ಚುನಾವಣೆ
ಕರ್ನಾಟಕದಲ್ಲಿ ಮೋದಿ ಸಮಾವೇಶ ಇಲ್ಲ : ಹಲವು ಬದಲಾವಣೆ

ಮಂಗಳೂರು: ಏಪ್ರಿಲ್ 14 ರಂದು ಮಂಗಳೂರಿನಲ್ಲಿ ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಸಮಾವೇಶ ತಾಂತ್ರಿಕ ಕಾರಣಗಳಿಂದ ರದ್ದಾಗಿದ್ದು ರೋಡ್ ಶೋ ಮಾತ್ರ ನಡೆಸಲು ನಿರ್ಧರಿಸಿದೆ ಎಂದು ಬಿಜೆಪಿ ತಿಳಿಸಿದೆ,
ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಧಾನಿ ಮೋದಿಯವರ ರೋಡ್ ಶೋ ಕೊನೆಯ ಕ್ಷಣದಲ್ಲಿ ರದ್ದಾಗಿದ್ದು ಇದೀಗ ಸಮಾವೇಶದ ಬದಲಾಗಿ ಎರಡುವರೆ ಕಿಮೀ ರೋಡ್ ಶೋ ನಿಗದಿಪಡಿಸಿದೆ, ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಬಿಜೆಪಿ ಸಿದ್ದತೆ ನಡೆಸಿತು, ತಾಂತ್ರಿಕ ಕಾರಣದಿಂದಾಗಿ ಸಮಾವೇಶ ನಡೆಸುವುದನ್ನು ರದ್ದು ಪಡಿಸಲಾಗಿದೆ, ಸಮಾವೇಶ ನಡೆಸುವ ಬದಲು ಕೇವಲ ರೋಡ್ ಶೋ ನಡೆಸುವುದಕ್ಕೆ ಆದ್ಯತೆ ನೀಡಲಾಗಿದೆ,,