ಚುನಾವಣೆ
ಬಿಜೆಪಿ ಪಕ್ಷಕ್ಕೆ ನನ್ನ ಅವಶ್ಯಕತೆ ಇಲ್ಲ ಶಾಸಕ ಎಸ್ ಟಿ ಸೋಮಶೇಖರ್
ಬೆಂಗಳೂರು : ಭಾರತೀಯ ಜನತಾ ಪಕ್ಷಕ್ಕೆ ನನ್ನ ಅವಶ್ಯಕತೆ ಇಲ್ಲ ಎಂದು ಯಶವಂತಪುರ ಶಾಸಕರಾದ ಎಸ್ ಟಿ ಸೋಮಶೇಖರ್ ಹೇಳಿದರು. ಮೈಸೂರು ರಸ್ತೆಯಲ್ಲಿ ಇರುವ ಕೆರೆಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಶುದ್ಧೀಕರಿಸಿದ ಎಸ್ಟಿಪಿ ನೀರನ್ನು ಕೆರೆಗೆ ಹರಿಸುವ ಮೂಲಕ ಅಂತರ್ಜಲ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಕೆರೆಗೆ ನೀರನ್ನು ಬಿಡುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು.
ಈ ಸಂದರ್ಭದಲ್ಲಿ ಅವರು ಮಾತನಾಡುತ್ತ ಹಿಂದಿನ ಸರ್ಕಾರದಲ್ಲಿ ಕೆರೆಗಳನ್ನು ತುಂಬಿಸಬೇಕು ಎಂಬ ಯೋಜನೆ ಆಗಿತ್ತು ಇಂದು 5 ಕೆರೆಗಳನ್ನು ತುಂಬಿಸಬೇಕು ಎಂದು ಸಣ್ಣ ನೀರಾವರಿ ಇಲಾಖೆ ಯಶವಂತಪುರ ಕ್ಷೇತ್ರದಲ್ಲಿ ಚಾಲನೆ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಂದು ನಮ್ಮ ಕ್ಷೇತ್ರದಲ್ಲಿ ಇರುವ 9 – 10 ಕೆರೆಗಳನ್ನು ತುಂಬಿಸುವ ಕೆಲಸ ಪ್ರಾರಂಭಿಸಲಾಗಿದೆ. ಕೆರೆಗೆ ಶುದ್ಧೀಕರಣ ಮಾಡಿದ ನೀರನ್ನು ತುಂಬಿಸುವುದರಿಂದ ಅಂತರ್ಜಲ ವೃದ್ಧಿಯಾಗುವುದು ಹಾಗೂ ಪ್ರಾಣಿ,ಪಕ್ಷಿಗಳಿಗೆ ನೀರು ಸಿಗುವುದು. ಕಳೆದ ವರ್ಷ ನಾನು ಈ ಕೆರೆಗಳು ಶುದ್ಧೀಕರಣ ಹಾಗೂ ನೀರು ತುಂಬಿಸುವ ಕೆಲಸಕ್ಕೆ ಚಾಲನೆ ನೀಡಿದೆ. ಇಂದು ಸ್ಧಳೀಯ ಕೆಲ ಆರ್ಎಸ್ಎಸ್ ಅವರು ನಾವು ಕೆರೆಗೆ ನೀರು ತುಂಬಿಸುವ ಕಾರ್ಯ ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಅವರುಗಳು ಹೇಳುವುದು ಸುಳ್ಳು ಎಂದರು.
ಯಶವಂತಪುರ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಬಿಜೆಪಿ ಪರ ಮತಯಾಚನೆ ಮಾಡಲ್ಲ. ಏಕೆಂದರೆ ಬಿಜೆಪಿ ಪಕ್ಷಕ್ಕೆ ನನ್ನ ಅವಶ್ಯಕತೆ ಇಲ್ಲ ಹಾಗೂ ಯಾರು ಕೂಡ ನನನ್ನೂ ಸಂಪರ್ಕ ಮಾಡಿಲ್ಲ. ಅವರಿಗೆ ಕ್ಷೇತ್ರದ ಶಾಸಕರ ಸಹಾಯ ಬೇಡ ಎಂದ ಮೇಲೆ ನಾನು ಏಕೆ ಅವರನ್ನು ಸಂಪರ್ಕ ಮಾಡಲಿ. ಅವರು ನನ್ನ ಸಹಾಯ ಇಲ್ಲದೇ ಗೆಲ್ಲುತ್ತಾರೆ ಎಂದರೆ ನನಗೆ ಸಮಸ್ಯೆಯೂ ಇಲ್ಲ ಹಾಗೂ ನನಗೆ ಸಂತೋಷ ಕೂಡ ಎಂದರು.
ಕಾರ್ಯಕ್ರಮದಲ್ಲಿ ಸ್ಧಳೀಯ ಕಾಂಗ್ರೆಸ್ ಮುಖಂಡರಾದ ಕೆ.ವೈ. ಕೃಷ್ಣ ಅವರು ಮಾತನಾಡುತ್ತ ನಮ್ಮ ಶಾಸಕರಾದ ಎಸ್ ಟಿ ಸೋಮಶೇಖರ್ ಅವರು ಕ್ಷೇತ್ರದ ಅಭಿವೃದ್ಧಿ ಕೆಲಸವೇ ಅವರ ಧ್ಯೇಯ ಎಂದೇ ಕೆಲಸ ಮಾಡುತ್ತಾರೆ. ಇಂದು ಸ್ಧಳೀಯ ನೀರಿನ ಹಾಗೂ ಇತರೆ ಸಮಸ್ಯೆಗಳು ಸಾರ್ವಜನಿಕರು ಅವರಿಗೆ ವಾಟ್ಸಪ್ ಮೂಲಕ ತಿಳಿಸಿದ ಕೂಡಲೇ ಅವರಿಗೆ ಸ್ಪಂದಿಸುತ್ತಾರೆ. ನಗರದಲ್ಲಿ ನೀರಿನ ಸಮಸ್ಯೆ ಇರುವುದು ಎಲ್ಲರಿಗೂ ತಿಳಿದಿರುವ ವಿಷಯ ಈ ನೀರಿನ ಸಮಸ್ಯೆಯಿಂದ ಸಾರ್ವಜನಿಕರು ಎಷ್ಟು ಸಮಸ್ಯೆಯನ್ನು ಎದುರಿಸುತಿದ್ದಾರೆ ಎಂಬುವುದು ದಿನನಿತ್ಯ ನೋಡುತ್ತಿದ್ದೇವೆ.
ಕೆಲ ಬಡಾವಣೆಗಳಿಗೆ ಸ್ಧಳೀಯ ಮುಖಂಡರುಗಳು ನೀರಿನ ಟ್ಯಾಂಕ್ ವ್ಯವಸ್ಧೆಯನ್ನು ಶಾಸಕರ ಮಾರ್ಗದರ್ಶನದಲ್ಲಿ ನಾವುಗಳು ಮಾಡುತ್ತಿದ್ದೇವೆ. ವಿರೋಧ ಪಕ್ಷದ ಕೆಲ ಮುಖಂಡರುಗಳು ಜನರ ಸಮಸ್ಯೆಗಳಿಗೆ ಸ್ಪಂಧಿಸುತ್ತಿಲ್ಲ ಹಾಗೂ ಕೆಂಗೇರಿ ಸುತ್ತಮುತ್ತ ಕೆರೆಗಳಿಗೆ ಎಸ್ಟಿಪಿಯಿಂದ ಶುದ್ಧೀಕರಿಸಿದ ನೀರಿನಿಂದ ಸಾಕಷ್ಟು ಅನುಕೂಲಗಳು ಆಗುತ್ತದೆ.
ಕ್ಷೇತ್ರದ ಶಾಸಕರಾದ ಎಸ್ ಟಿ ಸೋಮಶೇಖರ್ ಅವರ ಈ ಕೆಲಸಕ್ಕೆ ಸ್ಧಳೀಯ ಸಾರ್ವಜನಿಕರು ಕೂಡು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಪ್ರಭಾಕರ್, ಮಹೇಂದ್ರ ಕಿರಣ್, ಡಾ.ಅನುಪಮಾ ಪಂಚಾಕ್ಷರಿ, ಕೆ ಆರ್ ಮೂರ್ತಿ, ಸಬೀಹಾ ಅಂಜು0, ಪುರೋಷತಮ್ ಉಪಸ್ಧಿತರಿದ್ದರು,
ಚುನಾವಣೆ
“ಟ್ರಂಪ್ ಅನುಮತಿ ಇಲ್ಲದೆ ತೈಲ ಖರೀದಿ ಸಾಧ್ಯವಿಲ್ಲ”: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಅಸ್ಸಾಂ ರಾಜ್ಯದ ಗೋಲಾಘಾಟ್ನಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುರಿತು ಉಲ್ಲೇಖಿಸಿದ ಅವರು, “ಟ್ರಂಪ್ ಅನುಮತಿ ಇಲ್ಲದೆ ಭಾರತ ಯಾವುದೇ ದೇಶದಿಂದ ತೈಲ ಖರೀದಿಸಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದರು.
ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಟ್ರಂಪ್ ಬಹಿರಂಗವಾಗಿ ಮೋದಿ ಬಗ್ಗೆ ಹೇಳಿಕೆ ನೀಡಿದ್ದಾರೆ. ನರೇಂದ್ರ ಮೋದಿ ಭಾರತದ ಇಂಧನ ಭದ್ರತೆ ಮತ್ತು ಪ್ರಮುಖ ಮಾಹಿತಿಯನ್ನು ಅಮೆರಿಕದ ಕೈಗೆ ಒಪ್ಪಿಸಿದ್ದಾರೆ,” ಎಂದು ಗಂಭೀರ ಆರೋಪ ಮಾಡಿದರು.
ಇದೇ ವೇಳೆ ಅವರು ಎಪ್ಸ್ಟೀನ್ ಫೈಲ್ ಕುರಿತು ಉಲ್ಲೇಖಿಸಿ, ಟ್ರಂಪ್ ಬಳಿ ಮೋದಿ ಬಗ್ಗೆ ಮಾಹಿತಿಯಿದೆ ಎಂದು ಹೇಳಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಜೊತೆಗೆ, ಉದ್ಯಮಿ ಅದಾನಿ ವಿರುದ್ಧ ಅಮೆರಿಕದಲ್ಲಿ ಪ್ರಕರಣ ದಾಖಲಾಗಿರುವುದನ್ನೂ ಅವರು ಪ್ರಸ್ತಾಪಿಸಿದರು.
ಈ ನಡುವೆ ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆ ಸನ್ನಾಹಗಳು ಜೋರಾಗಿದ್ದು, ಅಸ್ಸಾಂ ಸೇರಿದಂತೆ ಹಲವೆಡೆ ರಾಜಕೀಯ ತಾಪಮಾನ ಏರಿಕೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಟಿಎಂಸಿ ಪ್ರಚಾರ ತೀವ್ರಗೊಳಿಸಿದ್ದು, ಬಿಜೆಪಿ ಕೂಡ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ತೀವ್ರ ಪ್ರಚಾರ ನಡೆಸುತ್ತಿದೆ.
ಒಟ್ಟಿನಲ್ಲಿ, ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ಮಾತಿನ ಸಮರ ಮತ್ತಷ್ಟು ತೀವ್ರಗೊಳ್ಳುವ ಸೂಚನೆ ನೀಡಿದೆ.
ಚುನಾವಣೆ
TN 2026 ಟೀಸರ್ಗೆ ರಾಜಕೀಯ ಕಿಚ್ಚು! ವಿಜಯ್ ಟಾರ್ಗೆಟ್ ಆರೋಪ – ತಮಿಳುನಾಡಿನಲ್ಲಿ ಬಿಗುವಿನ ವಾತಾವರಣ
ಚೆನ್ನೈ: ಮುಂದಿನ ವಾರ ಬಿಡುಗಡೆಯಾಗಲಿರುವ ತಮಿಳು ಸಿನಿಮಾ TN 2026 – ತಂಗೈ ನಚ್ಚಥಿರಂ ಟೀಸರ್ ಏಪ್ರಿಲ್ 2ರಂದು ಬಿಡುಗಡೆಯಾದ ಬಳಿಕ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಟೀಸರ್ನಲ್ಲಿ ನಟ Nataraj (Natti) ಅಭಿನಯಿಸಿರುವ “ಗೋಲ್ಡನ್ ಸ್ಟಾರ್ ಗುಲ್ಕಂದ್ ಕುಮಾರ್” ಎಂಬ ಪಾತ್ರ ರಾಜಕೀಯಕ್ಕೆ ಪ್ರವೇಶಿಸುವುದನ್ನು ತೋರಿಸಲಾಗಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ.
ಟೀಸರ್ ವೈರಲ್ ಆದ ತಕ್ಷಣ, Tamilaga Vettri Kazhagam (ಟಿವಿಕೆ) ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ನಟ Vijay ಅವರನ್ನು ಗುರಿಯಾಗಿಸಿಕೊಂಡು ಟೀಸರ್ ರೂಪಿಸಲಾಗಿದೆ ಎಂಬುದು ಅವರ ಆರೋಪವಾಗಿದೆ.
ಟೀಸರ್ನಲ್ಲಿ ಗುಲ್ಕಂದ್ ಕುಮಾರ್ ಪಾತ್ರವು ಬಿಳಿ ಶರ್ಟ್ ಮತ್ತು ಖಾಕಿ ಪ್ಯಾಂಟ್ ಧರಿಸಿ, ವಿಜಯ್ ಅವರಂತೆಯೇ ‘ಸಾಲ್ಟ್ ಅಂಡ್ ಪೆಪ್ಪರ್’ ಲುಕ್ನಲ್ಲಿ ಕಾಣಿಸಿಕೊಂಡಿದ್ದು, ಜೊತೆಗೆ ಅವರ ನಡಿಗೆ ಮತ್ತು ಜನರತ್ತ ಕೈ ಬೀಸುವ ಶೈಲಿಯನ್ನು ಅನುಕರಿಸಿರುವುದು ವಿವಾದಕ್ಕೆ ಪ್ರಮುಖ ಕಾರಣವಾಗಿದೆ. ಅಲ್ಲದೆ, ನಟ Redin Kingsley ಅವರ ಪಾತ್ರವೊಂದು ವೇದಿಕೆಯಲ್ಲಿ “ಹೇ ಮೂವಿ-ಬಾಯ್…” ಎಂದು ಗೇಲಿ ಮಾಡುವ ಸಂಭಾಷಣೆ ಕೂಡ ಟೀಕೆಗೆ ಗುರಿಯಾಗಿದೆ.
ಟೀಸರ್ ಕೊನೆಯಲ್ಲಿ ಕೇಳಿಬರುವ “ಓಂ ಶಕ್ತಿ ಪರಾಶಕ್ತಿ” ಘೋಷಣೆ ಕೂಡ ವಿಜಯ್ ಇತ್ತೀಚೆಗೆ ರಾಜಕೀಯ ವೇದಿಕೆಯಲ್ಲಿ ಬಳಸಿದ ನುಡಿಗಟ್ಟನ್ನು ಹೋಲುತ್ತದೆ ಎನ್ನಲಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಟಿವಿಕೆ ನಾಯಕ Aadhav Arjun, “ಇದು ವಿಜಯ್ ವರ್ಚಸ್ಸಿಗೆ ಧಕ್ಕೆ ತರಲು Dravida Munnetra Kazhagam (ಡಿಎಂಕೆ) ಮತ್ತು ಬಿಜೆಪಿ ಜಂಟಿಯಾಗಿ ನಡೆಸಿದ ಪಿತೂರಿ” ಎಂದು ಆರೋಪಿಸಿದ್ದಾರೆ. ಜನರು ಇಂತಹ ಚಿತ್ರಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದೂ ಅವರು ಕಿಡಿಕಾರಿದ್ದಾರೆ.
Umapathy Ramaiah ನಿರ್ದೇಶನದ ಈ ಚಿತ್ರದಲ್ಲಿ Thambi Ramaiah, M. S. Bhaskar, Ilavarasu, Yashika Aannand ಸೇರಿದಂತೆ ಹಲವು ನಟರು ಅಭಿನಯಿಸಿದ್ದಾರೆ. ಏಪ್ರಿಲ್ 10ರಂದು ಬಿಡುಗಡೆಯಾಗಲಿರುವ ಈ ಚಿತ್ರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತದೆಯೇ ಎಂಬ ಕುತೂಹಲ ಹೆಚ್ಚಾಗಿದೆ.
ಚುನಾವಣೆ
“ನಾಲ್ಕು ಮದುವೆಗೆ ಬ್ರೇಕ್” – ಶಾ ಘೋಷಣೆ ಸಂಚಲನ
ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆಯ ಕಾವು ತೀವ್ರಗೊಳ್ಳುತ್ತಿದ್ದಂತೆ, ಕೇಂದ್ರ ಗೃಹ ಸಚಿವ Amit Shah ಮಹತ್ವದ ಘೋಷಣೆ ಮಾಡಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಗೋಲ್ಪಾರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಶಾ, “ಅಕ್ರಮ ನುಸುಳುಕೋರರು ನಾಲ್ಕು ಮದುವೆಯಾಗುವುದನ್ನು ತಡೆಯಲು ಯುಸಿಸಿ ಅಗತ್ಯ. ನಾವು ಮತ್ತೆ ಅಧಿಕಾರಕ್ಕೆ ಬಂದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು. ಪ್ರಧಾನಿ Narendra Modi ಮತ್ತು ಅಸ್ಸಾಂ ಮುಖ್ಯಮಂತ್ರಿ Himanta Biswa Sarma ಬುಡಕಟ್ಟು ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಿದ್ದಾರೆ ಎಂದರು.
ಬುಡಕಟ್ಟು ಪ್ರದೇಶಗಳಲ್ಲಿ ಯುಸಿಸಿ ಜಾರಿಯಾಗುವುದಿಲ್ಲ ಎಂಬುದನ್ನು ಶಾ ಸ್ಪಷ್ಟಪಡಿಸಿ, ಕಾಂಗ್ರೆಸ್ ಹರಡುತ್ತಿರುವ ಗಾಳಿಸುದ್ದಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. “ಬುಡಕಟ್ಟು ಪ್ರದೇಶಗಳನ್ನು ಯುಸಿಸಿಯಿಂದ ಹೊರಗಿಡಲಾಗುತ್ತದೆ” ಎಂದು ಹೇಳಿದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, “70 ವರ್ಷ ಆಡಳಿತ ನಡೆಸಿದರೂ ಬುಡಕಟ್ಟು ಮಹಿಳೆಯನ್ನು ರಾಷ್ಟ್ರಪತಿಯಾಗಿಸಲು ಸಾಧ್ಯವಾಗಲಿಲ್ಲ. ಆದರೆ ಮೋದಿ ನಾಯಕತ್ವದಲ್ಲಿ ಅದು ಸಾಧ್ಯವಾಯಿತು” ಎಂದು ಟೀಕಿಸಿದರು.
Assam ವಿಧಾನಸಭಾ ಚುನಾವಣೆ ಏಪ್ರಿಲ್ 9ರಂದು ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಎರಡು ಅವಧಿಗೆ ಮುಖ್ಯಮಂತ್ರಿ ಆಗಿರುವ ಹಿಮಂತ ಬಿಸ್ವಾ ಶರ್ಮಾ ಮತ್ತೆ ಅಧಿಕಾರಕ್ಕೇರಲು ಯತ್ನಿಸುತ್ತಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರ ಮರುಪಡೆಯಲು ಹೋರಾಟ ನಡೆಸುತ್ತಿದೆ.
ಒಟ್ಟಿನಲ್ಲಿ, ಯುಸಿಸಿ ವಿಚಾರ ಚುನಾವಣೆಯಲ್ಲಿ ಪ್ರಮುಖ ಅಸ್ತ್ರವಾಗಿದ್ದು, ಅಸ್ಸಾಂ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
-
ದೇಶ8 hours ago“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್ ಟಾಂಗ್, ದಾವಣಗೆರೆ ರಾಜಕೀಯ ಕುತೂಹಲ
-
ದೇಶ8 hours agoಕಾಗದ-ಇಂಕ್ ಬೆಲೆ ಏರಿಕೆ: ಪ್ರಿಂಟಿಂಗ್ ಪ್ರೆಸ್ಗಳಿಗೆ ಶಾಕ್
-
ದೇಶ6 hours agoಪೊಲೀಸ್ ವಾಹನವೇ ಪ್ರವೇಶಿಸದ ಗ್ರಾಮ: ಶಾಂತಿಯುತ ಬದುಕಿನ ಅದ್ಭುತ ಕಥೆ
-
ದೇಶ7 hours agoIndian Railways: ರೈಲಲ್ಲೇ ಮದುವೆ ಸಂಭ್ರಮ: Indian Railwaysನಲ್ಲಿ ಹೊಸ ಟ್ರೆಂಡ್!
-
ಕ್ರೀಡೆ4 hours agoಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!
-
ದೇಶ8 hours ago‘I Love My Daughter’ ಟೀ ಶರ್ಟ್ನಲ್ಲಿ ಸಂಭ್ರಮ: ವಿಚ್ಛೇದನಕ್ಕೆ ಹೊಸ ಅರ್ಥ ನೀಡಿದ ಕುಟುಂಬ
-
ದೇಶ7 hours agoಎನ್ಎಂಎಸಿಸಿ ವೇದಿಕೆಯಲ್ಲಿ ನೀತಾ ಅಂಬಾನಿ ಸೀರೆ ಸದ್ದು: ಐವರಿ-ಗೋಲ್ಡ್ ಲುಕ್ ವೈರಲ್
-
ದೇಶ7 hours agoಟ್ರಂಪ್ ದೇಶದಲ್ಲಿ ಭಾರತೀಯರ ಸದ್ದು: ಮೇಯರ್ ರೇಸ್ನಲ್ಲಿ ತಮಿಳುನಾಡಿನ ಕುವರಿ
