ದೇಶ
ಪಾರಿವಾಳಗಳನ್ನೇ ಬೇಹುಗಾರಿಕೆಗೆ ಬಳಸೋದ್ಯಾಕೆ?
ಈಗ ಶ್ವಾನ ಪಡೆಯಂತೆ ಅದೇ ರೀತಿ ಮಹಾಯುದ್ಧದ ವೇಳೆ ಪಾರಿವಾಳಗಳ ದಳ ಇತ್ತು. ಅಮೆರಿಕ (America) ಸೇನೆಯಲ್ಲಿದ್ದ ಚೆರ್ ಅಮಿ (CherAmi) ಎಂಬ ಪಾರಿವಾಳ 1918 ಅಕ್ಟೋಬರ್ 14ರಂದು ಜರ್ಮನ್ ಸೇನೆ ವಿರುದ್ಧದ ಆಪರೇಷನ್ ಭಾಗಿಯಾಗಿ ಸುಮಾರು 194 ಸೈನಿಕರ ರಕ್ಷಣೆಗೆ ಕಾರಣವಾಗಿತ್ತು. ಬೆಟ್ಟ ಪ್ರದೇಶವೊಂದರಲ್ಲಿ ಅಮೆರಿಕದ ಸೈನಿಕರನ್ನು ಸಂಪೂರ್ಣವಾಗಿ ಜರ್ಮನ್ ಸೈನಿಕರು ಸುತ್ತುವರೆದಿದ್ದಾಗ ಚೆರ್ ಅಮಿ ಪಾರಿವಾಳವನ್ನ ಆ ಭಾಗಕ್ಕೆ ಕಳುಹಿಸಲಾಗಿತ್ತು. ಈ ವೇಳೆ ಪಾರಿವಾಳದ ದೇಹಕ್ಕೆ ಅಮೆರಿಕ ಸೈನಿಕರು ಪತ್ರವೊಂದನ್ನು ಕಟ್ಟಿ ಕಳಿಸುತ್ತಾರೆ. ಚೆರ್ ಅಮಿ ಹಾರಿ ಬರುವಾಗ ಜರ್ಮನ್ ಸೈನಿಕರ ಗುಂಡಿನ ದಾಳಿಯಾಗಿ ಕಾಲಿಗೆ ಗುಂಡು ತಗುಲುತ್ತದೆ. ಇಷ್ಟಾದರೂ ಅಮೆರಿಕ ಸೇನಾ ನೆಲೆಗೆ ವಾಪಸ್ ಬಂದು ಸಂದೇಶ ನೀಡುತ್ತದೆ. ಬಳಿಕ ಅಮೆರಿಕ ಸೇನೆ ಕಾರ್ಯಾಚರಣೆ ನಡೆಸಿ ತನ್ನೆಲ್ಲಾ ಸೈನಿಕರನ್ನು ರಕ್ಷಿಸಿತ್ತು. 1919 ಜೂನ್ 13ರಂದು ಚೆರ್ ಅಮಿ ಪಾರಿವಾಳ ಸಾವನ್ನಪ್ಪುತ್ತದೆ.
ಪಾರಿವಾಳಗಳ ಸಾಮರ್ಥ್ಯ ಎಷ್ಟಿದೆ?
ಬೇಹುಗಾರಿಕೆ ಹಾಗೂ ಪತ್ರ ರವಾನೆಗೆ ಪಾರಿವಾಳಗಳನ್ನು ಬಳಸೋಕೆ ಒಂದು ಕಾರಣ ಇದೆ. ಏಕೆಂದರೆ ಪಾರಿವಾಳಗಳು ಎಷ್ಟೇ ದೂರ ಹೋದರು, ಎಲ್ಲಿಂದ ಹಾರಾಟ ಶುರು ಮಾಡುತ್ತವೆಯೋ ಅಲ್ಲಿಗೆ ಮರಳುವ ಸಾಮರ್ಥ್ಯವಿದೆ. ಇದೇ ಕಾರಣಕ್ಕೆ 1917ರಲ್ಲಿ ಅಮೆರಿಕದ ಗುಪ್ತಚುರಕ ಸಿಐಎ ಪಾರಿವಾಳಗಳ ಮೂಲಕ ಗೂಢಾಚಾರಿಕೆ ನಡೆಸಲು ನಿರ್ಧರಿಸಿತ್ತು. ಪಾರಿವಾಳಗಳಿಗೆ ವಿಶೇಷ ತರಬೇತಿ ನೀಡಿ, ಅವುಗಳ ಕಾಲಿಗೆ ಕ್ಯಾಮೆರಾ ಕಟ್ಟಿ ಹಲವು ಆಪರೇಷನ್ಗಳನ್ನು ಅಮೆರಿಕ ಮಾಡಿದೆ. ಮಹಾಯುದ್ಧ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಪಾರಿವಾಳಗಳ ಕಾಲಿಗೆ ಕಟ್ಟಿ ತೆಗೆಯಲಾಗಿದ್ದ ಫೋಟೋಗಳನ್ನ 2019ರಲ್ಲಿ ಸಿಐಎ ಬಿಡುಗಡೆ ಕೂಡ ಮಾಡಿತ್ತು. ಕೋಲ್ಡ್ ವಾರ್ ಸಮಯದಲ್ಲಿ ರಷ್ಯಾ ರಾಜಧಾನಿ ಮಾಸ್ಕೋಗೂ ಅಮೆರಿಕ ತನ್ನ ಪಾರಿವಾಳಗಳನ್ನ ಕಳುಹಿಸಿತ್ತು. ರಷ್ಯಾ ಸಬ್ಮರೀನ್ಗಳನ್ನು ನಿರ್ಮಿಸುತ್ತಿರುವುದನ್ನು ಇದೇ ಪರಿವಾಳಗಳು ಪತ್ತೆ ಮಾಡಿದ್ದವು. ಪಾರಿವಾಳಗಳು ನೆಲಕ್ಕೆ ತುಂಬಾ ಹತ್ತಿರದಲ್ಲೇ ಹಾರುವುದರಿಂದ ಅವುಗಳ ಮೂಲಕ ಬೇಹುಗಾರಿಕೆ ಕೂಡ ಸುಲಭವಾಗಿದೆ.
ಪಾರಿವಾಳಗಳಿಗೆ ದಾರಿ ತಪ್ಪಿದರೂ ಸಹ ಕೆಲ ಸಮಯದ ಬಳಿಕ ಮತ್ತೆ ಎಲ್ಲಿಂದ ಬಂದಿದ್ದವೋ ಅಲ್ಲಿಗೇ ಬಂದಿಳಿಯುತ್ತವೆ. ಪಾರಿವಾಳಗಳಿಗೆ ಈ ಸಾಮರ್ಥ್ಯದ ಬಗ್ಗೆ ಈಗಲೂ ಸಂಶೋಧನೆ ನಡೆಯುತ್ತಿದೆ. ಕೆಲವು ಸಂಶೋಧಕರ ಪ್ರಕಾರ, ಸೂರ್ಯನ ಸಂಚಾರವನ್ನ ಗಮನಿಸಿ ಪಾರಿವಾಳಗಳು ಮಾರ್ಗ ಹಾಗೂ ಜಾಗವನ್ನು ಪತ್ತೆ ಹಚ್ಚುತ್ತವೆ ಎನ್ನುತ್ತಾರೆ.
ಎಂಟು ತಿಂಗಳ ಬಳಿಕ ಜೈಲಿಂದ ಬಿಡುಗಡೆಯಾದ ಪಾರಿವಾಳಗಳು!
ಈ ವರ್ಷ ಜ.30 ರಂದು, ಚೀನಾದ ಗೂಢಚಾರ ಎಂದು ಶಂಕಿಸಲಾದ ಪಾರಿವಾಳವನ್ನು ಮುಂಬೈನಲ್ಲಿ ಎಂಟು ತಿಂಗಳ ಬಂಧನದ ನಂತರ ಕಾಡಿಗೆ ಬಿಡಲಾಯಿತು. ಈ ಪಾರಿವಾಳಗಳನ್ನು ಮೇ 2023 ರಲ್ಲಿ ಮುಂಬೈ ಬಂದರಿನ ಬಳಿ ಅದರ ಉಂಗುರಗಳ ಮೇಲಿನ ಚೈನೀಸ್ ಬರಹದ ಆಧಾರದ ಮೇಲೆ ಇದು ಬೇಹುಗಾರಿಕೆಯ ಅನುಮಾನವನ್ನು ಹುಟ್ಟುಹಾಕಿತ್ತು. ಸಂಪೂರ್ಣ ತನಿಖೆ ಬಳಿಕ ಇದು ತೈವಾನ್ನಿಂದ ತಪ್ಪಿಸಿಕೊಂಡು ಆಕಸ್ಮಿಕವಾಗಿ ಭಾರತವನ್ನು ತಲುಪಿದೆ ಎಂದು ತಿಳಿದು ಬಂದಿತ್ತು
2016ರಲ್ಲಿ ಪಾಕಿಸ್ತಾನದ 150 ಬೇಹುಗಾರಿಕಾ ಪಾರಿವಾಳಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಪಾರಿವಾಳಗಳ ಮೇಲೆ ಜಮ್ಮುವಿನ ಉಪ ಆಯುಕ್ತರ ಕುರಿತಂತೆ ಕೆಲ ಪದಗಳನ್ನು ಬರೆಯಲಾಗಿತ್ತು. ಅಲ್ಲದೇ ಪಾರಿವಾಳಗಳ ಕಾಲಿಗೆ ಕೆಲ ವಿಶೇಷವಾದ ಆಯಸ್ಕಾಂತೀಯ ರಿಂಗ್ ಗಳನ್ನೂ ಹಾಕಲಾಗಿತ್ತು. ಹೀಗಾಗಿ ಪಾರಿವಾಳಗಳನ್ನು ಬೇಹುಗಾರಿಕೆಗೆ ಬಳಸಿಕೊಳ್ಳಲಾಗುತ್ತಿರುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು.
ಈ ಹಿಂದೆ ಭಾರತ ಹಾಗೂ ಪಾಕ್ ಗಡಿಯಲ್ಲಿ ಬಲೂನ್ಗಳನ್ನು ಪಾರಿವಾಳ ಕಾಲಿಗೆ ಕಟ್ಟಿ ಪ್ರಧಾನಮಂತ್ರಿ ನರೇಂದ್ರಮೋದಿಯವರಿಗೆ ಉರ್ದು ಭಾಷೆಯಲ್ಲಿ ಬೆದರಿಕೆ ಹಾಕಿದ್ದನ್ನು ನಾವಿಲ್ಲಿ ಗಮನಿಸಬಹುದು
ಪಾರಿವಾಳಗಳಂತೆ ಡಾಲ್ಫಿನ್, ಯಾಕ್ ಕೂಡ ಬಳಕೆ
ಪಾರಿವಾಳಗಳನ್ನು ಮೀರಿ, 1960 ರ ದಶಕದಿಂದಲೂ ಅಮೆರಿಕ ನೌಕಾಪಡೆಯಿಂದ ತರಬೇತಿ ಪಡೆದ ಡಾಲ್ಫಿನ್ಗಳನ್ನು ಜಲಾಂತರ್ಗಾಮಿ ನೌಕೆಗಳು ಮತ್ತು ನೀರೊಳಗಿನ ಗಣಿಗಳನ್ನು ಪತ್ತೆಹಚ್ಚಲು ಬಳಸಲಾಗುತ್ತಿದೆ. ಚೀನಾ ಗಡಿಯಲ್ಲಿ ಯಾಕ್ಗಳನ್ನು ಬೇಹುಗಾರಿಕೆಗೆ ಬಳಸಲಾಗುತ್ತಿದೆ ಎಂದು ಇತ್ತೀಚೆಗೆ ವರದಿ ಸಹ ಆಗಿತ್ತು.
ದೇಶ
ಹಾರ್ಮುಜ್ ಸಮಸ್ಯೆ ಪರಿಹಾರಕ್ಕೆ ಭಾರತ ಪ್ರಮುಖ ಪಾತ್ರ?: ಇರಾನ್ ವಿಶ್ವಾಸ
ಪಾಟ್ನಾ: ಮಧ್ಯಪ್ರಾಚ್ಯ ಸಂಘರ್ಷದ ನಡುವೆಯೇ ಭಾರತ ತೆಗೆದುಕೊಂಡಿರುವ ತಟಸ್ಥ ಹಾಗೂ ಸಮತೋಲಿತ ನಿಲುವಿಗೆ Iran ಮೆಚ್ಚುಗೆ ವ್ಯಕ್ತಪಡಿಸಿದೆ. ಭಾರತದ ರಾಜತಾಂತ್ರಿಕ ಧೋರಣೆಯನ್ನು “ಸದೃಢ” ಎಂದು ಕೊಂಡಾಡಿರುವ ಇರಾನ್, ಬಿಕ್ಕಟ್ಟಿನ ಪರಿಹಾರದಲ್ಲಿ ನವದೆಹಲಿ ಪ್ರಮುಖ ಪಾತ್ರ ವಹಿಸಬಹುದು ಎಂದು ಅಭಿಪ್ರಾಯಪಟ್ಟಿದೆ.
ಈ ಕುರಿತು ಪಾಟ್ನಾದಲ್ಲಿ ಮಾತನಾಡಿದ ಇರಾನ್ ಸರ್ವೋಚ್ಚ ನಾಯಕರ ಪ್ರತಿನಿಧಿ Abdul Majid Hakim Ilahi, ಹಾರ್ಮುಜ್ ಜಲಸಂಧಿ ಸಮಸ್ಯೆ ಸೇರಿದಂತೆ ಮಧ್ಯಪ್ರಾಚ್ಯ ಸಂಘರ್ಷದ ಪರಿಹಾರದಲ್ಲಿ ಭಾರತ ಪರಿಣಾಮಕಾರಿ ಪಾತ್ರವಹಿಸಬಹುದು ಎಂದು ಹೇಳಿದ್ದಾರೆ.
India ತನ್ನ ತಟಸ್ಥ ನಿಲುವಿನ ಮೂಲಕ ಜಾಗತಿಕ ಮಟ್ಟದಲ್ಲಿ ವಿಶ್ವಾಸಾರ್ಹ ರಾಜತಾಂತ್ರಿಕ ಶಕ್ತಿಯಾಗಿ ಹೊರಹೊಮ್ಮುತ್ತಿದೆ. ಉದ್ವಿಗ್ನ ಪರಿಸ್ಥಿತಿಯಲ್ಲಿಯೂ ಭಾರತ ಸಮತೋಲನ ಕಾಯ್ದುಕೊಂಡಿರುವುದನ್ನು ಇರಾನ್ ಶ್ಲಾಘಿಸಿದೆ.
ಹಾರ್ಮುಜ್ ಜಲಸಂಧಿ ಜಾಗತಿಕ ತೈಲ ಪೂರೈಕೆಗೆ ಪ್ರಮುಖ ಮಾರ್ಗವಾಗಿದ್ದು, ಸಂಘರ್ಷದ ನಡುವೆ ಇದನ್ನು ಮುಚ್ಚಲಾಗಿತ್ತು. ಆದರೆ ಭಾರತದ ರಾಜತಾಂತ್ರಿಕ ಮಾತುಕತೆಗಳ ಫಲವಾಗಿ ಭಾರತೀಯ ಹಡಗುಗಳಿಗೆ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡಲಾಗಿದೆ. “ಭಾರತೀಯ ಗೆಳೆಯರು ಸುರಕ್ಷಿತ ಕೈಗಳಲ್ಲಿ ಇದ್ದಾರೆ” ಎಂದು ಇರಾನ್ ಭರವಸೆ ನೀಡಿದೆ.
ಯುದ್ಧ ಆರಂಭವಾದ ಬಳಿಕ ಭಾರತದ ಹಲವು ಹಡಗುಗಳು ಯಶಸ್ವಿಯಾಗಿ ಈ ಮಾರ್ಗ ದಾಟಿರುವುದು, ಭಾರತ-ಇರಾನ್ ನಡುವಿನ ನಂಬಿಕೆಯನ್ನು ಮತ್ತಷ್ಟು ಬಲಪಡಿಸಿದೆ.
ಒಟ್ಟಿನಲ್ಲಿ, ಮಧ್ಯಪ್ರಾಚ್ಯದ ಅಸ್ಥಿರ ಪರಿಸ್ಥಿತಿಯಲ್ಲಿ ಭಾರತದ ಸಮತೋಲಿತ ರಾಜತಾಂತ್ರಿಕ ನಿಲುವು ಜಾಗತಿಕ ಮಟ್ಟದಲ್ಲಿ ಪ್ರಶಂಸೆ ಗಳಿಸುತ್ತಿದ್ದು, ಬಿಕ್ಕಟ್ಟು ಪರಿಹಾರದಲ್ಲಿ ಭಾರತದ ಪಾತ್ರ ಹೆಚ್ಚುವ ಸಾಧ್ಯತೆ ಇದೆ.
ಚುನಾವಣೆ
‘ಆಪರೇಷನ್ ಸಿಂಧೂರ್’ ವಿವಾದ: ಕಾಂಗ್ರೆಸ್ ವಿರುದ್ಧ ಮೋದಿ ತೀವ್ರ ಆರೋಪ
ದಿಸ್ಪುರ: ಅಸ್ಸಾಂ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ವಾತಾವರಣ ತೀವ್ರಗೊಂಡಿದ್ದು, ಪ್ರಧಾನಿ Narendra Modi ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಆಪರೇಷನ್ ಸಿಂಧೂರ್’ ವೇಳೆ ಕಾಂಗ್ರೆಸ್ ಪಾಕಿಸ್ತಾನ ಪರ ನಿಲುವು ತೆಗೆದುಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ.
ಬಾರ್ಪೇಟಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ನಿರ್ಣಾಯಕ ಸಮಯದಲ್ಲಿ ವಿರೋಧ ಪಕ್ಷಗಳು ಭಾರತೀಯ ಸಶಸ್ತ್ರ ಪಡೆಗಳ ಮನೋಬಲ ಕುಗ್ಗಿಸುವ ರೀತಿಯಲ್ಲಿ ವರ್ತಿಸಿವೆ ಎಂದು ಟೀಕಿಸಿದರು. “ಆಪರೇಷನ್ ಸಿಂಧೂರ್ ವೇಳೆ ಕಾಂಗ್ರೆಸ್ ನಾಯಕರು ಪಾಕಿಸ್ತಾನ ನೀಡಿದ ನ್ಯಾರೆಟಿವ್ನ್ನೇ ಪ್ರತಿಧ್ವನಿಸಿದರು” ಎಂದು ಆರೋಪಿಸಿದರು.
ಇದೇ ವೇಳೆ, ಸರ್ಜಿಕಲ್ ದಾಳಿ ಮತ್ತು ವಾಯುದಾಳಿಗಳ ಸಂದರ್ಭದಲ್ಲೂ ಕಾಂಗ್ರೆಸ್ ಶತ್ರುಗಳ ಕಾರ್ಯಸೂಚಿಗೆ ಬೆಂಬಲ ನೀಡಿದಂತೆ ವರ್ತಿಸಿದೆ ಎಂದು ಮೋದಿ ಹೇಳಿದರು. ಕಾಂಗ್ರೆಸ್ ನಾಯಕರ ಹೇಳಿಕೆಗಳು ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನವನ್ನು ದುರ್ಬಲಗೊಳಿಸುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ಇನ್ನು, ‘ಒನ್ ರ್ಯಾಂಕ್ ಒನ್ ಪೆನ್ಶನ್’ (OROP) ಯೋಜನೆ ಕುರಿತು ಮಾತನಾಡಿದ ಮೋದಿ, ಈ ಯೋಜನೆ ಜಾರಿಗೆ ಕಾಂಗ್ರೆಸ್ ವಿಳಂಬ ಮಾಡಿದ್ದು ಸೈನಿಕರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು. ತಮ್ಮ ಸರ್ಕಾರ ಸಶಸ್ತ್ರ ಪಡೆಗಳ ಕಲ್ಯಾಣಕ್ಕೆ ಆದ್ಯತೆ ನೀಡಿದೆ ಎಂದು ಹೇಳಿದರು.
ಅಕ್ರಮ ವಲಸೆ ವಿಷಯದಲ್ಲೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಅಸ್ಸಾಂನಲ್ಲಿ ನುಸುಳುಕೋರರನ್ನು ರಕ್ಷಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಆರೋಪ-ಪ್ರತ್ಯಾರೋಪಗಳು ತೀವ್ರಗೊಳ್ಳುತ್ತಿದ್ದು, ಅಸ್ಸಾಂ ರಾಜಕೀಯ ಮತ್ತಷ್ಟು ಕಾವು ಪಡೆದುಕೊಂಡಿದೆ.
ದೇಶ
ಬಾಹ್ಯಾಕಾಶದಲ್ಲಿ ಡೇಟಾ ಸೆಂಟರ್?: AI ರೇಸ್ನಲ್ಲಿ ಟೆಕ್ ದೈತ್ಯರ ಹೊಸ ಹೆಜ್ಜೆ
ನವದೆಹಲಿ: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ವೇಗದ ಬೆಳವಣಿಗೆಯೊಂದಿಗೆ, ಡೇಟಾ ಸೆಂಟರ್ಗಳ ಅಗತ್ಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಟೆಕ್ ದೈತ್ಯ ಸಂಸ್ಥೆಗಳು ಭೂಮಿಯ ಮಿತಿಗಳನ್ನು ಮೀರಿ ಬಾಹ್ಯಾಕಾಶದಲ್ಲಿ ಡೇಟಾ ಸೆಂಟರ್ಗಳನ್ನು ನಿರ್ಮಿಸುವ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ರೂಪಿಸುತ್ತಿವೆ.
Google ಸಿಇಒ Sundar Pichai ಅವರು 2027ರೊಳಗೆ ಬಾಹ್ಯಾಕಾಶದಲ್ಲಿ ಡೇಟಾ ಸೆಂಟರ್ ಪರೀಕ್ಷೆ ನಡೆಸುವುದಾಗಿ ಘೋಷಿಸಿದ್ದು, ‘ಪ್ರಾಜೆಕ್ಟ್ ಸನ್ಕ್ಯಾಚರ್’ ಈ ಯೋಜನೆಯ ಪ್ರಮುಖ ಭಾಗವಾಗಿದೆ. ಉಪಗ್ರಹಗಳ ಮೂಲಕ ಸಣ್ಣ ಸರ್ವರ್ಗಳನ್ನು ಕಕ್ಷೆಗೆ ಕಳುಹಿಸಿ ಕಾರ್ಯಕ್ಷಮತೆ ಪರೀಕ್ಷಿಸಲು ಕಂಪನಿ ಮುಂದಾಗಿದೆ.
ಇದರ ಹಿಂದೆ ಇರುವ ಪ್ರಮುಖ ಕಾರಣ ಭೂಮಿಯ ಮೇಲಿನ ವಿದ್ಯುತ್ ಮತ್ತು ನೀರಿನ ಕೊರತೆ. AI ಡೇಟಾ ಪ್ರಕ್ರಿಯೆಗೆ ಅಪಾರ ಪ್ರಮಾಣದ ವಿದ್ಯುತ್ ಬೇಕಾಗುತ್ತದೆ. 2030ರೊಳಗೆ ಜಾಗತಿಕ ಡೇಟಾ ಸೆಂಟರ್ಗಳ ವಿದ್ಯುತ್ ಬಳಕೆ ದುಪ್ಪಟ್ಟಾಗುವ ಸಾಧ್ಯತೆ ಇದೆ ಎಂದು ವರದಿಗಳು ಸೂಚಿಸುತ್ತಿವೆ.
ಇದೇ ಹಿನ್ನೆಲೆಯಲ್ಲಿ Elon Musk ಮತ್ತು Jeff Bezos ಕೂಡ ಬಾಹ್ಯಾಕಾಶದಲ್ಲಿ ಡೇಟಾ ಸೆಂಟರ್ ನಿರ್ಮಾಣದತ್ತ ಗಮನ ಹರಿಸಿದ್ದಾರೆ. ಸೂರ್ಯನ ಬೆಳಕಿನ ನಿರಂತರ ಲಭ್ಯತೆ ಇರುವ ಕಕ್ಷೆಯಲ್ಲಿ ಸೌರಶಕ್ತಿಯಿಂದ ಸರ್ವರ್ಗಳನ್ನು ಕಾರ್ಯಗತಗೊಳಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಆದರೆ, ಈ ಯೋಜನೆ ಸುಲಭದಲ್ಲ. ಬಾಹ್ಯಾಕಾಶದಲ್ಲಿನ ಕಾಸ್ಮಿಕ್ ಕಿರಣಗಳು, ತೀವ್ರ ಉಷ್ಣತೆ ಮತ್ತು ನಿರ್ವಹಣಾ ಸವಾಲುಗಳು ದೊಡ್ಡ ಅಡೆತಡೆಗಳಾಗಿವೆ.
ಇದಕ್ಕೆ ಪರ್ಯಾಯವಾಗಿ, Perplexity AI ಸಿಇಒ Aravind Srinivas ಆನ್-ಡಿವೈಸ್ AI ಮಾದರಿಯನ್ನು ಸೂಚಿಸಿದ್ದಾರೆ.
ಒಟ್ಟಿನಲ್ಲಿ, AI ಯುಗದಲ್ಲಿ ಡೇಟಾ ನಿರ್ವಹಣೆಗಾಗಿ ಭೂಮಿಯಿಂದ ಬಾಹ್ಯಾಕಾಶದವರೆಗೆ ತಂತ್ರಜ್ಞಾನದ ಹೊಸ ಅಧ್ಯಾಯ ಆರಂಭವಾಗುತ್ತಿದೆ.
-
ಚುನಾವಣೆ16 hours agoDavangere By Election 2026 : 25 ಅಭ್ಯರ್ಥಿಗಳ ಕಣ: ಮುಸ್ಲಿಂ ಅಭ್ಯರ್ಥಿಗಳೇ ಗೇಮ್ಚೇಂಜರ್?
-
ದೇಶ17 hours agoX ನಲ್ಲಿ ವೈರಲ್ ಆದ CA ಕಥೆ: ನಂಬಲೇಬೇಕಾ ಅಥವಾ ಕೇವಲ ಕಥೆಯಾ?
-
ಚುನಾವಣೆ17 hours agoಎಐಎಡಿಎಂಕೆ vs ಡಿಎಂಕೆ: ಸೀಟ್ ಶೇರಿಂಗ್ನಲ್ಲಿ ಭಾರಿ ಪೈಪೋಟಿ
-
ದೇಶ14 hours agoಬಾಹ್ಯಾಕಾಶದಲ್ಲಿ ಡೇಟಾ ಸೆಂಟರ್?: AI ರೇಸ್ನಲ್ಲಿ ಟೆಕ್ ದೈತ್ಯರ ಹೊಸ ಹೆಜ್ಜೆ
-
ದೇಶ16 hours agoಗಡಿಯಲ್ಲಿ ಹಾವು-ಮೊಸಳೆ ಕಾವಲು?: ಬಿಎಸ್ಎಫ್ ಹೊಸ ಯೋಜನೆ ಚರ್ಚೆಯಲ್ಲಿ
-
ದೇಶ18 hours agoತಾಲಿಬಾನ್ ವಿರುದ್ಧ ಪಾಕಿಸ್ತಾನದ ಆಪರೇಷನ್: ನೂರಾರು ಉಗ್ರರು ಸಾವು
-
ದೇಶ19 hours agoಇರಾನ್ಗೆ ಟ್ರಂಪ್ ಮತ್ತೊಂದು ಗಡುವು: 24 ಗಂಟೆ ವಿಸ್ತರಣೆ ಘೋಷಣೆ
-
ದೇಶ14 hours agoವೀರಕುಮಾರರ ತಪಸ್ಸು, ಭಕ್ತಿಯ ತೇಜಸ್ಸು: ಕೆಂಗೇರಿ ಕರಗದ ವೈಶಿಷ್ಟ್ಯ
