Connect with us

ಚುನಾವಣೆ

ಎಸ್‌ಟಿಎಸ್‌ ಯಶವಂತಪುರದ ಜನತೆಯ ಹೆಮ್ಮೆಯ ಶಾಸಕ – ಟಿ. ಪ್ರಭಾಕರ್‌

Published

on

ಬೆಂಗಳೂರು: ನಮ್ಮ ಶಾಸಕರು ನಮ್ಮ ಹೆಮ್ಮೆ ಎಂದು ಯಶವಂತಪುರದ ಗ್ಯಾರಂಟಿ ಸಮಿತಿಯ ಸದಸ್ಯ ಟಿ.ಪ್ರಭಾಕರ ಹೇಳಿದರು. ಹೊಸ ಸುದ್ದಿಯ ವಿಶೇಷ ಸಂದರ್ಶನದಲ್ಲಿ ಅವರು ಮಾತನಾಡುತ್ತ ಯಶವಂತಪುರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಶಾಸಕ ಎಸ್ ಟಿ ಸೋಮಶೇಖರ್ ಮಾಡುತ್ತಿರುವ ಅಭಿವೃದ್ಧಿ ಕೆಲಸ ಕ್ಷೇತ್ರದ ಪ್ರತಿಯೊಬ್ಬ ಮತದಾರರ ಮನೆಯಲ್ಲಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆ ಹಾಗೂ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಬಡ ಕುಟುಂಬಗಳಿಗೆ ಅಸರೆಯಾಗಿದೆ. ಯಶವಂತಪುರ ಕ್ಷೇತ್ರದಲ್ಲಿ ಕೂಡ ಬಡ ಕುಟಂಬಗಳಿಗೆ ನಾವು ಗ್ಯಾರಂಟಿ ಯೋಜನೆಯನ್ನು ತಲುಪಿಸಿದ್ದೇವೆ. ರಾಜ್ಯದಲ್ಲಿ ಜನಪರ ಸರ್ಕಾರ ಆಡಳಿತ ನಡೆಸುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 18-20 ಸ್ಥಾನ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ನನಗೆ ವಿಶ್ವಾಸವಿದೆ. ದೇಶದಲ್ಲಿ 10 ವರ್ಷಗಳಿಂದ ಮೋದಿ ಸರ್ಕಾರ ಹಿಟ್ಲರ್ ರೀತಿಯಲ್ಲಿ ಸರ್ವಾಧಿಕಾರಿ ಆಡಲಿತ ನಡೆಸುತ್ತಿದೆ. ಬಿಜೆಪಿಯು ಕೆಳಮಟ್ಟದ ಸಮುದಾಯಗಳನ್ನು ಕಡೆಗಣಿಸತ್ತಿವೆ. ಕಳೆದ ಬಾರಿ ಅವರು ವಿಧಾನ ಸಭಾ ಚುನಾವಣೆಯಲ್ಲಿ ಸೋಲುವುದಕ್ಕೆ ಅವರ ನಾಯಕರುಗಳೇ ಕಾರಣ ಎಂದು ಆರೋಪಿಸಿದ ಟಿ.ಪ್ರಭಾಕರ್‌, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ ರಾಜೇವ್ ಗೌಡ ಅವರು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಕೆಂಗೇರಿಯಲ್ಲಿ ಇರುವ ಬಿಜೆಪಿ ಮುಖಂಡರು ಸ್ಧಳೀಯ ಸಮಸ್ಯೆಗಳಿಗೆ ಗಮನ ನೀಡುತ್ತಿಲ್ಲ. ಸ್ಧಳೀಯ ಮುಖಂಡರ ಬಳಿ ಸಾಮಾನ್ಯ ಜನರು ನೀರು, ವಿದ್ಯುತ್, ರಸ್ತೆ ಸಮಸ್ಯೆಗಳನ್ನು ಹೇಳಿಕೊಂಡರೆ ಉಡಾಫೆಯಿಂದ ಉತ್ತರಗಳನ್ನು ನೀಡುತ್ತಾರೆ ಎಂಬ ಆರೋಪ ಸಾರ್ವಜನಿಕರಿಂದ ವ್ಯಾಪಕವಾಗಿ ಕೇಳಿಬರುತ್ತಿವೆ. ಯಶವಂತಪುರ ನಗರಮಂಡಲಾಧ್ಯಕ್ಷ ತಲೆ ಮೇಲೆತ್ತಿಕೊಂಡು ಓಡಾಡುತ್ತಿಲ್ಲ. ಕೇವಲ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆಂದು ಪ್ರಭಾಕರ್‌ ಟೀಕಿಸಿದರು.

ಕ್ಷೇತ್ರದಲ್ಲಿ ಇರುವ ಕಾಂಗ್ರೆಸ್ ಕಾರ್ಯಕರ್ತರಿಗೆ ಶಾಸಕ ಎಸ್ ಟಿ ಸೋಮಶೇಖರ ಅವರು ಯಾವುದೇ ರೀತಿಯ ಕಾಂಟ್ರ್ಯಾಕ್ಟ್ ನೀಡಿಲ್ಲ. ಶಾಸಕರು ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾರೆ ಎಂದು ಪ್ರಶಂಸಿಸಿದ ಪ್ರಭಾಕರ್‌, ಕೆಂಗೇರಿ ವಾರ್ಡಿನ ಬಿಜೆಪಿ ಪಕ್ಷದಿಂದ 2 ಪಾಲಿಕೆ ಸದಸ್ಯರು ಕೆಂಗೇರಿ ವಾರ್ಡ್ನಲ್ಲಿ ಕೆಲಸ ಮಾಡಿದ್ದಾರೆ. ಆ ಸಮಯದಲ್ಲಿ ಎಸ್ ಟಿ ಸೋಮಶೇಖರ ಅವರು ಪಕ್ಷಭೇದ ನೋಡದೆ ಅವರನ್ನು ಜೊತೆಯಲ್ಲಿಟ್ಟುಕೊಂಡು ಕೆಲಸ ಮಾಡಿದರು. ಶಾಸಕರಾದ ಎಸ್ ಟಿ ಸೋಮಶೇಖರ್‌ ಅವರು ಕೆಂಗೇರಿ ಅಭಿವೃದ್ಧಿಗಾಗಿ ಕಾಂಟ್ರಕ್ಟ್ ನೀಡಿ ಕೆಲಸಗಳನ್ನು ಮಾಡಿಸಿದರು. ಯಾವುದೇ ರೀತಿಯ ಬೇಧ ಭಾವಗಳನ್ನು ಮಾಡದೆ ಎಲ್ಲರ ಜೊತೆ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶಾಸಕರು ಕೆಲಸ ಮಾಡಿದ್ದಾರೆ. ಇಂದು ಸ್ಧಳೀಯ ಬಿಜೆಪಿಗರು ಅವರ ಮೇಲೆ ಆರೋಪ ಮಾಡುತ್ತಾ ಓಡಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್ ಟಿ ಸೋಮಶೇಖರ್ ಅವರಿಗೆ ಸಂಘಟನೆ ಮಾಡುವ ಶಕ್ತಿ -ಯುಕ್ತಿ ಎರಡೂ ಇದೇ. ಅವರು ಹೋರಾಟಗಾರರು. ಅವರಿಗೆ ಯಶವಂತಪುರ ಕ್ಷೇತ್ರವೇ ಮನೆಯಿದ್ದ ಹಾಗೆ ಎಂದು ನುಡಿದ ಪ್ರಭಾಕರ್, ಇಂದು ನನ್ನ ಜೊತೆ ಇರುವ ಕಾರ್ಯಕರ್ತರ ಬಡತನವನ್ನು ಗುರುತಿಸಿ ಅವರಿಗೆ ಜೀವನೋಪಾಯ ಕಲ್ಪಿಸಿದ್ದಾರೆ. ಅವರ ಉತ್ತಮ ಕೆಲಸಗಳೇ ಇಂದು ಅವರಿಗೆ ಶ್ರೀರಕ್ಷೆಯಾಗಿದೆ ಎಂದು ನುಡಿದರು.

ಚುನಾವಣೆ

Bhabanipur Shock: 700 ಮತದಾರರ ಬೂತ್‌ನಲ್ಲಿ ಮಮತಾ ಬ್ಯಾನರ್ಜಿ ಪಡೆದದ್ದು ಕೇವಲ 28 ಮತ!

Published

on

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಮುಖ್ಯಮಂತ್ರಿ Mamata Banerjee ಅವರಿಗೆ ಭಾರೀ ಹಿನ್ನಡೆಯಾಗಿದೆ. ಟಿಎಂಸಿಯ ಭದ್ರಕೋಟೆ ಎಂದೇ ಗುರುತಿಸಿಕೊಂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿ ನಾಯಕ Suvendu Adhikari ಐತಿಹಾಸಿಕ ಜಯ ಸಾಧಿಸಿದ್ದು, ಮಮತಾ ಬ್ಯಾನರ್ಜಿ ಅವರ ಸ್ವಂತ ವಾರ್ಡ್‌ನಲ್ಲಿಯೇ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.

ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಬೂತ್‌ವಾರು ಅಂಕಿ-ಅಂಶಗಳ ಪ್ರಕಾರ, ಭವಾನಿಪುರ ಕ್ಷೇತ್ರದ 267 ಬೂತ್‌ಗಳ ಪೈಕಿ 207 ಬೂತ್‌ಗಳಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಪಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರ ಕಾಲಿಘಾಟ್ ನಿವಾಸವಿರುವ ವಾರ್ಡ್ ನಂಬರ್ 73ರಲ್ಲಿ ಸುವೇಂದು ಅಧಿಕಾರಿ 8,932 ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ ಕೇವಲ 4,284 ಮತಗಳಿಗೆ ಸೀಮಿತರಾಗಿದ್ದಾರೆ.

ಚುನಾವಣೆಗೆ ಮುನ್ನ Amit Shah ಬಿಜೆಪಿ ಕಾರ್ಯಕರ್ತರಿಗೆ “ಮಮತಾ ಬ್ಯಾನರ್ಜಿಯನ್ನು ಅವರದೇ ಕೋಟೆಯಲ್ಲಿ ಸೋಲಿಸಿ” ಎಂದು ಕರೆ ನೀಡಿದ್ದರು. ಇದೀಗ ಸುವೇಂದು ಅಧಿಕಾರಿ ಆ ಸವಾಲನ್ನು ಯಶಸ್ವಿಯಾಗಿ ಈಡೇರಿಸಿದ್ದಾರೆ ಎಂದು ಬಿಜೆಪಿ ಪಾಳಯದಲ್ಲಿ ಸಂಭ್ರಮ ವ್ಯಕ್ತವಾಗಿದೆ.

ಸುವೇಂದು ಅಧಿಕಾರಿಗೆ ದಕ್ಷಿಣ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಲ್ಲಿ ಮೊದಲಿನಿಂದ ರಾಜಕೀಯ ನೆಲೆ ಕಡಿಮೆ ಇತ್ತು. ಆದರೂ ಕ್ಷೇತ್ರದಲ್ಲಿ ಶೇಕಡಾ 63 ಮತಗಳನ್ನು ಪಡೆದು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಮತಾ ಬ್ಯಾನರ್ಜಿ ಕೇವಲ ಶೇಕಡಾ 30 ಮತಗಳನ್ನು ಪಡೆಯಲು ಮಾತ್ರ ಸಾಧ್ಯವಾಗಿದೆ.

ಇನ್ನು ಹಲವು ಬೂತ್‌ಗಳಲ್ಲಿ ಮಮತಾ ಬ್ಯಾನರ್ಜಿ 50 ಮತಗಳ ಗಡಿ ದಾಟಲೂ ವಿಫಲರಾಗಿರುವುದು ಟಿಎಂಸಿ ಪಾಳಯಕ್ಕೆ ದೊಡ್ಡ ಆಘಾತವಾಗಿದೆ. 2021ರ ಉಪಚುನಾವಣೆಯಲ್ಲಿ ಏಳು ವಾರ್ಡ್‌ಗಳಲ್ಲೂ ಗೆದ್ದಿದ್ದ ದೀದಿ, ಈ ಬಾರಿ ತಮ್ಮ ಹಿಡಿತವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಅಂತಿಮವಾಗಿ ಮಮತಾ ಬ್ಯಾನರ್ಜಿ 58,812 ಮತಗಳನ್ನು ಪಡೆದರೆ, ಸುವೇಂದು ಅಧಿಕಾರಿ 73,917 ಮತಗಳನ್ನು ಪಡೆದು ಟಿಎಂಸಿ ಕೋಟೆಯನ್ನು ಧೂಳೀಪಟ ಮಾಡಿದ್ದಾರೆ.

Continue Reading

ಚುನಾವಣೆ

ಜಿಬಿಎ ಚುನಾವಣೆಗೆ ಕೌಂಟ್‌ಡೌನ್ ಶುರು! ಜೂನ್‌ನಲ್ಲಿ ಡೇಟ್ ಫಿಕ್ಸ್

Published

on

ಬೆಂಗಳೂರು: ಬಹುನಿರೀಕ್ಷಿತ Greater Bengaluru Authority (GBA) ಚುನಾವಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ. ಜೂನ್ 14ರಿಂದ 24ರೊಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ G. A. Sangreshi ಸೂಚನೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ Maheshwar Rao ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಆದರೆ ಜಿಬಿಎ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಭೆಗೆ ಗೈರಾಗಿದ್ದರು.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ಎ ಸಂಗ್ರೇಶಿ, “ರಾಜ್ಯ ಚುನಾವಣಾ ಆಯೋಗ ಮತ್ತು ಜಿಬಿಎ ಸಮಾಲೋಚನೆ ನಡೆಸಿ ದಿನಾಂಕ ನಿಗದಿಪಡಿಸುವುದು ಕಾನೂನುಬದ್ಧ ಪ್ರಕ್ರಿಯೆ. ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ದಿನಾಂಕ ನಿಗದಿ ಮಾತ್ರ ಬಾಕಿಯಿದೆ” ಎಂದು ತಿಳಿಸಿದರು.

ಜನಗಣತಿ, ಮನೆ ಸಮೀಕ್ಷೆ ಸೇರಿದಂತೆ ಹಲವು ಆಡಳಿತಾತ್ಮಕ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆ ಸಮಯ ಪರಿಶೀಲಿಸಿ ದಿನಾಂಕ ಘೋಷಿಸುವಂತೆ ಜಿಬಿಎಗೆ ಸೂಚಿಸಲಾಗಿದೆ. ಆದರೆ ಜೂನ್ 30ರೊಳಗೆ ಚುನಾವಣೆ ದಿನಾಂಕ ನಿಗದಿಪಡಿಸಲೇಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ. ಈ ಕುರಿತು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಬೇಕಿರುವುದಾಗಿ ಆಯುಕ್ತರು ಹೇಳಿದರು.

ಇನ್ನೂ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮಾತನಾಡಿ, ವಾರ್ಡ್ ವಿಂಗಡಣೆ, ಮತದಾರರ ಪಟ್ಟಿ ಹಾಗೂ ಮೀಸಲಾತಿ ಪ್ರಕ್ರಿಯೆಗಳು ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು. ಚುನಾವಣಾ ಕಾರ್ಯಕ್ಕಾಗಿ RO, AERO ಮತ್ತು BLOಗಳ ನೇಮಕಾತಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದರು.

Continue Reading

ಚುನಾವಣೆ

‘ನೀವು ಸೋತಿಲ್ಲ, ಗೆದ್ದಿದ್ದೀರಿ’ – ಮಮತಾ ಭೇಟಿ ಬಳಿಕ ಅಖಿಲೇಶ್ ಯಾದವ್ ಹೇಳಿಕೆ

Published

on

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ Akhilesh Yadav ಕೋಲ್ಕತ್ತಾಗೆ ಭೇಟಿ ನೀಡಿ Mamata Banerjee ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಗುರುವಾರ ಕಾಲಿಘಾಟ್‌ನಲ್ಲಿರುವ ಮಮತಾ ಬ್ಯಾನರ್ಜಿ ನಿವಾಸದಲ್ಲಿ ನಡೆದ ಭೇಟಿಯ ವೇಳೆ ಅಖಿಲೇಶ್ ಯಾದವ್, “ನೀವು ಸೋತಿಲ್ಲ, ಗೆದ್ದಿದ್ದೀರಿ” ಎಂದು ಹೇಳಿ ಮಮತಾಗೆ ಸನ್ಮಾನ ಸಲ್ಲಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಅಖಿಲೇಶ್ ಯಾದವ್, ಬಂಗಾಳದಲ್ಲಿ ಚುನಾವಣೆಗಳನ್ನು ಉತ್ತರ ಪ್ರದೇಶ ಮಾದರಿಯಲ್ಲಿ ನಡೆಸಲಾಗಿದ್ದು, ಬೆದರಿಕೆ ಹಾಗೂ ಕುತಂತ್ರದ ರಾಜಕಾರಣ ಬಳಸಲಾಗಿದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ, ಚುನಾವಣಾ ಆಯೋಗ ಹಾಗೂ ಭೂಗತ ಶಕ್ತಿಗಳ ಸಂಚುಗಳಿಂದ ಚುನಾವಣೆ ಪ್ರಭಾವಿತವಾಗಿದೆ ಎಂದು ಆರೋಪಿಸಿದರು.

ಅಲ್ಲದೇ, ಮಮತಾ ಬ್ಯಾನರ್ಜಿ ಮತ್ತು Abhishek Banerjee ಅವರ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಬಿಜೆಪಿ ಮಹಿಳಾ ವಿರೋಧಿ ಪಕ್ಷ ಎಂದು ಟೀಕಿಸಿದರು. ದೇಶದ ಪ್ರಜಾಪ್ರಭುತ್ವ ಶಕ್ತಿಗಳು ಒಂದಾಗಬೇಕೆಂದು ಕರೆ ನೀಡಿದರು.

ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ 294 ಸ್ಥಾನಗಳ ಪೈಕಿ ಟಿಎಂಸಿ ಕೇವಲ 80 ಸ್ಥಾನಗಳಲ್ಲಿ ಜಯ ಸಾಧಿಸಿತು. ಬಿಜೆಪಿ 207 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ.

ಟಿಎಂಸಿ ಸೋಲಿನ ಬಳಿಕ ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ನಾಯಕರು ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತಿರುವುದು ಇದೀಗ ದೇಶದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

Trending