ಚುನಾವಣೆ

 ಕೋಲಾರ ಮೀಸಲು ಕ್ಷೇತ್ರದಿಂದ ಕೆ. ವಿ ಗೌತಮ್ ಕಾಂಗ್ರೆಸ್ ಅಭ್ಯರ್ಥಿ

ಬೆಂಗಳೂರು: ಕೋಲಾರ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ. ಭಾರೀ ರಾಜಕೀಯ ಹೈಡ್ರಾಮಾಕ್ಕೆ ತೆರೆಬಿದ್ದಿದ್ದು, ಕಾರ್ಪೊರೇಟರ್ ವಿಜಯ್ ಕುಮಾರ್ ಅವರ ಪುತ್ರ ಕೆ ವಿ ಗೌತಮ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ.

ಈ ಕುರಿತು ಎಐಸಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಈ ಮೂಲಕ ಸಚಿವ ಕೆ ಹೆಚ್ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಕ್ಕೆ ಹಿನ್ನಡೆಯಾಗಿದೆ. ಕೋಲಾರ ಮೀಸಲು ಲೋಕಸಭೆ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆ ಭಾಪೀ ಕಗ್ಗಂಟಾಗಿ ಎಡಗೈ ಮತ್ತು ಬಲಗೈ ಬಣಗಳು ತೀವ್ರ ಹೊಡೆದಾಟ ನಡೆಸಿದ್ದವು.

ಸಚಿವ ಕೆಎಚ್‌ ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ನಡುವಿನ ಜಗಳ ತಾರಕಕ್ಕೇರಿದ್ದು, ಅಭ್ಯರ್ಥಿ ಆಯ್ಕೆ ಸದ್ಯ ಹೈಕಮಾಂಡ್ ಅಂಗಳಕ್ಕೆ ತಲುಪಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಸಂಧಾನ ಸಭೆ ಕೂ ನಡೆದಿತ್ತು.

ಕಾಂಗ್ರೆಸ್​​ ಪರಿಶಿಷ್ಟ ಎಡಗೈ ಸಮುದಾಯದ ಮಾಜಿ ಮೇಯರ್​ ವಿಜಯ್​ ಕುಮಾರ್​ ಅವರ ಪುತ್ರ ಕೆ.ವಿ. (K Goudtam) ಅವರಿಗೆ ನೀಡಿದೆ.

Trending

Exit mobile version