್ಪ ಮತ್ತೆ ಭಾರೀ ವಾಗ್ದಾಳಿ: ಯಡಿಯೂರಪ್ಪ ಕುಟುಂಬ, ಬಿಜೆಪಿಗೆ ತೀವ್ರ ಕಿಡಿ

ಬಳ್ಳಾರಿ:
ಬಿಜೆಪಿಯಿಂದ ಉಚ್ಚಾಟನೆಯಾದ ನಂತರ ಸೈಲೆಂಟ್ ಆಗಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಸುದ್ದಿಯಲ್ಲಿ ಮೂಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನದು ಭಾರತೀಯ ಬಿಜೆಪಿಯ ಟೀಮ್, ಯಾವುದೇ ಗುಂಪಿನೊಂದಿಗೆ ನಾನು ಹೋಗುವುದಿಲ್ಲ. ಆದರೆ ಬಿಜೆಪಿ ಶುದ್ಧೀಕರಣಗೊಳ್ಳಬೇಕು ಎಂಬುದು ಎಲ್ಲರ ಅಭಿಪ್ರಾಯ. ಅದು ನನ್ನದು ಸಹ ಆಗಿದೆ,” ಎಂದು ಪರೋಕ್ಷವಾಗಿ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈಶ್ವರಪ್ಪನ ಈ ಹೇಳಿಕೆ ಕೇಸರಿಪಾಳ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಅನೇಕ ನಾಯಕರು ಈಶ್ವರಪ್ಪನ ನೇರ ಭಾಷೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಯಡಿಯೂರಪ್ಪನ ಕುಟುಂಬದ ಮದುವೆಯಲ್ಲಿ ಭಾಗವಹಿಸಿದ ಈಶ್ವರಪ್ಪ:
ಇತ್ತೀಚೆಗೆ ಈಶ್ವರಪ್ಪ ಯಡಿಯೂರಪ್ಪನ ಮೊಮ್ಮಗನ ಮದುವೆಯಲ್ಲಿ ಭಾಗವಹಿಸಿ ಎಲ್ಲರಿಗೂ ಆಶ್ಚರ್ಯ ತಂದಿದ್ದರು. ಈ ಘಟನೆಯ ಬಳಿಕ ಅವರು ಮತ್ತೆ ಪಕ್ಷದ ಪರ ನಿಂತು ಮಾತನಾಡಿದ್ದಾರೆ.

ಎಫ್‌ಐಆರ್ ದಾಖಲು:
ಇದಕ್ಕೂ ಮಿಕ್ಕಿ, ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕೇಸ್ ದಾಖಲಾಗಿದೆ.

ಅದಕ್ಕೂ ಹಿಂದಿನ ಘಟನೆಗಳು:
ಈ ಪ್ರಕರಣ ಸಂಬಂಧ ಕಳೆದ ಏಪ್ರಿಲ್‌ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸೂಚಿಸಿತ್ತು. ಇದೀಗ ಖಾಸಗಿ ವಕೀಲ ವಿನೋದ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

Continue Reading

ರಾಜಕೀಯ

ಮತಗಳ್ಳತನದ ದಾಖಲೆ ಬಿಡುಗಡೆಗೆ ರಾಹುಲ್ ಗಾಂಧಿ ಸಜ್ಜು: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಯಾವತ್ತೂ “ಹಿಟ್ ಅಂಡ್ ರನ್” ರಾಜಕೀಯ ಮಾಡಲ್ಲ, ಎಲ್ಲದಕ್ಕೂ ದಾಖಲಾತಿಗಳಿವೆ. ಕರ್ನಾಟಕದಲ್ಲಿ ನಡೆದ ಮತಗಳ್ಳತನದ ಬಗ್ಗೆ ದಾಖಲೆಗಳನ್ನು ರಾಹುಲ್ ಗಾಂಧಿ ಬಹಿರಂಗಪಡಿಸುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, “ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ಮೂಲಕ ಮತಗಳ್ಳತನದ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಆ.8 ರಂದು ಇದೇ ಕುರಿತು ಕರ್ನಾಟಕದಲ್ಲಿಯೂ ಸಾಕ್ಷ್ಯ ಬಿಡುಗಡೆ ಮಾಡಲಾಗುತ್ತದೆ” ಎಂದು ಹೇಳಿದರು.

ಇದೊಂದು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗ ಯಾರ ನಿಯಂತ್ರಣದಲ್ಲಿದೆ ಎಂಬುದನ್ನು ಜನತೆಯೇ ನಿರ್ಧರಿಸಬೇಕಿದೆ ಎಂದು ಅವರು ಹೇಳಿದ್ದಾರೆ.

BJP ಪ್ರತಿಕ್ರಿಯೆ ಬಗ್ಗೆ ಖರ್ಗೆ ಪ್ರತಿಸ್ಪಂದನೆ:

“ನಾವು ಆರೋಪವನ್ನೇ ಮಾಡಿಲ್ಲ. documentation ಇದೆ, ಅದನ್ನೇ ತೋರಿಸುತ್ತಿದ್ದೇವೆ. ಬಿಜೆಪಿಯವರು ಏಕೆ ಎಲ್ಲಾ ಸಂಸ್ಥೆಗಳ ವಕ್ತಾರರಂತೆ ಮಾತನಾಡುತ್ತಿದ್ದಾರೆ? ಆಯಾ ಸಂಸ್ಥೆಗಳಿಗೆ ತಮ್ಮದೇ ಆದ ವಕ್ತಾರರು ಇದ್ದಾರೆ, ಅವರು ಸ್ಪಷ್ಟನೆ ನೀಡಲಿ,” ಎಂದು ತೀವ್ರ ಟೀಕೆ ಮಾಡಿದರು.

Continue Reading

Trending