Connect with us

ದೇಶ

ಪಾರಿವಾಳಗಳನ್ನೇ ಬೇಹುಗಾರಿಕೆಗೆ ಬಳಸೋದ್ಯಾಕೆ? 

ಈಗ ಶ್ವಾನ ಪಡೆಯಂತೆ ಅದೇ ರೀತಿ ಮಹಾಯುದ್ಧದ ವೇಳೆ ಪಾರಿವಾಳಗಳ ದಳ ಇತ್ತು. ಅಮೆರಿಕ (America) ಸೇನೆಯಲ್ಲಿದ್ದ ಚೆರ್ ಅಮಿ (CherAmi) ಎಂಬ ಪಾರಿವಾಳ 1918 ಅಕ್ಟೋಬರ್ 14ರಂದು ಜರ್ಮನ್ ಸೇನೆ ವಿರುದ್ಧದ ಆಪರೇಷನ್‌ ಭಾಗಿಯಾಗಿ ಸುಮಾರು 194 ಸೈನಿಕರ ರಕ್ಷಣೆಗೆ ಕಾರಣವಾಗಿತ್ತು. ಬೆಟ್ಟ ಪ್ರದೇಶವೊಂದರಲ್ಲಿ ಅಮೆರಿಕದ ಸೈನಿಕರನ್ನು ಸಂಪೂರ್ಣವಾಗಿ ಜರ್ಮನ್ ಸೈನಿಕರು ಸುತ್ತುವರೆದಿದ್ದಾಗ ಚೆರ್ ಅಮಿ ಪಾರಿವಾಳವನ್ನ ಆ ಭಾಗಕ್ಕೆ ಕಳುಹಿಸಲಾಗಿತ್ತು. ಈ ವೇಳೆ ಪಾರಿವಾಳದ ದೇಹಕ್ಕೆ ಅಮೆರಿಕ ಸೈನಿಕರು ಪತ್ರವೊಂದನ್ನು ಕಟ್ಟಿ ಕಳಿಸುತ್ತಾರೆ. ಚೆರ್ ಅಮಿ ಹಾರಿ ಬರುವಾಗ ಜರ್ಮನ್ ಸೈನಿಕರ ಗುಂಡಿನ ದಾಳಿಯಾಗಿ ಕಾಲಿಗೆ ಗುಂಡು ತಗುಲುತ್ತದೆ. ಇಷ್ಟಾದರೂ ಅಮೆರಿಕ ಸೇನಾ ನೆಲೆಗೆ ವಾಪಸ್ ಬಂದು ಸಂದೇಶ ನೀಡುತ್ತದೆ. ಬಳಿಕ ಅಮೆರಿಕ ಸೇನೆ ಕಾರ್ಯಾಚರಣೆ ನಡೆಸಿ ತನ್ನೆಲ್ಲಾ ಸೈನಿಕರನ್ನು ರಕ್ಷಿಸಿತ್ತು. 1919 ಜೂನ್ 13ರಂದು ಚೆರ್ ಅಮಿ ಪಾರಿವಾಳ ಸಾವನ್ನಪ್ಪುತ್ತದೆ.

ಪಾರಿವಾಳಗಳ ಸಾಮರ್ಥ್ಯ ಎಷ್ಟಿದೆ?

ಬೇಹುಗಾರಿಕೆ ಹಾಗೂ ಪತ್ರ ರವಾನೆಗೆ ಪಾರಿವಾಳಗಳನ್ನು ಬಳಸೋಕೆ ಒಂದು ಕಾರಣ ಇದೆ. ಏಕೆಂದರೆ ಪಾರಿವಾಳಗಳು ಎಷ್ಟೇ ದೂರ ಹೋದರು, ಎಲ್ಲಿಂದ ಹಾರಾಟ ಶುರು ಮಾಡುತ್ತವೆಯೋ ಅಲ್ಲಿಗೆ ಮರಳುವ ಸಾಮರ್ಥ್ಯವಿದೆ. ಇದೇ ಕಾರಣಕ್ಕೆ 1917ರಲ್ಲಿ ಅಮೆರಿಕದ ಗುಪ್ತಚುರಕ ಸಿಐಎ ಪಾರಿವಾಳಗಳ ಮೂಲಕ ಗೂಢಾಚಾರಿಕೆ ನಡೆಸಲು ನಿರ್ಧರಿಸಿತ್ತು. ಪಾರಿವಾಳಗಳಿಗೆ ವಿಶೇಷ ತರಬೇತಿ ನೀಡಿ, ಅವುಗಳ ಕಾಲಿಗೆ ಕ್ಯಾಮೆರಾ ಕಟ್ಟಿ ಹಲವು ಆಪರೇಷನ್‍ಗಳನ್ನು ಅಮೆರಿಕ ಮಾಡಿದೆ. ಮಹಾಯುದ್ಧ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಪಾರಿವಾಳಗಳ ಕಾಲಿಗೆ ಕಟ್ಟಿ ತೆಗೆಯಲಾಗಿದ್ದ ಫೋಟೋಗಳನ್ನ 2019ರಲ್ಲಿ ಸಿಐಎ ಬಿಡುಗಡೆ ಕೂಡ ಮಾಡಿತ್ತು. ಕೋಲ್ಡ್ ವಾರ್ ಸಮಯದಲ್ಲಿ ರಷ್ಯಾ ರಾಜಧಾನಿ ಮಾಸ್ಕೋಗೂ ಅಮೆರಿಕ ತನ್ನ ಪಾರಿವಾಳಗಳನ್ನ ಕಳುಹಿಸಿತ್ತು. ರಷ್ಯಾ ಸಬ್‍ಮರೀನ್‌ಗಳನ್ನು ನಿರ್ಮಿಸುತ್ತಿರುವುದನ್ನು ಇದೇ ಪರಿವಾಳಗಳು ಪತ್ತೆ ಮಾಡಿದ್ದವು. ಪಾರಿವಾಳಗಳು ನೆಲಕ್ಕೆ ತುಂಬಾ ಹತ್ತಿರದಲ್ಲೇ ಹಾರುವುದರಿಂದ ಅವುಗಳ ಮೂಲಕ ಬೇಹುಗಾರಿಕೆ ಕೂಡ ಸುಲಭವಾಗಿದೆ. 

ಪಾರಿವಾಳಗಳಿಗೆ ದಾರಿ ತಪ್ಪಿದರೂ ಸಹ ಕೆಲ ಸಮಯದ ಬಳಿಕ ಮತ್ತೆ ಎಲ್ಲಿಂದ ಬಂದಿದ್ದವೋ ಅಲ್ಲಿಗೇ ಬಂದಿಳಿಯುತ್ತವೆ. ಪಾರಿವಾಳಗಳಿಗೆ ಈ ಸಾಮರ್ಥ್ಯದ ಬಗ್ಗೆ ಈಗಲೂ ಸಂಶೋಧನೆ ನಡೆಯುತ್ತಿದೆ. ಕೆಲವು ಸಂಶೋಧಕರ ಪ್ರಕಾರ, ಸೂರ್ಯನ ಸಂಚಾರವನ್ನ ಗಮನಿಸಿ ಪಾರಿವಾಳಗಳು ಮಾರ್ಗ ಹಾಗೂ ಜಾಗವನ್ನು ಪತ್ತೆ ಹಚ್ಚುತ್ತವೆ ಎನ್ನುತ್ತಾರೆ. 

ಎಂಟು ತಿಂಗಳ ಬಳಿಕ ಜೈಲಿಂದ ಬಿಡುಗಡೆಯಾದ ಪಾರಿವಾಳಗಳು!

ಈ ವರ್ಷ ಜ.30 ರಂದು, ಚೀನಾದ ಗೂಢಚಾರ ಎಂದು ಶಂಕಿಸಲಾದ ಪಾರಿವಾಳವನ್ನು ಮುಂಬೈನಲ್ಲಿ ಎಂಟು ತಿಂಗಳ ಬಂಧನದ ನಂತರ ಕಾಡಿಗೆ ಬಿಡಲಾಯಿತು. ಈ ಪಾರಿವಾಳಗಳನ್ನು ಮೇ 2023 ರಲ್ಲಿ ಮುಂಬೈ ಬಂದರಿನ ಬಳಿ ಅದರ ಉಂಗುರಗಳ ಮೇಲಿನ ಚೈನೀಸ್ ಬರಹದ ಆಧಾರದ ಮೇಲೆ ಇದು ಬೇಹುಗಾರಿಕೆಯ ಅನುಮಾನವನ್ನು ಹುಟ್ಟುಹಾಕಿತ್ತು. ಸಂಪೂರ್ಣ ತನಿಖೆ ಬಳಿಕ ಇದು ತೈವಾನ್‍ನಿಂದ ತಪ್ಪಿಸಿಕೊಂಡು ಆಕಸ್ಮಿಕವಾಗಿ ಭಾರತವನ್ನು ತಲುಪಿದೆ ಎಂದು ತಿಳಿದು ಬಂದಿತ್ತು

2016ರಲ್ಲಿ ಪಾಕಿಸ್ತಾನದ 150 ಬೇಹುಗಾರಿಕಾ ಪಾರಿವಾಳಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಪಾರಿವಾಳಗಳ ಮೇಲೆ ಜಮ್ಮುವಿನ ಉಪ ಆಯುಕ್ತರ ಕುರಿತಂತೆ ಕೆಲ ಪದಗಳನ್ನು ಬರೆಯಲಾಗಿತ್ತು. ಅಲ್ಲದೇ ಪಾರಿವಾಳಗಳ ಕಾಲಿಗೆ ಕೆಲ ವಿಶೇಷವಾದ ಆಯಸ್ಕಾಂತೀಯ ರಿಂಗ್ ಗಳನ್ನೂ ಹಾಕಲಾಗಿತ್ತು. ಹೀಗಾಗಿ ಪಾರಿವಾಳಗಳನ್ನು ಬೇಹುಗಾರಿಕೆಗೆ ಬಳಸಿಕೊಳ್ಳಲಾಗುತ್ತಿರುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು.

ಈ ಹಿಂದೆ ಭಾರತ ಹಾಗೂ ಪಾಕ್ ಗಡಿಯಲ್ಲಿ ಬಲೂನ್‍ಗಳನ್ನು ಪಾರಿವಾಳ ಕಾಲಿಗೆ ಕಟ್ಟಿ ಪ್ರಧಾನಮಂತ್ರಿ ನರೇಂದ್ರಮೋದಿಯವರಿಗೆ ಉರ್ದು ಭಾಷೆಯಲ್ಲಿ ಬೆದರಿಕೆ ಹಾಕಿದ್ದನ್ನು ನಾವಿಲ್ಲಿ ಗಮನಿಸಬಹುದು

ಪಾರಿವಾಳಗಳಂತೆ ಡಾಲ್ಫಿನ್‌, ಯಾಕ್‌ ಕೂಡ ಬಳಕೆ 

ಪಾರಿವಾಳಗಳನ್ನು ಮೀರಿ, 1960 ರ ದಶಕದಿಂದಲೂ ಅಮೆರಿಕ ನೌಕಾಪಡೆಯಿಂದ ತರಬೇತಿ ಪಡೆದ ಡಾಲ್ಫಿನ್‍ಗಳನ್ನು ಜಲಾಂತರ್ಗಾಮಿ ನೌಕೆಗಳು ಮತ್ತು ನೀರೊಳಗಿನ ಗಣಿಗಳನ್ನು ಪತ್ತೆಹಚ್ಚಲು ಬಳಸಲಾಗುತ್ತಿದೆ. ಚೀನಾ ಗಡಿಯಲ್ಲಿ ಯಾಕ್‍ಗಳನ್ನು ಬೇಹುಗಾರಿಕೆಗೆ ಬಳಸಲಾಗುತ್ತಿದೆ ಎಂದು ಇತ್ತೀಚೆಗೆ ವರದಿ ಸಹ ಆಗಿತ್ತು.‌

ದೇಶ

ಅಂಟಾಕ್ರ್ಟಿಕಾ ಧ್ರುವ ಪ್ರದೇಶದಲ್ಲಿ ನಿಗೂಢ ರೇಡಿಯೋ ತರಂಗಗಳು ಪತ್ತೆ..!

ಮನುಷ್ಯರು ಒಂದು ಕ್ಷಣವೂ ಇರಲಾಗದ ನಿರ್ಜನ ಪ್ರದೇಶವಾದ ಅಂಟಾಕ್ರ್ಟಿಕಾದ ಧ್ರುವ ಪ್ರದೇಶದಲ್ಲಿ ಮಂಜುಗಡ್ಡೆಯ ಮೇಲ್ಮೈಯಿಂದ ಹೊರಹೊಮ್ಮುತ್ತಿರುವ ನಿಗೂಢ ರೇಡಿಯೋ ತರಂಗಗಳನ್ನು ಸಂಶೋಧಕರು ಪತ್ತೆಹಚ್ಚಿದ್ದಾರೆ,
ಮಂಜುಗಡ್ಡೆಯ ಆಳದಿಂದ ರೇಡಿಯೋ ಸಂಕೇತಗಳು ಹೊರಸೂಸುತ್ತಿವೆ, ಈ ತರಂಗಗಳು ಸಾವಿರಾರು ಕಿಲೋಮೀಟರ್ ಬಂಡೆಗಳ ಮೂಲಕ ಹಾದು ಹೋಗೇಕಾಗಿತ್ತು ಅದರೆ ಇವು ಬಂಡೆಗಳಲ್ಲಿ ಹೀರಲ್ಪಡುತ್ತಿವೆ, ಇದು ಭೌತಶಾಸ್ತ್ರದ ನಿಯಮದ ವಿರುದ್ಧವಾಗಿದೆ, ಭೂವಿಯನ್ನು ತಲುಪುವ ಸಂಕೇತಗಳನ್ನು ವಿಶ್ಲೇಷಿಸುವ ಮೂಲಕ ಸಂಶೋಧಕರು ಈ ನಿಗೂಢ ರೇಡಿಯೋ ತರಂಗಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ,
ಸದ್ಯ ಈ ನಿಗೂಢ ರೇಡಿಯೋ ತರಂಗಗಳು ವಿಜ್ಞಾನದ ಎಲ್ಲಾ ಪ್ರಯೋಗಗಳಿಗೂ ವಿರುದ್ಧ ವಾಗಿರುವುದು ಸಂಶೋಧಕರಲ್ಲಿ ಕುತೂಹಲ ಹೆಚ್ಚಿಸಿದೆ, ಈ ಹಿನ್ನೆಲೆಯಲ್ಲಿ ಕೆಲ ಮಾದರಿಗಳನ್ನು ಸಂಗ್ರಹಿಸಿರುವ ಸಂಶೋಧಕರು ಈ ನಿಗೂಢತೆಯನ್ನು ಭೇದಿಸಲು ತಮ್ಮ ಪ್ರಯತ್ನಗಳನ್ನು ಆರಂಭಿಸಿದ್ದಾರೆ,

Continue Reading

ಅಪರಾಧ

ನಕಲಿ ವೈದ್ಯನ ಚಿಕಿತ್ಸೆಯಿಂದ ಮಗು ಬಲಿ

ರಾಮನಗರ: ರಾಮನಗರದಲ್ಲಿ (Ramanagara news) ನಕಲಿ ವೈದ್ಯನ ಚಿಕಿತ್ಸೆಯಿಂದಾಗಿ (treatment) ಶಿವರಾಜ್ ಎಂಬವರ ಆರು ತಿಂಗಳ ಕಂದಮ್ಮ (child death) ಸಾವನ್ನಪ್ಪಿದೆ. 6 ತಿಂಗಳ ಮಗುವಿನ ಸಾವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ‌ ಕ್ರಮಕ್ಕೂ ಸೂಚನೆ ನೀಡಿದೆ. ಶಿವರಾಜ್ ಎಂಬವರ ಆರು ತಿಂಗಳ ಪ್ರಾಯದ ಮಗು ಶರಣ್ಯ ಮೃತಪಟ್ಟವಳು. ನಕಲಿ ವೈದ್ಯ (Fake Doctor) ಮಹಮ್ಮದ್ ಸೈಫುಲ್ಲ ಎಂಬಾತ ಎಂದು ಗುರುತಿಸಲಾಗಿದೆ.

ಮಹಮ್ಮದ್ ಸೈಫುಲ್ಲ ಎಂಬವನು ವೈದ್ಯಕೀಯ ಕೋರ್ಸ್ ಮಾಡದೇ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೇ ಸಣ್ಣ ಕೋಣೆಯೊಂದರಲ್ಲಿ ಚಿಕಿತ್ಸೆ ನೀಡುತ್ತಿದ್ದ. ಈತನಿಂದಾಗಿ ಮಗು ಮರಳಿ ಬಾರದ ಲೋಕಕ್ಕೆ ತೆರಳಿದೆ. ಇದು ಜಿಲ್ಲೆಯ ಜನರನ್ನು ಸಾಕಷ್ಟು ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ರಾಮನಗರದಲ್ಲಿ ಸಾಕಷ್ಟು ನಕಲಿ ಕ್ಲಿನಿಕ್​ಗಳು ತಲೆ ಎತ್ತಿದ್ದು ಅವುಗಳ ವಿರುದ್ಧ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಬೆಂಗಳೂರು ದಕ್ಷಿಣ ‌ಜಿಲ್ಲೆಯಾದ್ಯಂತ ಒಟ್ಟು 193 ಕ್ಲಿನಿಕ್ ಹಾಗೂ ಆಸ್ಪತ್ರೆಗಳಿಗೆ ಮಾತ್ರ ಆರೋಗ್ಯ ಇಲಾಖೆಯಿಂದ ಅನುಮತಿ ಸಿಕ್ಕಿದೆ. ಆದರೆ ಕೆಲವರು ಹಣದಾಸೆಗೆ ನಕಲಿ ಕ್ಲಿನಿಕ್ ನಡೆಸುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ ನಾಲ್ಕು ತಿಂಗಳಲ್ಲಿ ಆರು ನಕಲಿ ವೈದ್ಯರನ್ನು ಪತ್ತೆ ಮಾಡಿದೆ. ಇಬ್ಬರ ವಿರುದ್ಧ ಕ್ರಮ ತೆಗೆದುಕೊಂಡಿದ್ದರೂ ಇನ್ನೂ ಕೆಲವರು ಹಣದಾಸೆಗೆ ನಕಲಿ‌ ಕ್ಲಿನಿಕ್ ನಡೆಸುತ್ತಿದ್ದಾರೆ. ನಕಲಿ ಕ್ಲಿನಿಕ್​ಗಳ ಬಗ್ಗೆ ಜನರು ಎಚ್ಚರಿದಿಂದ ಇರಬೇಕು. ಗಮನಕ್ಕೆ ಬಂದ ಕೂಡಲೇ ಅವುಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ಮನವಿ ಮಾಡಿದ್ದಾರೆ

Continue Reading

ದೇಶ

ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ ಕಾಂಗ್ರೆಸ್ ಶಾಸಕ ವಿನಯ್!

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿದೆ, ಅದ್ದರಿಂದ ಕೋರ್ಟ್ ಆದೇಶದಂತೆ ಇಂದು ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೋಟ್ ವಿಚಾರಣೆ ಮುಗಿದ ಬಳಿಕ ಶಾಸಕ ವಿನಯ್ ಕುಲಕರ್ಣಿಯವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು, ಇತ್ತೀಚಿಗೆ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಯ ಜಾಮೀನನ್ನು ರದ್ದುಪಡಿಸಿತು, ಒಂದು ವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು,
ಇವರ ಬೆಂಬಲಿಗರು ಸಿಟಿ ಸಿವಿಲ್ ಕೋರ್ಟ್ ಮುಂಭಾಗ ಜಮಾಯಿಸಿದ್ರು, ಪರಪ್ಪನ ಅಗ್ರಹಾರ ಜೈಲಿಗೆ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಕರೆದೊಯ್ದಿದ್ದಾರೆ, ಈ ವೇಳೆ ತಮ್ಮ ನಾಯಕ ಜೈಲು ಸೇರುತ್ತಿರೋದನ್ನು ಕಂಡು ಕೋರ್ಟ್ ಮುಂಭಾಗ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ,

ಏನಿದು ಪ್ರಕರಣ?
9 ವರ್ಷಗಳ ಹಿಂದೆ ಅಂದರೆ 2016 ರ ಜೂನ್ 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್ ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು, ಇದರಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಕೈವಾಡ ಇದೆ ಎಂಬ ಆರೋಪವಿದೆ, ಪ್ರಕರಣಕ್ಕೆ ಸಂಬಂಧಿಸಿದಂತೆ 2020 ನವೆಂಬರ್ 5 ರಂದು ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು, ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು,

Continue Reading

Trending