Connect with us

ದೇಶ

ಪಾರಿವಾಳಗಳನ್ನೇ ಬೇಹುಗಾರಿಕೆಗೆ ಬಳಸೋದ್ಯಾಕೆ? 

ಈಗ ಶ್ವಾನ ಪಡೆಯಂತೆ ಅದೇ ರೀತಿ ಮಹಾಯುದ್ಧದ ವೇಳೆ ಪಾರಿವಾಳಗಳ ದಳ ಇತ್ತು. ಅಮೆರಿಕ (America) ಸೇನೆಯಲ್ಲಿದ್ದ ಚೆರ್ ಅಮಿ (CherAmi) ಎಂಬ ಪಾರಿವಾಳ 1918 ಅಕ್ಟೋಬರ್ 14ರಂದು ಜರ್ಮನ್ ಸೇನೆ ವಿರುದ್ಧದ ಆಪರೇಷನ್‌ ಭಾಗಿಯಾಗಿ ಸುಮಾರು 194 ಸೈನಿಕರ ರಕ್ಷಣೆಗೆ ಕಾರಣವಾಗಿತ್ತು. ಬೆಟ್ಟ ಪ್ರದೇಶವೊಂದರಲ್ಲಿ ಅಮೆರಿಕದ ಸೈನಿಕರನ್ನು ಸಂಪೂರ್ಣವಾಗಿ ಜರ್ಮನ್ ಸೈನಿಕರು ಸುತ್ತುವರೆದಿದ್ದಾಗ ಚೆರ್ ಅಮಿ ಪಾರಿವಾಳವನ್ನ ಆ ಭಾಗಕ್ಕೆ ಕಳುಹಿಸಲಾಗಿತ್ತು. ಈ ವೇಳೆ ಪಾರಿವಾಳದ ದೇಹಕ್ಕೆ ಅಮೆರಿಕ ಸೈನಿಕರು ಪತ್ರವೊಂದನ್ನು ಕಟ್ಟಿ ಕಳಿಸುತ್ತಾರೆ. ಚೆರ್ ಅಮಿ ಹಾರಿ ಬರುವಾಗ ಜರ್ಮನ್ ಸೈನಿಕರ ಗುಂಡಿನ ದಾಳಿಯಾಗಿ ಕಾಲಿಗೆ ಗುಂಡು ತಗುಲುತ್ತದೆ. ಇಷ್ಟಾದರೂ ಅಮೆರಿಕ ಸೇನಾ ನೆಲೆಗೆ ವಾಪಸ್ ಬಂದು ಸಂದೇಶ ನೀಡುತ್ತದೆ. ಬಳಿಕ ಅಮೆರಿಕ ಸೇನೆ ಕಾರ್ಯಾಚರಣೆ ನಡೆಸಿ ತನ್ನೆಲ್ಲಾ ಸೈನಿಕರನ್ನು ರಕ್ಷಿಸಿತ್ತು. 1919 ಜೂನ್ 13ರಂದು ಚೆರ್ ಅಮಿ ಪಾರಿವಾಳ ಸಾವನ್ನಪ್ಪುತ್ತದೆ.

ಪಾರಿವಾಳಗಳ ಸಾಮರ್ಥ್ಯ ಎಷ್ಟಿದೆ?

ಬೇಹುಗಾರಿಕೆ ಹಾಗೂ ಪತ್ರ ರವಾನೆಗೆ ಪಾರಿವಾಳಗಳನ್ನು ಬಳಸೋಕೆ ಒಂದು ಕಾರಣ ಇದೆ. ಏಕೆಂದರೆ ಪಾರಿವಾಳಗಳು ಎಷ್ಟೇ ದೂರ ಹೋದರು, ಎಲ್ಲಿಂದ ಹಾರಾಟ ಶುರು ಮಾಡುತ್ತವೆಯೋ ಅಲ್ಲಿಗೆ ಮರಳುವ ಸಾಮರ್ಥ್ಯವಿದೆ. ಇದೇ ಕಾರಣಕ್ಕೆ 1917ರಲ್ಲಿ ಅಮೆರಿಕದ ಗುಪ್ತಚುರಕ ಸಿಐಎ ಪಾರಿವಾಳಗಳ ಮೂಲಕ ಗೂಢಾಚಾರಿಕೆ ನಡೆಸಲು ನಿರ್ಧರಿಸಿತ್ತು. ಪಾರಿವಾಳಗಳಿಗೆ ವಿಶೇಷ ತರಬೇತಿ ನೀಡಿ, ಅವುಗಳ ಕಾಲಿಗೆ ಕ್ಯಾಮೆರಾ ಕಟ್ಟಿ ಹಲವು ಆಪರೇಷನ್‍ಗಳನ್ನು ಅಮೆರಿಕ ಮಾಡಿದೆ. ಮಹಾಯುದ್ಧ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಪಾರಿವಾಳಗಳ ಕಾಲಿಗೆ ಕಟ್ಟಿ ತೆಗೆಯಲಾಗಿದ್ದ ಫೋಟೋಗಳನ್ನ 2019ರಲ್ಲಿ ಸಿಐಎ ಬಿಡುಗಡೆ ಕೂಡ ಮಾಡಿತ್ತು. ಕೋಲ್ಡ್ ವಾರ್ ಸಮಯದಲ್ಲಿ ರಷ್ಯಾ ರಾಜಧಾನಿ ಮಾಸ್ಕೋಗೂ ಅಮೆರಿಕ ತನ್ನ ಪಾರಿವಾಳಗಳನ್ನ ಕಳುಹಿಸಿತ್ತು. ರಷ್ಯಾ ಸಬ್‍ಮರೀನ್‌ಗಳನ್ನು ನಿರ್ಮಿಸುತ್ತಿರುವುದನ್ನು ಇದೇ ಪರಿವಾಳಗಳು ಪತ್ತೆ ಮಾಡಿದ್ದವು. ಪಾರಿವಾಳಗಳು ನೆಲಕ್ಕೆ ತುಂಬಾ ಹತ್ತಿರದಲ್ಲೇ ಹಾರುವುದರಿಂದ ಅವುಗಳ ಮೂಲಕ ಬೇಹುಗಾರಿಕೆ ಕೂಡ ಸುಲಭವಾಗಿದೆ. 

ಪಾರಿವಾಳಗಳಿಗೆ ದಾರಿ ತಪ್ಪಿದರೂ ಸಹ ಕೆಲ ಸಮಯದ ಬಳಿಕ ಮತ್ತೆ ಎಲ್ಲಿಂದ ಬಂದಿದ್ದವೋ ಅಲ್ಲಿಗೇ ಬಂದಿಳಿಯುತ್ತವೆ. ಪಾರಿವಾಳಗಳಿಗೆ ಈ ಸಾಮರ್ಥ್ಯದ ಬಗ್ಗೆ ಈಗಲೂ ಸಂಶೋಧನೆ ನಡೆಯುತ್ತಿದೆ. ಕೆಲವು ಸಂಶೋಧಕರ ಪ್ರಕಾರ, ಸೂರ್ಯನ ಸಂಚಾರವನ್ನ ಗಮನಿಸಿ ಪಾರಿವಾಳಗಳು ಮಾರ್ಗ ಹಾಗೂ ಜಾಗವನ್ನು ಪತ್ತೆ ಹಚ್ಚುತ್ತವೆ ಎನ್ನುತ್ತಾರೆ. 

ಎಂಟು ತಿಂಗಳ ಬಳಿಕ ಜೈಲಿಂದ ಬಿಡುಗಡೆಯಾದ ಪಾರಿವಾಳಗಳು!

ಈ ವರ್ಷ ಜ.30 ರಂದು, ಚೀನಾದ ಗೂಢಚಾರ ಎಂದು ಶಂಕಿಸಲಾದ ಪಾರಿವಾಳವನ್ನು ಮುಂಬೈನಲ್ಲಿ ಎಂಟು ತಿಂಗಳ ಬಂಧನದ ನಂತರ ಕಾಡಿಗೆ ಬಿಡಲಾಯಿತು. ಈ ಪಾರಿವಾಳಗಳನ್ನು ಮೇ 2023 ರಲ್ಲಿ ಮುಂಬೈ ಬಂದರಿನ ಬಳಿ ಅದರ ಉಂಗುರಗಳ ಮೇಲಿನ ಚೈನೀಸ್ ಬರಹದ ಆಧಾರದ ಮೇಲೆ ಇದು ಬೇಹುಗಾರಿಕೆಯ ಅನುಮಾನವನ್ನು ಹುಟ್ಟುಹಾಕಿತ್ತು. ಸಂಪೂರ್ಣ ತನಿಖೆ ಬಳಿಕ ಇದು ತೈವಾನ್‍ನಿಂದ ತಪ್ಪಿಸಿಕೊಂಡು ಆಕಸ್ಮಿಕವಾಗಿ ಭಾರತವನ್ನು ತಲುಪಿದೆ ಎಂದು ತಿಳಿದು ಬಂದಿತ್ತು

2016ರಲ್ಲಿ ಪಾಕಿಸ್ತಾನದ 150 ಬೇಹುಗಾರಿಕಾ ಪಾರಿವಾಳಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಪಾರಿವಾಳಗಳ ಮೇಲೆ ಜಮ್ಮುವಿನ ಉಪ ಆಯುಕ್ತರ ಕುರಿತಂತೆ ಕೆಲ ಪದಗಳನ್ನು ಬರೆಯಲಾಗಿತ್ತು. ಅಲ್ಲದೇ ಪಾರಿವಾಳಗಳ ಕಾಲಿಗೆ ಕೆಲ ವಿಶೇಷವಾದ ಆಯಸ್ಕಾಂತೀಯ ರಿಂಗ್ ಗಳನ್ನೂ ಹಾಕಲಾಗಿತ್ತು. ಹೀಗಾಗಿ ಪಾರಿವಾಳಗಳನ್ನು ಬೇಹುಗಾರಿಕೆಗೆ ಬಳಸಿಕೊಳ್ಳಲಾಗುತ್ತಿರುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು.

ಈ ಹಿಂದೆ ಭಾರತ ಹಾಗೂ ಪಾಕ್ ಗಡಿಯಲ್ಲಿ ಬಲೂನ್‍ಗಳನ್ನು ಪಾರಿವಾಳ ಕಾಲಿಗೆ ಕಟ್ಟಿ ಪ್ರಧಾನಮಂತ್ರಿ ನರೇಂದ್ರಮೋದಿಯವರಿಗೆ ಉರ್ದು ಭಾಷೆಯಲ್ಲಿ ಬೆದರಿಕೆ ಹಾಕಿದ್ದನ್ನು ನಾವಿಲ್ಲಿ ಗಮನಿಸಬಹುದು

ಪಾರಿವಾಳಗಳಂತೆ ಡಾಲ್ಫಿನ್‌, ಯಾಕ್‌ ಕೂಡ ಬಳಕೆ 

ಪಾರಿವಾಳಗಳನ್ನು ಮೀರಿ, 1960 ರ ದಶಕದಿಂದಲೂ ಅಮೆರಿಕ ನೌಕಾಪಡೆಯಿಂದ ತರಬೇತಿ ಪಡೆದ ಡಾಲ್ಫಿನ್‍ಗಳನ್ನು ಜಲಾಂತರ್ಗಾಮಿ ನೌಕೆಗಳು ಮತ್ತು ನೀರೊಳಗಿನ ಗಣಿಗಳನ್ನು ಪತ್ತೆಹಚ್ಚಲು ಬಳಸಲಾಗುತ್ತಿದೆ. ಚೀನಾ ಗಡಿಯಲ್ಲಿ ಯಾಕ್‍ಗಳನ್ನು ಬೇಹುಗಾರಿಕೆಗೆ ಬಳಸಲಾಗುತ್ತಿದೆ ಎಂದು ಇತ್ತೀಚೆಗೆ ವರದಿ ಸಹ ಆಗಿತ್ತು.‌

ದೇಶ

ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.

ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.

🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್‌ಸ್ಟ್ರಿಪ್‌ಗಳು, ಹೆಲಿಪ್ಯಾಡ್‌ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:

  • ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
  • ಸಿಸಿಟಿವಿ ಕಣ್ಗಾವಲು ಬಿಗಿತ
  • ಸರಕು, ಪಾರ್ಸೆಲ್ ಮತ್ತು ಮೇಲ್‌ಗಳ ತಪಾಸಣೆ
  • ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ

🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:

ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.

Continue Reading

ದೇಶ

ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್‌ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್‌ ಮೌಲ್ಯದ ಪಲ್ಲಾಡಿಯಮ್‌ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್‌ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್‌ಎನ್‌ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.

ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.

ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

Continue Reading

ಕ್ರೀಡೆ

ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.

ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್‌ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.

ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.

ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.

Continue Reading

Trending